Tag: Ram Lalla Pran Pratishtha

  • ರಾಮಭಕ್ತರಿಗೆ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಲಿ: ವಿಜಯೇಂದ್ರ

    ರಾಮಭಕ್ತರಿಗೆ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಲಿ: ವಿಜಯೇಂದ್ರ

    ಬೆಂಗಳೂರು: ರಾಮಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಅವರು ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ (Congress) ನಾಯಕರ ಹೇಳಿಕೆಗಳು, ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಘಟನೆ, ಇದೆಲ್ಲವನ್ನೂ ನೋಡಿದಾಗ ರಾಜ್ಯದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅಗ್ನಿ ತೀರ್ಥ ಕಡಲತೀರದಲ್ಲಿ ನರೇಂದ್ರ ಮೋದಿ ಪವಿತ್ರ ಸ್ನಾನ

    ರಾಮಮಂದಿರ (Ram Mandir) ಉದ್ಘಾಟನೆ ಸಮೀಪಿಸುತ್ತಿರುವಾಗ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲದಲ್ಲಿದೆ. ದೇಶದಲ್ಲಿ ರಾಮಜಪ ನಡೆಯುತ್ತಿದ್ದರೆ, ಕರ್ನಾಟಕದಲ್ಲಿ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಬಂಧನ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

    ಕಾಂಗ್ರೆಸ್ ನಾಯಕರು ರಾಮಮಂದಿರ ಆಹ್ವಾನ ತಿರಸ್ಕರಿಸಿ ಬಹುಸಂಖ್ಯಾತರ ಭಾವನೆಗೆ ಘಾಸಿ ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಎಂದು ಆಹ್ವಾನ ತಿರಸ್ಕರಿಸಿದರು. ಅಲ್ಪಸಂಖ್ಯಾತರಿಗೆ ದುಃಖ ಆದರೆ ಅದಕ್ಕಿಂತ ಹೆಚ್ಚು ದುಃಖ ಕಾಂಗ್ರೆಸ್‍ನವರಿಗೆ ಆಗುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

    ಇದೇ ವೇಳೆ ರಾಜ್ಯ ಸರ್ಕಾರವನ್ನ ರಾಜ್ಯಪಾಲರ ಮೂಲಕ ಕಂಟ್ರೋಲ್ ಮಾಡಲಾಗುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿ.ಕೆ.ಹರಿಪ್ರಸಾದ್ ಅವರನ್ನ ಕೇಂದ್ರ ಸರ್ಕಾರ ಟಾರ್ಗೆಟ್ ಮಾಡಿದೆಯೋ? ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೋ? ಮುಂದಿನ ದಿನಗಳಲ್ಲಿ ಅದು ಗೊತ್ತಾಗಲಿದೆ ಎಂದಿದ್ದಾರೆ.

    ಹರಿಪ್ರಸಾದ್ ಹೇಳಿಕೆ, ಕೋಲಾರ ಘಟನೆ ಹಾಗೂ ಶ್ರೀಕಾಂತ್ ಪೂಜಾರಿ ಅರೆಸ್ಟ್ ವಿಚಾರ ಇರಬಹುದು ಇದನ್ನೆಲ್ಲ ನೋಡಿದರೆ ಮುಂದೆ ಅಹಿತಕರ ಘಟನೆ ಆಗದಂತೆ ಎಚ್ಚರ ವಹಿಸಬೇಕು. ಒಂದು ವೇಳೆ ಅಹಿತಕರ ಘಟನೆ ನಡೆದರೆ ಕಾಂಗ್ರೆಸ್ ಸರ್ಕಾರ ಹೊಣೆನಾ? ಎಂಬ ಪತ್ರಕರ್ತರ ಪ್ರಶ್ನೆಗೆ, ಅದರ ಬಗ್ಗೆ ಅನುಮಾನವೇ ಬೇಡ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ಜನವರಿ 22ಕ್ಕೆ ರಜೆ ಘೋಷಣೆ ಮಾಡಲಿ: ವಿಜಯೇಂದ್ರ

  • ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ – ರಣಬೀರ್ ಕಪೂರ್, ಆಲಿಯಾ ಭಟ್‌ಗೆ ಆಹ್ವಾನ

    ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ – ರಣಬೀರ್ ಕಪೂರ್, ಆಲಿಯಾ ಭಟ್‌ಗೆ ಆಹ್ವಾನ

    ಅಯೋಧ್ಯೆ: ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ (Ram Lalla Pran Pratishtha) ಅಯೋಧ್ಯೆ ನಗರ ಬಹುತೇಕ ಸಿಂಗಾರಗೊಂಡಿದೆ. ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್‌ ಆಗಿದ್ದು, ಅಮಂತ್ರಣ ಪತ್ರಿಕೆ ಹಂಚಿಕೆ ಸಹ ನಡೆಯುತ್ತಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

    ಈ ನಡುವೆ ಬಾಲಿವುಡ್‌ ಖ್ಯಾತ ನಟರು ಹಾಗೂ ದಂಪತಿಯೂ ಆಗಿರುವ ರಣಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ (Alia Bhatt) ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಜ.22ರಂದು ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ- ತಯಾರಾಗುತ್ತೆ 7 ಸಾವಿರ ಕೆ.ಜಿಯ ರಾಮ ಹಲ್ವಾ

    4000 ಸಂತರಿಗೆ ಆಹ್ವಾನ:
    ಜನವರಿ 22 ರಂದು ಪ್ರಾಣ ಪ್ರತಿಷ್ಠೆಗೆ 4000 ಸಂತರಿಗೆ ಆಹ್ವಾನಿಸಲಾಗಿದ್ದು, ಭಾರತದ ಎಲ್ಲಾ ಸಂಪ್ರದಾಯಗಳ ಸಂತರನ್ನು ಆಹ್ವಾನಿಸಲಾಗಿದೆ. ಅಂಡಮಾನ್ ನಿಕೋಬಾರ್ ಕರಾವಳಿಯಲ್ಲಿ ವಾಸಿಸುವ ಧಾರ್ಮಿಕ ಮುಖಂಡರು, ಜಾರ್ಖಂಡ್‌ನ ಬನವಾಸಿ ಪ್ರದೇಶದ ಧಾರ್ಮಿಕ ಮುಖಂಡರು ಮತ್ತು 125 ಸಂತ ಸಂಪ್ರದಾಯಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ.

    ಪ್ರಾಣ ತ್ಯಾಗ ಮಾಡಿದ ಕುಟುಂಬಗಳಿಗೆ ಆಹ್ವಾನ:
    ರಾಮ ಮಂದಿರ ಆಂದೋಲನದಲ್ಲಿ ಪ್ರಾಣ ತ್ಯಾಗ ಮಾಡಿದ ರಾಮಭಕ್ತನ ಕುಟುಂಬದ ಸದಸ್ಯರು, ಕೈಗಾರಿಕಾ ಲೋಕದ ಮುಖ್ಯಸ್ಥರು, ತಿರುಪತಿ, ವೈಷ್ಣೋದೇವಿ, ಕಾಶಿ ವಿಶ್ವನಾಥ ದೇಗುಲ ಪ್ರಮುಖರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. 25 ಆರ್‌ಎಸ್‌ಎಸ್ ಕಾರ್ಯಕರ್ತರು, 100 ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಸಿಆರ್‌ಪಿಎಫ್ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಈ ದಿನಕ್ಕಾಗಿ ನಾವು ತಪಸ್ಸು ಮಾಡಿದ್ದೆವು: ರಾಮಮಂದಿರ ಉದ್ಘಾಟನೆ ಬಗ್ಗೆ ಮುಸ್ಲಿಂ ಕರಸೇವಕ ಮಾತು

    ಟಾಟಾ, ಅಂಬಾನಿ, ಅದಾನಿಗೂ ಆಹ್ವಾನ:
    ಲಾರ್ಸೆನ್ ಟೂಬ್ರೊ ಮುಖ್ಯಸ್ಥರ ಜೊತೆ, ರತನ್ ಟಾಟಾ ಅವರ ಉತ್ತರಾಧಿಕಾರಿ ಚಂದ್ರಶೇಖರನ್, ಅಂಬಾನಿ ಮತ್ತು ಅದಾನಿಗೂ ಆಹ್ವಾನ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?

    ಸಿನಿಮಾ, ಕ್ರೀಡೆಯ ಗಣ್ಯರು
    ತಮಿಳು ಚಲನಚಿತ್ರ ನಟ ರಜನಿಕಾಂತ್, ಬ್ಯಾಡ್ಮಿಂಟನ್ ಆಟಗಾರ ಗೋಪಿಚಂದ್, ಗಾಯಕ ಗುರುದಾಸ್ ಮನ್, ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮಹಾಭಾರತದಲ್ಲಿ ಕೃಷ್ಣನ ಪಾತ್ರ ನಿರ್ವಹಿಸಿದ ನಿತೀಶ್ ಭಾರದ್ವಾಜ್, ಚಲನಚಿತ್ರ ಸೆನ್ಸಾರ್ ಮಂಡಳಿಯ ಪ್ರಸೂನ್ ಜೋಶಿಯನ್ನು ಆಹ್ವಾನಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ – AI ಕಣ್ಗಾವಲು ಸಾಧ್ಯತೆ, 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ