Tag: Rajkumar Patil Telkur

  • ಕಲಬುರಗಿಯಲ್ಲಿ ತಲ್ವಾರ್ ಪಾಲಿಟಿಕ್ಸ್ ಜೋರು – ಪ್ರಿಯಾಂಕ್ ಖರ್ಗೆ ತಲ್ವಾರ್ ಹಿಡಿದ ಫೋಟೊ ರಿಲೀಸ್

    ಕಲಬುರಗಿಯಲ್ಲಿ ತಲ್ವಾರ್ ಪಾಲಿಟಿಕ್ಸ್ ಜೋರು – ಪ್ರಿಯಾಂಕ್ ಖರ್ಗೆ ತಲ್ವಾರ್ ಹಿಡಿದ ಫೋಟೊ ರಿಲೀಸ್

    – ಕಾಂಗ್ರೆಸ್ ಸಚಿವರಿಗೆ ಬಿಜೆಪಿ ಮಾಜಿ ಶಾಸಕ ತಿರುಗೇಟು

    ಕಲಬುರಗಿ: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತಲ್ವಾರ್ (Talwar Fight) ಪಾಲಿಟಿಕ್ಸ್ ಜೋರಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಲ್ವಾರ್ ಹಿಡಿದಿರುವ ಫೋಟೊ ಹಂಚಿಕೊಂಡು ಬಿಜೆಪಿ ಮಾಜಿ ಶಾಸಕ ಟಾಂಗ್ ಕೊಟ್ಟಿದ್ದಾರೆ.

    ನಿನ್ನೆ ಬಿಜೆಪಿ ಕಲಬುರಗಿಯ ಸೇಡಂ ಮಾಜಿ ಶಾಸಕರ ಸಹೋದರ ಕಾರ್ಯಕರ್ತನ ಹುಟ್ಟುಹಬ್ಬದಲ್ಲಿ ತಲ್ವಾರ್ ಪ್ರದರ್ಶನ ಬಗ್ಗೆ ಸಚಿವ್ ಪ್ರಿಯಾಂಕ್ ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಇದಕ್ಕೆ ಕೌಂಟರ್ ಎಂಬಂತೆ ಸೇಡಂ ಮಾಜಿ ಶಾಸಕ ರಾಜಕುಮಾರ್ ತೇಲ್ಕೂರ್, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಾಸಕ ಡಾ.ಅಜಯ್ ಸಿಂಗ್ ತಲ್ವಾರ್ ಹಿಡಿದ ಫೋಟೊ ಬಿಡುಗಡೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ದೇಶದಲ್ಲೇ 3ನೇ ಶ್ರೀಮಂತ ಸಿಎಂ – ನಂಬರ್‌ ಒನ್‌ ಯಾರು?

    ‘ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ. ಇವರು ಏನು ಮಾಡಿದ್ರು ನಡೆಯುತ್ತೆ. ಬೇರೆಯವರು ಮಾಡಿದ್ರೆ ಮಾತ್ರ ಸಂವಿಧಾನ, ಕಾನೂನು ಬೊಗಳೆ ಬಿಡೋದು’ ಅಂತಾ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮಾಜಿ ಶಾಸಕ ರಾಜ್‌ಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ.ಬಿ.ಪಾಟೀಲ್ ತಲ್ವಾರ್‌ನಿಂದ ಕೇಕ್ ಕತ್ತರಿಸಿ ವಿಜೃಂಭಣೆ ನಡೆಸಿದ್ದಾರೆ. ಇದು ‘ಕಲಬುರಗಿ ರಿಪಬ್ಲಿಕ್’ ಮಾಡುವ ಪ್ರಯತ್ನವೇ? ಬಿಜೆಪಿಗರ ಪ್ರಕಾರ ಇದು ಗೂಂಡಾಗಿರಿಯ ವ್ಯಾಪ್ತಿಗೆ ಬರುವುದಿಲ್ಲವೇ? ಕಲಬುರಗಿ ರಿಪಬ್ಲಿಕ್ ಎನ್ನುತ್ತಿದ್ದ ಬೆಂಗಳೂರಿನ ಬಿಜೆಪಿ ನಾಯಕರು ತಮ್ಮದೇ ಪಕ್ಷದವರ ಈ ಕುಕೃತ್ಯಕ್ಕೆ ಯಾವ ಸಮಜಾಯಿಷಿ ನೀಡುತ್ತಾರೆ? ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರವನ್ನು ಕಾಲಿನ ಸಮದಲ್ಲಿಟ್ಟು ಅಂಬೇಡ್ಕರ್ ವಿರೋಧಿ ಅಮಿತ್ ಶಾ ಅವರನ್ನು ಮೆಚ್ಚಿಸುವ ಪ್ರಯತ್ನವೇ? ಇದನ್ನೂ ಓದಿ: ಪಿಎಂ ಮೋದಿ ಪ್ರಧಾನ ಕಾರ್ಯದರ್ಶಿಯ ಅಳಿಯ, ಮಗಳ ಸೋಗಿನಲ್ಲಿ ವಂಚನೆ – ಓಡಿಶಾ ದಂಪತಿ ಅರೆಸ್ಟ್

    ಡಾ. ಅಂಬೇಡ್ಕರ್ ಅವರ ಫೋಟೋ ಕಾಲ ಕೆಳಗಿಟ್ಟುಕೊಂಡು ತಲ್ವಾರ್ ಹಿಡಿದು ಕೇಕೆ ಹಾಕುತ್ತಿರುವ ಬಿಜೆಪಿಗರು ಗೂಂಡಾಗಿರಿ ಪ್ರದರ್ಶಿಸಿರುವುದಲ್ಲದೆ ಬಾಬಾ ಸಾಹೇಬರ ಘನತೆಗೆ ಚ್ಯುತಿ ತಂದಿದ್ದಾರೆ. ಈ ಕೃತ್ಯಕ್ಕೆ ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಾರಾ ಅಥವಾ ಇಂತಹ ಘೋರ ಅಪರಾಧ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತಾರಾ? ಇದಕ್ಕಾಗಿ ಒಂದು ಸತ್ಯ ಶೋಧನ ಸಮಿತಿ ರಚಿಸಿಕೊಂಡು, ನಕಲಿ ಅಂಬೇಡ್ಕರ್ ವಾದಿಗಳಾದ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರ ಜೊತೆಗೆ ಯಾವಾಗ ಕಲಬುರ್ಗಿಗೆ ಬರುತ್ತೀರಿ ಬಿ.ವೈ.ವಿಜಯೇಂದ್ರ ಅವರೇ ಎಂದು ಟೀಕಿಸಿದ್ದರು.

  • ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

    ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

    ಕಲಬುರಗಿ: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Goolihatti Shekhar) ಅವರ ಮಾತು ಸತ್ಯಕ್ಕೆ ಅತ್ಯಂತ ದೂರವಾಗಿದ್ದು, ಆರ್‌ಎಸ್‌ಎಸ್ (RSS) ಜಾತ್ಯತೀತ ಹಾಗೂ ಸರ್ವಹಿತ ಕಾಪಾಡುವ ಸಂಘಟನೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ರಾಜಕುಮಾರ್ ಪಾಟೀಲ್ ತೆಲ್ಕೂರ್ (Rajkumar Patil Telkur) ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿದ ಅವರು, ಆರ್‌ಎಸ್‌ಎಸ್ ಅಥವಾ ಸಂಘ ಪರಿವಾರದ ಯಾವುದೇ ಕಚೇರಿಯಲ್ಲಿ ಜಾತಿ, ವರ್ಗ ಕೇಳಿ ಒಳಬಿಡುವ ಪದ್ಧತಿಯಿಲ್ಲ. ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಕೇಳಿದ್ದೇನೆ. ಅವರ ಆರೋಪ ಶುದ್ಧ ಸುಳ್ಳು ಮತ್ತು ರಾಜಕೀಯ ದುರುದ್ದೇಶ ಎನಿಸುತ್ತದೆ ಎಂದರು. ಇದನ್ನೂ ಓದಿ: ಹಲ್ಲೆ ಪ್ರಕರಣ ಮುಚ್ಚಿ ಹಾಕಲು ಪ್ರಿಯಾಂಕ್ ಖರ್ಗೆ ಯತ್ನ – ಸುಳ್ಳು ಕೇಸ್‌ಗಳಿಗೆ ನಾವು ಭಯಪಡಲ್ಲ: ಮಣಿಕಂಠ್ ರಾಠೋಡ್

    ನಾನು ಆರ್‌ಎಸ್‌ಎಸ್‌ನಲ್ಲಿ ವಿದ್ಯಾರ್ಥಿ ದಿಸೆಯಿಂದ ವಿದ್ಯಾರ್ಥಿ ಪರಿಷತ್ತಿನಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೀಗಾಗಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮೆರೆಯುವ ಸಂಘದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಗೂಳಿಹಟ್ಟಿಯವರು ಒಂದೆರಡು ಬೈಠಕ್‌ನಲ್ಲಿ ಭಾಗಿಯಾದರೆ ಆರ್‌ಎಸ್‌ಎಸ್ ಎಂತಹ ದೇಶಭಕ್ತ ಸಂಘಟನೆ ಎಂದು ಅವರಿಗೆ ತಿಳಿಯಲಿದ್ದು, ಬರುವುದಾದರೆ ಮುಕ್ತ ಅವಕಾಶ ಇದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

    ಸುಳ್ಳು ಹೇಳುವುದು, ಗಾಳಿಯಲ್ಲಿ ಗುಂಡು ಹಾರಿಸುವ ಪ್ರವೃತ್ತಿಯಿಂದ ಗೂಳಿಹಟ್ಟಿ ಸೇರಿದಂತೆ ಉಳಿದ ನಾಯಕರು ಹೊರ ಬರಬೇಕು. ಪುರಾವೆ, ದಾಖಲೆಗಳು ಇದ್ದಲ್ಲಿ ಮಾತನಾಡಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ನಾಯಕರು ತೋರಿದ ಅಗೌರವ ಏನು ಎನ್ನುವುದು ದೇಶದ ಜನತೆಗೆ ಗೊತ್ತಿದೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಇದೇ ಕಾಂಗ್ರೆಸ್ (Congress) ಮತ್ತು ಅವರು ನಿಧನರಾದ ಸಂದರ್ಭದಲ್ಲಿ ಕಾಂಗ್ರೆಸ್ ತೋರಿದ ಅಗೌರವ. ಇದು ಕಾಂಗ್ರೆಸ್ ಬಾಬಾ ಸಾಹೇಬರನ್ನು ಕಂಡ ರೀತಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

  • ಪ್ರಿಯಾಂಕ್ ಖರ್ಗೆ ಅಕ್ಕ, ತಂಗಿಯರು ಮಂಚ ಹತ್ತಿಯೆ ನೌಕರಿಗೆ ಹೋಗಿದ್ದಾರಾ: ಪಾಟೀಲ್ ಗರಂ

    ಪ್ರಿಯಾಂಕ್ ಖರ್ಗೆ ಅಕ್ಕ, ತಂಗಿಯರು ಮಂಚ ಹತ್ತಿಯೆ ನೌಕರಿಗೆ ಹೋಗಿದ್ದಾರಾ: ಪಾಟೀಲ್ ಗರಂ

    ಕಲಬುರಗಿ: ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಮನೆಯಲ್ಲೂ ಅಕ್ಕ-ತಂಗಿಯರು ಮಂಚ ಹತ್ತಿ ನೌಕರಿಗೆ ಹೋಗಿದ್ದಾರಾ ಎಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

    ಪ್ರಿಯಾಂಕ್ ಖರ್ಗೆ ಅವರ ಲಂಚ-ಮಂಚದ ಸರ್ಕಾರ ಹೇಳಿಕೆ ವಿಚಾರವನ್ನು ತೀವ್ರವಾಗಿ ಖಂಡಿಸಿದ ಅವರು, ನಮ್ಮ ಮನೆಯಲ್ಲಿ ಅಕ್ಕ ತಂಗಿಯರು ಜಾಬ್‌ಗೆ ಹೋಗಿದ್ದಾರೆ ಅವರೇನು ಮಂಚ ಏರಿ ಹೋಗಿದ್ದಾರಾ? ನಿಮ್ಮ ಮನೆಯಲ್ಲೂ ಅಕ್ಕ ತಂಗಿಯರು ಜಾಬ್‌ಗೆ ಹೋಗಿದ್ದಾರೆ ಅವರೂ ಮಂಚ ಏರಿ ಹೋಗಿದ್ದಾರಾ? ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈ ರೀತಿಯ ಹೇಳಿಕೆಗಳು ಶೋಭೆ ತರುವುದಿಲ್ಲ. ಲಂಚದ ಬಗ್ಗೆ ಮಾತನಾಡುತ್ತಾರೆ ಸರಿ, ಆದರೆ ಮಂಚದ ಬಗ್ಗೆ ಮಾತನಾಡಿ ರಾಜ್ಯದ ಮಹಿಳೆಯರ ಗೌರವ ತೆಗೆಯುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    ಪ್ರಿಯಾಂಕ್ ಖರ್ಗೆ ಅವರು ಸಹ ಒಬ್ಬ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದರು. ಅವರ ಮನೆಯಲ್ಲೂ ಸಹ ಅಕ್ಕ-ತಂಗಿಯರು ಇದ್ದಾರೆ. ಅವರು ಕೂಡ ಮಂಚ ಹತ್ತಿ ನೌಕರಿಗೆ ಹೋಗಿದ್ದಾರಾ? ಮಾತಾಡಬೇಕಾದರೆ ನಾಲಿಗೆ ಮೇಲೆ ಹಿಡಿತ ಇರಲಿ. ಮಂಚ ಹತ್ತಿ ನೌಕರಿಗೆ ಹೋಗಿರುವ ಒಂದೇ ಒಂದು ಉದಾಹರಣೆ ಕೊಡಲಿ. ಬಾಯಿಮಾತಿಗೆ ಏನೇನೋ ಮಾತನಾಡಿದರೆ ಸರಿ ಇರುವುದಿಲ್ಲ. ಈ ಹೇಳಿಕೆಯಿಂದ ಮಹಿಳೆಯರಿಗೆ ಪ್ರಿಯಾಂಕ್ ಅಗೌರವ ತೋರಿದ್ದಾರೆ. ಈ ರೀತಿಯ ಹೇಳಿಕೆ ಕುಟುಂಬಗಳಲ್ಲಿ ಬಿರುಕು ಮೂಡಿಸುತ್ತವೆ. ಇಂತಹ ನೀಚ ಮಾತು ಹೇಳುವುದು ಅವರಿಗೆ ಗೌರವತರಲ್ಲ. ಹೆಣ್ಣು ಮಕ್ಕಳನ್ನು ಗೌರವದಿಂದ ನೋಡಿ ಎಂದು ಗುಡುಗಿದ್ದಾರೆ.

    ಪ್ರಿಯಾಂಕ್ ಖರ್ಗೆ ಅವರು, ಪ್ರಚಾರದ ಗೀಳಿಗಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಅವರು ಈಗಲೇ ರಾಜ್ಯದ ಮಹಿಳೆಯರ ಕ್ಷಮೆ ಕೇಳಲಿ. ಸರ್ಕಾರದ ಬಗ್ಗೆ ಮಾತಾಡಲು ಅವರ ಬಳಿ ಏನು ಉಳಿದಿಲ್ಲ. ಅದಕ್ಕಾಗಿ ಈ ರೀತಿ ಕೀಳು ಮಟ್ಟದ ಹೇಳಿಕೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಜಿಯೋ ಬಿಡುಗಡೆ ಮಾಡಲಿದೆ ಕಡಿಮೆ ಬೆಲೆಯ 5G ಫೋನ್‌ – ಬೆಲೆ ಎಷ್ಟು? ಗುಣ ವೈಶಿಷ್ಟ್ಯಗಳು ಏನು?

    Live Tv
    [brid partner=56869869 player=32851 video=960834 autoplay=true]

  • ಶಾಸಕರು ಮಗು ನಂದು ಅಂತ ಒಪ್ಪಿಕೊಂಡಿದ್ದಾರೆ: ಮಹಿಳೆ

    ಶಾಸಕರು ಮಗು ನಂದು ಅಂತ ಒಪ್ಪಿಕೊಂಡಿದ್ದಾರೆ: ಮಹಿಳೆ

    ಬೆಂಗಳೂರು: ಬಿಜೆಪಿ ಶಾಸಕನಿಗೆ ಮಹಿಳೆ ಬ್ಲಾಕ್ ಮೇಲ್ ಕುರಿತು ಶಾಸಕ ರಾಜ್ಕುಮಾರ್ ಪಾಟೀಲ್ ತೇಲ್ಕೂರ್ ಅವರು ಮಗು ತಮ್ಮದು ಎಂದು ಒಪ್ಪಿಕೊಂಡಿದ್ದಾರೆ ಎಂದು ಮಹಿಳೆ ಹೇಳಿದರು.

    ತಮ್ಮ ವಕೀಲ ಜಗದೀಶ್ ಜೊತೆ ಸುದ್ದಿಗೋಷ್ಠಿ ನಡೆಸಿದ ಅವರು, ಶಾಸಕರು ಚೈಲ್ಡ್‍ವುಡ್‍ನಿಂದಲೂ ಪರಿಚಯ. ಅವರು ಮಗು ನಂದು ಎಂದು ಒಪ್ಪಿಕೊಂಡಿದ್ದಾರೆ. ಖಾಸಗಿ ಹೋಟೆಲ್‍ನಲ್ಲಿ ಆರು ತಿಂಗಳ ಹಿಂದೆ ಭೇಟಿ ಆಗಿದ್ದರು. ಅಲ್ಲಿ ಮಗನಿಗೆ ನ್ಯಾಯಕೊಡಿಸುವ ಭರವಸೆ ಪತ್ನಿ ಮುಂದೆಯೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ನನ್ನ ಮಗುವಿಗೆ ನ್ಯಾಯಬೇಕು. ನನ್ನ ಮೇಲೆ ಕೇಸ್ ಹಾಕಲಿ ನನಗೆ ತೊಂದರೆ ಇಲ್ಲ ಎಂದು ಹೇಳಿದರು.

    ಸಿಎಂಗೆ ಟ್ವೀಟ್ ಮಾಡಿದ್ದರಿಂದ ನಿನ್ನೆ ಕೆಲವು ಕಾರ್ಯಕರ್ತರು ಬಂದು ಕಾಂಗ್ರೆಸ್‍ನವರು ಮಾಡಿಸಿದ್ದಾರೆ ಅಂತಾ ಹೇಳು ಎಂದು ಒತ್ತಡ ಹಾಕುತ್ತಿದ್ದಾರೆ. ಜೊತೆಗೆ ವಿಧಾನಸೌಧ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿ ನಿನ್ನೆ ಇಡೀ ದಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದಾರೆ ಎಂದರು. ಇದನ್ನೂ ಓದಿ: ಕಳೆದ ಎರಡು ವರ್ಷದಿಂದ ನ್ಯಾಯಕ್ಕಾಗಿ ಹೋರಾಟ ಮಾಡ್ತಿದ್ದೇನೆ: ಮಹಿಳೆ

    ಈ ಬಗ್ಗೆ ವಿಚಾರ ಏನು ಕೇಳಿದರೂ, ಪೊಲೀಸರು ಸಮಯಕ್ಕೆ ಸರಿಯಾಗಿ ಊಟ ತಿಂಡಿ ಬರುತ್ತದೆ. ತಿಂದು ಸುಮ್ಮನೆ ಕೂರುವಂತೆ ಹೇಳಿದ್ದಾ ರೆ ಹೊರತು ಯಾವ ವಿಚಾರಕ್ಕಾಗಿ ಕೆರದುಕೊಂಡು ಬಂದಿದ್ದೇವೆ ಎನ್ನುವುದರ ಬಗ್ಗೆ ಹೇಳಲೇ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಯಾರ ಮೇಲೂ ಆರೋಪ ಮಾಡಲ್ಲ, ಕಾನೂನು ಹೋರಾಟಕ್ಕೆ ಸಿದ್ಧ: ತೇಲ್ಕೂರ್

    ರಾತ್ರಿ 9 ಗಂಟೆಗೆ ಪೊಲೀಸ್ ಠಾಣೆಯಿಂದ ಹೊರಗೆ ಬಿಟ್ಟಿದ್ದಾರೆ. ಆದರೆ ಈಗಲೂ ಮನೆ ಹತ್ತಿರ ಪೊಲೀಸರು ಇದ್ದಾರೆ. ಈ ಎಲ್ಲಾ ವ್ಯವಸ್ಥೆಯಿಂದ ನಾನು ಬದುಕಿದರೆ ಸಾಕು ಎನಿಸುತ್ತಿದೆ. ನನಗೆ ಮೋಸ ಆಗಿದೆ, ನನಗೆ ನ್ಯಾಯಕೊಡಿಸಿ ಎಂದು ಸಿಎಂಗೆ ಟ್ವೀಟ್ ಮಾಡಿದ್ದರಿಂದ ಇಷ್ಟೆಲ್ಲ ಸಮಸ್ಯೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

  • ಮಹಿಳೆ ಬ್ಲಾಕ್‍ಮೇಲ್ ಮಾಡ್ತಿದ್ದು, ನನ್ನದೇನೂ ತಪ್ಪಿಲ್ಲ: ಶಾಸಕ ತೇಲ್ಕೂರ್ ಕಣ್ಣೀರು

    ಮಹಿಳೆ ಬ್ಲಾಕ್‍ಮೇಲ್ ಮಾಡ್ತಿದ್ದು, ನನ್ನದೇನೂ ತಪ್ಪಿಲ್ಲ: ಶಾಸಕ ತೇಲ್ಕೂರ್ ಕಣ್ಣೀರು

    – 2 ಕೋಟಿ ಹಣಕ್ಕಾಗಿ ಮಹಿಳೆ ಬೇಡಿಕೆ
    – ಎಲ್ಲರಿಗೂ ಕುಟುಂಬವಿದ್ದು, ಅವರ ಜೊತೆ ಬದುಕ್ತಿದ್ದೇವೆ

    ಬೆಂಗಳೂರು: ಮಹಿಳೆ ಬ್ಲಾಕ್ ಮೇಲ್ ವಿಷಯಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ದೂರು ದಾಖಲಿಸಿದ್ದೇನೆ ಎಂದು ಶಾಸಕ ರಾಜ್ಕುಮಾರ್ ಪಾಟೀಲ್ ತೇಲ್ಕೂರ್ ಹೇಳುತ್ತಾ ಕಣ್ಣಿರು ಹಾಕಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳಿಂದ ಮಹಿಳೆ ಹಾಗೂ ಆಕೆಯ ಪತಿಯಿಂದ ಬ್ಲಾಕ್ ಮೇಲ್ ಆಗುತ್ತಿದೆ. ಈ ಪ್ರಕರಣದಿಂದ ನಾನು ಭಾರೀ ನೊಂದಿದ್ದೇನೆ. ನನ್ನ ಕುಟುಂಬ ಕೂಡ ಮುಜುಗರ ಅನುಭವಿಸುತ್ತಿದೆ. ನಾನು ಬಹಳಷ್ಟು ಸಮಾಜಕ್ಕೆ ಒಳಿತಾಗುವ ಕೆಲಸ ಮಾಡಿಕೊಂಡು ಬಂದಿದ್ದೇನೆ. ಇದೊಂದು ಪ್ರಕರಣದಿಂದ ನನ್ನ ಹೆಸರಿಗೆ ಬಹಳಷ್ಟು ಮಸಿ ಬಳಿಯುವ ಕೆಲಸವಾಗುತ್ತಿದೆ ಎಂದ ಅವರು, ಮಹಿಳೆ ಮತ್ತು ಆಕೆಯ ಪತಿ ಕಳೆದ ಹಲವು ದಿನಗಳಿಂದ 2 ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ವಿರುದ್ಧ ದೂರು ದಾಖಲಿಸಿದ್ದೇನೆ ಎಂದು ಹೇಳಿದರು.

    ನನ್ನ ವಿರುದ್ಧ ಈವರೆಗೆ ಯಾವುದೇ ಆರೋಪವಿಲ್ಲ. ನನ್ನ ವಿರುದ್ಧ ಬಂದ ಆರೋಪವನ್ನು ಸ್ವತಂತ್ರವಾಗಿ ಎದುರಿಸುತ್ತೇನೆ. ಸರ್ಕಾರ ಹಾಗೂ ಪಕ್ಷ ಇದರ ಬಗ್ಗೆ ಹಸ್ತಕ್ಷೇಪ ಮಾಡುವುದಿಲ್ಲ. ಕಾರ್ಯಕರ್ತರು ಈ ಘಟನೆಗೆ ಸಂಬಂಧಿಸಿ ಹಸ್ತಕ್ಷೇಪ ಮಾಡಬೇಡಿ. ನನ್ನ ಮೇಲೆ ಬಂದಿರುವಂತಹ ಎಲ್ಲಾ ಆರೋಪಗಳನ್ನು ನಾನೊಬ್ಬನೇ ಅದನ್ನು ಎದುರಿಸುತ್ತೇನೆ ಎಂದರು. ಇದನ್ನೂ ಓದಿ: ಯಾರ ಮೇಲೂ ಆರೋಪ ಮಾಡಲ್ಲ, ಕಾನೂನು ಹೋರಾಟಕ್ಕೆ ಸಿದ್ಧ: ತೇಲ್ಕೂರ್

    ಈ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ. ಎಲ್ಲರಿಗೂ ಕುಟುಂಬವಿದೆ. ಕುಟುಂಬದ ಜೊತೆಗೆ ನಾವು ಬದುಕುತ್ತಿದ್ದೇವೆ. ಇಂತಹ ವಿಷಯಗಳನ್ನು ಆರೋಪಿಸುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದು ಪ್ರಶ್ನಿಸಿದ ಅವರು ಕಣ್ಣೀರು ಹಾಕಿದರು.

    ಮಹಿಳೆಯೊಬ್ಬರಿಂದ ನಿರಂತರವಾಗಿ ಬ್ಲಾಕ್ ಮೇಲ್ ಗೆ ಒಳಗಾಗಿದ್ದೇನೆ ಎಂದು ಶಾಸಕರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಸಕರು ದೂರು ನೀಡುತ್ತಿದ್ದಂತೆಯೇ ಮಹಿಳೆ ಕೂಡ ಪ್ರತ್ಯಾರೋಪ ಮಾಡಿದ್ದಾರೆ. ಶಾಸಕರಿಂದ ನನಗೆ ಅನ್ಯಾಯ ಆಗಿದೆ. ನ್ಯಾಯಕ್ಕಾಗಿ ಕಳೆದೆರಡು ವರ್ಷಗಳಿಂದ ಹೋರಾಡುತ್ತಿದ್ದೇನೆ ಎಂದು ಮಹಿಳೆ ವಕೀಲ ಜಗದೀಶ್ ಮೂಲಕ ಠಾಣೆಗೆ ತೆರಳಿದ್ದಾರೆ. ಇದನ್ನೂ ಓದಿ: ಕಳೆದ ಎರಡು ವರ್ಷದಿಂದ ನ್ಯಾಯಕ್ಕಾಗಿ ಹೋರಾಟ ಮಾಡ್ತಿದ್ದೇನೆ: ಮಹಿಳೆ

  • ಮಹಿಳೆಯಿಂದ ಬ್ಲಾಕ್‍ಮೇಲ್ ಆರೋಪ- ತೇಲ್ಕೂರ್‌ರಿಂದ ವಿವರಣೆ ಕೇಳಿದ ಕಟೀಲ್

    ಮಹಿಳೆಯಿಂದ ಬ್ಲಾಕ್‍ಮೇಲ್ ಆರೋಪ- ತೇಲ್ಕೂರ್‌ರಿಂದ ವಿವರಣೆ ಕೇಳಿದ ಕಟೀಲ್

    ಬೆಂಗಳೂರು: ಮಹಿಳೆಯೊಬ್ಬರು ಬ್ಲಾಕ್ ಮೇಲೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ರಾಜ್ಕುಮಾರ್ ಪಾಟೀಲ್ ತೇಲ್ಕೂರ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವರಣೆ ಕೇಳಿದ್ದಾರೆ.

    ಮಹಿಳೆ ಬ್ಲಾಕ್ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ಕೊಡಿ. ಮಾಧ್ಯಮಗಳಲ್ಲಿ ನಿಮ್ಮ ಬಗ್ಗೆ ಪ್ರಸಾರ ಆಗುತ್ತಿರುವ ಆರೋಪ ಬಗ್ಗೆ ಮಾಹಿತಿ ನೀಡುವಂತೆ ಕಟೀಲ್ ಅವರು ಶಾಸಕರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯಾರ ಮೇಲೂ ಆರೋಪ ಮಾಡಲ್ಲ, ಕಾನೂನು ಹೋರಾಟಕ್ಕೆ ಸಿದ್ಧ: ತೇಲ್ಕೂರ್

    ಮಹಿಳೆಯೊಬ್ಬರಿಂದ ನಿರಂತರವಾಗಿ ಬ್ಲಾಕ್ ಮೇಲ್ ಗೆ ಒಳಗಾಗಿದ್ದೇನೆ ಎಂದು ಶಾಸಕರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಸಕರು ದೂರು ನೀಡುತ್ತಿದ್ದಂತೆಯೇ ಮಹಿಳೆ ಕೂಡ ಪ್ರತ್ಯಾರೋಪ ಮಾಡಿದ್ದಾರೆ. ಶಾಸಕರಿಂದ ನನಗೆ ಅನ್ಯಾಯ ಆಗಿದೆ. ನ್ಯಾಯಕ್ಕಾಗಿ ಕಳೆದೆರಡು ವರ್ಷಗಳಿಂದ ಹೋರಾಡುತ್ತಿದ್ದೇನೆ ಎಂದು ಮಹಿಳೆ ವಕೀಲ ಜಗದೀಶ್ ಮೂಲಕ ಠಾಣೆಗೆ ತೆರಳಿದ್ದಾರೆ. ಇದನ್ನೂ ಓದಿ: ಕಳೆದ ಎರಡು ವರ್ಷದಿಂದ ನ್ಯಾಯಕ್ಕಾಗಿ ಹೋರಾಟ ಮಾಡ್ತಿದ್ದೇನೆ: ಮಹಿಳೆ

  • ಯಾರ ಮೇಲೂ ಆರೋಪ ಮಾಡಲ್ಲ, ಕಾನೂನು ಹೋರಾಟಕ್ಕೆ ಸಿದ್ಧ: ತೇಲ್ಕೂರ್

    ಯಾರ ಮೇಲೂ ಆರೋಪ ಮಾಡಲ್ಲ, ಕಾನೂನು ಹೋರಾಟಕ್ಕೆ ಸಿದ್ಧ: ತೇಲ್ಕೂರ್

    – ಪಕ್ಷ ನನಗೆ ತುಂಬಾ ಕೆಲಸವನ್ನು ಕೊಟ್ಟಿದೆ

    ಕಲಬುರಗಿ: ಪ್ರಕರಣದ ಬಗ್ಗೆ ನಾನು ಯಾರ ಮೇಲೂ ಆರೋಪವನ್ನು ಮಾಡುವುದಿಲ್ಲ. ಕಾನೂನು ಹೋರಾಟಕ್ಕೆ ಸಿದ್ಧನಿದ್ದೇನೆ ಎಂದು ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್ ತೇಲ್ಕೂರ್ ಪ್ರತಿಕ್ರಿಯಿಸಿದರು.

    ಮಹಿಳೆ ಬ್ಲಾಕ್ ಮೇಲ್ ಪ್ರಕರಣ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯಿಸಿ, ನಾನು ಯಾವುದೇ ತಪ್ಪು ಮಾಡಿಲ್ಲ. ಸರ್ಕಾರ ಯಾವುದೇ ರೀತಿಯ ತನಿಖೆ ನಡೆಸಲಿ ನಾನು ಸಿದ್ಧನಿದ್ದೇನೆ. ತಪ್ಪಿತಸ್ಥರು ಯಾರೇ ಇದ್ರೂ ಕ್ರಮಕೈಗೊಳ್ಳಲಿ. ನಾನು ನಿರಂತರ ಬ್ಲಾಕ್ ಮೇಲ್ ಗೆ ಒಳಗಾಗಿದ್ದೇನೆ. ಈ ಬಗ್ಗೆ ನಾನು ಯಾರ ಮೇಲೂ ಆರೋಪವನ್ನು ಮಾಡುವುದಿಲ್ಲ ಎಂದು ವಿವರಿಸಿದರು. ಇದನ್ನೂ ಓದಿ: ಸೇಡಂ ಬಿಜೆಪಿ ಶಾಸಕ ತೇಲ್ಕೂರ್‌ಗೆ ಮಹಿಳೆ ಬ್ಲಾಕ್‍ಮೇಲ್

    ನಾನು ಈ ಕುರಿತು ಯಾವುದೇ ರೀತಿ ಮಾತನಾಡುವುದಿಲ್ಲ. ಈ ಬಗ್ಗೆ ನೀವು ಸಹ ಕೂಲಂಕುಶವಾಗಿ ನೀವು ಸಹ ತನಿಖೆಯನ್ನು ಮಾಡಬೇಕು. ನೀವು ಸತ್ಯ ಏನಿದೆ ಎಂಬುದನ್ನು ಪ್ರಕಟ ಮಾಡಬೇಕು. ಮಾಧ್ಯಮದವರ ಮೇಲೆ ನನಗೆ ವಿಶ್ವಾಸವಿದೆ. ನಿಮಗೆ ನಿಮ್ಮದೇ ಆದ ವಿಂಗ್ ಇದೆ. ನೀವೇ ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸತ್ಯವನ್ನು ತೋರಿಸಿ. ನಾನು ಈ ಬಗ್ಗೆ ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ದಾಖಲಿಸಿದ್ದೇನೆ ಎಂದರು.

    ಫೆ.4ರಂದು ಸಿಎಂ ಅವರ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಟ್ವೀಟ್ ಬಂದಿದೆ ಎಂದು ನನಗೆ ಮಾಹಿತಿ ಬಂತು. ಆಗ ನಾನು ಕಲಬುರಗಿಯಲ್ಲಿ ಮೇಯರ್ ಚುನಾವಣೆಯಲ್ಲಿದ್ದೆ. ತಕ್ಷಣ ಫೆ.5ರಂದು ಬೆಂಗಳೂರಿಗೆ ನಾನು ಬಂದು ವಿಧಾನಸಭೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದೇನೆ ಎಂದು ಹೇಳಿದರು.

    ಕೇಸ್ ದಾಖಲಿಸುವುದಕ್ಕೂ ಮುನ್ನ ಸಿಎಂ ಜೊತೆ ಚರ್ಚೆ ಮಾಡಿದ್ರಾ ಎಂಬ ಪ್ರಶೆಗೆ ಉತ್ತರಿಸಿದ ಅವರು, ಪ್ರಕರಣದಲ್ಲಿ ಸುಖಾ ಸುಮ್ಮನೆ ಸಿಎಂ ಬೊಮ್ಮಾಯಿ ಹೆಸರು ತರವುದು ಸರಿ ಅಲ್ಲ. ನಾನು ಯಾರ ಬಳಿಯೂ ಈ ದೂರಿನ ಕುರಿತು ಮಾತುಕತೆ ಮಾಡಿಲ್ಲ. ಮೊದಲು ನಾನು ದೂರು ಕೊಟ್ಟಿದ್ದೇನೆ. ಉಳಿದಿದ್ದು ಪೊಲೀಸರು ನೋಡಿಕೊಳ್ಳುತ್ತಾರೆ ಎಂದರು.

    ಪ್ರಾಥಮಿಕ ಮಾಹಿತಿ ಏನೂ ಸಿಕ್ಕಿಲ್ಲ. ಪ್ರಸ್ತುತ ನಾನು ಎಫ್‍ಐಆರ್ ದಾಖಲಿಸಿದ್ದೇನೆ. ಇನ್ನುಳಿದಂತೆ ಪೊಲೀಸರು ನೋಡಿಕೊಳ್ಳುತ್ತಾರೆ. ಈ ಬಗ್ಗೆ ನಾನು ಪೊಲೀಸರ ಜೊತೆ ಯಾವುದೇ ರೀತಿಯ ಸಂಪರ್ಕವನ್ನು ಮಾಡುವುದಿಲ್ಲ. ಅವರು ಈ ಕುರಿತು ತನಿಖೆ ಮಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ನಾನು ಅವರಿಗೆ ರಾಜಕೀಯ ಒತ್ತಡಗಳನ್ನು ಏರುವುದಿಲ್ಲ. ಈ ಹಿಂದೆ ಯಾರು ಇದ್ದಾರೆ ಎಂದು ನಾನು ಆರೋಪಗಳನ್ನೂ ಮಾಡುವುದಿಲ್ಲ. ನನಗೆ ಕಾನೂನಿನ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

    ನನಗೂ ಸಹ ಕುಟುಂಬವಿದೆ, ಹೀಗಾಗಿ ತುಂಬಾ ನೊಂದಿದ್ದೇನೆ. ನಾನು ಈ ಬಗ್ಗೆ ಹೆಚ್ಚು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ನನಗೂ ಕುಟುಂಬವಿದೆ. ತನಿಖೆ ವೇಳೆ ಸಿಕ್ಕ ಮಾಹಿತಿಯನ್ನು ನೀವು ಸಹ ನೋಡಬಹುದು. ಇಂತಹ ಕೆಲಸ ನಾನು ಮಾಡುವುದೂ ಇಲ್ಲ. ಪಕ್ಷಕ್ಕೆ, ಕಾರ್ಯಕರ್ತರಿಗೆ, ಮತದಾರರಿಗೆ ಮುಜುಗರ ತರುವ ಕೆಲಸ ನನ್ನಿಂದ ಆಗಿಲ್ಲ. ನಾನು ಕಾನೂನು ಹೋರಾಟಕ್ಕೆ ಸಿದ್ಧನಿದ್ದೇನೆ ಎಂದು ಹೇಳಿದರು.

    ನಾನು ಪರಿಪಾಲಕ. ಕಾನೂನು ಏನೇ ತೀರ್ಮಾನ ತೆಗೆದುಕೊಂಡರು ನಾನು ಅದನ್ನು ಪಾಲಿಸುತ್ತೇನೆ. ಹೆಚ್ಚಿನ ಮಾಹಿತಿ ಬೇಕಾದರೆ ಪೊಲೀಸರ ಬಳಿ ತೆಗೆದುಕೊಳ್ಳಿ. ಇದಕ್ಕಿಂತ ಹೆಚ್ಚು ನಾನು ಏನನ್ನು ಹೇಳಲು ಇಷ್ಟಪಡುವುದಿಲ್ಲ. ನೀವು ಸಹ ಈ ಕುರಿತು ಹೆಚ್ಚಿನ ತನಿಖೆ ಮಾಡಿ ನಂತರ ವರದಿ ಮಾಡಿ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು. ಇದನ್ನೂ ಓದಿ: 40 ವರ್ಷಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ- ಸಿಧು ಜೊತೆಗಿನ ಮೊದಲ ಭೇಟಿ ನೆನೆದ ರಾಗಾ

    ಪಕ್ಷ ನನಗೆ ತುಂಬಾ ಕೆಲಸವನ್ನು ಕೊಟ್ಟಿದೆ. ಜನರಿಗಾಗಿ ನಾನು ತುಂಬಾ ಕೆಲಸ ಮಾಡಬೇಕಾಗಿದೆ. ಈ ಬಗ್ಗೆ ನಾನು ಯಾವುದೇ ರೀತಿ ತಲೆಯನ್ನು ಕೆಡಿಸಿಕೊಳ್ಳುವುದಿಲ್ಲ. ಪಕ್ಷವನ್ನು ಸಂಫಟನೆ ಮಾಡುವಂತಹ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ. ಪಕ್ಷ ಮತ್ತು ಜನರು ನನಗೆ ಕೊಟ್ಟ ಅಧಿಕಾರವನ್ನು ನಾನು ನೋಡಿಕೊಳ್ಳುತ್ತೇನೆ. ಅದಕ್ಕೆ ನನ್ನ ಸಂಪೂರ್ಣ ಸಮಯವನ್ನು ಮೀಸಲಿಡುತ್ತೇನೆ ಎಂದರು.

  • ಸೇಡಂ ಬಿಜೆಪಿ ಶಾಸಕ ತೇಲ್ಕೂರ್‌ಗೆ ಮಹಿಳೆ ಬ್ಲಾಕ್‍ಮೇಲ್

    ಸೇಡಂ ಬಿಜೆಪಿ ಶಾಸಕ ತೇಲ್ಕೂರ್‌ಗೆ ಮಹಿಳೆ ಬ್ಲಾಕ್‍ಮೇಲ್

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.

    ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ತಮಿಳುನಾಡಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕನಿಗೆ ಮಹಿಳೆಯಿಂದ ಬ್ಲ್ಯಾಕ್‍ಮೇಲ್ – ತಮಿಳುನಾಡಿನಲ್ಲಿ ನಾಲ್ವರು ವಶ

    ಸಿಎಂ ಫೇಸ್‍ಬುಕ್ ಪೇಜ್‍ನಲ್ಲಿ ಬಹಿರಂಗವಾಗಿ ಮಹಿಳೆ ಮೆಸೇಜ್ ಮಾಡಿದ್ದರು. ಮಹಿಳೆಯ ಬ್ಲ್ಯಾಕ್‍ಮೇಲ್ ಬೆದರಿಕೆಯಿಂದ ಎಂಎಲ್‍ಎ ದೂರು ನೀಡಿದ್ದಾರೆ. ಇತ್ತ ಪ್ರಕರಣ ಸಂಬಂಧ ಮಹಿಳೆಯು ವಕೀಲ ಜಗದೀಶ್ ಜೊತೆ ವಿಧಾನ ಸೌಧ ಪೊಲೀಸ್ ಠಾಣೆಗೆ ತೆರಳಿದ್ದಾರೆ.

  • ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ: ತೇಲ್ಕೂರ್

    ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ: ತೇಲ್ಕೂರ್

    ಕಲಬುರಗಿ: ಇತ್ತೀಚೆಗೆ ಎಲ್ಲಡೆ ಆರ್‌ಎಸ್‌ಎಸ್‌ ಬಗ್ಗೆ ಹಗುರವಾಗಿ ಹಾಗೂ ಪ್ರಧಾನಿಗಳ ಬಗ್ಗೆ ಏಕ ವಚನದಲ್ಲಿ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ. ಅವರು ಅಧಿಕಾರವಿಲ್ಲದೇ ಹುಚ್ಚರಂತೆ ವರ್ತಿಸುತ್ತಿದ್ದಾರೆ ಅವರನ್ನು ಕೂಡಲೇ ಹುಚ್ಚಾಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ಸೇಡಂ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್ ವಾಗ್ದಾಳಿ ನಡೆಸಿದ್ದಾರೆ.

    ಪತ್ರಿಕಾ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಯ ದೃಷ್ಟಿಯಿಂದ ಸಂಸತ್ತಿನಲ್ಲಿ ಹಲವಾರು ವಿಧೇಯಕಗಳ ಬಗ್ಗೆ ಚರ್ಚೆ ಆಗುವ ಸಮಯದಲ್ಲಿ ಕಾಂಗ್ರೆಸ್‍ನವರು ಪ್ರತಿಭಟನೆ ಮಾಡುವುದು, ಸಭಾತ್ಯಾಗ ಮಾಡುವುದು ರೂಢಿಯಾಗಿದೆ. ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಏನೇ ಮಾಡಿದರೂ ಕೂಡ ಅದಕ್ಕೆ ವಿರೋಧ ವ್ಯಕ್ತಪಡಿಸುವುದು ಅವರ ಅಜೆಂಡಾ ಆಗಿ ಬಿಟ್ಟಿದೆ. ಅಲ್ಲದೇ ಎಲ್ಲಡೆ ದೇಶದ ಒಬ್ಬ ಪ್ರಧಾನಮಂತ್ರಿಗಳ ಬಗ್ಗೆ ಏಕ ವಚನದಲ್ಲಿ ಮಾತನಾಡುವುದನ್ನು ಬಿಡಬೇಕು, ಹೀಗೆ ಮುಂದುವರಿಸಿದರೆ ಸಿದ್ದರಾಮಯ್ಯ ಸೇರಿದಂತೆ ಕೈ ನಾಯಕರ ಕಾರ್ಯಕ್ರಮಗಳಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್

    ಪ್ರಸ್ತುತ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಕೈ ಬಿಟ್ಟಿದ್ದು, ಕೇವಲ ತುಷ್ಟೀಕರಣದ ರಾಜಕಾರಣಗೋಸ್ಕರ ಹಾಗೂ ಅಧಿಕಾರಗೋಸ್ಕರ ಈ ರೀತಿಯ ಮಾತನಾಡುತ್ತಿದ್ದಾರೆ. ಒಂದು ಕಡೆ ಒಂದು ಹೇಳಿಕೆ ಕೊಟ್ಟರೆ ಇನ್ನೊಂದು ಕಡೆ ಮತ್ತೊಂದು ಹೇಳಿಕೆ ಕೊಡುತ್ತಿದ್ದಾರೆ. ಕಾಂಗ್ರೆಸ್‍ನವರು ನೈತಿಕತೆ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಉದಾಹರಣೆ ಲೋಕಸಭೆಯ ಕಲಾಪಗಳಾಗಿವೆ ಎಂದರು. ಇದನ್ನೂ ಓದಿ: 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ