Tag: RajyaSabha MP

  • ಹಿಮಾಚಲ ಪ್ರದೇಶದ ರಾಜ್ಯಸಭಾ ಸಂಸದ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ

    ಹಿಮಾಚಲ ಪ್ರದೇಶದ ರಾಜ್ಯಸಭಾ ಸಂಸದ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ

    ಶಿಮ್ಲಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಹಿಮಾಚಲ ಪ್ರದೇಶದ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಗುಜರಾತ್‌ನಿಂದ ಸದನಕ್ಕೆ ಆಯ್ಕೆಯಾದ ಕಾರಣ ಹಿಮಾಚಲ ಪ್ರದೇಶದ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಪಿ ನಡ್ಡಾ ಅವರು ಗುಜರಾತ್‌ನಿಂದ ರಾಜ್ಯಸಭಾ ಸದಸ್ಯರಾಗಿ 13 ದಿನಗಳ ಹಿಂದೆ ಫೆಬ್ರವರಿ 20 ರಂದು ಅವಿರೋಧವಾಗಿ ಆಯ್ಕೆಯಾದರು.

    ಲೋಕಸಭಾ ಚುನಾವಣೆಗೆ (Loksabha Election 2024) ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬಂದ ನಂತರ ನಡ್ಡಾ ರಾಜೀನಾಮೆ ನೀಡಿದರು. ಹಿಮಾಚಲದಿಂದ ನಡ್ಡಾ ಅವರ ಅಧಿಕಾರಾವಧಿಯಲ್ಲಿ 14 ದಿನಗಳಿದ್ದವು. ಆದರೆ ಅದಕ್ಕೂ ಮೊದಲು ನಡ್ಡಾ ಅವರು ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್‌ ಖರ್ಗೆ

    ಫೆ. 27 ರಂದು ಚುನಾವಣೆ: ಫೆಬ್ರವರಿ 27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆದಿತ್ತು. ಈ ಪೈಕಿ 41 ಸ್ಥಾನಗಳಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದಿದ್ದಾರೆ. ಯುಪಿಯಲ್ಲಿ 10, ಹಿಮಾಚಲದಲ್ಲಿ 1 ಮತ್ತು ಕರ್ನಾಟಕದ 4 ಸ್ಥಾನಗಳಿಗೆ ಮತದಾನ ನಡೆದಿದೆ. ಈ ಪೈಕಿ ಯುಪಿಯ 10 ಸ್ಥಾನಗಳ ಪೈಕಿ 8 ಬಿಜೆಪಿ ಮತ್ತು 2 ಎಸ್‌ಪಿ ಪಾಲಾಗಿದೆ. ಹಿಮಾಚಲದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ 3 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 1 ಸ್ಥಾನವನ್ನು ಗೆದ್ದಿದೆ.

  • ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

    ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

    ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚಾಗುತ್ತಿದೆ. ಇಲ್ಲಿನ ಕೆಲ ಜಿಲ್ಲೆಗಳು ಸೌದಿ ಅರೇಬಿಯಾದಂತೆ ಭಾಸವಾಗುತ್ತಿದ್ದು, ದೇಶ ವಿರೋಧಿ ಚಿಂತನೆಗಳು ವ್ಯಾಪಕವಾಗಿ ಹರಡುತ್ತಿವೆ ಎಂದು ಬಿಜೆಪಿ ರಾಜ್ಯ ಸಭಾ ಸಂಸದ ಬಿಜೆಪಿ ರಾಜ್ಯಸಭಾ ಸಂಸದ ಕೆ.ಜೆ. ಅಲ್ಫೋನ್ಸ್ ಕಣ್ಣಂತಾನಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೇರಳದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚುತ್ತಿದೆ. ಇದು ಅತ್ಯಂತ ದುಃಖಕರ ಸಂಗತಿ. ನೀವು ಕೇರಳದ ಕೆಲವು ಜಿಲ್ಲೆಗಳಿಗೆ ಹೋಗಿ ನೋಡಿದರೆ, ಸೌದಿ ಅರೇಬಿಯಾದಲ್ಲಿದ್ದಂತೆ ಭಾಸವಾಗುತ್ತದೆ. ಜನರ ವರ್ತನೆಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ. ವಿಶೇಷವಾಗಿ ಅವರು ಧರಿಸುವ ಉಡುಪು ದೇಶ ವಿರೋಧಿ ಚಿಂತನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ ಭಾ.ಮಾ. ಹರೀಶ್

    ಇದೇ ವೇಳೆ ಪ್ರಚೋದನಕಾರಿ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿರುವುದು ಉತ್ತಮ ಬೆಳವಣಿಗೆ ಎಂದು ಅಲ್ಫೋನ್ಸ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

    ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ಸರ್ಕಾರಗಳು ಮುಸ್ಲಿಮರ ಮತಗಳ ಮೇಲೆ ಅವಲಂಬಿತವಾಗಿವೆ. ಈ ನಡುವೆ ಕೇರಳದಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳು ಅಲ್ಪಸಂಖ್ಯಾತರನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.