Tag: Rakshit

  • ಪ್ರೇಮ್ ಪುತ್ರಿ 2ನೇ ಸಿನಿಮಾ: ಸ್ಮೈಲ್ ಗುರು ರಕ್ಷಿತ್ ಗೆ ಅಮೃತಾ ನಾಯಕಿ

    ಪ್ರೇಮ್ ಪುತ್ರಿ 2ನೇ ಸಿನಿಮಾ: ಸ್ಮೈಲ್ ಗುರು ರಕ್ಷಿತ್ ಗೆ ಅಮೃತಾ ನಾಯಕಿ

    ಟಗರು ಪಲ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಲಗಾಲಿಟ್ಟಿದ್ದ ಲವ್ಲಿ ಸ್ಟಾರ್ ಪ್ರೇಮ್ ಮುದ್ದಿನ ಗೊಂಬೆ ಅಮೃತಾ ಪ್ರೇಮ್. ಚೊಚ್ಚಲ ಚಿತ್ರದಲ್ಲಿಯೇ ಭರವಸೆ ಮೂಡಿಸಿದ್ದ ಈ ಸೂರ್ಯಕಾಂತಿ ಮುಂದಿನ ಸಿನಿಮಾ ಯಾವುದು ಎಂದು ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದರು. ಈಗ ಅದಕ್ಕೆ ಉತ್ತರ ಸಿಕ್ಕಿದೆ. ಅಮೃತಾ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅಳೆದು ತೂಗಿ ಕಥೆ ಆಯ್ಕೆ ಮಾಡಿಕೊಂಡು ನಿರ್ದೇಶಕ ಮಹೇಶ್ ಬಾಬು ಚಿತ್ರದಲ್ಲಿ ನಾಯಕಿಯಾಗಿ ನಟಿಸಲು ಸಮ್ಮತಿ ಸೂಚಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಸುಸಂದರ್ಭದಲ್ಲಿ ಚಿತ್ರತಂಡ ಅಮೃತಾ ಪ್ರೇಮ್ ಅವರನ್ನು ಸ್ವಾಗತಿಸಿದೆ. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಅಮೃತಾ ಸಾಥ್‌ ಕೊಡುತ್ತಿದ್ದಾರೆ. ನಿರ್ದೇಶಕ ಮಹೇಶ್ ಬಾಬು ಸಾರಥ್ಯದಲ್ಲಿ ನಡೆದ 15 ದಿನಗಳ ವರ್ಕ್ ಶಾಪ್ ನಲ್ಲಿ ನಾಯಕ ರಕ್ಷಿತ್, ನಾಯಕಿ ಅಮೃತಾ ಪ್ರೇಮ್ ಸೇರಿದಂತೆ ಇಡೀ ತಂಡ ಭಾಗಿಯಾಗಿದೆ. ಇನ್ನೂ ಅಮೃತಾ ಪ್ರೇಮ್ ತಮ್ಮ ಪಾತ್ರಕ್ಕೆ ಬೇಕಾದ ಕಸರತ್ತಿನೊಂದಿಗೆ ಶೀಘ್ರದಲ್ಲಿಯೇ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

    ಅಮೃತಾ ಪ್ರೇಮ್ (Amrita Prem) ನಾಯಕಿಯಾಗಿ ಅಭಿನಯಿಸಿದ್ದ ಟಗರು ಪಲ್ಯ ಸಿನಿಮಾ ವಿಶೇಷವಾಗಿಯೇ ಇತ್ತು. ಹಳ್ಳಿ ಹುಡುಗಿಯಾಗಿಯೆ ಅಮೃತಾ ಪ್ರೇಮ್ ತುಂಬಾನೆ ಹೆಚ್ಚು ಗಮನ ಸೆಳೆದಿದ್ದರು. ಮೊದಲ ಚಿತ್ರದಲ್ಲಿಯೇ ದೊಡ್ಡ ಕಲಾವಿದರ ಮುಂದೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.  ಚಿತ್ರದ ಮೂಲಕವೇ ಸೌತ್ ಫಿಲ್ಮಂ ಫೇರ್ ಪ್ರಶಸ್ತಿಯನ್ನ ಪಡೆದುಕೊಂಡಿದ್ದಾರೆ. ದಕ್ಷಿಣದ ವಿವಿಧ ಭಾಷೆಯ ಸಿನಿಮಾಗಳಿಗೆ ವಿವಿಧ ವಿಭಾಗದಲ್ಲಿಯೇ ಪ್ರಶಸ್ತಿಯನ್ನ ಕೊಡಲಾಗುತ್ತದೆ. ಆ ರೀತಿ ಕನ್ನಡದ ಟಗರು ಪಲ್ಯದ ಚಿತ್ರದಲ್ಲಿ ನಟಿಸಿರೋ ನಟಿ ಅಮೃತಾ ಪ್ರೇಮ್, ಅತ್ಯುತ್ತಮ ಡೆಬ್ಯು ಪ್ರಶಸ್ತಿ ಪಡೆದುಕೊಂಡಿದ್ದಾರೆ.

    ಕಿರುಚಿತ್ರ, ಧಾರಾವಾಹಿ, ರಿಯಾಲಿಟಿ ಶೋ ಅಂತಿದ್ದ ಸ್ಮೈಲ್ ಗುರು ರಕ್ಷಿತ್ ನಾಯಕನಾಗಿ ಇಂಡಸ್ಟ್ರಿಗೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಚೊಚ್ಚಲ ಸಿನಿಮಾಗೆ ‘ಆಕಾಶ್’, ‘ಅರಸು’ ಅಂತಹ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮಹೇಶ್ ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ.

    ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕು ಎಂಬ ಉದ್ದೇಶದಿಂದ ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದರೆ, ಸತ್ಯ ಅವರು ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಿದ್ದಾರೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

  • ಸಹೋದರಿ ಮೀರಾ ದಾಂಪತ್ಯಕ್ಕೆ ಶುಭಕೋರಿದ ಪ್ರಿಯಾಂಕಾ ಚೋಪ್ರಾ

    ಸಹೋದರಿ ಮೀರಾ ದಾಂಪತ್ಯಕ್ಕೆ ಶುಭಕೋರಿದ ಪ್ರಿಯಾಂಕಾ ಚೋಪ್ರಾ

    ಬಾಲಿವುಡ್ ಬ್ಯೂಟಿ ಮೀರಾ ಚೋಪ್ರಾ (Meera Chopra) ಅವರು ಉದ್ಯಮಿ ರಕ್ಷಿತ್ ಜೊತೆ ಮಾರ್ಚ್ 12ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಸಹೋದರಿ ಮೀರಾಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಿಯಾಂಕಾ ಚೋಪ್ರಾ (Priyanka Chopra) ವೈವಾಹಿಕ ಜೀವನದ ಆರಂಭಕ್ಕೆ ವಿಶೇಷವಾಗಿ ಶುಭಕೋರಿದ್ದಾರೆ. ಇದನ್ನೂ ಓದಿ:ಅಣ್ಣಾಮಲೈ ನಟನೆಯ ‘ಅರಬ್ಬೀ’ ಚಿತ್ರದ ಟ್ರೈಲರ್ ರಿಲೀಸ್

    ಜೈಪುರ್‌ನಲ್ಲಿ ಅದ್ಧೂರಿಯಾಗಿ ರಕ್ಷಿತ್ ಜೊತೆ ಮೀರಾ ಚೋಪ್ರಾ ಮದುವೆ ನಡೆಯಿತು. ಈ ಮದುವೆಗೆ ನಟಿ ಪ್ರಿಯಾಂಕಾ ಚೋಪ್ರಾ ಗೈರಾಗಿದ್ದರು. ಆದರೆ ಮನೆ ಮಗಳು ಮೀರಾ ಮದುವೆಗೆ ಪ್ರಿಯಾಂಕಾ ಚೋಪ್ರಾ ತಾಯಿ ಮಧು ಚೋಪ್ರಾ ಹಾಜರಿ ಹಾಕಿ ಶುಭಹಾರೈಸಿದ್ದರು. ಕೆಲಸ ಕಮೀಟ್‌ಮೆಂಟ್‌ನಿಂದ ಪ್ರಿಯಾಂಕಾ ಗೈರಾಗಿದ್ದರು.

    ಇದೀಗ ಸಹೋದರಿ ಮೀರಾಗೆ ಹೊಸ ಜರ್ನಿಗೆ ಪ್ರೀತಿಯಿಂದ ಶುಭಕೋರಿದ್ದಾರೆ. ಅಭಿನಂದನೆಗಳು ಮೀರಾ ಚೋಪ್ರಾ ಮತ್ತು ರಕ್ಷಿತ್ ಎಂದು ಮನಸಾರೆ ನಟಿ ಹಾರೈಸಿದ್ದಾರೆ. ಪ್ರಿಯಾಂಕಾ ಹಾರೈಕೆಗೆ ಮೀರಾ ಪ್ರೀತಿಯಿಂದ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ನಾಳೆ ಅಪ್ಪು ನಟನೆಯ ‘ಜಾಕಿ’ ಸಿನಿಮಾ ರಿಲೀಸ್

    ನಿಮ್ಮ ಹಾರೈಕೆಗೆ ಧನ್ಯವಾದಗಳು. ಹೊಸ ಜೀವನ ಶುರು ಮಾಡಲು ಕಾತರದಿಂದ ಕಾಯುತ್ತೇನೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ತುಂಬು ಹೃದಯದಿಂದ ಪ್ರೀತಿ ಹಿಂದಿರುಗಿಸುತ್ತಿದ್ದೇನೆ ಎಂದು ಮೀರಾ ರಿಯಾಕ್ಟ್ ಮಾಡಿದ್ದಾರೆ. ಸದ್ಯ ಇಬ್ಬರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದೇನೆ.

    ಎಂದೆಂದಿಗೂ ಸಂತೋಷ, ಜಗಳ, ನಗು, ಕಣ್ಣೀರು, ಮತ್ತು ನೆನಪುಗಳು ಈ ಜೀವಮಾನದಲ್ಲಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಮ್ಮೊಂದಿಗೆ ಪ್ರತಿ ಜನ್ಮ ಬದುಕುತ್ತೇನೆ ಎಂದು ಮೀರಾ ಮದುವೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು.

    ಕನ್ನಡದ ‘ಅರ್ಜುನ್’ (Arjun) ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಅವರು ಮಾರ್ಚ್ 11ರಂದು ಮೆಹೆಂದಿ, ಸಂಗೀತ ಕಾರ್ಯಕ್ರಮದ ಜೊತೆ ಸೆಲೆಬ್ರೆಟಿ ಸ್ನೇಹಿತರಿಗೆ ಕಾಕ್‌ಟೈಲ್ ಪಾರ್ಟಿ ಆಯೋಜಿಸಿದ್ದರು. ಇಂದು (ಮಾ.12) ಅದ್ಧೂರಿಯಾಗಿ ಜೈಪುರನಲ್ಲಿ ಮದುವೆಯಾಗಿದ್ದಾರೆ.

    ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆದಿತ್ತು.ಮೀರಾ ಮದುವೆ ಸಂಭ್ರಮದಲ್ಲಿ ಬಾಲಿವುಡ್ ನಟ-ನಟಿಯರು ಭಾಗಿಯಾಗಿದ್ದರು. ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ (Darshan) ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ಅರ್ಜುನ್ (Arjun) ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.

    ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ.

    ‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

  • ಬಾಲಿವುಡ್ ಬೆಡಗಿ ಮೀರಾ ಚೋಪ್ರಾ ವೆಡ್ಡಿಂಗ್ ಕಾರ್ಡ್ ವೈರಲ್: ಏನೆಲ್ಲ ವಿಶೇಷ

    ಬಾಲಿವುಡ್ ಬೆಡಗಿ ಮೀರಾ ಚೋಪ್ರಾ ವೆಡ್ಡಿಂಗ್ ಕಾರ್ಡ್ ವೈರಲ್: ಏನೆಲ್ಲ ವಿಶೇಷ

    ನ್ನಡದ ಅರ್ಜುನ್ ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಈ ನಟಿಯ ಮದುವೆಗೆ ಒಟ್ಟು ಆರು ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದೆ. ಅಷ್ಟೂ ಕಾರ್ಡ್ ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಮುಂಬೈ ಬೆಡಗಿ, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸಹೋದರಿ ಮೀರಾ ಚೋಪ್ರಾ (Meera Chopra) ಉದ್ಯಮಿ ರಕ್ಷಿತ್ (Rakshit) ಎನ್ನುವವರ ಜೊತೆ ಮದುವೆ ಆಗುತ್ತಿದ್ದಾರೆ. ಇದೇ ಮಾರ್ಚ್ 11 ಮತ್ತು 12ರಂದು ಮದುವೆ ಸಮಾರಂಭ ನಡೆಯಲಿದೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ (Wedding) ನಡೆಯಲಿದೆ. ಅದಕ್ಕಾಗಿ ಸಕಲ ಸಿದ್ಧತೆ ಕೂಡ ನಡೆಯುತ್ತಿದೆ.

    ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ಅರ್ಜುನ್ ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.

    ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ.

     

    ‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

  • ಶೂಟಿಂಗ್ ಸೆಟ್‍ನಲ್ಲಿ ಕೂದಲೆಳೆಯ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಮಹೇಶ

    ಶೂಟಿಂಗ್ ಸೆಟ್‍ನಲ್ಲಿ ಕೂದಲೆಳೆಯ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಮಹೇಶ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಪುಟ್ಟಗೌರಿ ಮದುವೆ’ ಶೂಟಿಂಗ್ ಸೆಟ್‍ನಲ್ಲಿ ನಟ ರಕ್ಷಿತ್ (ಮಹೇಶ) ಕೂದಲೆಳೆಯ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಪುಟ್ಟಗೌರಿ ಮದುವೆ ಧಾರವಾಹಿಯಲ್ಲಿ ಇತ್ತೀಚೆಗೆ ಫೈಟ್ ಸೀನೊಂದು ಚಿತ್ರೀಕರಿಸಲಾಗಿತ್ತು. ಈ ದೃಶ್ಯದಲ್ಲಿ ಮಹೇಶ ಹಾಗೂ ಹಿಮಾ ಜೀಪ್‍ನಲ್ಲಿ ಹೋಗುವಾಗ ರೌಡಿಗಳು ಅವರ ಮೇಲೆ ದಾಳಿ ನಡೆಸಲು ಮುಂದಾಗುತ್ತಾರೆ.

    ಈ ವೇಳೆ ರೌಡಿಗಳು ಟ್ಯೂಬ್‍ಲೈಟ್‍ನಿಂದ ಮಹೇಶನ ಮೇಲೆ ಹಲ್ಲೆ ಮಾಡವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದರು. ರೌಡಿಗಳು ಟ್ಯೂಬ್‍ಲೈಟ್‍ನಿಂದ ಮಹೇಶನಿಗೆ ಹೊಡೆಯುವಾಗ ಅದರ ಪೀಸ್‍ಗಳು ಕಣ್ಣಿಗೆ ಚುಚ್ಚಬೇಕಿತ್ತು. ಅಷ್ಟರಲ್ಲಿ ಮಹೇಶ ಈ ಅವಘಡದಿಂದ ಪಾರಾಗಿದ್ದಾರೆ.

    ಸದ್ಯ ಮಹೇಶ ಅಲಿಯಾಸ್ ರಕ್ಷಿತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ಅವರ ಆರೋಗ್ಯ ಕೂಡ ಚೆನ್ನಾಗಿದೆ ಎಂದು ಪುಟ್ಟಗೌರಿ ಧಾರವಾಹಿ ತಂಡ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv