Tag: Rajiv Gandhi

  • ರಾಜೀವ್ ಗಾಂಧಿ ಭಯದ ವಾತಾವರಣ ಸೃಷ್ಟಿ ಮಾಡಿರಲಿಲ್ಲ: ಸೋನಿಯಾ ಗಾಂಧಿ

    ರಾಜೀವ್ ಗಾಂಧಿ ಭಯದ ವಾತಾವರಣ ಸೃಷ್ಟಿ ಮಾಡಿರಲಿಲ್ಲ: ಸೋನಿಯಾ ಗಾಂಧಿ

    ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದಿಗೂ ಜನರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿರಲಿಲ್ಲ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

    ಇಂದು ರಾಜೀವ್ ಗಾಂಧಿ ಅವರ 75 ನೇ ಹುಟ್ಟು ಹಬ್ಬದ ಪ್ರಯಕ್ತ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1984ರ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಗಾಂಧಿ ಅವರು ಪೂರ್ಣ ಬಹುಮತದಲ್ಲಿ ಅಧಿಕಾರ ಪಡೆದಿದ್ದರು. ಆದರೆ ಅವರು ಅಧಿಕಾರವನ್ನು ಉಪಯೋಗಿಸಿಕೊಂಡು ಯಾವತ್ತು ಜನರರಲ್ಲಿ ಭಯವನ್ನು ತರಿಸುವ ಕೆಲಸ ಮಾಡಲಿಲ್ಲ ಎಂದು ಹೇಳಿದ್ದಾರೆ.

    ಕೆ.ಡಿ ಜಾಧವ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿಯ ಹೆಸರನ್ನು ಉಪಯೋಗಿಸದೆ ಕಮಲ ಪಾಳಯಕ್ಕೆ ಟಾಂಗ್ ಕೊಟ್ಟ ಸೋನಿಯಾ ಅವರು, ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಮಯದಲ್ಲಿ ಅಧಿಕಾರವನ್ನು ಉಪಯೋಗಿಸಿಕೊಂಡು ಜನರ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಮತ್ತು ಅವರನ್ನು ಭಯದ ವಾತಾವರಣದಲ್ಲಿ ಇಡುವ ಕೆಲಸ ಮಾಡಲಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷ ಎದ್ದು ನಿಂತು ಭಾರತೀಯ ಮೌಲ್ಯಗಳನ್ನು ನಾಶಮಾಡುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಬೇಕು. ವಿಭಜನೆಯ ಶಕ್ತಿಗಳು ಮತ್ತು ಭಾರತದ ಕಲ್ಪನೆಯನ್ನು ಬದಲಾಯಿಸಲು ಬಯಸುವವರ ವಿರುದ್ಧ ಪಕ್ಷವು ತನ್ನ ಹೋರಾಟವನ್ನು ಮುಂದುವರಿಸಬೇಕು ಎಂದು ಹೇಳಿದ ಅವರು, ಈಗ ಪ್ರಧಾನ ಮಂತ್ರಿ ಹೇಳಿದಂತೆ ಭಾರತದ ವೈವಿಧ್ಯತೆಯನ್ನು ಆಚರಿಸುವ ಮೂಲಕ ಏಕತೆಯನ್ನು ಕಾಪಾಡಿಕೊಳ್ಳಬಹುದು ಎಂಬ ಸಂದೇಶವನ್ನು ರಾಜೀವ್ ಗಾಂಧಿ ಆಗಲೇ ನೀಡಿದರು ಎಂದು ಹೇಳಿದರು.

    ಪ್ರಧಾನಿ ಮೋದಿಯವರ ಮೇಲೆ ಸೋನಿಯಾ ಗಾಂಧಿ ನಡೆಸಿದ ಪರೋಕ್ಷ ದಾಳಿಯ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಶಿರೋಮಣಿ ಅಕಾಲಿ ದಳ (ಎಸ್‍ಎಡಿ) ಶಾಸಕ ಮಂಜಿಂದರ್ ಎಸ್ ಸಿರ್ಸಾ ಅವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷರು “ನಾಚಿಕೆಯಿಲ್ಲದೆ ಸುಳ್ಳು ಹೇಳುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

    “ರಾಜೀವ್ ಗಾಂಧಿ ಎಂದಿಗೂ ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲಿಲ್ಲ ಎಂದು ಅವರು ಹೇಳುತ್ತಾರೆ. ಆದರೆ ಕಾಂಗ್ರೆಸ್ ಗೂಂಡಾಗಳೊಂದಿಗೆ 8,000 ಅಮಾಯಕ ಸಿಖ್ಖರನ್ನು ರಸ್ತೆಗಳಲ್ಲಿ ಜೀವಂತವಾಗಿ ಸುಟ್ಟುಹಾಕಲು ಕಾರಣವಾದ ಅದೇ ರಾಜೀವ್ ಗಾಂಧಿ!! ಜಬ್ ಎಕ್ ಬಡಾ ಪೇಡ್ ಗಿರ್ತಾ ಹೈ ತೋ ತೋ ಧರ್ತಿ ಹಿಲ್ತಿ ಹೈ.” ಎಂದು ಟ್ವೀಟ್ ಮಾಡಿದ್ದಾರೆ.

  • ರಾಜೀವ್ ಗಾಂಧಿ ಹತ್ಯೆಗೈದ ನಳಿನಿಗೆ 30 ದಿನ ಪೆರೋಲ್ – ಜೈಲಿನಿಂದ ಬಿಡುಗಡೆ

    ರಾಜೀವ್ ಗಾಂಧಿ ಹತ್ಯೆಗೈದ ನಳಿನಿಗೆ 30 ದಿನ ಪೆರೋಲ್ – ಜೈಲಿನಿಂದ ಬಿಡುಗಡೆ

    ಚೆನ್ನೈ: ಮಗಳ ಮದುವೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತೈಗೈದ ಪ್ರಕರಣದಲ್ಲಿ ಜೀವಾವಾಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‍ಗೆ 30 ದಿನಗಳ ಪೆರೋಲ್ ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾಳೆ.

    ಕಳೆದ 28 ವರ್ಷದಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ನಳಿನಿ ಶ್ರೀಹರನ್‍ಗೆ ಇದೇ ಮೊದಲ ಬಾರಿಗೆ ಮದ್ರಾಸ್ ಹೈಕೋರ್ಟ್ ದೀರ್ಘ ಕಾಲದ ಪೆರೋಲ್ ನೀಡಿದೆ. ಮಗಳ ಮದುವೆಯ ಸಿದ್ಧತೆಗಾಗಿ 6 ತಿಂಗಳು ಪೆರೋಲ್ ನೀಡುವಂತೆ ನಳಿನಿ ಮನವಿ ಮಾಡಿದ್ದಳು. ಆದರೆ ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿ ಜುಲೈ 5 ರಂದು ಕೋರ್ಟ್ ಒಂದು ತಿಂಗಳು ಮಾತ್ರ ಪೆರೋಲ್ ಮಂಜೂರು ಮಾಡಿದೆ.

    ಪೆರೋಲ್ ಮಂಜೂರು ಮಾಡುವಾಗ, ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಮತ್ತು ಯಾವುದೇ ಮಾಧ್ಯಮಗಳನ್ನು ಭೇಟಿ ಮಾಡಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ.

    28 ವರ್ಷದಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿಯನ್ನು ಇದೇ ಮೊದಲ ಬಾರಿಗೆ ದೀರ್ಘಾವದಿ ಪೆರೋಲ್ ಮೇಲೆ ಹೊರಗೆ ಕಳುಹಿಸಲಾಗಿದೆ. ಇದಕ್ಕೂ ಮೊದಲು 2016ರಲ್ಲಿ ಆಕೆಯ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ 12 ಗಂಟೆಗಳ ಕಾಲ ಪೆರೋಲ್ ನೀಡಲಾಗಿತ್ತು.

    ವೆಲ್ಲೂರು ಜೈಲಿನಿಂದ ಹೊರಬಂದ ನಳಿನಿಯನ್ನು ಆಕೆಯ ಸಂಬಂಧಿಕರು ಬಂದು ಕರೆದುಕೊಂಡು ಹೋಗಿದ್ದಾರೆ. ನಳಿನಿಯ ಮಗಳು ವೆಲ್ಲೂರಿನ ಜೈಲಿನಲ್ಲೇ ಹುಟ್ಟಿದ್ದು, ಆಕೆ ಇಂಗ್ಲೆಂಡಿನಲ್ಲಿ ಬೆಳೆದು ವೈದ್ಯಶಾಸ್ತ್ರ ಓದಿದ್ದಾಳೆ.

    ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿಯನ್ನು 1991 ರಲ್ಲಿ ಬಂಧಿಸಲಾಯಿತು. ಕೋರ್ಟ್ ಈಕೆಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಇದಾದ ನಂತರ ಮರಣದಂಡನೆ ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಯಿತು. 1991 ಮೇ 21 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರಂಬದೂರು ಬಳಿ ಆತ್ಮಹುತಿ ಬಾಂಬ್ ದಾಳಿ ಮೂಲಕ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ 7 ಮಂದಿ ದೋಷಿಗಳು ಜೀವಾವಾದಿ ಶಿಕ್ಷೆ ಅನುಭವಿಸುತ್ತಿದ್ದಾರೆ.

  • ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ: ಮೋದಿ ವಿರುದ್ಧ ರಾಹುಲ್ ಕಿಡಿ

    ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ: ಮೋದಿ ವಿರುದ್ಧ ರಾಹುಲ್ ಕಿಡಿ

    – ನಂ.1 ಭ್ರಷ್ಟರಾಗಿಯೇ ಪ್ರಾಣ ಬಿಟ್ರು ರಾಜೀವ್ ಗಾಂಧಿ
    – ಮೋದಿ ಹೇಳಿಕೆ ‘ಕೈ’ ನಾಯಕರು ಗರಂ

    ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟರಾಗಿಯೇ ಪ್ರಾಣ ಬಿಟ್ಟರು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ಅಸಮಾಧಾನ ಹೊರ ಹಾಕಿದೆ.

    ಟ್ವೀಟ್ ಮೂಲಕ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಅವರು, ಮೋದಿ ಜೀ, ಯುದ್ಧ ಮುಕ್ತಾಯವಾಗಿದೆ. ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ. ನೀವು ಏನು ಎಂಬುದನ್ನು ನಿಮ್ಮ ಅಂತರಾಳವೇ ಹೇಳುತ್ತಿದೆ. ನಮ್ಮ ತಂದೆ ರಾಜೀವ್ ಗಾಂಧಿ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದ ಅವರು, ಕೊನೆಗೆ ಪ್ರತಿ ಮತ್ತು ಅಪ್ಪುಗೆಯೊಂದಿಗೆ, ರಾಹುಲ್ ಎಂದು ಕುಟುಕಿದ್ದಾರೆ.

    ಉತ್ತರ ಪ್ರದೇಶ ಪೂರ್ವದ ಕಾಂಗ್ರೆಸ್ ಪ್ರಧಾನಿ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಅವರು ಕೂಡ ಟ್ವೀಟ್ ಮೂಲಕ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ವೀರ ಮರಣ ಹೊಂದಿದವರ ಹೆಸರು ಹೇಳಿ ಮತ ಕೇಳುವ ಮೋದಿ ಅವರು, ಹುತಾತ್ಮರಾದ ಮತ್ತೊಬ್ಬ ಮೇರು ವ್ಯಕ್ತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನ ಆಡಿದ್ದಾರೆ. ಅಮೇಥಿ ಲೋಕಸಭಾ ಕ್ಷೇತ್ರದ ಜನ ಇದಕ್ಕೆ ಸೂಕ್ತ ಉತ್ತರ ಕೊಡುತ್ತಾರೆ. ಈ ಕ್ಷೇತ್ರದ ಜನರಿಗಾಗಿ ರಾಜೀವ್ ಗಾಂಧಿ ಪ್ರಾಣ ನೀಡಿದರು. ಮೋದಿ ಅವರೇ ನಿಮಗೆ ನೆನಪಿರಲಿ ದೇಶದ ಜನರು ವಂಚನೆಯನ್ನು ಸಹಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಮೋದಿ ಅವರು ಮೃತ ವ್ಯಕ್ತಿಗೆ ಅವಮಾನ ಮಾಡುವ ಮೂಲಕ ಪ್ರಾಮಾಣಿಕತೆ ಮತ್ತು ಸಭ್ಯತೆಯ ಮೀರಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಮೋದಿ ಹೇಳಿದ್ದೇನು?:
    ಉತ್ತರ ಪ್ರದೇಶದಲ್ಲಿ ಶನಿವಾರ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ನಿಮ್ಮ ತಂದೆ ನಂ. 1 ಭ್ರಷ್ಟರಾಗಿಯೇ ಪ್ರಾಣ ಬಿಟ್ಟರು ಎಂದು ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದರು.

    ನನ್ನ ಚಾರಿತ್ರ್ಯವಧೆ ಮಾಡಲು ಪ್ರತಿಪಕ್ಷಗಳು ಒಂದಾಗಿವೆ. ನನ್ನನ್ನು ಸಣ್ಣವನಾಗಿ ಮಾಡುವ ಮೂಲಕ ದೇಶದಲ್ಲಿ ಅಸ್ತಿರ ಸರ್ಕಾರವನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್, ಟಿಎಂಸಿ, ಎಸ್‍ಪಿ, ಬಿಎಸ್‍ಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

  • ರಾಹುಲ್ ಗಾಂಧಿ ಭಯೋತ್ಪಾದಕರ ದಾಳಿಗೆ ಬಲಿಯಾದ್ರು: ಈಶ್ವರ ಖಂಡ್ರೆ ಎಡವಟ್ಟು

    ರಾಹುಲ್ ಗಾಂಧಿ ಭಯೋತ್ಪಾದಕರ ದಾಳಿಗೆ ಬಲಿಯಾದ್ರು: ಈಶ್ವರ ಖಂಡ್ರೆ ಎಡವಟ್ಟು

    ಹಾವೇರಿ: ಭಯೋತ್ಪಾದಕರ ದಾಳಿಗೆ ರಾಹುಲ್ ಗಾಂಧಿ ಬಲಿಯಾದರು ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ತಮ್ಮ ಭಾಷಣದ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

    ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎನ್ನುವ ಬದಲು ರಾಹುಲ್ ಗಾಂಧಿ ಭಯೋತ್ಪಾದಕರ ದಾಳಿಗೆ ಬಲಿಯಾದರು ಎಂದು ಹೇಳಿದರು. ಕೆಲಹೊತ್ತು ಮುಜುಗುರಕ್ಕೆ ಒಳಗಾದ ಈಶ್ವರ ಖಂಡ್ರೆ ಅವರು, ಕಾಂಗ್ರೆಸ್ ಎಲ್ಲ ವರ್ಗದ ಜನರಿಗೆ ಬದುಕು ಕಟ್ಟಿಕೊಟ್ಟಿದೆ. ನಮ್ಮ ಪಕ್ಷಕ್ಕೆ ಸುದೀರ್ಘ ಇತಿಹಾಸವಿದೆ. ಸ್ವಾತಂತ್ರ್ಯಕ್ಕಾಗಿ ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.

    ಲೋಕಸಭಾ ಚುನಾವಣೆಯಲ್ಲಿ ಮತವನ್ನು ಯಾವ ಪಕ್ಷಕ್ಕೆ ನೀಡಬೇಕೆಂದು ಜನ ನಿರ್ಧಾರ ಮಾಡಬೇಕು. ಸ್ವಾತಂತ್ರ್ಯ ನಂತರ ದೇಶದ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ನಿಧಾನವಾಗಿ ಎಲ್ಲವನ್ನೂ ಸರಿಪಡಿಸುತ್ತಾ ಬಂದಿದ್ದೇವೆ. ಆದರೆ ಬಿಜೆಪಿಯವರು 55 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶ ಪ್ರಗತಿ ಸಾಧಿಸಲು ಕಾಂಗ್ರೆಸ್ ಶ್ರಮಿಸಿದೆ. ಈ ಯಶಸ್ಸು ಕಾಂಗ್ರೆಸ್‍ಗೆ ಸಲ್ಲಬೇಕು. ದೇಶದಲ್ಲಿ ಉದ್ಯೋಗ ಸೃಷ್ಟಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಆಗಿಲ್ಲ. ರೈತರು ಹಾಗೂ ಯುವಕರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.

    ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ನಾವೇ ಮಾಡಿದ್ದೇವೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಅವರ ಮಾತಿಗೆ ನೀವು ಮರುಳಾಗಬೇಡಿ. ಬಿಜೆಪಿಯು ಜನರಿಗೆ ಸುಳ್ಳು ಆಶ್ವಾಸನೆ ನೀಡಿ, ಅಧಿಕಾರಕ್ಕೆ ಬಂದರು. ಆದರೆ ಯಾವುದೇ ಆಶ್ವಾಸನೆ ಈಡೇರಿಸಲಿಲ್ಲ. ಕಾಂಗ್ರೆಸ್ ನೀಡಿದ ಭರವಸೆಯನ್ನು ಈಡೇರಿಸುತ್ತಾ ಬಂದಿದೆ. ಮುಂದೆಯೂ ಹೀಗೆ ನಡೆದುಕೊಳ್ಳುತ್ತೇವೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಟಲಿಗೆ ವಾಪಸ್ ಹೋಗಿ – ರಾಹುಲ್ ಗಾಂಧಿ ವಿರುದ್ಧ ಯುಪಿ ರೈತರು ಕಿಡಿ

    ಇಟಲಿಗೆ ವಾಪಸ್ ಹೋಗಿ – ರಾಹುಲ್ ಗಾಂಧಿ ವಿರುದ್ಧ ಯುಪಿ ರೈತರು ಕಿಡಿ

    ಲಕ್ನೋ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರವಾದ ಉತ್ತರ ಪ್ರದೇಶದ ಅಮೇಠಿಯ ರೈತರು ಗೋ ಬ್ಯಾಕ್ ಇಟಲಿ ಚಳುವಳಿ ಆರಂಭಿಸಿದ್ದಾರೆ.

    ಅಮೇಠಿ ಜಿಲ್ಲೆಯ ಗೌರಿಗಂಜ್ ನಗರದಲ್ಲಿ ಸಾವಿರಾರು ರೈತರು ಬುಧವಾರ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ರಾಜೀವ್ ಗಾಂಧಿ ಫೌಂಡೇಷನ್‍ಗೆ ಪಡೆದ ಭೂಮಿಯನ್ನು ರೈತರಿಗೆ ಮರಳಿಸಿ, ಇಲ್ಲವೇ ಅವರಿಗೆ ಉದ್ಯೋಗ ಒದಗಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಬುಧವಾರ ರಾಹುಲ್ ಗಾಂಧಿ ಅಮೇಠಿಗೆ ಭೇಟಿ ನೀಡಿದ್ದರು. ಈ ವೇಳೆ ರೈತರು ರಾಜೀವ್ ಗಾಂಧಿ ಅವರು ಉದ್ಘಾಟಿಸಿದ್ದ ಸಾಮ್ರಾಟ್ ಸೈಕಲ್ ಫ್ಯಾಕ್ಟರಿಯ ಬಳಿ ನಿಂತು ಪ್ರತಿಭಟನೆ ನಡೆಸಿದರು.

    ರಾಹುಲ್ ಗಾಂಧಿ ನಮ್ಮ ಭೂಮಿಯನ್ನು ಕಬಳಿಸಿದ್ದಾರೆ. ಅವರು ಇಲ್ಲಿ ಇರಲು ಯಾವುದೇ ಅರ್ಹತೆ ಹೊಂದಿಲ್ಲ. ಅವರು ಭಾರತದಲ್ಲಿ ಇರುವುದು ಬೇಡ, ಇಟಲಿಗೆ ವಾಪಸ್ ಹೋಗಲಿ ಎಂದು ಪ್ರತಿಭಟನಾನಿರತ ಸಂಜಯ್ ಸಿಂಗ್ ಆಕ್ರೋಶ ಹೊರಹಾಕಿದ್ದಾರೆ.

    ರೈತರ ಆಕ್ರೋಶಕ್ಕೆ ಕಾರಣ ಏನು?
    ಜೈನ್ ಸಹೋದರರ ಸೈಕಲ್ ಕಂಪನಿಯ ಫ್ಯಾಕ್ಟರಿ ಘಟಕ ತೆರೆಯಲು ಉತ್ತರ ಪ್ರದೇಶ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ(ಯುಪಿಎಸ್‍ಐಡಿಸಿ) 1980 ರಲ್ಲಿ 65.57 ಎಕ್ರೆ ಜಾಗವನ್ನು ಗುತ್ತಿಗೆ ನೀಡಿತ್ತು. ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿ ಫ್ಯಾಕ್ಟರಿ 1986 ರಲ್ಲಿ ಮುಚ್ಚಲ್ಪಟ್ಟಿತ್ತು. 2014 ರಲ್ಲಿ ಡೆಟ್ ರಿಕವರಿ ಟ್ರಿಬ್ಯೂನಲ್ ಸಾಲವನ್ನು ಭರಿಸಲು ಈ ಜಾಗವನ್ನು ಹರಾಜು ಹಾಕಲು ಆದೇಶಿಸಿತ್ತು.

    ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ 1.50 ಲಕ್ಷ ರೂ. ಮೂಲ ಠೇವಣಿ ಇಟ್ಟು ಈ ಜಾಗವನ್ನು ಹರಾಜಿನ ಮೂಲಕ ಖರೀದಿಸಿತ್ತು. ಆದರೆ ಗೌರಿಗಂಜ್ ಎಸ್‍ಡಿಎಂ ಕೋರ್ಟ್ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಿ ಹರಾಜು ಪ್ರಕ್ರಿಯೆಯನ್ನು ರದ್ದುಗೊಳಿಸಿ ಸೈಕಲ್ ಕಂಪನಿಯ ಜಾಗವನ್ನು ಯುಪಿಎಸ್‍ಐಡಿಸಿಗೆ ಹಸ್ತಾಂತರಿಸಬೇಕೆಂದು ಆದೇಶಿಸಿತ್ತು. ಈ ಆದೇಶದ ಬಳಿಕ ದಾಖಲೆಗಳಲ್ಲಿ ಮಾತ್ರ ಯುಪಿಎಸ್‍ಐಡಿಸಿ ಹೆಸರಿದ್ದರೆ ಈಗಲೂ ಈ ಜಾಗ ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ವಶದಲ್ಲಿದೆ.

    ಈ ಹಿಂದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಹುಲ್ ಗಾಂಧಿ ತಮ್ಮ ಟ್ರಸ್ಟ್ ಗ ರೈತರಿಂದ ಭೂಮಿ ಪಡೆದು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾರ್ಟಿಗೆ ಮತ್ತೆ ಸೆರ್ಕೊಂಡ್ಯ? ಯಾವಾಗ ಸೇರ್ಕೊಂಡೆ? ಇಂಡಿಪೆಂಡೆಂಟ್ ಆಗಿ ಗೆದ್ದ ಬಾ ನಿನ್ನ ತಾಕತ್ ನೋಡ್ತಿನಿ: ಸಿದ್ದರಾಮಯ್ಯ ಕ್ಲಾಸ್

    ಪಾರ್ಟಿಗೆ ಮತ್ತೆ ಸೆರ್ಕೊಂಡ್ಯ? ಯಾವಾಗ ಸೇರ್ಕೊಂಡೆ? ಇಂಡಿಪೆಂಡೆಂಟ್ ಆಗಿ ಗೆದ್ದ ಬಾ ನಿನ್ನ ತಾಕತ್ ನೋಡ್ತಿನಿ: ಸಿದ್ದರಾಮಯ್ಯ ಕ್ಲಾಸ್

    ಬೆಂಗಳೂರು: ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತು ಮತ್ತೆ ಪಕ್ಷ ಸೇರಿರುವ ಹಾಸನದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಿನಯ್ ಗಾಂಧಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಇಂದು ಮಾಜಿ ಸಿಎಂ ದೇವರಾಜ ಅರಸು 103 ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾರ್ಯಕ್ರಮ ಆಗಮಿಸಿದ್ದ ಸಿದ್ದರಾಮಯ್ಯನವರು ವಿನಯ್ ಗಾಂಧಿ ಅವರನ್ನು ನೋಡುತ್ತಲೇ, ಪಾರ್ಟಿಗೆ ಮತ್ತೆ ಸೇರಿದಿಯಾ? ಯಾವಾಗ ಸೇರ್ಕೊಂಡೆ? ನಾನ್ಯಾವಾಗ ನಿನ್ನನ್ನು ಸೇರಿಸಿಕೊಂಡಿದ್ದೇನೆ. ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು ಬಾ ಆವಾಗ ನಿನ್ನ ತಾಕತ್ ನೋಡುತ್ತೀನಿ. ಮುಂದೆ ಮತ್ತೆ ಗಲಾಟೆ ಮಾಡಿದ್ರೆ ಪಕ್ಷ ಬಿಟ್ಟು ಓಡಿಸ್ತೀನಿ ಎಂದು ಎಲ್ಲರೆದುರೇ ಖಡಕ್ ಎಚ್ಚರಿಕೆಯನ್ನು ನೀಡಿದರು.

    ದೇವರಾಜ ಅರಸು ಅವರು ಸರ್ವರಿಗೂ ಸಮಪಾಲು, ಸಮಬಾಳು ಕಲ್ಪನೆಯನ್ನು ಜಾರಿಗೆ ತಂದಂತಹ ನಾಯಕ. ಶಿಕ್ಷಣ ಮತ್ತು ರಾಜಕೀಯದಲ್ಲಿ ಮೀಸಲಾತಿ ತಂದವರು ಅರಸು. ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸಂವಿಧಾನಕ್ಕೆ 73/74 ನೇ ತಿದ್ದುಪಡಿ, ಹೆಣ್ಣುಮಕ್ಕಳಿಗೆ ಮೀಸಲಾತಿ ಜಾರಿಗೆ ತಂದ ಓರ್ವ ಧೀಮಂತ ನಾಯಕರು. ಸಾಮಾಜಿಕ ನ್ಯಾಯದ ಬಗ್ಗೆ ಎಲ್ಲರೂ ದೊಡ್ಡ ಭಾಷಣ ಮಾಡುತ್ತಾರೆ. ಆದ್ರೆ ಪ್ರಾಯೋಗಿಕವಾಗಿ ಅದನ್ನ ತಮ್ಮ ನೈಜ ಜೀವನದಲ್ಲಿ ಅಳವಡಿಸಿಕೊಳ್ಳಲ್ಲ. ಕೇವಲ ತೋರಿಕೆಗಾಗಿ ಬಿಜೆಪಿಯವರು ದಲಿತರ ಮನೆಗೆ ತೆರಳಿ ತಿಂಡಿ ತಿಂದು ಬರುತ್ತಾರೆ. ಬರೀ ಗಿಮಿಕ್ ಮಾಡೋದು ಅವರ ಕೆಲಸವಾಗಿದ್ದು, ಕಾಂಗ್ರೆಸ್ ಪಕ್ಷವೊಂದೇ ಸಾಮಾಜಿಕ ನ್ಯಾಯಾಕ್ಕೆ ಬದ್ಧವಾಗಿದೆ ಎಂದು ಹೇಳಿದರು.

    ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪತ್ರಕರ್ತೆ ಗೌರಿ ಲಂಕೇಶ್ ಹಂತಕರನ್ನು ನಮ್ಮ ಸರ್ಕಾರ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರದಲ್ಲಿ ಹತ್ಯೆಯಾದ ದಾಬೋಲ್ಕರ್ ಮತ್ತು ಪನ್ಸಾರೆ ಆರೋಪಿಗಳ ಬಗ್ಗೆ ಬಿಜೆಪಿಯವರು ಒಂದು ಮಾತನ್ನು ಮಾತಾಡಲ್ಲ. ಇವರು ಸಹ ಒಂದು ರೀತಿಯ ಭಯೋತ್ಪಾದಕರಂತೆ ಎಂದು ಟೀಕಿಸಿದರು. ಅದೇ ಒಬ್ಬ ಮುಸ್ಲಿಂ ವ್ಯಕ್ತಿಯ ಹೆಸರು ಗೌರಿ ಪ್ರಕರಣದಲ್ಲಿ ಕೇಳಿ ಬಂದಿದ್ದರೆ, ಪ್ರತಿ ದಿನ ಟಿವಿಗಳಲ್ಲಿ ಚರ್ಚೆ ಆಗುತ್ತಿತ್ತು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸ್ವಾಮಿ ಅಗ್ನಿವೇಶ್ ಹಲ್ಲೆ ನಡೆಯಿತು. ಬಿಜೆಪಿ ವಿರುದ್ಧ ಯಾರು ಮಾತನಾಡುತ್ತಾರೆ ಅವರನ್ನ ಟಾರ್ಗೆಟ್ ಮಾಡಿ ಹಲ್ಲೆ ಮಾಡ್ತಾರೆ ಎಂದು ಆರೋಪಿಸಿದರು.

    ರಾಜೀವ್ ಗಾಂಧಿ ಮತ್ತು ದೇವರಾಜು ಅರಸು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ವಿ ಆರ್ ಸುದರ್ಶನ್, ಮಾಜಿ ಸಚಿವ ಹೆಚ್ ಆಂಜನೇಯ, ಶಾಸಕ ಬೈರತಿ ಸುರೇಶ್, ಮಾಜಿ ಸಚಿವೆ ಮೋಟಮ್ಮ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಮೇಥಿ ಕ್ಷೇತ್ರಕ್ಕೆ ರೈಲು ಬಂದ ಕಥೆ ಹೇಳಿದ ಸ್ಮೃತಿ ಇರಾನಿ!

    ಅಮೇಥಿ ಕ್ಷೇತ್ರಕ್ಕೆ ರೈಲು ಬಂದ ಕಥೆ ಹೇಳಿದ ಸ್ಮೃತಿ ಇರಾನಿ!

    ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅಮೇಥಿ ಕ್ಷೇತ್ರಕ್ಕೆ ರೈಲು ಬಂದಿದ್ದು ಹೇಗೆ ಎನ್ನುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವೆ  ಸ್ಮೃತಿ ಇರಾನಿ ಹೇಳಿದ್ದಾರೆ.

    ಬೊಮ್ಮನಹಳ್ಳಿಯಲ್ಲಿ ಆಯೋಜನೆಗೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೇಥಿಯ ಬಿಜೆಪಿ ಕಚೇರಿಗೆ ಹಿರಿಯ ವ್ಯಕ್ತಿಯೊಬ್ಬರು ಮಗನ ಜೊತೆ ಬಂದಿದ್ದರು. ಈ ವೇಳೆ ಅವರ ಜೊತೆ ಮಾತನಾಡುತ್ತಿದ್ದಾಗ ಅವರು ಅಮೇಥಿ ಕ್ಷೇತ್ರಕ್ಕೆ ಬಂದ ರೈಲಿನ ಕಥೆಯನ್ನು ತಿಳಿಸಿದರು ಎಂದರು.

    “ನಾನು ನನ್ನ ತಂದೆ ಜೊತೆ ನೆಹರು ಭಾಷಣ ಕೇಳಲು ಹೋಗಿದ್ದೆ. ಭಾಷಣದಲ್ಲಿ ಮಾತನಾಡಿದ ನೆಹರು, ಅಮೇಥಿಗೆ ರೈಲು ಸಂಪರ್ಕ ಕೊಡಿಸುತ್ತೇನೆ. ನನಗೆ ಮತ ನೀಡಿ ಎಂದು ಜನರಲ್ಲಿ ಕೇಳಿಕೊಂಡರು. ತಂದೆ ಅವರಿಗೆ ಮತ ಹಾಕಿ ಗೆಲ್ಲಿಸಿದರು. ರೈಲು ಮಾತ್ರ ಬರಲಿಲ್ಲ. ನಂತರ ನನಗೆ ಮದುವೆ ಆಯಿತು. ಚುನಾವಣೆ ವೇಳೆ ಇಂದಿರಾ ಗಾಂಧಿ ಕೂಡ ಅದನ್ನೇ ಹೇಳಿ, ಚುನಾವಣೆಯಲ್ಲಿ ಗೆದ್ದರು. ಆದರೆ ರೈಲು ಮಾತ್ರ ಬರಲೇ ಇಲ್ಲ. ರಾಜೀವ್ ಗಾಂಧಿ ಅದೇ ಮಾತನ್ನು ಮುಂದುವರಿಸಿದರು. ಈಗ ರಾಹುಲ್ ಕೂಡ ಅದನ್ನೇ ಹೇಳುತ್ತಿದ್ದಾರೆ” ಎಂದು ಹಿರಿಯ ವ್ಯಕ್ತಿ ನನ್ನಲ್ಲಿ ವಿಚಾರ ಹೇಳಿದರು ಎಂದು ಸ್ಮೃತಿ ಇರಾನಿ ತಿಳಿಸಿದರು.

    ಆ ರೈಲು ಯೋಜನೆಯ ಆರಂಭಿಸಲು ಕೊನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರಬೇಕಾಯಿತು. ಕಾಂಗ್ರೆಸ್ ನಾಯಕರು ರೈಲು ಹೆಸರಿನಲ್ಲಿ ಮತ ಹಾಕಿಸಿಕೊಂಡರೇ ವಿನಃ ಕೆಲಸ ಮಾಡಲಿಲ್ಲ. ಇದು ಕಾಂಗ್ರೆಸ್ ಆಡಳಿತ ವ್ಯವಸ್ಥೆ ಎಂದು ಹೇಳುವ ಮೂಲಕ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

    ಕಾರ್ಯಕ್ರಮದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಚಿತ್ರ ನಟಿ ತಾರಾ ಭಾಗಿಯಾಗಿದ್ದರು.

    2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಸ್ಮೃತಿ ಇರಾನಿ ವಿರುದ್ಧ 1,07,903 ಮತಗಳ ಅಂತರದಿಂದ ಜಯಗಳಿಸಿದ್ದರು. ರಾಹುಲ್ ಗಾಂಧಿ 4,08,651 ಮತಗಳನ್ನು ಪಡೆದಿದ್ದರೆ, ಸ್ಮೃತಿ ಇರಾನಿ 3,00,748 ಮತಗಳನ್ನು ಪಡೆದಿದ್ದರು.

  • ಕೊಪ್ಪಳದಲ್ಲಿ ಸಿಎಂ ಯಡವಟ್ಟು – ಬಾಯಿತಪ್ಪಿ ರಾಹುಲ್ ಗಾಂಧಿ ಹತ್ಯೆ ಅಂದ್ರು

    ಕೊಪ್ಪಳದಲ್ಲಿ ಸಿಎಂ ಯಡವಟ್ಟು – ಬಾಯಿತಪ್ಪಿ ರಾಹುಲ್ ಗಾಂಧಿ ಹತ್ಯೆ ಅಂದ್ರು

    ಕೊಪ್ಪಳ: ಕುಷ್ಟಗಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಯಡವಟ್ಟು ಮಾಡ್ಕೊಂಡಿದ್ದಾರೆ. ಭಾಷಣ ಮಾಡೋ ಭರದಲ್ಲಿ ಬಾಯಿತಪ್ಪಿ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಹತ್ಯೆ ಅಂದುಬಿಟ್ರು.

    ರಾಜೀವ್ ಗಾಂಧಿ ಹತ್ಯೆ ಎನ್ನಲು ಹೋಗಿ ರಾಹುಲ್ ಗಾಂಧಿ ಹತ್ಯೆ ಅಂತಾ ಹೇಳಿದ್ದಾರೆ. ಕೂಡಲೇ ಸಾವರಿಸಿಕೊಂಡ ಸಿಎಂ, ನಾನು ರಾಜೀವ್ ಗಾಂಧಿ ಅಂತಿದ್ದೆ. ಆದ್ರೆ ನೀವೇ ಮಧ್ಯೆ ಬಾಯಿ ಹಾಕಿ ರಾಹುಲ್ ಹೆಸರು ಬರುವಂತೆ ಮಾಡಿದ್ರಿ ಅಂತಾ ಹೇಳಿದ್ರು. ರಾಜೀವ್ ಗಾಂಧಿ ಹತ್ಯೆಯಾಗದಿದ್ರೆ ನಾನು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಗೆಲ್ಲುತ್ತಿದ್ದೆ. ಅಕಸ್ಮಾತ್ ಗೆದ್ದಿದ್ರೆ ಇವತ್ತು ನಾನು ಸಿಎಂ ಆಗ್ತಿರಲಿಲ್ಲ ಅಂದ್ರು.

    ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿಯವರು ಲಂಚದ ಚೆಕ್ ತೆಗೆದುಕೊಂಡು ಹೋದಂತೆ ಇಂದಿರಾಗಾಂಧಿ ಅವರು ಜೈಲಿಗೆ ಹೋಗಲಿಲ್ಲ. ಇಂದಿರಾಗಾಂಧಿ ಅವರು ತುರ್ತು ಪರಸ್ಥಿತಿ ಹಿನ್ನೆಲೆಯಲ್ಲಿ ಜೈಲಿಗೆ ಹೋಗಿದ್ದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಟಾಂಗ್ ಕೊಟ್ರು. ಈಗಾಗಲೇ ಯಡಿಯೂರಪ್ಪ ಮೇಲೆ 42 ಪ್ರಕರಣಗಳು ಇವೆ. ಮೊದಲು ಅವುಗಳಿಂದ ಹೊರಬರಲಿ ಎಂದರು.

    ಅಧಿವೇಶನದ ಸಂದರ್ಭದಲ್ಲಿ ಅದನ್ನು ಬಿಡ್ತೀನಿ, ಇದನ್ನು ಬಿಡ್ತೀನಿ ಎಂದು ಯಡಿಯೂರಪ್ಪ ಹೇಳಿದ್ದರು. ಅವರು ಏನೂ ಬಿಡಲಿಲ್ಲ. ಹಾವು ಬಿಡುವ ಮಾತನಾಡಿದ ಯಡಿಯೂರಪ್ಪನ ಬುಟ್ಟಿಯಲ್ಲಿ ಹಾವೇ ಇಲ್ಲ ಎಂದು ವ್ಯಂಗ್ಯವಾಡಿದರು.

    ಹೊನ್ನಾವರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪರೇಶ್ ಮೇಸ್ತಾ ಕುಟುಂಬಸ್ಥರು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯ ಮಾಡಿದ್ದರು. ಅದರಂತೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿದೆ. ಬಿಜೆಪಿಯವರು ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಿಲ್ಲ. ಆದರೆ ಕೇಂದ್ರದಲ್ಲಿ ಈಗ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎನ್ನುತ್ತಾರೆ ಎಂದು ದೂರಿದರು. ಕೋಮು ಗಲಭೆ ಸೃಷ್ಟಿಸುವುದೇ ಬಿಜೆಪಿಯವರ ಕೆಲಸ. ರಾಜಕೀಯ ಲಾಭಕ್ಕಾಗಿ ಅವರು ಈ ರೀತಿ ಮಾಡುತ್ತಾರೆ. ಓಟಿನ ಧೃವೀಕರಣಕ್ಕಾಗಿ ಬಿಜೆಪಿ ಈ ರೀತಿ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಬಲವಾಗಿ ಆರೋಪಿಸಿದರು.

    ನಾವು ಯಾವುದೇ ಧರ್ಮವನ್ನು ಒಡೆಯುವ ಕೆಲಸ ಮಾಡಿಲ್ಲ. ವೀರಶೈವರು, ಲಿಂಗಾಯತರು ಬೇರೆ ಬೇರೆ ಪಿಟಿಷನ್ ಕೊಟ್ಟಿದ್ದಾರೆ. ಅದನ್ನು ಮೈನಾರಿಟಿ ಕಮಿಷನ್‍ಗೆ ಕಳಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು.

    https://www.youtube.com/watch?v=eY0ztB1TXbg&feature=youtu.be

     

     

  • ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ: ಸುಬ್ರಮಣಿಯನ್ ಸ್ವಾಮಿ

    ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: ನೆಹರು- ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ನೀಡಿದ್ದಾರೆ.

    ಅಯೋಧ್ಯಾ ವಿಚಾರವಾಗಿ ಉಪನ್ಯಾಸ ನೀಡಲು ಭಾನುವಾರದಂದು ಪಾಟ್ನಾಗೆ ತೆರಳಿದ್ದ ಅವರು ವರದಿಗಾರರೊಂದಿಗೆ ಮಾತನಾಡಿ, ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಅವರು ಮಾತ್ರ ಒಳ್ಳೇ ವ್ಯಕ್ತಿ. ಅವರು ಹಿಂದೂಗಳ ಜಾಗೃತಿಗಾಗಿ ಕೊಡುಗೆ ನೀಡಿದ್ದಾರೆ ಅಂತ ಹೇಳಿದ್ರು.

    ಕಾಂಗ್ರೆಸ್ ಮುಖಂಡರ ಆಕ್ಷೇಪದ ನಡುವೆಯೂ ರಾಜೀವ್ ಗಾಂಧಿ ಅವರು ಅಂದಿನ ಜನಪ್ರಿಯ ಪೌರಾಣಿಕ ಧಾರಾವಾಹಿ ರಾಮಾಯಣವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲು ಅನುಮತಿ ನೀಡಿದ್ದರು. ಅಲ್ಲದೆ ಪ್ರಾರ್ಥನೆಗಾಗಿ ಅಯೋಧ್ಯೆಯಲ್ಲಿ ರಾಮ ಮಂದಿರದ ಬೀಗ ತೆಗಿಸಿದ್ರು ಅಂತ ಸುಬ್ರಮಣಿಯನ್ ಸ್ವಾಮಿ ಹೇಳಿದ್ರು.

    ಅಯೋಧ್ಯಾ ವಿವಾದವನ್ನು ಕೋರ್ಟಿನಿಂದ ಹೊರಗೆ ಬಗೆಹರಿಸಿಕೊಳ್ಳುವುದು ಒಳ್ಳೆಯದು ಎಂದು ಸುಪ್ರೀಂ ಕೋರ್ಟ್ ಹೇಳಿರುವ ಹಿನ್ನೆಲೆಯಲ್ಲಿ ವಿವಾದ ಇತ್ಯರ್ಥವಾಗುವ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಆಶಾಭಾವನೆ ವ್ಯಕ್ತಪಡಿಸಿದ್ರು.

    ಇದೇ ವೇಳೆ ಕಾಂಗ್ರೆಸ್‍ಗೆ ಟಾಂಗ್ ನೀಡಿದ ಸ್ವಾಮಿ, ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆಯಲ್ಲಿರುವಂತೆ ಕಾಣುತ್ತಿದೆ. ಅದರ ಅಂತ್ಯ ಸಂಸ್ಕಾರ ನೆರವೇರಿಸಲು ನಾವಿದ್ದೇವೆ ಅಂದ್ರು.