Tag: ram navami

  • ಬಿಹಾರ ರಾಮನವಮಿ ಹಿಂಸಾಚಾರ – ಮತ್ತೆ ಕೇಳಿ ಬಂತು ಸ್ಫೋಟದ ಸದ್ದು

    ಬಿಹಾರ ರಾಮನವಮಿ ಹಿಂಸಾಚಾರ – ಮತ್ತೆ ಕೇಳಿ ಬಂತು ಸ್ಫೋಟದ ಸದ್ದು

    ಪಾಟ್ನಾ: ಬಿಹಾರದ (Bihar) ರೋಹ್ತಾಸ್ ಜಿಲ್ಲೆಯ ಸಸಾರಾಮ್ (Sasaram) ನಗರದಲ್ಲಿ ಬಾಂಬ್ ಸ್ಫೋಟಗೊಂಡು (Bomb Blast) 6 ಜನರು ಗಾಯಗೊಂಡ ಘಟನೆ ನಡೆದು 2 ದಿನಗಳಾದ ಬಳಿಕ ಮತ್ತೆ ಸೋಮವಾರ ಮುಂಜಾನೆ ಸ್ಫೋಟದ (Explosion) ಸದ್ದು ಕೇಳಿ ಬಂದಿದೆ.

    ಸೋಮವಾರ ಮುಂಜಾನೆ ನಗರದ ಮೋಚಿ ತೋಲಾ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಬ್ ಇನ್ಸ್‌ಪೆಕ್ಟರ್ ರಾಮ್ ನರೇಶ್ ಸಿಂಗ್, ನಾವು ಮುಂಜಾನೆ ಸ್ಫೋಟದಂತಹ ಶಬ್ದವನ್ನು ಕೇಳಿದ್ದೇವೆ. ಆದರೆ ಅದು ಬಾಂಬ್ ಸ್ಫೋಟವೇ ಅಥವಾ ಪಟಾಕಿಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: 36 ಮಂದಿ ಸಾವಿಗೆ ಕಾರಣವಾಗಿದ್ದ ಇಂದೋರ್‌ ದೇವಸ್ಥಾನ ನೆಲಸಮ

    ಮಾರ್ಚ್ 31 ರಂದು ರಾಮನವಮಿ ಮೆರವಣಿಗೆಯ ಬಳಿಕ ಸಸಾರಾಮ್‌ನಲ್ಲಿ 2 ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ಪ್ರದೇಶದಲ್ಲಿ ಕಲ್ಲು ತೂರಾಟವೂ ನಡೆದಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಸಸಾರಮ್ ನಗರದಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದ್ದಾರೆ.

    ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ನಂತರ ಸರಣಿ ಘರ್ಷಣೆಗಳು ವರದಿಯಾಗಿವೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪೊಲೀಸರು ಮತ್ತು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ದುಷ್ಕರ್ಮಿಗಳನ್ನು ಹಿಡಿಯಲು ಬಿಹಾರ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸಸಾರಾಮ್‌ನಿಂದ ಇದುವರೆಗೆ 43 ಜನರನ್ನು ಬಂಧಿಸಲಾಗಿದೆ ಮತ್ತು 3 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸಸಾರಾಮ್ ನಗರದಾದ್ಯಂತ 27 ಸ್ಥಳಗಳಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಗಿದೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮೂವರು ಸಾವು

  • ಅಮಿತ್ ಶಾ ಭೇಟಿ ರದ್ದಾದ ಪ್ರದೇಶದಲ್ಲಿ ಬಾಂಬ್ ಸ್ಫೋಟ – ಐವರಿಗೆ ಗಾಯ

    ಅಮಿತ್ ಶಾ ಭೇಟಿ ರದ್ದಾದ ಪ್ರದೇಶದಲ್ಲಿ ಬಾಂಬ್ ಸ್ಫೋಟ – ಐವರಿಗೆ ಗಾಯ

    – ರಾಮನವಮಿ ಹಿಂಸಾಚಾರ ನಡೆದ 1 ದಿನದ ಬಳಿಕ ಘಟನೆ

    ಪಾಟ್ನಾ: ರಾಮನವಮಿಯ (Ram Navami) ಹಿಂಸಾಚಾರದ (Violence) ಬಳಿಕ ಬಿಹಾರದಲ್ಲಿ (Bihar) ಶನಿವಾರ ಮತ್ತೆ ಘರ್ಷಣೆ ವರದಿಯಾಗಿದೆ. ಬಿಹಾರದ ಸಸಾರಾಮ್ (Sasaram) ಪಟ್ಟಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು (Bomb Blast), ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.

    ಸಸಾರಾಮ್ ಡಿಎಂ ಈ ಬಗ್ಗೆ ಮಾಹಿತಿ ನೀಡಿದ್ದು, ಸಸಾರಾಮ್‌ನಲ್ಲಿ ಬಾಂಬ್ ಸ್ಫೋಟವಾಗಿದೆ. ಗಾಯಾಳುಗಳನ್ನು ಬಿಹೆಚ್‌ಯು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಘಟನೆ ಬಗ್ಗೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ

    ಇದಕ್ಕೂ ಮುನ್ನ ಮಾರ್ಚ್ 31 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಬೇಕಿದ್ದ ನಳಂದದ ಬಿಹಾರಶರೀಫ್, ರೋಹ್ಯಾಸ್‌ನ ಸಸಾರಾಮ್‌ನಲ್ಲಿ ಘರ್ಷಣೆ ನಡೆದಿತ್ತು. ಜಿಲ್ಲೆಯಲ್ಲಿ ಘರ್ಷಣೆ ನಡೆದಿದ್ದ ಹಿನ್ನೆಲೆ ಸೆಕ್ಷನ್ 144 ಹೇರಲಾಗಿತ್ತು. ಮಾತ್ರವಲ್ಲದೇ ಅಮಿತ್ ಶಾ ಅವರ ಸಸಾರಾಮ್ ಭೇಟಿಯನ್ನೂ ರದ್ದುಗೊಳಿಸಲಾಗಿತ್ತು.

    ಪೊಲೀಸರ ಪ್ರಕಾರ ರಾಮನವಮಿ ಆಚರಣೆ ವೇಳೆ ಹಿಂಸಾಚಾರ ನಡೆದಿರುವ ಹಿನ್ನೆಲೆ ರಾಜ್ಯಾದ್ಯಂತ ಕೆಲ ಭಾಗಗಳಿಂದ 45 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಸಸಾರಾಮ್‌ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 18 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪ್ರಮುಖ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸಿಗುತ್ತಿಲ್ಲ ಅಭ್ಯರ್ಥಿಗಳು!

  • ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

    ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

    – 14 ಜನರ ರಕ್ಷಣೆ
    – ಮುಂದುವರಿದ ಹುಡುಕಾಟ ಕಾರ್ಯಾಚರಣೆ

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ (Indore) ದೇವಾಲಯವೊಂದರಲ್ಲಿ (Temple) ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ (StepWell) ಭಕ್ತರು ಬಿದ್ದು ಸಾವನ್ನಪ್ಪಿರುವ ಘಟನೆ ದುರಂತವೇ ಎನಿಸಿಕೊಂಡಿದೆ. ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.

    ವರದಿಗಳ ಪ್ರಕಾರ ಗುರುವಾರ ರಾಮನವಮಿಯ (Ram Navami) ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ಆದರೆ ಕಳೆದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಕಾರಣ ಬಾವಿಯ ಮೇಲ್ಛಾವಣಿ ಭಾರ ತಡೆದುಕೊಳ್ಳಲಾರದೇ ಕುಸಿದುಬಿಟ್ಟಿದೆ. ಈ ವೇಳೆ ಅಲ್ಲಿ ನೆರೆದಿದ್ದ ಭಕ್ತರು ಬಾವಿಯೊಳಗೆ ಬಿದ್ದಿದ್ದಾರೆ.

    ಘಟನೆ ನಡೆದ ತಕ್ಷಣಕ್ಕೆ ಪ್ರತ್ಯಕ್ಷದರ್ಶಿಗಳು ಸುಮಾರು 25 ಜನರು ಬಾವಿಯೊಳಗೆ ಬಿದ್ದಿದ್ದಾಗಿ ತಿಳಿಸಿದ್ದರು. ಆದರೆ ಅಂದಾಜಿಸಿದ್ದಕ್ಕಿಂತಲೂ ಹೆಚ್ಚು ಜನರು ಬಾವಿಯೊಳಗೆ ಬಿದ್ದಿದ್ದರು ಎಂಬುದು ತಿಳಿದುಬಂದಿದೆ. ಈಗಾಗಲೇ ಮೃತರ ಸಂಖ್ಯೆ 35ಕ್ಕೆ ಏರಿದೆ. ಬಾವಿಗೆ ಬಿದ್ದಿದ್ದ 14 ಜನರ ರಕ್ಷಣೆ ಮಾಡಲಾಗಿದೆ. ಒಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ SSLC ಪರೀಕ್ಷೆ ಪ್ರಾರಂಭ- ಎಕ್ಸಾಂಗೆ ಸಮವಸ್ತ್ರ ನಿಯಮ ಕಡ್ಡಾಯ

    ಈ ದೇವಾಲಯವನ್ನು ಖಾಸಗಿ ಟ್ರಸ್ಟ್ ನಿರ್ವಹಿಸುತ್ತಿದ್ದು, ಇಂದೋರ್‌ನ ಹಳೆಯ ವಸತಿ ಕಾಲೋನಿಗಳಲ್ಲಿ ಒಂದಾಗಿರುವ ಸ್ನೇಹ್ ನಗರದಲ್ಲಿ ನೆಲೆಗೊಂಡಿದೆ. ನಿವಾಸಿಗಳು ಈ ಹಿಂದೆಯೇ ದೇವಾಲಯದ ಅಭಿವೃದ್ಧಿಗೆ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅದರಂತೆ ಇಂದೋರ್ ಮುನ್ಸಿಪಲ್ ಕಾರ್ಪೋರೇಷನ್ ಕ್ರಮ ಕೈಗೊಂಡಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು ಎಂದು ಮೂಲಗಳು ತಿಳಿಸಿವೆ.

    ಇದೀಗ ರಕ್ಷಿಸಲ್ಪಟ್ಟವರಲ್ಲಿ ಇಬ್ಬರು ಗಾಯಾಳುಗೆ ಚಿಕಿತ್ಸೆ ನೀಡಿದ ಬಳಿಕ ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚೌಹಾಣ್ ಅವರೊಂದಿಗೆ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ. ಇದನ್ನೂ ಓದಿ: ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಸೂಸೈಡ್

  • ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – 13 ಮಂದಿ ಸಾವು

    ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – 13 ಮಂದಿ ಸಾವು

    ಭೋಪಾಲ್: ರಾಮನವಮಿ (Ram Navami) ಆಚರಣೆ ನಡೆಯುತ್ತಿದ್ದ ವೇಳೆ ಇಂದೋರ್‌ನ (Indore) ದೇವಸ್ಥಾನದ (Temple) ನೆಲ ಕುಸಿದು ಅದರ ಅಡಿಯಲ್ಲಿದ್ದ ಬಾವಿಯೊಂದರಲ್ಲಿ ಮುಳುಗು 13 ಮಂದಿ ಸಾವನ್ನಪ್ಪಿದ ಘಟನೆ ಇಂದೋರ್‌ನಲ್ಲಿ ನಡೆದಿದೆ.

    ನಗರದ ಸ್ನೇಹನಗರ ಪ್ರದೇಶದಲ್ಲಿರುವ ಶ್ರೀ ಬಾಲೇಶ್ವರ ದೇವಸ್ಥಾನದಲ್ಲಿ ಈ ಘಟನೆ ವರದಿಯಾಗಿದೆ. ಘಟನೆಯ ಬಳಿಕ ದೇವಾಲಯದ ಆವರಣದಲ್ಲಿ ಉಂಟಾದ ಅವ್ಯವಸ್ಥೆಯ ಹಾಗೂ ರಕ್ಷಣಾ ಕಾರ್ಯಾಚರಣೆಯ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

    ಘಟನೆ ಬಗ್ಗೆ ಮಧ್ಯಪ್ರದೇಶದ  (Madhya Pradesh)  ಗೃಹಸಚಿವ ನರೋತ್ತಮ್ ಮಿಶ್ರಾ ಮಾತನಾಡಿ, 13 ಜನರು ಸಾವನ್ನಪ್ಪಿದ್ದು, 10 ಮಹಿಳೆಯರು ಸೇರಿದಂತೆ 11 ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. 19 ಮಂದಿಯನ್ನು ಘಟನ ಸ್ಥಳದಿಂದ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಾಯಗೊಂಡವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚುನಾವಣಾ ಅಕ್ರಮ ತಡೆಗೆ 16 ಚೆಕ್ ಪೋಸ್ಟ್ ಸ್ಥಾಪನೆ- ಐವರು ರೌಡಿಶೀಟರ್‌ಗಳ ಗಡಿಪಾರು

    ವರದಿಗಳ ಪ್ರಕಾರ ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ರಾಮನವಮಿಯ ಹಿನ್ನೆಲೆ ದೇವಾಲಯದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಮೆಟ್ಟಿಲು ಬಾವಿಯ ಮೇಲ್ಛಾವಣಿ ಕುಸಿದಿದೆ. ಇದನ್ನೂ ಓದಿ: ಮೋದಿಯನ್ನು ಪ್ರಕರಣದಲ್ಲಿ ಸಿಲುಕಿಸುವಂತೆ ನನ್ನ ಮೇಲೆ ಸಿಬಿಐ ಒತ್ತಡ ಹೇರಿತ್ತು: ಅಮಿತ್ ಶಾ

  • ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – ಬಾವಿಗೆ ಬಿದ್ದ 25 ಜನ

    ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – ಬಾವಿಗೆ ಬಿದ್ದ 25 ಜನ

    ಭೋಪಾಲ್: ರಾಮನವಮಿ (Ram Navami) ಆಚರಣೆ ವೇಳೆ ದೇವಾಲಯವೊಂದರ (Temple) ನೆಲ ಕುಸಿತವಾಗಿದ್ದು, ಅದರ ಅಡಿಯಲ್ಲಿದ್ದ ಬಾವಿಗೆ ಸುಮಾರು 25 ಜನರು ಬಿದ್ದಿರುವ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ (Indore) ನಡೆದಿದೆ. ಬಾವಿಗೆ ಬಿದ್ದಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಸ್ನೇಹನಗರ ಪ್ರದೇಶದಲ್ಲಿರುವ ಬಾಲೇಶ್ವರ ದೇವಾಲಯದಲ್ಲಿ ಈ ಘಟನೆ ವರದಿಯಾಗಿದೆ. ಘಟನೆಯ ಬಳಿಕ ದೇವಾಲಯದ ಆವರಣದಲ್ಲಿ ಉಂಟಾದ ಅವ್ಯವಸ್ಥೆಯ ಹಾಗೂ ರಕ್ಷಣಾ ಕಾರ್ಯಾಚರಣೆಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಇದನ್ನೂ ಓದಿ: ವಾಹನ ಸವಾರನ ಮೇಲೆ‌ ಎಕ್ಸ್‌ಪ್ರೆಸ್‌ ವೇ ಟೋಲ್ ಸಿಬ್ಬಂದಿ ಹಲ್ಲೆ

    ವರದಿಗಳ ಪ್ರಕಾರ ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ರಾಮನವಮಿಯ ಹಿನ್ನೆಲೆ ದೇವಾಲಯದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಮೆಟ್ಟಿಲು ಬಾವಿಯ (Stepwell) ಮೇಲ್ಛಾವಣಿ ಕುಸಿದಿದೆ. ಇದರಿಂದ ಅದರ ಮೇಲೆ ನಿಂತಿದ್ದ ಸುಮಾರು 25 ಜನರು ಬಾವಿಯೊಳಗೆ ಬಿದ್ದಿದ್ದಾರೆ.

    ಇದೀಗ ಬಾವಿಯೊಳಗೆ ಬಿದ್ದಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಕುಸಿತದ ಸಂದರ್ಭ ಸ್ಥಳದಲ್ಲಿ 25ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಆದರೆ ಘಟನೆ ಬಗ್ಗೆ ಅಂಬುಲೆನ್ಸ್ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರೂ ಅವರು ಸರಿಯಾದ ಸಮಯದಲ್ಲಿ ಆಗಮಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಬಾವಿಯೊಳಗೆ ಹಗ್ಗಗಳನ್ನು ಬಿಟ್ಟು ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿದೆ. ಇದನ್ನೂ ಓದಿ: ಪೋಸ್ಟರ್ ವಾರ್ – ಪ್ರಧಾನಿ ಶೈಕ್ಷಣಿಕ ಅರ್ಹತೆ ಕೆಣಕಿದ AAP

  • ರಾಮನವಮಿ ಮೆರವಣಿಗೆಯನ್ನು ಪಾಕಿಸ್ತಾನದಲ್ಲಿ ನಡೆಸಲು ಸಾಧ್ಯವೇ? ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

    ರಾಮನವಮಿ ಮೆರವಣಿಗೆಯನ್ನು ಪಾಕಿಸ್ತಾನದಲ್ಲಿ ನಡೆಸಲು ಸಾಧ್ಯವೇ? ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

    ನವದೆಹಲಿ: ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳನ್ನು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಪ್ರಶ್ನಿಸಿದ್ದಾರೆ. ರಾಮನವಮಿ ಮೆರವಣಿಗೆಯನ್ನು ಭಾರತದಲ್ಲಲ್ಲದೇ ಪಾಕಿಸ್ತಾನದಲ್ಲಿ ನಡೆಸಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

    ಈ ದೇಶದಲ್ಲಿ ಇಲ್ಲದಿದ್ದರೆ ರಾಮನವಮಿ ಮೆರವಣಿಗೆಗಳನ್ನು ಎಲ್ಲಿ ನಡೆಸಬೇಕು? ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಇತರ ದೇಶಗಳಲ್ಲಿಯೇ ಎಂದು ಸಿಂಗ್ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮೆರವಣಿಗೆಗೂ ಮುನ್ನ ಆಯೋಜಕರಿಂದ ಅಫಿಡವಿಟ್ ಕಡ್ಡಾಯ

    RAMANAVAMI

    1947ರಲ್ಲಿ ಧರ್ಮ ವಿಭಜನೆಯಾಯಿತು. ಈಗ ಅಸಾದುದ್ದೀನ್ ಓವೈಸಿಯಂಥವರು ಈ ಬೀದಿ, ಆ ಬೀದಿಗೆ ಏಕೆ ಹೋಗುತ್ತಾರೆ ಎಂದು ಕೇಳುತ್ತಾರೆ. ಅದನ್ನೆಲ್ಲ ಹಿಂದೂ ಓಣಿ, ಮುಸ್ಲಿಂ ಬೀದಿ ಎಂದು ವಿಂಗಡಿಸಿದ್ದಾರೆಯೇ? ಈ ರೀತಿಯ ಮನಸ್ಥಿತಿಯಿದ್ದರೆ ವಿಭಜನೆಯಾಗುತ್ತದೆ. ಪಾಕಿಸ್ತಾನಕ್ಕೆ ಹೋಗಬೇಕಾದವರು ಅಲ್ಲಿಗೆ ಹೋದರು. ನಮ್ಮ ದೇಶದಲ್ಲಿ ನಮ್ಮ ಧಾರ್ಮಿಕ ಆಚರಣೆಗಳಿಗೆ ಯಾವುದೇ ಅಡ್ಡಿಯಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸ್ವಾತಂತ್ರ್ಯ ನಂತರ ಹೊಸ ಮಸೀದಿಗಳ ನಿರ್ಮಾಣವನ್ನು ಭಾರತದಲ್ಲಿ ಎಂದಿಗೂ ವಿರೋಧಿಸಲಿಲ್ಲ. ಪಾಕಿಸ್ತಾನದಲ್ಲಿ ದೇವಾಲಯಗಳನ್ನು ಕೆಡವಲಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮೋದಿ, ಅಮಿತ್ ಶಾರನ್ನು ನಿಂದಿಸಿದ್ದ ವ್ಯಕ್ತಿ ಬಂಧನ

    RAMANAVAMI

    ಕರ್ನಾಟಕದ ಹುಬ್ಬಳ್ಳಿ ಮತ್ತು ದೆಹಲಿಯ ಜಹಂಗಿರ್‌ಪುರಿಯಲ್ಲಿ ಕೋಮುಗಲಭೆ ವಿರೋಧಿಸಿ ಗಿರಿರಾಜ್‌ ಸಿಂಗ್‌ ಮಾತನಾಡಿದ್ದಾರೆ. ಗುಜರಾತ್‌, ಮಧ್ಯಪ್ರದೇಶ, ಜಾರ್ಖಂಡ್‌, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವ ಘರ್ಷಣೆ ಆಗಿತ್ತು.

  • ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ: ಅಸಾದುದ್ದೀನ್‌ ಓವೈಸಿ

    ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ: ಅಸಾದುದ್ದೀನ್‌ ಓವೈಸಿ

    ಗಾಂಧೀನಗರ: ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ. ಅದಕ್ಕೆ ಗಲಭೆಗೆ ಸಹಕರಿಸಿದೆ ಎಂದು ರಾಮನವಮಿಯಂದು ನಡೆದ ಹಿಂಸಾಚಾರ ಖಂಡಿಸಿ ಗುಜರಾತ್‌ ಸರ್ಕಾರದ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ.

    ಎಷ್ಟು ದಿನ ಹಳೆಯ ಕಥೆಗಳನ್ನು ಹೊರತರುತ್ತೀರಿ? ನಿಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಿ. ನೀವೇ ಜಟಿಲರು. ಭಜನೆ ಮಾಡಬೇಕು, ಆದರೆ ಯಾವ ರೀತಿಯ ಘೋಷಣೆಗಳು ಎದ್ದವು? 50-100 ಕತ್ತಿಗಳನ್ನು ಬೀಸಲಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಇದನ್ನು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಾರಣಾಸಿಯ ಸೀರೆ ಮಳಿಗೆಯಲ್ಲಿ ಅಗ್ನಿ ದುರಂತ: ನಾಲ್ವರು ಸಜೀವ ದಹನ

    bhupendra patel gujarat chief minister

    ಗುಪ್ತಚರ ಇಲಾಖೆ (IB) ವರದಿಯಿದ್ದರೆ ನೀವು ಏಕೆ ಮಲಗಿದ್ದೀರಿ? ನೀವು ಅದನ್ನು ಬಹಿರಂಗಪಡಿಸಬೇಕು. ಹೆಚ್ಚಿನ ಪೋಲಿಸ್ ಪಡೆಯನ್ನು ನಿಯೋಜಿಸಿ, ಹಿಂಸಾಚಾರವನ್ನು ನಿಲ್ಲಿಸಬೇಕು. ನಿಮ್ಮ ಜಟಿಲ ವರ್ತನೆಯನ್ನು ಮರೆಮಾಡಲು ಕಥೆಗಳನ್ನು ಹೇಳುತ್ತೀರಿ. ಅಂತಹ ಕಥೆಗಳು ಈಗ ಹಳೆಯದಾಗಿವೆ ಎಂದು ಚಾಟಿ ಬೀಸಿದ್ದಾರೆ.

    ಇದು ರಾಜ್ಯ ಸರ್ಕಾರದ ಜವಾಬ್ದಾರಿ ಮತ್ತು ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಬಂಧಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿ 350 ಕಿಮೀ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆ

    ಯಾವುದೇ ಹಿಂಸಾಚಾರವೂ ಸರಿಯಲ್ಲ. ಹಿಂಸಾಚಾರ ಭುಗಿಲೆದ್ದರೆ ಅದರ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ರಾಜ್ಯ ಸರ್ಕಾರಗಳು ಬಯಸದಿದ್ದರೆ, ಹಿಂಸಾಚಾರ ಭುಗಿಲೇಳುವುದಿಲ್ಲ ಎಂದು ತನಿಖಾ ಆಯೋಗದ ವರದಿಗಳು ಹೇಳಿವೆ ಎಂದು ತಿಳಿಸಿದ್ದಾರೆ.

  • ಈ ಬಾರಿಯ ರಾಮನವಮಿಯಂದು ಯುಪಿಯಲ್ಲಿ ಧಂಗೆ ಮರೆತು ಬಿಡಿ, ಜಗಳವೂ ನಡೆದಿಲ್ಲ: ಯೋಗಿ

    ಈ ಬಾರಿಯ ರಾಮನವಮಿಯಂದು ಯುಪಿಯಲ್ಲಿ ಧಂಗೆ ಮರೆತು ಬಿಡಿ, ಜಗಳವೂ ನಡೆದಿಲ್ಲ: ಯೋಗಿ

    ಲಕ್ನೋ: ಈ ಬಾರಿಯ ಶ್ರೀರಾಮನವಮಿಯಂದು ಧಂಗೆಗಳನ್ನು ಮರೆತು ಬಿಡಿ, ಯಾವುದೇ ಜಗಳವೂ ಉತ್ತರಪ್ರದೇಶದಲ್ಲಿ ನಡೆದಿಲ್ಲ. ಇದು ಹೊಸ ಅಭಿವೃದ್ಧಿಯ ಸಂಕೇತವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು.

    ರಾಮನವಮಿ ಮೆರವಣಿಗೆಯ ಸಮಯದಲ್ಲಿ ಕೆಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಘರ್ಷಣೆಯ ನಂತರ ಮಾತನಾಡಿದ ಅವರು, ರಾಮನವಮಿ ಹಾಗೂ ಇದು ರಂಜಾನ್ ತಿಂಗಳಾಗಿದೆ. ಆದರೆ ಈ ಬಾರಿ ಭಾರತದಲ್ಲೇ ಅತ್ಯಂತ ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಯಾವುದೇ ಘರ್ಷಣೆ ನಡೆದಿಲ್ಲ. ಇದು ಉತ್ತರ ಪ್ರದೇಶ ಹೊಸ ಅಭಿವೃದ್ಧಿ ಕಾರ್ಯಸೂಚಿಯ ಸಂಕೇತವಾಗಿದೆ ಎಂದರು.

    ರಾಮನವಮಿಯನ್ನು ಇತ್ತೀಚಿಗಷ್ಟೇ ಆಚರಿಸಲಾಯಿತು. ಉತ್ತರಪ್ರದೇಶದಲ್ಲಿ 25 ಕೋಟಿ ಜನಸಂಖ್ಯೆಯಿದೆ. ರಾಜ್ಯಾದ್ಯಂತ 800 ಕಡೆಗಳಲ್ಲಿ ರಾಮನವಮಿ ಮೆರವಣಿಗೆಗಳು ನಡೆದವು. ಜೊತೆಗೆ ಇದು ರಂಜಾನ್ ತಿಂಗಳು ಆಗಿದೆ. ಅನೇಕ ಇಫ್ತಾರ್ ಕೂಟಗಳು ನಡೆದವು. ಆದರೆ ಗಲಭೆಯನ್ನು ಮರೆತು ಬಿಡಿ, ಎಲ್ಲೂ ಸಹ ಜಗಳವು ನಡೆದಿಲ್ಲ ಎಂದು ಅಭಿಪ್ರಾಯ ಪಟ್ಟರು.

    RAMANAVAMI

    ಇದು ಉತ್ತರಪ್ರದೇಶದ ಹೊಸ ಅಭಿವೃದ್ಧಿ ಅಜೆಂಡಾದ ಸಂಕೇತವಾಗಿದೆ. ಇನ್ನೂ ಮುಂದೆ ಗಲಭೆಗಳು ಕಾನೂನು ಬಾಹಿರತೆ ಅಥವಾ ಗುಂಡಾಗಿರಿಗೆ ಜಾಗವಿಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು

    ಗುಜರಾತ್, ಮಧ್ಯಪ್ರದೇಶ, ಜಾರ್ಖಡ್ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಭಾನುವಾರ ರಾಮನವಮಿ ಆಚರಣೆಯ ವೇಳೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ಗಳಿಗೆ ಹಂಚಲು ಕೇಂದ್ರ ಸಂಚು: ಕೆಸಿಆರ್