Tag: Rajiv Chandrashekhar

  • 60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್

    60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್

    – ಮೋದಿ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ

    ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ಬಂದ 75 ವರ್ಷದಲ್ಲಿ ಕಾಂಗ್ರೆಸ್ 60 ವರ್ಷಕ್ಕೂ ಅಧಿಕ ಕಾಲ ದೇಶದಲ್ಲಿ ಆಡಳಿತ ನಡೆಸಿದೆ. ಆದರೆ 60 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸಗಳು ಮೋದಿಯವರ ಕಾಲದಲ್ಲಿ ನಡೆದಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು.

    ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ 60 ವರ್ಷಗಳ ಕಾಲ ಒಂದು ಪಕ್ಷ ಆಡಳಿತ ನಡೆಸಿದೆ. 60 ವರ್ಷ ಆಡಳಿತ ನಡೆಸಿದ ಪಕ್ಷಕ್ಕೆ ಆರ್ಟಿಕಲ್ 370 ರದ್ದುಗೊಳಿಸಲು ಸಾಧ್ಯವಾಗಿರಲಿಲ್ಲ ಎಂದರು.

    ರಾಮ ಮಂದಿರ ನಿರ್ಮಾಣಕ್ಕೆ ಮೋದಿ ಸರ್ಕಾರವೇ ಬರಬೇಕಾಯಿತು. ಪುಲ್ವಾಮಾ, ಬಾಲಕೋಟ್ ಅಂತಹ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರ ನೀಡಲು ಮೋದಿ ಅವರೇ ಬರಬೇಕಾಯಿತು. ಮೋದಿ ಅವರ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪ ಕೇಳಿಲ್ಲ. ರಾಜೀವ್ ಗಾಂಧಿ ಅವರ ಆಡಳಿತದ ಅವಧಿಯಲ್ಲಿ ಸರ್ಕಾರದ ಯೋಜನೆಗಳು ಕೇವಲ ಶೇ.15 ರಷ್ಟು ತಲುಪುತಿತ್ತು. ಶೇ.85 ರಷ್ಟು ಭ್ರಷ್ಟಾಚಾರ ಇತ್ತು. ಆದರೆ ಮೋದಿಯವರ ಸರ್ಕಾರದಲ್ಲಿ ಶೇ.100 ರಷ್ಟು ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿವೆ ಎಂದರು. ಇದನ್ನೂ ಓದಿ: ಆರ್ಟಿಕಲ್ 370 ರದ್ದು ಭಾರತದ ಆಂತರಿಕ ವಿಚಾರ ಅಂತ ಒಪ್ಕೊಂಡ ಪಾಕ್

    ನವ ಭಾರತದ ಕಲ್ಪನೆಯನ್ನು ಮೋದಿ ಸರ್ಕಾರ ಹೊಂದಿದ್ದು, ಮುಂದಿನ 25 ವರ್ಷದಲ್ಲಿ ಈ ಯೋಜನೆ ನಿರ್ಮಿಸುವ ಗುರಿ ಹೊಂದಲಾಗಿದೆ. ಈ 25 ವರ್ಷದಲ್ಲಿ ಹೊಸ ಶಿಕ್ಷಣ ನೀತಿ, ತಾಂತ್ರಿಕತೆ, ಮೊದಲಾದ ಉತ್ತಮ ಯೋಜನೆಗಳಿದ್ದು 2047 ಕ್ಕೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಇನ್ನು 25 ವರ್ಷಗಳ ಕಾಲ ಈ ದೇಶಕ್ಕೆ ಮೋದಿ ಅವರ ನಾಯಕತ್ವ ಅವಶ್ಯಕತೆ ಇದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇದನ್ನೂ ಓದಿ: ಆರ್ಟಿಕಲ್ 370 ರದ್ದು ಬಳಿಕ ಮೊದಲ ಬಾರಿಗೆ ಜಮ್ಮು, ಕಾಶ್ಮೀರ ನಾಯಕರೊಂದಿಗೆ ಮೋದಿ ಸಭೆ

     

  • ರಾಜ್ಯದ ಸಂಸದರಿಗೆ ಐಫೋನ್ ಗಿಫ್ಟ್: ತಿರಸ್ಕರಿಸಿದ ಬಿಜೆಪಿ ನಾಯಕರು

    ರಾಜ್ಯದ ಸಂಸದರಿಗೆ ಐಫೋನ್ ಗಿಫ್ಟ್: ತಿರಸ್ಕರಿಸಿದ ಬಿಜೆಪಿ ನಾಯಕರು

    ಬೆಂಗಳೂರು: ಬುಧವಾರ ದೆಹಲಿಯಲ್ಲಿ ರಾಜ್ಯದ ಎಲ್ಲ ಸಂಸದರ ಸಭೆ ಕರೆಯಲಾಗಿದೆ. ಈ ವೇಳೆ ರಾಜ್ಯ ಸರ್ಕಾರವು ಕಿಟ್ ಜೊತೆಗೆ ದುಬಾರಿ ಐಫೋನ್ ನೀಡಿದ್ದನ್ನು ಬಿಜೆಪಿ ಸಂಸದರು ತಿರಸ್ಕರಿಸಿದ್ದಾರೆ.

    ಕೇಂದ್ರ ಸಚಿವ ಅನಂತಕುಮಾರ್ ಸೇರಿದಂತೆ ಬಿಜೆಪಿ ಸಂಸದರು ರಾಜ್ಯ ಸರ್ಕಾರದ ಗಿಫ್ಟ್ ಅನ್ನು ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲದೆ ದುಬಾರಿ ಫೋನ್ ತಿರಸ್ಕರಿಸಿ ಗಿಫ್ಟ್ ಕೊಡುತ್ತಿರುವ ಔಚಿತ್ಯವನ್ನು ಟ್ವಿಟ್ಟರ್ ಮೂಲಕ ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪ್ರಶ್ನಿಸಿದ್ದಾರೆ.

    ಕಾವೇರಿ ಜಲ ವಿವಾದದ ಕುರಿತಾದ ಚರ್ಚೆಗೆ ರಾಜ್ಯದ ಎಲ್ಲ ಸಂಸದರನ್ನು ಸಭೆಗೆ ಕರೆದಿದ್ದಕ್ಕೆ ಧನ್ಯವಾದ. ಆದರೆ ರಾಜ್ಯ ಸರ್ಕಾರ ಏಕೆ ಇಷ್ಟೊಂದು ದುಬಾರಿ ಮೊಬೈಲ್ ನೀಡುತ್ತಿದೆ. ಸಾರ್ವಜನಿಕರ ಹಣದಲ್ಲಿ ಉಡುಗೊರೆ ನೀಡುತ್ತಿದೆ. ಪೌರಕಾರ್ಮಿಕರಿಗೆ ನೀಡಬೇಕಾದ ವೇತನ ನೀಡದೇ ಇಂತಹದಕ್ಕೆ ಖರ್ಚು ಮಾಡುತ್ತಿರವುದು ಸೂಕ್ತವಲ್ಲ ಎಂದು ಬರೆದು ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಸಂಸದರಿಗೆ 50 ಸಾವಿರ ಮೌಲ್ಯದ ಐಫೋನ್ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಡಿಕೆಶಿ

    ಸಿಎಂ ಪ್ರತಿಕ್ರಿಯೆ ಏನು?
    ಸಂಸದರಿಗೆ ಐಫೋನ್ ಕೊಟ್ಟ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅಷ್ಟಕ್ಕೂ ನಾನು ಐಫೋನ್ ನೀಡುವಂತೆ ಯಾವುದೇ ಸೂಚನೆ ನೀಡಿಲ್ಲ. ಬೇರೆಯವರು ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ. ನನಗೆ ಈ ಬಗ್ಗೆ ಇರುವುದು ಶೂನ್ಯ ಮಾಹಿತಿ. ಹೀಗಾಗಿ ಇದರ ಬಗ್ಗೆ ತಿಳಿದುಕೊಂಡು ನಂತರ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಧ್ಯಮಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.