ಗದಗ: ಒಂದು ಕಡೆ ಬಿಜೆಪಿಯ ರೆಬೆಲ್ ನಾಯಕರು ದೆಹಲಿಗೆ ಹೋದರೆ ಇನ್ನೊಂದು ಕಡೆ ಆಪ್ತರ ಮೂಲಕ ಇನ್ನುಳಿದವರ ಮನವೊಲಿಸುವ ಕೆಲಸ ಆಗುತ್ತಿದೆ. ಈ ಸಂದರ್ಭದಲ್ಲಿ ಗದಗನಲ್ಲಿ ಬಿ.ಶ್ರೀರಾಮುಲು (B Sriramulu) ಹಾಗೂ ಪಿ.ರಾಜೀವ್ ಗುಪ್ತ ಮೀಟಿಂಗ್ ಮಾಡಿದ್ದಾರೆ.
ನಗರದ ಹೊಸ ಬಸ್ ನಿಲ್ದಾಣ ಬಳಿ ಇರುವ ಶ್ರೀರಾಮುಲು ಮನೆಗೆ ಪಿ.ರಾಜೀವ್ (P. Rajiv) ಬಂದಿದ್ದು, ಉಭಯ ನಾಯಕರ ಗುಪ್ತ ಮೀಟಿಂಗ್ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಪಿ.ರಾಜೀವ್ ಮಾಜಿ ಶಾಸಕ ಹಾಗೂ ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅಷ್ಟೇ ಅಲ್ಲದೇ ಪಿ.ರಾಜೀವ್ ವಿಜಯೇಂದ್ರ (BY Vijayendra) ಬಣದಲ್ಲಿ ಗುರುತಿಸಿಕೊಂಡಿದ್ದಾರೆ.
ಶ್ರೀರಾಮುಲು ಅವರು ಬಿ.ವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದು, ಅವರನ್ನು ಸಮಾಧಾನ ಪಡಿಸಲು ರಾಜೀವ್ ಬಂದಿದ್ರಾ ಎನ್ನುವ ಕುತೂಹಲ ಪ್ರಶ್ನೆ ಮೂಡುತ್ತಿದೆ. ಶ್ರೀರಾಮುಲು ಮನೆಗೆ ಬಂದು ಭೇಟಿಯಾಗಿ ನಂತರ ಇಬ್ಬರು ಒಟ್ಟಾಗಿ ಹೊರ ಬಂದ ವಿಡಿಯೋ ಪಬ್ಲಿಕ್ ಟಿವಿಗೆ ಮಾತ್ರ ಲಭ್ಯವಾಗಿದೆ.
ದೊಡ್ಮನೆಯ ಸದಸ್ಯರು ನಿನ್ನೆ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕನ್ನಡಿಗರು ಹೊಸ ವರುಷವೆಂದೇ ಭಾವಿಸುವ ಯುಗಾದಿ ಹಬ್ಬ ಬಹಳ ಶ್ರೇಷ್ಠವಾದದ್ದು. ಸಾಮಾನ್ಯವಾಗಿ ಯುಗಾದಿಯಂದು ಎಣ್ಣೆ ಸ್ನಾನ ಮಾಡುವ ವಾಡಿಕೆ ಹಿಂದಿನಕಾಲದಿಂದಲೂ ಇದೆ. ಸದ್ಯ ನಿನ್ನೆ ಮನೆಯ ಪರುಷ ಸದಸ್ಯರು ಮೈಗೆ ಎಣ್ಣೆ ಹಚ್ಚಿಕೊಂಡು ಬಿಸಿಲು ಕಾಯಿಸಿದ್ದಾರೆ.
ಈ ವೇಳೆ ಮಜಾ ಎನಾಪ್ಪಾ ಅಂದರೆ ಸಿಕ್ಸ್ ಪ್ಯಾಕ್ ಹೊಂದಿರುವ ರಾಜೀವ್ ಸಿಂಗರ್ ವಿಶ್ವ ಜೊತೆ ಕುಸ್ತಿ ಆಡಿದ್ದಾರೆ. ಈ ವೇಳೆ ಇದನ್ನು ಕಂಡು ಮಂಜು ಒಳ್ಳೆಯ ಕಾಂಪಿಟೇಟರ್ ನನ್ನು ಸೆಲೆಕ್ಟ್ ಮಡಿಕೊಂಡಿದ್ದೀಯಾ ಶಿಷ್ಯ, ರಿಟೈಡ್ ಆದ ಮೇಲೆ ಇನ್ನೂ ಮಕ್ಕಳು ಮರಿಗೆ ಹೇಳಿಕೊಡಬೇಕು. ನೀನು ಯಾಕಂದ್ರೆ ದೊಡ್ಡವರು ಯಾರು ಬರುತ್ತಾರೆ.
ಸಣ್ಣ ಸಣ್ಣ ಮಕ್ಕಳು ಪುಟಾಣಿ ಬೇಬಿ ಸಿಟ್ಟಿಂಗ್ ಮಕ್ಕಳಿಗೆ ನಾನು ಕರೆದೆ, ಆ ಮಕ್ಕಳು ಈ ದೇಹ ನೋಡಿದ ತಕ್ಷಣ ವಾವ್ ಅಂತ ಹೇಳುತ್ತಾರೆ. ನೀನು ಅವರ ಜೊತೆಯಲ್ಲಿಯೇ ಖುಷಿಯಾಗಿ ಆಡಿಕೊಂಡು, ಖುಷಿಪಡಿಸಿಕೊಂಡು ಇರಬೇಕು ಅಷ್ಟೇ ಎಂದು ಕಾಮೆಂಟ್ರಿ ಕೊಡುತ್ತಾರೆ.
ಕಿಡ್ಸ್ ಕೇರ್ ಓಪನ್ ಮಾಡಿ ಮಕ್ಕಳಿಗೆ ಕುಸ್ತಿ ಕಲಿಸು ಅಷ್ಟೇ. ನಿನ್ನ ಸರಿ ಸಮಾನವಾಗಿ ಆಡಲು ಯಾರ ಕೈನಲ್ಲಿಯೂ ಸಾಧ್ಯವಾಗುವುದಿಲ್ಲ. ಕೈ ನಡುಗುತ್ತದೆ, ತೊಡೆ ಅಲ್ಲಾಡುತ್ತದೆ. ಮುಗೀತು ಕಥೆ ಕ್ರಿಕೆಟ್ ಕೋಚ್, ಗರಡಿ ಕೋಚ್, ಮಸಾಜ್ ಸೆಂಟರ್ ಕಾಲು ನೋವು ಕೈ ನೋವು, ಕೀಲು ನೋವು, ಮಂಡಿ ನೋವು ಅಷ್ಟೇ ಎಂದು ಅಣುಕಿಸುತ್ತಾರೆ.
ಮಂಜು ಕಾಂಮೆಂಟ್ರಿ ಕೇಳಿ ಮನೆ ಮಂದಿ ಫುಲ್ ನಗುತ್ತಾ ಸಖತ್ ಎಂಜಾಯ್ ಮಾಡಿದ್ದಾರೆ.
ಬಿಗ್ಬಾಸ್ ಕಾರ್ಯಕ್ರಮ ಆರಂಭವಾಗಿ ಇನ್ನೇನು 2 ವಾರ ಪೂರ್ಣಗೊಳ್ಳುತ್ತಿದೆ. ಈ ವಾರದ ಅತ್ಯುತ್ತಮ ಮತ್ತು ಕಳಪೆ ಪ್ರದರ್ಶನ ತೋರಿಸಿದ ಸ್ಪರ್ಧಿಗಳನ್ನು ಸ್ವತಃ ಮನೆಯ ಸದಸ್ಯರು ಆಯ್ಕೆ ಮಾಡಿದರು.
ಬಿಗ್ಬಾಸ್, ಮನೆಯ ಸದಸ್ಯರ ಪೈಕಿ ಈ ವಾರ ಉತ್ತಮ ಪ್ರದರ್ಶನ ನೀಡಿದ ಒಬ್ಬ ಸದಸ್ಯನ ಹೆಸರನ್ನು ಮನೆಯ ಎಲ್ಲ ಸದಸ್ಯರು ಚರ್ಚಿಸಿ ಒಮ್ಮತದಿಂದ ನಿರ್ಧರಿಸಬೇಕು ಹಾಗೂ ಮನೆಯವರ ತೀರ್ಮಾನವನ್ನು ಕ್ಯಾಪ್ಟನ್ ರಾಜೀವ್ ಸೂಕ್ತ ಕಾರಣಗಳೊಂದಿಗೆ ಬಿಗ್ಬಾಸ್ಗೆ ತಿಳಿಸಬೇಕು ಎಂದು ಸೂಚಿಸಿದರು.
ಅದರಂತೆ ಮೊದಲನೆಯದಾಗಿ ಮಾತನಾಡಿದ ಗೀತಾ, ನಾನು ಲ್ಯಾಗ್ ಮಂಜುರವರ ಹೆಸರನ್ನು ಹೇಳಲು ಇಷ್ಟಪಡುತ್ತೇನೆ. ಎಂಟರ್ಟೈನ್ಮೆಂಟ್ ವಿಷಯಕ್ಕೆ ಬಂದರೆ ನಮ್ಮೆಲ್ಲರನ್ನು ಬಹಳ ನಗಿಸುತ್ತಾರೆ ಎಂದರು. ದಿವ್ಯಾ ಉರುಡುಗ ಮಂಜುರವರು ಕ್ಯಾಪ್ಟನ್ ಸ್ಥಾನವನ್ನು ಬಹಳ ಚೆನ್ನಾಗಿ ನಿಭಾಯಿಸಿದರು ಹಾಗಾಗಿ ನಾನು ಕೂಡ ಮಂಜುರವರ ಹೆಸರನ್ನು ಸೂಚಿಸುತ್ತೇನೆ ಎಂದರೆ, ವಿಶ್ವನಾಥ್ ಸಹ ಮಂಜು ಹೆಸರನ್ನು ಸೂಚಿಸುತ್ತಾರೆ. ಎಂಟರ್ಟೈನ್ಮೆಂಟ್ ಬಿಗ್ಬಾಸ್ ಮನೆಯಲ್ಲಿ ನಾವೆಲ್ಲ ಒಂದು ಕುಟುಂಬದವರ ರೀತಿಯಲ್ಲಿ ಇದ್ದೇವೆ ಎಂದರೆ ಅದಕ್ಕೆ ಕಾರಣ ಮಂಜು ಎಂದು ಚಂದ್ರಕಲಾ ತಿಳಿಸುತ್ತಾರೆ. ಟಾಸ್ಕ್ನಲ್ಲಿಯೇ ಆಗಲಿ, ಕೆಲಸದಲ್ಲಿಯೇ ಆಗಲಿ ಒಂದು ಒಳ್ಳೆಯ ಸಪೋರ್ಟಿವ್ ರೋಲ್ ಮಂಜು ಎಂದು ಅರವಿಂದ್ ಕೂಡ ಮಂಜು ಹೆಸರನ್ನು ತೆಗೆದುಕೊಳ್ಳುತ್ತಾರೆ. ದಿವ್ಯಾ ಸುರೇಶ್ ಎಲ್ಲರೊಂದಿಗೆ ಮಾತನಾಡುವ ರೀತಿ, ಟಾಸ್ಕ್ ನನ್ನು ಹಾಗೂ ನಮ್ಮನ್ನೆಲ್ಲ ನಿಭಾಯಿಸುವ ರೀತಿ ಎಲ್ಲವೂ ಒಂದು ಮಟ್ಟಕ್ಕೆ ಮಂಜು ನಿಭಾಯಿಸುತ್ತಾರೆ ಹಾಗಾಗಿ ನಾನು ಕೂಡ ಮಂಜುರವರನ್ನು ಆಯ್ಕೆ ಮಾಡುತ್ತೇನೆ ಎಂದು ನುಡಿದರು.
ಶುಭ ಪೂಂಜಾ, ಮಂಜು ಅರಂವಿಂದ್ರವರ ಹೆಸರನ್ನು ಆಯ್ಕೆ ಮಾಡಿದರೆ, ನಿಧಿ ಸುಬ್ಬಯ್ಯ, ವೈಷ್ಣವಿ ಗೌಡ, ಶಂಕರ್, ಪ್ರಶಾಂತ್ ಸಂಬರಗಿ, ರಘು, ರಾಜೀವ್ ಹೆಸರನ್ನು ಸೂಚಿಸುತ್ತಾರೆ. ಜೊತೆಗೆ ಬ್ರೋ ಗೌಡ ಹಾಗೂ ನಿರ್ಮಲ ಪ್ರಶಾಂತ್ ಸಂಬರಗಿಯವರ ಹೆಸರನ್ನು ಸೂಚಿಸುತ್ತಾರೆ.
ಒಟ್ಟಾರೆ ಮನೆಯ ಸದಸ್ಯರ ಅಭಿಪ್ರಾಯವನ್ನೆಲ್ಲಾ ಪರಿಶೀಲಿಸಿದ ರಾಜೀವ್ ನಾನು ಕ್ಯಾಪ್ಟನ್ ಆಗಿದ್ದೇನೆ. ನಾನು ನನ್ನ ಕರ್ತವ್ಯವನ್ನು ನಿಭಾಯಿಸುತ್ತಿದ್ದೇನೆ. ಹಾಗಾಗಿ ಮನೆಯನ್ನು ಇನ್ನಷ್ಟು ಖುಷಿಯಾಗಿಡುತ್ತಿರುವ ಮಂಜುರವರಿಗೆ ಈ ವಾರದ ಉತ್ತಮ ಆಟಗಾರರೆಂದು ಆಯ್ಕೆ ಮಾಡುತ್ತೇನೆ ಎಂದು ಹೇಳುತ್ತಾ ಶುಭಾಶಯ ತಿಳಿಸಿ ಮೆಡಲ್ ನೀಡಿದರು.
ಬಳಿಕ ಮೆಡಲ್ ಸ್ವೀಕರಿಸಿದ ಮಂಜು ನನಗೆ ಬಹಳ ಸಂತಸವಾಗುತ್ತಿದೆ. ಇದು ನನ್ನ ಜೀವನದಲ್ಲಿ ಸಿಗುತ್ತಿರುವ ಮೊದಲ ಮೆಡಲ್. ಎಲ್ಲರಿಗೂ ಧನ್ಯವಾದ ಎಂದು ಹೇಳುತ್ತಾರೆ. ಈ ವೇಳೆ ಮನೆ ಮಧಿ ಜೋರಾಗಿ ಶಿಳ್ಳೆ ಮತ್ತು ಚಪ್ಪಾಳೆಯನ್ನು ಹೊಡೆಯುತ್ತಾರೆ ಎಂದು ಮಂಜುರವರ ಹೆಸರನ್ನು ಘೋಷಿಸುತ್ತಾರೆ.
ಈ ವಾರ ಕಳಪೆ ಪ್ರದರ್ಶನ ತೋರಿದ ಬ್ರೋ ಗೌಡರನ್ನು ಬಿಗ್ಬಾಸ್ ಸೆರೆವಾಸ ಮಾಡಲು ಸೂಚಿಸಿದರು.
ಬೆಂಗಳೂರು: ಸಿನಿಮಾ ಕ್ರಿಕೆಟ್ ಲೀಗ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಪರವಾಗಿ ಆಡುತ್ತಿದ್ದ ಆಟಗಾರ, ಸ್ಯಾಂಡಲ್ವುಡ್ ಕಲಾವಿದ ರಾಜೀವ್ ಅವರು ದಾಂಪತ್ಯ ಜೀನನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು ಮೂಲದ ರೇಷ್ಮಾ ಅವರ ಜೊತೆ ರಾಜೀವ್ ಕಳೆದ ವರ್ಷ ನವೆಂಬರ್ 9 ರಂದು ನಗರದ ಪೈವಿಸ್ತಾ ಕನ್ವಂಷನ್ ಹಾಲ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶುಕ್ರವಾರ ರೇಷ್ಮಾ ಅವರನ್ನು ಮದುವೆಯಾಗಿದ್ದಾರೆ. ಇವರ ಮದುವೆಗೆ ಅತಿಥಿಯಾಗಿ ಸುದೀಪ್ ದಂಪತಿ ಬಂದಿದ್ದರು. ಮದುವೆಯಲ್ಲಿ ತೆಗೆಸಿದ್ದ ಫೋಟೋಗಳನ್ನು ಸುದೀಪ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ರಾಜೀವ್ ಕಿಚ್ಚ ಸುದೀಪ್ ನೇತೃತ್ವದ ತಂಡದಲ್ಲಿ ಕ್ರಿಕೆಟ್ ಆಟವಾಡುತ್ತಿದ್ದಾರೆ. ಸುದೀಪ್ ತಮ್ಮ ಗೆಳೆಯ ಕೂಡ ರಾಜೀವ್ ಅವರ ವೃತ್ತಿ ಜೀವನದಲ್ಲಿ ಹಾಗೂ ಚಿತ್ರಗಳಿಗೆ ಬೆಂಬಲ ನೀಡಿದ್ದಾರೆ. ರಾಜೀವ್ ನಿಶ್ಚಿತಾರ್ಥದ ಸಮಯದಲ್ಲಿ ಸುದೀಪ್ ಹೈದರಾಬಾದ್ ನಲ್ಲಿ ಇದ್ದ ಕಾರಣ ಬರಲು ಆಗಿರಲಿಲ್ಲ. ಹಾಗಾಗಿ ಸಿನಿಮಾದ ಕೆಲಸಗಳ ನಡುವೆ ಕೂಡ ಸುದೀಪ್, ರಾಜೀವ್ ಮದುವೆಯಲ್ಲಿ ಪಾಲ್ಗೊಂಡಿದ್ದು ನವದಂಪತಿಗೆ ಶುಭ ಹಾರೈಸಿದ್ದಾರೆ.
ರಾಜೀವ್ ಮದುವೆಯಾಗಿರುವ ರೇಷ್ಮಾ ಅವರು ಬೆಂಗಳೂರು ಮೂಲದವರಾಗಿದ್ದು, ದಯಾನಂದ ಸಾಗರ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ನಟ ಪ್ರದೀಪ್ ಸಹ ಗೆಳೆಯನ ಮದುವೆಯಲ್ಲಿ ಭಾಗಿಯಾಗಿದ್ದು ಹೊಸ ಜೋಡಿಯ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಶುಭಾಶಯ ತಿಳಿಸಿದ್ದಾರೆ.
ನಟ ರಾಜೀವ್ ‘ಉಸಿರೇ ಉಸಿರೇ’ ಸಿನಿಮಾದಲ್ಲಿ ನಾಯಕನಾಗಿಯೂ ಅಭಿನಯಿಸಿದ್ದರು. ‘ಬೆಂಗಳೂರು 560023’, ‘ಆರ್ ಎಕ್ಸ್ ಸೂರಿ’, ಹಾಗೂ ‘ಜಿಂದಗಿ’ ಸಿನಿಮಾಗಳಲ್ಲಿ ರಾಜೀವ್ ನಟಿಸಿದ್ದಾರೆ.