Tag: RajThackeray

  • ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS

    ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS

    ಮುಂಬೈ: ಮುಂಬೈನಲ್ಲಿರುವ ಮಸೀದಿಯೊಂದರ ಸ್ವಲ್ಪ ದೂರದಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಇದರೊಂದಿಗೆ ಜೈ ಶ್ರೀರಾಮ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾ… ಜೈ ಸೋ’ ಎಂಬ ಘೋಷಣೆಗಳನ್ನೂ ಕೂಗಿದ್ದು, ತೀವ್ರ ವಿವಾದಕ್ಕೆ ತಿರುಗಿದೆ.

    MUMBAI

    ಎಂಎನ್‌ಎಸ್ ಮುಖ್ಯಸ್ಥ ರಾಜ್‌ಠಾಕ್ರೆ ನಿನ್ನೆ ತಮ್ಮ ಬೆಂಬಲಿಗರಿಗೆ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ್ದರು. ಅದರಂತೆ ಹನುಮಾನ್ ಚಾಲೀಸಾ ಪಠಣ ಹಾಗೂ ಜೈ ಶ್ರೀರಾಮ್ ಘೋಷಣೆಗಳು ಮೊಳಗಿವೆ. ಬೆಳಿಗ್ಗೆ 5 ಗಂಟೆಯ ಆಜಾನ್ ಸಮಯದಲ್ಲಿ ಕಟ್ಟಡದ ಮೇಲಿಂದ ಧ್ವನಿವರ್ಧಕಗಳ ಮೂಲಕ ಹನುಮಾನ್ ಚಾಲೀಸಾ ಕೇಳುವಂತೆ ಮಾಡಿದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿರುವುದಾಗಿ ವರದಿಯಾಗಿದೆ.

    MUMBAI POLICE

    ಎರಡು ದಿನಗಳ ಹಿಂದೆಯೇ ಮಹಾರಾಷ್ಟçದ ಔರಂಗಾಬಾದ್‌ನಲ್ಲಿ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ರಾಜ್ ಠಾಕ್ರೆ, ಡಬಲ್ ಪವರ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಔರಂಗಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬರು ಪರಸ್ಪರ ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್

    ಪೊಲೀಸರಿಗೆ ತಲೆನೋವು: ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿದ್ದ ರಾಜ್ ಠಾಕ್ರೆ, ಅದಕ್ಕೆ ಮೇ 3 ಕೊನೆಯ ದಿನವೆಂದು ಗಡುವು ನೀಡಿದ್ದರು. ಅದು ಸಾಧ್ಯವಾಗದಿದ್ದರೆ, ಮಸೀದಿಗಳ ಎದುರೇ ಹನುಮಾನ್ ಚಾಲೀಸಾ ಪಠಣ ಆರಂಭಿಸುವುದಾಗಿ ಘೋಷಿಸಿದ್ದರು. ಅದರ ಬೆನ್ನಲ್ಲೇ ಮಹಾರಾಷ್ಟ್ರ ಪೊಲೀಸರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆ ತಲೆಕಡೆಸಿಕೊಂಡಿದ್ದಾರೆ.

    ಈ ನಡುವೆ ರಾಜ್ ಠಾಕ್ರೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ತಂದೆ ಬಾಳಾಸಾಹೇಬ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರ ಹಳೆಯ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    36 ಸೆಕೆಂಡ್‌ಗಳ ಈ ವೀಡಿಯೋನಲ್ಲಿ ಬಾಳಾ ಠಾಕ್ರೆ, ಧ್ವನಿವರ್ಧಕಗಳ ಬಳಕೆ ವಿರುದ್ಧ ಎಚ್ಚರಿಕೆ ನೀಡಿರುವುದು ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ತಡೆಯಲಾಗುತ್ತದೆ ಎಂದಿದ್ದಾರೆ.

    ಜಾಮೀನು ರಹಿತ ವಾರೆಂಟ್: 14 ವರ್ಷಗಳ ಹಿಂದಿನ ಪ್ರಕರಣದ ಸಂಬಂಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನ್ಯಾಯಲಯವು ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂಬೈ ಪೊಲೀಸರು ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸಿಆರ್‌ಪಿಸಿ ಸೆಕ್ಷನ್ ಅಡಿಯಲ್ಲಿ ಠಾಕ್ರೆ ಹಾಗೂ ನೂರಾರು ಮಂದಿಗೆ ನೋಟಿಸ್ ನೀಡಿದ್ದಾರೆ. ಅದರ ಬೆನ್ನಲ್ಲೇ ರಾಜ್ ಠಾಕ್ರೆ ಅವರ ಮುಂಬೈ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

  • ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರಿಯಬೇಕು: ರಾಜ್‌ ಠಾಕ್ರೆ

    ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರಿಯಬೇಕು: ರಾಜ್‌ ಠಾಕ್ರೆ

    ಮುಂಬೈ: ಶಿವಸೇನೆ ಸೇನೆ ನಾಯಕ ಸಂಜಯ್ ರಾವತ್ ಅವರ ಆರೋಪಕ್ಕೆ ಕಿಡಿಕಾರಿರುವ ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಅವರು, ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ನಮಗೆ ಮಹಾರಾಷ್ಟ್ರದಲ್ಲಿ ಗಲಭೆ ಬೇಡ. ಪ್ರಾರ್ಥನೆ ಸಲ್ಲಿಸುವುದನ್ನು ಯಾರೂ ವಿರೋಧಿಸುವುದಿಲ್ಲ. ಆದರೆ ಮುಸ್ಲಿಮರು ಇದನ್ನು ಧ್ವನಿವರ್ಧಕಗಳಲ್ಲಿ ಮಾಡಿದರೆ, ನಾವೂ ಪ್ರತಿಯಾಗಿ ಧ್ವನಿವರ್ಧಕಗಳನ್ನು ಬಳಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಹಿಜಬ್‌ಗೆ ಯಾವುದೇ ನಿಷೇಧವಿಲ್ಲ: ಕೇಂದ್ರ ಸಚಿವ ಮುಖ್ತರ್‌ ಅಬ್ಬಾಸ್‌

    Raj Thackeray

    ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು. ಮೇ 3ರ ನಂತರ ಏನು ಮಾಡಬೇಕೆಂದು ನಾನು ನೋಡುತ್ತೇನೆ. ಅಷ್ಟರಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸದೇ ಇದ್ದರೆ ನಮ್ಮ ಪಕ್ಷವು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾ ಪಠಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.

    ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿಷೇಧ ಹೇರಲು ಒತ್ತಾಯಿಸುತ್ತಿರುವಂತೆಯೇ, ಅವರನ್ನು ಆಡಳಿತ ಪಕ್ಷವಾಗಿರುವ ಶಿವಸೇನೆ ಹಿಂದೂ ಓವೈಸಿ ಎಂದು ಕರೆದಿದ್ದು, ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

    `ಮಹಾರಾಷ್ಟ್ರದಲ್ಲಿ ಶಾಂತಿಗೆ ಧಕ್ಕೆ ತರುವ ಪ್ರಯತ್ನಗಳು ನಡೆದಿವೆ. ಆದರೆ ಇಲ್ಲಿನ ಜನರು ಮತ್ತು ಪೊಲೀಸರು ಶಾಂತಿ ಕಾಪಾಡಿದ್ದಾರೆ. ಆದರೆ ಹಿಂದೂ ಓವೈಸಿಯಂಥವರು (ರಾಜ್ ಠಾಕ್ರೆ) ರಾಮ-ಹನುಮನ ಹೆಸರಿನಲ್ಲಿ ಗಲಭೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ’ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದರು.

    `ನಾನು ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಯುಪಿ ಚುನಾವಣೆಯಲ್ಲಿ ಗೆಲ್ಲಲು ಎಐಎಂಐಎಂನ ಓವೈಸಿ ಬಿಜೆಪಿಗೆ ಮಾಡಿದ ಕೆಲಸವನ್ನೇ ಮಹಾರಾಷ್ಟ್ರದ ಹೊಸ ಹಿಂದೂ ಓವೈಸಿಯಿಂದ ಬಿಜೆಪಿ ಕೇಳುತ್ತಿದೆ’ ಎಂದು ರಾವುತ್ ಕಿಡಿಕಾರಿದ್ದರು.