Tag: Ramada resort

  • ಬಿಜೆಪಿಯ 16 ದಿನಗಳ ರೆಸಾರ್ಟ್ ವಾಸ್ತವ್ಯ ಅಂತ್ಯ

    ಬಿಜೆಪಿಯ 16 ದಿನಗಳ ರೆಸಾರ್ಟ್ ವಾಸ್ತವ್ಯ ಅಂತ್ಯ

    ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಎಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಕೊಡುತ್ತಿದ್ದಂತೆಯೇ ರಾತ್ರೋ ರಾತ್ರಿ ರಮಡಾ ರೆಸಾರ್ಟಿನಿಂದ ಬಿಜೆಪಿ ಶಾಸಕರು ತೆರಳಿದ್ದಾರೆ.

    ಈ ಮೂಲಕ 16 ದಿನಗಳಿಂದ ಶಾಸಕರಿಂದ ತುಂಬಿ ತುಳುಕುತ್ತಿದ್ದ ರಮಡಾ ರೆಸಾರ್ಟ್ ಇದೀಗ ಖಾಲಿಯಾಗಿದೆ. ಶಾಸಕರು ವಿಧಾನಸೌಧದಿಂದ ಮಂಗಳವಾರ ರಾತ್ರಿ ನೇರವಾಗಿ ರಮಡಾ ರೆಸಾರ್ಟಿಗೆ ಆಗಮಿಸಿದ್ದರು. ಬಳಿಕ ಬೆಂಗಳೂರಿನ ಸುತ್ತಮುತ್ತಲಿನ ಶಾಸಕರು ಮನೆಗೆ ತೆರಳಿದ್ದಾರೆ. ಉಳಿದ ಕೆಲ ಶಾಸಕರು ಶಾಸಕರ ಭವನದ ತಮ್ಮ ಕೊಠಡಿಗಳಿಗೆ ಹಾಗೂ ಹೋಟೆಲ್ ಗಳಿಗೆ ತೆರಳಿದ್ದಾರೆ.

    ಉತ್ತರ ಕರ್ನಾಟಕ ಮೂಲದ ಕೆಲ ಶಾಸಕರು ಬೆಂಗಳೂರು ಶಾಸಕರ ನಿವಾಸಗಳಿಗೆ ತೆರಳಿದ್ದಾರೆ. ರಮಡಾ ರೆಸಾರ್ಟ್ ಹಾಗೂ ಸಾಯಿಲೀಲಾ ಹೋಟೆಲಿನಲ್ಲಿ ವಾಸ್ತವ್ಯವಿದ್ದ ಎಲ್ಲಾ ಶಾಸಕರು ನಿನ್ನೆ ತಡರಾತ್ರಿಯೇ ರೂಂ ಖಾಲಿ ಮಾಡಿದ್ದಾರೆ.

    ಸದ್ಯ ರಮಡಾ ರೆಸಾರ್ಟ್ ಹಾಗೂ ಸಾಯಿಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಯಾವ ಬಿಜೆಪಿ ಶಾಸಕರು ಇಲ್ಲ. ತಡರಾತ್ರಿ ಆದ್ದರಿಂದ ಶಾಸಕರುಗಳು ತಂಗಿದ್ದ ರೂಂಗಳಲ್ಲಿ ಅವರ ಬೆಂಬಲಿಗರಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ಕ್ಷೇತ್ರದಲ್ಲಿಲ್ಲ ಅನ್ನೋ ಕೊರಗಿದೆ, ರೆಸಾರ್ಟಿನಲ್ಲಿ ವೈಭವದ ಜೀವನವಿಲ್ಲ: ಬೆಳ್ಳಿ ಪ್ರಕಾಶ್

    ಕ್ಷೇತ್ರದಲ್ಲಿಲ್ಲ ಅನ್ನೋ ಕೊರಗಿದೆ, ರೆಸಾರ್ಟಿನಲ್ಲಿ ವೈಭವದ ಜೀವನವಿಲ್ಲ: ಬೆಳ್ಳಿ ಪ್ರಕಾಶ್

    ಬೆಂಗಳೂರು: ಕ್ಷೇತ್ರದಲ್ಲಿಲ್ಲ ಅನ್ನೋ ಕೊರಗು ನಮಗಿದೆ. ಆದರೂ ನಮ್ಮ ಆಪ್ತ ಸಹಾಯಕರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹೇಳಿದ್ದಾರೆ.

    ರಮಡ ರೆಸಾರ್ಟ್ ಬಳಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಸದಸ್ಯರು, ಕಾರ್ಯಕರ್ತರು ನಮ್ಮ ಅನುಪಸ್ಥಿತಿಯಲ್ಲಿಯೂ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಎದುರಾಗಿರುವ ರಾಜಕೀಯ ಸನ್ನಿವೇಶ ಸರ್ವೇ ಸಾಮಾನ್ಯ. ರಾಮಾಯಣ, ಮಹಾಭಾರತ ಕಾಲದಿಂದಲೂ ರಾಜಕೀಯ ದಾಹ ಇದ್ದೇ ಇದೆ. ಸೋಮವಾರ ನಮ್ಮ ಧರ್ಮಯುದ್ಧದಲ್ಲಿ ನಾವು ಜಯಗಳಿಸುತ್ತೇವೆ ಎಂಬ ಭರವಸೆ ನನಗಿದೆ ಎಂದು ಹೇಳಿದರು.

    ರೆಸಾರ್ಟಿನಲ್ಲಿ ನಾವು ಅತ್ಯಂತ ವೈಭವದ ಜೀವನ ನಡೆಸುತ್ತಿಲ್ಲ. ಮಾಮೂಲಿ ಊಟ, ತಿಂಡಿ, ನಮ್ಮ ಮನೆಯಲ್ಲಿರುವ ರೀತಿ ಬೆಡ್, ಬಾತ್ ರೂಂ ಇಲ್ಲಿದೆ. ಬೇರೆ ರೆರ್ಸಾಟಿನಲ್ಲಿ ಐಷಾರಾಮಿ ವ್ಯವಸ್ಥೆ ಇರಬಹುದು. ಆದರೆ ಈ ರಮಡ ರೆಸಾರ್ಟಿನಲ್ಲಿ ಅಂತಹ ವ್ಯವಸ್ಥೆ ಇಲ್ಲ ಎಂದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ವಿಶ್ವಾಸ ಮತಯಾಚನೆಯನ್ನು ಮತಕ್ಕೆ ಹಾಕುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಮತ ಎಣಿಕೆಗೆ ಹಾಕುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಈ ಮೂಲಕ ಸಮ್ಮಿಶ್ರ ಸರ್ಕಾರ ಬಹುಮತ ಸಾಬೀತುಪಡಿಸದೇ ಬಿದ್ದು ಹೋಗಲಿದೆ ಎಂದು ಹೇಳಿದರು.

    ಇದೇ ವೇಳೆ ಮಾತನಾಡಿದ ಶಾಸಕ ಸುನೀಲ್ ನಾಯಕ್, ಇಲ್ಲಿದ್ದುಕೊಂಡೇ ನಮ್ಮ ಕ್ಷೇತ್ರದ ಜನರಿಗೆ ಬೇಕಾದ ಸ್ಪಂದನೆ ಕೊಟ್ಟಿದ್ದೇವೆ. ನಮ್ಮ ಅಜೆಂಡಾ ಒಂದೇ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮಾಡುವುದು. ಸಮ್ಮಿಶ್ರ ಸರ್ಕಾರ ತೊಲಗಿಸಬೇಕು ಎಂದರು.

    ಕಡತ ವಿಲೇವಾರಿ ಕೂಡ ಜೋರಾಗಿ ನಡೆಯುತ್ತಿದೆ. ಬಹುಮತ ಇಲ್ಲದಿದ್ದರೂ ಕಾಲಹರಣ ಮಾಡುತ್ತಿದ್ದಾರೆ. ಸೋಮವಾರ ನಮಗೆ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಬಿಜೆಪಿ ಶಾಸಕರೊಬ್ಬರ ಕಾರಿನ ವೇಗಕ್ಕೆ ಬಲಿಯಾಯ್ತು ಸರ್ಪ

    ಬಿಜೆಪಿ ಶಾಸಕರೊಬ್ಬರ ಕಾರಿನ ವೇಗಕ್ಕೆ ಬಲಿಯಾಯ್ತು ಸರ್ಪ

    ಬೆಂಗಳೂರು: ಬಿಜೆಪಿ ಶಾಸಕರೊಬ್ಬರ ಕಾರಿನ ವೇಗಕ್ಕೆ ಸರ್ಪವೊಂದು ಬಲಿಯಾದ ಘಟನೆ ರಮಡ ರೆಸಾರ್ಟ್ ಮುಂದಿನ ಹೊನ್ನೆನಹಳ್ಳಿ ರಸ್ತೆಯಲ್ಲಿ ನಡೆದಿದೆ.

    ರಮಡ ರೆಸಾರ್ಟಿನಲ್ಲಿ ಬಿಜೆಪಿ ಶಾಸಕರು ತಂಗಿದ್ದು, ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಇನೋವಾ ಕಾರು ಹೊರಬಂದಿತ್ತು. ಅದರಲ್ಲಿ ಶಾಸಕರೊಬ್ಬರು ಕೂಡ ಇದ್ದರು. ಈ ವೇಳೆ ರೆಸಾರ್ಟ್ ಮುಂದಿನ ರಸ್ತೆಯಲ್ಲಿ ಹಾವು ದಾಟುತ್ತಿತ್ತು. ನಿಧಾನವಾಗಿ ಸಾಗುತ್ತಿದ್ದ ಹಾವಿನ ಮೇಲೆ ಕಾರು ಹರಿದಿದ್ದು, ಸರ್ಪವು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ಸ್ಥಳೀಯರು ದೂರಿದ್ದಾರೆ.

    ಶಾಸಕರ ಹೆಸರು ಹೇಳಲಿಕ್ಕೆ ಸ್ಥಳೀಯರು ಭಯಪಡುತ್ತಿದ್ದು, ಮಾಹಿತಿ ಮಾತ್ರ ನೀಡಿದ್ದಾರೆ. ಹಾವಿನ ತಲೆ ಹಾಗೂ ಹೊಟ್ಟೆಯ ಮೇಲೆ ಕಾರು ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಬಳಿಕ ಹಾವಿನ ಮೃತ ದೇಹವನ್ನು ಸ್ಥಳೀಯರು ಎತ್ತಿ ರಸ್ತೆ ಬದಿಗೆ ಹಾಕಿದ್ದಾರೆ.