ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Kannada Rajyotsava Award) ಡಿಮ್ಯಾಂಡ್ ಹೆಚ್ಚಾದಂತೆ ಕಾಣ್ತಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪಡೆಯಲು ಸಾವಿರಾರು ಅರ್ಜಿಗಳು ಸಂದಾಯವಾಗಿವೆ.
ರಾಜಕೀಯ ನಾಯಕರು, ಸಂಘ-ಸಂಸ್ಥೆಗಳು, ಪಕ್ಷದ ಪ್ರಮುಖರಿಂದಲೂ ಪ್ರಶಸ್ತಿಗೆ ಹೆಸರುಗಳು ಶಿಫಾರಸು ಬಂದಿದೆ. ಜೊತೆಗೆ ಮಾಜಿ ಸಚಿವರು, ವಿವಿಧ ಕ್ಷೇತ್ರದ ಗಣ್ಯರು, ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಕೊಡುವಂತೆ ಮನವಿಗಳು ಬಂದಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸರ್ಕಾರದಿಂದ ಪ್ರಶಸ್ತಿಗೆ ಮಾನದಂಡ ಇದ್ದರೂ ಲಾಬಿಗೆ ಮಣೆ ಹಾಕೋದು ಅನ್ನೋ ಮಾತುಗಳು ಸಹ ಕೇಳಿಬರ್ತಿವೆ. ಇದನ್ನೂ ಓದಿ: 70 ವರ್ಷದ ಹೆರಿಗೆ ಆಸ್ಪತ್ರೆಗೆ ಬೀಗ: 3 ವರ್ಷಗಳಿಂದ ದುರಸ್ತಿ ಹೆಸರಿನಲ್ಲಿ ಕಾಮಗಾರಿ ವಿಳಂಬ!
ಮುಖ್ಯಾಂಶಗಳು:
* ಈ ಬಾರಿ 69 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ತೀರ್ಮಾನ.
* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ರಚನೆ.
* ಸಮಿತಿಯಿಂದ ಅರ್ಜಿಗಳ ಪರಿಶೀಲನೆ ಮಾಡಿ ಸಾಧಕರಿಗೆ ಪ್ರಶಸ್ತಿ ಕೊಡೋ ಚಾಲೆಂಜ್.
* ಪ್ರಶಸ್ತಿ ಪಡೆಯೋರು 60 ವರ್ಷ ಮೇಲ್ಪಟ್ಟಿರಬೇಕು. ಸಾಧಕರಾಗಿರಬೇಕು ಅನ್ನೋ ನಿಯಮ ಮಾಡಿರೋ ಸರ್ಕಾರ.
* ನಿಯಮದ ಪ್ರಕಾರ, ಪ್ರಾಮಾಣಿಕವಾಗಿ ಪ್ರಶಸ್ತಿ ಘೋಷಣೆ ಮಾಡೋದು ಸರ್ಕಾರಕ್ಕೆ ಚಾಲೆಂಜ್.
ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award) ಭಾಜನವಾಗಿದ್ದ ಮುಂಬೈನ ‘ಚಿಣ್ಣರ ಬಿಂಬ’ (Chinnara Bimba) ಸಾಂಸ್ಕೃತಿಕ ಸಂಸ್ಥೆ, ಕನ್ನಡ ರಾಜ್ಯೋತ್ಸವ ದಿನದಂದು (ಬುಧವಾರ) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಕನ್ನಡ ರಾಜ್ಯೋತ್ಸವ ದಿನದಂದು (ಬುಧವಾರ) ಬೆಂಗಳೂರಿನಲ್ಲಿ ಸಂಸ್ಥೆಯ ಪರವಾಗಿ ಪ್ರಕಾಶ್ ಭಂಡಾರಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ್ ಹಾಜರಿದ್ದರು.
ಮುಂಬೈನಂಥ ಜನನಿಬಿಡ ಮಹಾನಗರದಲ್ಲಿ ಆಧುನಿಕ ಜಗತ್ತಿನ ವೈಭವೋಪೇತ ದಿನಚರಿಗಳಲ್ಲಿ ಮುಳುಗಿ ಹೋಗಿರುವ, ಪಾಶ್ಚಿಮಾತ್ಯ ಜೀವನ ಶೈಲಿಯನ್ನು ಅನುಸರಿಸಿಕೊಂಡು ಬದುಕಿ ನಮ್ಮ ತನವನ್ನೇ ಕಳೆದುಕೊಳ್ಳುವ ಅಪಾಯದಿಂದ ಹೊರತರುವ ಬಹುದೊಡ್ಡ ಜವಾಬ್ದಾರಿಯನ್ನು ಕಳೆದ 21 ವರ್ಷಗಳಿಂದ ನಿಷ್ಠೆಯಿಂದ ನಿಭಾಯಿಸಿಕೊಂಡು ಬಂದಿರುವ ಸಂಸ್ಥೆ ಚಿಣ್ಣರ ಬಿಂಬ. ಇಲ್ಲಿ ಮಕ್ಕಳಿಗೆ ನಮ್ಮ ನಾಡಿನ ರೀತಿ-ನೀತಿ, ಕಟ್ಟುಕಟ್ಟಳೆ, ಧಾರ್ಮಿಕ ವಿಧಿ-ವಿಧಾನಗಳನ್ನು ಹೇಳಿಕೊಡುತ್ತಿದೆ. ಎಲ್ಲದಕ್ಕೂ ಮುಖ್ಯವಾಗಿ ನಮ್ಮ ಪುರಾತನ ಹಾಗೂ ಸನಾತನ ಸಂಸ್ಕೃತಿಯ ಎಳೆಎಳೆಯನ್ನು ಬಿಡಿಸಿ ಹೇಳಿ, ಈ ಮಕ್ಕಳು ಇವೆಲ್ಲವನ್ನೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಮಾಡಿ ನಾಳಿನ ಬಾಳಿನ ಭದ್ರ ಬುನಾದಿಗೆ ನಾಂದಿ ಹಾಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ತನ್ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸುತ್ತಿದೆ. ಇದನ್ನೂ ಓದಿ: ಮಕ್ಕಳಿಗೆ ಕನ್ನಡ ಭಾಷೆಯಲ್ಲೇ ಪರೀಕ್ಷೆ ಮಾಡುವಂತೆ ಪ್ರಧಾನಿಗೆ ಪತ್ರ ಬರೀತಿನಿ: ಸಿಎಂ
ಚಿಣ್ಣರ ಬಿಂಬವು ತನ್ನದೇ ಆದ ವಿಶಿಷ್ಟ ಚಟುವಟಿಕೆಗಳಿಂದಾಗಿ ಇಂದು ಹೊರನಾಡು ಮಹಾರಾಷ್ಟ್ರದಲ್ಲಿ ಮಾತ್ರವಲ್ಲ ಒಳನಾಡಾದ ಕರ್ನಾಟಕದಲ್ಲೂ ಮನೆಮಾತಾಗಿದೆ. 6 ರಿಂದ 14 ರ ವರೆಗಿನ ವಯಸ್ಸಿನ ಮಕ್ಕಳಿಗೆ ಯೋಗ್ಯ ತರಬೇತಿ, ಮಾರ್ಗದರ್ಶನ ದೊರಕಿದಲ್ಲಿ ಈ ಎಳೆಯರು ಯಾವ ಮಟ್ಟಕ್ಕೆ ಏರಬಹುದು? ಇವರ ಪ್ರತಿಭೆ ಯಾವ ಶಿಖರವನ್ನು ಮುಟ್ಟಬಹುದು ಎಂಬುದಕ್ಕೆ ಕಲಾ ಜಗತ್ತು ಚಿಣ್ಣರ ಬಿಂಬ. ಇದು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ವರ್ಗಾಯಿಸಲು ಗುರುತರವಾದ ಕಾಯಕದಲ್ಲಿ ತೊಡಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಭಾಷೆ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಆ ಎರಡೂ ಮುಖಗಳು ಚಿಣ್ಣರ ಬಿಂಬದಲ್ಲಿದೆ ಎಂದು ಹೆಮ್ಮೆಯಿಂದ ಹೇಳಬಹುದು.
ನಮ್ಮ ಮಕ್ಕಳಲ್ಲಿರುವ ಅಂತರ್ಗತ ಪ್ರತಿಭೆ, ಶಕ್ತಿ, ಸಾಮರ್ಥ್ಯಗಳ ಸಾಣೆ ಹಿಡಿದು ಅವರನ್ನು ಸಾಂಸ್ಕೃತಿಕ ನೆಲೆಯ ಮೂಲಕ ಒಗ್ಗೂಡಿಸುವ ಒಂದು ಅಪೂರ್ವ ಕಾರ್ಯ ಸಾಧನೆಯನ್ನು ‘ಚಿಣ್ಣರ ಬಿಂಬ’ ಮಾಡುತ್ತಿದೆ. ಇದರ ಕಾರ್ಯ ಚಟುವಟಿಕೆಗಳ ತ್ವರಿತ ಗತಿಯ ವೇಗೋತ್ಕರ್ಷಕ್ಕೆ ಒಂದು ಅರ್ಥದಲ್ಲಿ ಬೆರಗಾದರೆ, ಇನ್ನೊಂದರ್ಥದಲ್ಲಿ ಅಂದು ನಾವೆಲ್ಲಾ ಕಂಡಿದ್ದ ಕನಸು ಇಂದು ನನಸಾಗುತ್ತಿರುವುದಕ್ಕೆ ಆನಂದ ತುಂದಿಲರಾಗಿದ್ದೇವೆ. ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು: ಸಿಎಂ ಘೋಷಣೆ
ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸುತ್ತಾರೆ. ಅತ್ಯಂತ ಶಿಸ್ತುಬದ್ಧವಾಗಿ ನಡೆಯುವ ಈ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹೆಚ್ಚಾಗಿ ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿರುವ ಚಿಣ್ಣರ ಬಿಂಬದ ಮಕ್ಕಳು ಕನ್ನಡದಲ್ಲಿ ಸ್ಪಷ್ಟವಾಗಿ, ಸುಲಲಿತವಾಗಿ ಮಾತನಾಡುತ್ತಾರೆ. ಅಸ್ವಲಿತವಾಗಿ ಚರ್ಚಾ ಸ್ಪರ್ಧೆಯನ್ನು ಕೇಳುವುದೇ ಒಂದು ಕರ್ಣಾನಂದ. ಅವರೇ ಕಾರ್ಯಕ್ರಮ ನಿರೂಪಣೆ ಮಾಡುತ್ತಾರೆ ಎನ್ನುವುದು ಎಷ್ಟು ಆಶ್ಚರ್ಯವೋ ಅಷ್ಟೇ ಸತ್ಯ.
ಕುಮಾರಿ ಪೂಜಾ ಭಂಡಾರಿ ಸ್ಥಾಪಕಾಧ್ಯಕ್ಷೆ, ನೈನಾ ಪ್ರಕಾಶ್ ಭಂಡಾರಿ ಅವರು ಕಾರ್ಯಾಧ್ಯಕ್ಷರಾಗಿ ಸಾವಿರಾರು ಜನರ ಶ್ರಮದಿಂದ ಈ ಸಂಸ್ಥೆ ವರ್ಷದಿಂದ ವರ್ಷಕ್ಕೆ ಪ್ರವರ್ಧಮಾನವಾಗಿ ಬೆಳಗುವಂತೆ ಮಾಡಿದ್ದಾರೆ. ಯಾಕೆಂದರೆ ಮಕ್ಕಳು ಸಣ್ಣವರಿರುವಾಗಲೇ ಅವರಿಗೆ ಸತ್ಯ, ಪ್ರಾಮಾಣಿಕತೆ, ಮಾನವೀಯತೆ, ಹಿರಿಯರಿಗೆ ಗೌರವ ನೀಡುವ ರೀತಿ, ಕಿರಿಯರನ್ನು ಮಮತೆಯಿಂದ ನೋಡುವ ಪರಿ ಈ ಎಲ್ಲಾ ಅಂಶಗಳನ್ನು ತಿಳಿಯಪಡಿಸುವುದು ಅಗತ್ಯ. ಅಂತಹ ಮಹತ್ವವಾದ ಕಾರ್ಯವನ್ನು ಮಾಡುತ್ತಿರುವ ಚಿಣ್ಣರ ಬಿಂಬ, ಅದಕ್ಕೆ ಪೂರಕವಾದ ವಾತಾವರಣ ಹಾಗೂ ಹಿನ್ನೆಲೆಯನ್ನು ತನ್ನ ಶಿಬಿರಗಳಲ್ಲಿ ಮಾಡಿಕೊಡುತ್ತದೆ. ಇದನ್ನೂ ಓದಿ: ಕರ್ನಾಟಕ ಆಧುನಿಕ ಉದ್ಯಮದ ತೊಟ್ಟಿಲು – ರಾಜ್ಯೋತ್ಸವಕ್ಕೆ ಶುಭಕೋರಿದ ಮೋದಿ, ಸಿಎಂ
ಪ್ರಕಾಶ್ ಭಂಡಾರಿ ಅವರಂತಹ ಸದ್ಗುಣಿ ಮಾರ್ಗದರ್ಶಕರ ಸಮರ್ಥ ನಾಯಕತ್ವ, ಅವರ ದೂರದೃಷ್ಟಿ, ಚಿಣ್ಣರ ಬಹುದೊಡ್ಡ ಆಸ್ತಿಯಾಗಿದೆ. ಅವರು ಎಂದಿಗೂ ತಾನು ಸುಖಾಸೀನರಾಗಿ ಇತರರಲ್ಲಿ ಕೆಲಸ ಮಾಡಿಸಿದವರಲ್ಲ. ಹಿರಿಯ ಕಿರಿಯರೆನ್ನದೆ ಆಪ್ತವಾಗಿ ಸಮಾಲೋಚಿಸಿ ಪ್ರತಿಯೊಂದು ಹೆಜ್ಜೆಯನ್ನು ಇಡುತ್ತಿರುವ ಅವರ ಹೃದಯ ವೈಶಾಲ್ಯದಿಂದಲೇ ಇಂದು ಚಿಣ್ಣರ ಬಿಂಬ ಈ ಮಟ್ಟಕ್ಕೆ ಏರಿದೆ. ಸಂಸ್ಥೆಯ ಕಾರ್ಯವೈಖರಿ ಕರ್ನಾಟಕ ಸರ್ಕಾರದ ಗಮನ ಸೆಳೆದು ಅರ್ಹವಾಗಿ ಈ ರಾಜ್ಯೋತ್ಸವದ ಗರಿ ಮುಡಿಗೇರಿಸಿಕೊಂಡಿದೆ.
ಕೊಪ್ಪಳ: ರಾಜ್ಯ ಸರ್ಕಾರ ಘೋಷಿಸಿದ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ( Rajyotsava Award) ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಪಬ್ಲಿಕ್ ಹೀರೋ (PUBLiC Hero) ಸೇರಿದಂತೆ ಕೊಪ್ಪಳ ಜಿಲ್ಲೆಯ ಮೂವರು ಸಾಧಕರು ಸ್ಥಾನ ಪಡೆದಿದ್ದಾರೆ.
ಯಕ್ಷಗಾನ/ಬಯಲಾಟ ವಿಭಾಗದಲ್ಲಿ ಕೊಪ್ಪಳ (Koppala) ತಾಲೂಕಿನ ಮೋರನಾಳ ಗ್ರಾಮದ ತೊಗಲು ಬೊಂಬೆ ಆಟದ ಕಲಾವಿದ ಕೇಶಪ್ಪ ಶಿಳ್ಳಿಕ್ಯಾತರ್, ಜಾನಪದ ವಿಭಾಗದಲ್ಲಿ ಕಾರಟಗಿ ತಾಲೂಕು ಸಿದ್ದಾಪೂರ ಗ್ರಾಮದ ಹಗಲುವೇಷ ಕಲಾವಿದ ವಿಭೂತಿ ಗುಂಡಪ್ಪ ಹಾಗೂ ಸಮಾಜ ಸೇವೆ ವಿಭಾಗದಲ್ಲಿ ಕೊಪ್ಪಳ ತಾಲೂಕಿನ ಕುಣಿಕೇರಿ ಗ್ರಾಮದ ಮಹಾದಾನಿ ಹುಚ್ಚಮ್ಮ ಬಸಪ್ಪ ಚೌದರಿ (Hucchamma Basappa Chowdry) ಅವರ ಹೆಸರು ಪ್ರಕಟಿಸಿದೆ.
ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿರದ ಹುಚ್ಚಮ್ಮ ಅವರನ್ನು ಸರ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷವಾಗಿದೆ. ತಮ್ಮ ಬದುಕಿಗೆ ಇದ್ದ ಒಟ್ಟು 2 ಎರಡು ಎಕರೆ ಭೂಮಿಯನ್ನು ಹುಚ್ಚಮ್ಮ ತಮ್ಮೂರಿನ ಸರಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ದಾನ ನೀಡಿದ್ದರು. ಮಕ್ಕಳಿಲ್ಲದ ಹುಚ್ಚಮ್ಮ ತಮ್ಮ 60ನೇ ವಯಸ್ಸಿನ ವರೆಗೆ ಶಾಲೆಯಲ್ಲಿ ಬಿಸಿಯೂಟ ಮಾಡಿಕೊಂಡು, ಶಾಲೆ ಮಕ್ಕಳಲ್ಲೇ ತಮ್ಮ ಮಕ್ಕಳನ್ನು ಕಂಡಿದ್ದರು. ಇಂಥ ಮಹಾ ದಾನಿಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯ ಕೊಪ್ಪಳ ಜಿಲ್ಲಾದ್ಯಂತ ಕೇಳಿ ಬಂದಿತ್ತು. ಯುವಕರು ಮತ್ತು ಪ್ರಜ್ಞಾವಂತರು ಸಾಮಾಜಿಕ ಜಾಲತಾಣದಲ್ಲಿ ಅಜ್ಜಿಗೆ ಪ್ರಶಸ್ತಿ ನೀಡಲು ಅಭಿಯಾನ ಮಾಡಿದ್ದರು.
ಈ ಹಿಂದೆ ಪಬ್ಲಿಕ್ ಟಿವಿಯಲ್ಲಿ ಹುಚ್ಚಮ್ಮನನ್ನು ಪಬ್ಲಿಕ್ ಹೀರೋ ಮೂಲಕ ರಾಜ್ಯದ ಜನತೆಗೆ ದಾನಿಯ ಬಗ್ಗೆ ಮಾಹಿತಿ ನೀಡಿತ್ತು. ಕುಣಿಕೇರಿ ಗ್ರಾಮದಲ್ಲಿ ಜಮೀನಿಗೆ ಚಿನ್ನದ ಬೆಲೆ ಬೆಲೆ ಇದ್ದರೂ ದಾನ ಮಾಡಿ ಹುಚ್ಚಮ್ಮ ಚೌದ್ರಿ, ಪತಿಯ ಸಾವಿನ ಬಳಿಕ ಶಾಲೆಯ ಮಕ್ಕಳನ್ನೇ ತಮ್ಮ ಮಕ್ಕಳಂತೆ ಕಂಡಿದ್ದ ಹುಚ್ಚಮ್ಮರ ಹೆಸರು ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇದನ್ನೂ ಓದಿ: ಪಬ್ಲಿಕ್ ಹೀರೋ ಬಾದಾಮಿಯ ಶಿವ ರೆಡ್ಡಿ ವಾಸನ್ಗೆ ರಾಜ್ಯೋತ್ಸವ ಪ್ರಶಸ್ತಿ
ತೊಗಲುಗೊಂಬೆ: ಯಕ್ಷಗಾನ/ ಬಯಲಾಟ ವಿಭಾಗದಲ್ಲಿ ಪ್ರಶಸ್ತಿ ಗಿಟ್ಟಿಸಿಕೊಂಡಿರೋ ಕೇಶಪ್ಪ ಶಿಳ್ಳೆಕ್ಯಾತರ ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ. ಎಸ್ಸಿ ವರ್ಗದ ಅಲೆಮಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. ಇವರು ಅಮೆರಿಕ, ಪ್ಯಾರಿಸ್, ಇಟಲಿ, ಸ್ವಿಜರ್ಲ್ಯಾಂಡ್ ಸೇರಿದಂತೆ ವಿವಿಧ ವಿದೇಶ ಮತ್ತು ದೇಶದ ಪ್ರಸಿದ್ಧ ವೇದಿಕೆಯಲ್ಲಿ ತೊಗಲುಗೊಂಬೆ ಆಟ ಪ್ರದರ್ಶನ ಮಾಡಿದ್ದಾರೆ. ಈ ಮೂಲಕ ಜಾನಪದ ಕಲೆ ಮತ್ತು ಸಂಸ್ಕೃತಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ.
ಈ ಮೊದಲು ಕೇಶಪ್ಪ ಅವರು ಟೆರನ್ ಇಂಟರ್ನ್ಯಾಷನಲ್ ಪ್ರಶಸ್ತಿ, ಜಾನಪದ ಅಕಾಡೆಮಿ ಗೊಂಬೆ ಪರಂಪರೆ ಪ್ರಶಸ್ತಿ, ರಂಗ ಕಲೆ ಅಧ್ಯಯನ, ಹೊರನಾಡು ಉತ್ಸವ, ಧಾರವಾಡ ಉಸ್ತವ, ವಿಶ್ವ ಸಮ್ಮೇಳನ ಪ್ರಶಸ್ತಿ, ಹಂಪಿ ಉತ್ಸವ ಪ್ರಶಸ್ತಿ, ವಿಕ್ರಮಾದಿತ್ಯ ಸೇರಿ ವಿವಿಧ ಪ್ರಶಸ್ತಿ ಪಡೆದಿದ್ದಾರೆ.
ತಮ್ಮ 9ನೇ ವಯಸ್ಸಿನಿಂದ ಈವರೆಗೆ ಕುಲ ಕಸುಬು ತೊಗಲು ಗೊಂಬೆ ಆಟವನ್ನೇ ವೃತ್ತಿ ಮಾಡಿಕೊಂಡು ಜೀವನ ಮಾಡಿದ್ದಾರೆ. ರಾಮಾಯಣ, ಮಹಾ ಭಾರತದಂತ ಮಹಾಕಾವ್ಯ ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ತೊಗಲು ಗೊಂಬೆ ಆಟದ ಮೂಲಕ ಪ್ರದರ್ಶನ ನೀಡಿದ ಹೆಗ್ಗಳಿಕೆ ಇವರದ್ದು.
ಹಗಲು ವೇಷ: ಜನಪದ ವಿಭಾಗದಲ್ಲಿ ಪ್ರಶಸ್ತಿ ತಮ್ಮದಾಗಿಸಿಕೊಂಡಿರುವ ಹಗಲು ವೇಷ ಕಲಾವಿದ ವಿಭೂತಿ ಗುಂಡಪ್ಪ 6 ದಶಕದಿಂದ ಕಲಾಸೇವೆಯಲ್ಲಿ ತೊಡಗಿದ್ದಾರೆ. ಎಸ್ಸಿ ವರ್ಗದ ಬುಡ್ಗ ಜಂಗಮ ಸಮಾಜಕ್ಕೆ ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದು ವಿಶೇಷ. ಕಾರಟಗಿ ತಾಲೂಕು ಸಿದ್ದಾಪೂರ ಗ್ರಾಮದ ವಿಭೂತಿ ಗುಂಡಪ್ಪ ಹಗಲು ವೇಷವನ್ನೇ ಕಾಯಕ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ತಮ್ಮ 7ನೇ ವರ್ಷದಿಂದ ಪಾತ್ರ ಮಾಡಿಕೊಂಡು ಬಂದಿದ್ದಾರೆ. ರಾಜ್ಯಾದ್ಯಂತ ಸುತ್ತಾಡಿ ಹಗಲು ವೇಷ ಪ್ರದರ್ಶನ ಮಾಡಿದ್ದಾರೆ.
ಹಗಲುವೇಷ ಕಲೆ ಜೊತೆಗೆ ಜನಪದ ಹಾಡು, ತತ್ವಪದ, ದಾಸರ ಪದ, ಭಕ್ತಿಗೀತೆ, ಭಾವಗೀತೆ ಹಾಗೂ ವಚನ ಗಾಯನದ ಮೂಲಕವೂ ಹೆಸರು ಮಾಡಿದ್ದಾರೆ. ಜೊತೆಗೆ ತಮ್ಮ ಪೂಷಕರಿಂದ ಕಲಿತ ಹಾರ್ಮೋನಿಯಂ, ತಬಲಾ, ದಮ್ಮಡಿ, ತಾಳ ವಾದ್ಯ ನುಡಿಸಿಗೂ ಗಮನ ಸೆಳೆದಿದ್ದಾರೆ. ರಾಜ್ಯ ಮಾತ್ರವಲ್ಲದೇ ಆಂಧ್ರಪ್ರದೇಶದ, ತಮಿಳುನಾಡು, ಮಹಾರಾಷ್ಟ್ರದಲ್ಲೂ ಗುಂಡಪ್ಪ ಕಲಾ ಪ್ರದರ್ಶನ ನೀಡಿದ್ದಾರೆ. ಅಲೆಮಾರಿ ಬುಡ್ಗ ಜಂಗಮ ಸಮಾಜಕ್ಕೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಇದೇ ಮೊದಲ ಬಾರಿಗೆ. ಇದು ಇಡೀ ಸಮಾಜಕ್ಕೆ ಸಂದ ಗೌರವ ಎಂದು ಗುಂಡಪ್ಪ ಹೇಳಿದ್ದಾರೆ.
ಬಾಗಲಕೋಟೆ: ಪಬ್ಲಿಕ್ ಹೀರೋ (PUBLiC Hero) ನಿವೃತ್ತ ಉಪನ್ಯಾಸಕ ಪ್ರೊ. ಶಿವ ರೆಡ್ಡಿ ವಾಸನ್ (Shiva Reddy Vasan) ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award) ಆಯ್ಕೆ ಆಗಿದ್ದಾರೆ.
ಎಸ್.ಎಸ್ ವಾಸನ್ ಅವರು ಬಾದಾಮಿ (Badami) ಪಟ್ಟಣದ ನಿವಾಸಿಯಾಗಿದ್ದು, ವೃತ್ತಿಯಿಂದ ಜೀವಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿಯ ನಂತರವೂ ಅವರ ನಿಸರ್ಗದ ಪ್ರೀತಿ ಕಡಿಮೆ ಆಗಲಿಲ್ಲ. ಯುವ ಪೀಳಿಗೆಗೆ ಪರಿಸರದ ಬಗ್ಗೆ ಅರಿವು ಮೂಡಿಸುತ್ತಾ, ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಟ್ಟು ತಾಪಮಾನ ಕಡಿಮೆ ಮಾಡುವ ಪಣ ತೊಟ್ಟಿದ್ದಾರೆ.
ನಿವೃತ್ತಿ ನಂತರ ಬಾದಾಮಿ ಪಟ್ಟಣದಲ್ಲಿ ನಿಸರ್ಗ ಬಳಗ ಎಂಬ ಸಂಘ ತೆರೆದಿದ್ದಾರೆ. ಈ ಬಳಗದ ಸದಸ್ಯರೊಂದಿಗೆ ಸಸಿ ನೆಡುವ ಕಾರ್ಯ ಮಾಡುತ್ತಿದ್ದಾರೆ. ಇವರ ಪರಿಸರ ಕಾಳಜಿಯನ್ನು ಗಮನಿಸಿದ್ದ ಪಬ್ಲಿಕ್ ಟಿವಿ 2019ರ ಸೆಪ್ಟೆಂಬರ್ 13 ರಂದು ನಿಸರ್ಗ ಪ್ರೇಮಿ ಎಂದು ಪಬ್ಲಿಕ್ ಹಿರೋ ಕಾರ್ಯಕ್ರಮದ ಅಡಿ, ಇವರ ಸಾಮಾಜಿಕ ಕಳಕಳಿ ಹಾಗೂ ಪರಿಸರ ಪ್ರೇಮದ ಕುರಿತು ವರದಿ ಮಾಡಿತ್ತು. ಇದನ್ನೂ ಓದಿ: ಇಸ್ರೋ ಮುಖ್ಯಸ್ಥ ಸೋಮನಾಥ್, ಗಾಲ್ಫರ್ ಅದಿತಿ ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ- Full List
ಹೆಚ್ಚುತ್ತಿರುವ ತಾಪಮಾನವನ್ನು ಸಸಿ ನೆಡುವ ಮೂಲಕ ಕಡಿಮೆ ಮಾಡಬೇಕು. ನೀರಿನ ಅಂತರ್ಜಲ ಮಟ್ಟ ವೃದ್ಧಿಯಾಗಬೇಕು ಎಂಬ ಕನಸುಗಳನ್ನು ಹೊತ್ತು ಬಿಡುವಿನ ವೇಳೆಯಲ್ಲಿ ಊರೂರು ಸುತ್ತಿ ಪರಿಸರ ರಕ್ಷಣೆ, ಗಿಡ ನೆಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಪರಿಸರ ಪ್ರೇಮಿ ಎನಿಸಿಕೊಂಡಿದ್ದಾರೆ. ಯುವಕರು, ಮಹಿಳೆಯರು, ಶಿಕ್ಷಕರನ್ನೊಳಗೊಂಡ ಸುಮಾರು 50 ಸದಸ್ಯರ ನಿಸರ್ಗ ಬಳಗ ಹುಟ್ಟು ಹಾಕಿ ಚಾಲುಕ್ಯರ ನಾಡನ್ನು ಹಸಿರು ನಾಡು ಮಾಡಲು ಹೊರಟಿದ್ದಾರೆ.
ಬಾದಾಮಿ ಐತಿಹಾಸಿಕ ಪ್ರವಾಸಿ ತಾಣ, ಪಟ್ಟಣದಲ್ಲಿ ಚಾಲುಕ್ಯರ ಆಳ್ವಿಕೆಗೆ ಸಾಕ್ಷಿಯಾದ ಸುಂದರ ಕಲಾಶಿಲ್ಪಗಳಿವೆ. ಇದನ್ನು ವೀಕ್ಷಿಸಲು ದೇಶ-ವಿದೇಶದಿಂದ ಪ್ರವಾಸಿಗರು ಬರುತ್ತಾರೆ. ಆದರೆ ಪಟ್ಟಣ ಮಾತ್ರ ಬಿಸಿಲ ಕೂಪದಲ್ಲಿ ಸುಡುವಂತಿದೆ. ಇದನ್ನರಿತ ವಾಸನ್, ಬಾದಾಮಿ ಪಟ್ಟಣವನ್ನು ಸುಂದರ ಪರಿಸರದ ಪಟ್ಟಣವನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ, ಪಟ್ಟಣದ ಹಸರೀಕರಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ.
ಸಸಿ ನೆಡುವುದರಲ್ಲಿಯೂ ಜಾಣತನ ಮೆರೆದಿರುವ ಇವರು, ಹೊಂಗೆ ಮರದಿಂದ ಮುಂದೊಂದು ದಿನ ಜೈವಿಕ ಇಂಧನ ಸಿಗಬಹುದು ಎಂಬ ಉದ್ದೇಶದಿಂದ ಹೆಚ್ಚಾಗಿ ಹೊಂಗೆ ಸಸಿಗಳನ್ನೇ ನೆಡುತ್ತಿದ್ದಾರೆ. ಇಲ್ಲಿಯವರೆಗೆ ವಾಸನ್ ಅವರು 15 ಸಾವಿರಕ್ಕೂ ಅಧಿಕ ವಿವಿದ ಸಸಿಗಳನ್ನು ನೆಟ್ಟಿದ್ದಾರೆ. ಈ ಎಲ್ಲಾ ಕಾರಣದಿಂದ ಬಾದಾಮಿ ಜನ ಇವರನ್ನು ಪರಿಸರ ಪ್ರೇಮಿ ವಾಸನ್ ಎಂದು ಕರೆಯುತ್ತಿದ್ದಾರೆ.
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award) ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಕಡ್ಡಾಯವಾಗಿ ಸಾಮಾಜಿಕ ನ್ಯಾಯ ಪಾಲಿಸಬೇಕು, ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ನಡೆಯಿತು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ: ಜಿ.ಪರಮೇಶ್ವರ್, ಡಾ: ಹೆಚ್.ಸಿ.ಮಹದೇವಪ್ಪ, ಮುಖ್ಯ ಮಂತ್ರಿಗಳ ರಾಜಕೀಯ… pic.twitter.com/iMJfOwv72X
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ (Kannada Rajyotsava Award Selection Committee) ಉನ್ನತ ಮಟ್ಟ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನ ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕನಕಪುರ ಬೆಂಗಳೂರಿಗೆ ಸೇರಿಸಿ, ರೈತರು ಭೂಮಿ ಮಾರಿಕೊಳ್ಳಲಿ ಎಂಬ ಕುತಂತ್ರ: ಅಶ್ವಥ್ ನಾರಾಯಣ್ ವಾಗ್ದಾಳಿ
ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಅರ್ಜಿ ಸಲ್ಲಿಸುವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಕನಕಪುರ ಡೈರಿಗೆ ಜಾಗ ಕೊಟ್ಟ ರೈತರಿಗೆ ಎಷ್ಟು ಕೊಟ್ರಿ, ನಿಮ್ಮ ಪಟಾಲಂಗೆ ಎಷ್ಟು ಕೊಟ್ರಿ – ಡಿಕೆಶಿಗೆ ಹೆಚ್ಡಿಕೆ ಪ್ರಶ್ನೆ
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ.ಜಿ ಪರಮೇಶ್ವರ್, ಡಾ.ಹೆಚ್.ಸಿ ಮಹದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್.ಎಲ್ ಪುಷ್ಪ, ಡಾ.ವೀರಣ್ಣ ದಂಡೆ, ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಕಾ.ತ ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್, ಡಾ.ವಿಠಲ್ ಐ.ಬೆಣಗಿ-ಕೃಷಿ, ಡಾ. ಸಣ್ಣರಾಮು, ವೆಂಕಟರಾಮಯ್ಯ, ಡಾ.ಎಂ.ಎಸ್ ಮೂರ್ತಿ, ಡಾ.ಗೀತಾ ಶಿವಮೊಗ್ಗ, ಡಾ.ಜಯದೇವಿ ಜಂಗಮಶೆಟ್ಟಿ, ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಫಯಾಜ್ ಖಾನ್, ಹೃಷಿಕೇಶ್ ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್ ನರಸಿಂಹರಾಜು, ಡಾ.ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್ ಚಂದ್ರಗುಪ್ತ , ಜೆ.ಲೋಕೇಶ್ ಉಪಸ್ಥಿತರಿದ್ದರು.
ಯಾದಗಿರಿ: ಕಳೆದ ಮೂವತ್ತೈದು ವರ್ಷಗಳಿಂದ ಜನರ ಪಾಲಿಗೆ ಸಂಜೀವಿನಿಯಾಗಿ ಸೇವೆ ಸಲ್ಲಿಸುತ್ತಿರುವ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ನಿವಾಸಿ ಭೂದೇವಿ, ಹಾವು ಕಚ್ಚಿಸಿಕೊಂಡು (Snake Bite) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವವರ ಪ್ರಾಣ ಉಳಿಸುವ ಕೆಲಸ ಮಾಡುತ್ತಿದ್ದಾಳೆ. ಸಾವಿರಾರು ಜನರ ಪ್ರಾಣ ಉಳಿಸಿದ ಆ ಮಹಾ ತಾಯಿಯ ನಿಸ್ವಾರ್ಥ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಗಬೇಕು ಅನ್ನೋ ಒತ್ತಾಯ ಕೇಳಿಬಂದಿದೆ.
ಯಾದಗಿರಿ (Yadagiri) ಜಿಲ್ಲೆಯ ವಡಗೇರ ಪಟ್ಟಣದ ಭೂದೇವಿ ಎನ್ನುವ ಮಹಿಳೆ ಕಳೆದ ಮೂವತ್ತೈದು ವರ್ಷಗಳಿಂದ ಸತತವಾಗಿ ಹಾವು ಕಚ್ಚಿಸಿಕೊಂಡವರಿಗೆ ಔಷಧ ನೀಡುವ ಮೂಲಕ ಜೀವ ಉಳಿಸುವ ಕೆಲಸ ಮಾಡುತ್ತಿದ್ದಾಳೆ. ವಡಗೇರ ಪಟ್ಟಣದಲ್ಲಿ ವಾಸ ಮಾಡುತ್ತಿರುವ ಭೂದೇವಿ ಹಾವು ಕಚ್ಚಿದವರು ಬಂದ್ರೆ ಸಾಕು ಎಲೆಯ ಔಷಧಿಯನ್ನ ಕೊಟ್ಟು ಪ್ರಾಣ ಉಳಿಸುವ ಕೆಲಸ ಮಾಡುತ್ತಿದ್ದಾಳೆ. ಮೂರು ತಲೆ ಮಾರುಗಳಿಂದ ಈ ಕುಟುಂಬ ಹಾವು ಕಚ್ಚಿದವರಿಗೆ ಔಷಧಿ ನೀಡುವ ಕಾಯಕವನ್ನ ಮುಂದುವರಿಸಿಕೊಂಡು ಬಂದಿದೆ. ಭೂದೇವಿಗಿಂತ ಮೊದಲು ಭೂದೇವಿಯ ಅತ್ತೆ ತಾಯಮ್ಮ ಔಷಧಿಯನ್ನ ನೀಡುವ ಕೆಲಸ ಮಾಡುತ್ತಿದ್ದರು.
ತಾಯಮ್ಮಗಿಂತ ಮೊದಲು ತಾಯಮ್ಮಳ ಅತ್ತೆ ನಾಗಮ್ಮ ಗಿಡದ ಎಲೆಗಳನ್ನ ತಂದು ಔಷಧಿಯನ್ನ ಕೊಡುವ ಕೆಲಸ ಮಾಡುತ್ತಿದ್ದರು. ಆದರೆ ನಾಗಮ್ಮ ಹಾಗೂ ತಾಯಮ್ಮಳ ಬಳಿಕ ನಿಸ್ವಾರ್ಥ ಸೇವೆಯನ್ನ ಭೂದೇವಿ ಮಾಡುತ್ತಾ ಬರುತ್ತಿದ್ದಾರೆ. ಕಳೆದ ಮೂವತ್ತೈದು ವರ್ಷಗಳಿಂದ ಸುಮಾರು 4 ಸಾವಿರಕ್ಕೂ ಅಧಿಕ ಜನರಿಗೆ ಔಷಧಿಯನ್ನ ನೀಡಿ ಪ್ರಾಣ ಉಳಿಸುವ ಕೆಲಸ ಮಾಡಿದ್ದಾರೆ. ವಡಗೇರ ಸುತ್ತಮುತ್ತಲಿನ ಗ್ರಾಮದಲ್ಲಿ ಯಾರಿಗಾದ್ರು ಹಾವು ಕಚ್ಚಿದ್ರೆ ನೇರವಾಗಿ ಆಸ್ಪತ್ರೆಗೆ ಹೋಗುವ ಬದಲಿಗೆ ಭೂದೇವಿಯ ಮನೆಗೆ ಬಂದು ಔಷಧಿ ಪಡೆದು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಸಾವಿರಾರು ಜನರಿಗೆ ಔಷಧಿಯನ್ನ ಕೊಟ್ರು ಯಾರಿಂದಲೂ ನಯಾ ಪೈಸೆಯನ್ನ ಭೂದೇವಿ ತೆಗೆದುಕೊಂಡಿಲ್ವಂತೆ.
ಭೂದೇವಿ ವರ್ಷಕ್ಕೆ ಒಂದೇ ಬಾರಿ ಜಮೀನಿಗೆ ಹೋಗಿ ಔಷಧಿಯನ್ನ ತೆಗೆದುಕೊಂಡು ಬರುತ್ತಾಳೆ. ಜಮೀನಿಗೆ ಹೋಗಿ ಔಷಧಿಯನ್ನ ತರಬೇಕು ಅಂದ್ರೆ ಸಾಕಷ್ಟು ನೀತಿ ನಿಯಮಗಳನ್ನ ಪಾಲನೆ ಮಾಡಬೇಕಂತೆ. ಔಷಧಿ ತರಲು ಹೋಗಬೇಕು ಅಂದ್ರೆ ನಸುಕಿನ ಜಾವನೇ ಹೋಗಬೇಕು. ಯಾಕೆಂದ್ರೆ ನಮ್ಮ ನೆರಳು ಸಹ ನಮ್ಮ ಹಿಂದೆ ಬರಬಾರದು. ಇದೇ ಕಾರಣಕ್ಕೆ ನಸುಕಿನ ಜಾವ ಹೋಗಬೇಕು. ಔಷಧಿ ತರಲು ಹೋಗುವ ಮೊದಲು ಮನೆಯನ್ನ ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಇಷ್ಟೆಲ್ಲ ನಿಯಮಗಳನ್ನ ಪಾಲನೆ ಮಾಡಿಕೊಂಡು ಹೋಗಿ ಔಷಧಿಯನ್ನ ತರಬೇಕು. ಗಿಡಗಳ ಸಮೇತವಾಗಿ ಔಷಧಿಯನ್ನ ತಂದು ಒಂದು ತಿಂಗಳುಗಳ ಕಾಲ ನೆರಳಲ್ಲಿ ಒಣಗಿಸಬೇಕು. ನೆರಳಲ್ಲಿ ಒಣಗಿಸಿದ ಮೇಲೆ ಎಲೆಯನ್ನ ಗಿಡದಿಂದ ಬೇರ್ಪಡಿಸಿ ಚೆನ್ನಾಗಿ ಅರೆದು ರೆಡಿ ಮಾಡಿಕೊಂಡು ಇಟ್ಟುಕೊಳ್ಳುತ್ತಾರೆ. ಬಳಿಕ ಮನೆಗೆ ಯಾರೆ ಹಾವು ಕಚ್ಚಿದವರು ಬಂದ್ರೆ ಔಷಧಿಯನ್ನ ಕೊಡಲಾಗುತ್ತೆ.
ಔಷಧಿಯನ್ನ ಪಡೆದವರು ಆವತ್ತು ಒಂದು ದಿನ ಇಡೀ ರಾತ್ರಿ ಮಲಗವಾರದು. ಜೊತೆಗೆ ಹಾವು ಕಚ್ಚಿದೆ ಅಂತ ಬಂದ್ರೆ ಅವರಿಗೆ ಬೇವಿನ ಸೊಪ್ಪು ತಿನ್ನಿಸಿ ಹಾವು ಕಚ್ಚಿದೆ ಇಲ್ಲ ಅಂತ ಚೆಕ್ ಮಾಡಿ ಔಷಧಿಯನ್ನ ನೀಡಲಾಗುತ್ತೆ. ಕಷ್ಟಪಟ್ಟು ಭೂದೇವಿ ಸುಮಾರು ನಾಲ್ಕು ಸಾವಿರ ಜನರ ಪ್ರಾಣವನ್ನ ಉಳಿಸಿದ್ದಾಳೆ. ಎಂತಹದ್ದೆ ಹಾವು ಕಚ್ಚಿದ್ರು ಭೂದೇವಿ ಔಷಧಿಯನ್ನ ನೀಡಿ ಗುಣಪಡಿಸುತ್ತಾಳೆ. ಇಷ್ಟೆಲ್ಲಾ ನಿಸ್ವಾರ್ಥ ಸೇವೆ ಮಾಡಿದ ತಾಯಿಗೆ ಇನ್ನುವರೆಗೆ ಯಾರೂ ಗುರುತಿಸಿಲ್ಲ. ಜಿಲ್ಲಾಡಳಿತ ಆಗಲಿ ಸಂಘ ಸಂಸ್ಥೆಗಳಾಗಲಿ ಗುರುತಿಸಿ ಗೌರವಿಸುವ ಕೆಲಸ ಮಾಡಿಲ್ಲ. ಹೀಗಾಗಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡುವ ಮೂಲಕ ಭೂದೇವಿ ಸೇವೆ ಗೌರವ ಸಲ್ಲಿಸಬೇಕೆಂದು ಚಿಕಿತ್ಸೆ ಪಡೆದವರು ಒತ್ತಾಯಿಸಿದ್ದಾರೆ.
ಒಟ್ಟಿನಲ್ಲಿ ಸರ್ಕಾರ ಎಂತೆಂತವರಿಗೆ ಗುರುತಿಸಿ ಗೌರವಿಸುವ ಕೆಲಸ ಮಾಡುತ್ತೆ. ಆದರೆ ಇಂತಹ ಸದ್ದಿಲ್ಲದೆ ಸಾಧನೆ ಮಾಡುವವರನ್ನ ಗುರುತಿಸುವ ಕೆಲಸ ಮಾಡಬೇಕಾಗಿದೆ. ಸಾವಿರಾರು ಜನರ ಪ್ರಾಣ ಉಳಿಸಿದ ತಾಯಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಸಿಗಲಿ ಎನ್ನೋದು ನಮ್ಮ ಆಶಯವಾಗಿದೆ.
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಭಾರತಾದ್ಯಂತ ಭರ್ಜರಿ ಪ್ರದರ್ಶನ ನಡೆಯುತ್ತಿದೆ. ಬಾಕ್ಸ್ ಆಫೀಸ್ ಕೂಡ ಭರ್ತಿಯಾಗಿದೆ. ಈಗಾಗಲೇ ಅಂದಾಜು 300 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಸಿನಿಮಾ ಕೇವಲ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಮಾತ್ರವಲ್ಲ, ದೈವನರ್ತಕರ ಬಾಳಲ್ಲೂ ನಗೆ ಮೂಡಿಸಿದೆ. ಈ ಸಿನಿಮಾದ ನೋಡಿದ ನಂತರ ದೈವ ನರ್ತಕರಿಗೆ ಹಲವು ಸೌಲಭ್ಯಗಳು ಒಲಿದು ಬಂದಿವೆ.
ಇತ್ತೀಚೆಗಷ್ಟೇ ಕರ್ನಾಟಕ ಸರಕಾರವು ದೈವನರ್ತಕರಿಗೆ ಮಾಸಾಶನವನ್ನು ಘೋಷಣೆ ಮಾಡಿದ್ದರು. ಸರಕಾರದ ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು, ಇದೀಗ ಮೊದಲ ಬಾರಿಗೆ ದೈವನರ್ತಕರಿಗೂ ರಾಜ್ಯೋತ್ಸವ ಪ್ರಶಸ್ತಿಯನ್ನು (Rajyotsava Award) ಘೋಷಣೆ ಮಾಡಿದ್ದಾರೆ. ಈ ಬಾರಿ ದೈವನರ್ತಕ ಗುಡ್ಡಪಾಣಾರಗೆ (Guddapana) ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಉಡುಪಿ ಜಿಲ್ಲೆಯ ಕಾಪುವಿನ ಗುಡ್ಡ ಪಾಣಾರು ಇಂಥದ್ದೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
ಉಡುಪಿ (Udupi) ಜಿಲ್ಲೆಯ ಕಾಪು ಹಳೆ ಮಾರಿಗುಡಿಯಲ್ಲಿ ಎರಡು ವರ್ಷಕೊಮ್ಮೆ ನಡೆಯುವ ಪಿಲಿಕೋಲದಲ್ಲಿ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿರುವ ಗುಡ್ಡ ಪಾಣರಿಗೆ ಜಾನಪದ ವಿಭಾಗದಲ್ಲಿ ಈ ಬಾರಿ ಪ್ರಶಸ್ತಿ ಘೋಷಣೆ ಆಗಿದ್ದು, ಇಂದು ಬೆಂಗಳೂರಿನಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ. 68ರ ವಯಸ್ಸಿನ ಗುಡ್ಡ ಪಾಣಾರು 25ನೇ ವಯಸ್ಸಿನಿಂದಲೇ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.
ಅಷ್ಟೇ ಅಲ್ಲದೇ, ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ದೈವಾರಾಧಕ ನಾಗರಾಜ ಪಾಣ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಯಾವುದೇ ಅರ್ಜಿ ಹಾಕದೇ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ ಎನ್ನುವುದು ಮತ್ತೊಂದು ವಿಶೇಷ. ಕಾಂತಾರ ಸಿನಿಮಾದಿಂದಾಗಿ ದೈವ ನರ್ತಕರು ಕೂಡ ಇದೀಗ ಮುನ್ನೆಲೆಗೆ ಬಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ತಿಳಿಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರಶಸ್ತಿಗಾಗಿ ನಾವು ಎಂದು ಹುಡುಕಿಕೊಂಡು ಹೋಗಬಾರದು, ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಹೇಳಿದರು.
ನಾಡಿನೆಲ್ಲಡೆ ನೀರಿಗಾಗಿ ಗಲಾಟೆ, ಸಂಘರ್ಷ, ನ್ಯಾಯಾಲಯದ ಮೆಟ್ಟಿಲೇರುವ ಈ ಸಂದರ್ಭದಲ್ಲಿ ಮಹಾಲಿಂಗ ನಾಯ್ಕರ ಸಾಧನೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ. ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ದೇಶದ ಜನರನ್ನು ಕಣ್ತೆರೆಸುವಲ್ಲಿ ಈ ಪ್ರಶಸ್ತಿ ಅರ್ಹವಾಗಿಯೇ ಮಹಾಲಿಂಗ ನಾಯ್ಕರನ್ನು ಹುಡುಕಿಕೊಂಡು ಬಂದಿದೆ ಎಂದರು.
ಮಹಾಲಿಂಗ ನಾಯ್ಕರದ್ದು ಮೌನ ಕ್ರಾಂತಿ. ಅವರು ವಾಸವಿದ್ದ ಗುಡ್ಡದಲ್ಲಿ ಬಾವಿ ತೋಡಿ ನೀರು ಸಿಗದಿದ್ದಾಗ ಅವರು ವಿಚಲಿತರಾಗದೆ ನಿರಂತರ ಶ್ರಮದಿಂದ ಅವರು ಕಲಿಯುಗದಲ್ಲಿ ಸುರಂಗವನ್ನು ಕೊರೆದು ಗಂಗೆಯನ್ನು ಭೂಮಿಗೆ ತರಿಸಿದ ಸಾಧನೆ ಎಲ್ಲರಿಗೂ ಸ್ಫೂರ್ತಿಯಾಗಿದೆ. ಇಂತಹ ಭಗೀರಥರನ್ನು ಕೇಂದ್ರ ಸರ್ಕಾರ ಗುರುತಿಸಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತೋಷದ ವಿಷಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಲಿಂಗ ನಾಯ್ಕ ಅವರು, ಇಂದು ನೀರಿಗಾಗಿ ಸಮಸ್ಯೆಗಳು ಹೆಚ್ಚಾಗುತ್ತಿರುವಂತೆಯೇ ಮುಂದಿನ ದಿನಗಳಲ್ಲಿ ನೀರು ಬಂಗಾರಕ್ಕಿಂತಲೂ ಹೆಚ್ಚು ಬೆಲೆ ಬಾಳಲಿದೆ. ಅದಕ್ಕಾಗಿ ನೀರಿನ ಮಹತ್ವವನ್ನು ಅರಿತು ಸಾರ್ವಜನಿಕರು ಮಿತವಾಗಿ ಉಪಯೋಗಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಲತಾ ಮಂಗೇಶ್ಕರ್ ಹಾಡು ಕೇಳಿ ವೇದಿಕೆಯಲ್ಲಿ ಕಣ್ಣೀರು ಹಾಕಿದ್ರು ಜವಾಹರ್ಲಾಲ್ ನೆಹರೂ
ಶಿವಮೊಗ್ಗ: ಶಿಕ್ಷಣ ತಜ್ಞ ಪ್ರೊ.ಪಿ.ವಿ.ಕೃಷ್ಣಭಟ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ನಾಲ್ವರು ಸಾಧಕರು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರೊ.ಪಿ.ವಿ.ಕೃಷ್ಣಭಟ್, ಜಾನಪದ ವಿಭಾಗದಲ್ಲಿ ಹಸೆ ಚಿತ್ತಾರ ಕಲಾವಿದೆ ಸಾಗರದ ಗೌರಮ್ಮ ಹುಚ್ಚಪ್ಪ ಮಾಸ್ತರ್, ಯಕ್ಷಗಾನ ವಿಭಾಗದಲ್ಲಿ ಗೋಪಾಲ ಆಚಾರ್ಯ ಹಾಗು ಯೋಗ ವಿಭಾಗದಲ್ಲಿ ಬಾ.ಮ.ಶ್ರೀಕಂಠ ಅವರುಗಳು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪಿ.ವಿ.ಕೃಷ್ಣಭಟ್(ಶಿಕ್ಷಣ ಕ್ಷೇತ್ರ)
ಶಿವಮೊಗ್ಗದ ದೇಶಿಯ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿದ್ದ ಕೃಷ್ಣಭಟ್ ಅವರು, ಪ್ರಸ್ತುತ ಒಡಿಸ್ಸಾದ ಕೇಂದ್ರಿಯ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಬಿವಿಪಿಯ ರಾಷ್ಟ್ರೀಯ ಅಧ್ಯಕ್ಷರು ಆಗಿದ್ದ ಪಿ.ವಿ.ಕೃಷ್ಣಭಟ್ ಅವರು ಕರ್ನಾಟಕದ ವಿಧಾನ ಪರಿಷತ್ ಸದಸ್ಯರು ಸಹ ಆಗಿದ್ದರು.
ಗೌರಮ್ಮ ಹುಚ್ಚಪ್ಪ ಮಾಸ್ತರ್(ಜಾನಪದ ಕ್ಷೇತ್ರ)
ಗೌರಮ್ಮ ನಾಡಿನ ಹೆಸರಾಂತ ಜಾನಪದ ವಿದ್ವಾಂಸ ದಿವಂಗತ ಹುಚ್ಚಪ್ಪ ಮಾಸ್ತರ್ ಅವರ ಪತ್ನಿಯಾಗಿದ್ದಾರೆ. ಮಲೆನಾಡಿನ ಆದಿಮ ಕಲೆ ಹಸೆ ಚಿತ್ತಾರ ಕಲೆಯನ್ನು ಬಾಲ್ಯದಿಂದಲೂ ಜೀವನಾಡಿಯಂತೆ ಪೋಷಿಸಿಕೊಂಡು ಬಂದಿರುವ ಗೌರಮ್ಮ ಅವರಿಗೆ ಈ ಕಲೆಗಾಗಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ನಿರ್ಲಕ್ಷಿತ ಕಲಾ ಪ್ರಕಾರವೊಂದನ್ನು ಮಲೆನಾಡಿನ ಈಡಿಗ ಸಮುದಾಯ ಅತ್ಯಂತ ಕ್ರಿಯಾಶೀಲತೆಯಿಂದ ತನ್ನ ಅಂತರಂಗದಲ್ಲಿ ಪೋಷಿಸುತ್ತಿದೆ. ವಿಶೇಷವೆಂದರೆ ದಿವಂಗತ ಹುಚ್ಚಪ್ಪ ಮಾಸ್ತರ್ ಅವರಿಗೆ 1992 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದೀಗ ಅವರ ಪತ್ನಿಗೂ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಆ ಮೂಲಕ ಪತಿ ಪತ್ನಿ ಇಬ್ಬರಿಗೂ ರಾಜ್ಯೋತ್ಸವ ಪ್ರಶಸ್ತಿ ದೊರೆತಂತಾಗಿದೆ.
ಬಾ.ಮ.ಶ್ರೀಕಂಠ(ಯೋಗ ಕ್ಷೇತ್ರ)
ಹಿರಿಯ ಯೋಗ ಗುರು ಬಾ.ಮ.ಶ್ರೀಕಂಠ ಅವರಿಗೆ ಯೋಗ ವಿಭಾಗದಲ್ಲಿ ಪ್ರಶಸ್ತಿ ಬಂದಿರುವುದು ಮಲೆನಾಡಿಗೆ ಹೆಮ್ಮೆಯ ವಿಷಯವಾಗಿದೆ. ಆರ್ಎಸ್ಎಸ್ ನಿಷ್ಠಾವಂತ ಕಟ್ಟಾಳು ಶ್ರೀಕಂಠ ಅವರು ಎಲೆಮರೆಯ ಕಾಯಿಯಂತೆ ಜನಸೇವೆ ಮಾಡಿಕೊಂಡವರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳಲ್ಲಿ ಯೋಗ ಕಲಿಸಿಕೊಡುವ ಅವರು ಸರಳ ಸಜ್ಜನಿಕೆಗೆ ಹೆಸರಾದವರು. ಸರ್ಕಾರ ಅವರನ್ನು ಗುರುತಿಸಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.
ಗೋಪಾಲ ಆಚಾರ್ಯ(ಯಕ್ಷಗಾನ)
ಗೋಪಾಲ ಆಚಾರ್ಯ ಅವರು ಯಕ್ಷಗಾನ ಕಲಾವಿದರಾಗಿದ್ದು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯವರಾದ ಇವರು ಯಕ್ಷಗಾನ ಮುಮ್ಮೇಳ ಕಲಾವಿದರಾಗಿದ್ದಾರೆ. ಹಲವು ವರ್ಷಗಳಿಂದ ಕಲಾಸೇವೆ ಮಾಡಿಕೊಂಡು ಬಂದಿರುವ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಯಕ್ಷಗಾನ ಪ್ರೇಮಿಗಳಿಗೆ ಸಂತಸ ಮೂಢಿಸಿದೆ.
ಕೊಪ್ಪಳ: ಜಿಲ್ಲೆಯ ಗಂಗಾವತಿ ಜಯನಗರ ನಿವಾಸಿಯಾದ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ರಾಜ್ಯೋತ್ಸವ ಪ್ರಶಸ್ತಿಯ ಸಂಕೀರ್ಣ ವಿಭಾಗದಲ್ಲಿ ಪ್ರಾಣೇಶ್ಗೆ ಪ್ರಶಸ್ತಿ ಬಂದಿದೆ. ಸತತ 30 ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಪ್ರಾಣೇಶ್ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ ನಗಿಸುವವನ ನೋವುಗಳು, ಅನಿಸಿದ್ದು ಅನುಭವಿಸಿದ್ದು, ಪ್ರಾಣೇಶ್ ಪಯಣ, ಪ್ರಾಣೇಶ್ ಪಂಚ್ ಇನ್ನಿತರ ಕೃತಿಗಳು ಜನರ ಮೆಚ್ಚುಗೆಯನ್ನು ಪಡೆದುಕೊಂಡಿವೆ. ಇದನ್ನೂ ಓದಿ: ದೇವರಾಜ್, ಬೋಪಣ್ಣ ಸೇರಿದಂತೆ 66 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ
ಹಾಸ್ಯ ಕಲಾವಿದರಾಗಿ ಪ್ರಾಣೇಶ್ ರಾಜ್ಯ ಸೇರಿದಂತೆ ದೇಶ, ವಿದೇಶಗಳಲ್ಲಿ ಕೂಡ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. 30 ವರ್ಷಗಳ ಸಾಹಿತ್ಯ ಸೇವೆಯನ್ನು ಗುರುತಿಸಿ, ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಸಂತಸದ ವಿಷಯವಾಗಿದೆ. ಈ ಪ್ರಶಸ್ತಿಯನ್ನು ನನ್ನ ಕಾರ್ಯಕ್ರಮಗಳಿಗೆ ಆಗಮಿಸಿ ನಕ್ಕು ಆರ್ಶೀವಾದ ಮಾಡಿದವರಿಗೆ ಅರ್ಪಿಸುತ್ತೇನೆ ಎಂದು ಪ್ರಾಣೇಶ್ ಪಬ್ಲಿಕ್ ಟಿವಿ ಜೊತೆ ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕಾಡಿನಲ್ಲೇ ತನ್ನ ಆಯಸ್ಸು ಕಳೆದ 90ರ ವೃದ್ಧನಿಗೆ ಒಲಿದು ಬಂತು ರಾಜ್ಯೋತ್ಸವ ಪ್ರಶಸ್ತಿ