Tag: rama

  • ರಾಮನ ಹೆಸರು ಕೆಡಿಸಬೇಡಿ: ಪರೋಕ್ಷವಾಗಿ ಆದಿಪುರುಷ ತಂಡಕ್ಕೆ ತಿವಿದ ಕಂಗನಾ

    ರಾಮನ ಹೆಸರು ಕೆಡಿಸಬೇಡಿ: ಪರೋಕ್ಷವಾಗಿ ಆದಿಪುರುಷ ತಂಡಕ್ಕೆ ತಿವಿದ ಕಂಗನಾ

    ಪ್ರಭಾಸ್ (Prabhas) ನಟನೆಯ ಆದಿಪುರುಷ ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾದ ಮೇಕಿಂಗ್ ಮತ್ತು ಕಂಟೆಂಟ್ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ರಾಮಾಯಣವನ್ನು ಈ ಸಿನಿಮಾದಲ್ಲಿ ತಿರುಚಲಾಗಿದೆ ಎನ್ನುವ ಆರೋಪವೂ ಕೇಳಿ ಬಂದಿದೆ. ಹೀಗಾಗಿ ಪರೋಕ್ಷವಾಗಿ ಆದಿಪುರುಷ ಸಿನಿಮಾ ತಂಡಕ್ಕೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಪಾಠ ಮಾಡಿದ್ದಾರೆ. ರಾಮನ (Rama) ಹೆಸರನ್ನು ದಯವಿಟ್ಟು ಕೆಡಿಸಬೇಡಿ ಎಂದು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

    ನಿನ್ನೆಯಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿರುವ ಆದಿಪುರುಷ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದೆಹಲಿ (Delhi) ಹೈಕೋರ್ಟಿಗೆ (High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ ಹಿಂದೂಪರ ಸಂಘಟನೆಗಳು. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಯಾಗುವಂತಹ ಸಾಕಷ್ಟು ಅಂಶಗಳು ಇವೆ. ಹಾಗಾಗಿ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ಸಂಘಟನೆಗಳು ಮನವಿ ಮಾಡಿಕೊಂಡಿವೆ. ಇದನ್ನೂ ಓದಿ:ಸೀತೆ ಭಾರತದ ಮಗಳಲ್ಲ: ‘ಆದಿಪುರುಷ’ ಸಿನಿಮಾ ಡೈಲಾಗ್ ವಿರುದ್ಧ ಕಠ್ಮಂಡು ಮೇಯರ್ ಗರಂ

    ರಾಮಾಯಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿದ್ದಾರೆ. ಅದು ಹಿಂದೂಗಳಿಗೆ ಮತ್ತು ಹಿಂದೂ (Hindu) ದೇವರುಗಳಿಗೆ ಮಾಡಿರುವ ಅಪಮಾನ. ಈ ಹಿಂದೆಯೇ ಅನೇಕ ಅಂಶಗಳನ್ನು ಚಿತ್ರತಂಡದ ಗಮನಕ್ಕೆ ತರಲಾಗಿತ್ತು. ಎಲ್ಲವನ್ನೂ ಬದಲಾವಣೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಯಾವುದೇ ಬದಲಾವಣೆಯನ್ನು ಮಾಡದೇ ಹಳೆ ಸಿನಿಮಾವನ್ನೇ ಬಿಡುಗಡೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

    ನೇಪಾಳದಲ್ಲಿ ಸಿನಿಮಾ ಬ್ಯಾನ್ ?

    ಪ್ರಭಾಸ್ (Prabhas) ನಟನೆಯ ಆದಿಪುರುಷ (Adipurusha) ಸಿನಿಮಾ ಎಲ್ಲ ಕಡೆ ತುಂಬಿದ ಪ್ರದರ್ಶನ ಕಾಣುತ್ತಿದ್ದರೆ ನೇಪಾಳದಲ್ಲಿ ಅದು ಬಿಡುಗಡೆಯಾಗಿಲ್ಲ. ಚಿತ್ರದ ಒಂದು ಡೈಲಾಗ್ ಬಗ್ಗೆ ಕಠ್ಮಂಡು (Kathmandu)  ಮೇಯರ್ ಗರಂ ಆಗಿದ್ದು, ವಿವಾದಿತ  ಆ ಡೈಲಾಗ್ ತಗೆಯದಿದ್ದರೆ ಸಿನಿಮಾವನ್ನು ಬ್ಯಾನ್ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಮೂರು ದಿನ ಗಡುವು ಕೂಡ ನೀಡಿದ್ದಾರೆ.

    ಆದಿಪುರುಷ ಸಿನಿಮಾ ಮೊದಲಿನಿಂದಲೂ ವಿವಾದಕ್ಕೀಡು ಆಗುತ್ತಲೇ ಇದೆ. ಸಿನಿಮಾದ ಗ್ರಾಫಿಕ್ಸ್, ರಾವಣನ ಪಾತ್ರ, ತಿರುಪತಿಯಲ್ಲಿ ನಟಿಗೆ ಮುತ್ತಿಟ್ಟ ನಿರ್ದೇಶಕ ಹೀಗೆ ನಾನಾ ಕಾರಣಗಳಿಂದ ಸಿನಿಮಾ ಸುದ್ದಿಯಾಗುತ್ತಿದೆ. ಈ ಬಾರಿ ಡೈಲಾಗ್ ವೊಂದು ಹಲವು ಜನರ ಭಾವನೆಗೆ ಸಂಚಕಾರ ತಂದಿದೆಯಂತೆ.

    ಈ ಸಿನಿಮಾದಲ್ಲಿ ‘ಸೀತಾ ಭಾರತದ ಮಗಳು..’ ಎಂದು ಡೈಲಾಗ್ ಹೇಳಿಸಲಾಗಿದೆ. ಈ ಮಾತಿಗೆ ಕಠ್ಮುಂಡು ಮೇಯರ್ (Mayor) ಆಕ್ಷೇಪನೆಯನ್ನು ಎತ್ತಿದ್ದಾರೆ. ರಾಮಾಯಣದ ಪ್ರಕಾರ ಸೀತೆಯು ನೇಪಾಳದ ಜಾನಕ್ ಪುರದಲ್ಲಿ ಜನಿಸಿದ್ದಾರೆ. ಇಲ್ಲಿಗೆ ಶ್ರೀರಾಮ ಬಂದು ಸೀತೆಯನ್ನು ಮದುವೆ ಆಗಿರುವ ಉಲ್ಲೇಖ ಕೂಡ ಇದೆ. ಆದರೆ, ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಮತ್ತು ಸುಳ್ಳು ಹೇಳಲಾಗಿದೆ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

     

    ಈಗಾಗಲೇ ನೇಪಾಳದಲ್ಲಿ ಈ ಸಿನಿಮಾದ ಸೆನ್ಸಾರ್ ಅನ್ನು ತಡೆಹಿಡಿಯಲಾಗಿದೆ. ಆದರೆ, ಉಳಿದ ಕಡೆ ಸಿನಿಮಾ ಪ್ರದರ್ಶನವಾಗುತ್ತಿದೆ. ಎಲ್ಲೆಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆಯೋ ಅಲ್ಲಲ್ಲಿ, ಈ ಡೈಲಾಗ್ ತಗೆಯಲೇಬೇಕು ಎಂದು ಮೇಯರ್ ಒತ್ತಾಯಿಸಿದ್ದಾರೆ. ಸಿನಿಮಾವನ್ನು ನೇಪಾಳದಲ್ಲಿ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

  • ಮಧ್ಯಾಹ್ನ ಆದ್ರೆ ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ ರಾಮ- ಮತ್ತೆ ನಾಲಿಗೆ ಹರಿಬಿಟ್ಟ ಭಗವಾನ್

    ಮಧ್ಯಾಹ್ನ ಆದ್ರೆ ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ ರಾಮ- ಮತ್ತೆ ನಾಲಿಗೆ ಹರಿಬಿಟ್ಟ ಭಗವಾನ್

    ಮಂಡ್ಯ: ಚಿಂತಕ ಪ್ರೊ. ಕೆ.ಎಸ್.ಭಗವಾನ್ (Prof KS Bhagwan) ಇದೀಗ ಮತ್ತೆ ಆದರ್ಶ ಪುರುಷ ರಾಮನ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ.

    ಮಂಡ್ಯ (Mandya) ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದ ಪುಸ್ತಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಮ ರಾಜ್ಯ ಎಂದು ದೇಶದಲ್ಲಿ ಕಥೆ ಕಟ್ಟಿದ್ದಾರೆ. ರಾಮ ರಾಜ್ಯ ಮಾತು ಹರಡಲು ಮಹಾತ್ಮ ಗಾಂಧೀಜಿ (Mahatma Gandhiji) ಅವರೇ ಕಾರಣ. ವಾಲ್ಮೀಕಿ ರಾಮಾಯಣ (Valmiki Ramayana) ಓದಿ ಉತ್ತರ ಕಾಂಡದಲ್ಲಿ ಓದಿದ್ರೆ ರಾಮ ರಾಜ್ಯಕ್ಕೆ ಅರ್ಥ ಇಲ್ಲ. ವಾಲ್ಮೀಕಿ ರಾಮಾಯಣದ ಪ್ರಕಾರ ರಾಜ್ಯ ರಾಜ್ಯಭಾರ ಮಾಡಿಲ್ಲ ಎಂದು ಹೇಳಿದ್ದಾರೆ.

    ಪುರೋಹಿತರ ಜೊತೆ ಕೂತು ಆ ಕಥೆ ಈ ಕಥೆ ಎಂದು ರಾಮ ಹರಟೆ ಹೊಡೆಯುತ್ತಿದ್ದ. ಮಧ್ಯಾಹ್ನ ಆದ್ರೆ ಸೀತೆ ಕೂರಿಸಿಕೊಂಡು ರಾಮ ಹೆಂಡ ಕುಡಿಯುತ್ತಿದ್ದ. ಸೀತೆಗೂ ರಾಮ ಹೆಂಡ ಕುಡಿಸುತ್ತಿದ್ದ. ವಾಲ್ಮೀಕಿ ರಾಮಾಯಣ ಉತ್ತರ ಕಾಂಡದಲ್ಲಿ ಇದರ ಬಗ್ಗೆ ದಾಖಲೆ ಇವೆ. ರಾಮ ರಾಜ್ಯಭಾರ ಮಾಡಿದ್ದು 11 ವರ್ಷ. ಇದರಲ್ಲಿ ಗರ್ಭಿಣಿ ಸೀತೆಯನ್ನು ಕಾಡಿಗೆ ಕಳಿಸಿದ. ಸೀತೆಗೆ ಮಾತನಾಡಲು ರಾಮ ಬಿಡಲಿಲ್ಲ. ಲಕ್ಷ್ಮಣನನ್ನು ರಾಮ ಗಡಿಪಾರು ಮಾಡಿದ ಎಂದರು. ಇದನ್ನೂ ಓದಿ: ಸಿದ್ದು ಸೋಲಿಸಲು ಅಖಾಡಕ್ಕಿಳಿದ ಬಿಎಲ್‌ ಸಂತೋಷ್‌

    ಸರಯೂ ನದಿಯ ದಡಲ್ಲಿ ಅತ್ತುಕೊಂಡು ಲಕ್ಷ್ಮಣ ಸತ್ತು ಹೋದ. ಶೂದ್ರನ ತಲೆಯನ್ನು ರಾಮ ಕಡಿದಿದ್ದಾನೆ. ರಾಮನನ್ನು ಆದರ್ಶ ದೊರೆ ಎಂದು ಕರೆಯಲು ಹೇಗೆ ಸಾಧ್ಯ. ನಮ್ಮ ಜನರಿಗೆ ಸತ್ಯ ಗೊತ್ತಿಲ್ಲದೆ ಮಕ್ಕಳಿಗೆ ರಾಮ ಎಂದು ಹೆಸರಿಟ್ಟಿದ್ದಾರೆ. ಹೆಣ್ಣು ಮಕ್ಕಳು ರಾಮ ರಾಮ ಅಂತಾರೆ, ರಾಮ ತನ್ನ ಹೆಂಡತಿಯನ್ನು ಕಾಡಿಗೆ ಕಳಿಸಿದವ ಎಂದು ಭಗವಾನ್ ಹೇಳಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಮನಿಗೂ ಅಶ್ವಥ್ ನಾರಾಯಣಗೂ ಏನು ಸಂಬಂಧ, ತುಂಬಾ ಮಾತನಾಡುವುದು ಬೇಡ: HDD ವಾರ್ನಿಂಗ್‌

    ರಾಮನಿಗೂ ಅಶ್ವಥ್ ನಾರಾಯಣಗೂ ಏನು ಸಂಬಂಧ, ತುಂಬಾ ಮಾತನಾಡುವುದು ಬೇಡ: HDD ವಾರ್ನಿಂಗ್‌

    ರಾಯಚೂರು: ರಾಮನಿಗೂ (Rama) ಸಚಿವ ಅಶ್ವಥ್ ನಾರಾಯಣಗೂ (Dr. Ashwathnarayan) ಏನು ಸಂಬಂಧ, ಅಶ್ವಥ್ ನಾರಾಯಣ ತುಂಬಾ ಮಾತನಾಡುವುದು ಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D Devegowda) ಕಿಡಿಕಾರಿದ್ದಾರೆ.

    ರಾಯಚೂರಿನ ಮಾನ್ವಿಯಲ್ಲಿ ಶಾಸಕ ವೆಂಕಟಪ್ಪ ನಾಯಕ್ ಸಹೋದರನ ಮದುವೆ, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡ್ತೀವಿ ಅನ್ನೋ ವಿಚಾರದ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು, ಅಶ್ವಥ್ ನಾರಾಯಣ ಬಗ್ಗೆ ಅವರ ವಿಚಾರಗಳ ಬಗ್ಗೆ ವಿಧಾನಸೌಧದಲ್ಲಿ ಸಾಕಷ್ಟು ಚರ್ಚೆ ಆಗಿವೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

    ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡಬೇಕು ಅನ್ನೋ ವಿಚಾರವಾಗಿ ಮಾತನಾಡಿ, ಜನ ಈ ಬಗ್ಗೆ ತಿರ್ಮಾನ ಮಾಡ್ತಾರೆ. ಅವನಿಗೆ B ಫಾರ್ಮ್ ಕೊಡುವವನು ನಾನು. ಮಂಡ್ಯದಲ್ಲಿ ಸ್ಪರ್ಧೆ ಮಾಡ್ತಾನೆ, ಕನಕಪುರ ಅದೆಲ್ಲಾ ಊಹಾಪೋಹಗಳು. ಜನ ಪ್ರೀತಿಯಿಂದ ಹೇಳುತ್ತಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣನ ಮಂದಿರವಾದರೂ ಕಟ್ಟಲಿ ನಾವೇನೂ ಸಿಟ್ಟಾಗಲ್ಲ: ಡಿಕೆಶಿ

    ಚುನಾವಣೆ ಮುಂದೆ ಇಟ್ಟುಕೊಂಡೆ ಈ ವಯಸ್ಸಿನಲ್ಲಿ ಓಡಾಡುತ್ತಿದ್ದೇನೆ. ಇಲ್ಲಿವರೆಗೆ ಏನೇನು ಕಾರ್ಯಕ್ರಮಗಳನ್ನು ಮಾಡಿದ್ದೇವೆ ಎಂದು ಸಾರ್ವಜನಿಕವಾಗಿ ಹೇಳಬೇಕಿದೆ. ಹಾಗಾಗಿ ಪಂಚರತ್ನ ಕಾರ್ಯಕ್ರಮ ಮಾಡಿದ್ದೇವೆ. ನಮ್ಮ ಯೋಜನೆಗಳನ್ನು ಜನರ ಮುಂದೆ ಇಟ್ಟಿದ್ದೀವಿ. ಕುಮಾರಸ್ವಾಮಿಗೆ ತುಮಕೂರು ಜಿಲ್ಲೆಯಲ್ಲಿ ಕಾರ್ಯಕ್ರಮ ಇದೆ. ನನಗೆ ಮಾನ್ವಿ ತಾಲೂಕಿಗೆ ಹೋಗಬೇಕು. ಇಲ್ಲಿಗೆ ಬರಲೇ ಬೇಕು ಅಂತ ಬಂದಿದ್ದೇನೆ. ನಿಖಿಲ್ ಬರಬೇಕಿತ್ತು, ಬೇರೆ ಕಾರಣದಿಂದ ಬರಲು ಆಗಲಿಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಫಾರೂಕ್ ಅಬ್ದುಲ್ಲಾ

    ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಯಾವುದೇ ಧರ್ಮವು ಕೆಟ್ಟದ್ದಲ್ಲ. ಭಗವಾನ್ ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ಇದ್ದಾನೆ. ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಎಚ್ಚರಿಕೆ ವಹಿಸಿ. ನಮ್ಮ ದೇಶವನ್ನು ಬಲಿಷ್ಠಗೊಳಿಸಬೇಕಾದರೆ, ನಾವು ಒಟ್ಟಾಗಿ ನಿಲ್ಲಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಹೇಳಿದ್ದಾರೆ.

    ಚುನಾವಣೆ ರ್‍ಯಾಲಿಯೊಂದರಲ್ಲಿ ಸಾರ್ವಜನಿಕರನ್ನುದ್ದೇಶಿ ಮಾತನಾಡಿದ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ನಿಮ್ಮ ಬಳಿ ಬಂದು ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಾರೆ. ಭಾರತದಲ್ಲಿ ಶೇ.70 ರಿಂದ 80 ರಷ್ಟು ಹಿಂದೂ ಜನಸಂಖ್ಯೆ ಇದೆ. ಅವರು ಅಪಾಯದಲ್ಲಿದ್ದಾರೆ ಎಂದು ನೀವು ಭಾವಿಸುತ್ತೀರಾ ಎಂದು ಪ್ರಶ್ನಿಸಿದರು.

    ಯಾವುದೇ ಧರ್ಮ ಕೆಟ್ಟದ್ದಲ್ಲ. ಆದರೆ ಮನುಷ್ಯರು ಭ್ರಷ್ಟರಾಗಿದ್ದಾರೆ, ಧರ್ಮವಲ್ಲ. ಚುನಾವಣೆಯ ಸಮಯದಲ್ಲಿ ‘ಹಿಂದೂ ಖತ್ರೇ ಮೈ ಹೈ’ ಅನ್ನು ಹೆಚ್ಚು ಬಳಸುತ್ತಾರೆ. ಆದರೆ ಅದಕ್ಕೆ ಬಲಿಯಾಗಬೇಡಿ ಎಂದು ನಾನು ನಿಮ್ಮನ್ನು ವಿನಂತಿಸುತ್ತೇನೆ ಎಂದು ಮನವಿಮಾಡಿದ್ದಾರೆ. ಇದನ್ನೂ ಓದಿ: ಬೇರೆಲ್ಲೋ ಸ್ಫೋಟವಾಗಬೇಕಿದ್ದ ಕುಕ್ಕರ್ ಬಾಂಬ್ ಹಂಪ್ಸ್ ಕಾರಣದಿಂದ ಆಟೋದಲ್ಲೇ ಬ್ಲಾಸ್ಟ್!

    ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಶಾಲಾ ಮಕ್ಕಳನ್ನು “ರಘುಪತಿ ರಾಘವ್ ರಾಜಾ ರಾಮ್” ಎಂಬ ಹಿಂದೂ ಶ್ಲೋಕವನ್ನು ಹಾಡುವಂತೆ ಮಾಡಲಾಗಿದ್ದು, ಈ ಮೂಲಕ ಬಿಜೆಪಿ ಶಾಲೆಗಳಲ್ಲಿ ತನ್ನ ಹಿಂದುತ್ವದ ಅಜೆಂಡಾವನ್ನು ಪ್ರಚಾರ ಮಾಡುತ್ತಿದೆ ಎಂಬ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಹೇಳಿಕೆಯನ್ನು ಅಬ್ದುಲ್ಲಾ ತಿರಸ್ಕರಿಸಿದ್ದಾರೆ. ಇದನ್ನೂ ಓದಿ: ತುಂಗಾ ನದಿಯಲ್ಲಿ ಸ್ಫೋಟ ಮಾಡಿ ಪರಾರಿಯಾದವನು ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

    ಸೆಪ್ಟೆಂಬರ್ 13 ರಂದು ಶಾಲೆಗಳಲ್ಲಿ ಸರ್ವ ದೇವರನ್ನು ಪ್ರಾರ್ಥನೆ ಮಾಡುವ ಸಲುವಾಗಿ ರಘುಪತಿ ರಾಘವ್ ರಾಜ ರಾಮ್. ಈಶ್ವರ ಅಲ್ಲಾ ತೇರೋ ನಾಮ್” ಅನ್ನು ಪಠಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿತು. ಹಿಂದೂಗಳು ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡಿದರೆ, ಪುರುಷನೇ ಆಗಲಿ ಅಥವಾ ಮಹಿಳೆಯೇ ಆಗಲಿ ಮುಸ್ಲಿಂ ಆಗಿ ಪರಿವರ್ತನೆ ಹೊಂದುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

    ಇದೇ ವೇಳೆ “ನ್ಯಾಶನಲ್ ಕಾನ್ಫರೆನ್ಸ್ ಎಂದಿಗೂ ಪಾಕಿಸ್ತಾನದ ಪರವಾಗಿರಲಿಲ್ಲ. ಯಾವಾಗಲೂ ಭಾರತದೊಂದಿಗೆ ಗಟ್ಟಿಯಾಗಿ ನಿಂತಿದೆ. ನಾವು ಎಂದಿಗೂ ಪಾಕಿಸ್ತಾನದೊಂದಿಗೆ ಕೈಜೋಡಿಸಲಿಲ್ಲ. ಜಿನ್ನಾ ಅವರು ನನ್ನ ತಂದೆಯನ್ನು ಭೇಟಿಯಾಗಲು ಬಂದಿದ್ದರು, ಆದರೆ ನಾವು ಅವರೊಂದಿಗೆ ಕೈಜೋಡಿಸಲು ನಿರಾಕರಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಮನಿಗಿಂತ ರಾವಣ ಜ್ಞಾನಿ – ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ: ರಾಜನಾಥ್ ಸಿಂಗ್

    ರಾಮನಿಗಿಂತ ರಾವಣ ಜ್ಞಾನಿ – ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ: ರಾಜನಾಥ್ ಸಿಂಗ್

    ಉಡುಪಿ: ವಿದ್ಯಾರ್ಥಿಗಳಲ್ಲಿ (Students) ಜ್ಞಾನದ ಜೊತೆ ಬುದ್ಧಿವಂತಿಕೆಯೂ ಅಗತ್ಯ. ರಾಮನಿಗಿಂತ (Rama) ರಾವಣ (Ravana) ಜ್ಞಾನಿಯಾಗಿದ್ದ. ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ. ಸಂಸ್ಕೃತಿ ಮತ್ತು ಸಂಪ್ರದಾಯ ಇಲ್ಲದ ನಾಗರಿಕ ಜೀವನಕ್ಕೆ ಅರ್ಥ ಇಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಮಣಿಪಾಲ (Manipal) ವಿವಿಯ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು.

    ನೀವು ಜ್ಞಾನವಂತರಾದರೆ ಸಾಲದು. ನಿಮ್ಮಲ್ಲಿ ಸಂಸ್ಕೃತಿ ಜೊತೆ ಬುದ್ಧಿವಂತಿಕೆ ಇರಬೇಕು ಎಂದು ರಾಜಕೀಯ ಜೀವನ ಆರಂಭಕ್ಕೂ ಮೊದಲು ಉತ್ತರಪ್ರದೇಶದಲ್ಲಿ ಉಪನ್ಯಾಸಕ ವೃತ್ತಿ ಮಾಡಿದ್ದ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನು ಹೇಳಿದರು. ಇದನ್ನೂ ಓದಿ: ಆ ಕಾಲ ಹೋಯ್ತು.. ಭಾರತದ ತಂಟೆಗೆ ಬಂದ್ರೆ ಮುಖಮೂತಿ ನೋಡಲ್ಲ – ರಾಜನಾಥ್ ಸಿಂಗ್ ಎಚ್ಚರಿಕೆ

    ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಹಲವಾರು ವರ್ಷಗಳಿಂದ ಸಾಧನೆ ಮಾಡಿಕೊಂಡು ಬಂದಿದೆ. ಈ ಬಗೆಗಿನ ನಮ್ಮ ಅಭಿಮಾನವನ್ನು ಕೆಲವರು ಹೆಚ್ಚುಗಾರಿಕೆ ಎಂದು ಟೀಕಿಸುತ್ತಾರೆ. ಇತಿಹಾಸವನ್ನು ತಿಳಿದುಕೊಳ್ಳದ ವ್ಯಕ್ತಿಗಳು ಇಂತಹ ಟೀಕೆಗಳನ್ನು ಮಾಡುತ್ತಾರೆ. ಭಾರತೀಯರು ಕೊಟ್ಟ ಶೂನ್ಯ ಇರದ ಗಣಿತವನ್ನು ಊಹಿಸಲು ಸಾಧ್ಯವಿಲ್ಲ. ಪೈಥಾಗೊರಸ್‌ನ ಪ್ರಮೇಯವನ್ನು ಬೋಧಾಯನ ಋಷಿ 300 ವರ್ಷಗಳ ಹಿಂದೆಯೇ ಹೇಳಿದ್ದರು. ಭಾರತದ ಆರ್ಥಿಕ ಸದೃಢತೆ ಗುಣಮಟ್ಟದ ಮಾನವ ಸಂಪನ್ಮೂಲಗಳಲ್ಲಿ ಇದೆ ಎಂದರು. ಇದನ್ನೂ ಓದಿ: ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ – ಹಿಂದೂಗಳ 5 ದಶಕಗಳ ಹೋರಾಟಕ್ಕೆ ಜಯ ಎಂದ ಸಿಟಿ ರವಿ

    Live Tv
    [brid partner=56869869 player=32851 video=960834 autoplay=true]

  • ನಟ ನರೇಶ್ ಆತ್ಮೀಯರಾಗಿದ್ದು ದುಡ್ಡಿನ ಕಾರಣಕ್ಕೆ ಅಲ್ಲ, ನಾನು ದುಡ್ಡಿನ ಹಿಂದೆ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

    ನಟ ನರೇಶ್ ಆತ್ಮೀಯರಾಗಿದ್ದು ದುಡ್ಡಿನ ಕಾರಣಕ್ಕೆ ಅಲ್ಲ, ನಾನು ದುಡ್ಡಿನ ಹಿಂದೆ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

    ವಿತ್ರಾ ಲೋಕೇಶ್ ಅವರು ತೆಲುಗು ನಟ ನರೇಶ್ ಹಿಂದೆ ಹೋಗಿದ್ದು ಕೇವಲ ದುಡ್ಡಿಗಾಗಿ ಎನ್ನುವ ಆಡಿಯೋವೊಂದು ಸಖತ್ ವೈರಲ್ ಆಗಿದೆ. ಈ ಮಾತುಗಳನ್ನು ಪವಿತ್ರಾ ಲೋಕೇಶ್ ಜೊತೆ 11 ವರ್ಷಗಳ ಕಾಲ ಬದುಕು ನಡೆಸಿರುವ ಸುಚೇಂದ್ರ ಪ್ರಸಾದ್ ಅವರೇ ಆಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಪಬ್ಲಿಕ್ ಟಿವಿ ನಟಿ ಪವಿತ್ರಾ ಲೋಕೇಶ್ ಅವರನ್ನು ಪ್ರಶ್ನಿಸಿದಾಗ, ಆ ಪ್ರಶ್ನೆಗೂ ಅವರು ತಮ್ಮದೇ ಆದ ರೀತಿಯಲ್ಲಿ ಉತ್ತರಿಸಿದ್ದಾರೆ. ಇದನ್ನೂ ಓದಿ : Exclusive- ನಟ ನರೇಶ್ ಜೊತೆ ಪವಿತ್ರಾ ಲೋಕೇಶ್ ಮದುವೆ ಆಗಿದ್ದಾರಾ? : ಇವತ್ತು ಇಲ್ಲ, ನಾಳೆ ಗೊತ್ತಿಲ್ಲ ಎಂದ ನಟಿ

    ಸುಚೇಂದ್ರ ಪ್ರಸಾದ್ ಅವರು ಏನು ಮಾತನಾಡಿದ್ದಾರೆ ಅಂತ ನನಗಂತೂ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಎನ್ನಲಾದ ಆಡಿಯೋದಲ್ಲಿ ನಾನು ದುಡ್ಡಿಗಾಗಿ ನರೇಶ್ ಅವರ ಜೊತೆ ಹೋಗಿದ್ದೇನೆ ಅಂತ ಅವರು ಹೇಳಿದ್ದರೆ, ನಾನು ಸುಚೇಂದ್ರ ಪ್ರಸಾದ್ ಅವರನ್ನು ಒಪ್ಪಿ ಹೋದಾಗ ಅವರ ಬಳಿ ಏನಿತ್ತು ಎನ್ನುವುದನ್ನು ಯೋಚಿಸಲಿ ಎಂದಿದ್ದಾರೆ ಪವಿತ್ರಾ ಲೋಕೇಶ್.

    ಸುಚೇಂದ್ರ ಪ್ರಸಾದ್ ಅವರನ್ನು ಇಷ್ಟಪಟ್ಟು, ಅವರೊಂದಿಗೆ ಬದುಕಬೇಕು ಎಂದು ಹೋದಾಗ ಸುಚೇಂದ್ರ ಪ್ರಸಾದ್ ಬಳಿ ಏನೂ ಇರಲಿಲ್ಲ. ನಾನು ದುಡ್ಡಿನ ಹಿಂದೆ ಹೋದವಳು ಅಂತಾಗಿದ್ದಾರೆ, ನಾನು ಅವರೊಂದಿಗೆ ಹನ್ನೊಂದು ವರ್ಷ ಬದುಕುತ್ತಲೂ ಇರಲಿಲ್ಲ. ಸುಚೇಂದ್ರ ಪ್ರಸಾದ್ ತುಂಬಾ ಒಳ್ಳೆಯ ವ್ಯಕ್ತಿ. ತುಂಬಾ ಓದಿಕೊಂಡಿದ್ದಾರೆ. ಶಾಂತ ಸ್ವಭಾವದ ಮನುಷ್ಯ ಅನ್ನುವ ಕಾರಣಕ್ಕಾಗಿ ನಾನು ಅವರೊಂದಿಗೆ ಇದ್ದೆ. ಅದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ ಪವಿತ್ರಾ ಲೋಕೇಶ್.

    Live Tv

  • ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜೊತೆ ಇದ್ದ ಹುಡುಗ ಇವರೇ ನೋಡಿ : ರಟ್ಟಾಯ್ತು ಗುಟ್ಟು

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜೊತೆ ಇದ್ದ ಹುಡುಗ ಇವರೇ ನೋಡಿ : ರಟ್ಟಾಯ್ತು ಗುಟ್ಟು

    ಮೊನ್ನೆಯಷ್ಟೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಹುಡುಗನೊಬ್ಬನ ಜೊತೆಗಿನ ಫೋಟೋ ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ಹುಡುಗ ಮತ್ತು ಅವರು ತುಂಬಾ ಆತ್ಮೀಯರಾಗಿದ್ದ ಕಾರಣಕ್ಕಾಗಿ ಫೋಟೋ ಸುತ್ತ ನಾನಾ ರೀತಿಯ ಗಾಸಿಪ್ ಗಳು ಎದ್ದಿದ್ದವು. ಆ ಹುಡುಗನು ರಮ್ಯಾ ಅವರ ಸ್ನೇಹಿತನಾ? ಹೊಸ ಪ್ರೇಮಿಯಾ? ಸಂಬಂಧಿಕನಾ? ಹೀಗೆ ನಾನಾ ರೀತಿಯ ಚರ್ಚೆಗಳು ನಡೆದಿದ್ದವು. ಇದನ್ನೂ ಓದಿ : ಮಗುವಿಗಾಗಿ ಪ್ಲ್ಯಾನ್ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್

    ಆ ಹುಡುಗನ ಜೊತೆಗಿರುವ ರಮ್ಯಾ ಅವರು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಈ ಹುಡುಗ ಯಾರು ಎನ್ನುವುದನ್ನು ಸ್ವತಃ ರಮ್ಯಾ ಅವರೇ ಹೇಳಬೇಕು. ಈ ಗುಟ್ಟು ರಟ್ಟು ಮಾಡಬೇಕು ಎಂದೆಲ್ಲ ಅಭಿಮಾನಿಗಳು ಕೇಳಿದ್ದರು. ಆದರೂ, ರಮ್ಯಾ ಮೂರ್ನಾಲ್ಕು ದಿನದಿಂದ ಸುಮ್ಮನೆ ಇದ್ದರು. ಆ ಹುಡುಗ ಯಾರು? ಯಾಕಾಗಿ ಆ ಫೋಟೋ ತಗೆಸಿಕೊಳ್ಳಲಾಗಿದೆ ಎನ್ನುವ ಗುಟ್ಟು ಹಾಗೆಯೇ ಇತ್ತು. ಕೊನೆಗೂ ರಮ್ಯಾ ಇಂದು ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಕೆಲವರು ಆ ಹುಡುಗನ ಸಿಕ್ರೇಟ್ ಬಯಲು ಮಾಡಲು ಬೆನ್ನು ಹತ್ತಿದ ವಿಷಯ ತಿಳಿಯುತ್ತಿದ್ದಂತೆಯೇ ಆ ಹುಡುಗನ ಹೆಸರು, ಅವನು ಯಾರು ಎನ್ನುವುದನ್ನು ಬಹಿರಂಗ ಪಡಿಸಿದ್ದಾರೆ. ಸಣ್ಣದೊಂದು ಫೋಟೋ ಇಷ್ಟು ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದಕ್ಕೆ ಅವರು ಸೊಟ್ಟಗೆ ನಕ್ಕಿದ್ದಾರೆ. ಜೊತೆಗೆ ಆ ಹುಡುಗನ ವಿಷಯವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

    ಹುಡುಗನ ಕುರಿತು ಟ್ವಿಟ್ ಮಾಡಿರುವ ರಮ್ಯಾ ‘ಆ ಹುಡುಗನ ಹೆಸರು ವಿಹಾನ್. ನನ್ನ ಸ್ಟೈಲೀಶ್ ಹುಡುಗ. ಆ ಹುಡುಗನ ಕುರಿತಾದ ನಿಮ್ಮ ಕುತೂಹಲವನ್ನು ಪ್ರೀತಿಸುತ್ತೇನೆ’ ಎಂದು ಕೂಲ್ ಆಗಿ ಉತ್ತರ ಕೊಟ್ಟು, ಅಚ್ಚರಿ ಮೂಡಿಸಿದ್ದಾರೆ.

  • Exclusive- ರೈತಪರ ಚಿಂತಕ ಪ್ರೊ.ನಂಜುಂಡಸ್ವಾಮಿ ಬಯೋಪಿಕ್ : ಸುದೀಪ್, ಧನಂಜಯ್, ನಾನಾ ಪಾಟೇಕರ್ ಯಾರಾಗ್ತಾರೆ ಹೀರೋ?

    Exclusive- ರೈತಪರ ಚಿಂತಕ ಪ್ರೊ.ನಂಜುಂಡಸ್ವಾಮಿ ಬಯೋಪಿಕ್ : ಸುದೀಪ್, ಧನಂಜಯ್, ನಾನಾ ಪಾಟೇಕರ್ ಯಾರಾಗ್ತಾರೆ ಹೀರೋ?

    ರ್ನಾಟಕದ ಸಮಾಜವಾದಿ ಚಳವಳಿಯ ರೂವಾರಿ ಪ್ರೊಫೆಸರ್ ಎಂ.ಡಿ.ನಂಜುಂಡಸ್ವಾಮಿ ಅವರ ಬಯೋಪಿಕ್ ರೆಡಿಯಾಗುತ್ತಿದೆ. ಐದಾರು ವರ್ಷಗಳಿಂದ ಹಲವು ಹಂತಗಳಲ್ಲಿ ಸಿನಿಮಾ ಮಾಡಲು ತಯಾರಿ ನಡೆಸಿದ್ದು, ಸದ್ಯ ಸ್ಕ್ರಿಪ್ಟ್ ರೆಡಿಯಾಗಿದೆ. ಮುಂದಿನ ಹಂತಕ್ಕಾಗಿ ಹಲವು ಕಸರತ್ತುಗಳನ್ನು ಮಾಡುತ್ತಿದ್ದಾರೆ ನಂಜುಂಡಸ್ವಾಮಿ ಅವರ ಪುತ್ರ ಪಚ್ಚೆ ನಂಜುಂಡಸ್ವಾಮಿ.

    ಜೀವನವಿಡೀ ಸ್ವದೇಶಿ ಪ್ರಚಾರ ಮಾಡಿದ ಅಪರೂಪದ ಹೋರಾಟಗಾರ ನಂಜುಂಡಸ್ವಾಮಿ. ಜರ್ಮನಿಯಲ್ಲಿ ಕಾನೂನು ವಿಷಯದಲ್ಲಿ ಉನ್ನತ ಶಿಕ್ಷಣ ಪಡೆದು, ಸಮಾಜವಾದಿ ಯುವಜನ ಸಭಾ ಹುಟ್ಟು ಹಾಕಿ ನಿರಂತರ ಹೋರಾಟ ಮಾಡುತ್ತಾ ಬಂದವರು. ಪ್ರಖರ ವಿಚಾರ ಲಹರಿ, ಅದ್ಭುತ ಕನ್ನಡ ಭಾಷಾ ಬಳಕೆ, ಖಚಿತ ಅಂಕಿ ಅಂಶಗಳಿಂದ ಕೂಡಿದ ಭಾಷಣ, ನ್ಯಾಯಾಂಗದ ಬಗ್ಗೆ ಇದ್ದ ತಿಳುವಳಿಕೆ, ಜ್ಯಾತಿ ವ್ಯವಸ್ಥೆಯ ಬಗೆಗಿನ ಆಕ್ರೋಶದ ಒಟ್ಟು ಮೊತ್ತ ಆಗಿದ್ದವರು ನಂಜುಂಡಸ್ವಾಮಿ. ಜ್ಯಾತ್ಯಾತೀಯ ರಾಷ್ಟ್ರದಲ್ಲಿ ಜಾತಿ ಸಮ್ಮೇಳನ ಆಗಬಾರದೆಂದು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಕಪ್ಪು ಬಾವುಟ ಪ್ರದರ್ಶನ, ವಂಶಪಾರಂಪರ್ಯವಾಗಿ ಆಡಳಿತ ನಡೆಸುವುದರ ವಿರುದ್ಧ ಪ್ರತಿಭಟನೆ, ಕಾರ್ಮಿಕರಿಗೆ ಕಾನೂನುಬದ್ಧ ವೇತನ ಕೊಡದಿದ್ದರೆ ಪ್ರತಿಭಟನೆ, ರೈತರಿಗೆ ಅನ್ಯಾಯವಾದಾಗೆಲ್ಲ ನಂಜುಂಡಸ್ವಾಮಿ ಅವರು ಇದ್ದೇ ಇರುತ್ತಿದ್ದರು. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ರೈತರಿಗೆ ದೋಖಾ ಮಾಡುತ್ತಿದ್ದ ಹಲವು ಖಾಸಗಿ ಕಂಪೆನಿಗಳ ವಿರುದ್ಧ ಹೋರಾಟ, ಸರಕಾರಗಳ ಕ್ರಮದ ವಿರುದ್ಧ ಹೋರಾಟ ಹೀಗೆ ಹಠಾತ್ ದಾಳಿಗಳನ್ನು ಮಾಡುತ್ತಲೇ ಬೆಚ್ಚಿ ಬೀಳಿಸುತ್ತಿದ್ದರು ನಂಜುಂಡಸ್ವಾಮಿ. ಅದರಲ್ಲೂ ರೈತರಿಗೆ ಬ್ಯಾಂಕ್ ಗಳು ನೀಡುವ ಕಿರುಕುಳಕ್ಕೆ ನಿರಂತರವಾಗಿ ಪ್ರತಿಭಟನೆ ಇದ್ದೇ ಇರುತ್ತಿತ್ತು. ರೈತ ಸಂಘವೆಂದರೆ ನಂಜುಂಡಸ್ವಾಮಿ, ನಂಜುಂಡ ಸ್ವಾಮಿ ಅಂದರೆ ರೈತ ಸಂಘ ಎನ್ನುವಷ್ಟರ ಮಟ್ಟಿಗೆ ಅವರು ರೈತರೊಂದಿಗೆ ಬೆರೆತು ಹೋಗಿದ್ದರು.

    ಇಂತಹ ಹೋರಾಟಗಾರರ ಬಯೋಪಿಕ್ ಸಿನಿಮಾವಾಗಬೇಕು ಎನ್ನುವುದು ಹಲವರ ಆಶಯವಾಗಿತ್ತು. ಅದಕ್ಕೆ ಮೊದಲು ನೀರೆರೆದದ್ದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ. ಹಲವು ವರ್ಷಗಳ ಹಿಂದಿಯೇ ಪ್ರೊಫೆಸರ್ ಕುಟುಂಬವನ್ನು ಮಂಸೋರೆ ಸಂಪರ್ಕಿಸಿದರು. ಆದರೆ, ನಾನಾ ಕಾರಣಗಳಿಂದಾಗಿ ಅದು ಆಗಲಿಲ್ಲ. ಈ ಹಿಂದೆ ಖ್ಯಾತ ಬರಹಗಾರ ನಟರಾಜ್ ಹುಳಿಯಾರ್  ಅವರು ನಂಜುಂಡ ಸ್ವಾಮಿ ಅವರು ಕುರಿತಾದ ನಾಟಕ ಮತ್ತು ಚಿತ್ರಕಥೆ ರೆಡಿ ಮಾಡಿದರು. ಸಿನಿಮಾಗೆ ಮತ್ತೊಂದು ವೇಗ ಸಿಕ್ಕಿತು. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ನಂಜುಂಡಸ್ವಾಮಿ ಅವರ ಪಾತ್ರವನ್ನು ಡಾ.ವಿಷ್ಣುವರ್ಧನ್ ಮಾಡಬೇಕು ಎನ್ನುವುದು ಹಲವರ ಆಸೆಯಾಗಿತ್ತು. ಯಾಕೆಂದರೆ ನಾಗತಿಹಳ್ಳಿ ಚಂದ್ರಶೇಖರ್ ಅವರು ತಮ್ಮ ಮಾತಾಡ್ ಮಾತಾಡ್ ಮಲ್ಲಿಗೆ ಸಿನಿಮಾದಲ್ಲಿ ಹೂವಯ್ಯನ ಪಾತ್ರ ಹೆಣೆದಿದ್ದರಲ್ಲ, ಅದು ಪ್ರೊಫೆಸರ್ ನಂಜುಂಡಸ್ವಾಮಿ ಅವರ ಬದುಕನ್ನೇ ಆಧರಿಸಿತ್ತು. ಆದರೆ, ಡಾ.ವಿಷ್ಣುವರ್ಧನ್ ಕಾಲವಾದರು.

    ಕೆಲ ವರ್ಷಗಳ ಹಿಂದೆ ನಿರ್ದೇಶಕ ಕೇಸರಿ ಹರವು ಕೂಡ ಈ ಸಿನಿಮಾದ ಬಗ್ಗೆ ಆಸಕ್ತಿ ತಗೆದುಕೊಂಡು ನಂಜುಂಡಸ್ವಾಮಿ ಅವರ ಪಾತ್ರವನ್ನು ನಾನಾ ಪಾಟೇಕರ್ ಮಾಡಿದರೆ ಸರಿಯಾಗಿರುತ್ತದೆ ಎಂದು ಅವರನ್ನು ಅಪ್ರೋಚ್ ಮಾಡಿದ್ದರು. ನಾನಾ ಕೂಡ ಪ್ರೊಫೆಸರ್ ಅವರ ಹೋರಾಟದ ವಿಡಿಯೋಗಳನ್ನು ಗಮನಿಸಿದ್ದರು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಅಲ್ಲದೇ, ಡಾಲಿ ಧನಂಜಯ್ ಅವರಿಗೂ ಈ ಸ್ಕ್ರಿಪ್ಟ್ ಕಳುಹಿಸಲಾಗಿತ್ತು. ಈ ಇಬ್ಬರೂ ಕಲಾವಿದರ ಮಧ್ಯೆ ಇದೀಗ ಮತ್ತೊಂದು ಯೋಜನೆ ಸಿದ್ಧವಾಗುತ್ತಿದೆ. ನಂಜುಂಡಸ್ವಾಮಿ ಅವರ ಪಾತ್ರವನ್ನು ಸುದೀಪ್ ಅವರು ಮಾಡಲಿ ಎನ್ನುವುದು ಪ್ರೊಫೆಸರ್ ಕೆಲ ಅಭಿಮಾನಿಗಳ ಬೇಡಿಕೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ನಂಜುಂಡಸ್ವಾಮಿ ಅವರ ಪತ್ನಿಯ ಪಾತ್ರದಲ್ಲಿ ರಮ್ಯಾ ಇರಲಿ ಎಂದೂ ಯೋಚಿಸಲಾಗಿದೆಯಂತೆ. ಈ ಇಬ್ಬರೂ ಕಲಾವಿದರನ್ನು ಭೇಟಿ ಮಾಡುವ ಆಲೋಚನೆ ಕೂಡ ಇದೆ. ಆದರೆ, ಇನ್ನೂ ಅವರಿಗೆ ಈ ವಿಷಯವನ್ನು ತಲುಪಿಸಿಲ್ಲ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿ. ಇದನ್ನೂ ಓದಿ: ಜಾನ್ವಿ ಕಪೂರ್ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ: ಶ್ರೀದೇವಿಗೆ ಹೋಲಿಸಿದ ಅಭಿಮಾನಿಗಳು

    ‘ರೈತರು, ಕಾರ್ಮಿಕರು ಮತ್ತು ನಿರ್ಗತಿಕರ ಬದುಕಿಗೆ ನಂಜುಂಡ ಸ್ವಾಮಿ ಅವರು ದೊಡ್ಡ ಶಕ್ತಿಯಾಗಿದ್ದರು. ಅವರ ಸಿನಿಮಾ ಬರಬೇಕು ಎನ್ನುವುದು ನಮ್ಮ ಕುಟುಂಬದ ಆಸೆ. ಹಾಗಾಗಿ ಹಲವರು ಹಲವು ಕಲಾವಿದರನ್ನು ಭೇಟಿ ಮಾಡಿ ಮಾತನಾಡುತ್ತಿದ್ದಾರೆ. ಅಂತಿಮವಾಗಿ ಯಾರು ಆಯ್ಕೆ ಆಗುತ್ತಾರೋ? ಯಾವಾ ಸಿನಿಮಾ ಆಗುತ್ತದೆಯೋ ಕಾದು ನೋಡಬೇಕು’ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿ.

  • ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು

    ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು

    ಉಕ್ರೇನ್‌ನ ಖಾರ್ಕೀವ್ ನೆಲದಲ್ಲಿ ನಡೆದ ಶೆಲ್ ದಾಳಿಯ ವೇಳೆ ಕರ್ನಾಟಕದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ನವೀನ್ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ. ಈ ಕುರಿತು ನಟಿ, ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ನಿಮ್ಮನ್ನು ಕಳೆದುಕೊಂಡಿರುವ ತಂದೆ ತಾಯಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಅದ್ಧೂರಿ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಲಾಂಚ್

    ನಟ ನೀನಾಸಂ ಸತೀಶ್ ಕೂಡ ನವೀನ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಎದೆಯುದ್ದ ಬೆಳೆದ ಮಕ್ಕಳನ್ನು ತಂದೆ ತಾಯಿಗಳು ಕಳೆದುಕೊಂಡಾಗಿನ ದುಃಖ ಯಾರಿಗೂ ಬರಬಾರದು. ನವೀನ್ ವೈದ್ಯನಾಗಿ ಅದೆಷ್ಟೋ ಜೀವ ಉಳಿಸುತ್ತಿದ್ದ, ಇದೀಗ ಯುದ್ಧದಾಹಿಗಳ ದಾಹಕ್ಕೆ ಬಲಿಯಾಗಿದ್ದಾರೆ. ಅವರ ಕುಟುಂಬಕ್ಕೆ ನೋವು ತಡೆದುಕೊಳ್ಳುವ ಶಕ್ತಿ ಬರಲಿ ಎಂದಿದ್ದಾರೆ.  ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ನಟ, ನಿರ್ಮಾಪಕ ಮತ್ತು ಕೃಷಿ ಮಂತ್ರಿಯೂ ಆಗಿರುವ ಬಿ.ಸಿ.ಪಾಟೀಲ್ ಕೂಡ  ಮೃತ ನವೀನ್ ಗಾಗಿ ಕಂಬನಿ ಮಿಡಿದಿದ್ದಾರೆ. “ನವೀನ್ ಜ್ಞಾನಗೌಡರ್ ಮೃತಪಟ್ಟ ಸುದ್ದಿ ಅತೀವ ದುಃಖ ತಂದಿದೆ. ಅವರು ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ದಯಪಾಲಿಸಲಿ” ಎಂದು ಟ್ವಿಟ್ ಮಾಡಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ನಿರ್ದೇಶಕರು, ನಟರು ಮತ್ತು ತಂತ್ರಜ್ಞರು ಕೂಡ ಕನ್ನಡಿಗ ಸಾವಿಗೆ ಕಂಬನಿ ಮಿಡಿದಿದ್ದಾರೆ.

  • ರಾಮಸ್ವಾಮಿ ಸಿಕ್ಕಾಯಿತು, ರಮ್ಯಾ ಸಿಗಬೇಕಿದೆ

    ರಾಮಸ್ವಾಮಿ ಸಿಕ್ಕಾಯಿತು, ರಮ್ಯಾ ಸಿಗಬೇಕಿದೆ

    ಚಿ.ಗುರುದತ್ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ರಮ್ಯಾ ರಾಮಸ್ವಾಮಿ’ ಸಿನಿಮಾದ ಕೆಲವು ಅಪ್‍ಡೇಟ್ ಹೊರ ಬಿದ್ದಿದೆ. ಈಗಾಗಲೇ ರಾಮಸ್ವಾಮಿಯ ಆಯ್ಕೆಯಾಗಿದ್ದು, ರಮ್ಯಾ ಪಾತ್ರಧಾರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಕನ್ನಡ ಸಿನಿಮಾ ರಂಗದ ಎವರ್‍ಗ್ರೀನ್ ರಾಮಾಚಾರಿ ಆಗಿರುವ ರವಿಚಂದ್ರನ್ ಅವರು ರಾಮಸ್ವಾಮಿಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಕನ್ನಡದ ಹೆಸರಾಂತ ನಟಿಯೇ ರಮ್ಯಾ ಪಾತ್ರವನ್ನು ಮಾಡಲಿದ್ದಾರಂತೆ. ಆ ಸ್ಟಾರ್ ನಟಿ ಯಾರು ಅನ್ನುವ ಹುಡುಕಾಟ ಸದ್ಯಕ್ಕೆ ನಡೆದಿದೆ. ಇದನ್ನೂ ಓದಿ : ಜಗತ್ತಿನ ಅತ್ಯಂತ ದುಬಾರಿ ನಟನಿಗೆ ಗಾಳ ಹಾಕಿದ ರಾಜಮೌಳಿ

    ನಿರ್ದೇಶಕ ಚಿ.ಗುರುದತ್ ಮತ್ತು ರವಿಚಂದ್ರನ್ ನಲವತ್ತು ವರ್ಷಗಳ ಸ್ನೇಹಿತರು. ಈ ಸ್ನೇಹವೇ ಇಂದು ಸಿನಿಮಾ ಮಾಡಲು ಪ್ರೇರೇಪಿಸಿದೆ. ಜನಾರ್ದನ್ ಮಹರ್ಷಿ ಅವರು ಈ ಸಿನಿಮಾಗಾಗಿ ಕಥೆ ಬರೆದಿದ್ದು, ಭಾವನಾತ್ಮಕ ಅಂಶಗಳ ಜತೆಗೆ ನಗಿಸುತ್ತಲೇ ಈ ಸಿನಿಮಾ ಸಾಗಲಿದೆ ಎಂದಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

    ರಾಮಸ್ವಾಮಿ ಪಾತ್ರದಷ್ಟೇ ರಮ್ಯಾ ಪಾತ್ರಕ್ಕೂ ಮಹತ್ವವಿದೆಯಂತೆ. ಈ ಎರಡೇ ಪಾತ್ರಗಳ ಸುತ್ತ ಇಡೀ ಸಿನಿಮಾ ಹೆಣೆಯಲಾಗಿದೆಯಂತೆ. ಹಾಗಾಗಿ ಸ್ಟಾರ್ ನಟಿಯೇ ಈ ಪಾತ್ರಕ್ಕೆ ಸೂಕ್ತ ಎನ್ನುವುದು ನಿರ್ದೇಶಕರು ಮಾತು. ಈಗಾಗಲೇ ಇಬ್ಬರು ನಾಯಕಿಯರ ಜತೆ ಮಾತುಕತೆ ಕೂಡ ನಡೆದಿದೆ ಎನ್ನಲಾಗುತ್ತಿದೆ. ನಾಯಕಿಯ ಆಯ್ಕೆ ಮಾಡಿಕೊಂಡೇ ಚಿತ್ರೀಕರಣಕ್ಕೆ ಹೋಗಲಿದೆ ಚಿತ್ರತಂಡ. ಮೈತ್ರಿ ಸೇರಿದಂತೆ ಸಾಕಷ್ಟು ಚಿತ್ರಗಳಿಗೆ ಬಂಡವಾಳ ಹೂಡಿರುವ ಎನ್.ಎಸ್.ರಾಜಕುಮಾರ್ ಈ ಸಿನಿಮಾದ ನಿರ್ಮಾಪಕರು. ಏಪ್ರಿಲ್ ನಿಂದ ಶೂಟಿಂಗ್ ಶುರುವಾಗಲಿದೆ.