Tag: RajyaSabha

  • ರಾಜ್ಯ ನಾಯಕರಿಗೆ ಶಾಕ್ – ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್

    ರಾಜ್ಯ ನಾಯಕರಿಗೆ ಶಾಕ್ – ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್

    ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಕಮಲದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ.

    ಬಿಜೆಪಿ ನೀಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತಿ ಮತ್ತು ಬೆಳಗಾವಿಯ ಈರಣ್ಣ ಕಡಾಡಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ.

    ಈ ಮೂಲಕ ಕರ್ನಾಟಕದಲ್ಲಿ ಎದ್ದಿದ್ದ ಬಣ ರಾಜಕೀಯಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದ್ದು, ಇಬ್ಬರು ಇಬ್ಬರು ಸಂಘನಿಷ್ಠರಿಗೆ ಬಿಜೆಪಿ ಮಣೆ ಹೈಕಮಾಂಡ್ ಮಣೆ ಹಾಕಿದೆ. ಈ ಮೂಲಕ ಆರ್‌ಎಸ್‌ಎಸ್ ಕಳುಹಿಸಿದ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಓಕೆ ಮಾಡಿತಾ ಎಂಬ ಪ್ರಶ್ನೆ ಎದ್ದಿದೆ.

    ಎರಡು ರಾಜ್ಯಸಭಾ ಸ್ಥಾನಗಳಿಗೆ ಸ್ಪರ್ಧೆ ಶುರುವಾಗಿತ್ತು. ಬೆಳಗಾವಿಯಿಂದ ಒಂದು ಸ್ಥಾನಕ್ಕೆ ಪ್ರಭಾಕರ್ ಕೋರೆ, ರಮೇಶ್ ಕತ್ತಿ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಏರ್ಪಟ್ಟಿತು. ಶಾಸಕ ಉಮೇಶ್ ಕತ್ತಿ ಬಂಡಾಯದ ಬಾವುಟ ಹಾರಿಸಿದ್ದರು. ಮತ್ತೊಂದು ಸ್ಥಾನಕ್ಕೆ ಮಂಗಳೂರು ಭಾಗದ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರು ಫೈನಲ್ ಮಾಡಿ ಈ ಮೂವರಲ್ಲಿ ಇಬ್ಬರ ಹೆಸರನ್ನು ಪ್ರಕಟಿಸುವಂತೆ ಕೇಂದ್ರ ಚುನಾವಣಾ ಸಮಿತಿಗೆ ರಾಜ್ಯ ನಾಯಕರು ಮನವಿ ಮಾಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಅಚ್ಚರಿಯ ಅಭ್ಯರ್ಥಿಗಳ ಆಯ್ಕೆ ಮಾಡುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

    ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿರುವ ಅಶೋಕ್ ಗಸ್ತಿ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದರು. ರಾಯಣ್ಣ ಬ್ರಿಗೇಡ್ ಚಟುವಟಿಕೆ ವೇಳೆ ಯಡಿಯೂರಪ್ಪ ವಿರುದ್ಧ ಬರೆದ ಪತ್ರದಲ್ಲಿ ಸಹಿ ಹಾಕಿದ್ದರು. ಈರಣ್ಣ ಕದಡಿ ಅರಭಾವಿ ವಿಧಾನಸಭೆ 1994 ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿ.ಎಸ್ ಕೌಜಲಗಿ ವಿರುದ್ಧ ಸ್ಪರ್ಧೆ ಮಾಡಿದ್ದರು.

    ಅಶೋಕ್ ಗಸ್ತಿ ಸವಿತಾ ಸಮಾಜದವರಾಗಿದ್ದು, ಈರಣ್ಣ ಕಡಾಡಿ ಲಿಂಗಾಯತರಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಈ ರೀತಿ ಬಿಜೆಪಿ ನಾಯಕರಿಗೆ ಶಾಕ್ ನೀಡುವುದು ಇದೇ ಮೊದಲೆನಲ್ಲ. ಈ ಹಿಂದೆ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿಯ ವೇಳೆ ಬಿಜೆಪಿ ನಾಯಕರು ನಿರೀಕ್ಷೆ ಮಾಡದೇ ಇದ್ದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿತ್ತು.

  • ನಾನು ರಾಜ್ಯಸಭೆ ಪ್ರವೇಶ ಮಾಡಲ್ಲ: ಹೆಚ್.ಡಿ.ದೇವೇಗೌಡ

    ನಾನು ರಾಜ್ಯಸಭೆ ಪ್ರವೇಶ ಮಾಡಲ್ಲ: ಹೆಚ್.ಡಿ.ದೇವೇಗೌಡ

    ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ರಾಜ್ಯಸಭೆ ಸದಸ್ಯನಾಗಿ ರಾಜ್ಯಸಭೆ ಪ್ರವೇಶ ಮಾಡಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

    ಜೂನ್ ನಲ್ಲಿ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳು ಖಾಲಿಯಾಗಲಿದ್ದು, ಅದರಲ್ಲಿ ಒಂದು ಸ್ಥಾನಕ್ಕೆ ಕಾಂಗ್ರೆಸ್ ನೆರವಿನೊಂದಿಗೆ ದೇವೇಗೌಡರು ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿತ್ತು. ಆದರೆ ಇಂದು ಜೆಪಿ ಭವನದಲ್ಲಿ ಪಕ್ಷದ ಮುಖಂಡರೊಂದಿಗೆ ಮಾತನಾಡಿ ಯಾವ ಕಾರಣಕ್ಕೂ ರಾಜ್ಯಸಭೆ ಪ್ರವೇಶ ಮಾಡಲ್ಲ ಎಂದಿದ್ದಾರೆ. ನಾನು ಬಡವರ ಪರ ಹೋರಾಡಲು ರಾಜ್ಯಸಭೆ ಸದಸ್ಯರಾಗಬೇಕಿಲ್ಲ. ಎಲ್ಲಿದ್ದರೂ ನಾನು ರೈತರ ಪರ ಹೋರಾಟ ಮಾಡುತ್ತೇನೆ. ನನ್ನ ಜೀವನವೇ ಹೋರಾಟ, ನನಗೆ ಅಧಿಕಾರದ ದಾಹ ಇಲ್ಲ ಎಂದರು.

    ರಾಜ್ಯಸಭೆ ಸದಸ್ಯರಾಗುವ ಬಗ್ಗೆ ವದಂತಿ ಹರಡಿದೆ. ಅದರ ಮೇಲೆ ಮಾಧ್ಯಮಗಳು ವಿಶ್ಲೇಷಣೆ ಮಾಡುತ್ತಿವೆ. ದೇವೇಗೌಡರಿಗೆ ಅಧಿಕಾರ ದಾಹ ಇನ್ನೂ ಹೋಗಿಲ್ಲ ಅಂತಾರೆ. ನನ್ನ ಜೀವನದಲ್ಲಿ ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡು ಕೂತವನಲ್ಲ. ನಾನು ರಾಜ್ಯಸಭೆ ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಪದೇ ಪದೇ ಫೋನ್ ಮಾಡಿದ್ದಕ್ಕೆ ಸ್ನಾನ ಮಾಡಿ ಬರ್ತೀನಿ ಇರ್ಲಾ ಎಂದ ಅಂಬಿ!

    ಪದೇ ಪದೇ ಫೋನ್ ಮಾಡಿದ್ದಕ್ಕೆ ಸ್ನಾನ ಮಾಡಿ ಬರ್ತೀನಿ ಇರ್ಲಾ ಎಂದ ಅಂಬಿ!

    ಬೆಂಗಳೂರು: ರಾಜ್ಯಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಸಿಬ್ಬಂದಿಯೊಬ್ಬರು ಮತ ಹಾಕುಲು ಬರುವಂತೆ ಶಾಸಕ ಅಂಬರಿಶ್ ಗೆ ಕರೆ ಮಾಡಿದ್ದಾರೆ.

    ಮೂರ್ನಾಲ್ಕು ಬಾರಿ ಫೋನ್ ಮಾಡಿದ್ರೂ ಅಂಬರೀಶ್ ಕರೆ ಸ್ವೀಕರಿಸಲಿಲ್ಲ. ಅದ್ರೂ ಬಿಡದೆ ನಿರಂತರವಾಗಿ ಸಿಬ್ಬಂದಿ ಕರೆ ಮಾಡಿದ್ರು. ಹೀಗಾಗಿ ಐದನೇ ಬಾರಿ ಕರೆ ಸ್ವೀಕರಿಸಿದ ಅಂಬಿ, ತನ್ನ ಸ್ಟೈಲ್ ನಲ್ಲಿಯೇ ಡೈಲಾಗ್ ಹೊಡೆದಿದ್ದಾರೆ. ಈಗ ಸ್ನಾನಕ್ಕೆ ಹೊರಟಿದ್ದೇನೆ ಇರ್ಲಾ ಅಂತ ಹೇಳಿದ್ದಾರೆ.


    ಸಂಜೆ 4 ಗಂಟೆಯವರೆಗೆ ಟೈಮ್ ಅಯ್ತೆ ಅಂತ ಹೇಳುವ ಮೂಲಕ ಕರೆ ಮಾಡಿದ ಕೆಪಿಸಿಸಿ ಸಿಬ್ಬಂದಿಯನ್ನು ನಯವಾಗೇ ಗದರಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ವಿಧಾನಸೌಧದ ಮೊದಲನೇ ಮಹಡಿಯ ಸಮಿತಿ ಕೊಠಡಿಯಲ್ಲಿ ಬೆಳಗ್ಗೆ 9 ರಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ. ಸಂಜೆ ನಾಲ್ಕರ ನಂತರ ಮತ ಎಣಿಕೆ ನಡೆಯಲಿದ್ದು, ಸಂಜೆ 6 ಗಂಟೆಯೊಳಗೆ ಫಲಿತಾಂಶ ಹೊರಬೀಳಲಿದೆ. ಮೂರು ಪಕ್ಷಗಳಿಂದ ಐವರು ಅಖಾಡದಲ್ಲಿದ್ದಾರೆ. ಕಾಂಗ್ರೆಸ್‍ನಿಂದ ಹನುಮಂತಯ್ಯ, ನಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್. ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ಹಾಗೂ ಜೆಡಿಎಸ್‍ನಿಂದ ಬಿ.ಎಂ. ಫಾರೂಕ್ ಕಣದಲ್ಲಿದ್ದಾರೆ.

  • ರಾಜ್ಯಸಭೆ ಚುನಾವಣೆ ಮತದಾನದ ವೇಳೆ ಹೈಡ್ರಾಮಾ- ಎಲೆಕ್ಷನ್ ನಿಲ್ಲಿಸಿ ಎಂದು ರೇವಣ್ಣ ಗಲಾಟೆ

    ರಾಜ್ಯಸಭೆ ಚುನಾವಣೆ ಮತದಾನದ ವೇಳೆ ಹೈಡ್ರಾಮಾ- ಎಲೆಕ್ಷನ್ ನಿಲ್ಲಿಸಿ ಎಂದು ರೇವಣ್ಣ ಗಲಾಟೆ

    ಬೆಂಗಳೂರು: ರಾಜ್ಯಸಭೆ ಚುನಾವಣೆ ಮತದಾನದ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು, ಮತದಾನ ಕೇಂದ್ರದಲ್ಲಿ ಗದ್ದಲ, ಗಲಾಟೆ ಉಂಟಾಗಿದೆ.

    ಎಲೆಕ್ಷನ್ ನಿಲ್ಲಿಸಿ ಎಂದು ಜೆಡಿಎಸ್ ಮುಖಂಡ ಹೆಚ್‍ಡಿ ರೇವಣ್ಣ ಗಲಾಟೆ ಮಾಡಿದ್ದಾರೆ. ರಾಜ್ಯಸಭಾ ಚುನಾವಣಾಧಿಕಾರಿ ಮೂರ್ತಿ ವಿರುದ್ಧ ರೇವಣ್ಣ ಗರಂ ಆಗಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರಿಗೆ ಎರಡು ಬಾರಿ ಮತದಾನ ಅವಕಾಶ ಕೊಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಂಚನಸೂರ್ ಅವರು ಮೊದಲ ಬಾರಿ ಮತಪತ್ರ ತೆಗೆದುಕೊಂಡಾದ ತಪ್ಪು ತಪ್ಪಾಗಿ ನಮೂದಿಸಿದ್ದರು. ಹೀಗಾಗಿ ಎರಡನೇ ಬ್ಯಾಲೆಟ್ ಪೇಪರ್ ಕೊಟ್ಟಿದ್ದರಿಂದ ಗಲಾಟೆ ನಡೆದಿದೆ.

    ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಂ.ಫಾರೂಖ್ ಹಾಗೂ ರಮೇಶ್ ಬಾಬು ಗಲಾಟೆ ಮಾಡಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಏಜೆಂಟ್ ಆಗಿದ್ರೆ ನೀವು ಪಾರ್ಟಿ ಸೇರಿಕೊಳ್ಳಿ ಎಂದು ರೇವಣ್ಣ ಗರಂ ಆಗಿದ್ದು, ನನಗೆ ಬೆದರಿಕೆ ಹಾಕಬೇಡಿ ಎಂದು ಮೂರ್ತಿ ಅವರು ಕೂಡ ವಾಗ್ವಾದ ನಡೆಸಿದ್ದಾರೆ.

    ಚಿಂಚನಸೂರು ಬೆನ್ನಲ್ಲೇ ಕಾಗೋಡು ತಿಮ್ಮಪ್ಪ ಕೂಡ ಇದೇ ರೀತಿ ಎಡವಟ್ಟು ಮಾಡಿದ್ದು, ಬೇರೆ ಅಭ್ಯರ್ಥಿಯ ಗುರುತಿಗೆ ಸೀಲ್ ಹಾಕಿದ್ದಾರೆ. ಕಾಂಗ್ರೆಸ್ ಏಜೆಂಟ್ ಇದನ್ನ ಗಮನಿಸಿ ಕಾಗೋಡು ತಿಮ್ಮಪ್ಪ ಅವರ ಗಮನಕ್ಕೆ ತಂದಿದ್ದು, ಮತ್ತೆ ಅವರಿಗೆ ಬೇರೆ ಬ್ಯಾಲೆಟ್ ಪೇಪರ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಿಲ್ಲಿಸಿ ಎಂದು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.

  • ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಎಲೆಕ್ಷನ್

    ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಎಲೆಕ್ಷನ್

    – ಉತ್ತರಪ್ರದೇಶದಲ್ಲಿ ಜೇಟ್ಲಿ ಸ್ಪರ್ಧೆ

    ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಇವತ್ತು ಮತದಾನ ನಡೆಯಲಿದೆ. ವಿಧಾನಸೌಧದ ಮೊದಲನೇ ಮಹಡಿಯ ಸಮಿತಿ ಕೊಠಡಿಯಲ್ಲಿ ಬೆಳಗ್ಗೆ 9 ರಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ.

    ಸಂಜೆ ನಾಲ್ಕರ ನಂತರ ಮತ ಎಣಿಕೆ ನಡೆಯಲಿದ್ದು, ಸಂಜೆ 6 ಗಂಟೆಯೊಳಗೆ ಫಲಿತಾಂಶ ಹೊರಬೀಳಲಿದೆ. ಮೂರು ಪಕ್ಷಗಳಿಂದ ಐವರು ಅಖಾಡದಲ್ಲಿದ್ದಾರೆ. ಕಾಂಗ್ರೆಸ್‍ನಿಂದ ಹನುಮಂತಯ್ಯ, ನಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್. ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ಹಾಗೂ ಜೆಡಿಎಸ್‍ನಿಂದ ಬಿ.ಎಂ. ಫಾರೂಕ್ ಕಣದಲ್ಲಿದ್ದಾರೆ.

     

    ರಾಜ್ಯಸಭಾ ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗೆ 45 ಮತ ಬೇಕು. ಕಾಂಗ್ರೆಸ್‍ನ ಇಬ್ಬರು ಅಭ್ಯರ್ಥಿಗಳ ಗೆಲುವು ಪಕ್ಕಾ ಆಗಿದೆ. ಅಲ್ಲದೆ ಬಿಜೆಪಿಯ ರಾಜೀವ್ ಚಂದ್ರಶೇಖರ್ ಗೆಲುವು ಬಹುತೇಕ ಖಚಿತ ಎನ್ನಲಾಗ್ತಿದೆ. ಆದ್ರೆ ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್‍ನ ಜಿ.ಸಿ.ಚಂದ್ರಶೇಖರ್ ಮತ್ತು ಜೆಡಿಎಸ್‍ನ ಫಾರೂಕ್ ನಡುವೆ ಪೈಪೋಟಿ ಇದೆ. ಕಾಂಗ್ರೆಸ್ ಪಕ್ಷೇತರ ಮತಗಳು, ಜೆಡಿಎಸ್‍ನ 7 ಬಂಡಾಯ ಶಾಸಕರ ಮತಗಳನ್ನ ನೆಚ್ಚಿಕೊಂಡಿದ್ದು, ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ.

    ಉತ್ತರಪ್ರದೇಶದಲ್ಲೂ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, ಕೇಂದ್ರ ಸಚಿವ ಅರುಣ್ ಜೇಟ್ಲಿ ಕಣದಲಿದ್ದಾರೆ. ಇಲ್ಲಿ 10 ಸ್ಥಾನಗಳು ಬೇಕಾಗಿದ್ದು 11 ಮಂದಿ ಕಣದಲ್ಲಿದ್ದಾರೆ.

  • ವಾಜಪೇಯಿ ಕರೆದು ರಾಜಕೀಯದಲ್ಲಿ ಸ್ಥಾನಮಾನ ಕೊಟ್ಟಿದ್ದನ್ನೂ ನಿರಾಕರಿಸಿದ್ದೆ- ವಿಜಯ ಸಂಕೇಶ್ವರ್

    ವಾಜಪೇಯಿ ಕರೆದು ರಾಜಕೀಯದಲ್ಲಿ ಸ್ಥಾನಮಾನ ಕೊಟ್ಟಿದ್ದನ್ನೂ ನಿರಾಕರಿಸಿದ್ದೆ- ವಿಜಯ ಸಂಕೇಶ್ವರ್

    ಹುಬ್ಬಳ್ಳಿ: ಮಾಜಿ ಪ್ರಧಾನಿ ವಾಜಪೇಯಿ ಅವರು ಕರೆದು ನನಗೆ ರಾಜಕೀಯದಲ್ಲಿ ಒಂದು ಸ್ಥಾನಮಾನ ಕೊಟ್ಟರು. ಆದ್ರೆ ನಾನು ಅದನ್ನೂ ನಿರಾಕರಿಸಿದ್ದೆ. ಕಳೆದ ಬಾರಿ ಕೂಡಾ ನನಗೆ ಎಂಎಲ್‍ಸಿಗೆ ಟಿಕೆಟ್ ಕೊಟ್ಟಾಗ ಕೂಡಾ ನಾನೇ ಬೇಡವೆಂದಿದ್ದೆ ಅಂತ ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ ಸಂಕೇಶ್ವರ್ ಹೇಳಿದ್ದಾರೆ.

    ನಗರದ ವಿಆರ್ ಎಲ್ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ರಾಜ್ಯಸಭಾ ಟಿಕೆಟ್ ಕೊಡಿ ಎಂದು ಯಾರಲ್ಲೂ ಕೇಳಿಲ್ಲ. ಆದ್ರೆ ಬಿಎಸ್‍ವೈ ನನಗೆ ಟಿಕೆಟ್ ಕೊಡುವುದಾಗಿ ಹೇಳಿ ಕರೆ ಮಾಡಿದ್ದರು. ನಿಮ್ಮ ಟಿಕೆಟ್ ಶಾರ್ಟ್ ಲಿಸ್ಟ್ ಆಗಿದೆ. ಹೀಗಾಗಿ ನೀವು ತಯಾರಾಗಿ ಅಂತ ಜಗದೀಶ್ ಶೆಟ್ಟರ್ ಕರೆ ಮಾಡಿ ಹೇಳಿದ್ದರು ಎಂದು ತಿಳಿಸಿದರು.

    ಕಳೆದ 56 ವರ್ಷದಿಂದ ನಾನು ಸಂಘ ಪರಿವಾರ ಬಿಜೆಪಿಯಲ್ಲಿ ಇದ್ದೇನೆ. ನಾನು ಹಿಂದೂವಾಗಿರುವ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೋಗುತ್ತೆನೆ. ದೇವರಲ್ಲಿ ಎಂದೂ ನಾನೇನು ಕೇಳಿಲ್ಲ. ಹಾಗೆಯೇ ಪಕ್ಷದಿಂದ ಕೂಡ ಏನನ್ನೂ ಕೇಳಿಲ್ಲ. ನನ್ನ ಇತಿ ಮಿತಿಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ಜೊತೆ ಹಲವಾರು ಜನ ಸಂಪರ್ಕದಲ್ಲಿ ಇದ್ದಾರೆ. ರಾಜೀವ್ ಚಂದ್ರಶೇಖರ್ ಒಬ್ಬ ಒಳ್ಳೆಯ ರಾಜಕಾರಣಿ. ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಕೆಲವರು ರಾಜೀವ್ ಚಂದ್ರಶೇಖರ್ ಕನ್ನಡಿಗ ವ್ಯಕ್ತಿಯಲ್ಲ ಎಂದಿದ್ದಾರೆ. ಆದ್ರೆ ಅವರು ಕನ್ನಡಿಗರಾಗಿದ್ದು ಅವರು ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ ಎಂದರು.

    ನನ್ನ ಉದ್ದೇಶ ದೇಶ ಮತ್ತು ರಾಜ್ಯದ ಕಾಂಗ್ರೆಸ್ ಮುಕ್ತ ಮಾಡುವುದು. ಬಿಜೆಪಿಯಿಂದ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಾ ಮುಂದೆ ಕೆಲಸ ಮಾಡುತ್ತೇನೆ. ಮುಖ್ಯಮಂತಿ ಸಿದ್ದರಾಮಯ್ಯನವರು ತಮ್ಮ ಪ್ರತಿ ಮಾತಿನಲ್ಲೂ ಬಿಜೆಪಿ ಅವರು ಜೈಲಿಗೆ ಹೋಗಿ ಬಂದವರು ಎನ್ನುತ್ತಾರೆ. ಇಂದಿರಾಗಾಂಧಿ ಕೂಡ ಜೈಲಿಗೆ ಹೋಗಿ ಬಂದವರು. ಇದನ್ನು ಕಾಂಗ್ರೆಸ್ ಮರೆಯಬಾರದು. ನಾನು ಬಿಎಸ್‍ವೈ ಅವರನ್ನು 30 ವರ್ಷದಿಂದ ನೋಡಿದ್ದು ಅವರು ಕ್ರಿಮಿನಲ್ ವ್ಯಕ್ತಿಯಲ್ಲ ಅವರು ವಿವರಿಸಿದರು.

    ಮಹದಾಯಿ ಮತ್ತು ಕಳಸಾ ಬಂಡೂರಿ ವಿಚಾರದ ಕುರಿತು ಮಾತನಾಡಿದ ಅವರು, ದೇಶದ ಮತ್ತು ರಾಜ್ಯದ ಸಂಸ್ಕೃತಿಯ ಬಗ್ಗೆ ಸೋನಿಯಾ ಗಾಂಧಿ ಅವರಿಗೆ ಗೊತ್ತಿಲ್ವ. ಹೀಗಾಗಿ ಗೋವಾ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ರಾಜ್ಯಕ್ಕೆ ನೀರು ಬಿಡದಂತೆ ಹೇಳಿದ್ದಾರೆ. ಅವರ ತಪ್ಪಿನಿಂದ ಇಂದು ಈ ಸಮಸ್ಯೆ ದೊಡ್ಡದಾಗಿದೆ. ಮುಂದಿನ ದಿನಗಳಲ್ಲಿ ಮಹದಾಯಿ ಸಮಸ್ಯೆ ಬಗೆಹರಿಯತ್ತೆ. ಆ ನಂಬಿಕೆ ನಮಗಿದೆ ಎಂದರು.

    ಲೋಕಾಯುಕ್ತರ ಚೂರಿ ಇರಿತ ವಿಚಾರ ಕೇಳಿ ನಮಗೆ ಬಹಳ ಬೇಜಾರಾಯ್ತು. ನಮ್ಮ ಕುಟುಂಬಕ್ಕೂ ಬೆದರಿಕೆಯಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಚೂರಿ ಹಾಕುವ ವಿಚಾರ ಲಕ್ಷಾಂತರ ಜನರ ತಲೆಯಲ್ಲಿದೆ. ರಾಜ್ಯ ಸರ್ಕಾರ ಐಪಿಎಸ್ ಆಧಿಕಾರಿಗಳನ್ನು ಫುಟ್ಬಾಲ್ ರೀತಿ ಆಡಿಸುತ್ತಿದೆ ಅಂತ ವಾಗ್ದಾಳಿ ನಡೆಸಿದ್ರು.

    ಬಿಜೆಪಿಯನ್ನು ಕರ್ನಾಟಕದಲ್ಲಿ ಬೆಳೆಸಿದ ಧೀಮಂತ ನಾಯಕ ವೆಂಕಯ್ಯ ನಾಯ್ಡು. ಬಿಜೆಪಿ ನಮಗೆ ಕಲಿಸಿದ್ದು ಪಕ್ಷಸೇವೆ. ಭಾವನಾತ್ಮಕವಾಗಿ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹುನ್ನಾರ ನಡೆಸಿದೆ. ನಾನು ಲಿಂಗಾಯತ ಪ್ರಮುಖ ಮುಖಂಡ ಎಂದು ಎಲ್ಲೂ ಹೇಳಿಕೊಳ್ಳಲ್ಲ. ಸಿದ್ದರಾಮಯ್ಯ ಜಾತಿಯನ್ನು ಬಿಂಬಿಸುತ್ತಿದ್ದಾರೆ. ಶಶಿಕಲಾ ರೀತಿ ಇಂದಿರಾ ಗಾಂಧಿ ಕಂಬಿ ಎಣಿಸಿದ್ದರು. ಸಿದ್ದರಾಮಯ್ಯ ಅದನ್ನು ನೆನಪಿಸಿಕೊಳ್ಳಬೇಕು ಅಂತ ಅವರು ಹೇಳಿದ್ರು.

  • ಅಹ್ಮದ್ ಪಟೇಲ್ ಗೆಲ್ಲಿಸಿದ್ದಕ್ಕೆ ಡಿಕೆಶಿಗೆ ಹೈಕಮಾಂಡ್ ನಿಂದ ಬಂಪರ್ ಗಿಫ್ಟ್!

    ಅಹ್ಮದ್ ಪಟೇಲ್ ಗೆಲ್ಲಿಸಿದ್ದಕ್ಕೆ ಡಿಕೆಶಿಗೆ ಹೈಕಮಾಂಡ್ ನಿಂದ ಬಂಪರ್ ಗಿಫ್ಟ್!

    ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿಯ ಪ್ರತಿಷ್ಠೆ ಉಳಿಸಿದ ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ನಿಂದ ಭರ್ಜರಿ ಗಿಫ್ಟ್ ಸಿಗೋ ಸಾಧ್ಯತೆಗಳಿವೆ.

    ಅತ್ಯಂತ ಸಂಕಷ್ಟ ಸ್ಥಿತಿಯಲ್ಲಿಯೂ ಪಕ್ಷದ ಹಿತ ಕಾಯ್ದ ಪವರ್ಫುಲ್ ಮಿನಿಸ್ಟರ್ ನಿಷ್ಠೆಗೆ ಹೈಕಮಾಂಡ್, ಗುಜರಾತ್ ವಿಧಾನಸಭಾ ಚುನಾವಣೆಯ ಹೊಣೆಗಾರಿಕೆ ನೀಡಲು ತೀರ್ಮಾನಿಸಿದೆ. ಈಗಾಗಲೇ ಮೊದಲ ಸುತ್ತಿನ ಮಾತುಕತೆಯಲ್ಲಿ ಡಿಕೆಶಿ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂಬುವುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿ ಗೆ ಮಾಹಿತಿ ಲಭಿಸಿದೆ.

    ಅಹ್ಮದ್ ಪಟೇಲ್‍ಗೆ ರಾಜಕೀಯ ಮರು ಜೀವ ನೀಡಿದ ಡಿಕೆಶಿಗೆ ವಿಧಾನಸಭೆಯಲ್ಲೂ ಮರು ಜೀವ ನೀಡುವ ಜವಾಬ್ದಾರಿ ಹೊರಿಸಲಿದ್ದಾರೆ. ಒಟ್ಟಿನಲ್ಲಿ ಅಹ್ಮದ್ ಪಟೇಲ್‍ಗೆ ರಾಜಕೀಯ ಮರುಜೀವ ನೀಡಿದ `ಚಾಣಾಕ್ಷ’ ಡಿಕೆಶಿಗೆ ಶೀಘ್ರವೇ ಬಂಪರ್ ಬಹುಮಾನ ಸಿಗೋ ಸಾಧ್ಯತೆಗಳಿವೆ ಎನ್ನಲಾಗಿದೆ.

    ಚುನಾವಣಾ ಫಲಿತಾಂಶದ ಬಗ್ಗೆ ಡಿಕೆಶಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ಗುಜರಾತ್ ಶಾಸಕರನ್ನು ಕಳಿಸಿಕೊಡ್ತಾ ಇದ್ದೀವಿ ಅಂದ್ರು. ನಾನು ಏನೇ ಕಷ್ಟ ಇದ್ದರೂ ಅದಕ್ಕೆ ಒಪ್ಪಿಕೊಂಡೆ. ನನಗೆ ಪಕ್ಷ ಮುಖ್ಯ. ಹೀಗಾಗಿ ವರಿಷ್ಠರ ಮಾತಿಗೆ ಬೆಲೆಕೊಟ್ಟು ಸಹಾಯ ಮಾಡಿದೆ. ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಆದ್ರೆ ನಮಗೆ 46 ಮತ ಬರಬೇಕು ಅನ್ನೋ ಲೆಕ್ಕವಿತ್ತು. ಆದ್ರೆ ಈಗ 45 ಮತ ಬಂದಿದೆ ಅನ್ನೋದು ಕೇಳಿ ಬರುತ್ತಿದೆ. ಇದರಿಂದ ಒಂದು ಸಣ್ಣ ಅಸಮಾಧಾನವಿದೆ. ಹಿಗಾಗಿ ನಮಗೆ 45 ಮತ ಸಾಕು ಅಂತ ಹೇಳಿದ್ದರು.

    ಮತದಾನ ಮಾಡುವಾಗ ಸಾಕಷ್ಟು ಹೈ ಡ್ರಾಮ ನಡೆದ್ರೂ ವಿಜಯ ಪತಾಕೆಯನ್ನ ಕಾಂಗ್ರೆಸ್ ತನ್ನ ಮುಡಿಗೇರಿಸಿಕೊಂಡಿದೆ. ಇನ್ನು ರೆಸಾರ್ಟ್ ರಾಜಕಾರಣದ ಹೊಣೆ ಹೊತ್ತಿದ್ದ ಡಿಕೆ ಶಿವಕುಮಾರ್ ಮುಖದಲ್ಲಿ ಮಂದಹಾಸ ಮೂಡಿದೆ. ಹೈ ಕಮಾಂಡ್ ಹೊರಿಸಿದ್ದ ಹೊಣೆಯನ್ನ ಡಿಕೆಶಿ ಅಚ್ಚು ಕಟ್ಟಾಗಿ ನಿಭಾಯಿಸಿದ್ದು, ಅಹಮದ್ ಪಟೇಲ್ ಗೆಲುವಿಗೆ ಡಿಕೆ ಶಿವಕುಮಾರ್ ಕೂಡ ಪರೋಕ್ಷವಾಗಿ ಕಾರಣಕರ್ತರಾಗಿದ್ದಾರೆ.

  • ಗುಜರಾತ್ ನಲ್ಲಿ ಕಾಂಗ್ರೆಸ್ ನ ಒಂದೇ 1 ಮತ ಹೆಚ್ಚು-ಕಮ್ಮಿಯಾದ್ರೆ ಮೋದಿ ಉತ್ತರಿಸಬೇಕು: ಎಚ್ ಕೆ ಪಾಟೀಲ್

    ಗುಜರಾತ್ ನಲ್ಲಿ ಕಾಂಗ್ರೆಸ್ ನ ಒಂದೇ 1 ಮತ ಹೆಚ್ಚು-ಕಮ್ಮಿಯಾದ್ರೆ ಮೋದಿ ಉತ್ತರಿಸಬೇಕು: ಎಚ್ ಕೆ ಪಾಟೀಲ್

    ಧಾರವಾಡ: ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಒಂದೇ ಒಂದು ಮತ ಹೆಚ್ಚು ಕಮ್ಮಿಯಾದ್ರೆ ಅದಕ್ಕೆ ಪ್ರಧಾನಿ ಮೋದಿ ದೇಶದ ಜನತೆಗೆ ಉತ್ತರ ನೀಡಬೇಕಾಗುತ್ತೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.

    ಧಾರವಾಡದಲ್ಲಿ ತಾಲೂಕು ಸೇವಾ ಸಂಘಗಳ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಹಬ್ಬಗಳಿದ್ದಾಗ ಅದರಲ್ಲೂ ರಾಜ್ಯಸಭೆಗೆ ಗುಜರಾತ್ ಚುನಾವಣೆ ಇದ್ದಾಗ ಐಟಿ ರೇಡ್ ಆಗಿದ್ದು ಸರಿಯಲ್ಲ. ಐಟಿ ಸಂಸ್ಥೆ ಈ ರೀತಿ ಮಾಡೊದ್ರಿಂದ ತನ್ನ ವಿಶ್ವಾಸ ಕಳೆದುಕೊಂಡಿದೆ. ಒಂದು ತಿಂಗಳ ಮುಂಚೆಯೇ ಐಟಿ ದಾಳಿಗೆ ತಯಾರಿ ಮಾಡಿಕೊಂಡಿದ್ದರೆ ಗುಜರಾತ್ ಶಾಸಕರು ಇಲ್ಲಿಗೆ ಬರುವ ಮುನ್ನವೇ ದಾಳಿ ನಡೆಸಬಹುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

    ರಾಜ್ಯದಲ್ಲಿ ಬರಗಾಲ ಇರುವ ಹಿನ್ನೆಲೆ ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮುಂದಿನ ವಾರದಲ್ಲೇ ಮೋಡ ಬಿತ್ತನೆ ಆರಂಭ ಮಾಡಲಾಗುವುದು. ವಿದೇಶದಿಂದ ಮೂರು ರೆಡಾರ್ ತರಿಸಿಕೊಳ್ಳಲಾಗಿದ್ದು, ಅವುಗಳನ್ನ ಬೆಂಗಳೂರು, ಗದಗ ಹಾಗೂ ಶಹಾಪೂರದಲ್ಲಿ ಅಳವಡಿಸಲಾಗುವದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು.

     

  • ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‍ನಿಂದ ಅಮಿತ್ ಶಾ ಸ್ಪರ್ಧೆ

    ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‍ನಿಂದ ಅಮಿತ್ ಶಾ ಸ್ಪರ್ಧೆ

    ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‍ನಿಂದ ಸ್ಪರ್ಧಿಸಲಿದ್ದಾರೆ ಎಂದು ಬುಧವಾರದಂದು ಬಿಜೆಪಿ ಹೇಳಿದೆ.

    ರಾಜ್ಯದಲ್ಲಿ 3 ಸ್ಥಾನಗಳಿಗೆ ಆಗಸ್ಟ್ 8ರಂದು ಚುನಾವಣೆ ನಡೆಯಲಿದ್ದು, ದೊಡ್ಡ ಬಹುಮತ ಹೊಂದಿರುವ ಬಿಜೆಪಿ ಸುಲಭವಾಗಿ ಎರಡು ಸ್ಥಾನಗಳನ್ನ ಗೆಲ್ಲಲಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಅವಧಿ ಮುಂದಿನ ತಿಂಗಳು ಅಂತ್ಯಗೊಳ್ಳಲಿದ್ದು ಎರಡನೇ ಸ್ಥಾನಕ್ಕಾಗಿ ಬಿಜೆಪಿ ಸ್ಮೃತಿ ಇರಾನಿ ಅವರನ್ನ ಮತ್ತೊಮ್ಮೆ ನಾಮನಿರ್ದೇಶನ ಮಾಡಲಿದೆ. ಅಮಿತ್ ಶಾ ಇಂದು ಗುಜರಾತ್‍ಗೆ ತೆರಳಲಿದ್ದು, ಶುಕ್ರವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

    ಬಿಜೆಪಿ ಇನ್ನೂ ಮೂರನೇ ಸ್ಥಾನಕ್ಕೆ ಅಭ್ಯರ್ಥಿಯನ್ನ ಘೋಷಿಸಿಲ್ಲ. ಮೂಲಗಳ ಪ್ರಕಾರ ಪಕ್ಷವು ಬಲ್ವಂತ್‍ಸಿಂಗ್ ರಜ್‍ಪುತ್ ಅವರಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬಲವಂತ್‍ಸಿಂಗ್ ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದು, ಪಕ್ಷ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯ ರಾಜಕೀಯ ಸಲಹೆಗಾರರಾದ ಅಹ್ಮದ್ ಪಟೇಲ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

  • ರಾಜ್ಯಸಭಾ ಸದಸ್ಯರಾಗಿದ್ದ ವೇಳೆ  ರಾಮನಾಥ್ ಕೋವಿಂದ್ ಸಾಧನೆ ಏನು?

    ರಾಜ್ಯಸಭಾ ಸದಸ್ಯರಾಗಿದ್ದ ವೇಳೆ ರಾಮನಾಥ್ ಕೋವಿಂದ್ ಸಾಧನೆ ಏನು?

    ನವದೆಹಲಿ: ಎನ್‍ಡಿಎ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿದೆ. ಉತ್ತಮ ಮಾತುಗಾರ, ಆಡಳಿತ ಜ್ಞಾನ, ರಾಜಕೀಯ ಜ್ಞಾನ, ರಾಜ್ಯಸಭೆಯ ಅನುಭವ ಇರುವ ಹಿನ್ನೆಲೆಯಲ್ಲಿ ಕೋವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ.

    ಬಿಜೆಪಿ ಆಯ್ಕೆ ಮಾಡಿದ್ದರೂ ರಾಜ್ಯಸಭೆಯಲ್ಲಿ ರಾಮನಾಥ್ ಕೋವಿಂದ್ ಅವರ ಸಾಧನೆ ಏನು ಎನ್ನುವ ಪ್ರಶ್ನೆ ನಿಮ್ಮಲ್ಲಿ ಮೂಡುವುದು ಸಹಜ. ಹೀಗಾಗಿ ಕೋವಿಂದ್ ಅವರು ರಾಜ್ಯಸಭೆಯ ಸಂಸದರಾಗಿದ್ದಾಗ ಅವರ ಸಾಧನೆ ಏನು ಎನ್ನುವುದಕ್ಕೆ ಕೆಲ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

    ಹಾಜರಿ: ಬಿಹಾರ ಮೂಲದ ರಾಮನಾಥ್ ಕೋವಿಂದ್ 1994 ರಿಂದ 2000 ಹಾಗೂ 2000 ರಿಂದ 2006 ದವರೆಗೆ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆ ಆಗಿದ್ದರು. 12 ವರ್ಷಗಳ ಸಂಸತ್ ಅವಧಿಯಲ್ಲಿ ನಡೆದ ಕಲಾಪಗಳಿಗೆ ಇವರು 87% ರಷ್ಟು ಹಾಜರಿ ಹಾಕಿದ್ದಾರೆ. ಮೊದಲನೆ ಅವಧಿಯಲ್ಲಿ 89% ಹಾಗೂ ಎರಡನೇ ಅವಧಿಯಲ್ಲಿ 85% ರಷ್ಟು ಹಾಜರಿ ಹಾಕಿರುವುದು ಇವರ ವಿಶೇಷತೆ. ಒಟ್ಟು 44 ಅಧಿವೇಶನಕ್ಕೆ ಹಾಜರಾಗಿದ್ದು ಕೋವಿಂದ್ 14 ಅಧಿವೇಶನಗಳಿಗೆ 100% ರಷ್ಟು ಹಾಜರಿ ಹಾಕಿದ್ದಾರೆ. 28 ಅಧಿವೇಶನಗಳಲ್ಲಿ 90% ರಷ್ಟು ಹಾಜರಿ ಹಾಕಿದ್ದಾರೆ.

    283 ಪ್ರಶ್ನೆಗಳು: 12 ವರ್ಷಗಳಲ್ಲಿ ಕೋವಿಂದ್ 34 ಸಚಿವಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 283 ಪ್ರಶ್ನೆಗಳನ್ನು ಕೇಳಿದ್ದಾರೆ. ಹಣಕಾಸು ಮತ್ತು ರೈಲ್ವೇ ಇಲಾಖೆಗೆ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಾರೆ. ಇನ್ನೂ 10 ಕ್ಕಿಂತ ಹೆಚ್ಚು ಪ್ರಶ್ನೆಗಳನ್ನು 12 ಇಲಾಖೆಗಳಿಗೆ ಕೇಳಿದ್ದಾರೆ.

    ಹಣಕಾಸು ಇಲಾಖೆಗೆ ಕೇಳಿದ ಪ್ರಶ್ನೆಗಳ ಪೈಕಿ, ಬ್ಯಾಂಕ್ ಗಳಲ್ಲಿ ಸಫಾಯಿ ಕರ್ಮಚಾರಿಗಳ ನೇಮಕ, 1000 ರೂ. ನೋಟ್‍ನಲ್ಲಿ ಡಾ.ಅಂಬೇಡ್ಕರ್‍ರವರ ಭಾವಚಿತ್ರವನ್ನು ಪ್ರಕಟಿಸುವ ಬಗ್ಗೆ, ಕಪ್ಪು ಹಣವನ್ನು ನಿಗ್ರಹಿಸಲು ತೆಗೆದುಕೊಂಡ ಕ್ರಮ, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಎಸ್‍ಸಿ/ಎಸ್‍ಟಿ ಸದಸ್ಯರನ್ನು ನಾಮನಿರ್ದೇಶನ ಮಾಡುವ ಕುರಿತಂತೆ ಕೇಳಿದ್ದಾರೆ.

    ಹೆಚ್ಚಿನ ಪ್ರಶ್ನೆಗಳು ರೈಲ್ವೆ ಸಚಿವರಿಗೆ ಮತ್ತು ನಿಲ್ದಾಣಗಳ ಬಗ್ಗೆ ಕೇಳಿದ್ದಾರೆ. ಅದಷ್ಟೇ ಅಲ್ಲದೆ ಉತ್ತರ ಪ್ರದೇಶದಲ್ಲಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಲ್ಲಿ ಹಣಕಾಸು ದುರುಪಯೋಗವಾಗಿರುವುದರ ಬಗ್ಗೆ, ಎಸ್‍ಸಿ/ಎಸ್‍ಟಿ ಮತ್ತು ಎಎಸ್/ಎಸ್‍ಟಿ ವರ್ಗಗಳಲ್ಲಿ ಬರುವ ಉಳಿದ ಜಾತಿಗಳ ಅಭಿವೃದ್ಧಿ ಕಲ್ಯಾಣದ ಬಗ್ಗೆ ಸಮಾಜದ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೂ ಪ್ರಶ್ನೆಗಳನ್ನು ಕೇಳಿದ್ದಾರೆ. ಎಸ್‍ಸಿ ಮತ್ತು ಎಸ್‍ಟಿ ಅವರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಶ್ನೆಗಳನ್ನು 12 ವರ್ಷದ ಅವಧಿಯಲ್ಲಿ ಕೇಳಿದ್ದಾರೆ.

    ಉಲ್ಲೇಖ ಮತ್ತು ಭರವಸೆಗಳು: 12 ವರ್ಷದ ಅವಧಿಯಲ್ಲಿ ಅವರುÀ 5 ಬಾರಿ ವಿಶೇಷ ಪ್ರಕರಣಗಳನ್ನು ಪ್ರಸ್ತಾಪಿಸಿ ಸಂಸದರ ಗಮನವನ್ನು ಸೆಳೆದಿದ್ದಾರೆ. ಅವುಗಳಲ್ಲಿ ಬಿಹಾರ್‍ನ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಎಸ್‍ಸಿ ವರ್ಗದ ಸಾಲಿನಲ್ಲಿ ಬರುವ ತಂತಿ ಎಂಬ ಜಾತಿಯ ಬಗ್ಗೆ, ಬಿಹಾರ್‍ನ ಜೈಲಿನಲ್ಲಿ ಖೈದಿಗಳೊಂದಿಗೆ ತಪ್ಪಾಗಿ ನಡೆದುಕೊಳ್ಳುವುದು, ನೇಕಾರರ ಸಮಸ್ಯೆಗಳು ಹಾಗೂ ಟಿನ್ಸುಕಿಯಾದ ಗುಂಡಿನ ದಾಳಿಯ ಬಗ್ಗೆ ವಿಶೇಷವಾಗಿ ಅವರ ಮಾತಿನಲ್ಲಿ ಉಲ್ಲೇಖಿಸಿದ್ದಾರೆ.

    ಅವರು ಒಟ್ಟು ಏಳು ಭರವಸೆಗಳನ್ನು ಜನರಿಗೆ ನೀಡಿದ್ದು ಅದರಲ್ಲಿ ಆರು ಭರವಸೆಗಳನ್ನು ಈಡೇರಿಸಿದ್ದಾರೆ. ಎನ್‍ಡಿಎ ಸರ್ಕಾರದಲ್ಲಿ 2, ಬೇರೆ ಸರ್ಕಾರದಲ್ಲಿ ಉಳಿದ 4 ಭರವಸೆಗಳನ್ನು ಪೂರ್ಣಗೊಳಿಸಿದ್ದಾರೆ.

    ಚರ್ಚೆಗಳು: ರಾಮನಾಥ್ ಕೋವಿಂದ್‍ರವರು ಒಟ್ಟು 89 ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಎಂದು ರಾಜ್ಯಸಭಾ ವೆಬ್‍ಸೈಟ್ ಹೇಳಿದೆ. 16 ಸಂದರ್ಭಗಳಲ್ಲಿ ಹಲವಾರು ಸಮಿತಿಗಳ ಚರ್ಚೆಗಳಲ್ಲಿ ಭಾಗವಹಿಸಿದ್ದಾರೆ. 15 ಬಾರಿ ಇವರು ಉಲ್ಲೇಖ ಮಾಡಿರುವ ವಿಚಾರಗಳ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದರೆ, 14 ಸಂದರ್ಭಗಳಲ್ಲಿ ಕರಡು ಮಸೂದೆಯ ಚರ್ಚೆಗಳಲ್ಲಿ ಪಾಲ್ಗೊಂಡಿದ್ದಾರೆ. ಬಜೆಟ್ ವಿಚಾರವಾಗಿ 2 ಬಾರಿ ಚರ್ಚೆಯಲ್ಲಿ ಭಾಗವಹಿಸಿದ್ದರೆ, ಖಾಸಗಿ ಸದಸ್ಯರ ನಿರ್ಣಯಗಳು ಮತ್ತು ಮಸೂದೆಗಳ ವಿಚಾರವಾಗಿ ಚರ್ಚೆಗಳಲ್ಲಿ ಪಾಲ್ಗೊಂಡಿದ್ದಾರೆ.

    ಅನುದಾನ ಬಳಕೆ: 12 ವರ್ಷ ರಾಜ್ಯಸಭಾ ಸದಸ್ಯರಾಗಿ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ (ಎಂಪಿಎಲ್‍ಎಡಿ) ಅಡಿ 20 ಕೋಟಿ ಹಣ ರೂ. ಹಣ ಇವರಿಗೆ ಸಿಕ್ಕಿತ್ತು. ಸಿಕ್ಕಿದ ಅನುದಾನದಲ್ಲಿ 19.19 ಕೋಟಿ ರೂ. ಹಣವನ್ನು ಕೋವಿಂದ್‍ರವರು ಅಭಿವೃದ್ಧಿ ಕಾರ್ಯಗಳಿಗೆ ಬಳಸಿದ್ದಾರೆ. ಅನುದಾನ ನೀಡಿದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಖರ್ಚು ಮಾಡುವ ಮೂಲಕ ಪ್ರಾಮಾಣಿಕ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

    ಸಮಿತಿಯ ಸದಸ್ಯರಾಗಿ: ರಾಮನಾಥ್ ಕೋವಿಂದ್‍ರವರು 12 ವರ್ಷಗಳ ಅವಧಿಯಲ್ಲಿ ಹಲವಾರು ಸಮಿತಿಯ ಸದಸ್ಯರಾಗಿದ್ದಾರೆ, ಮುಖ್ಯವಾಗಿ ಪರಿಶಿಷ್ಟ ಜಾತಿ/ಪಂಗಡ ಕಲ್ಯಾಣ ಸಮಿತಿ, ಗೃಹ ವ್ಯವಹಾರದ ಸಮಿತಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಮಿತಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಮಿತಿ, ಕಾನೂನು ಮತ್ತು ನ್ಯಾಯ ಸಮಿತಿ, ರಾಜ್ಯಸಭಾ ಸಮಿತಿಯ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದರು.

    ಇದನ್ನೂ ಓದಿ:ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಚಾಲೆಂಜ್ ಎಸೆದು ಗೆದ್ದ ಅಮಿತ್ ಶಾ
    ಇದನ್ನೂ ಓದಿ :ರಾಮನಾಥ್ ಕೋವಿಂದ್‍ಗೆ ಇದೆ ಕಲಬುರಗಿಯ ನಂಟು: ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಮೋದಿ ಹೊಡೆದಿದ್ದು ಹೇಗೆ..?

    ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?