Tag: Ramakrishna Ashram

  • ಬಸವನಗುಡಿಯ ರಾಮಕೃಷ್ಣ ಆಶ್ರಮದ ಹರ್ಷಾನಂದ ಮಹಾರಾಜ್ ವಿಧಿವಶ

    ಬಸವನಗುಡಿಯ ರಾಮಕೃಷ್ಣ ಆಶ್ರಮದ ಹರ್ಷಾನಂದ ಮಹಾರಾಜ್ ವಿಧಿವಶ

    ಬೆಂಗಳೂರು: ಬಸವನಗುಡಿಯ ರಾಮಕೃಷ್ಣ ಆಶ್ರಮದ ಸ್ವಾಮಿ ಹರ್ಷಾನಂದಜೀ ಮಹಾರಾಜ್(91) ವಿಧಿವಶರಾಗಿದ್ದಾರೆ.

    ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದು ಬುಧವಾರ ಮಧ್ಯಾಹ್ನ ಮೂರು ಗಂಟೆಗೆ ಚಾಮರಾಜಪೇಟೆಯ ಟಿ ಆರ್ ಮಿಲ್‌ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

    ಇವತ್ತು ರಾತ್ರಿ 8 ಗಂಟೆಯವರೆಗೆ ನಾಳೆ ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ಆತ್ಮ ರಾಮಕೃಷ್ಣನಲ್ಲಿಗೆ ಸೇರಲು ಗೀತ ಪಠಣ ಇತ್ಯಾದಿ ಸ್ತೋತ್ರಗಳನ್ನು ಪಠಿಸಲಾಗುತ್ತಿದೆ.

    ಶ್ರೀಯುತರು 1962 ರಲ್ಲಿ ರಾಮಕೃಷ್ಣ ಮಠದ 8ನೇ ಅಧ್ಯಕ್ಷ ಸ್ವಾಮಿ ವಿಶುದ್ಧಾನಂದರಲ್ಲಿ ಸನ್ಯಾಸಿ ದಿಕ್ಷೆಯನ್ನು ಸ್ವೀಕರಿಸಿ 1989ರಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಹಿಂದೂ ಧರ್ಮದ ಮೇರು ಗ್ರಂಥವಾದ ʼಕನ್ಸೈಸ್ ಎನ್ ಸೈಕ್ಲೊಪೀಡಿಯಾ ಆಫ್ ಹಿಂದೂಯಿಸಮ್ʼ ಅನ್ನು ಸುಮಾರು 26 ವರ್ಷಗಳ ಕಾಲ ರಚನೆ ಮಾಡಿದ್ದರು. ಇಂದಿಗೂ ಕೂಡ ಈ ಗ್ರಂಥ ಹಲವಾರು ಕೃತಿಗಳಿಗೆ ಆಧಾರ ಸ್ಥಂಭವಾಗಿದೆ.

    ಆಧ್ಯಾತ್ಮಿಕದ ಬಗ್ಗೆ ಹಲವಾರು ಕೃತಿಗಳನ್ನ ಶ್ರೀಗಳು ರಚನೆ ಮಾಡಿದ್ದು, ಕನ್ನಡ, ಇಂಗ್ಲಿಷ್, ಸಂಸ್ಕೃತ , ಬೆಂಗಾಲಿ, ತಮಿಳು, ತೆಲುಗು ಸೇರಿದಂತೆ ಎಂಟು ಭಾಷೆಗಳನ್ನು ಲೀಲಾಜಾಲವಾಗಿ ಮಾತನಾಡುತ್ತಿದ್ದರು. ದೇಶ ಮತ್ತು ಪ್ರಪಂಚದಾದ್ಯಂತ ಇರುವ ರಾಮಕೃಷ್ಣ ಮಠದ 230 ಶಾಖಾ ಮಠಗಳನ್ನು  ಶ್ರೀಯುತರು ಬಲ್ಲವರಾಗಿದ್ದರು.

  • ಮೋದಿಗೆ ರಾಜಕೀಯ ದಾರಿ ತೋರಿಸಿದ್ದ ಗುರು ಆತ್ಮಸ್ಥಾನಂದ ಮಹಾರಾಜ್ ಸ್ವಾಮೀಜಿ ವಿಧಿವಶ

    ಮೋದಿಗೆ ರಾಜಕೀಯ ದಾರಿ ತೋರಿಸಿದ್ದ ಗುರು ಆತ್ಮಸ್ಥಾನಂದ ಮಹಾರಾಜ್ ಸ್ವಾಮೀಜಿ ವಿಧಿವಶ

    ಕೋಲ್ಕತ್ತಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬದುಕಿನ ಪಥ ಬದಲಿಸಿ ರಾಜಕೀಯ ದಾರಿ ತೋರಿಸಿದ್ದ ಗುರು ಕೋಲ್ಕತ್ತಾ ರಾಮಕೃಷ್ಣಾ ಆಶ್ರಮದ ಆತ್ಮಸ್ಥಾನಂದ ಮಹಾರಾಜ್ ಸ್ವಾಮೀಜಿ ಅವರು ಭಾನುವಾರ ಸಂಜೆ ವಿಧಿವಶರಾಗಿದ್ದಾರೆ. ಇತ್ತ ಪ್ರಧಾನಿ ಮೋದಿ ಅವರು ಗುರುವಿನ ಅಗಲಿಕೆಗೆ ಸಂತಾಪವನ್ನು ಸೂಚಿಸಿದ್ದಾರೆ.

    99 ವರ್ಷದ ಆತ್ಮಸ್ಥಾನಂದ ಮಹಾರಾಜ್ ಶ್ರೀಗಳು ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಆತ್ಮಸ್ಥಾನಂದ ಸ್ವಾಮೀಜಿ ಅವರು ನಿನ್ನೆ ಸಂಜೆ ಕೋಲ್ಕತ್ತಾದ ರಾಮಕೃಷ್ಣ ಆಶ್ರಮದಲ್ಲಿ ವಿಧಿವಶವಾಗಿದ್ದಾರೆ. ಸ್ವಾಮೀಜಿ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಬಂದು ಶ್ರೀಗಳನ್ನು ಭೇಟಿಯಾಗಿದ್ದರು.

    ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಪ್ರವೇಶಿಸುವುದಕ್ಕೂ ಮುನ್ನ ರಾಮಕೃಷ್ಣಾಶ್ರಮದಲ್ಲಿ ಸನ್ಯಾಸಿಯಾಗಲು ಬಯಸಿದ್ದರು. ಆದರೆ ಬಾಲಕ ಮೋದಿ ಕೋರಿಕೆಯನ್ನು ಅಂದು ತಿರಸ್ಕರಿಸಿದ್ದ ಆತ್ಮಸ್ಥಾನಂದ ಸ್ವಾಮೀಜಿ, ಮೋದಿ ಸನ್ಯಾಸತ್ವ ತಡೆದು ದೇಶ ಸೇವೆ ಮಾಡುವಂತೆ ಸಲಹೆ ನೀಡಿದ್ದರು ಎಂದು ಹೇಳಲಾಗಿದೆ.

    ಆತ್ಮಸ್ಥಾನಂದ ಮಹಾರಾಜ್ ಸ್ವಾಮೀಜಿ ಅವರು 1919, ಮೇ 10ರಂದು ಬಾಂಗ್ಲಾದೇಶದ ಢಾಕಾ ಬಳಿಯ ಸಬ್ಜಿಪುರ ಗ್ರಾಮದಲ್ಲಿ ಜನಿಸಿದ್ದರು. 1938ರಲ್ಲಿ ಸ್ವಾಮಿ ವಿಜಯಾನಂದರ ಅನತಿಯಂತೆ ತಮ್ಮ 22ನೇ ವಯಸ್ಸಿನಲ್ಲಿ ಬೇಲುರಿನ ರಾಮಕೃಷ್ಣ ಆಶ್ರಮವನ್ನು ಸೇರಿದ್ದರು.