Tag: Ramachandra rao

  • ನಟಿ ರನ್ಯಾ ಕೇಸ್: ಸತತ 3 ಗಂಟೆ ವಿಚಾರಣೆ ಎದುರಿಸಿದ ರಾಮಚಂದ್ರ ರಾವ್

    ನಟಿ ರನ್ಯಾ ಕೇಸ್: ಸತತ 3 ಗಂಟೆ ವಿಚಾರಣೆ ಎದುರಿಸಿದ ರಾಮಚಂದ್ರ ರಾವ್

    ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ವಿಚಾರಣೆ ಎದುರಿಸಿದ್ದಾರೆ.

    ಪ್ರೋಟೋಕಾಲ್ ದುರ್ಬಳಕೆ ಕುರಿತು ತನಿಖೆ ಕೈಗೊಂಡಿರುವ ಗೌರವ್ ಗುಪ್ತ ತಂಡವು ರಾಮಚಂದ್ರ ರಾವ್ ಅವರನ್ನು ಇಂದು ಶಕ್ತಿ ಭವನದಲ್ಲಿ ವಿಚಾರಣೆಗೊಳಪಡಿಸಿತು. ವಿಚಾರಣೆ ವೇಳೆ ಐಪಿಎಸ್ ಅಧಿಕಾರಿಯ ಹೇಳಿಕೆಗಳನ್ನು ತನಿಖಾ ತಂಡ ದಾಖಲಿಸಿಕೊಂಡಿದೆ.

    ಈಗಾಗಲೇ 10 ಕ್ಕೂ ಹೆಚ್ಚು ಜನರ ವಿಚಾರಣೆಯನ್ನು ತಂಡ ನಡೆಸಿದೆ. ಇಂದು ರಾಮಚಂದ್ರ ರಾವ್ ಹೇಳಿಕೆ ದಾಖಲಿಸಿಕೊಂಡಿದೆ. ರನ್ಯಾರಾವ್‌ಗೆ ಪ್ರೋಟೋಕಾಲ್ ನೀಡಿದ್ದರ ಬಗ್ಗೆ ಹೇಳಿಕೆ ದಾಖಲು ಮಾಡಿದೆ.

    ಸಂಜೆ ಆರು ಗಂಟೆಗೆ ವಿಚಾರಣೆಗೆ ರಾಮಚಂದ್ರ ರಾವ್ ಅವರು ವಿಚಾರಣೆಗೆ ಹಾಜರಾಗಿದ್ದರು. ಸತತ ಮೂರು ಗಂಟೆ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.

    ಐಎಎಸ್ ಅಧಿಕಾರಿ ಗೌರವ್ ಗುಪ್ತ, ಡಿಐಜಿ ವಂಶಿ ಕೃಷ್ಣ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ. ಪ್ರಕರಣ ಸಂಬಂಧ ಬುಧವಾರ ತನಿಖಾ ವರದಿಯನ್ನು ಸಲ್ಲಿಸಬೇಕಿದೆ.

  • ಡಿಜಿಪಿ ರಾಮಚಂದ್ರ ರಾವ್‌ಗೆ ಮತ್ತೊಂದು ಸಂಕಷ್ಟ – 2014 ರ ಇಲವಾಲ ಪೊಲೀಸ್ ದರೋಡೆ ಕೇಸ್ ಮತ್ತೆ ಮುನ್ನೆಲೆಗೆ

    ಡಿಜಿಪಿ ರಾಮಚಂದ್ರ ರಾವ್‌ಗೆ ಮತ್ತೊಂದು ಸಂಕಷ್ಟ – 2014 ರ ಇಲವಾಲ ಪೊಲೀಸ್ ದರೋಡೆ ಕೇಸ್ ಮತ್ತೆ ಮುನ್ನೆಲೆಗೆ

    – ಮಲಮಗಳು ರನ್ಯಾ ರಾವ್ ಕೇಸಲ್ಲಿ ಸಂಕಷ್ಟದಲ್ಲಿರೋ ಪೊಲೀಸ್ ಅಧಿಕಾರಿ
    – ಏನಿದು 11 ವರ್ಷಗಳ ಹಿಂದಿನ ಕೇಸ್?

    ಮೈಸೂರು: ನಟಿ ರನ್ಯಾ ರಾವ್ (Ranya Rao) ಪ್ರಕರಣದ ಜೊತೆಗೆ ಈಗ ಡಿಜಿಪಿ ಕೆ.ರಾಮಚಂದ್ರ ರಾವ್ (Ramachandra Rro) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಮಚಂದ್ರ ರಾವ್ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್ ದರೋಡೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

    ಚಿನ್ನ ಕಳ್ಳಸಾಗಣೆಯಲ್ಲಿ ಬಂಧನಕ್ಕೊಳಗಾಗಿರುವ ಮಲಮಗಳು ನಟಿ ರನ್ಯಾ ರಾವ್‌ರಿಂದ ರಾಮಚಂದ್ರ ರಾವ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಹಳೇ ಪ್ರಕರಣವೊಂದರಲ್ಲಿ ಅಧಿಕಾರಿಗೆ ಮತ್ತೊಂದು ತಲೆನೋವು ಎದುರಾಗಿದೆ. ಪ್ರಕರಣ ನಡೆದು 11 ವರ್ಷಗಳಾಗಿದ್ದು, ಮತ್ತೆ ಕೇಸ್ ಬಗ್ಗೆ ಚರ್ಚೆಗೆ ಬಂದಿದೆ. ಪ್ರಕರಣಕ್ಕೆ ಮರುಜೀವ ಕೊಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಸಿಬಿಐಗೆ 9 ಪುಟಗಳ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್

    ಏನಿದು ಪ್ರಕರಣ?
    2.27 ಕೋಟಿ ಹಣ ಹಾಗೂ ಎರಡು ಕೆಜಿ ಚಿನ್ನ ದರೋಡೆ ಮಾಡಿದ್ದ ಬಗ್ಗೆ ಪೊಲೀಸರ ವಿರುದ್ಧವೇ ದೂರು ದಾಖಲಾಗಿತ್ತು. ಈ ಬಗ್ಗೆ ಸಿಐಡಿ ತನಿಖೆ ಕೂಡ ನಡೆದಿತ್ತು. ಐಜಿಪಿ ರಾಮಚಂದ್ರ ರಾವ್ ಗನ್‌ಮ್ಯಾನ್ ಹಾಗೂ ಸೌತ್ ಪೊಲೀಸ್ ಠಾಣೆ ಸಿಬ್ಬಂದಿ ಸೇರಿ ಡಿವೈಎಸ್‌ಪಿ ಸ್ಕ್ವಾಡ್ ಮೇಲೆ ದರೋಡೆ ಆರೋಪ ಬಂದಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆದು ಎಲ್ಲರೂ ಆರೋಪ ಮುಕ್ತರಾಗಿದ್ರು. ಆದರೆ, ಈವರೆಗೂ ಗೋಲ್ಡ್ ಸ್ಮಗ್ಲಿಂಗ್ ಹಾಗೂ ಹವಾಲ ಹಣದ ಮೂಲದ ಬಗ್ಗೆ ಸಿಐಡಿ ಪೊಲೀಸರು ಯಾವುದೇ ತನಿಖೆ ಮಾಡಿರಲಿಲ್ಲ. ಸದ್ಯ ಮತ್ತೆ ಪ್ರಕರಣಕ್ಕೆ ಮರುಜೀವ ಕೊಡಬೇಕೆಂದು ದೂರುದಾರ ಸ್ನೇಹಮಯಿಕೃಷ್ಣ ಕೃಷ್ಣ, ಸಿಬಿಐಗೆ ಪತ್ರ ಬರೆದಿದ್ದಾರೆ.

    ಅಂದು ಚಿನ್ನ ಕಳ್ಳಸಾಗಣೆ ಮಾಡಿದ ವ್ಯಕ್ತಿಗಳ ವಿರುದ್ಧ ಹಾಗೂ ಪ್ರಕರಣ ಮುಚ್ಚಿ ಹಾಕಿದ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ದೂರಿದ್ದಾರೆ. ಅಂದಿನ ಸಿಐಡಿ ಡಿಜಿಪಿ ಕಿಶೋರ್ ಚಂದ್ರ, ಅಂದಿನ ಸಿಐಡಿ ಐಜಿಪಿ ಪ್ರಣವೌ ಮೊಹಂತಿ, ಎಸ್‌ಪಿ ಕೃಷ್ಣ ಭಟ್, ಡಿವೈಎಸ್‌ಪಿ ರಾಘವೇಂದ್ರ ಹೆಗ್ಡೆ, ಅಂದಿನ ಮೈಸೂರು ಎಸ್‌ಪಿ ಅಭಿನವ ಖರೆ, ಡಿವೈಎಸ್‌ಪಿ ವಿಕ್‌ಂ ಆಮ್ಟೆ ಹಾಗೂ ಇಲವಾಲ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಗಣೇಶ್ ಸೇರಿ ಹಲವರ ವಿರುದ್ಧ ಸಿಬಿಐಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ನನ್ನ ಕಪಾಳಕ್ಕೆ 10-15 ಬಾರಿ ಹೊಡೆದಿದ್ದಾರೆ – ನಾನು ಅಮಾಯಕಿ ಎಂದ ರನ್ಯಾ

    ದೂರಿನ ಜೊತೆಗೆ ವೀಡಿಯೋ ಸಾಕ್ಷಿಗಳು ಹಾಗೂ ಇತರ ದಾಖಲೆಗಳನ್ನು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದಾರೆ. ನಟಿ ರನ್ಯಾ ರಾವ್ ಪ್ರಕರಣದ ಜೊತೆಗೆ ಇದನ್ನು ಸೇರಿಸಿಕೊಂಡು ತನಿಖೆ ಮಾಡಬೇಕು. ಸಾಧ್ಯವಾಗದಿದ್ದರೆ ಪ್ರತ್ಯೇಕ ಪ್ರಕರಣವಾಗಿ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. 2014 ರಿಂದಲೇ ಈ ರೀತಿ ಚಿನ್ನ ಕಳ್ಳಸಾಗಣೆ ನಡೆದುಕೊಂಡು ಬರುತ್ತಿದೆ. ಪೊಲೀಸರು ಸರಿಯಾಗಿ ತನಿಖೆ ಮಾಡಿ, ಆರೋಪಿಗಳನ್ನು ಪತ್ತೆ ಹಚ್ಚಿದ್ದರೆ ಇಂತಹ ಪ್ರಕರಣ ಮರುಕಳಿಸುವುದನ್ನು ತಡೆಯಬಹುದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ಐಪಿಎಸ್ ಸೂಚನೆಯಂತೆ ರನ್ಯಾಗೆ ಗ್ರೀನ್‌ಚಾನಲ್ – ಡಿಆರ್‌ಐ ಮುಂದೆ ಶಿಷ್ಟಾಚಾರ ಅಧಿಕಾರಿ ಹೇಳಿಕೆ

    ಐಪಿಎಸ್ ಸೂಚನೆಯಂತೆ ರನ್ಯಾಗೆ ಗ್ರೀನ್‌ಚಾನಲ್ – ಡಿಆರ್‌ಐ ಮುಂದೆ ಶಿಷ್ಟಾಚಾರ ಅಧಿಕಾರಿ ಹೇಳಿಕೆ

    ಬೆಂಗಳೂರು: ರನ್ಯಾ ರಾವ್‌ಗೆ (Ranya Rao) ಪ್ರೋಟೋಕಾಲ್ ನೀಡುವಂತೆ ರಾಮಚಂದ್ರ ರಾವ್ (Ramachandra Rao) ಸೂಚನೆ ನೀಡಿದ್ದರು ಎಂದು ಶಿಷ್ಟಾಚಾರ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

    ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ತನಿಖೆಯಲ್ಲಿ ಹೊಸ ಹೊಸ ವಿಚಾರಗಳು ಬಯಲಾಗುತ್ತಿದೆ.

    ಡಿಜಿಪಿ ರಾಮಚಂದ್ರರಾವ್ ರನ್ಯಾ ರಾವ್‌ಗೆ ಪ್ರೋಟೋಕಾಲ್ ನೀಡುವಂತೆ ಹೇಳಿದ್ದರು. ವಿಮಾನ ನಿಲ್ದಾಣದಲ್ಲಿ (Air Port) ಗ್ರೀನ್‌ಚಾನಲ್ ವ್ಯವಸ್ಥೆ ಮಾಡಲು ಸೂಚಿಸಿದ್ದರು ಎಂದು ಪ್ರೋಟೋಕಾಲ್‌ ಆಫೀಸರ್‌ ಹೇಳಿರುವುದಾಗಿ ಮೂಲಗಳಿಂದ ಪಬ್ಲಿಕ್‌ ಟಿವಿಗೆ ಸಿಕ್ಕಿದೆ. ಇದನ್ನೂ ಓದಿ: 6 ಅಡಿ ಎತ್ತರದ ವ್ಯಕ್ತಿಯೊಬ್ಬ ಚಿನ್ನವಿದ್ದ ಎರಡು ಬಾಕ್ಸ್ ನೀಡಿದ್ದ: ರನ್ಯಾ ತಪ್ಪೊಪ್ಪಿಗೆ

     

    ರಾಮಚಂದ್ರರಾವ್ ಸೂಚನೆಯಂತೆ ಪ್ರತಿಬಾರಿ ರನ್ಯಾರಾವ್‌ಗೆ ಪ್ರೋಟೋಕಾಲ್ ವ್ಯವಸ್ಥೆ ಮಾಡಲಾಗುತ್ತಿತ್ತು. ಮಾರ್ಚ್ 03ರಂದು ರನ್ಯಾರಾವ್ ನನಗೆ ಕರೆ ಮಾಡಿ ದುಬೈನಿಂದ ಸಂಜೆ 6:30ಕ್ಕೆ ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ತಿಳಿಸಿದ್ದರು. ಆಕೆ ಬೆಂಗಳೂರಿಗೆ ಬಂದಾಗ ನಾನು ಗ್ರೀನ್‌ಚಾನೆಲ್ ವ್ಯವಸ್ಥೆ ಮಾಡಿದ್ದೆ. ರನ್ಯಾರಾವ್ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವಿಚಾರ ನನಗೆ ಗೊತ್ತಿರಲಿಲ್ಲ.

    ಶಿಷ್ಟಾಚಾರ ದುರ್ಬಳಕೆ ಪ್ರಕರಣ ಈಗ ರನ್ಯಾ ಮಲತಂದೆ ಬುಡಕ್ಕೆ ಬರುವಂತೆ ಕಾಣುತ್ತಿದೆ. ಹೀಗಾಗಿ ಐಪಿಎಸ್ ರಾಮಚಂದ್ರ ರಾವ್ ಅವರನ್ನು ಸುದೀರ್ಘ ಅವಧಿಗೆ ಕಡ್ಡಾಯ ರಜೆ ಮೇಲೆ ಕಳಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.

    ಈ ಮಧ್ಯೆ ಶಿಷ್ಟಾಚಾರ ದುರ್ಬಳಕೆ ಆರೋಪ ಪ್ರಕರಣದಲ್ಲಿ ರಾಮಚಂದ್ರರಾವ್ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ಎಸಿಎಸ್ ಗೌರವ್ ಗುಪ್ತಾಗೆ ನೆರವಾಗಲು ಸಿಐಡಿ ಡಿಐಜಿ ವಂಶಿಕೃಷ್ಣರನ್ನು ಸರ್ಕಾರ ನೇಮಕ ಮಾಡಿದೆ.

  • ಜಯಮಾಲಾ ಮಗಳ ಮದುವೆಯಲ್ಲಿ ಮಿಂಚಿದ್ದ ಆರೋಪಿ ರನ್ಯಾ ರಾವ್

    ಜಯಮಾಲಾ ಮಗಳ ಮದುವೆಯಲ್ಲಿ ಮಿಂಚಿದ್ದ ಆರೋಪಿ ರನ್ಯಾ ರಾವ್

    ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿ ನಟಿ ರನ್ಯಾ ರಾವ್ (Ranya Rao) ತಮ್ಮ ಸಹೋದರನ ಮದುವೆಯಲ್ಲಿ ಮಿಂಚಿದ್ದ ದೃಶ್ಯಗಳು `ಪಬ್ಲಿಕ್ ಟಿವಿ’ಗೆ ಲಭ್ಯವಾಗಿವೆ.

    ಹೌದು, ಇತ್ತೀಚಿಗಷ್ಟೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ನಟಿ ರನ್ಯಾ ರಾವ್‌ನ್ನು ಬಂಧಿಸಿ, 12 ಕೋಟಿ ಮೌಲ್ಯದ 14.8 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ:ರನ್ಯಾ ಭೇಟಿಗೆ ಅವಕಾಶ ನೀಡ್ತಿರಲಿಲ್ಲ, ಅಂತರ ಬೆಳೆದಿತ್ತು – ಕೇಸ್‌ನಿಂದ ಕುಟುಂಬಕ್ಕೆ ಕಳಂಕ: ರಾಮಚಂದ್ರ ರಾವ್

    ರನ್ಯಾ ರಾವ್ ಬಂಧನದ ಬಳಿಕ ಆಕೆಯ ಮಲತಂದೆ ಕೆ.ರಾಮಚಂದ್ರರಾವ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾನು ನನ್ನ ಮಗಳು ದೂರ ಆಗಿ 4 ತಿಂಗಳು ಕಳೆದಿದೆ. 2025ರಲ್ಲಿ ರನ್ಯಾ, ಜತಿನ್ ವಿವಾಹವಾಗಿತ್ತು. ಅವಳ ಸಂಸಾರದ ವಿಚಾರಕ್ಕೆ ನಾನು ಹೋಗೋದಿಲ್ಲ. ಮದುವೆಯಾದ ಬಳಿಕ ಅವರಿಬ್ಬರು ಸಂಪೂರ್ಣ ಸ್ವಾತಂತ್ರ್ಯ, ಗೌಪ್ಯತೆಯನ್ನು ಕಾಪಾಡಿಕೊಂಡಿದ್ದರು. ಜೊತೆಗೆ ನಮ್ಮ ಮನೆಗೆ ಭೇಟಿ ನೀಡುವುದನ್ನು ನಿಲ್ಲಿಸಿದ್ದರು. ಇತ್ತೀಚಿಗೆ ನನ್ನ ಮಗಳು ತುಂಬಾ ದಿನದಿಂದ ಕಾಂಟಾಕ್ಟ್ ಇಲ್ಲ ಎಂದು ಹೇಳಿದ್ದರು. ಈ ರೀತಿ ಬರೆದು ಪತ್ರಿಕಾ ಪ್ರಕಟಣೆಯ ಮೂಲಕ ಪ್ರತಿಕ್ರಿಯಿಸಿದ್ದರು.

    ಫೆಬ್ರವರಿಯಲ್ಲಿ ನಡೆದಿದ್ದ ಸೌಂದರ್ಯ ಜಯಮಾಲಾ ಹಾಗೂ ರುಷಬ್ ಮದುವೆಯಲ್ಲಿ ನಟಿ ರನ್ಯಾ ಮಿಂಚಿದ್ದರು. ಸಹೋದರನ ಮದುವೆಯಲ್ಲಿ ಆಕೆಯ ತಾಯಿ ರೋಹಿಣಿ ಜೊತೆ ಕಳಸ ಹಿಡಿದುಕೊಂಡು ಓಡಾಡಿದ್ದರು. ತಿಂಗಳ ಹಿಂದೆಯಷ್ಟೇ ತಮ್ಮ ಕುಟುಂಬದವರೊಂದಿಗೆ ರನ್ಯಾ ಖುಷಿಯಾಗಿದ್ದರು. ಆದರೆ ರಾಮಚಂದ್ರರಾವ್ ನನ್ನ ಮಗಳು ದೂರವಾಗಿ 4 ತಿಂಗಳು ಕಳೆದಿವೆ ಎಂದು ಹೇಳಿದ್ದರು. ಸದ್ಯ ರಾಮಚಂದ್ರರಾವ್ ಅವರು ರನ್ಯಾ ರಾವ್ ಬಗ್ಗೆ ಸುಳ್ಳು ಹೇಳಿದ್ದಾರಾ? ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

    ಪ್ರಕರಣ ಏನು?
    ಮೂಲತಃ ಚಿಕ್ಕಮಗಳೂರಿನವರಾದ ಎಡಿಜಿಪಿ ರಾಮ್‌ಚಂದ್ರರಾವ್ ಅವರ 2ನೇ ಪತ್ನಿಯ ಮೊದಲ ಗಂಡನ ಮಗಳು ರನ್ಯಾ ರಾವ್. ಮಾ.04 ರಂದು ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ನಟಿ ರನ್ಯಾ ರಾವ್‌ನ್ನು ಬಂಧಿಸಿ, 12 ಕೋಟಿ ಮೌಲ್ಯದ 14.8 ಕೆಜಿ ಚಿನ್ನ ವಶಕ್ಕೆ ಪಡೆದಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಆರ್ಥಿಕ ಅಪರಾಧಗಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ನಟಿಗೆ 14.2 ಕೆಜಿ ಚಿನ್ನ ದುಬೈನಲ್ಲಿ ಸಿಕ್ಕಿದ್ದು ಹೇಗೆ? – ರನ್ಯಾಗೆ DRIಯಿಂದ ಡ್ರಿಲ್‌

     

  • ಎಡಿಜಿಪಿ ರಾಮಚಂದ್ರರಾವ್ ಕಾರಿಗೆ ಲಾರಿ ಡಿಕ್ಕಿ- ತಪ್ಪಿದ ಭಾರೀ ಅನಾಹುತ

    ಎಡಿಜಿಪಿ ರಾಮಚಂದ್ರರಾವ್ ಕಾರಿಗೆ ಲಾರಿ ಡಿಕ್ಕಿ- ತಪ್ಪಿದ ಭಾರೀ ಅನಾಹುತ

    ಚಿತ್ರದುರ್ಗ: ಹೆಚ್ಚವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ರಾಮಚಂದ್ರರಾವ್ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಚಿತ್ರದುರ್ಗ ತಾಲೂಕಿನ ಕೊಳಾಳ್ ಬಳಿ ನಡೆದಿದೆ.

    ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿದ್ದು ಚಾಲಕ ಪಾರಾಗಿದ್ದಾನೆ. ಜೊತೆಗೆ ಕಾರಿನಲ್ಲಿದ್ದ ಎಡಿಜಿಪಿ ರಾಮಚಂದ್ರರಾವ್ ಪ್ರಾಣಾಪಾಯದಿಂದ ಪಾರಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

    ರಾಮಚಂದ್ರರಾವ್ ಅವರು ಕೆಎ 01 ಜಿ-6311 ನಂಬರ್‌ನ ಇನೋವಾ ಕಾರಿನಲ್ಲಿ ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದರು. ಚಿತ್ರದುರ್ಗ ತಾಲೂಕಿನ ಕೊಳಾಳ್ ಬಳಿ ವೇಗವಾಗಿ ಬಂದ ಕೆಎ 08 ಎ 1398 ನಂಬರ್‌ನ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಲಾರಿ ಪಲ್ಟಿ ಹೊಡೆದು ರಸ್ತೆ ಪಕ್ಕದಲ್ಲಿ ಬಿದ್ದಿದೆ. ತಕ್ಷಣವೇ ಚಾಲಕ ಲಾರಿಯಿಂದ ಜಿಗಿದು ಪಾರಾಗಿದ್ದಾನೆ.

    ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.