Tag: Ram Lalla

  • ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ರಾಮನವಮಿ (Ram Navami) ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.

    ಸೂರ್ಯನ ಕಿರಣವು (Surya Tilak) ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂತು. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕವನ್ನು ರೂಪಿಸಿತು. ಇದನ್ನೂ ಓದಿ: ಬೆಂಗಳೂರಿನ ಎಲ್ಲೆಡೆ ರಾಮನವಮಿಯ ಸಂಭ್ರಮ – ಬಾಲರಾಮನ ವೇಷ ತೊಟ್ಟು ಬಂದ ಪುಟಾಣಿಗಳು

    ಸೂರ್ಯ ಕಿರಣವು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.

    ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದು ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮ ವಾರ್ಷಿಕೋತ್ಸವದ ದಿನ. ಜನರು ದೇವಾಲಯಗಳಿಗೆ ತೆರಳಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆಗಳು, ಮೆರವಣಿಗೆಗಳು ಮತ್ತು ಜಪಗಳು ನಡೆಯುತ್ತಿವೆ. ದೃಕ್ ಪಂಚಾಂಗದ ಪ್ರಕಾರ, ಭಗವಾನ್ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದ.

    ರಾಮನವಮಿ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಲಕ್ಷಾಂತರ ಭಕ್ತರು ರಾಮಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

  • ಅಯೋಧ್ಯೆ ಬಾಲರಾಮನಿಗೆ ಮಹಾ ಅಭಿಷೇಕ, ಭಕ್ತರಿಗೆ ಮಂಗಳ ದರ್ಶನ

    ಅಯೋಧ್ಯೆ ಬಾಲರಾಮನಿಗೆ ಮಹಾ ಅಭಿಷೇಕ, ಭಕ್ತರಿಗೆ ಮಂಗಳ ದರ್ಶನ

    ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ (Ayodhya) ರಾಮಮಂದಿರದಲ್ಲಿ (Ram Mandir) ರಾಮಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಸಂಭ್ರಮ ಮನೆ ಮಾಡಿದೆ. ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ರಾಮಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿವೆ.

    ಪ್ರತಿಷ್ಠಾ ದ್ವಾದಶಿಯಂದು ಬಾಲರಾಮಮೂರ್ತಿಗೆ ಮಹಾ ಅಭಿಷೇಕ ಮಾಡಲಾಯಿತು. ನಂತರ ಅವರ ಮಂಗಲ ದರ್ಶನ ನಡೆಯಿತು. ಈ ವಿಶೇಷ ದಿನದಂದು ರಾಮಮಂದಿರವನ್ನು ಭವ್ಯವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಾಮಲಲ್ಲಾನ (Ram Lalla) ದರ್ಶನ ಪಡೆದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

    ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವೇ ಇತ್ತು. ಭಕ್ತರು ನೃತ್ಯ ಮಾಡುತ್ತಾ ಮತ್ತು ಹಾಡುತ್ತ ಮೆರವಣಿಗೆ ಸಾಗಿ ರಾಮಲಲ್ಲಾನ ಆಸ್ಥಾನಕ್ಕೆ ಬಂದ ದೃಶ್ಯಗಳು ಕಂಡುಬಂದವು. ಎಲ್ಲರೂ ಶ್ರೀರಾಮನ ಭಕ್ತಿಯಲ್ಲಿ ಮಿಂದೆದ್ದರು. ಆರಾಧ್ಯ ದೈವ ರಾಮನ ದರ್ಶನಕ್ಕೆ ಕುಟುಂಬ ಸಮೇತರಾಗಿ ಭಕ್ತರು ಆಗಮಿಸಿದ್ದರು.

    ಧಾರ್ಮಿಕ ಕಾರ್ಯಗಳಲ್ಲಿ, ದೇವರಿಗೆ ನೈವೇದ್ಯ ಅರ್ಪಿಸಲಾಯಿತು. ಇದಾದ ನಂತರ ಮಹಾ ಆರತಿ ಮಾಡಲಾಯಿತು. ನಂತರ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. ರಾಜಭೋಗ್ ಪ್ರಕ್ರಿಯೆ ಪೂರ್ಣಗೊಂಡ ನಂತರ, ರಾಮಲಲ್ಲಾ ವಿರಾಜಮಾನನಾಗಿರುವ ಗರ್ಭಗುಡಿಯ ಬಾಗಿಲು ತೆರೆಯಲಾಯಿತು. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರ ನೇತೃತ್ವದಲ್ಲಿ ಮಹಾ ಆರತಿ ನೆರವೇರಿಸಲಾಯಿತು. ಮಹಾ ಆರತಿಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮನ ಮೂರ್ತಿಗೆ `ರಾಮಲಲ್ಲಾʼ ಅಂತ ಕರೆಯುವುದೇಕೆ?

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ ಮಂದಿರ ಸಂಕೀರ್ಣದ ಅಂಗದ್ ತಿಲಾದಲ್ಲಿ ಪ್ರತಿಷ್ಠಾ ದ್ವಾದಶಿ ಸಮಾರಂಭವನ್ನು ಉದ್ಘಾಟಿಸಿದರು. ಬಳಿಕ ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಸಂತರು ಮತ್ತು ಮಹಾಂತರೊಂದಿಗೆ ಅನ್ನ ಪ್ರಸಾದ ಸ್ವೀಕರಿಸಿದರು.

  • ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

    ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

    – ಬೆಚ್ಚಗಿನ ನೀರಲ್ಲಿ ರಾಮಲಲ್ಲಾನಿಗೆ ಸ್ನಾನ

    ಲಕ್ನೋ: ಚಳಿಗಾಲ ಸಮೀಪಿಸಿದ್ದು, ಅಯೋಧ್ಯೆ (Ayodhya) ರಾಮಮಂದಿರದ (Ram Mandir) ಬಾಲರಾಮನನ್ನು ಬೆಚ್ಚಗಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ನವೆಂಬರ್‌ 20 ರಿಂದ ಬರುವ ‘ಅಘರ್‌ ಕಿ ಪಂಚಮಿ’ಯಿಂದ ರಾಮಲಲ್ಲಾನಿಗೆ ಚಾದರ, ಪಶ್ಮಿನಾ ಶಾಲು ಹೊದಿಸಿ ಅಲಂಕಾರ ಮಾಡಲಾಗುವುದು. ಹೀಟರ್‌ ಅಳವಡಿಕೆ ಮಾಡಿ ಮೂರ್ತಿಗೆ ಬಿಸಿ ನೀರಿನ ಅಭಿಷೇಕ ಮಾಡುವುದು. ಬಾಲರಾಮನಿಗೆ ಮೊಸರು ನೈವೇದ್ಯದ ಬದಲು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಒಣ ಹಣ್ಣುಗಳ ನೈವೇದ್ಯ ಇರುತ್ತದೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್‌ – ಬಿಷ್ಣೋಯ್‌ ಗ್ಯಾಂಗ್‌ ಜೊತೆ ನಂಟು ಸಾಬೀತು!

    ಚಳಿಗಾಲದ ಉಡುಗೆಯನ್ನು ದೆಹಲಿ ಮೂಲದ ವಿನ್ಯಾಸಕರು ಹೊಲಿಯುತ್ತಿದ್ದಾರೆ. ನ.20 ರಿಂದ, ರಾಮಲಲ್ಲಾ ಮೂರ್ತಿಗೆ ಉಗುರುಬೆಚ್ಚನೆಯ ನೀರಿನಿಂದ ಸ್ನಾನ ಮಾಡಲಾಗುವುದು ಮತ್ತು ಗರ್ಭಗುಡಿಯಲ್ಲಿ ಹೀಟರ್‌ಗಳನ್ನು ಅಳವಡಿಸಿ ಅದನ್ನು ಬೆಚ್ಚಗಿಡಲಾಗುತ್ತದೆ. ಹವಾಮಾನ ವೈಪರೀತ್ಯದ ಸಮಯದಲ್ಲಿ ಗರ್ಭಗುಡಿಯಲ್ಲಿ ಬ್ಲೋವರ್‌ನಿಂದ ಬೆಚ್ಚಗಿನ ಗಾಳಿಯನ್ನು ಸಹ ಒದಗಿಸಲಾಗುತ್ತದೆ.

    ರಾಮಲಲ್ಲಾ ಬಾಲಕ. ಹೀಗಾಗಿ, ಅವನ ಆರೈಕೆ ಮುಖ್ಯವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಚಳಿಗಾಲದಲ್ಲಿ ಬಾಲಕ ರಾಮನಿಗೆ ವಿಶೇಷ ಗಮನ ಕೊಡಲಾಗುವುದು. ಇದನ್ನೂ ಓದಿ: ಮಹಿಳೆಯರಿಗೆ 3,000 ರೂ., ನಿರುದ್ಯೋಗ ಯುವಕ, ಯುವತಿಯರಿಗೆ 4,000 ರೂ. ಭತ್ಯೆ; ಕಾಂಗ್ರೆಸ್‌ ʻಮಹಾʼ ಗ್ಯಾರಂಟಿ!

    ದೇವಾಲಯದ ಟ್ರಸ್ಟ್‌ನ ವಕ್ತಾರ ಓಂಕಾರ್ ಸಿಂಗ್, ರಾಮಲಲ್ಲಾ ರಾಮಮಂದಿರದಲ್ಲಿ ರಾಜಕುಮಾರನಾಗಿ ಕುಳಿತಿದ್ದಾನೆ. ಆದ್ದರಿಂದ ಅವನ ಬಟ್ಟೆಗಳು ಅವನ ರಾಜಪ್ರಭುತ್ವಕ್ಕೆ ಹೊಂದಿಕೆಯಾಗಬೇಕು ಎಂದು ಸಿಂಗ್ ಹೇಳಿದರು.

  • ಜ.22ರ ಅಯೋಧ್ಯೆ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ವೆಚ್ಚ

    ಜ.22ರ ಅಯೋಧ್ಯೆ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ವೆಚ್ಚ

    ಅಯೋಧ್ಯೆ: ಜನವರಿ 22ರ ಅಯೋಧ್ಯೆಯ (Ayodhya) ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭದ (Consecration Ceremony of Ram Lalla Idol)ಯೋಜನೆಗೆ 113 ಕೋಟಿ ರೂ. ವೆಚ್ಚವಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Shri Ram Janmabhoomi Teerth Kshetra Trust) ಹೇಳಿದೆ.

    ರಾಮ ಮಂದಿರ ನಿರ್ಮಾಣಕ್ಕೆ ಇಲ್ಲಿಯವರೆಗೆ 1,800 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಈ ವರ್ಷದ ಅಂತ್ಯದ ವೇಳೆಗೆ ಮುಂದಿನ ಎರಡು ಹಂತಗಳ ನಿರ್ಮಾಣಕ್ಕೆ ಹೆಚ್ಚುವರಿ 670 ಕೋಟಿ ರೂ. ಖರ್ಚಾಗಬಹುದು ಎಂದು ಟ್ರಸ್ಟ್ ತನ್ನ ಇತ್ತೀಚೆಗೆ ನಡೆಸಿದ ಸಭೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ದೇವಭೂಮಿ ʻದ್ವಾರಕೆʼಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ…

    2023-24 ರ ಆರ್ಥಿಕ ವರ್ಷದ ವಾರ್ಷಿಕ ಲೆಕ್ಕಪತ್ರಗಳನ್ನು ಟ್ರಸ್ಟಿಗಳ ಮಂಡಳಿಯ ಮುಂದೆ ಮಂಡಿಸಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ದೇವಸ್ಥಾನಕ್ಕೆ ಸುಮಾರು 20 ಕೆಜಿ ಚಿನ್ನ ಮತ್ತು 13 ಕ್ವಿಂಟಾಲ್ ಬೆಳ್ಳಿ ದೇಣಿಗೆಯಾಗಿ ಬಂದಿದೆ.

    ಮಂದಿನ ಖರ್ಚಿನ ಬಗ್ಗೆ ಮಾಹಿತಿ ನೀಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಏಪ್ರಿಲ್ 1, 2024 ಮತ್ತು ಮಾರ್ಚ್ 31, 2025 ರ ನಡುವಿನ ಒಟ್ಟು ಯೋಜಿತ ವೆಚ್ಚವು 850 ಕೋಟಿ ರೂ. ಆಗಬಹುದು ಎಂದು ತಿಳಿಸಿದರು.

    2023-24ರ ಹಣಕಾಸು ವರ್ಷದಲ್ಲಿ 676 ಕೋಟಿ ರೂ.ಒಟ್ಟು ವೆಚ್ಚವಾಗಿದೆ. ಈ ಪೈಕಿ 540 ಕೋಟಿ ರೂ. ದೇವಸ್ಥಾನ ನಿರ್ಮಾಣಕ್ಕೆ ಬಳಕೆಯಾಗಿದ್ದರೆ, 136 ಕೋಟಿ ರೂ. ಪ್ರತಿಷ್ಠಾಪನಾ ಸಮಾರಂಭ ಸೇರಿ ಇತರೆ ಕೆಲಸಗಳಿಗೆ ಖರ್ಚು ಮಾಡಲಾಗಿದೆ. ಇದನ್ನೂ ಓದಿ: ಅಶರೀರವಾಣಿಯ ಭಯ, ತಂಗಿಗೆ ಸೆರೆವಾಸ – ಕೃಷ್ಣ ಹುಟ್ಟಿದಾಗ ಏನಾಯ್ತು?

    ಕಳೆದ ಹಣಕಾಸು ವರ್ಷದಲ್ಲಿ 363.34 ಕೋಟಿ ರೂ. ಆದಾಯ ಬಂದಿದ್ದು ಇದರಲ್ಲಿ 204 ಕೋಟಿ ರೂಪಾಯಿ ಬ್ಯಾಂಕ್ ಬಡ್ಡಿಯ ಮೂಲಕ ಬಂದಿದೆ. ಚೆಕ್‌, ನಗದು ಮೂಲಕ 58 ಕೋಟಿ ರೂ. ಬಂದರೆ, ದೇಣಿಗೆ ಬಾಕ್ಸ್‌ನಲ್ಲಿ 24.5 ಕೋಟಿ ರೂ., ಆನ್‌ಲೈನ್‌ ಮೂಲಕ 71 ಕೋಟಿ ರೂ., ವಿದೇಶಗಳಿಂದ 10.43 ಕೋಟಿ ರೂ. ಬಂದಿದೆ.

     

  • ಅಯೋಧ್ಯೆ ರಾಮನಿಗೆ ಬೆಳ್ಳಿಯ ಬಿಲ್ಲು-ಬಾಣ ಕೊಡುಗೆ

    ಅಯೋಧ್ಯೆ ರಾಮನಿಗೆ ಬೆಳ್ಳಿಯ ಬಿಲ್ಲು-ಬಾಣ ಕೊಡುಗೆ

    – ಬಿಲ್ಲು-ಬಾಣಕ್ಕೆ ಪೂಜೆ ಸಲ್ಲಿಸಿದ ಶೃಂಗೇರಿ ಮಠದ ಶ್ರೀಗಳು

    ಚಿಕ್ಕಮಗಳೂರು: ಅಯೋಧ್ಯೆಯ (Ayodhya) ಬಾಲರಾಮನಿಗೆ (Ram Lalla) ಭಕ್ತರೊಬ್ಬರು ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನು ನೀಡುವ ಮೂಲಕ ಭಕ್ತಿ ಸಮರ್ಪಿಸಿದ್ದಾರೆ. ಬೆಳ್ಳಿಯ ಬಿಲ್ಲು-ಬಾಣವನ್ನ ಮಾಡಿಸಿದ ಆಂಧ್ರಪ್ರದೇಶ ಮೂಲದ ಭಕ್ತರು ಅದನ್ನು ಶೃಂಗೇರಿಗೆ ತಂದು ಪೂಜೆ ಮಾಡಿಸಿದ್ದಾರೆ.

    ಬಾಲರಾಮನ ಬೆಳ್ಳಿಯ ಬಿಲ್ಲು ಹಾಗೂ ಬಾಣಕ್ಕೆ ಶೃಂಗೇರಿ ಮಠದ ಹಿರಿಯ ಗುರುಗಳಾದ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಪೂಜೆ ಸಲ್ಲಿಸಿದ್ದಾರೆ. ಶೃಂಗೇರಿ ಮಠದ ಕಿರಿಯ ಗುರುಗಳಾದ ಮಿಧುಶೇಖರ ಶ್ರೀಗಳು ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನು ಕೈಯಲ್ಲಿ ಹಿಡಿದು ನೋಡಿದ್ದಾರೆ. ನೋಡಲು ಅತ್ಯಂತ ಸುಂದರ ಹಾಗೂ ಮನಮೋಹಕವಾಗಿರುವ ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನ ಆಂಧ್ರಪ್ರದೇಶ ಮೂಲದ ರಾಮನ ಭಕ್ತ ಚಲ್ಲಾ ಶ್ರೀನಿವಾಸ್ ಎಂಬ ಭಕ್ತರು ಅಯೋಧ್ಯೆಯ ರಾಮನಿಗೆ ಭಕ್ತಿ ಪೂರ್ವಕವಾಗಿ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗದಲ್ಲಿ ವಯಾಡಕ್ಟ್ ಪರಿಶೀಲನಾ ಕಾರ್ಯ ಆರಂಭ

    ಜನವರಿ 22 ರಂದು ಅಯೋಧ್ಯೆಯ ರಾಮನ ಪ್ರಾಣಪ್ರತಿಷ್ಠಾಪನೆ (Ayodhya Ram Mandir) ದಿನ ಶೃಂಗೇರಿಯ ಋತ್ವಿಜರು ಹಾಗೂ ಪುರೋಹಿತರು ಕೂಡ ಅಯೋಧ್ಯೆಯ ಧಾರ್ಮಿಕ ಕಾರ್ಯಕ್ರಮ, ವಿಧಿ-ವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಅಯೋಧ್ಯೆ ರಾಮನ ಜಲಾಭಿಷೇಕಕ್ಕೆಂದು ಶೃಂಗೇರಿ ಶಾರದಾಂಭೆ ನೆಲೆಸಿರುವ ತುಂಗಾ ನದಿಯಿಂದಲೂ ಜಲವನ್ನ ಕೊಂಡೊಯ್ದಿದ್ದರು. ತುಂಗಾ ನದಿ ಜೊತೆ ಜಿಲ್ಲೆಯ ಭದ್ರಾ ಹಾಗೂ ಹೇಮಾವತಿ ನದಿಯಿಂದಲೂ ಜಲವನ್ನ ಕೊಂಡೊಯ್ದಿದ್ದರು.

    ಇದರ ಮಧ್ಯೆ ಅಯೋಧ್ಯೆಯ ಶ್ರೀರಾಮನಿಗೂ ಶೃಂಗೇರಿಗೂ ಅವಿನಾಭಾವ ಸಂಬಂಧವಿದೆ. ಶ್ರೀರಾಮನ ಸಹೋದರಿ ಶಾಂತ ಅವರ ದೇಗುಲವಿರುವ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರ ದೇಗುಲದಿಂದಲೂ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನ ರಾಮನ ಪೂಜೆಗಾಗಿ ಪಂಜೆ, ಶಲ್ಯ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ವಿವಿಧ ಧಾರ್ಮಿಕ ವಸ್ತುಗಳನ್ನ ಕೊಂಡೊಯ್ದಿದ್ದರು. ಇದನ್ನೂ ಓದಿ: 24 ಗಂಟೆಯೊಳಗೆ ಚುನಾವಣಾ ಕಣದಿಂದ ನಿವೃತ್ತರಾಗಿ: ರಘುಪತಿ ಭಟ್‍ಗೆ ಸುನಿಲ್ ಕುಮಾರ್ ಎಚ್ಚರಿಕೆ

    ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾದ ಶಾಂತಾ ಸಮೇತ ಋಷ್ಯಶೃಂಗೇಶ್ವರರು ಅಯೋಧ್ಯೆಯ ಶ್ರೀರಾಮನ ಅಕ್ಕ ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇಂದು ಭಕ್ತರೊಬ್ಬರು ಅಯೋಧ್ಯೆಯ ಶ್ರೀರಾಮನಿಗೆ ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನ ಮಾಡಿಸಿ ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಗೆ ತಲುಪಿಸಿದ್ದಾರೆ.

  • ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

    ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

    ಅಯೋಧ್ಯೆ: ಉದ್ಘಾಟನೆ ಬಳಿಕ ಮೊದಲ ಬಾರಿಗೆ ಅಯೋಧ್ಯೆ (Ayodhya) ರಾಮಮಂದಿರಕ್ಕೆ (Ram Temple) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿ ನೀಡಿ ಭಗವಾನ್‌ ರಾಮಲಲ್ಲಾನ ದರ್ಶನ ಪಡೆದರು.

    ಅಯೋಧ್ಯಾಧಾಮ ತಲುಪಿ ಮೊದಲು ಹನುಮಾನ್ ಗರ್ಹಿಯಲ್ಲಿ ದೇವರ ದರ್ಶನ ಮತ್ತು ಪೂಜೆ ಸಲ್ಲಿಸಿದರು. ಅರ್ಚಕ ರಾಜು ದಾಸ್, ರಾಷ್ಟ್ರಪತಿಗೆ ಬೆಳ್ಳಿ ಗದೆ, ಬೆಳ್ಳಿ ರಾಮ್ ದರ್ಬಾರ್ ಮತ್ತು ಹಸುವಿನ ಪ್ರತಿಕೃತಿಯನ್ನು ನೀಡಿದರು. ಇದನ್ನೂ ಓದಿ: ಟಿಎಂಸಿಗಿಂತ ಬಿಜೆಪಿಗೆ ವೋಟ್‌ ಹಾಕೋದು ಉತ್ತಮ: ಕೈ ನಾಯಕ ಅಧೀರ್‌ ರಂಜನ್‌

    ಹನುಮಂತನಗರಕ್ಕೆ ಭೇಟಿ ನೀಡಿದ ನಂತರ ರಾಷ್ಟ್ರಪತಿಗಳು ಸರಯೂ ಘಾಟ್‌ನ ಆರತಿ ಸ್ಥಳಕ್ಕೆ ತಲುಪಿದರು. ಅಲ್ಲಿ ಅವರು ಮಹಾ ಆರತಿಯಲ್ಲಿ ಭಾಗವಹಿಸಿದರು. ಸರಯೂ ಘಾಟ್‌ನ ಸುತ್ತಲೂ ವೇದಮಂತ್ರಗಳ ಪ್ರತಿಧ್ವನಿ ಕೇಳಿಬಂತು.

    ರಾಷ್ಟ್ರಪತಿಯವರೊಂದಿಗೆ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಮತ್ತು ಯುಪಿ ಸರ್ಕಾರದ ಸಚಿವ ಸೂರ್ಯ ಪ್ರತಾಪ್ ಶಾಹಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮತ ಪ್ರಮಾಣ ದಿಢೀರ್‌ ಹೆಚ್ಚಳ – ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ

  • ಇದೊಂದು ಭಾವನಾತ್ಮಕ ಕ್ಷಣ- ಚುನಾವಣಾ ಪ್ರಚಾರದ ಬ್ಯುಸಿನಲ್ಲೂ ಸೂರ್ಯ ತಿಲಕ ವೀಕ್ಷಿಸಿದ PM

    ಇದೊಂದು ಭಾವನಾತ್ಮಕ ಕ್ಷಣ- ಚುನಾವಣಾ ಪ್ರಚಾರದ ಬ್ಯುಸಿನಲ್ಲೂ ಸೂರ್ಯ ತಿಲಕ ವೀಕ್ಷಿಸಿದ PM

    ಗುವಾಹಟಿ: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಇಂದು ರಾಮನವಮಿ ಹಬ್ಬವನ್ನು ವಿಶೇಷ ಹಾಗೂ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸೂರ್ಯ ರಶ್ಮಿಯು ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸುವ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ವೀಕ್ಷಣೆ ಮಾಡಿದ್ದಾರೆ.

    ಬಳಿಕ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಲ್ಬರಿ ರ‍್ಯಾಲಿಯ ನಂತರ ನಾನು ಸೂರ್ಯ ತಿಲಕವನ್ನು (Surya Tilak) ವೀಕ್ಷಿಸಿದೆ. ಕೋಟಿಗಟ್ಟಲೆ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಹಾಗೂ ಐತಿಹಾಸಿಕ ಕ್ಷಣವಾಗಿದೆ. ಈ ಸೂರ್ಯ ತಿಲಕ ನಮ್ಮ ಜೀವನಕ್ಕೆ ಶಕ್ತಿಯನ್ನು ತರಲಿ ಮತ್ತು ನಮ್ಮ ರಾಷ್ಟ್ರವು ವೈಭವದ ಹೊಸ ಎತ್ತರಗಳನ್ನು ಏರಲು ಪ್ರೇರೇಪಿಸಲಿ ಎಂದು ಶುಭಹಾರೈಸಿದ್ದಾರೆ. ಇದನ್ನೂ ಓದಿ: ಸೂರ್ಯ ತಿಲಕವನ್ನು ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆಬಾಗುತ್ತೇನೆ: ಅರುಣ್‌ ಯೋಗಿರಾಜ್‌

    ಪ್ರಧಾನಿಯವರು ಇಂದು ಅಸ್ಸಾಂನ ನಲ್ಬರಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಈ ನಡುವೆಯೇ ತಮ್ಮ ಟ್ಯಾಬ್ಲೆಟ್‌ನಲ್ಲಿ ಸೂರ್ಯ ತಿಲಕ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಶೂ ಕಳಚಿಟ್ಟು ವೀಕ್ಷಿಸುತ್ತಿದ್ದ ಮೋದಿ ಸೂರ್ಯ ತಿಲಕ ವೀಕ್ಷಿಸುತ್ತಿರುವ ವೀಡಿಯೋ ಹಾಗೂ ಫೋಟೋಗಳು ವೈರಲ್‌ ಆಗುತ್ತಿವೆ.

  • ಅಯೋಧ್ಯೆ ರಾಮಮಂದಿರಕ್ಕೆ ಬೆಂಗಳೂರಿನ ಕಂಪನಿಯಿಂದ ‘ಸೂರ್ಯ ತಿಲಕ ಯಂತ್ರ’ ಕೊಡುಗೆ – ಏನಿದರ ವೈಶಿಷ್ಟ್ಯ?

    ಅಯೋಧ್ಯೆ ರಾಮಮಂದಿರಕ್ಕೆ ಬೆಂಗಳೂರಿನ ಕಂಪನಿಯಿಂದ ‘ಸೂರ್ಯ ತಿಲಕ ಯಂತ್ರ’ ಕೊಡುಗೆ – ಏನಿದರ ವೈಶಿಷ್ಟ್ಯ?

    – ರಾಮನವಮಿಯಂದು ರಾಮಲಲ್ಲಾನ ಹಣೆ ಮೇಲೆ ತಿಲಕದಂತೆ ಬೀಳುತ್ತೆ ಸೂರ್ಯನ ಕಿರಣ!

    ಅಯೋಧ್ಯೆ/ರಾಮಮಂದಿರ: ರಾಮನವಮಿ (Ram Navami) ದಿನದಂದು ಅಯೋಧ್ಯೆ ರಾಮಮಂದಿರದ (Ayodhya Ram Mandir) ಗರ್ಭಗುಡಿಯಲ್ಲಿರುವ ರಮಲಲ್ಲಾನ ಹಣೆ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳುತ್ತದೆ. ಅದಕ್ಕೆ ಸಹಕಾರಿಯಾದ ಆಪ್ಟಿಕಲ್‌ ಯಂತ್ರವನ್ನು (Surya Tilak Machine) ಬೆಂಗಳೂರು ಮೂಲದ ಕಂಪನಿಯೊಂದು ರಾಮ ಜನ್ಮಭೂಮಿ ಟ್ರಸ್ಟ್‌ಗೆ ಕೊಡುಗೆಯಾಗಿ ನೀಡಿರುವುದು ವಿಶೇಷ.

    ಎರಡು ಸಾರ್ವಜನಿಕ ಸಂಸ್ಥೆಗಳು ಮತ್ತು ಜೈನ ಕುಟುಂಬ ನಿರ್ವಹಿಸುತ್ತಿರುವ ಬೆಂಗಳೂರು ಮೂಲದ ಕಂಪನಿಯು ಅಯೋಧ್ಯೆ ರಾಮಮಂದಿರಕ್ಕೆ ‘ಸೂರ್ಯ ತಿಲಕ ಯಂತ್ರ’ವನ್ನು ಕೊಡುಗೆಯಾಗಿ ನೀಡಿದೆ. ಇದನ್ನೂ ಓದಿ: ಗೆಲುವಿಗಾಗಿ ಪ್ರಚಾರದ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ – ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಾಂಕ್ ಕಬ್ಜಕ್ಕೆ ಕ್ಯಾಂಪೇನ್

    84 ಲಕ್ಷ ರೂ. ಮೌಲ್ಯದ ಈ ಯಂತ್ರವನ್ನು ಜಿಗಣಿ ಲಿಂಕ್ ರಸ್ತೆಯಲ್ಲಿರುವ ಆಪ್ಟಿಕ್ಸ್ & ಅಲೈಡ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ (OPTICA) ಕೊಡುಗೆಯಾಗಿ ನೀಡಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ (CBRI) ಸಹಯೋಗದಲ್ಲಿ ಯಂತ್ರ ಅಭಿವೃದ್ಧಿಪಡಿಸಲಾಗಿದೆ.

    ಕಂಪನಿಯು ಈ ಆಪ್ಟಿಕಲ್ ವ್ಯವಸ್ಥೆಯನ್ನು ಸದ್ಭಾವನೆಯ ಸೂಚಕವಾಗಿ ಅಭಿವೃದ್ಧಿಪಡಿಸಿದೆ. ಈ ಯಂತ್ರದ ವಿನ್ಯಾಸಕ್ಕೆ ನಾಲ್ಕು ತಿಂಗಳ ಸಮಯ ಬೇಕಾಯಿತು. ಪ್ರತಿ ರಾಮನವಮಿಯಂದು 3-4 ನಿಮಿಷಗಳ ಕಾಲ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಸೂರ್ಯನ ಬೆಳಕು ಬೀಳಲು ಇದು ಸಹಕಾರಿಯಾಗಲಿದೆ ಎಂದು OPTICA ಕಂಪನಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕೊಟಾರಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಸೇರ್ಪಡೆ ಆಗ್ತಾರಾ ಕರಡಿ ಸಂಗಣ್ಣ?- ಲಕ್ಷ್ಮಣ ಸವದಿ ಭೇಟಿ ಬೆನ್ನಲ್ಲೇ ಕುತೂಹಲ

    ಟೈಟಾನಿಯಂ, ಹಿತ್ತಾಳೆ ಮತ್ತು ಕಂಚು ಬಳಸಿ ಯಂತ್ರ ರೂಪಿಸಲಾಗಿದೆ. ಇದು ಪೆರಿಸ್ಕೋಪ್‌ನಂತೆ ಕಾರ್ಯನಿರ್ವಹಿಸುತ್ತದೆ. ಪೆರಿಸ್ಕೋಪಿಕ್ ವ್ಯವಸ್ಥೆಯಲ್ಲಿನ ಕನ್ನಡಿಯು ರಾಮನವಮಿಯಂದು ನಿರ್ದಿಷ್ಟ ಕೋನದಲ್ಲಿ ಸೂರ್ಯನ ಬೆಳಕನ್ನು ಸೆರೆಹಿಡಿಯುತ್ತದೆ. ಸೆರೆ ಹಿಡಿದ ಬೆಳಕು ವಿಗ್ರಹದ ಹಣೆ ಮೇಲೆ ನಿಖರವಾಗಿ ಮೂಡುತ್ತದೆ ಎಂದು ಹೇಳಿದ್ದಾರೆ.

  • ಅಯೋಧ್ಯೆ ರಾಮಮಂದಿರದಲ್ಲಿ ರಾಜರಾಮ ‘ದರ್ಬಾರ್’ ಈ ವರ್ಷದ ಅಂತ್ಯದಲ್ಲಿ ಪೂರ್ಣ

    ಅಯೋಧ್ಯೆ ರಾಮಮಂದಿರದಲ್ಲಿ ರಾಜರಾಮ ‘ದರ್ಬಾರ್’ ಈ ವರ್ಷದ ಅಂತ್ಯದಲ್ಲಿ ಪೂರ್ಣ

    ಅಯೋಧ್ಯೆ (ಉತ್ತರ ಪ್ರದೇಶ): ರಾಮಲಲ್ಲಾನ (Ram Lalla) ಪ್ರಾಣ ಪ್ರತಿಷ್ಠಾಪನೆ ನೆರವೇರಿದ ಬಳಿಕ ಈಗ ರಾಮಮಂದಿರ (Ram Mandir) ನಿರ್ಮಾಣ ಕಾಮಗಾರಿ ಕಾರ್ಯ ಪುನರ್‌ ಆರಂಭಗೊಂಡಿದೆ.

    ಅಯೋಧ್ಯೆ (Ayodhya) ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಾತನಾಡಿ, ದೇವಾಲಯದಲ್ಲಿ ಮತ್ತೊಮ್ಮೆ ನಿರ್ಮಾಣ ಕಾರ್ಯ ಆರಂಭವಾಗಿದೆ. ‘ಪಾರ್ಕೋಟ’ ಕಾಮಗಾರಿ ಪೂರ್ಣಗೊಳ್ಳಬೇಕಿದೆ. 795 ಮೀಟರ್‌ನ ‘ಪರಿಕ್ರಮ’ ಗೋಡೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ಇದಲ್ಲದೆ, ದೇವಾಲಯದ ಕೆಳಗಿನ ಸ್ತಂಭದ ಮೇಲೆ ಪ್ರತಿಮಾಶಾಸ್ತ್ರದ ಕಾರ್ಯವನ್ನು ಸಹ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 25 ಲಕ್ಷ ಜನರಿಂದ ಬಾಲಕ ರಾಮನ ದರ್ಶನ – 11 ಕೋಟಿ ರೂ. ಕಾಣಿಕೆ ಸಂಗ್ರಹ

    ಮೊದಲ ಮತ್ತು ಎರಡನೇ ಮಹಡಿಯಲ್ಲಿ ರಾಜಾರಾಮನ ‘ದರ್ಬಾರ್’ ಕೆಲಸವು ಈಗ ಏಕಕಾಲದಲ್ಲಿ ಪ್ರಾರಂಭವಾಗಲಿದೆ. ಇದು ಡಿಸೆಂಬರ್ 2024 ರಲ್ಲಿ ಅದು ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಜ.22 ರಂದು ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಜರುಗಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಸ್ತವಾಗಿ ಬಾಲಕ ರಾಮ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಇದನ್ನೂ ಓದಿ: ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನ ಕೇವಲ 20 ನಿಮಿಷದಲ್ಲಿ ಕೆತ್ತಿದ್ರಂತೆ ಶಿಲ್ಪಿ ಯೋಗಿರಾಜ್‌

    ಈಗಾಗಲೇ ರಾಮಮಂದಿರದ 1ನೇ ಮಹಡಿ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಎರಡು ಮಹಡಿ ಕಾಮಗಾರಿ ನಡೆಯಬೇಕಿದೆ. 2025 ರ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.

  • ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನ ಕೇವಲ 20 ನಿಮಿಷದಲ್ಲಿ ಕೆತ್ತಿದ್ರಂತೆ ಶಿಲ್ಪಿ ಯೋಗಿರಾಜ್‌

    ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನ ಕೇವಲ 20 ನಿಮಿಷದಲ್ಲಿ ಕೆತ್ತಿದ್ರಂತೆ ಶಿಲ್ಪಿ ಯೋಗಿರಾಜ್‌

    – ‘ಬಾಲಕ ರಾಮ’ ಕೆತ್ತನೆಯ ಕುತೂಹಲಕಾರಿ ವಿಚಾರ ಹಂಚಿಕೊಂಡ ಮೈಸೂರಿನ ಶಿಲ್ಪಿ

    ಅಯೋಧ್ಯೆ (ಉತ್ತರ ಪ್ರದೇಶ): ಮುಗ್ಧತೆ ಮತ್ತು ದೈವತ್ವವನ್ನು ಹೊರಸೂಸುವ ಸುಂದರ ಕಣ್ಣುಗಳ ‘ಬಾಲಕ ರಾಮ’ ಅಯೋಧ್ಯೆ ರಾಮಮಂದಿರದ (Ayodhya Ram Mandir) ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ರಾಮಲಲ್ಲಾ (Ram Lalla) ನೋಡಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಯಾತ್ರೆ ಮಾಡುತ್ತಿದ್ದಾರೆ. ರಾಮಲಲ್ಲಾ ವಿಗ್ರಹದ ಆಕರ್ಷಣೆಯ ಕೇಂದ್ರಬಿಂದು ಸುಂದರ ಕಣ್ಣುಗಳು. ಈ ಕಣ್ಣುಗಳ ಬಗ್ಗೆ ಕುತೂಹಲಕಾರಿ ಅಂಶವೊಂದನ್ನು ದೇವಶಿಲ್ಪಿ ಅರುಣ್‌ ಯೋಗಿರಾಜ್‌ ಹಂಚಿಕೊಂಡಿದ್ದಾರೆ.

    ಜನಪ್ರಿಯ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj), ರಾಮಲಲ್ಲಾ ವಿಗ್ರಹ ಕೆತ್ತನೆಯ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಒಂದು ಮಂಗಳಕರ ಸಮಯದಲ್ಲಿ ಕಣ್ಣುಗಳನ್ನು ಪೂರ್ಣಗೊಳಿಸಲು ಕೇವಲ 20 ನಿಮಿಷ ತೆಗೆದುಕೊಂಡೆ. ಕಣ್ಣು ಕೆತ್ತನೆಗೆ ಚಿನ್ನದ ಉಳಿ ಮತ್ತು ಬೆಳ್ಳಿಯ ಸುತ್ತಿಗೆ ಬಳಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಕ್ನೋದಿಂದ 6 ದಿನ ಕಾಲ್ನಡಿಗೆಯಲ್ಲಿ ತೆರಳಿ ರಾಮಲಲ್ಲಾಗೆ ನಮಿಸಿದ 350 ಮಂದಿ ಮುಸ್ಲಿಮರು!

    ರಾಮಲಲ್ಲಾ ವಿಗ್ರಹದ ಕಣ್ಣುಗಳನ್ನು ಕೆತ್ತುವ ಮೊದಲು ಸರಯು ನದಿಯಲ್ಲಿ ಸ್ನಾನ ಮಾಡಿದೆ. ಹನುಮಾನ್‌ ಗರ್ಹಿ ಮತ್ತು ಕನಕ ಭವನದಲ್ಲಿ ಪೂಜೆ ಸಲ್ಲಿಸಿದೆ ಎಂದು ಶಿಲ್ಪಿ ಅರುಣ್‌ ಯೋಗಿರಾಜ್‌ ಹೇಳಿಕೊಂಡಿದ್ದಾರೆ. ಕೆತ್ತನೆ ಬಳಿಕ, ‘ಕಣ್ಣುಗಳು ಚೆನ್ನಾಗಿ ಕಾಣುತ್ತಿವೆಯೇ’ ಎಂದು ತಮ್ಮ ಸ್ನೇಹಿತರನ್ನು ಕೇಳುತ್ತಿದ್ದರಂತೆ.

    ವಿಗ್ರಹ ಕೆತ್ತನೆಗೂ ಮೊದಲು ಕಲ್ಲನ್ನು ಸೂಕ್ಷ್ಮವಾಗಿ ಗಮನಿಸಲು ಶಿಲ್ಪಿ ಸಾಕಷ್ಟು ಸಮಯ ತೆಗೆದುಕೊಳ್ಳಲು ನಿರ್ಧರಿಸಿದ್ದರಂತೆ. ಬಾಲಕ ರಾಮ ಮೂರ್ತಿ ಮೂಡಿಸುವುದಕ್ಕಾಗಿ, ಮಕ್ಕಳ ಜೊತೆಗೂ ಹೆಚ್ಚು ಸಮಯ ಕಳೆದಿದ್ದಾರೆ. ರಾಮಲಲ್ಲಾ ವಿಗ್ರಹದ ಮುಖ ಕೆತ್ತನೆ ಮಾಡಲು ಬರೋಬ್ಬರಿ 2 ತಿಂಗಳ ಸಮಯ ತೆಗೆದುಕೊಂಡರಂತೆ. ತಮಗೆ ಐಡಿಯಾ ಹೊಳೆದ ತಕ್ಷಣ ಮುಖ ಕೆತ್ತನೆ ಕಾರ್ಯ ಶುರು ಮಾಡಿದ್ದರಂತೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ವಿಶೇಷ ಮಂಡಲೋತ್ಸವ- ಸಿಎಂ ಯೋಗಿ ಭಾಗಿ

    ರಾಮಲಲ್ಲಾನ ವಿಗ್ರಹ ಕೆತ್ತನೆಗಾಗಿ ಶಿಲ್ಪಿ ಯೋಗಿರಾಜ್ ಹಲವಾರು ಸವಾಲುಗಳನ್ನು ಎದುರಿಸಿದ್ದಾರೆ. ಆರಂಭದಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಅವರನ್ನು ಕಡೆಗಣಿಸಲಾಗಿತ್ತು. ಅಂತಿಮ ದಿನದಂದು ಅವರನ್ನು ಕರೆಸಲಾಯಿತು. ಮತ್ತೆ ಮೂವರು ಶಿಲ್ಪಿಗಳ ಪೈಕಿ ಆಯ್ಕೆಯಾದವರಲ್ಲಿ ಇವರೂ ಒಬ್ಬರಾದರು. ಅವರ ಮೊದಲ ವಿಗ್ರಹವನ್ನು ಮೂರು ತಿಂಗಳ ನಂತರ ಕಲ್ಲು ಸಂಬಂಧಿತ ತಾಂತ್ರಿಕ ಸಮಸ್ಯೆಗಳಿಂದ ತಿರಸ್ಕರಿಸಲಾಯಿತು. ಇದು ಅವರಿಗೆ ತೊಂದರೆ ಉಂಟುಮಾಡಿತ್ತು.

    ಮತ್ತೆ ಅವರು ವಿಗ್ರಹ ಕೆತ್ತನೆ ಮಾಡುವಾಗ ಕಲ್ಲಿನ ಸಣ್ಣ ಚೂರು ಅವರ ಕಣ್ಣಿನ ರೆಟಿನಾಗೆ ತಾಗಿ ಸಮಸ್ಯೆ ಉಂಟುಮಾಡಿತ್ತು. ಕಣ್ಣಿನ ಗಾಯದಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಮತ್ತೆ ಅವರು ಕೆತ್ತನೆ ಕಾರ್ಯ ಮುನರಾರಂಭಿಸಲು 7 ದಿನಗಳ ಸಮಯ ತೆಗೆದುಕೊಳ್ಳಬೇಕಾಯಿತು. ಇದನ್ನೂ ಓದಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ