Tag: rally

  • ಸೇತುವೆ ಕಟ್ಟಿ ಗೋಡೆಗಳನ್ನಲ್ಲ: ರಾಹುಲ್ ಗಾಂಧಿ

    ಸೇತುವೆ ಕಟ್ಟಿ ಗೋಡೆಗಳನ್ನಲ್ಲ: ರಾಹುಲ್ ಗಾಂಧಿ

    ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸೇತುವೆ ನಿರ್ಮಿಸಬೇಕೆ ಹೊರತು ಗೋಡೆಗಳನ್ನಲ್ಲ ಎಂದು ಟ್ವೀಟ್ ಮಾಡುವ ಮೂಲಕವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳಿಂದ ಬಂದು ರೈತರು ಕೈಜೋಡಿಸುತ್ತಿದ್ದಾರೆ. ಈ ವಿಚಾರವಾಗಿ ರಾಹುಲ್ ಗಾಂಧಿ ಸರ್ಕಾರ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಭಾರತೀಯ ಸರ್ಕಾರ ಸೇತುವೆಗಳನ್ನು ಕಟ್ಟಿಸಿ, ಗೋಡೆಗಳನ್ನಲ್ಲ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡು ರೈತರ ಹೋರಾಟ ತಡೆಯಲು ನಿರ್ಮಿತವಾದ ಕೆಲವು ತಡೆಗೋಡೆಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಚಾಟಿ ಬೀಸಿದ್ದಾರೆ.

     

    ಘಾಜಿಪುರ್ ಗಡಿಯಲ್ಲಿ ನೂರಾರು ಪೊಲೀಸರು ಸೈನಿಕರಂತೆ ನಿಂತಿದ್ದಾರೆ. ಹತ್ತಾರು ಅಡಿಗಳಷ್ಟು ದೂರ ಸಿಮೆಂಟ್ ಬ್ಯಾರಿಕೇಡ್‍ಗಳನ್ನು ಜೋಡಿಸಲಾಗಿದೆ. ಬ್ಯಾರಿಕೇಡ್‍ನ ಮಧ್ಯೆ ಸಿಮೆಂಟ್ ಹಾಕಲಾಗಿದೆ. ಕಬ್ಬಿಣದ ಬ್ಯಾರಿಕೇಡ್‍ಗಳನ್ನು ಹಾಕಿ ರಾಡುಗಳನ್ನು ಹಿಡಿದು ನಿಂತಿದ್ದಾರೆ. ರೈತರ ಪ್ರತಿಭಟನೆ ತೀವ್ರವಾಗದಂತೆ ತಡೆಯಲು ಹಾಗೂ ದೆಹಲಿಯನ್ನು ಪ್ರವೇಶಿಸದಂತೆ ತಡೆಯಲು ಪೊಲೀಸರು ಭದ್ರಕೋಟೆ ನಿರ್ಮಿಸಿರುವ ಫೋಟೋಗಳನ್ನು ರಾಹುಲ್ ಗಾಂಧಿ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ.

  • ಸರ್ಕಾರದ ವಿರುದ್ಧ ಗದಗನಲ್ಲಿ ಅನ್ನದಾತರ ಆಕ್ರೋಶ

    ಸರ್ಕಾರದ ವಿರುದ್ಧ ಗದಗನಲ್ಲಿ ಅನ್ನದಾತರ ಆಕ್ರೋಶ

    ಗದಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ, ರೈತರ ಬೆಳೆಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರಕ್ಕಾಗಿ ಆಗ್ರಹಿಸಿ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ.

    ನೂರಾರು ರೈತರು ಟ್ರ್ಯಾಕ್ಟರ್  ರ‍್ಯಾಲಿ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ದೆಹಲಿ ರೈತರ ಪ್ರತಿಭಟನೆಗೆ ಬೆಂಬಲ ನೀಡುವ ಮೂಲಕ ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೂ ಬೃಹತ್ ಪ್ರತಿಭಟನಾ  ರ‍್ಯಾಲಿ ನಡೆಸಿದರು.

    ಸರ್ಕಾರ ಕೃಷಿ ಕಾಯ್ದೆ ಹಿಂಪಡೆಯಬೇಕು, ರೈತರ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಬೆಳೆಗಳಿಗೆ ಖರೀದಿ ಕೇಂದ್ರ ಸ್ಥಾಪಿಸುವುದರ ಜೊತೆಗೆ ಎಲ್ಲಾ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದರು. ಮುಂಡರಗಿಯ ಕೊಪ್ಪಳ ಸರ್ಕಲ್ ನಲ್ಲಿ ರಸ್ತೆತಡೆ ಮಾಡಿ ಮಾನವ ಸರಪಳಿ ನಿರ್ಮಿಸಿದರು.

    ತಹಶೀಲ್ದಾರ ಕಚೇರಿ ಎದುರು ಸಹ ಅರಭಾವಿ-ಚಳ್ಳಕೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ, ರಸ್ತೆ ಮಧ್ಯ ಕುಳಿತ ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟಕ್ಕೆ ಅನೇಕ ರೈತಪರ, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರು ಸಾಥ್ ನೀಡಿದರು. ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ.

  • ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು

    ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು

    ನವದೆಹಲಿ: ಆಸ್ಟ್ರೇಲಿಯಾದಲ್ಲಿ ಉನ್ನತವ್ಯಾಸಂಗ ಮಾಡುತ್ತಿದ್ದ ಯುವಕ, ದೆಹಲಿಯ ಕೃಷಿಕಾನೂನು ವಿರೋಧಿಸಿ ನಡೆಯುತ್ತಿರುವ ರ‍್ಯಾಲಿಯಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು ಸಾವನ್ನಪ್ಪಿದ್ದಾನೆ.

    ಮೃತನನ್ನು ನರ್ವೀತ್ ಸಿಂಗ್ (27) ಎಂದು ಗುರುತಿಸಲಾಗಿದೆ. ಈತ ಆಸ್ಟ್ರೇಲಿಯಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದನು. ಇದೀಗ ರೈತ ರ‍್ಯಾಲಿ ಪ್ರಭಟನೆ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಸಾವನ್ನಪ್ಪಿದ್ದಾನೆ.

    ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಇತ್ತೀಚೆಗಷ್ಟೇ ಹಿಂದಿರುಗಿದ್ದನು. ರಾಂಪುರದ ಬಿಲಾಸ್ ಪುರ್ ಪ್ರದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದನು. ಆದರೆ ಯುವಕ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ವಿಚಾರ ಈತನ ಕುಟುಂಬದವರಿಗೆ ತಿಳಿದಿರಲಿಲ್ಲ. 3 ದಿನಗಳ ಹಿಂದೆ ದೆಹಲಿಗೆ ಹೋಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾನೆ. ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿಬಿದ್ದ ಪರಿಣಾಮ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

    ರೈತರು ಪ್ರತಿಭಟನೆ ವೇಳೆ ಟ್ರ್ಯಾಕ್ಟರ್‍ನನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದರು. ಹೀಗಾಗಿ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‍ಗೆ ಗುದ್ದಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ನಾವು ರಕ್ಷಣೆಗೆ ತೆರಳುವ ವೇಳೆ ಪರಿಸ್ಥಿತಿ ಇನ್ನಷ್ಟು ಬಿಗಿಡಾಯಿಸಿತ್ತು. ಈ ಅಪಘಾತದಲ್ಲಿ ನರ್ವೀತ್ ಸಿಂಗ್ ಮೃತಪಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತ ರೈತರು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದ್ದರಿಂದ ಟ್ರ್ಯಾಕ್ಟರ್ ಮೇಲೆ ನಿಯಂತ್ರಣ ಕಳೆದುಕೊಂಡೆವು. ಆಗ ಅಪಘಾತದಲ್ಲಿ ನರ್ವೀತ್ ಸಿಂಗ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸುತ್ತಿದ್ದಾರೆ.

  • ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ ಸಂಬಂಧ 15 ಎಫ್‍ಐಆರ್

    ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ ಸಂಬಂಧ 15 ಎಫ್‍ಐಆರ್

    ನವದೆಹಲಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ ಸಂಬಂಧ ಪೊಲೀಸರಿಗೆ ಗಾಯ ಮತ್ತು ಹಲವು ವಾಹನಗಳನ್ನು ಧ್ವಂಸ ಮಾಡಿರುವ ಹಿನ್ನೆಲೆ 15 ಎಫ್‍ಐಆರ್ ದಾಖಲು ಮಾಡಲಾಗಿದೆ.

    ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಪೊಲೀಸರು 15 ಎಫ್‍ಐಆರ್ ದಾಖಲು ಮಾಡಿದ್ದಾರೆ. ಇನ್ನು ಹೆಚ್ಚಿನ ಎಫ್‍ಐಆರ್ ದಾಖಲಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ದೆಹಲಿಯ ಮುಖರ್ಬಾ ಚೌಕ್, ಗಾಝಿಫುರ್, ಐಟಿಓ ಸೀಮ್ ಪುರಿ, ನಾಂಗ್ಲೋಯಿ ಟಿ ಪಾಯಿಂಟ್, ಟಿಕ್ರಿ ಗಡಿ, ಕೆಂಪುಕೋಟೆ ಮುಂತಾದ ಕಡೆಯಲ್ಲಿ ಗಲಭೆ ನಿರ್ಮಾಣವಾಗಿತ್ತು. ಈ ವೇಳೆ 7 ಬಸ್, 17 ಖಾಸಗಿವಾಹನಗಳು ಸೇರಿದಂತೆ ಒಟ್ಟು 17 ವಾಹನಗಳನ್ನು ಧ್ವಂಸವಾಗಿವೆ. 86ಕ್ಕೂ ಹೆಚ್ಚು ಪೋಲಿಸರಿಗೆ ಗಾಯಗಳಾಗಿವೆ. ಗಾಜಿಪುರ್ ಮತ್ತು ಟಿಕ್ರಿ ಗಡಿ ಭಾಗಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‍ಗಳನ್ನು ಧ್ವಂಸ ಮಾಡಲಾಗಿದೆ.

    ಶಾಂತಿಯುತವಾದ ರ‍್ಯಾಲಿಯನ್ನು ನಡೆಸಲು ದೆಹಲಿ ಪೊಲೀಸರು ಸಂಯುಕ್ತ ಕಿಸಾನ್ ಮೋರ್ಚಾ ಜೊತೆಯಲ್ಲಿ ಮಾತುಕಥೆಯನ್ನು ನಡೆಸಿತ್ತು. ಆದರೆ ರ‍್ಯಾಲಿ ಪ್ರಾರಂಭವಾಗುತ್ತಿದ್ದಂತೆ ಸ್ವರೂಪವೇ ಬದಲಾಗಿತ್ತು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದ್ರು ವಿಫಲರಾದರು.

  • ರೈತರ ಪರೇಡ್ ಶಾಂತಿ, ಶಿಸ್ತಿನಿಂದ ನಡೆಯುತ್ತೆ: ಕೋಡಿಹಳ್ಳಿ ಚಂದ್ರಶೇಖರ್

    ರೈತರ ಪರೇಡ್ ಶಾಂತಿ, ಶಿಸ್ತಿನಿಂದ ನಡೆಯುತ್ತೆ: ಕೋಡಿಹಳ್ಳಿ ಚಂದ್ರಶೇಖರ್

    ಬೆಂಗಳೂರು: ನಾಳೆ ಸಿಲಿಕಾನ್ ಸಿಟಿಯಲ್ಲಿ ನಡೆಯುವ ರೈತರ  ರ‍್ಯಾಲಿ ಶಾಂತಿ ಮತ್ತು ಶಿಸ್ತಿನಿಂದ ನಡೆಯುತ್ತದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

    ನಾಳೆ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಟ್ರ್ಯಾಕ್ಟರ್  ರ‍್ಯಾಲಿ ಕುರಿತಾಗಿ ಮಾತನಾಡಿದ ಅವರು, ರೈತರ  ರ‍್ಯಾಲಿಯನ್ನು ಪೊಲೀಸರು ಅಡ್ಡಿಪಡಿಸುವ ಕೆಲಸ ಆಗಲ್ಲ. ಶಾಂತಿ ಮತ್ತು ಶಿಸ್ತಿಗೆ ಅವಕಾಶ ನೀಡಬೇಕು. ಟ್ರ್ಯಾಕ್ಟರ್ ಸಂಖ್ಯೆ, ಬೇರೆ ವಾಹನಗಳ ಸಂಖ್ಯೆ, ಜನರ ಸಂಖ್ಯೆ ಕಡಿಮೆ ಮಾಡಿಕೊಳ್ಳಿ ಎಂದು ಪೊಲೀಸ್ ಇಲಾಖೆಯವರು ತಿಳಿಸಿದ್ದಾರೆ ಎಂದಿದ್ದಾರೆ.

    ನೈಸ್ ಜಂಕ್ಷನ್ ಮಾದಾವರದಿಂದ ಪರೇಡ್ 20 ಸಾವಿರ ರೈತರು, 8 ಹತ್ತು ಸಾವಿರ ವಾಹನಗಳ ಬಳಕೆ ಸಾಧ್ಯತೆ ಇದೆ. ಬೆಂಗಳೂರಿನ ಸುತ್ತ ಮುತ್ತಲಿನ ಜಿಲ್ಲೆಗಳ ರೈತರು ಕೂಡ ಭಾಗಿಯಾಗಲಿದ್ದಾರೆ. ರಾಜ್ಯಪಾಲರ, ಸಿಎಂ ಧ್ವಜಾರೋಹಣ ಆದ ನಂತರ ನೈಸ್ ಜಂಕ್ಷನ್‍ನಿಂದ ನಮ್ಮ  ರ‍್ಯಾಲಿ ಪ್ರಾರಂಭವಾಗಲಿದೆ. ಗೊರಗುಂಟೆಪಾಳ್ಯ, ಯಶವಂತಪುರ, ಮಲ್ಲೇಶ್ವರಂ, ಶೆಷಾದ್ರಿಪುರಂ ಮಾರ್ಗವಾಗಿ ನಡೆಯುತ್ತದೆ. ರಾಷ್ಟ್ರ ಧ್ವಜಕ್ಕೆ ಗೌರವವನ್ನು ಸಲ್ಲಿಸಿ ಈ  ರ‍್ಯಾಲಿ ಪ್ರಾರಂಭವಾಗುತ್ತದೆ. ಕಲ್ಲು ಹೊಡೆಯುವುದು, ಕಚೇರಿ ನುಗ್ಗುವುದು, ಗಲಾಟೆ ಇಂಹದ್ದು ಇರುವುದಿಲ್ಲ. ಶಿಸ್ತು ಬದ್ಧವಾಗಿ ರೈತರ ಪರೇಡ್ ನಡೆಯುತ್ತದೆ.

    ಪೊಲೀಸರು ತಡೆದ್ರೆ ಉಗ್ರ ಹೊರಾಟ ನಡೆಸುತ್ತೇವೆ. ಪೊಲೀಸರು ತಡೆದರೆ ಬೆಂಗಳೂರು ಲಾಕ್ ಬೆಂಗಳೂರು ಪ್ರವೇಶ ಆಗದಂತೆ ಲಾಕ್ ಮಾಡುತ್ತೇವೆ. ನಾಳೆ ಪರೇಡ್ ತಡೆದರೆ ರೈತರ ಹೋರಾಟ ನಿರಂತರವಾಗಿ ದೆಹಲಿಯಂತೆ ನಡೆಯಲಿದೆ. ಹೀಗಾಗಿ ತಡೆಯುವುದಿಲ್ಲ ಎನ್ನುವ ನಂಬಿಕೆ ನನಗೆ ಇದೆ ಎಂದು ಹೇಳಿದ್ದಾರೆ.

  • ಸಿಎಎ ಬೆಂಬಲಿಸಿ ಜನವರಿ 25 ರಂದು ಕಲಬುರಗಿಯಲ್ಲಿ ವೈದ್ಯರ ರ‍್ಯಾಲಿ

    ಸಿಎಎ ಬೆಂಬಲಿಸಿ ಜನವರಿ 25 ರಂದು ಕಲಬುರಗಿಯಲ್ಲಿ ವೈದ್ಯರ ರ‍್ಯಾಲಿ

    ಕಲಬುರಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯನ್ನು ಸ್ವಾಗತಿಸಿ ಅದರ ಬಗ್ಗೆ ಜನಜಾಗೃತಿ ಮೂಡಿಸಲು ಕಲಬುರಗಿ ನ್ಯಾಷನಲ್ ಮೆಡಿಕೊಸ್ ಸಂಘಟನೆ ಜನವರಿ 25ರಂದು ಕಲಬುರಗಿ ನಗರದಲ್ಲಿ ರ‍್ಯಾಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘಟನೆಯ ಸದಸ್ಯೆ ಡಾ.ಪ್ರತಿಮಾ ಕಾಮರೆಡ್ಡಿ ಹಾಗೂ ಸಂಘಟಕರು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

    ಈಗಾಗಲೇ ಈ ಕಾಯ್ದೆ ಸಂಸತ್ತಿನ ಎರಡು ಮನೆಯಲ್ಲಿ ಪಾಸಾಗಿ ಈಗಾಗಲೆ ದೇಶದಾದ್ಯಂತ ಜಾರಿಯಾಗಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಆದರೆ ಕೆಲವರು ಈ ಕಾಯ್ದೆ ಕುರಿತು ಅನಾವಶ್ಯಕ ರಾಜಕಾರಣ ಮಾಡುತ್ತ ಅಲ್ಪಸಂಖ್ಯಾತರು ಇದನ್ನು ವಿರೋಧಿಸುವಂತೆ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ಈ ಕಾಯ್ದೆಯ ನಿಜಾಂಶ ಜನರಿಗೆ ತಿಳಿಯುವ ಅವಶ್ಯಕತೆಯಿದ್ದು, ಇದಕ್ಕೆ ನಮ್ಮ ಹಲವು ವೈದ್ಯರು ಸಾಥ್ ನೀಡಿದ್ದಾರೆ. ಇದರ ಬಗ್ಗೆ ಜಾಗೃತಿಗಾಗಿ ವೈದ್ಯರೆಲ್ಲ ರಸ್ತೆಗಿಳಿದು ಸಿಎಎ ಜಾಗೃತಿ ಮೂಡಿಸಲು ನಿರ್ಧರಿಸಿದ್ದಾರೆ. ಅದರ ಮೊದಲ ಭಾಗವಾಗಿ ಜನವರಿ 25 ರಂದು ರ‍್ಯಾಲಿ ನಡೆಸಲಾಗುತ್ತಿದ್ದು, ನಗರದ ನಗರದ ವಲ್ಲಭಭಾಯಿ ಪಟೇಲ್ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ರ್ಯಾಲಿ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಈ ರ‍್ಯಾಲಿಗೇ ಆರೋಗ್ಯ ಭಾರತ, ಮೆಡಿವಿಷನ್, ಆಯುಷ್ ಡಾಕ್ಟರ್ಸ್ ಫೆಡರೇಶನ್, ಫಾರ್ಮಸಿ ವಿಭಾಗ, ನರ್ಸಿಂಗ್ ವಿಭಾಗದ ಸುಮಾರು 5 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ವೈದ್ಯರು ಭಾಗವಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಸಿಎಎಗೆ ಬೆಂಬಲಿಸುವ ಮನವಿ ಪತ್ರ ನೀಡಲಾಗುವುದು. ಜೊತೆಗೆ ಈಗಾಗಲೇ ಕೆಲವೊಂದು ವೈದ್ಯರ ತಂಡ ಸಿಎಎ ವಿರುದ್ಧವಾಗಿ ಪ್ರತಿಭಟನೆ ಮಾಡಿದೆ ಅದರಲ್ಲಿ ಮೆಡಿಕಲ್ ಫೆಟರ್ನಿಟಿ ಎಲ್ಲರ ವಿರೋಧವಿದೆ ಎಂದು ಹೇಳಿಕೆ ನೀಡಲಾಗಿದೆ. ಆದರೆ ಜಿಲ್ಲೆಯ ಸಾವಿರಾರು ವೈದ್ಯರು ಸಿಎಎಗೆ ಬೆಂಬಲ ನೀಡಿದ್ದಾರೆ. ಕೇಂದ್ರ ಸರ್ಕಾರ ದೇಶದ ಭದ್ರತೆ ಹಾಗೂ ಐಕ್ಯತೆ ಸಾರಲು ಈ ಸಿಎಎ ಜಾರಿಮಾಡಲಾಗಿದೆ ಎಂದು ಕರ್ನಾಟಕ ನ್ಯಾಷನಲ್ ಮೆಡಿಕೊಸ್ ಸಂಘಟನೆಯ ಉತ್ತರ ಕರ್ನಾಟಕ ವಿಭಾಗದ ಕಾರ್ಯದರ್ಶಿಗಳಾದ ಡಾ.ಕುಮಾರ್ ಅಂಗಡಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

  • ‘ಅಮಿತ್ ಶಾ ಭಾರತ ಕಂಡರಿಯದ ಕ್ರೂರಿ’- ಶಾಂತಯುತವಾಗಿ ಮುಗಿದ ಮಂಗ್ಳೂರು ಪ್ರತಿಭಟನೆ

    ‘ಅಮಿತ್ ಶಾ ಭಾರತ ಕಂಡರಿಯದ ಕ್ರೂರಿ’- ಶಾಂತಯುತವಾಗಿ ಮುಗಿದ ಮಂಗ್ಳೂರು ಪ್ರತಿಭಟನೆ

    – ಪೊಲೀಸ್ ಆಯುಕ್ತ, ಮೋದಿ, ಶಾ ವಿರುದ್ಧ ವಾಗ್ದಾಳಿ
    – ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟಿಸಿದ ಮುಸ್ಲಿಮರು

    ಮಂಗಳೂರು: ಭಯ, ಆತಂಕದ ನಡುವೆ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆದು, ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ.

    ಮಂಗಳೂರು ಹೊರವಲಯದ ಕೊಣ್ಣೂರು ಅಡ್ಯಾರ್ ನಲ್ಲಿ ನಡೆದ ಸಮಾವೇಶದಲ್ಲಿ ಲಕ್ಷಾಂತರ ಮುಸ್ಲಿಮರು ಪಾಲ್ಗೊಂಡಿದ್ದರು. ಎಲ್ಲರ ಕೈಗಳಲ್ಲಿಯೂ ತ್ರಿವರ್ಣ ಧ್ವಜ ರಾರಾಜಿಸ್ತಾ ಇದ್ದವು. ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ಹಾಗೂ ಗೋಲಿಬಾರ್ ಮಾಡಿದ ಸರ್ಕಲ್ ಇನ್ಸ್‍ಪೆಕ್ಟರ್ ಶಾಂತರಾಮ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಾನವಹಕ್ಕು ಹೋರಾಟಗಾರ ಶಿವಸುಂದರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತ ಕಂಡರಿಯದ ಕ್ರೂರಿ. ನನ್ನ ಮನೆ ಕಾಯಲು ನಾನು ಚೌಕಿದಾರ ನೇಮಿಸಿದೆ. ಒಂದು ವರ್ಷದ ಬಳಿಕ ಅವನೇ ನನ್ನ ಮನೆಯ ಪತ್ರ ಕೇಳುತ್ತಿದ್ದಾನೆ ಎಂದು ಸಿಎಎ ಜಾರಿಗೆ ತಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.

    ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‍ಪಿಆರ್) ಸಂಗ್ರಹ ಮಾಡಲು ಬರುವವರು ತಂದೆ-ತಾಯಿ ಮೂಲ ಕೇಳುತ್ತಾರೆ. ಕಾಗದ ಪತ್ರ ಇಲ್ಲ ಅಂದ್ರೆ ನಿಮ್ಮನ್ನು ಜೈಲಿಗೆ ಹಾಕುತ್ತೇವೆ ಎನ್ನುತ್ತಾರೆ ಎಂದು ಶಿವಸುಂದರ್ ಆರೋಪಿಸಿದರು.

    ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ 23ನೇ ವಯಸ್ಸಿನಲ್ಲಿ ನೇಣುಕಂಬಕ್ಕೇರಿದರು. ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಖಡ್ಗ ಹಿಡಿಯುತೇವೆ ಎಂದು ಬೆದರಿಸುತ್ತಾರೆ. ಮತ್ತೊಬ್ಬ ಶಾಸಕರು ಈ ದೇಶ ಧರ್ಮಕ್ಷೇತ್ರ ಅಲ್ಲವೆಂದು ಹೇಳುತ್ತಾರೆ. ರಾಮಲೀಲಾ ಮೈದಾನದಲ್ಲಿ 90 ನಿಮಿಷದಲ್ಲಿ 90 ಸುಳ್ಳು ಹೇಳುತ್ತಾರೆ ಎಂದು ಶಿವಸುಂದರ್ ಗುಡುಗಿದರು.

    ನಿವೃತ್ತ ಕೇರಳ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಮಾತನಾಡಿ, ಪ್ರಧಾನಿ ಮೋದಿ ಪ್ರಶ್ನೆಗೆ ನಾವು ಎಲ್ಲರೂ ತಾಳ ಸೇರಿಸಿದೇವು. ಹೀಗಾಗಿ ನಮ್ಮನ್ನು ಮೂಕರನ್ನಾಗಿ ಮಾಡುತ್ತಿದ್ದಾರೆ. ಎನ್‌ಆರ್‌ಸಿ ಬಗ್ಗೆ ಪ್ರಶ್ನಿಸಿದರೆ ಪ್ರಧಾನಿ ಮೋದಿ ದೂರ ಸರಿಯುತ್ತಿದ್ದಾರೆ. ನಮ್ಮ ಸಂವಿಧಾನ, ಜಾತ್ಯಾತೀತವನ್ನು ಸಂರಕ್ಷಣೆ ಮಾಡುವ ಹಕ್ಕು ಮುಸ್ಲಿಮರಿಗೆ ಮಾತ್ರ ಇಲ್ಲ. ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

    ಮಾನವ ಹಕ್ಕು ಹೋರಾಟಗಾರ ಸುಧೀರ್ ಕುಮಾರ್ ಮಾತನಾಡಿ, ನೋಟ್ ಬ್ಯಾನ್ ಮಾಡುವ ಮೂಲಕ ದೇಶಕ್ಕೆ ಏನು ಲಾಭವಾಯಿತು? ಪ್ರಧಾನಿ ಮೋದಿ ಅವರ ಮಾತು ನಂಬಿ ಜನರು ಮೋಸ ಹೋದರು. ಕಮಿಷನರ್ ಡಾ.ಹರ್ಷಾ ಹಾಗೂ ಪಿಎಸ್‍ಐ ಶ್ಯಾಮಸುಂದರ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಬಿಜೆಪಿ ಬಿಟ್ಟು ಹೊರಗೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಟಿಪ್ಪು ಸುಲ್ತಾನ್‍ಗೆ ಜೈಕಾರ ಹಾಕಿದ್ದರು. ಆದರೆ ಈಗ ಬಿಜೆಪಿ ಸೇರಿ ಟಿಪ್ಪು ಮತಾಂಧ ಎನ್ನುತ್ತಿದ್ದಾರೆ. ಸ್ವಾಮಿ ವಿವೇಕಾನಂದ ಅವರನ್ನು ನಾವು ಯೋಗಿ ಎಂದು ಕರೆಯೋಣ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನ ಯೋಗಿ ಎಂದು ಕರೆಯುವುದು ಬೇಡ. ಇನ್ನುಮುಂದೆ ಸಭೆ ಸಮಾರಂಭ ಆಯೋಜಿಸುವ ಮೂಲಕ ಪ್ರತಿಭಟನೆ ಮಾಡುವುದನ್ನು ಬಿಡೋಣ. ಹಳ್ಳಿ-ಹಳ್ಳಿಗೆ ಹೋಗಿ ಎನ್‌ಆರ್‌ಸಿ-ಸಿಎಎ ವಿರುದ್ಧ ಜಾಗೃತಿ ಮೂಡಿಸೋಣ ಎಂದು ಕರೆ ನೀಡಿದರು.

    ರಾಜ್ಯ ಸುನ್ನಿ ಮುಸ್ಲಿಂ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಮಾತನಾಡಿ, ಬ್ರಿಟಿಷರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಅಜಾದಿ ಹೋರಾಟ ಮಾಡಿ ಸ್ವಾತಂತ್ರ ಪಡೆದುಕೊಂಡಿದ್ದೇವೆ. ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಸಾರುತ್ತಿದೆ. ಆದರೆ ಕೆಲವರು ಸಂವಿಧಾನವನ್ನ ನಾಶ ಮಾಡಲು ಮುಂದಾಗಿದ್ದಾರೆ. ಸಿಎಎ-ಎನ್‌ಆರ್‌ಸಿ ತರುವ ಮೂಲಕ ಬಿಜೆಪಿ ಸರ್ಕಾರ ನಮ್ಮ ವಿವಿಧತೆ ಏಕತೆಗೆ ಧಕ್ಕೆ ಮಾಡಲು ಮುಂದಾಗಿದೆ ಎಂದು ದೂರಿದರು.

    ಮೊದಲ ಸ್ವಾತಂತ್ರ್ಯ ಸಂಗ್ರಾಮ ಆರಂಭಿಸಿದವರೇ ಮುಸ್ಲಿಮರು. ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಪಾಠವನ್ನು ತೆಗೆಯಲು ಹುನ್ನಾರ ನಡೆಸಿದರು. ಆದರೆ ಟಿಪ್ಪು ಪಾಠ ತೆಗೆದರೆ ಭಾರತದ ಇತಿಹಾಸ ಪೂರ್ಣವಾಗುವುದಿಲ್ಲವೆಂದು ಶಿಕ್ಷಣ ತಜ್ಞರು ಹೇಳಿದ ಬಳಿಕ ಕೈ ಬಿಟ್ಟರು. ಅದೇ ರೀತಿ ದೇಶದಿಂದ ಮುಸ್ಲಿಮರನ್ನ ಹೊರಹಾಕಿದರೆ ಭಾರತ ಸಂಪೂರ್ಣ ಆಗುವುದಿಲ್ಲ ಎಂದು ಹೇಳಿದರು.

    ಪಿಎಫ್‍ಐ ರಾಜ್ಯಾಧ್ಯಕ್ಷರಾದ ಮಹ್ಮಮದ್ ಷಾ ಷರಾವರಿ ಮಾತನಾಡಿ, ಆರ್‌ಎಸ್ಎಸ್ ದೇಶದ ಭಯ ಭೀತ ರಾಜಕೀಯ ಮಾಡುತ್ತಿದೆ. ಪ್ರತಿ ಹತ್ತು ವರ್ಷಕ್ಕೆ ಹೊಸ, ಹೊಸ ವಿಷಯಗಳ ಮೂಲಕ ಹೆದರಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಹಾಗೂ ಆರ್‌ಎಸ್ಎಸ್ ಈ ದೇಶ ಮುಸ್ಲಿಂ ಹಾಗೂ ದಲಿತರ ಪೌರತ್ವ ಕಸಿಯಲು ಮುಂದಾಗಿದ್ದಾರೆ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇದಿಂದ 4 ಕೋಟಿ ಹಿಂದೂ ಜನರನ್ನು ತರುವ ಸಿದ್ಧತೆ ನಡೆದಿದೆ. ಬಳಿಕ ಇಲ್ಲಿನ ಮುಸ್ಲಿಮರನ್ನ ಹೊರಹಾಕಿ ಅವರ ಮನೆ ಹಾಗೂ ನೌಕರಿಯನ್ನು ಮೂರು ದೇಶಗಳಿಂದ ಬಂದ ಹಿಂದೂಗಳಿಗೆ ನೀಡುತ್ತಾರೆ ಎಂದು ಆರೋಪಿಸಿದರು.

    ನಾವು ನಮ್ಮ ಮಕ್ಕಳಿಗೆ ಗುಲಾಮರನ್ನಾಗಿ ಮಾಡಲು ಬಿಡುವುದಿಲ್ಲ. ನಮ್ಮ ದಾಖಲೆಗಳನ್ನು ನೀಡುವುದಿಲ್ಲ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏನು ಮಾಡುತ್ತಾರೆ ಅಂತ ನೋಡೋಣ. ತಮ್ಮ ಆಸನದಲ್ಲಿ ಕೂರುವ ಯಾವುದೇ ಯೋಗ್ಯತೆ ಕಮಿಷನರ್ ಪಿ.ಎಸ್.ಹರ್ಷ ಅವರಿಗೆ ಇಲ್ಲ. ಪೊಲೀಸರಾಗಿ ಅಪರಾಧಗಳಿಗೆ ಬೆಂಬಲ ನೀಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

    ಮಂಗಳೂರಿನಿಂದ ಆಡ್ಯಾರ್‍ವರೆಗೆ ಅಂದ್ರೆ 12 ಕಿಲೋಮೀಟರ್‍ವರೆಗೆ ರಸ್ತೆ ಬ್ಲಾಕ್ ಆಗಿತ್ತು. ಕೇರಳ ಪ್ರತಿಭಟನಾಕಾರರು ನೇತ್ರಾವತಿ ನದಿ ದಂಡೆ ಮೂಲಕ ದೋಣಿಯಲ್ಲಿ ಆಗಮಿಸೋ ಮುನ್ಸೂಚನೆ ಇದ್ದಿದ್ದರಿಂದ ಮುನ್ನೆಚ್ಚರಿಕೆಯಾಗಿ ಬಿಗಿಭದ್ರತೆ ಕೈಗೊಳ್ಳಲಾಗಿತ್ತು.

  • ಅರ್ಧಕ್ಕೆ ನಿಂತ ರಾಯಚೂರು ವಿವಿ ಸ್ಥಾಪನೆ ಪ್ರಕ್ರಿಯೆ – ವಿದ್ಯಾರ್ಥಿಗಳಿಂದ ನಿರಂತರ ಹೋರಾಟ

    ಅರ್ಧಕ್ಕೆ ನಿಂತ ರಾಯಚೂರು ವಿವಿ ಸ್ಥಾಪನೆ ಪ್ರಕ್ರಿಯೆ – ವಿದ್ಯಾರ್ಥಿಗಳಿಂದ ನಿರಂತರ ಹೋರಾಟ

    ರಾಯಚೂರು: ರಾಯಚೂರು ವಿಶ್ವವಿದ್ಯಾಲಯ ತಕ್ಷಣವೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ನಗರದ ವಿವಿಧ ಕಾಲೇಜುಗಳ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು.

    ಸರ್ಕಾರದಿಂದ ಆಶ್ವಾಸನೆ ಬೇಡ, ಆದೇಶ ಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಿದರು. ನಗರದ ಎಲ್.ವಿ.ಡಿ ಕಾಲೇಜ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ವಿದ್ಯಾರ್ಥಿಗಳು ಪ್ರತಿಭಟನಾ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು. ಫೆಬ್ರವರಿ 2017ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ ಅನುಮೋದನೆ ನೀಡಲಾಗಿದೆ. ಆದರೆ ಇದುವರೆಗೂ ವಿವಿ ಆರಂಭವಾಗಿಲ್ಲ. ಕೇವಲ ವಿಶೇಷ ಅಧಿಕಾರಿಯನ್ನ ನೇಮಿಸಲಾಗಿದೆ.

    ಸಚಿವ ಸಂಪುಟದಲ್ಲಿ ತೀರ್ಮಾನವಾಗಿ ಮೂರು ವರ್ಷಗಳಾಗುತ್ತಾ ಬಂದರೂ ಇದುವರೆಗೆ ರಾಜ್ಯಪಾಲರಿಂದ ಅಧಿಕೃತ ಆದೇಶ ಹೊರಬಂದಿಲ್ಲ. ವಿವಿ ಸ್ಥಾಪನೆಗೆ ಬಜೆಟ್ ನಲ್ಲಿ ಅನುದಾನವೂ ಘೋಷಣೆಯಾಗಿಲ್ಲ. ಹೀಗಾಗಿ ರಾಯಚೂರಿನ ವಿಧ್ಯಾರ್ಥಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ರಾಯಚೂರು, ಯಾದಗಿರಿ ಎರಡು ಜಿಲ್ಲೆಗಳನ್ನೊಳಗೊಂಡ ರಾಯಚೂರು ವಿವಿಗೆ ಶೀಘ್ರವೇ ಹಣಕಾಸಿನ ಅನುಮೋದನೆ ಮಾಡಬೇಕು, ರಾಜ್ಯಪಾಲರು ಅಂಗೀಕರಿಸಲು ಬೇಕಿರುವ ಪ್ರಕ್ರಿಯೆಗಳನ್ನ ಕೂಡಲೇ ಪೂರೈಸಬೇಕು ಎಂದು ಜಿಲ್ಲೆಯ ವಿವಿಧ ಶಿಕ್ಷಣ ಸ್ಥಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

  • ಭಾನುವಾರವೂ ತಟ್ಟಲಿದೆ ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ -ವೀಕೆಂಡ್ ಪ್ಲಾನ್ ಮಾಡಿಕೊಳ್ಳೋರು ಹುಷಾರ್!

    ಭಾನುವಾರವೂ ತಟ್ಟಲಿದೆ ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ -ವೀಕೆಂಡ್ ಪ್ಲಾನ್ ಮಾಡಿಕೊಳ್ಳೋರು ಹುಷಾರ್!

    ಬೆಂಗಳೂರು: ಭಾನುವಾರ ಕೂಡ ಬೆಂಗಳೂರಿನಿಂದ ಮೈಸೂರು, ಮಂಡ್ಯ, ರಾಮನಗರ, ಬಿಡದಿ ಚನ್ನಪಟ್ಟಣ ಭಾಗಕ್ಕೆ ಹೋಗುವವರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ. ಈ ಮೂಲಕ ತಮಿಳುನಾಡಿನ ವಿರುದ್ಧ ಕನ್ನಡಿಗರ ಪ್ರತಿಭಟನೆಯ ಕಿಚ್ಚು ಹಬ್ಬಲಿದೆ. ಹೀಗಾಗಿ ಸಂಡೇ ಸುತ್ತಾಡೋಣ ಎಂದು ಪ್ಲಾನ್ ಮಾಡಿಕೊಂಡಿರುವವರು ಹುಷಾರಾಗಿರಿ.

    ಮೈಸೂರು ಮತ್ತು ಚಾಮರಾಜನಗರದ ಕೆಲ ಯುವಕರು ಇತ್ತೀಚೆಗೆ ತಮಿಳುನಾಡಿಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕೊಯಮತ್ತೂರಿನಲ್ಲಿ ಬೈಕ್‍ನಲ್ಲಿ ಬಂದ ಸ್ಥಳೀಯ ಯುವಕರು ಕಾರನ್ನು ಅಡ್ಡಗಟ್ಟಿ, ಆ ಬಳಿಕ ಕಾರಿನ ಮುಂಭಾಗ ಕಟ್ಟಿದ್ದ ಕನ್ನಡ ಬಾವುಟ ತೆಗೆಯುವಂತೆ ಗಲಾಟೆ ಮಾಡಿದ್ದಾರೆ. ಇದನ್ನು ಖಂಡಿಸಿ ಭಾನುವಾರ 101 ವಾಹನಗಳಿಗೆ ಕನ್ನಡದ ಧ್ವಜ ಕಟ್ಟಿ ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿನವರೆಗೆ ಬೃಹತ್ ರ‍್ಯಾಲಿ ನಡೆಸಲಾಗುತ್ತದೆ.

    ನಾನಾ ಕನ್ನಡ ಸಂಘಟನೆಗಳಿಂದ ಈ ಪ್ರತಿಭಟನೆ ನಡೆಯಲಿದೆ. ಡಾ.ರಾಜ್ ಸಮಾಧಿಯಿಂದ ಬೆಳಗ್ಗೆ 7 ಗಂಟೆಗೆ ಬೃಹತ್ ರ‍್ಯಾಲಿ ನಡೆಯಲಿದೆ. ಹೀಗಾಗಿ ಹೊಸೂರು ರಸ್ತೆಯವರೆಗೆ ರ‍್ಯಾಲಿ ನಡೆಯಲಿದ್ದು, ಟ್ರಾಫಿಕ್ ಜಾಮ್ ಸಂಭವಿಸಲಿದೆ.

    ಜಾಥದ ಮಾರ್ಗ ಹೀಗಿರಲಿದೆ: ರಾಜ್ ಕುಮಾರ್ ಸಮಾಧಿ, ನಾಯಂಡಹಳ್ಳಿ, ನೈಸ್ ರೋಡ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಮೂಲಕ ಅತ್ತಿಬೆಲೆ ಮೂಲಕ ಹೊಸೂರುಗೆ ಜಾಥಾ ನಡೆಯಲಿದೆ. ಇದರಿಂದ ಈ ಮಾರ್ಗದಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಲಿದೆ.

  • ವಿಜಯಪುರದಲ್ಲಿ ನಿಷೇಧಾಜ್ಞೆ ಜಾರಿ – ತಾತ್ಕಾಲಿಕವಾಗಿ ರ‍್ಯಾಲಿ ಕೈಬಿಟ್ಟ ಯತ್ನಾಳ್

    ವಿಜಯಪುರದಲ್ಲಿ ನಿಷೇಧಾಜ್ಞೆ ಜಾರಿ – ತಾತ್ಕಾಲಿಕವಾಗಿ ರ‍್ಯಾಲಿ ಕೈಬಿಟ್ಟ ಯತ್ನಾಳ್

    ವಿಜಯಪುರ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿಜಯಪುರ ಜಿಲ್ಲೆಯಲ್ಲಿ ಭಾರೀ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ‍್ಯಾಲಿ ನಡೆಸುವುದನ್ನು ತಾತ್ಕಾಲಿಕವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈಬಿಟ್ಟಿದ್ದಾರೆ.

    ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧವಾಗಿ ಕೆಲ ಸಂಘಟನೆಗಳು ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು. ಈ ಕಾಯ್ದೆಯ ಪರವಾಗಿ ನಗರದಲ್ಲಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಬೃಹತ್ ರ‍್ಯಾಲಿ ಕೂಡ ನಡೆಸಲು ನಿರ್ಧರಿಸಲಾಗಿತ್ತು. ಇನ್ನು ಇದರ ಬಗ್ಗೆ ಪೂರ್ವ ಭಾವಿ ಸಭೆ ಕೂಡ ನಡೆಸಲಾಗಿತ್ತು.

    ಆದರೆ ಇಂದು ಬೆಳಗ್ಗೆ 6 ಗಂಟೆಯಿಂದ 21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಇದರ ಹಿನ್ನೆಲೆ ಯತ್ನಾಳ್ ನಡೆಸಲು ಇಚ್ಛಿಸಿದ್ದ ಕಾಯ್ದೆ ಪರ ರ‍್ಯಾಲಿಯನ್ನ ತಾತ್ಕಾಲಿಕವಾಗಿ ಕೈ ಬಿಡಲಾಗಿದೆ.

    ಎಂದಿನಂತೆ ಜಿಲ್ಲೆಯಾದ್ಯಂತ ಜನಜೀವನ ಮುಂದುವರಿದಿದ್ದು, ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.