Tag: Rajiv Gandhi International Airport

  • ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 14 ಕೋಟಿ ಮೌಲ್ಯದ ಗಾಂಜಾ ಸೀಜ್ – ಮಹಿಳೆ ಅರೆಸ್ಟ್

    ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 14 ಕೋಟಿ ಮೌಲ್ಯದ ಗಾಂಜಾ ಸೀಜ್ – ಮಹಿಳೆ ಅರೆಸ್ಟ್

    – 40 ಕೆ.ಜಿ ಗಾಂಜಾ ವಶಪಡಿಸಿಕೊಂಡ ಎನ್‌ಸಿಬಿ

    ಹೈದರಾಬಾದ್: ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Rajiv Gandhi International Airport) ಬುಧವಾರ ಮಹಿಳಾ ಪ್ರಯಾಣಿಕರೊಬ್ಬರ ಲಗೇಜ್‌ನಿಂದ 14 ಕೋಟಿ ರೂ. ಮೌಲ್ಯದ 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು (Hydroponic Ganja) ಎನ್‌ಸಿಬಿ (Narcotics Control Bureau) ವಶಪಡಿಸಿಕೊಂಡಿದ್ದು, ಮಹಿಳೆಯನ್ನು ಬಂಧಿಸಿದೆ.

    ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ ಎನ್‌ಸಿಬಿ, ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಎನ್‌ಸಿಬಿ ಅಧಿಕಾರಿಗಳು ಮಹಿಳೆಯನ್ನು ತಡೆದು ಆಕೆಯ ಎರಡು ಚೆಕ್-ಇನ್ ಬ್ಯಾಗ್‌ಗಳಿಂದ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ತಿರುಪತಿಯಲ್ಲಿ ಮದುವೆ ಆಗುವ ಕನ್ನಡಿಗರಿಗೆ ಗುಡ್‌ನ್ಯೂಸ್ – ತಿರುಮಲದ ಕಲ್ಯಾಣ ಮಂಟಪದಲ್ಲಿ ಮೊದಲ ಮದುವೆ

    ಬ್ಯಾಂಕಾಕ್‌ನಿಂದ ನೇರವಾಗಿ ವಿವಿಧ ಭಾರತೀಯ ವಿಮಾನ ನಿಲ್ದಾಣಗಳಿಗೆ ಬರುವ ಪ್ರಯಾಣಿಕರಿಂದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿರುವ ಅನೇಕ ನಿದರ್ಶನಗಳು ಇರುವುದರಿಂದ ಮಹಿಳೆ ಯಾರಿಗೂ ಅನುಮಾನ ಬಾರದಂತೆ ಬ್ಯಾಂಕಾಕ್‌ನಿಂದ ಕಳ್ಳಸಾಗಣೆ ಮಾಡಿ ದುಬೈ ಮೂಲಕ ಭಾರತಕ್ಕೆ ಬಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಥೈಲ್ಯಾಂಡ್ ಮತ್ತು ಭಾರತದಲ್ಲಿ ಮಹಿಳೆಗಿರುವ ಲಿಂಕ್ ಅನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್‌ಸಿಬಿ ಮಾಹಿತಿ ನೀಡಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ತಾಯಿಗೆ ಬೆಂಕಿ – ಶವದ ಪಕ್ಕವೇ ಮಲಗಿದ್ದ ಪುತ್ರ ಅರೆಸ್ಟ್‌

  • ಬೀಫ್‌ ನೀಡಲ್ಲ ಅಂದ BCCI; ಚಿಕನ್‌, ಮಟನ್‌, ಫಿಶ್‌ ಔತಣಕ್ಕೆ ಪಾಕ್‌ ಆಟಗಾರರು ಫಿದಾ

    ಬೀಫ್‌ ನೀಡಲ್ಲ ಅಂದ BCCI; ಚಿಕನ್‌, ಮಟನ್‌, ಫಿಶ್‌ ಔತಣಕ್ಕೆ ಪಾಕ್‌ ಆಟಗಾರರು ಫಿದಾ

    ಹೈದರಾಬಾದ್: ಇದೇ ಅಕ್ಟೋಬರ್ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್ (ICC WorldCup) ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್ ತಂಡ ಹೈದರಾಬಾದ್‌ನಲ್ಲಿ (Hyderabad) ವಾಸ್ತವ್ಯ ಹೂಡಿದೆ. ಪಾಕಿಸ್ತಾನ ತಂಡದ ಆಟಗಾರರಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ್ದು, ಇದೀಗ ಅದ್ಧೂರಿ ಔತಣವನ್ನೂ ನೀಡಲಾಗಿದೆ. ಈ ಕುರಿತ ವೀಡಿಯೋ ತುಣುಕನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ತನ್ನ ಟ್ವಿಟ್ಟರ್‌ (X) ಖಾತೆಯಲ್ಲಿ ಹಂಚಿಕೊಂಡಿದೆ.

    ನ್ಯೂಜಿಲೆಂಡ್‌ ವಿರುದ್ಧ ಮೊದಲ ಅಭ್ಯಾಸ ಪಂದ್ಯದ ಬಳಿಕ ಪಾಕಿಸ್ತಾನ ತಂಡ ಹೈದರಾಬಾದ್‌ನ ಪ್ರತಿಷ್ಠಿತ ಹೋಟೆಲ್‌ನಲ್ಲಿ (Hotel) ವಾಸ್ತವ್ಯ ಹೂಡಿದ್ದು, ವಿವಿಧ ಮಾಂಸಾಹಾರ (Nonveg) ಖಾದ್ಯಗಳ ಔತಣ ನೀಡಲಾಗಿದೆ. ಪಾಕ್‌ ತಂಡದ ನಾಯಕ ಬಾಬರ್‌ ಆಜಂ (Babar Azam), ಮೊಹಮ್ಮದ್‌ ರಿಜ್ವಾನ್‌, ಶಾಹೀನ್‌ ಶಾ ಅಫ್ರಿದಿ ಮೊದಲಾದವರು ಈ ಖುಷಿಯನ್ನ ತಮ್ಮ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲೇ ಪಾಕ್‌ಗೆ ಸೋಲಿನ ರುಚಿ – ಕಿವೀಸ್‌ಗೆ 5 ವಿಕೆಟ್‌ಗಳ ಜಯ

    ಪಾಕಿಸ್ತಾನದಲ್ಲಿ ನಮ್ಮ ಅಭಿಮಾನಿಗಳು ನಮ್ಮನ್ನು ಹೇಗೆ ಪ್ರೀತಿಸುತ್ತಾರೋ ಹಾಗೆಯೇ ಭಾರತೀಯ ಪ್ರೇಕ್ಷಕರೂ ಸಾಕಷ್ಟು ಪ್ರೀತಿ ತೋರಿಸುತ್ತಿದ್ದಾರೆ ಎಂದು ಮೊಹಮ್ಮದ್‌ ರಿಜ್ವಾನ್‌ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಏನೆಲ್ಲಾ ಸ್ಪೆಷಲ್‌ ಫುಡ್‌ ಇದೆ ಗೊತ್ತಾ?
    ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೇರಿ ಪಾಲ್ಗೊಳ್ಳುವ ಕ್ರಿಕೆಟ್‌ ತಂಡಗಳಿಗೆ ಗೋಮಾಂಸ (ಬೀಫ್‌) ನಿಷೇಧಿಸಲಾಗಿದೆ. ಆದ್ದರಿಂದ ಪಾಕಿಸ್ತಾನ ತಂಡಕ್ಕೆ ದೈನಂದಿನ ಪ್ರೋಟೀನ್‌ಯುಕ್ತ ಆಹಾರವಾಗಿ ಚಿಕನ್‌, ಮಟನ್‌ ಹಾಗೂ ಫಿಶ್‌ ಮಾಂಸಾಹಾರ ಖಾದ್ಯಗಳನ್ನು ನೀಡಲಾಗುತ್ತಿದೆ. ಡಯಟ್ ಚಾರ್ಟ್‌ನಲ್ಲಿ ಗ್ರಿಲ್ಡ್ ಲ್ಯಾಂಬ್ ಚಾಪ್ಸ್, ಮಟನ್ ಕರಿ, ಹೈದರಾಬಾದ್‌ನಲ್ಲಿ ಬಹುಬೇಡಿಕೆಯ ಬಟರ್ ಚಿಕನ್ ಮತ್ತು ಗ್ರಿಲ್ಡ್ ಫಿಶ್ ನೀಡಲಾಗುತ್ತಿದೆ. ಇದನ್ನೂ ಓದಿ: ವಿಶ್ವಕಪ್‌ ಕ್ರಿಕೆಟ್‌ ಅಲ್ಲ, ವಿಶ್ವ ಟೆರರ್‌ ಕಪ್‌ ಮಾಡ್ತೀವಿ – ಖಲಿಸ್ತಾನ್‌ ಉಗ್ರನಿಂದ ಬೆದರಿಕೆ

    ಬಿರಿಯಾನಿಯಂತಹ ಆಹಾರ ಪದಾರ್ಥಗಳನ್ನ ತಯಾರಿಸಲು ಸ್ಟೀಮ್ಡ್ ಬಾಸುಮತಿ ರೈಸ್ ಅನ್ನು ಬಳಸಲಾಗುತ್ತಿದೆ. ಅಷ್ಟೇ ಅಲ್ಲದೇ ಬೊಲೊಗ್ನೀಸ್ ಸಾಸ್‌ನಲ್ಲಿರುವ ಸ್ಪಾಗೆಟ್ಟಿ, ಶೇನ್ ವಾರ್ನ್ ಚಿಕನ್ ಹಾಗೂ ವೆಜ್ ಪಲಾವ್ ಎಲ್ಲದಕ್ಕಿಂತ ಮುಖ್ಯವಾಗಿ ಹೈದರಾಬಾದ್ ಬಿರಿಯಾನಿ ಕಡ್ಡಾಯವಾಗಿದೆ. ಒಟ್ಟಿನಲ್ಲಿ ಭಾರತದಲ್ಲಿ ನೀಡುತ್ತಿರುವ ಆತಿಥ್ಯಕ್ಕೆ ಪಾಕ್‌ ಆಟಗಾರರು ಫಿದಾ ಆಗಿದ್ದಾರೆ. ಇದನ್ನೂ ಓದಿ: Asian Games 2023: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ – ಕಂಚು ಗೆದ್ದು ಕಿರಣ್‌ ಮಿಂಚು

    ನ್ಯೂಜಿಲೆಂಡ್‌ ವಿರುದ್ಧ ಶುಕ್ರವಾರ ಪಾಕಿಸ್ತಾನ ಅಭ್ಯಾಸ ಪಂದ್ಯದಲ್ಲಿ ಉತ್ತಮ ರನ್‌ ಕಲೆಹಾಕಿದರೂ ಸೋಲನ್ನು ಅನುಭವಿಸಿತು. ಈ ಪಂದ್ಯದ ಕುರಿತು ಮಾತನಾಡಿರುವ ಮೊಹಮ್ಮದ್‌ ರಿಜ್ವಾನ್‌, ಅಭ್ಯಾಸ ಪಂದ್ಯದಲ್ಲಿ ಸೆಂಚುರಿ ಬಾರಿಸಿದ್ದು ನನಗೆ ತುಂಬಾ ಸಂತೋಷವಾಗಿದೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 6 ಅಥವಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದೆ. ಏಕದಿನ ಕ್ರಿಕೆಟ್‌ನಲ್ಲಿ 4ನೇ ಕ್ರಮಾಂಕದಲ್ಲಿ ಆಡುತ್ತೇನೆ. ಅವಶ್ಯಕತೆಗಳಿಗೆ ಅನುಗುಣವಾಗಿ ಬ್ಯಾಟ್‌ ಬೀಸುತ್ತೇನೆ ಎಂದು ತಿಳಿಸಿದ್ದಾರೆ.

    ಮೊದಲ ಅಭ್ಯಾಸ ಪಂದ್ಯದ ಬಳಿಕ ಹೈದರಾಬಾದ್‌ ಪಿಚ್‌ ಬಗ್ಗೆ ಅರಿತಿರುವ ಪಾಕ್‌ ತಂಡ ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಭ್ಯಾಸ ಪಂದ್ಯವನ್ನಾಡಲಿದೆ. ಆ ನಂತರ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ.

    ಅಕ್ಟೋಬರ್ 14 ರಂದು ಹೈವೋಲ್ಟೇಜ್ ಕದನ: ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್ ನಡುವಿನ ಹೈವೋಲ್ಟೇಜ್ ಕದನ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ಅ ಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಹೈದರಾಬಾದ್‌: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್‌ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯನ್ನಾಡಲು ಬಾಬರ್‌ ಆಜಂ (Babar Azam) ಪಾಕಿಸ್ತಾನ ಕ್ರಿಕೆಟ್​ ತಂಡ ಹೈದರಾಬಾದ್‌ನಲ್ಲಿ ವಾಸ್ತವ್ಯ ಹೂಡಿದೆ. ಪಾಕಿಸ್ತಾನ ತಂಡದ (Pakistan Team) ಆಟಗಾರರು ಬರುತ್ತಿದ್ದಂತೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ. ಇದರೊಂದಿಗೆ ಊಟೋಪಚಾರ ವಿಷಯಗಳಲ್ಲೂ ಅಷ್ಟೇ ಕಾಳಜಿ ವಹಿಸಲಾಗಿದೆ.

    ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಸೇರಿ ಪಾಲ್ಗೊಳ್ಳುವ 10 ತಂಡಗಳಿಗಳಿಗೆ ಗೋಮಾಂಸ ನಿಷೇಧಿಸಲಾಗಿದೆ. ಆದ್ದರಿಂದ ಪಾಕಿಸ್ತಾನ ತಂಡಕ್ಕೆ ದೈನಂದಿನ ಪ್ರೋಟೀನ್‌ಯುಕ್ತ ಆಹಾರಕ್ಕಾಗಿ ಕೋಳಿ (Chicken), ಕುರಿ ಹಾಗೂ ಮೀನು ಆಹಾರ ಪದಾರ್ಥಗಳ ಮೆನು ನೀಡಲಾಗಿದೆ. ಡಯಟ್‌ ಚಾರ್ಚ್‌ನಲ್ಲಿ ಗ್ರಿಲ್ಡ್‌ ಲ್ಯಾಂಬ್‌ ಚಾಪ್ಸ್ (Grilled Lamb Chops), ಮಟನ್‌ ಕರಿ, ಹೈದರಾಬಾದ್‌ನಲ್ಲಿ ಬಹುಬೇಡಿಕೆಯ ಬಟರ್‌ ಚಿಕನ್‌ ಮತ್ತು ಗ್ರಿಲ್ಡ್‌ ಫಿಶ್‌ (Grilled Fish) ನೀಡಲಾಗುತ್ತಿದೆ.

    ಬಿರಿಯಾನಿಯಂತಹ ಆಹಾರ ಪದಾರ್ಥಗಳನ್ನ ತಯಾರಿಸಲು ಸ್ಟೀಮ್ಡ್‌ ಬಾಸುಮತಿ ರೈಸ್‌ ಅನ್ನು ಬಳಸಲಾಗುತ್ತಿದೆ. ಅಷ್ಟೇ ಅಲ್ಲದೇ ಬೊಲೊಗ್ನೀಸ್ ಸಾಸ್‌ನಲ್ಲಿರುವ ಸ್ಪಾಗೆಟ್ಟಿ, ಶೇನ್ ವಾರ್ನ್‌ ಚಿಕನ್‌ ಹಾಗೂ ವೆಜ್‌ ಪಲಾವ್‌ ಎಲ್ಲದಕ್ಕಿಂತ ಮುಖ್ಯವಾಗಿ ಹೈದರಾಬಾದ್‌ ಬಿರಿಯಾನಿ ಮೆನುವನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ನ್ಯೂಜಿಲೆಂಡ್‌ ವಿರುದ್ಧ ಅಭ್ಯಾಸ ಪಂದ್ಯವನ್ನಾಡಲಿರುವ ಪಾಕಿಸ್ತಾನ ತಂಡ ಗುರುವಾರ ಮೈದಾನ ವೀಕ್ಷಣೆ ಮಾಡಿದೆ. ಇದೇ ವೇಳೆ ಪಾಕ್‌ ತಂಡದ ನಾಯಯ ಬಾಬರ್‌ ಆಜಂ ಪಿಚ್‌ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಇದನ್ನೂ ಓದಿ: Asian Games 2023: ಈಕ್ವೆಸ್ಟ್ರೀಯನ್‌ನಲ್ಲಿ ಭಾರತಕ್ಕೆ ಕಂಚು – ಇತಿಹಾಸ ನಿರ್ಮಿಸಿದ ಅನುಷ್‌

    ಅಕ್ಟೋಬರ್‌ 14 ರಂದು ಹೈವೋಲ್ಟೇಜ್‌ ಕದನ: ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್​ ನಡುವಿನ ಹೈವೋಲ್ಟೇಜ್​ ಕದನ ಅಕ್ಟೋಬರ್​ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ಹೈದರಾಬಾದ್‌: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್‌ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್​ ತಂಡ ಬುಧವಾರ ತಡರಾತ್ರಿ ಹೈದರಾಬಾದ್​ಗೆ ಬಂದಿಳಿದಿದೆ. ಈ ವೇಳೆ ಪಾಕಿಸ್ತಾನ ತಂಡದ ಆಟಗಾರರಿಗೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ.

    ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಆಜಂ ಸೇರಿದಂತೆ ಕೆಲವು ಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು, ಇದೀಗ ಟ್ವಿಟರ್​ನಲ್ಲಿ ಸಖತ್‌ ಟ್ರೆಂಡ್​ ಆಗಿದೆ. ಹೈದರಾಬಾದ್​ ವಿಮಾನ ನಿಲ್ದಾಣಕ್ಕೆ ಬಂದ ಪಾಕಿಸ್ತಾನ ತಂಡದ ಆಟಗಾರರಿಗೆ ಕೇಸರಿ ಸಾಲು ಹಾಕಿ ಭವ್ಯ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಭಾರೀ ಬಿಗಿ ಭದ್ರತೆಯನ್ನೂ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: Asian Games: ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಭಾರತಕ್ಕೆ ಬೆಳ್ಳಿ

    ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಅದಕ್ಕಾಗಿ ಪಾಕ್‌ ತಂಡ ಸೆ.27ರ ತಡರಾತ್ರಿ ಹೈದರಾಬಾದ್‌ಗೆ ಬಂದಿಳಿದಿದೆ.

    ಪಾಕ್​ ಆಟಗಾರರು ಕೇಸರಿ ಶಾಲು ಧರಿಸಿದ ಫೋಟೊ ಮತ್ತು ವೀಡಿಯೋ ಇದೀಗ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಪಾಕ್​ ತಂಡದ ನಾಯಕ ಬಾಬರ್​ ಆಜಂ ಅವರನ್ನ ನೆಟ್ಟಿಗರು ತೆಲಂಗಾಣದ ಬಿಜೆಪಿ ಯುವ ಘಟಕದ ನಾಯಕ ಎಂದು ಟ್ರೋಲ್​ ಮಾಡಿದ್ದಾರೆ. ಇದನ್ನೂ ಓದಿ: ಬ್ಯಾಟಿಂಗ್‌ನಲ್ಲಿ ಕೈಕೊಟ್ಟರೂ ಬೌಲಿಂಗ್‌ನಲ್ಲಿ ಕೈಹಿಡಿದ ಮ್ಯಾಕ್ಸಿ – ಪಂದ್ಯ ಸೋತು ಸರಣಿ ಗೆದ್ದ ಭಾರತ

    ಪಾಕಿಸ್ತಾನ ತಂಡ ಕೆಲವು ದಿನಗಳ ಹಿಂದೆಯೇ ಭಾರತಕ್ಕೆ ಬರಬೇಕಿತ್ತು. ಆದರೆ ವೀಸಾ ಸಮಸ್ಯೆಯಿಂದ ಪ್ರಯಾಣ ಅಸಾಧ್ಯವಾಗಿತ್ತು. ಇದೇ ವಿಚಾರವಾಗಿ ಪಾಕ್​ ಕ್ರಿಕೆಟ್​ ಮಂಡಳಿ ವಿಶ್ವಕಪ್​ಗೆ ಪೂರ್ವ ತಯಾರಿ ನಡೆಸಲು ಸರಿಯಾದ ವ್ಯವಸ್ಥೆ ಇಲ್ಲವೆಂದು ಜಾಗತಿಕ ಸಂಸ್ಥೆಯೊಂದಿಗೆ ಕಳವಳ ವ್ಯಕ್ತಪಡಿಸಿತ್ತು. ಕೊನೆಗೆ ಐಸಿಸಿ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಿಗೆ ಭಾರತೀಯ ವೀಸಾಗಳನ್ನು ನೀಡುವ ವ್ಯವಸ್ಥೆ ಮಾಡಿತ್ತು.

    7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್‌:
    ಪಾಕಿಸ್ತಾನ ಕ್ರಿಕೆಟ್‌ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟಿದೆ. 2008ರಲ್ಲಿ ನಡೆದ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಆಡುವುದನ್ನೇ ನಿಲ್ಲಿಸಿದೆ. ಆದ್ರೆ 2016ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿ ಆಡಲು ಕೊನೆಯ ಬಾರಿ ಪಾಕ್​ ತಂಡ ಭಾರತಕ್ಕೆ ಬಂದಿತ್ತು. ಅದಾದ ನಂತರ ಐಸಿಸಿ ಟೂರ್ನಿಯಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಿದ್ದವು. ಇದೀಗ 7 ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತಕ್ಕೆ ಭೇಟಿ ನೀಡಿದೆ.

    ಅಕ್ಟೋಬರ್‌ 14 ರಂದು ಹೈವೋಲ್ಟೇಜ್‌ ಕದನ:
    ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್​ ನಡುವಿನ ಹೈವೋಲ್ಟೇಜ್​ ಕದನ ಅಕ್ಟೋಬರ್​ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ರಮವಾಗಿ 11.1 ಕೆಜಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅಂದರ್

    ಅಕ್ರಮವಾಗಿ 11.1 ಕೆಜಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅಂದರ್

    – 4.25 ರೂ ಮೌಲ್ಯದ ವಿದೇಶ ಕರೆನ್ಸಿ ವಶ

    ಹೈದರಾಬಾದ್: ಅಕ್ರಮವಾಗಿ 11.1 ಕೆಜಿ ಚಿನ್ನ, ಯುಎಇ ಮತ್ತು ಸಿಂಗಾಪುರ ದೇಶಗಳ ಕರೆನ್ಸಿ ಸಾಗಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ ಘಟನೆ ಹೈದರಾಬಾದ್‍ನ ರಾಜೀವ್ ಗಾಂಧಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.

    ಬಂಧಿತ ಮಹಿಳೆ ದುಬೈ ಮೂಲದವಳು ಎಂದು ತಿಳಿದುಬಂದಿದೆ. ಆರೋಪಿ ಮಹಿಳೆಯು ಕಳೆದ ಮೂರು ತಿಂಗಳಿನಿಂದ ಹೈದರಾಬಾದ್‍ನಲ್ಲಿ ನೆಲೆಸಿದ್ದಳು.

    ಹೈದರಾಬಾದ್‍ನ ವಿಮಾನ ನಿಲ್ದಾಣದ ಎಕ್ಸಿಟ್ ಗೇಟ್‍ನಲ್ಲಿ ಇಂದು ಬೆಳಗ್ಗೆ ಬ್ಯಾಗ್‍ಗಳನ್ನು ಪರಿಶೀಲನೆ ಮಾಡಲಾಗುತಿತ್ತು. ಈ ವೇಳೆ ದುಬೈನಿಂದ ಆಗಮಿಸಿದ ಮಹಿಳೆಯ ಬ್ಯಾಗ್‍ನಲ್ಲಿ ಬಟ್ಟೆ, ಸಾಕ್ಸ್ ಒಳಗೆ ಇಟ್ಟಿದ್ದ 3,63,52,500 ಕೋಟಿ ರೂ. ಮೌಲ್ಯದ 11.1 ಕೆ.ಜಿ ಚಿನ್ನ ಪತ್ತೆಯಾಗಿದೆ. ಅಷ್ಟೇ ಅಲ್ಲದೆ 4,25,312 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಸಂಬಂಧ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಮಹಿಳೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಹಿಳೆ ಫೈ ಸ್ಟಾರ್ ಹೋಟೆಲ್‍ನ ರೂಮ್ ಒಂದರಲ್ಲಿ ಕಳೆದ ಮೂರು ತಿಂಗಳಿಂದ ವಾಸವಾಗಿದ್ದ ಮಾಹಿತಿ ಸಿಕ್ಕಿತ್ತು. ತಕ್ಷಣವೇ ರೂಮ್ ಪರಿಶೀಲನೆ ಮಾಡಿದ ಅಧಿಕಾರಿಗಳಿಗೆ 1.5 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ಸಿಕ್ಕಿದೆ.