Tag: Rajiv Gandhi University

  • 600 ಕೋಟಿ ವೆಚ್ಚದ ರಾಜೀವ್ ಗಾಂಧಿ ಆರೋಗ್ಯ ವಿವಿ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

    600 ಕೋಟಿ ವೆಚ್ಚದ ರಾಜೀವ್ ಗಾಂಧಿ ಆರೋಗ್ಯ ವಿವಿ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

    – ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಜೀವ

    ರಾಮನಗರ: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ (Rajiv Gandhi University of Health Sciences) ನಿರ್ಮಾಣ ಕಾಮಗಾರಿಗೆ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ (Basavaraj Bommai) ನೆರವೇರಿಸಿದ್ದಾರೆ.

    ಸುಮಾರು 600 ಕೋಟಿ ರೂ. ವೆಚ್ಚದಲ್ಲಿ 270 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಗುದ್ದಲಿಪೂಜೆ ನೇರವೇರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

    ಹಿಂದೆ ನಾಲ್ಕೈದು ಬಾರಿ ಗುದ್ದಲಿಪೂಜೆ ನಡೆದರೂ ಕಾರಣಾಂತರಗಳಿಂದ ಯೋಜನೆ ನೆನೆಗುದಿಗೆ ಬಿದ್ದಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ಪಡೆದಿರುವ ಬೊಮ್ಮಾಯಿ ಆರೋಗ್ಯ ವಿವಿ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದಾರೆ. ಇದೇ ವೇಳೆ ‌ಹಲವು ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

    670 ಕೋಟಿ ರೂ. ವೆಚ್ಚದ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆ, ಜಲಜೀವನ್ ಮಿಷನ್ ಅಡಿ ಶುದ್ಧಕುಡಿಯುವ ನೀರಿನ ಯೋಜನೆ, 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ, 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಹಾಗೂ 5.23 ಕೋಟಿ ರೂ. ವೆಚ್ಚದಲ್ಲಿ ಕೆಎಸ್ಐಸಿ ಮಾರಾಟ ಮಳಿಗೆಯ ಉನ್ನತೀಕರಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ ನೀಡಿದ್ದಾರೆ.

    ಸಚಿವರಾದ ಅಶ್ವಥ್ ನಾರಾಯಣ್ (Ashwath Narayan), ಡಾ.ಕೆ ಸುಧಾಕರ್ (K Sudhakar), ಕೆ.ಸಿ ನಾರಾಯಣಗೌಡ ಸೇರಿ ಹಲವು ಮುಖಂಡರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಥಳೀಯ ಶಾಸಕಿ ಅನಿತಾ ಕುಮಾರಸ್ವಾಮಿ ಕೇವಲ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವೇದಿಕೆ ಕಾರ್ಯಕ್ರಮಕ್ಕೆ ಗೈರಾದರು. ಸಂಸದ ಡಿ.ಕೆ ಸುರೇಶ್ ಕೂಡಾ ಕಾರ್ಯಕ್ರಮಕ್ಕೆ ಗೈರಾಗಿದ್ದರು.

  • ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್

    ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್

    ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ ಮಾದರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

    ಸ್ಟೆಪ್ ಒನ್ ಸಂಸ್ಥೆಯ ಸಹಯೋಗದಲ್ಲಿ ಕೋವಿಡ್ ರೋಗಿಗಳ ಮನೆ ಐಸೋಲೇಶನ್ ಗೆ ಸಂಬಂಧಿಸಿದಂತೆ 10,000 ವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುಧಾಕರ್ ಅವರು ಮಾತನಾಡಿದರು.

    ಈ ವೇಳೆ ಅವರು, ಕೋವಿಡ್ ಮೊದಲ ಅಲೆಯಲ್ಲಿ ಆರೋಗ್ಯ ಸಿಬ್ಬಂದಿಗೆ ಹೊಸ ವೈರಾಣು ಕುರಿತು ತರಬೇತಿ ನೀಡಬೇಕಿತ್ತು. ಆದರೆ ಲಾಕ್‍ಡೌನ್ ಮೊದಲಾದ ಕಾರಣಗಳಿಂದಾಗಿ ತರಬೇತಿ ನೀಡಲು ಸಾಧ್ಯವಾಗಲಿಲ್ಲ. ಆ ಸಂದರ್ಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳ ನೆರವಿನಲ್ಲಿ ತಂತ್ರಜ್ಞಾನ ಬಳಸಿ 2.5 ಲಕ್ಷ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಈ ಬಗೆಯ ಪರಿಣಾಮಕಾರಿ ತಂತ್ರಜ್ಞಾನ ಬಳಕೆಯನ್ನು ಕೇಂದ್ರ ಸರ್ಕಾರ ಕೂಡ ಗುರುತಿಸಿದೆ ಎಂದು ಪ್ರಶಂಸಿಸಿದರು. ಇದನ್ನೂ ಓದಿ: ವಸತಿ ಶಾಲೆಯ 16 ಮಕ್ಕಳಿಗೆ ವಕ್ಕರಿಸಿದ ಕೊರೊನಾ


    5 ಟಿ ಕ್ರಮವನ್ನು ಕೂಡ ಯಶಸ್ವಿಯಾಗಿ ಜಾರಿ ಮಾಡಲಾಗಿದೆ. ಮೂರನೇ ಅಲೆಯಲ್ಲಿ 2-3 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗುತ್ತಿದ್ದರೂ ತೀವ್ರತೆ ಕಡಿಮೆ ಇದೆ. 93% ರೋಗಿಗಳು ಮನೆ ಐಸೋಲೇಶನ್ ನಲ್ಲೇ ಇದ್ದಾರೆ. 5-6% ಜನರು ಆಸ್ಪತ್ರೆ ಹಾಗೂ 1% ಜನರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ ಎಂದರು.

    ಸ್ಟೆಪ್ ಒನ್ ಸಂಸ್ಥೆಯು ಕೋವಿಡ್ ಹೋರಾಟದಲ್ಲಿ ಸರ್ಕಾರದೊಂದಿಗೆ ಭಾಗಿಯಾಗಿ ಸಾವಿರಾರು ವೈದ್ಯರೊಂದಿಗೆ ಕೆಲಸ ಮಾಡಿ ಮನೆ ಐಸೋಲೇಶನ್ ಕ್ರಮ ಯಶಸ್ವಿಯಾಗಲು ನೆರವಾಗಿದೆ. ಇದರಿಂದಾಗಿ ರಾಜ್ಯ, ದೇಶದಲ್ಲೇ ಮಾದರಿಯಾಗಿದೆ. ನೀತಿ ಆಯೋಗ ಕೂಡ ಹೋಮ್ ಐಸೋಲೇಶನ್ ಹಾಗೂ ಇದಕ್ಕೆ ಸಂಬಂಧಿಸಿದ ತಾಂತ್ರಿಕ ನೆರವುಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದೆ. ಎಲ್ಲ ವೈದ್ಯ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ವೈದ್ಯರು ಹಾಗೂ ವೈದ್ಯಕೀಯ ಕಾಲೇಜುಗಳ ಪ್ರಾಧ್ಯಾಪಕರ ಸಹಯೋಗದಿಂದಾಗಿ ಮನೆ ಐಸೋಲೇಶನ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗಿದೆ ಎಂದು ವಿವರಿಸಿದರು.

    10 ಸಾವಿರ ಸಿಬ್ಬಂದಿ ನಿಯೋಜನೆ!
    ಹೋಮ್ ಐಸೋಲೇಶನ್ ನಲ್ಲಿರುವವರ ಆರೋಗ್ಯ ಮೇಲೆ ಹೆಚ್ಚು ನಿಗಾ ಇರಿಸಲಾಗಿದೆ. ಇದಕ್ಕಾಗಿ ಸುಮಾರು 10 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಇನ್ನೂ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸುವ ಉದ್ದೇಶವಿದೆ. 500 ತಜ್ಞ ವೈದ್ಯರು ಈ ವ್ಯವಸ್ಥೆಗೆ ಬೆಂಬಲ ನೀಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ರೋಗಿಗಳಿಗೆ 1.33 ಕೋಟಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿತ್ತು. 42.57 ಲಕ್ಷ ವೈದ್ಯರ ಕನ್ಸಲ್ಟೇಶನ್ ಮಾಡಲಾಗಿತ್ತು. 36 ಸಾವಿರ ರೋಗಿಗಳಿಗೆ ಮಾನಸಿಕ ಆರೋಗ್ಯ ಕೌನ್ಸಿಲಿಂಗ್ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ರೆಸಾರ್ಟ್ ನಲ್ಲಿ 30ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದೃಢ – ರೆಸಾರ್ಟ್ ಮುಚ್ಚದೆ ಎಂದಿನಂತೆ ಕಾರ್ಯ

    ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ. ದೂರವಾಣಿ ಕರೆ ಮಾಡಿ ಮಾರ್ಗದರ್ಶನ ನೀಡುವುದರಿಂದ ಅನೇಕರ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ್ದ ಪರೀಕ್ಷಾ ಮೇಲ್ವಿಚಾರಕಿ ಅಮಾನತು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ್ದ ಪರೀಕ್ಷಾ ಮೇಲ್ವಿಚಾರಕಿ ಅಮಾನತು

    – ಪಬ್ಲಿಕ್ ಟಿವಿ ವರದಿ ಉಲ್ಲೇಖಿಸಿ ತನಿಖೆಗೆ ಸಚಿವರಿಂದ ಸೂಚನೆ

    ಬೆಂಗಳೂರು: ನರ್ಸಿಂಗ್ ಪರೀಕ್ಷೆಯಲ್ಲಿ ಪರೀಕ್ಷಾ ಮೇಲ್ವಿಚಾರಕಿಯೇ ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಾಯ ಮಾಡಿದ್ದ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಪರೀಕ್ಷಾ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಿದ್ದಾರೆ.

    ಬೆಂಗಳೂರಿನ ರಾಜೀವ್ ಗಾಂಧಿ ಯೂನಿವರ್ಸಿಟಿಯ ಸರ್ಕಾರಿ ಶ್ರುಶೂಷಕ ಕಾಲೇಜಿನಲ್ಲಿ ಅಕ್ಟೋಬರ್ 4ರಂದು ನಡೆದ ಬಿಎಸ್‍ಸಿ (ಪೋಸ್ಟ್ ಬೇಸಿಕ್) ಪರೀಕ್ಷೆ ನಡೆದಿತ್ತು. ಈ ವೇಳೆ ಬೆಂಗಳೂರು ಮೆಡಿಕಲ್ ಸೆಂಟರ್ ವಿಕ್ಟೋರಿಯಾದಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರೋಜಮ್ಮ, ಪರೀಕ್ಷಾ ಮೇಲ್ವಿಚಾರಕಿದ್ದರು. ಆದರೆ ಸರೋಜಮ್ಮ ಪರೀಕ್ಷಾ ಹಾಲ್‍ಗೆ ಪುಸ್ತಕ, ಉತ್ತರ ಪತ್ರಿಕೆ ವಿತರಣೆ ಮಾಡಿ ಸಿಕ್ಕಿಬಿದ್ದಿದ್ದರು. ಇದನ್ನೂ ಓದಿ:  ಪರೀಕ್ಷಾ ಮೇಲ್ವಿಚಾರಕಿಯಿಂದ್ಲೇ ಕಾಪಿ ಮಾಡಲು ಸಹಾಯ – ನರ್ಸಿಂಗ್ ಎಕ್ಸಾಂನಲ್ಲಿ ಕಾಸಿದ್ದವ್ರೇ ಬಾಸ್

    ಈ ಕುರಿತು ಪಬ್ಲಿಕ್ ಟಿವಿ ಶನಿವಾರ ವರದಿ ಪ್ರಸಾರ ಮಾಡಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಉಪ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಈ ಸಂಬಂಧ ತನಿಖೆ ನಡೆಸಲು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಿದ್ದರು. ನಿರ್ದೇಶಕರು ಪಬ್ಲಿಕ್ ಟಿವಿ ವರದಿಯನ್ನು ಉಲ್ಲೇಖಿಸಿ ಸರೋಜಮ್ಮ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿ ಮೂರು ದಿನದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

    ಸರೋಜಮ್ಮ, ದುಡ್ಡು ಪಡೆದು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲೇ ಪುಸ್ತಕ ಮತ್ತು ಉತ್ತರ ಪತ್ರಿಕೆ ಕೊಟ್ಟು ಕಾಪಿ ಮಾಡಿಸಿದ್ದರು. ನೌಕರಿಯಲ್ಲಿ ಇರೋರು ಕೆಲವೊಮ್ಮೆ ಪ್ರಮೋಶನ್, ಸರ್ಟಿಪಿಕೇಟ್‍ಗಾಗಿ ಸರ್ಕಾರಿ ಶ್ರುಶೂಷಕರ ಕಾಲೇಜಿನಲ್ಲಿ ಬಿಎಸ್‍ಸಿ ಎಕ್ಸಾಂ ಬರೆಯುತ್ತಾರೆ. ಇದನ್ನೇ ಬಂಡವಾಳವಾಗಿ ಇಟ್ಟುಕೊಂಡ ಕೆಲವರು ಇದರಿಂದ ದುಡ್ಡು ಮಾಡಲು ಹೊರಟ್ಟಿದ್ದಾರೆ.

    ಈ ಹಿಂದೆ ಈ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆದಿರೋದಕ್ಕೆ, ಪರೀಕ್ಷಾ ಹಾಲ್‍ನಲ್ಲಿ ವೆಬ್ ಸ್ಕ್ರೀನಿಂಗ್ ಹಾಕಲಾಗಿತ್ತು. ಅದನ್ನು ಕೂಡ ಆಫ್ ಮಾಡಿ ಈ ಕಳ್ಳಾಟಗಳನ್ನು ನಡೆಸಲಾಗುತ್ತಿದೆ ಎನ್ನಲಾಗಿದೆ. ಕ್ಯಾಮೆರಾ ಕಣ್ಣು ಗಮನಿಸುತ್ತಿದೆ ಎಂದು ಗೊತ್ತಿದ್ದರೂ ಖುಲ್ಲಾಂ ಖುಲ್ಲಾಂ ಪುಸ್ತಕಗಳನ್ನು ಎಕ್ಸಾಂ ಹಾಲ್‍ನಲ್ಲಿ ಹಂಚೋದರ ಹಿಂದೆ ದೊಡ್ಡವರ ಕೃಪಕಟಾಕ್ಷ ಇದೆ. ಇದರಲ್ಲಿ ಎಲ್ಲರಿಗೂ ಪಾಲು ಇದೆ ಎಂಬ ಆರೋಪ ಕೇಳಿ ಬಂದಿತ್ತು.

  • ಪರೀಕ್ಷಾ ಮೇಲ್ವಿಚಾರಕಿಯಿಂದ್ಲೇ ಕಾಪಿ ಮಾಡಲು ಸಹಾಯ – ನರ್ಸಿಂಗ್ ಎಕ್ಸಾಂನಲ್ಲಿ ಕಾಸಿದ್ದವ್ರೇ ಬಾಸ್

    ಪರೀಕ್ಷಾ ಮೇಲ್ವಿಚಾರಕಿಯಿಂದ್ಲೇ ಕಾಪಿ ಮಾಡಲು ಸಹಾಯ – ನರ್ಸಿಂಗ್ ಎಕ್ಸಾಂನಲ್ಲಿ ಕಾಸಿದ್ದವ್ರೇ ಬಾಸ್

    ಬೆಂಗಳೂರು: ನರ್ಸಿಂಗ್ ಪರೀಕ್ಷೆಯಲ್ಲಿ ಪರೀಕ್ಷಾ ಮೇಲ್ವಿಚಾರಕಿಯೇ ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಾಯ ಮಾಡಿರುವ ಘಟನೆ ರಾಜೀವ್ ಗಾಂಧಿ ಯೂನಿವರ್ಸಿಟಿಯಲ್ಲಿ ನಡೆದಿದೆ.

    ರಾಜೀವ್ ಗಾಂಧಿ ಯೂನಿವರ್ಸಿಟಿ ಸರ್ಕಾರಿ ಶ್ರುಶೂಷಕ ಕಾಲೇಜಿನಲ್ಲಿ ಅಕ್ಟೋಬರ್ 4ರಂದು ನಡೆದ ಬಿಎಸ್‍ಸಿ (ಪೋಸ್ಟ್ ಬೇಸಿಕ್) ಎಕ್ಸಾಂನಲ್ಲಿ ಮೇಲ್ವಿಚಾರಕಿಯೇ ಪರೀಕ್ಷಾ ಹಾಲ್‍ಗೆ ಪುಸ್ತಕ, ಉತ್ತರ ಪತ್ರಿಕೆ ವಿತರಣೆ ಮಾಡಿ ಸಿಕ್ಕಿಬಿದ್ದಿದ್ದಾರೆ.

    ಬೆಂಗಳೂರು ಮೆಡಿಕಲ್ ಸೆಂಟರ್ ವಿಕ್ಟೋರಿಯಾದಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರೋಜಮ್ಮ, ದುಡ್ಡು ಪಡೆದು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲೇ ಪುಸ್ತಕ ಮತ್ತು ಉತ್ತರ ಪತ್ರಿಕೆ ಕೊಟ್ಟು ಕಾಪಿ ಮಾಡಿಸಿದ್ದಾರೆ. ನೌಕರಿಯಲ್ಲಿ ಇರೋರು ಕೆಲವೊಮ್ಮೆ ಪ್ರಮೋಶನ್, ಸರ್ಟಿಪಿಕೇಟ್‍ಗಾಗಿ ಸರ್ಕಾರಿ ಶ್ರುಶೂಷಕರ ಕಾಲೇಜಿನಲ್ಲಿ ಬಿಎಸ್‍ಸಿ ಎಕ್ಸಾಂ ಬರೆಯುತ್ತಾರೆ. ಇದನ್ನೇ ಬಂಡವಾಳವಾಗಿ ಇಟ್ಟುಕೊಂಡ ಕೆಲವರು ಇದರಿಂದ ದುಡ್ಡು ಮಾಡಲು ಹೊರಟ್ಟಿದ್ದಾರೆ.

    ಈ ಹಿಂದೆ ಈ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆದಿರೋದಕ್ಕೆ, ಪರೀಕ್ಷಾ ಹಾಲ್‍ನಲ್ಲಿ ವೆಬ್ ಸ್ಕ್ರೀನಿಂಗ್ ಹಾಕಲಾಗಿತ್ತು. ಅದನ್ನು ಕೂಡ ಆಫ್ ಮಾಡಿ ಈ ಕಳ್ಳಾಟಗಳನ್ನು ನಡೆಸಲಾಗುತ್ತಿದೆ ಎನ್ನಲಾಗಿದೆ. ಕ್ಯಾಮರಾ ಕಣ್ಣು ಗಮನಿಸುತ್ತಿದೆ ಎಂದು ಗೊತ್ತಿದ್ದರೂ ಖುಲ್ಲಾಂ ಖುಲ್ಲಾಂ ಪುಸ್ತಕಗಳನ್ನು ಎಕ್ಸಾಂ ಹಾಲ್‍ನಲ್ಲಿ ಹಂಚೋದರ ಹಿಂದೆ ದೊಡ್ಡವರ ಕೃಪಕಟಾಕ್ಷ ಇದೆ. ಇದರಲ್ಲಿ ಎಲ್ಲರಿಗೂ ಪಾಲು ಇದೆ ಎಂಬ ಆರೋಪ ಕೇಳಿ ಬಂದಿದೆ.