Tag: RajyaSabha Elections

  • ರಾಜ್ಯಸಭೆ ಚುನಾವಣೆ- ಕರ್ನಾಟಕ ಉಸ್ತುವಾರಿಯಾಗಿ ಕಿಶನ್ ರೆಡ್ಡಿ ನೇಮಕ

    ರಾಜ್ಯಸಭೆ ಚುನಾವಣೆ- ಕರ್ನಾಟಕ ಉಸ್ತುವಾರಿಯಾಗಿ ಕಿಶನ್ ರೆಡ್ಡಿ ನೇಮಕ

    ನವದೆಹಲಿ: ಜೂನ್ 10ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಬಿಜೆಪಿ ಆಯಾ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.

    ಕರ್ನಾಟಕದ ಉಸ್ತುವಾರಿಯಾಗಿ ಕೇಂದ್ರ ಸಚಿವ ಕೆ.ಕಿಶನ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ರಾಜಸ್ಥಾನಕ್ಕೆ ನರೇಂದ್ರ ಸಿಂಗ್ ತೋಮರ್, ಹರಿಯಾಣಕ್ಕೆ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಮಹಾರಾಷ್ಟ್ರ ಉಸ್ತುವಾರಿಯಾಗಿ ಅಶ್ವಿನಿ ವೈಷ್ಣವ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

    ಚುನಾವಣೆಯ ದಿನ ಹತ್ತಿರವಾಗುತ್ತಿದ್ದಂತೆಯೇ ಶಾಸಕರ ಕುದುರೆ ವ್ಯಾಪಾರದ ಭೀತಿ ಎದುರಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್‍ಗೆ ಕಳುಹಿಸಲು ಮುಂದಾಗಿದೆ. ಛತ್ತೀಸ್ ಗಢದಲ್ಲಿ ಈಗಾಗಲೇ ರೂಮ್‍ಗಳು ಸಹ ಬುಕ್ ಆಗಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಮಗೆ ಬೆಂಬಲ ನೀಡಿ – ಸಿದ್ದು ಬಳಿ JDS ನಾಯಕರ ಮನವಿ

    ಜೂ.10ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಹರಿಯಾಣದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ಸ್ಪರ್ಧಿಸಿದ್ದಾರೆ. ಪಕ್ಷವು ರಾಜ್ಯದ ಹೊರಗಿನವರನ್ನು ಕಣಕ್ಕಿಳಿಸಿರುವ ಕಾರಣ ಅತೃಪ್ತಿ ಉಂಟಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಕುದುರೆ ವ್ಯಾಪಾರದ ಆತಂಕವೂ ಕಾಂಗ್ರೆಸ್‍ಗೆ ಕಾಡುತ್ತಿದೆ. ಹೀಗಾಗಿ ಗುರುವಾರ ಛತ್ತೀಸ್‍ಗಢದ ರೆಸಾರ್ಟ್ ನಲ್ಲಿ ರೂಮ್ ಬುಕ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

  • ರಾಜ್ಯ ನಾಯಕರಿಗೆ ಶಾಕ್ – ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್

    ರಾಜ್ಯ ನಾಯಕರಿಗೆ ಶಾಕ್ – ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್

    ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಕಮಲದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ.

    ಬಿಜೆಪಿ ನೀಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತಿ ಮತ್ತು ಬೆಳಗಾವಿಯ ಈರಣ್ಣ ಕಡಾಡಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ.

    ಈ ಮೂಲಕ ಕರ್ನಾಟಕದಲ್ಲಿ ಎದ್ದಿದ್ದ ಬಣ ರಾಜಕೀಯಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದ್ದು, ಇಬ್ಬರು ಇಬ್ಬರು ಸಂಘನಿಷ್ಠರಿಗೆ ಬಿಜೆಪಿ ಮಣೆ ಹೈಕಮಾಂಡ್ ಮಣೆ ಹಾಕಿದೆ. ಈ ಮೂಲಕ ಆರ್‌ಎಸ್‌ಎಸ್ ಕಳುಹಿಸಿದ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಓಕೆ ಮಾಡಿತಾ ಎಂಬ ಪ್ರಶ್ನೆ ಎದ್ದಿದೆ.

    ಎರಡು ರಾಜ್ಯಸಭಾ ಸ್ಥಾನಗಳಿಗೆ ಸ್ಪರ್ಧೆ ಶುರುವಾಗಿತ್ತು. ಬೆಳಗಾವಿಯಿಂದ ಒಂದು ಸ್ಥಾನಕ್ಕೆ ಪ್ರಭಾಕರ್ ಕೋರೆ, ರಮೇಶ್ ಕತ್ತಿ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಏರ್ಪಟ್ಟಿತು. ಶಾಸಕ ಉಮೇಶ್ ಕತ್ತಿ ಬಂಡಾಯದ ಬಾವುಟ ಹಾರಿಸಿದ್ದರು. ಮತ್ತೊಂದು ಸ್ಥಾನಕ್ಕೆ ಮಂಗಳೂರು ಭಾಗದ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರು ಫೈನಲ್ ಮಾಡಿ ಈ ಮೂವರಲ್ಲಿ ಇಬ್ಬರ ಹೆಸರನ್ನು ಪ್ರಕಟಿಸುವಂತೆ ಕೇಂದ್ರ ಚುನಾವಣಾ ಸಮಿತಿಗೆ ರಾಜ್ಯ ನಾಯಕರು ಮನವಿ ಮಾಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಅಚ್ಚರಿಯ ಅಭ್ಯರ್ಥಿಗಳ ಆಯ್ಕೆ ಮಾಡುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

    ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿರುವ ಅಶೋಕ್ ಗಸ್ತಿ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದರು. ರಾಯಣ್ಣ ಬ್ರಿಗೇಡ್ ಚಟುವಟಿಕೆ ವೇಳೆ ಯಡಿಯೂರಪ್ಪ ವಿರುದ್ಧ ಬರೆದ ಪತ್ರದಲ್ಲಿ ಸಹಿ ಹಾಕಿದ್ದರು. ಈರಣ್ಣ ಕದಡಿ ಅರಭಾವಿ ವಿಧಾನಸಭೆ 1994 ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿ.ಎಸ್ ಕೌಜಲಗಿ ವಿರುದ್ಧ ಸ್ಪರ್ಧೆ ಮಾಡಿದ್ದರು.

    ಅಶೋಕ್ ಗಸ್ತಿ ಸವಿತಾ ಸಮಾಜದವರಾಗಿದ್ದು, ಈರಣ್ಣ ಕಡಾಡಿ ಲಿಂಗಾಯತರಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಈ ರೀತಿ ಬಿಜೆಪಿ ನಾಯಕರಿಗೆ ಶಾಕ್ ನೀಡುವುದು ಇದೇ ಮೊದಲೆನಲ್ಲ. ಈ ಹಿಂದೆ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿಯ ವೇಳೆ ಬಿಜೆಪಿ ನಾಯಕರು ನಿರೀಕ್ಷೆ ಮಾಡದೇ ಇದ್ದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿತ್ತು.