Tag: rajinikanth

  • ರಜನಿ-ಅಮಿತಾಭ್ ಮೊದಲ ದಿನದ ಶೂಟಿಂಗ್: ಫೋಟೋ ವೈರಲ್

    ರಜನಿ-ಅಮಿತಾಭ್ ಮೊದಲ ದಿನದ ಶೂಟಿಂಗ್: ಫೋಟೋ ವೈರಲ್

    ರೋಬ್ಬರು 33 ವರ್ಷಗಳ ನಂತರ ಇಬ್ಬರು ಹೆಸರಾಂತ ನಟರು ಜೊತೆಯಾಗಿ ನಟಿಸಲಿದ್ದಾರೆ ಎನ್ನುವುದೇ ಒಂದು ಹೆಮ್ಮೆಯ ಸಂಗತಿಯಾಗಿತ್ತು. ಅದು ನಿಜವಾಗಬಹುದಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಕೊನೆಗೂ ಅಂತಹ ಕ್ಷಣವನ್ನು ಕಣ್ತುಂಬಿಕೊಳ್ಳುವಂತಹ ಅವಕಾಶ ಇಬ್ಬರ ಅಭಿಮಾನಿಗಳಿಗೂ ಸಿಕ್ಕಿದೆ. ರಜನಿಕಾಂತ್ (Rajinikanth) ಮತ್ತು ಅಮಿತಾಭ್ ಬಚ್ಚನ್ ನಿನ್ನೆಯಿಂದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ರಜನಿ ನಟನೆಯ 170ನೇ ಸಿನಿಮಾದ ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ.

    ರಜನಿ ನಟನೆಯ 170ನೇ ಸಿನಿಮಾ ಬಗ್ಗೆ ಸಾಕಷ್ಟು ಮಾಹಿತಿಗಳು ಹೊರ ಬೀಳುತ್ತಿವೆ. ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಕಾ ಸಂಸ್ಥೆಯು ಒಂದೊಂದು ಮಾಹಿತಿಯನ್ನು ಹೊರ ಹಾಕುತ್ತಿದೆ. ಜೊತೆಗೆ ಮೊನ್ನೆಯಷ್ಟೇ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಅವರ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿತ್ತು. ಇದೀಗ ಶೂಟಿಂಗ್ ಸ್ಪಾಟ್ ನಲ್ಲಿ ಅಮಿತಾಭ್ ಮತ್ತು ರಜನಿಯ ಫೋಟೋವನ್ನು ಶೇರ್ ಮಾಡಿದೆ.

    ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು  ದುಶಾರ ವಿಜಯನ್ (Dushara Vijayan) ಮತ್ತು ಮಂಜು ವಾರಿಯರ್ (Manju Warrier) ಕಾಣಿಸಿಕೊಳ್ಳಲಿದ್ದಾರೆ. ದುಶಾರ ಈಗಾಗಲೇ ಬೋಧೈ ಯೇರಿ ಬುಧಿ ಮಾರಿ, ಅನೀತಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಂಜು ವಾರಿಯರ್ ಲೂಸಿಫರ್, ಅಸುರನ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯರಾಗಿ ನಟಿಸಿದ್ದಾರೆ.

     

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿಕಾಂತ್ ಚಿತ್ರದಲ್ಲಿ ದುನಿಯಾ ವಿಜಯ್ ವಿಲನ್

    ರಜನಿಕಾಂತ್ ಚಿತ್ರದಲ್ಲಿ ದುನಿಯಾ ವಿಜಯ್ ವಿಲನ್

    ಜನಿಕಾಂತ್ ನಟನೆಯ 171ನೇ ಸಿನಿಮಾದಲ್ಲಿ ದುನಿಯಾ ವಿಜಯ್ (Duniya Vijay) ನಟಿಸಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಲೋಕೇಶ್ ಕನಕರಾಜ್ (Lokesh Kanakaraj) ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿ ವಿಜಯ್ ವಿಲನ್ ಪಾತ್ರ ಮಾಡಲಿದ್ದಾರಂತೆ. ರಜನಿಕಾಂತ್ ಅಂದರೆ, ವಿಜಯ್ ಗೆ ಪ್ರಾಣ. ಹಾಗಾಗಿ ಈ ಸಿನಿಮಾವನ್ನು ಅವರು ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಲೋಕೇಶ್ ಮತ್ತು ದುನಿಯಾ ವಿಜಯ್ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನುವುದು ಸದ್ಯದ ವರ್ತಮಾನ.

    ಹಾಗಂತ ಈ ಸಿನಿಮಾ ಈಗಲೇ ಶುರುವಾಗುವುದಿಲ್ಲ. ಇನ್ನೂ ರಜನಿಕಾಂತ್ 170ನೇ ಸಿನಿಮಾದಲ್ಲಿ ನಟಿಸಬೇಕಿದೆ. ಈ ಸಿನಿಮಾ ಇನ್ನೂ ಶೂಟಿಂಗ್ ಪ್ರಾರಂಭವಾಗಿಲ್ಲ. ಈ ಸಿನಿಮಾ ಮುಗಿದ ನಂತರವೇ 171ನೇ ಸಿನಿಮಾ ಶುರುವಾಗಲಿದೆ. ಆದರೂ, ನಿರ್ದೇಶಕರು ಪಾತ್ರಗಳನ್ನು ಹುಡುಕುವ ಕಾರ್ಯಕದಲ್ಲಿ ನಿರತರಾಗಿದ್ದಾರಂತೆ.

    170ನೇ ಸಿನಿಮಾ ವಿಶೇಷವೇನು?

    ಬರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ನಟಿಸುತ್ತಿದ್ದಾರೆ.

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

    ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

     

    ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ (TJ Gnanavel) ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಲೈವರ್ 171 ಸಿನಿಮಾದಲ್ಲಿ ಪೃಥ್ವಿರಾಜ್ ವಿಲನ್?

    ತಲೈವರ್ 171 ಸಿನಿಮಾದಲ್ಲಿ ಪೃಥ್ವಿರಾಜ್ ವಿಲನ್?

    ಜನಿಕಾಂತ್ ಮತ್ತು ಲೋಕೇಶ್ ಕನಗರಾಜ್ ಕಾಂಬಿನೇಷನ್ ನ ಹೊಸ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ನಟ ಪೃಥ್ವಿ ರಾಜ್ ಸುಕುಮಾರನ್ (Prithviraj Sukumaran) ವಿಲನ್ (Villain) ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಸಲಾರ್ ಸಿನಿಮಾದ ನಂತರ ಮತ್ತೊಂದು ಹೊಸ ಬಗೆಯ ಪಾತ್ರವನ್ನು ಈ ಸಿನಿಮಾದಲ್ಲಿ ಮಾಡಲಿದ್ದಾರಂತೆ ಸುಕುಮಾರನ್.

    ಈ ಸಿನಿಮಾದ ಬಗ್ಗೆ ಸಾಕಷ್ಟು ಗೊಂದಲಗಳು ಶುರುವಾಗಿದ್ದವು. ಜನಿಕಾಂತ್ (Rajinikanth) ಮತ್ತು ಲೋಕೇಶ್ ಕನಗರಾಜ್ (Lokesh Kanagaraj) ಇಬ್ಬರೂ ಮಧ್ಯ ಯಾವುದೂ ಸರಿ ಇಲ್ಲ ಎನ್ನುವ ಮಾತು ಹರಿದಾಡುತ್ತಿತ್ತು.  ರಜನಿ ಜೈಲರ್ ಸಕ್ಸಸ್ ಬೆನ್ನಲ್ಲೇ ಅದು ಜೋರಾಗಿತ್ತು. ಲೋಕೇಶ್ ಕನಗರಾಜ್ ಅವರು ವಿಜಯ್ ನಟನೆಯ  ಲಿಯೋ ಸಿನಿಮಾದ ನಿರ್ದೇಶಕರಾಗಿದ್ದ ಕಾರಣಕ್ಕೆ ರಜನಿ ಮತ್ತು ದಳಪತಿ ವಿಜಯ್ ಅಭಿಮಾನಿಗಳ ಮಧ್ಯ ಸ್ಟಾರ್ ವಾರ್ ಕೂಡ ಶುರುವಾಗಿತ್ತು. ಹಾಗಾಗಿ ರಜನಿ ಸಿನಿಮಾಗೆ ಲೋಕೇಶ್ ನಿರ್ದೇಶಕರಾಗುವುದು ಅನುಮಾನ ಎಂದು ಹೇಳಲಾಗಿತ್ತು.

    ಈ ಎಲ್ಲ ಸುದ್ದಿಗೂ ಟಕ್ಕರ್ ಕೊಡುವಂತಹ ನಿರ್ಮಾಣ ಸಂಸ್ಥೆಯು 171ನೇ ಸಿನಿಮಾಗೆ ಲೋಕೇಶ್ ಕನಗರಾಜ್ ಅವರೇ ನಿರ್ದೇಶನ ಮಾಡಲಿದ್ದಾರೆ ಎಂದು ಘೋಷಣೆ ಮಾಡಿತ್ತು. ಈ ಸಿನಿಮಾವನ್ನು ಜೈಲರ್ ಚಿತ್ರದ ನಿರ್ಮಾಪಕರೇ ನಿರ್ಮಾಣ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಅನೌನ್ಸ್ ಕೂಡ ಆಗಿದೆ. ಸದ್ಯಕ್ಕೆ ಚಿತ್ರಕ್ಕೆ ‘ತಲೈವರ 171’ ಎಂದು ಟೈಟಲ್ ಇಡಲಾಗಿದೆ.

    ವಿಕ್ರಮ್ ಸಿನಿಮಾದ ಯಶಸ್ಸಿನ ನಂತರ ಲೋಕೇಶ್, ಲಿಯೋ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು. ಲಿಯೋ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸಿನಲ್ಲೂ ಅದರ ಸದ್ದು ಜೋರಾಗಿದೆ. ಸಿನಿಮಾ ರಿಲೀಸ್ ಆಗಲು 40 ದಿನಗಳು ಬಾಕಿ ಇರುವಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು 24 ಗಂಟೆಗಳಲ್ಲಿ ಮಾರಾಟವಾಗಿ ದಾಖಲೆ ಬರೆದಿತ್ತು.

     

    ಲೀಯೋ ಮತ್ತು ಜೈಲರ್ ಸಿನಿಮಾವನ್ನು ಹೋಲಿಕೆ ಮಾಡಿ, ಬಾಕ್ಸ್ ಆಫೀಸ್ ಗೆಲುವಿನ ಬಗ್ಗೆ ಚರ್ಚೆ ಶುರುವಾಗಿದೆ. ಜೈಲರ್ ಗಿಂತಲೂ ಹೆಚ್ಚು ಹಣವನ್ನು ಲಿಯೋ ಮಾಡಲಿದೆ ಎಂದು ಅಂದಾಜಿಸಲಾಗುತ್ತಿದೆ. ಹೀಗಾಗಿ ರಜನಿ ಮತ್ತು ಲೋಕೇಶ್ ಜೋಡಿಯನ್ನು ಈ ಚರ್ಚೆಯಲ್ಲಿ ಎಳೆತರಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿಕಾಂತ್ ನಟನೆಯ 170ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

    ರಜನಿಕಾಂತ್ ನಟನೆಯ 170ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

    ಬೆಳಗ್ಗೆಯಷ್ಟೇ ರಜನಿಕಾಂತ್ ನಟನೆಯ 170ನೇ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ನಟಿಸಲಿದ್ದಾರೆ ಎನ್ನುವ ಸುದ್ದಿಯನ್ನು ಹೊರಹಾಕಿತ್ತು ಲೈಕಾ ಸಂಸ್ಥೆ. ಇದೀಗ ರಜನಿಕಾಂತ್ ಅವರ ಫಸ್ಟ್ ಲುಕ್ ಅನ್ನು ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಡಬಲ್ ಸಂಭ್ರಮ ತಂದಿದೆ. ತಲೈವಾ ಫಸ್ಟ್ ಲುಕ್ (First Look) ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

    ರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

    ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

     

    ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ (TJ Gnanavel) ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊನೆಗೂ ನಿಜವಾಯ್ತು ರಜನಿ-ಅಮಿತಾಭ್ ಕಾಂಬಿನೇಷನ್ ಸಿನಿಮಾ

    ಕೊನೆಗೂ ನಿಜವಾಯ್ತು ರಜನಿ-ಅಮಿತಾಭ್ ಕಾಂಬಿನೇಷನ್ ಸಿನಿಮಾ

    ರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ನಟಿಸುತ್ತಿದ್ದಾರೆ.

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

    ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

     

    ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ (TJ Gnanavel) ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿ ನಟನೆಯ ಮತ್ತೊಂದು ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ರಜನಿ ನಟನೆಯ ಮತ್ತೊಂದು ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಜೈಲರ್ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ರಜನಿ ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ (Release) ಸಿದ್ಧವಾಗಿದೆ. ಲಾಲ್ ಸಲಾಂ ಹೆಸರಿನಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸ್ವತಃ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಜನಿಕಾಂತ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದ್ದು, ಈ ಚಿತ್ರದಲ್ಲಿ ರಜನಿಕಾಂತ್ (Rajinikanth) ಕೂಡ ಪಾತ್ರ ಮಾಡಿದ್ದಾರೆ.  ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ (Lal Salam) ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀದಿದ್ದಾರೆ. ಮೊನ್ನೆಯಷ್ಟೇ ಈ  ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಆಗಿದೆ. ಇದನ್ನೂ ಓದಿ:ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ಲೈಕಾ ಪ್ರೊಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜಿನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದರು. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆದಿತ್ತು.

     

    1995ರಲ್ಲಿ ಬಂದಿದ್ದ ‘ಬಾಷಾ’ ಚಿತ್ರದಲ್ಲಿ ಜನಸ್ನೇಹಿ ಡಾನ್ ಆಗಿ ರಜನಿಕಾಂತ್ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಸುತ್ತಿರುವುದು ಸುಳ್ಳಲ್ಲ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಲೀಡ್ ರೋಲ್‌ಗಳಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ- ಎಆರ್ ರೆಹಮಾನ್ ಸಂಗೀತ ಈ ಚಿತ್ರಕ್ಕಿದೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

    ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

    ಕಾವೇರಿ ನದಿ ನೀರಿನ ವಿಚಾರವಾಗಿ ಮೌನ ವಹಿಸುವ ನಟ ರಜನಿಕಾಂತ್ (Rajinikanth) ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ರಜನಿಕಾಂತ್ ಕರ್ನಾಟಕಕ್ಕೆ ಬರಬಾರದು. ಅವರ ಚಿತ್ರಗಳನ್ನು ರಿಲೀಸ್ ಮಾಡಬಾರದು ಎಂದರು. ರಜನಿಕಾಂತ್ ಕನ್ನಡದವರಾಗಿ ಕನ್ನಡಿಗರ ಪರವಾಗಿ ಹೋರಾಟ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

    ಕಾವೇರಿ ಹೋರಾಟ ಅಥವಾ ಕನ್ನಡ ಪರ ಹೋರಾಟಗಳು ನಡೆದಾಗೊಮ್ಮೆ ರಜನಿಕಾಂತ್ ಹೆಸರು ಪ್ರಸ್ತಾಪವಾಗುತ್ತದೆ. ಈ ಹಿಂದೆ ರಜನಿಕಾಂತ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ರಿಲೀಸ್ ಆಗಬಾರದು ಎಂದು ದೊಡ್ಡ ಮಟ್ಟದಲ್ಲೇ ಹೋರಾಟ ನಡೆದಿತ್ತು. ಸಿನಿಮಾಗಳ ಪ್ರದರ್ಶನವನ್ನೂ ತಡೆದಿದ್ದರು. ಇದೀಗ ಮತ್ತೆ ಅಂಥದ್ದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಅದರಲ್ಲೂ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಾಜ್ಯದಲ್ಲಿ ಐವತ್ತು ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಹೀಗಾಗಿ ಮತ್ತೆ ರಜನಿ ವಿರುದ್ಧ ಗುಡುಗುವಂತಾಗಿದೆ.

    ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ

    ಕನ್ನಡ ಪರ ಹೋರಾಟಗಾರರು ನಾಳೆ ಕರ್ನಾಟಕ ಬಂದ್ (Karnataka Band)ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧ ಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

    ಇಂದು ಜಗ್ಗೇಶ್ ನಟನೆಯ ತೋತಾಪುರಿ 2 ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ಗಣೇಶ್ ನಟನೆಯ ಬಾನದಾರಿಯಲ್ಲಿ ಚಿತ್ರ ಬಿಡುಗಡೆ ಆಗಬೇಕಿತ್ತು. ಅಲ್ಲದೇ, ಇನ್ನೂ ಹಲವು ಚಿತ್ರಗಳು ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದ್ದವು. ಬಂದ್ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶನಿವಾರ ಸಿನಿಮಾಗಳನ್ನು ರಿಲೀಸ್ ಮಾಡಲು ಹೊರಟಿದ್ದಾರೆ ನಿರ್ಮಾಪಕರು.

     

    ನಾಳೆ ಸ್ಯಾಂಡಲ್ ವುಡ್ (Sandalwood) ಕೂಡ ತನ್ನ ಕೆಲಸ ನಿಲ್ಲಿಸಲಿದೆ. ಕಲಾವಿದರು ಕೂಡ ಬೀದಿಗೆ ಇಳಿದು ಹೋರಾಟ ಮಾಡಲಿದ್ದಾರೆ. ಬಹುತೇಕ ಶೂಟಿಂಗ್ ನಿಲ್ಲಿಸಲಾಗಿದೆ. ಸಿನಿಮಾ ಸಂಬಂಧಿ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿ, ಬಂದ್ ನಲ್ಲಿ ಭಾಗಿಯಾಗಲಿದ್ದಾರೆ. ಇದರ ನೇತೃತ್ವವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ವಹಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್ ವೀಕ್ಷಣೆಗೆ ಗೋಲ್ಡನ್ ಟಿಕೆಟ್ ಪಡೆದ ರಜನಿಕಾಂತ್

    ವಿಶ್ವಕಪ್ ವೀಕ್ಷಣೆಗೆ ಗೋಲ್ಡನ್ ಟಿಕೆಟ್ ಪಡೆದ ರಜನಿಕಾಂತ್

    ಮುಂದಿನ ತಿಂಗಳಿನಿಂದ ಪ್ರಾರಂಭವಾಗುವ ಐಸಿಸಿ ವಿಶ್ವಕಪ್ 2023 ವೀಕ್ಷಿಸಲು ರಜನಿಕಾಂತ್ (Rajinikanth) ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಗೋಲ್ಡನ್ ಟಿಕೆಟ್ (Golden Ticket) ನೀಡಿ ಗೌರವಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರು ರಜನಿಯನ್ನು ಭೇಟಿ ಮಾಡಿ ಈ ಗೌರವದ ಟಿಕೆಟ್ ಅನ್ನು ನೀಡಿದ್ದಾರೆ.

    ಟಿಕೆಟ್ ಪಡೆದ ನಂತರ ಸೋಷಿಯಲ್ ಮೀಡಿಯಾ ಮೂಲಕ ಕೃತಜ್ಞತೆಯನ್ನು ಸಲ್ಲಿಸಿರುವ ರಜನಿಕಾಂತ್, ಇಂಥದ್ದೊಂದು ಗೌರವ ಸಿಕ್ಕಿದು ಖುಷಿಯಾಗಿದೆ ಎಂದು ಹೇಳಿದ್ದಾರೆ. ಕ್ರಿಕೆಟ್ (Cricket) ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಬಿಡುವು ಮಾಡಿಕೊಂಡು ಕ್ರಿಕೆಟ್ ನೋಡುವುದಾಗಿಯೂ ತಿಳಿಸಿದ್ದಾರೆ.

    ಈ ಟಿಕೆಟ್ ಪಡೆದವರಿಗೆ ವಿಶೇಷ ಆತಿಥ್ಯವನ್ನು ನೀಡಲಾಗುತ್ತದೆ. ಈ ಹಿಂದೆ ಅಮಿತಾಭ್ ಬಚ್ಚನ್ ಸೇರಿದಂತೆ ಹಲವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿತ್ತು. ಅಕ್ಟೋಬರ್ 5 ರಂದು ಅಹಮದ್ ಬಾದ್ ನಲ್ಲಿ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ರಜನಿ ಆಗಮಿಸುವ ನಿರೀಕ್ಷೆಯಿದೆ. ಇದು ಈ ಸರಣಿಯ ಮೊದಲ ಪಂದ್ಯವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲೇಷ್ಯಾದಲ್ಲೂ ದಾಖಲೆ ಬರೆದ ರಜನಿ ನಟನೆಯ ‘ಜೈಲರ್’ ಸಿನಿಮಾ

    ಮಲೇಷ್ಯಾದಲ್ಲೂ ದಾಖಲೆ ಬರೆದ ರಜನಿ ನಟನೆಯ ‘ಜೈಲರ್’ ಸಿನಿಮಾ

    ಜನಿಕಾಂತ್ ಮತ್ತು ಕನ್ನಡದ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ (Jailer)ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. ಆರು ನೂರ ಕೋಟಿಗೂ ಹೆಚ್ಚು ಹಣವನ್ನು ಅದು ಬಾಕ್ಸ್ ಆಫೀಸಿನಿಂದ ಬಾಚಿಕೊಂಡಿತ್ತು. ಹಲವಾರು ದಾಖಲೆಗಳನ್ನು ಕೂಡ ಚಿತ್ರ ನಿರ್ಮಾಣ ಮಾಡಿತ್ತು. ಇದೀಗ ಮಲೇಷ್ಯಾದಲ್ಲಿ ಸಿನಿಮಾ ದಾಖಲೆಯೊಂದನ್ನು (Record) ಬರೆದಿದೆ.

    ಹೌದು, ಜೈಲರ್ ಸಿನಿಮಾ ಮಲೇಷ್ಯಾದಲ್ಲಿ (Malaysia) ರಿಲೀಸ್ ಆಗಿದ್ದು, ಈವರೆಗೂ ರಿಲೀಸ್ ಆದ ಭಾರತೀಯ ಚಿತ್ರಗಳಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ ಎನ್ನುವ ಹೆಗ್ಗಳಿಕೆಯೂ ಅದು ಪಾತ್ರವಾಗಿದೆ.

    ಭರ್ಜರಿ ಉಡುಗೊರೆ ನೀಡಿದ ಜೈಲರ್

    ಜೈಲರ್ ಸಿನಿಮಾ ಭರ್ಜರಿ ಗೆಲುವು (Success) ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ (Gift) ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.

    ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್ (Kalanidhi Maran), ನಟ ರಜನಿಕಾಂತ್ (Rajinikanth) ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು (Car) ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ  1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

    ಜೈಲರ್ (Jailer) ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು (Success) ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು.

     

    ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ (Cake)ತಿನ್ನಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲೇಷ್ಯಾ ಪ್ರಧಾನಿ ಭೇಟಿ ಮಾಡಿದ ರಜನಿಕಾಂತ್: ಅಚ್ಚರಿಯ ಹೇಳಿಕೆ ನೀಡಿದ ಪ್ರಧಾನಿ

    ಮಲೇಷ್ಯಾ ಪ್ರಧಾನಿ ಭೇಟಿ ಮಾಡಿದ ರಜನಿಕಾಂತ್: ಅಚ್ಚರಿಯ ಹೇಳಿಕೆ ನೀಡಿದ ಪ್ರಧಾನಿ

    ಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾದ ಗೆಲುವಿನ ಬೆನ್ನಲ್ಲೇ ಮಲೇಷ್ಯಾದ (Malaysia) ಪ್ರಧಾನಿ ಅನ್ವರ್ ಇಬ್ರಾಹಿಂ (Anwar Ibrahim) ಅವರು ರಜನಿಯನ್ನು ಭೇಟಿ ಮಾಡಿದ್ದಾರೆ. ತಮ್ಮಿಬ್ಬರ ಭೇಟಿಯ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಭೇಟಿಯ ಕುರಿತು ಅಚ್ಚರಿಯ ಸಂಗತಿಗಳನ್ನು ಹೊರ ಹಾಕಿದ್ದಾರೆ.

    ಜೈಲರ್ ಸಿನಿಮಾ ಬಿಡುಗಡೆಗೂ ಮುನ್ನ ರಜನಿಕಾಂತ್ ಉತ್ತರ ಪ್ರದೇಶದ ಪ್ರವಾಸ ಮಾಡಿದ್ದರು. ಹಿಮಾಲಯದ ಪ್ರವಾಸ ಮುಗಿದ ನಂತರ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದರು. ಜೊತೆಗೆ ಜಾರ್ಖಂಡ್ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿದ್ದರು. ಇದೀಗ ಮಲೇಷ್ಯಾದ ಪ್ರಧಾನಿಯನ್ನೇ ತಲೈವ ಮುಖಾಮುಖಿಯಾಗಿದ್ದಾರೆ. ಹಾಗಾಗಿ ರಜನಿ ಬಗ್ಗೆ ಹಲವಾರು ಚರ್ಚೆಗಳು ನಡೆದಿವೆ.

    ರಜನಿಕಾಂತ್ ರಾಜಕಾರಣಕ್ಕೆ ಬರುವ ವಿಚಾರ ಇಂದು ನೆನ್ನೆಯದಲ್ಲ. ಹಲವು ವರ್ಷಗಳಿಂದ ಈ ವಿಷಯ ಚಾಲ್ತಿಯಲ್ಲಿದೆ. ರಜನಿ ಕೂಡ ಹಲವಾರು ಬಾರಿ ರಾಜಕಾರಣಕ್ಕೆ ಬರುವ ಆಸೆಯನ್ನೂ ವ್ಯಕ್ತ ಪಡಿಸಿದ್ದಾರೆ. ಆದರೆ, ಇದೀಗ ಅವರಿಗೆ ರಾಜಕಾರಣದ ಬಗ್ಗೆ ಆಸಕ್ತಿ ಇಲ್ಲವೆಂದು ಹೇಳಲಾಗುತ್ತಿದೆ. ಆದರೆ, ರಾಜ್ಯಪಾಲರ ಹುದ್ದೆಯು ಅವರನ್ನು ಹುಡುಕಿಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:‘ಛೂಮಂತರ್’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ರವಿಚಂದ್ರನ್

    ರಜನಿಕಾಂತ್ ಅವರನ್ನು ರಾಜ್ಯಪಾಲರನ್ನು ಮಾಡುವ ಯೋಜನೆಯೊಂದು ಸಿದ್ಧವಾಗಿದ್ದು, ರಜನಿಕಾಂತ್ ಅದಕ್ಕಾಗಿ ಹಲವಾರು ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. ಹಾಗಾಗಿ ರಾಜಕಾರಣಿಗಳನ್ನು ರಜನಿ ಭೇಟಿ ಮಾಡುತ್ತಿದ್ದಾರೆ ಎನ್ನುವುದು ಕೆಲವರ ವಾದ. ಮಲೇಷ್ಯಾದಲ್ಲಿ ಸಾಕಷ್ಟು ಸಂಖ್ಯೆಯ ತಮಿಳರೂ ಇರುವುದರಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ.

     

    ಅಲ್ಲದೇ, ಮಲೇಷ್ಯಾದ ಪ್ರಧಾನಿ ಭೇಟಿಯ ಸಂಗತಿಗಳು ಮುಂದಿನ ಸಿನಿಮಾದಲ್ಲೂ ಇರಲಿವೆ ಎಂದು ಪ್ರಧಾನಿ ಆಡಿದ್ದಾರೆ ಎನ್ನಲಾದ ಮಾತುಗಳು ಕೂಡ ಮಹತ್ವ ಪಡೆದುಕೊಂಡಿವೆ. ಅವರ ಮಾತುಕತೆ ಯಾವುದು? ಏನೆಲ್ಲ ಮಾತನಾಡಿದ್ದಾರೆ ಎನ್ನುವುದು ಮಾತ್ರ ಸಸ್ಪೆನ್ಸ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]