Tag: Rakshith Shetty

  • ಈಗೆಲ್ಲಾ ಕಪ್ಪು ಕಪ್ಪಾಗಿರೋದೇ ಟ್ರೆಂಡ್‌- ಹಾಸ್ಟೆಲ್‌ ಹುಡುಗರಿಗೆ ದಿಗಂತ್‌ ಕ್ಲಾಸ್‌

    ಈಗೆಲ್ಲಾ ಕಪ್ಪು ಕಪ್ಪಾಗಿರೋದೇ ಟ್ರೆಂಡ್‌- ಹಾಸ್ಟೆಲ್‌ ಹುಡುಗರಿಗೆ ದಿಗಂತ್‌ ಕ್ಲಾಸ್‌

    ಸಿನಿ ದುನಿಯಾದಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagidaare) ಸಿನಿಮಾ ಒಂದಲ್ಲಾ ಒಂದು ರೀತಿಯಲ್ಲಿ ಮೋಡಿ ಮಾಡುತ್ತಲೇಯಿದೆ. ಈಗಾಗಲೇ ಈ ಚಿತ್ರಕ್ಕೆ ಮೋಹಕ ತಾರೆ ರಮ್ಯಾ, ದಿಗಂತ್ (Diganth)ಸಾಥ್ ನೀಡಿದ್ದಾರೆ. ದಿಗಂತ್, ಚಿತ್ರದ ಪ್ರಮೋಷನ್ ಟೀಸರ್ ಮೂಲಕ ಗಮನ ಸೆಳೆದಿದ್ದಾರೆ. ಈ ಬೆನ್ನಲ್ಲೇ ಚಿತ್ರದ  ಟ್ರೈಲರ್‌ ರಿಲೀಸ್‌ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಹಾಸ್ಟೆಲ್ ಹುಡುಗರ ಕಥೆಗೆ ಸ್ಯಾಂಡಲ್‌ವುಡ್ ಸ್ಟಾರ್ ತಾರೆಯರು ಕೂಡ ಸಾಥ್ ನೀಡಿದ್ದಾರೆ.

    ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಭಿನ್ನ ಟೈಟಲ್ ಮೂಲಕ ಸಿನಿಮಾ ತಂಡ ಗಮನ ಸೆಳೆಯುತ್ತಿದೆ. ಈಗಾಗಲೇ ಹಾಸ್ಟೆಲ್ ಹುಡುಗರು ಊರಿಗೆಲ್ಲಾ ಫೇಮಸ್ ಆಗಿದ್ದಾರೆ. ಅಪ್ಪು, ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್, ರಮ್ಯಾ(Ramya) ಸೇರಿದಂತೆ ಸೂಪರ್‌ಸ್ಟಾರ್‌ಗಳೆಲ್ಲರೂ ಹೊಸಬರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಅಲ್ಲದೆ ರಿಷಬ್ ಶೆಟ್ಟಿ, ಶೈನ್ ಶೆಟ್ಟಿ, ದಿಗಂತ್ ಅಂತಹ ಕನ್ನಡ ತಾರೆಯರು ನಟಿಸಿದ್ದಾರೆ. ಇದನ್ನೂ ಓದಿ:‘ರಂಗಬಲಿ’ ಸಕ್ಸಸ್ ಮೀಟ್‌ನಿಂದ ನಾಗ ಶೌರ್ಯ ವಾಕ್ ಔಟ್

    ಹೊಸಬರ ಸಿನಿಮಾವೇ ಆಗಿದ್ದರೂ, ಕನ್ನಡ ತಾರೆಯರೆಲ್ಲರೂ ಹೊಸಬರ ಸಿನಿಮಾಗೆ ಸಪೋರ್ಟ್ ಮಾಡುತ್ತಿದ್ದಾರೆ. ಈಗ್ಯಾಕೆ ಈ ಮಾತು ಅಂದ್ರೆ, ಹಾಸ್ಟೆಲ್ ಹುಡುಗರ ಜೊತೆ ದೂದ್ ಪೇಡಾ ದಿಗಂತ್ ಸಾಥ್ ನೀಡಿದ್ದು, ಕಪ್ಪು ಕಪ್ಪಾಗಿರೋ ಸಿನಿಮಾ ಬಗ್ಗೆ ಸಖತ್ ಡೈಲಾಗ್ ಬಿಟ್ಟಿದ್ದಾರೆ. ಆದರೆ ದಿಗಂತ್ ರೋಲ್ ಬಗ್ಗೆ ಹಿಂಟ್ ಬಿಟ್ಟುಕೊಟ್ಟಿಲ್ಲ. ದಿಗಂತ್ (Actor Diganth) ಟೀಸರ್‌ನಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಪ್ರಿಯರಿಗೆ ಇದು ಕಾಮಿಡಿ ಕಿಕ್ ಕೊಡ್ತಿದೆ ದಿಗಂತ್ ಲುಕ್ ಮ್ಯಾನರಿಸಂ, ಡೈಲಾಗ್ ಡಿಲೆವರಿ ಎಲ್ಲವೂ ಮಜವಾಗಿದೆ. ಈಗೆಲ್ಲ ಕಪ್ಪು ಕಪ್ಪಾಗಿರೋದೇ ಟ್ರೆಂಡ್.. ಆಗಲೇ ಜನ ಥಿಯೇಟರ್‌ಗೆ ಬರೋದು ಅಂತ ಹೇಳಿರೋ ಡೈಲಾಗ್ ಸಿನಿಪ್ರಿಯರಿಗೆ ಖುಷಿ ಕೊಟ್ಟಿದೆ. ಅಲ್ಲದೆ, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಟ್ರೈಲರ್‌ಗೆ ಲೀಡ್ ಕೊಟ್ಟಿದೆ.

    ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಹಾಡು, ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. ಇದೇ ಜುಲೈ 10ರಂದು ಸಂಜೆ 6 ಗಂಟೆಗೆ ಸಿನಿಮಾ ಟ್ರೈಲರ್ ರಿಲೀಸ್ ಆಗಲಿದೆ. ಇದನ್ನು ದಿಗಂತ್ ವಿಡಿಯೋ ಮೂಲಕವೇ ಅನೌನ್ಸ್ ಮಾಡಲಾಗಿದೆ. ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ಟೀಸರ್ ಕಾರ್ಯಕ್ರಮ ಆಯೋಜಿಸಿದ್ದು, ಮುಖ್ಯ ಅತಿಥಿಗಳಾಗಿ ಅಶ್ವಿನಿ ಪುನೀತ್‌ರಾಜ್‌ಕುಮಾರ್, ಧ್ರುವ ಸರ್ಜಾ, ಕಾಂತಾರ ಸ್ಟಾರ್ ರಿಷಬ್(Rishab Shetty), ರಕ್ಷಿತ್ ಶೆಟ್ಟಿ (Rakshit Shetty) ಆಗಮಿಸುತ್ತಿದ್ದಾರೆ. ಸದ್ಯದಲ್ಲೇ ಹಾಸ್ಟೆಲ್ ಹುಡುಗರ ಕಥೆ ನಿಮ್ಮ ಮುಂದೆ ಬರಲಿದೆ.

    ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ. ವರುಣ್ ಕುಮಾರ್ ಗೌಡ , ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ. ಪ್ರತಿ ಬಾರಿ ಯುನಿಕ್ ಕಾನ್ಸೆಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾರಂಗಕ್ಕೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್: ನಟಿ ರಶ್ಮಿಕಾ ಮಂದಣ್ಣ

    ಸಿನಿಮಾರಂಗಕ್ಕೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್: ನಟಿ ರಶ್ಮಿಕಾ ಮಂದಣ್ಣ

    ಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ದು ಮಾಡ್ತಿದ್ದಾರೆ. ಸದ್ಯ `ಮಿಷನ್ ಮಜ್ನು’ (Mission Majnu) ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿರಿಕ್ ಬ್ಯೂಟಿ ರಶ್ಮಿಕಾ, ರಕ್ಷಿತ್ ಮತ್ತು ರಿಷಬ್ ಮತ್ತು ಪುನೀತ್ ರಾಜ್‌ಕುಮಾರ್ (Puneeth Rajkumar) ಅವರನ್ನ ನೆನಪಿಸಿಕೊಂಡಿದ್ದಾರೆ. ಇಬ್ಬರ ಬಗ್ಗೆ ಮಾತನಾಡಿರುವ ನಟಿಯ ಹೇಳಿಕೆ ಸಖತ್ ಸದ್ದು ಮಾಡುತ್ತಿದೆ.

    ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದೇ ಕಿರಿಕ್ ಪಾರ್ಟಿ ಸಿನಿಮಾದಿಂದ, ರಿಷಬ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ರಶ್ಮಿಕಾ ನಟಿಸಿದ್ದರು. ಎರಡನೇ ಸಿನಿಮಾ `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ರಶ್ಮಿಕಾ ನಟಿಸಿದ್ದರು. ರಶ್ಮಿಕಾ ನಟಿಸಿದ ಈ ಎರಡು ಸಿನಿಮಾಗಳ ಬಗ್ಗೆ ಸಂದರ್ಶನವೊಂದರಲ್ಲಿ ಮತ್ತೆ ಪ್ರಶ್ನೆ ಎದುರಾಗಿದೆ. ಈ ನಟಿ ಅಚ್ಚರಿಯ ಹೇಳಿಕೆಯನ್ನ ಕೊಟ್ಟಿದ್ದಾರೆ. ಇದನ್ನೂ ಓದಿ: ದುಬೈಗೆ ಹಾರಿದ ರಿಷಬ್ ಶೆಟ್ಟಿ ಫ್ಯಾಮಿಲಿ: ಶೆಟ್ರ ಅಡ್ವೆಂಚರ್ ಹೇಗಿದೆ ಗೊತ್ತಾ?

    ರಕ್ಷಿತ್ ಶೆಟ್ಟಿ (Rakshith Shetty) ಹಾಗೂ ರಿಷಬ್ (Rishab) ಅವರು ಸಿನಿಮಾ ಇಂಡಸ್ಟ್ರಿಯ (Film Industry) ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಅಂತಾ ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಅವರಿಗೆ ಧನ್ಯವಾದ ಎಂದಿದ್ದಾರೆ ರಶ್ಮಿಕಾ.

    ಇದೀಗ ರಶ್ಮಿಕಾ ಈ ಹೇಳಿಕೆ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಅಚ್ಚರಿಪಟ್ಟಿದ್ದಾರೆ. ಕೆಟ್ಟ ಮೇಲೆ ಈಗ ಬುದ್ಧಿ ಬಂತಾ ಅಂದರೆ, ಇನ್ನೂ ಕೆಲವರು ನಮ್ಮವರಾಗಲು ಪ್ರಯತ್ನಿಸಬೇಡಿ ಎಂದು ರಶ್ಮಿಕಾಗೆ (Rashmika) ಟಾಂಗ್ ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಮಿಳಿನತ್ತ ಸಿಂಪಲ್‌ ಸ್ಟಾರ್:‌ ದಳಪತಿ ವಿಜಯ್‌ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ

    ತಮಿಳಿನತ್ತ ಸಿಂಪಲ್‌ ಸ್ಟಾರ್:‌ ದಳಪತಿ ವಿಜಯ್‌ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ

    `777 ಚಾರ್ಲಿ’ (777 Charlie) ಸೂಪರ್ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಕ್ಷಿತ್ ಶೆಟ್ಟಿ (Rakshith Shetty) ಗುರುತಿಸಿಕೊಂಡಿದ್ದಾರೆ. ಸದ್ಯ ರಕ್ಷಿತ್ ಬಗ್ಗೆ ಬ್ರೇಕಿಂಗ್ ಸುದ್ದಿಯೊಂದು ಸಿಕ್ಕಿದೆ. ತಮಿಳು ಸಿನಿಮಾದತ್ತ ಸಿಂಪಲ್ ಸ್ಟಾರ್ ಮುಖ ಮಾಡಿದ್ದಾರೆ. ಸೂಪರ್ ಸ್ಟಾರ್ ಜೊತೆ ರಕ್ಷಿತ್ ಶೆಟ್ಟಿ ತೆರೆಹಂಚಿಕೊಳ್ಳಲಿದ್ದಾರೆ.

    ಕಲೆಗೆ ಕಲಾವಿದನಿಗೆ ಭಾಷೆಯ ಬೇಲಿಯಿಲ್ಲ ಎಂಬ ಮಾತನ್ನ ಚಿತ್ರರಂಗದಲ್ಲಿ ಮತ್ತೆ ಪ್ರೂವ್ ಆಗಿದೆ. ಬಾಲಿವುಡ್ ಮಂದಿ, ಸೌತ್ ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸೋದು, ಕನ್ನಡದ ನಟ- ನಟಿಯರು ಪರಭಾಷೆಗಳಲ್ಲಿ ಮಿಂಚೋದು ಕಾಮನ್ ಆಗಿದೆ. ಇತ್ತೀಚೆಗಷ್ಟೇ ಶಿವಣ್ಣ ಕೂಡ `ಜೈಲರ್’ ಸಿನಿಮಾದಲ್ಲಿ ನಟಿಸಿ ಬಂದಿದ್ದರು. ಈಗ ಈ ಸಾಲಿಗೆ ರಕ್ಷಿತ್ ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ. ತಮಿಳು ರಂಗದತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಸೆಟ್ ನಲ್ಲಿ ಅವಘಡ: ‘ದಿ ವ್ಯಾಕ್ಸಿನ್ ವಾರ್’ ನಟಿಗೆ ಗಾಯ

    ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kangaraj) ನಿರ್ದೇಶನದ ಮುಂದಿನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕೂಡ ಬಣ್ಣ ಹಚ್ಚಲಿದ್ದಾರೆ ಎನ್ನಲಾಗುತ್ತಿದೆ. ದಳಪತಿ ವಿಜಯ್ (Thalapathy Vijay) ನಟನೆಯ ಚಿತ್ರದಲ್ಲಿ ರಕ್ಷಿತ್ ಕೂಡ ಮೇಜರ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ವಿಜಯ್, ತ್ರಿಷಾ ಕೃಷ್ಣನ್, ಕೀರ್ತಿ ಸುರೇಶ್ ಅಭಿನಯದ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕೂಡ ಇರಲಿದ್ದಾರೆ. ಆದರೆ ಇದೀಗ ಹೊರಬಿದ್ದಿರುವ ಸುದ್ದಿ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಕ್ಷಿತ್ ಶೆಟ್ಟಿ ಜೊತೆಗಿನ `ಕಿರಿಕ್ ಪಾರ್ಟಿ’ ಚಿತ್ರ ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

    ರಕ್ಷಿತ್ ಶೆಟ್ಟಿ ಜೊತೆಗಿನ `ಕಿರಿಕ್ ಪಾರ್ಟಿ’ ಚಿತ್ರ ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

    ಶ್ಮಿಕಾ ಮಂದಣ್ಣ (Rashmika Mandanna) ಟಾಲಿವುಡ್, ಬಾಲಿವುಡ್‌ನಲ್ಲಿ ನೆಲೆ ನಿಲ್ಲಲು ಕಾರಣವಾಗಿರೋದು `ಕಿರಿಕ್ ಪಾರ್ಟಿ'(Kirik Party) ಸಿನಿಮಾ. ಇದೀಗ ಈ ಚಿತ್ರಕ್ಕೆ 6 ವರ್ಷಗಳನ್ನ ಪೂರೈಸಿದೆ. ಸಾಕಷ್ಟು ವಿವಾದಗಳ ಬೆನ್ನಲ್ಲೇ ತಮ್ಮ ಕಿರಿಕ್ ಪಾರ್ಟಿ ಸಿನಿಮಾ ಜರ್ನಿಯನ್ನ ರಶ್ಮಿಕಾ ಮಂದಣ್ಣ ನೆನಪು ಮಾಡಿಕೊಂಡಿದ್ದಾರೆ. ಈ ಕುರಿತು ಸ್ಪೆಷಲ್ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.

    ರಕ್ಷಿತ್ ಶೆಟ್ಟಿ(Rakshith Shetty), ರಶ್ಮಿಕಾ ಮಂದಣ್ಣ ಅವರ ನಟನೆಯ `ಕಿರಿಕ್ ಪಾರ್ಟಿ’ ಡಿ.30, 2016ರಲ್ಲಿ ತೆರೆಕಂಡಿತ್ತು. ಸೂಪರ್ ಡೂಪರ್ ಆಗಿ ಸಿನಿಮಾ ಸಕ್ಸಸ್ ಕಂಡಿತ್ತು. ಸಾನ್ಯ ಮತ್ತು ಕರ್ಣನ ಲವ್ ಸ್ಟೋರಿಗೆ ಫ್ಯಾನ್ಸ್ ಫಿದಾ ಆಗಿದ್ದರು. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಪರಭಾಷೆಯಲ್ಲಿ ಬ್ಯುಸಿ ಆದರು. ಕೆಲವು ಕಡೆಗಳಲ್ಲಿ ಅವರು ಕನ್ನಡವನ್ನು, ಮೊದಲ ಚಿತ್ರವನ್ನು ಕಡೆಗಣಿಸಿದ್ದಿದೆ. ಇದರಿಂದ ಅನೇಕರ ಕೋಪಕ್ಕೆ ಅವರು ಕಾರಣರಾದರು. ಈ ವಿಚಾರಕ್ಕೆ ಒಂದು ವರ್ಗದ ಜನರು ರಶ್ಮಿಕಾ ಅವರನ್ನು ದ್ವೇಷ ಮಾಡಲು ಆರಂಭಿಸಿದರು. ಬ್ಯಾನ್ (Ban) ಮಾಡಲೇಬೇಕು ಎಂಬ ಹಂತಕ್ಕೆ ಸೋಷಿಯಲ್ ಮೀಡಿಯಾ ಮೂಲಕ ಪ್ರತಿಭಟನೆ ಮಾಡಿದ್ದರು. ಈಗ ರಶ್ಮಿಕಾ `ಕಿರಿಕ್ ಪಾರ್ಟಿ’ ಸಿನಿಮಾ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್‌ನಿಂದ ಹೊರ ಬಂದ್ಮೇಲೆ ಸಾನ್ಯನ ತಬ್ಬಿಕೊಳ್ತೀನಿ: ರೂಪೇಶ್‌ ಶೆಟ್ಟಿ

    `ಕಿರಿಕ್ ಪಾರ್ಟಿ’ಗೆ ಆರು ವರ್ಷ. ಎಲ್ಲವೂ ಆರಂಭವಾದ ದಿನ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ಜತೆಗೆ ಕಿರಿಕ್ ಪಾರ್ಟಿ ಪೋಸ್ಟರ್ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಂಚಿಕೊಂಡಿರುವ ಈ ಸ್ಟೇಟಸ್‌ನ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

    ರಶ್ಮಿಕಾ ನಡೆ ನೋಡಿ ಅನೇಕ ಅಭಿಮಾನಿಗಳು ಕೆಟ್ಟ ಮೇಲೆ ಬುದ್ಧಿ ಬಂತಾ. ಈಗ ನಿಮ್ಮ ಮೊದಲ ಸಿನಿಮಾ ನೆನಪಾಯ್ತಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ʻಕಾಂತಾರʼ ಹೀರೋ ರಿಷಬ್‌ ಕೈಬಿಟ್ಟ ಸಿನಿಮಾದಲ್ಲಿ ಲೂಸ್ ಮಾದ ಯೋಗಿ

    ʻಕಾಂತಾರʼ ಹೀರೋ ರಿಷಬ್‌ ಕೈಬಿಟ್ಟ ಸಿನಿಮಾದಲ್ಲಿ ಲೂಸ್ ಮಾದ ಯೋಗಿ

    `ಕಾಂತಾರ’ (Kantara) ಸೂಪರ್ ಸಕ್ಸಸ್ ನಂತರ ರಿಷಬ್ ಶೆಟ್ಟಿ (Rishab Shetty) ಇತ್ತೀಚೆಗೆ ರಕ್ಷಿತ್ ನಿರ್ಮಾಣದ `ಬ್ಯಾಚುಲರ್ ಪಾರ್ಟಿ’ (Bachelor Party) ಚಿತ್ರದಿಂದ ಹೊರಬಂದಿದ್ದರು. ರಿಷಬ್ ಕೈಬಿಟ್ಟ ಸಿನಿಮಾಗೆ ಕನ್ನಡದ ಪ್ರತಿಭಾನ್ವಿತ ನಟನನ್ನೇ ಕರೆತರಲಾಗಿದೆ. ಲೂಸ್ ಮಾದ ಯೋಗಿ (Loose Madha Yogi) ಈ ಚಿತ್ರದಲ್ಲಿ ನಟಿಸಲಿದ್ದಾರೆ.

    ರಕ್ಷಿತ್ ಮತ್ತು ರಿಷಬ್ ಒಟ್ಟಿಗೆ ಚಿತ್ರರಂಗಕ್ಕೆ ಕಾಲಿಟ್ಟವರು. ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದವರು. `ಕಿರಿಕ್ ಪಾರ್ಟಿ’ ಅಂತಹ ಸಿನಿಮಾ ಸೂಪರ್ ಹಿಟ್ ಚಿತ್ರವನ್ನ ಕೊಟ್ಟವರು. ಮತ್ತೆ ರಕ್ಷಿತ್ ಶೆಟ್ಟಿ ನಿರ್ಮಾಣದ `ಬ್ಯಾಚುಲರ್ ಪಾರ್ಟಿ’ ಚಿತ್ರಕ್ಕಾಗಿ ಒಂದಾಗಿದ್ದರು. ಆದರೆ ಈಗ ರಿಷಬ್, `ಕಾಂತಾರ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚ್ತಿದ್ದಾರೆ. ಈ ಚಿತ್ರದ ಸಕ್ಸಸ್ ಬೆನ್ನಲ್ಲೇ ರಕ್ಷಿತ್ ಚಿತ್ರವನ್ನು ರಿಷಬ್ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಸಾನ್ಯ ನೆನಪಲ್ಲಿ ಬಿಟ್ಟೋಗ್ಬೇಡ ಎಂದು ಭಾವುಕರಾದ ರೂಪೇಶ್ ಶೆಟ್ಟಿ

    `ಬ್ಯಾಚುಲರ್ ಪಾರ್ಟಿ’ಯಲ್ಲಿ ರಿಷಬ್, ದಿಗಂತ್, ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಇತ್ತೀಚೆಗೆ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿತ್ತು. ಈಗ ರಿಷಬ್ ಕೈಬಿಟ್ಟ ಮೇಲೆ ಅವರ ಪಾತ್ರಕ್ಕೆ ಲೂಸ್ ಮಾದ ಯೋಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ತೆರೆಕಂಡ `ಹೆಡ್‌ಬುಷ್‌’ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ಯೋಗಿ ಸೈ ಎನಿಸಿಕೊಂಡಿದ್ದರು.

    ಕಾಂತಾರ ಸಿನಿಮಾ ಸಕ್ಸಸ್ ನಂತರ ರಿಷಬ್ ಶೆಟ್ಟಿ, `ಕಾಂತಾರ 2’ಗೆ ಕಥೆ ಬರೆಯಲು ರೆಡಿಯಾಗಿದ್ದಾರೆ. ತೆರೆಮರೆಯಲ್ಲಿ ಈ ಸಿನಿಮಾಗಾಗಿ ಭರ್ಜರಿ ತಯಾರಿ ಮಾಡ್ತಿದ್ದಾರೆ. ಹಾಗಾಗಿ ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ರಿಷಬ್ ನಟಿಸಲು ಸಾಧ್ಯವಾಗುತ್ತಿಲ್ಲ.

    Live Tv
    [brid partner=56869869 player=32851 video=960834 autoplay=true]

  • `777 ಚಾರ್ಲಿ’ ಸಕ್ಸಸ್ ನಂತರ ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ

    `777 ಚಾರ್ಲಿ’ ಸಕ್ಸಸ್ ನಂತರ ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ

    ಹೊಸ ಪ್ರತಿಭೆಗಳಿಗೆ ಅವಕಾಶ ಕೊಟ್ಟು ನಿರ್ಮಾಣ ಮಾಡುವುದಕ್ಕೆ ರಕ್ಷಿತ್ ಶೆಟ್ಟಿ ಯಾವಾಗಲೂ ಮುಂದು. ಈಗ ರಕ್ಷಿತ್ ನೇತೃತ್ವದ ಪರಂವಃ ಸ್ಟುಡಿಯೋಸ್ ಕಡೆಯಿಂದ ಹೊಸ ಸಿನಿಮಾ ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದಾರೆ. ಭಿನ್ನ ಕಥೆ `ಮಿಥ್ಯ’ ಚಿತ್ರಕ್ಕೆ ರಕ್ಷಿತ್ ಬಂಡವಾಳ ಹೂಡಿದ್ದಾರೆ.

    `777 ಚಾರ್ಲಿ’ ಚಿತ್ರದ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಮತ್ತೆ ಹೊಸ ಸಿನಿಮಾ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಸುಮಂತ್ ಭಟ್ ನಿರ್ದೇಶನದ `ಮಿಥ್ಯ’ ಸಿನಿಮಾ ಪ್ರಯತ್ನದಲ್ಲೇ ಅವರು 11 ವರ್ಷದ ಬಾಲಕನ ಕಥೆಯನ್ನು ಹೇಳ ಹೊರಟಿದ್ದಾರೆ. ಬಾಲಕನ ನೋವಿನ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಬಾಲನಟ ಆತಿಶ್ ಶೆಟ್ಟಿ ನಟಿಸಿದ್ದಾರೆ. ಇದನ್ನೂ ಓದಿ:ಶೂಟಿಂಗ್ ವೇಳೆ ಶಿಲ್ಪಾ ಶೆಟ್ಟಿ ಕಾಲಿಗೆ ಗಂಭೀರ ಪೆಟ್ಟು

     

    View this post on Instagram

     

    A post shared by Rakshit Shetty (@rakshitshetty)

    ಪುಟ್ಟ ಬಾಲಕನ ತಂದೆ ತಾಯಿ ನಿಧನ ಹೊಂದುತ್ತಾರೆ. ಅವರ ನೆನಪುಗಳಿಂದ ಹೊರಬರಲಾರದ ಈ ಬಾಲಕ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಹಳೆಯ ಸಂಬಂಧಗಳಲ್ಲಿ ಹೊಸತನ ಕಾಣುವುದರ ಜತೆಗೆ ಹೊಸ ಸ್ನೇಹಿತರಲ್ಲಿ ಹಳೆಯ ಗೆಳೆತನ ಹುಡುಕುವ ಪಯಣವೇ ಈ ಮಿಥ್ಯ. ಸದ್ಯ ಚಿತ್ರದ ಪೋಸ್ಟರ್ ಮೂಲಕ ಅಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಥೈಲ್ಯಾಂಡ್‌ನಲ್ಲಿ `777 ಚಾರ್ಲಿ’ ಸಕ್ಸಸ್ ಸಂಭ್ರಮಿಸಿದ ರಕ್ಷಿತ್ & ಗ್ಯಾಂಗ್

    ಥೈಲ್ಯಾಂಡ್‌ನಲ್ಲಿ `777 ಚಾರ್ಲಿ’ ಸಕ್ಸಸ್ ಸಂಭ್ರಮಿಸಿದ ರಕ್ಷಿತ್ & ಗ್ಯಾಂಗ್

    ಕ್ಷಿತ್ ಶೆಟ್ಟಿ `777 ಚಾರ್ಲಿ’ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಕಲೆಕ್ಷನ್ ಮಾಡಿದೆ. ಈ ಖುಷಿಯಲ್ಲಿ ರಕ್ಷಿತ್ ಆಂಡ್ ಗ್ಯಾಂಗ್ ಥೈಲ್ಯಾಂಡ್‌ಗೆ ಹಾರಿದ್ದಾರೆ.

     

    View this post on Instagram

     

    A post shared by Rakshit Shetty (@rakshitshetty)

    ಧರ್ಮ ಮತ್ತು ಚಾರ್ಲಿ ಕಥೆಯನ್ನ ಅಭಿಮಾನಿಗಳು ಅಪ್ಪಿ ಒಪ್ಪಿಕೊಂಡಿದ್ದಾರೆ. ಮುಗ್ಧ ನಾಯಿ ಮತ್ತು ಧರ್ಮ ಡೆಡ್ಲಿ ಕಾಂಬಿನೇಷನ್‌ಗೆ ಫ್ಯಾನ್ಸ್ ಫಿದಾ ಆಗಿದ್ದರು. ಈ ಚಿತ್ರ ಗಲ್ಲಾಪೆಟ್ಟಿಗೆ 150 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ನಿರ್ಮಾಪಕನಾಗಿ ಗೆಲುವು ಕಂಡಿರೋ ರಕ್ಷಿತ್ ಶೆಟ್ಟಿ ಈಗ ತಮ್ಮ ಗ್ಯಾಂಗ್‌ನ ಕಟ್ಟಿಕೊಂಡು ಥೈಲ್ಯಾಂಡ್‌ಗೆ ಹಾರಿದ್ದಾರೆ.

     

    View this post on Instagram

     

    A post shared by Kiranraj K (@kiranraj_k)

    ಹೌದು.. `777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್ ಜತೆ ಚಾರ್ಲಿ ಕುಟುಂಬ ಕೂಡ ಥೈಲ್ಯಾಂಡ್‌ಗೆ ಹಾರಿದ್ದಾರೆ. ರಕ್ಷಿತ್ ಶೆಟ್ಟಿ ಜತೆ ನಿರ್ದೇಶಕ ಕಿರಣ್ ರಾಜ್ ಮತ್ತು ತೆರೆಯ ಹಿಂದೆ ಕೆಲಸ ಮಾಡುವ ತಂತ್ರಜ್ಞರು ಕೂಡ ಭಾಗಿಯಾಗಿದ್ದಾರೆ. ಥೈಲ್ಯಾಂಡ್‌ನ ಸುಂದರ ಜಾಗಗಳಿಗೆ ಭೇಟಿ ನೀಡಿದ್ದಾರೆ. ಇಡೀ ತಂಡ ವಿದೇಶದಲ್ಲಿ ರಕ್ಷಿತ್ ಜತೆ ಏಂಜಾಯ್ ಮಾಡಿದ್ದಾರೆ. ಆದರೆ ಇಲ್ಲಿ ಚಾರ್ಲಿ ಮಾತ್ರ ಮಿಸ್ಸಿಂಗ್. ಒಟ್ನಲ್ಲಿ ತಂಡದ ಖುಷಿ, ಜೋಶ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!

    ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!

    ಕಿಚ್ಚ ಸುದೀಪ್ ಸದ್ಯ `ವಿಕ್ರಾಂತ್ ರೋಣ’ ಚಿತ್ರದ ಸಕ್ಸಸ್ ಅಲೆಯಲ್ಲಿದ್ದಾರೆ. ಈ ಬೆನ್ನಲ್ಲೇ ಗಾಂಧಿನಗರದಲ್ಲಿ ಹೊಸ ವಿಚಾರವೊಂದು ಸಖತ್ ಸೌಂಡ್ ಮಾಡುತ್ತಿದೆ. ಸುದೀಪ್ ಮತ್ತು ರಕ್ಷಿತ್ ಶೆಟ್ಟಿ ನಡುವೆ ಗೆಳೆತನ ಸರಿಯಿಲ್ಲ. ಇವರಿಬ್ಬರ ಮಧ್ಯೆ ಕೋಲ್ಡ್‌ ಫೈಟ್ ನಡೆಯುತ್ತಿದೆ ಎಂದು ಈ ಕುರಿತು ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.

    ಒಂದು ಕಡೆ `ವಿಕ್ರಾಂತ್ ರೋಣ’ ಸಿನಿಮಾ ಯಶಸ್ಸಿನೆಡೆಗೆ ಸಾಗುತ್ತಿದ್ದರೆ ಇನ್ನೊಂದೆಡೆ ಸುದೀಪ್ ಹಾಗೂ ರಕ್ಷಿತ್ ಹೊಸ ಸಿನಿಮಾದ ಬಗ್ಗೆಯೂ ಚರ್ಚೆ ಕೇಳಿ ಬರುತ್ತಿದೆ. ಈ ನಡುವೆ ಸುದೀಪ್ ಅವರ ಮುಂದಿನ ಸಿನಿಮಾದ ಬಗ್ಗೆಯೂ ಈಗಿನಿಂದಲೇ ಚರ್ಚೆಗಳು ಶುರುವಾಗಿವೆ. ಸುದೀಪ್‌ಗಾಗಿ ತಾವೊಂದು ಸಿನಿಮಾ ಮಾಡುವುದಾಗಿ ಈ ಹಿಂದೆ ರಕ್ಷಿತ್ ಘೋಷಿಸಿದ್ದರು. ಈ ಬಗ್ಗೆ ಇದೀಗ ಮಾತನಾಡಿರುವ ಸುದೀಪ್, ಸಿನಿಮಾ ವಿಷಯವಾಗಿ ರಕ್ಷಿತ್ ಶೆಟ್ಟಿ ತಮ್ಮೊಂದಿಗೆ ಜಗಳವಾಡಿದ್ದಾಗಿಯೂ ಹೇಳಿದ್ದಾರೆ. ಇದನ್ನನವರು ಕೋಲ್ಡ್ ಫೈಟ್ ಅಂತ ಕರೆದಿದ್ದಾರೆ. ಈ ಶೀತಲ ಸಮರಕ್ಕೆ ಕಾರಣ ಕಥೆಯಲ್ಲಿ ಇಬ್ಬರಿಗೂ ಬಂದಿರುವ ಭಿನ್ನಾಭಿಪ್ರಾಯವಂತೆ.

    `ವಿಕ್ರಾಂತ್ ರೋಣ’ ಪ್ರಚಾರದ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಸುದೀಪ್, ರಕ್ಷಿತ್ ಶೆಟ್ಟಿ ಬಹಳ ಒಳ್ಳೆಯ ಹುಡುಗ. ಆದರೆ ಸಿನಿಮಾ ಕುರಿತಂತೆ ನನ್ನ ಜೊತೆ ಕೋಲ್ಡ್ ಫೈಟ್ ಅವರಿಗಿದೆ. ಆದರೆ ಆತ ಅದನ್ನು ತೋರಿಸಿಕೊಳ್ಳುವುದಿಲ್ಲ. ನನಗೂ ಕೆಲವು ಅಭಿಪ್ರಾಯ ಬೇಧಗಳಿವೆ. ನನಗೆ ರಕ್ಷಿತ್ ಬರವಣಿಗೆ ಬಗ್ಗೆ ಹೆಮ್ಮೆ ಇದೆ, `777 ಚಾರ್ಲಿ’ ಸಿನಿಮಾದ ಬಳಿಕ ಅವರ ನಟನೆಯ ಬಗ್ಗೆಯೂ ಖುಷಿ ಎನಿಸುತ್ತದೆ ಎಂದು ನಟ ಸುದೀಪ್ ಹೊಗಳಿದ್ದಾರೆ. ಇದನ್ನೂ ಓದಿ:ಟೂ ಪೀಸ್ ಧರಿಸಿ, ಪಡ್ಡೆಹುಡುಗರ ನಿದ್ದೆಗೆಡಿಸಿದ ನಟಿ ವೇದಿಕಾ

    ಸುದೀಪ್‌ಗಾಗಿ ಸಿನಿಮಾ ನಿರ್ದೇಶನ ಮಾಡುವುದಾಗಿ ಈ ಹಿಂದೆಯೇ ರಕ್ಷಿತ್ ಶೆಟ್ಟಿ ಹೇಳಿದ್ದರು. ಈ ಚಿತ್ರದ ಒನ್ ಲೈನ್ ಕಥೆ‌ ಕೂಡ ಕಿಚ್ಚನಿಗೆ ತುಂಬಾ ಇಷ್ಟವಾಗಿತ್ತು. ಆದರೆ ಈಗ ಕಥೆ ಬಗ್ಗೆ ಸಮಾನ ಅಭಿಪ್ರಾಯಕ್ಕೆ ಬರಲಾಗದ ಕಾರಣ ತಾತ್ಕಾಲಿಕವಾಗಿ ಬ್ರೇಕ್ ಕೊಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • `ಪಂಚತಂತ್ರ’ ನಟನಿಗೆ ರಕ್ಷಿತ್ ಶೆಟ್ಟಿ ಸಾಥ್: ವಿಹಾನ್‌ಗೆ ನಾಯಕಿಯಾದ ಅಂಕಿತಾ ಅಮರ್

    `ಪಂಚತಂತ್ರ’ ನಟನಿಗೆ ರಕ್ಷಿತ್ ಶೆಟ್ಟಿ ಸಾಥ್: ವಿಹಾನ್‌ಗೆ ನಾಯಕಿಯಾದ ಅಂಕಿತಾ ಅಮರ್

    ಚಂದನವನದಲ್ಲಿ ಸಿಂಪಲ್ ಸ್ಟಾರ್ ಆಗಿ ಮಿಂಚುತ್ತಿರುವ ರಕ್ಷಿತ್ ಶೆಟ್ಟಿ, ಯುವ ಪ್ರತಿಭೆಗಳಿಗೆ ಸಾಥ್ ನೀಡುವುದರಲ್ಲಿ ಯಾವಾಗಲೂ ಮುಂದು. ಹೊಸ ಪ್ರತಿಭೆಗಳಿಗೆ, ವಿಭಿನ್ನ ಕಥೆಗೆ ಪರಂವಃ ಸ್ಟುಡಿಯೋಸ್ ಮೂಲಕ ಸಾಥ್ ನೀಡುತ್ತಾರೆ. ಈಗ `ಪಂಚತಂತ್ರ’ ಖ್ಯಾತಿಯ ವಿಹಾನ್‌ಗೆ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದಾರೆ.

    ಗಾಂಧಿನಗರದಲ್ಲಿ `ಕಾಲ್ ಕೆಜಿ ಪ್ರೀತಿ’, `ಪಂಚತಂತ್ರ’ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಚಾಕಲೇಟ್‌ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವಿಹಾನ್ ಮತ್ತೆ ಬೆಳ್ಳಿತೆರೆಮೇಲೆ ಮಿಂಚಲು ಬರುತ್ತಿದ್ದಾರೆ. ವಿಶೇಷ ಏನೆಂದರೆ, ಈ ಸಲ ವಿಹಾನ್‌ಗೆ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದಾರೆ. ಅಂದರೆ, ರಕ್ಷಿತ್ ಶೆಟ್ಟಿ ಹೋಮ್ ಬ್ಯಾನರ್ “ಪರಂವಃ ಸ್ಟುಡಿಯೋಸ್” ಬ್ಯಾನರ್‌ನಲ್ಲಿ ಮೂಡಿಬರುವ ಚಿತ್ರದಲ್ಲಿ ವಿಹಾನ್ ಹೀರೋ ಆಗಿ ಮಿಂಚಲಿದ್ದಾರೆ.

     

    View this post on Instagram

     

    A post shared by Paramvah Studios (@paramvah_studios)

    ಕಳೆದ ಮೂರು ವರ್ಷಗಳ ಹಿಂದೆ ಯೋಗರಾಜ್ ಭಟ್ ನಿರ್ದೇಶನದಲ್ಲಿನ `ಪಂಚತಂತ್ರ’ ಸಿನಿಮಾದಲ್ಲಿ ನಟಿಸಿದ ಬಳಿಕ ಬೇರೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ ವಿಶೇಷ ಕಥೆಯೊಂದಿಗೆ ಅವರ ಆಗಮನವಾಗುತ್ತಿದೆ. ರೊಮ್ಯಾನ್ಸ್ ಡ್ರಾಮಾ ಶೈಲಿಯ ಈ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳೂ ಈಗಾಗಲೇ ಶುರುವಾಗಿವೆ. ಈ ಚಿತ್ರದಲ್ಲಿ ನಾಯಕನಿಗೆ ಮೂರು ಹಂತಗಳಿರಲಿವೆ. ಕಾಲೇಜ್ ವಿದ್ಯಾರ್ಥಿ, ಕ್ರಿಕೆಟ್ ಆಟಗಾರ ಹಾಗೂ ಬಿಜಿನೆಸ್ ಮ್ಯಾನ್ ಆಗಿಯೂ ವಿಹಾನ್ ಕಾಣಿಸಿಕೊಳ್ಳಲಿದ್ದಾರೆ. ಇದೆಲ್ಲದಕ್ಕೂ ಸೂಟ್ ಆಗಲಿದ್ದಾರೆ ಎಂಬ ಕಾರಣಕ್ಕೆ ಚಿತ್ರತಂಡ ವಿಹಾನ್‌ರನ್ನು ಆಯ್ಕೆ ಮಾಡಿದ್ದಾರೆ.

    ರಿಷಬ್ ಶೆಟ್ಟಿ ಅವರ ಕಥಾಸಂಗಮ ಸಿನಿಮಾದಲ್ಲಿನ `ರೇನ್‌ಬೋ ಲ್ಯಾಂಡ್’ ಏಪಿಸೋಡ್ ಅನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದರು. ಈಗ ಈ ಹೊಸ ಸಿನಿಮಾಗೆ ಚಂದ್ರಜಿತ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿಹಾನ್‌ಗೆ ನಾಯಕಿಯಾಗಿ `ನಮ್ಮನ್ನೆ ಯುವರಾಣಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದ ಅಂಕಿತಾ ಅಮರ್ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಪರಮ್‌ವಾ ಸ್ಟುಡಿಯೋಸ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ನಲ್ಲಿ ಅವರ ಜನ್ಮದಿನಕ್ಕೆ ಪೋಸ್ಟ್ ಹಾಕಿ ಸುಳಿವು ನೀಡಿತ್ತು. ಇದೀಗ ಅವರೇ ನಮ್ಮ ನಾಯಕಿ ಎಂದು ತಂಡ ಅಧಿಕೃತವಾಗಿ ಘೋಷನೆ ಮಾಡಲಾಗಿತ್ತು. ಇನ್ನು ಚಿತ್ರದ ಶೂಟಿಂಗ್ ಸೆಪ್ಟೆಂಬರ್‌ನಲ್ಲಿ ಶುರುವಾಗಲಿದೆ. ಇದನ್ನೂ ಓದಿ:ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ `ನೀಲಕಂಠ’ ನಟಿ ನಮಿತಾ

    ರೊಮ್ಯಾನ್ಸ್ ಡ್ರಾಮಾ ಮತ್ತು ಮ್ಯೂಸಿಕಲ್ ಲವ್‌ಸ್ಟೋರಿ ಹಿನ್ನಲೆಯ ಈ ಸಿನಿಮಾದಲ್ಲಿ ಕಾಲೇಜು ಜೀವನವೂ ಕಾಣಿಸಲಿದೆ. ತಾಂತ್ರಿಕ ವರ್ಗದ ವಿಚಾರಕ್ಕೆ ಬಂದರೆ, ಅಮೆರಿಕಾದ ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ಪದವಿ ಪಡೆದು, ಅಲ್ಲಿಯೇ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀವಾತ್ಸವನ್ ಸೆಲ್ವರಾಜನ್ ಈ ಸಿನಿಮಾಕ್ಕೆ ಕ್ಯಾಮರಾ ಹಿಡಿಯಲಿದ್ದಾರೆ. ಇದು ಅವರ ಚೊಚ್ಚಲ ಚಿತ್ರವಾಗಿರಲಿದೆ. ಗಗನ್ ಬದೇರಿಯಾ ಸಂಗೀತ ಸಂಯೋಜಿಸಲಿದ್ದಾರೆ. ಇನ್ನು ಈ ಹೊಸ ಜೋಡಿ ತೆರೆಯ ಮೇಲೆ ಯಾವ ರೀತಿ ಮೋಡಿ ಮಾಡಲಿದೆ ಅಂತಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಸಿಂಪಲ್ ಸ್ಟಾರ್ ಹೊಸ ಚಿತ್ರ ಅನೌನ್ಸ್: ಕನ್ನಡದಲ್ಲಿ ಬರಲಿದೆ `ಆರ್‌ಆರ್‌ಆರ್’ ಚಿತ್ರ

    ಸಿಂಪಲ್ ಸ್ಟಾರ್ ಹೊಸ ಚಿತ್ರ ಅನೌನ್ಸ್: ಕನ್ನಡದಲ್ಲಿ ಬರಲಿದೆ `ಆರ್‌ಆರ್‌ಆರ್’ ಚಿತ್ರ

    ಸ್ಯಾಂಡಲ್‌ವುಡ್ ಸಿಂಪಲ್ ಸ್ಟಾರ್ ಬತ್ತಳಿಕೆಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳು ರಿಲೀಸ್‌ಗೂ ರೆಡಿಯಿದೆ. ಈ ಬೆನ್ನಲ್ಲೇ ನಟ ರಕ್ಷಿತ್ ಶೆಟ್ಟಿ ತಮ್ಮ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಕನ್ನಡದಲ್ಲೂ ʻಆರ್‌ಆರ್‌ಆರ್ʼ ಸಿನಿಮಾ ಬೆಳ್ಳಿತೆರೆಯಲ್ಲಿ ರಾರಾಜಿಸಲಿದೆ ಅಂತಾ ಸ್ವತಃ ರಕ್ಷಿತ್ ರಿವೀಲ್ ಮಾಡಿದ್ದಾರೆ.

    ನಟನೆ, ನಿರ್ದೇಶನ, ನಿರ್ಮಾಣದ ಜವಾಬ್ದಾರಿಯಲ್ಲಿ ಬ್ಯುಸಿಯಿರುವ ನಟ ರಕ್ಷಿತ್ ಶೆಟ್ಟಿ ಈಗ ತಮ್ಮ ಹೊಸ ಚಿತ್ರದ ಬಗ್ಗೆ ರಿವೀಲ್ ಮಾಡಿದ್ದಾರೆ. ಕನ್ನಡದಲ್ಲೂ ಆರ್‌ಆರ್‌ಆರ್ ಸಿನಿಮಾ ತೆರೆಗೆ ಬರಲಿದೆ. ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್’ ಸಿನಿರಂಗದಲ್ಲಿ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತ್ತು. ತೆಲುಗಿನ `ಆರ್‌ಆರ್‌ಆರ್’ಗೆ ಸೆಡ್ಡು ಹೊಡೆಯಲು ಕನ್ನಡದಲ್ಲೂ `ಆರ್‌ಆರ್‌ಆರ್’ ಚಿತ್ರ ತೆರೆಗೆ ಬರಲಿದೆ. ಇದನ್ನೂ ಓದಿ: ತೆಲಂಗಾಣದ ಸೆಲೆಬ್ರಿಟಿ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅನುಮಾನಾಸ್ಪದ ಸಾವು

    ಇತ್ತೀಚೆಗಷ್ಟೇ ನಟ ರಕ್ಷಿತ್ ನೀಡಿದ ಸಂದರ್ಶನವೊಂದರಲ್ಲಿ `ಆರ್‌ಆರ್‌ಆರ್’ ಚಿತ್ರ ಕನ್ನಡದಲ್ಲೂ ಬರಲಿದೆ. ಕನ್ನಡದ `ಆರ್‌ಆರ್‌ಆರ್’ ಎಂದರೆ ರಕ್ಷಿತ್, ರಿಷಬ್, ರಾಜ್ ಒಟ್ಟಿಗೆ ನಟಿಸುವುದು ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿರುವ ರಕ್ಷಿತ್, ನನ್ನ ಬಳಿ ಈಗಾಗಲೇ ಚಿತ್ರಕಥೆ ರೆಡಿಯಿದೆ. ಅದನ್ನು ಸಿನಿಮಾ ಮಾಡುವ ಆಲೋಚನೆಯಿದೆ ಎಂದು ನಟ ರಕ್ಷಿತ್ ತಮ್ಮ ಮುಂದಿನ ಚಿತ್ರದ ಕುರಿತು ಹೇಳಿದ್ದಾರೆ. ಈ ಸುದ್ದಿ ಕೇಳಿ ಸಿಂಪಲ್ ಸ್ಟಾರ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.