Tag: ramalalla

  • ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನ್ನನ್ನು ಟಾರ್ಗೆಟ್‌ ಮಾಡಲಾಗಿದೆ: ʼಕೈʼ ವಿರುದ್ಧ ರಾಧಿಕಾ ಕಿಡಿ

    ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನ್ನನ್ನು ಟಾರ್ಗೆಟ್‌ ಮಾಡಲಾಗಿದೆ: ʼಕೈʼ ವಿರುದ್ಧ ರಾಧಿಕಾ ಕಿಡಿ

    ರಾಂಚಿ: ಅಯೋಧ್ಯೆಗೆ (Ayodhya  Ram Manir) ಭೇಟಿ ಕೊಟ್ಟು ರಾಮಲಲ್ಲಾನ ದರ್ಶನ ಪಡೆದ ಬಳಿಕ ಪಕ್ಷದಲ್ಲಿ ನನ್ನನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಾಂಗ್ರೆಸ್‌ ಮಾಜಿ ವಕ್ತಾರೆ ರಾಧಿಕಾ ಖೇರಾ (Radhika Khera) ಗಂಭೀರ ಆರೋಪ ಮಾಡಿದ್ದಾರೆ.

    ಶನಿವಾರವಷ್ಟೇ ಕಾಂಗ್ರೆಸ್‌ ತೊರೆದಿರುವ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾನು ಅಯೋಧ್ಯೆಗೆ ಹೋಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಾಗಲಿಲ್ಲ. ಆದರೆ ಅಲ್ಲಿಗೆ ಭೇಟಿ ನೀಡಿದ್ದಕ್ಕಾಗಿ ಇಷ್ಟೊಂದು ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ನಾಯಕರಿಂದ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಪರಿಸ್ಥಿತಿ ಬಂದಿದೆ: ಬಿ.ವಿ ಶ್ರೀನಿವಾಸ್

    ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ. ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ. ಕಾಂಗ್ರೆಸ್ ನನ್ನನ್ನು ಮಹಿಳಾ ವಿರೋಧಿ ಎಂದು ಆರೋಪಿಸಿದೆ. ಈ ಬಗ್ಗೆ ನಾನು ಧ್ವನಿಯೆತ್ತಿದರೂ ನನಗೆ ನ್ಯಾಯ ಸಿಗಲಿಲ್ಲ. ಇಂದು ನಾನು ನನ್ನ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ರಾಧಿಕಾ ತಿಳಿಸಿದ್ದಾರೆ.

    ಛತ್ತೀಸ್‌ಗಢ ಘಟಕದಲ್ಲಿ ಅಗೌರವದ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ಪದೇ ಪದೇ ಎಚ್ಚರಿಕೆ ನೀಡಿದರೂ ಯಾರೂ ನನಗೆ ಸಹಾಯ ಮಾಡಲಿಲ್ಲ. ಇದೇ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಮೂರು ವರ್ಷಗಳಿಂದ ಕಾಯುತ್ತಿದ್ದೇನೆ. ಆದರೆ ಅವರು ಯಾರೂ ನನ್ನನ್ನು ಭೇಟಿ ಮಾಡಲಿಲ್ಲ. ನನ್ನನ್ನು ಯಾವಾಗಲೂ ಒಂದು ಕಚೇರಿಯಿಂದ ಇನ್ನೊಂದಕ್ಕೆ ಕಳುಹಿಸಲಾಗುತ್ತದೆ ಎಂದು ಆರೋಪಿಸಿದರು.  

    ಇದೇ ವೇಳೆ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಲೇವಡಿ ಮಾಡಿದ ಖೇರಾ, ರಾಹುಲ್ ಗಾಂಧಿ (Rahul Gandhi) ಅವರು ರ‍್ಯಾಲಿಯಲ್ಲಿ ಯಾರನ್ನೂ ಭೇಟಿ ಮಾಡಲಿಲ್ಲ. ಜನರತ್ತ ಕೇವಲ 5 ನಿಮಿಷಗಳ ಕಾಲ ಕೈ ಬೀಸಿದರು ಹಿಂದುರಿಗಿದ್ದಾರೆ. ಅವರ ನ್ಯಾಯ ಯಾತ್ರೆ ಹೆಸರಿಗಾಗಿ ಮತ್ತು ಅವರು ಕೇವಲ ಟ್ರಾವೆಲ್ ವ್ಲಾಗರ್ ಆಗಲು ಬಯಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

  • ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ

    ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ

    ಅಯೋಧ್ಯೆ: ಈ ಬಾರಿಯ ರಾಮನವಮಿ ಅಯೋಧ್ಯೆಯಲ್ಲಿ (Ayodhya) ವಿಶೇಷವಾಗಿರಲಿದೆ. ರಾಮ ಮಂದಿರ ನಿರ್ಮಾಣದ ನಂತರ ಇದು ಮೊದಲ ರಾಮನವಮಿ. ಹೀಗಾಗಿ ರಾಮಲಲ್ಲಾನ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ರಾಮನವಮಿಯಂದು ರಾಮಮಂದಿರದಲ್ಲಿರುವ ಶ್ರೀರಾಮನ ಹಣೆಗೆ ಸೂರ್ಯ ತಿಲಕವಿಡಲು ಸಿದ್ಧತೆಗಳು ನಡೆಯುತ್ತಿವೆ. ರೂರ್ಕಿಯ ವಿಜ್ಞಾನಿಗಳು ಹಗಲಿರುಳು ಈ ಕೆಲಸದಲ್ಲಿ ನಿರತರಾಗಿದ್ದಾರೆ.

    500 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಶ್ರೀರಾಮನು ಗರ್ಭಗುಡಿಯಲ್ಲಿ ಕುಳಿತಿದ್ದಾನೆ. ರಾಮನವಮಿಯ ದಿನದಂದು ಸೂರ್ಯನ ಕಿರಣಗಳು ರಾಮಲಲ್ಲಾನ ಹಣೆಯ ಮೇಲೆ ಬೀಳುವ ರೀತಿಯಲ್ಲಿ ರಾಮಮಂದಿರದ ಗರ್ಭಗುಡಿಯನ್ನು ನಿರ್ಮಿಸಲಾಗಿದೆ. ರಾಮ ಮಂದಿರದ (Rama Mandir) ಕೆಳ ಅಂತಸ್ತಿನ ಕಾಮಗಾರಿ ಪೂರ್ಣಗೊಂಡಿದ್ದು, ಮೊದಲ ಮಹಡಿಯ ಕಾಮಗಾರಿ ನಡೆಯುತ್ತಿದ್ದು, ಶಿಖರದ ಕಾಮಗಾರಿ ಇನ್ನೂ ಬಾಕಿ ಇದೆ. ಇದನ್ನೂ ಓದಿ: ಇದುವರೆಗೆ 1.5 ಕೋಟಿ ಭಕ್ತರು ರಾಮಮಂದಿರಕ್ಕೆ ಭೇಟಿ- ವಿದೇಶಿಗರೇ ಹೆಚ್ಚು

    ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ದೇವಾಲಯವು ಪೂರ್ಣಗೊಂಡು ಶಿಖರವನ್ನು ನಿರ್ಮಿಸಿದಾಗ, ಶಿಖರದ ಮೇಲೆ ಸಾಧನವನ್ನು ಸ್ಥಾಪಿಸಿ, ಪ್ರತಿ ರಾಮನವಮಿಯಂದು ಭಗವಾನ್ ರಾಮನ ಹಣೆಗೆ ಸೂರ್ಯ ತಿಲಕವನ್ನು ಇರಿಸಲಾಗುತ್ತದೆ. ಆದರೆ ಇದಕ್ಕಾಗಿ ಭಕ್ತರು ತುಂಬಾ ಸಮಯ ಕಾಯಬೇಕಾಗಿದೆ. ಹೀಗಾಗಿ ಈ ರಾಮನವಮಿಯಂದೇ ಸೂರ್ಯ ತಿಲಕವನ್ನಿಡಲು ಪ್ರಯತ್ನಿಸಲಾಗುತ್ತಿದೆ. ಗೋಪುರವನ್ನು ಇನ್ನೂ ನಿರ್ಮಿಸಲಾಗಿಲ್ಲ, ಈ ಸಾಧನವನ್ನು ದೇವಾಲಯದ ಮೊದಲ ಮಹಡಿಯಲ್ಲಿ ಇರಿಸಲಾಗಿದ್ದು, ರಾಮನವಮಿಯಂದು ಮಧ್ಯಾಹ್ನ 12 ಗಂಟೆಗೆ ಶ್ರೀರಾಮನ ವಿಗ್ರಹದ ಹಣೆಗೆ ಇಡಲು ಸೂರ್ಯ ತಿಲಕದ ಸಿದ್ಧತೆಗಳು ನಡೆಯುತ್ತಿವೆ. ರೂರ್ಕಿಯ ವಿಜ್ಞಾನಿಗಳು ಈ ಕೆಲಸದಲ್ಲಿ ತೊಡಗಿದ್ದಾರೆ.

    20 ಗಂಟೆ ದರ್ಶನ: ರಾಮನವಮಿಯ ಸಂದರ್ಭದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ 20 ಗಂಟೆಗಳ ಕಾಲ ಭಕ್ತರಿಗೆ ರಾಮಲಲ್ಲಾನ ದರ್ಶನ ಮಾಡುವ ಅವಕಾಶವಿದೆ. ಈ ವ್ಯವಸ್ಥೆಯು ಏಪ್ರಿಲ್ 15 ರಿಂದ 17 ರವರೆಗೆ ಜಾರಿಯಲ್ಲಿರುತ್ತದೆ. ರಾಮನವಮಿಯಂದು ಅಯೋಧ್ಯೆಯ 100 ಸ್ಥಳಗಳಲ್ಲಿ ಎಲ್ಇಡಿ ಪರದೆಗಳಲ್ಲಿ ನೇರ ಪ್ರಸಾರವಾಗಲಿದೆ.

    ಭಕ್ತರು ತಮ್ಮ ಮೊಬೈಲ್ ಫೋನ್, ಶೂ ಮತ್ತು ಇತರ ವಸ್ತುಗಳನ್ನು ಮಂದಿರದೊಳಗೆ ತರದಂತೆ ಸೂಚಿಸಲಾಗಿದೆ. ರಾಮಜನ್ಮಭೂಮಿ ಪಥದಿಂದ ದೇವಸ್ಥಾನದ ಆವರಣದವರೆಗೆ ಭಕ್ತರಿಗೆ 50 ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಸೆಣಬಿನ ಕಂಬಳಿ ಹಾಸಲಾಗುವುದು. ನೆರಳಿಗಾಗಿ ಜರ್ಮನ್ ಹ್ಯಾಂಗರ್‌ ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರಸಾದದ ಜೊತೆಗೆ ಒಆರ್‌ಎಸ್ ಅನ್ನು ಸಹ ಭಕ್ತರಿಗೆ ನೀಡಲಾಗುವುದು. ಇದರಿಂದ ಅವರಿಗೆ ಬೇಸಿಗೆಯಲ್ಲಿ ಶಕ್ತಿ ಸಿಗುತ್ತದೆ. ರಾಮ ನವಮಿಯ ಸಂದರ್ಭದಲ್ಲಿ ಪಾಸ್ ವ್ಯವಸ್ಥೆಯು ಏಪ್ರಿಲ್ 15 ರಿಂದ 18 ರವರೆಗೆ ರದ್ದಾಗಿರುತ್ತದೆ.

  • ರಾಮಲಲ್ಲಾನಿಗೆ 27 ಕಿಲೋ ತೂಗುವ ಬೆಳ್ಳಿದೀಪ ನೀಡಿದ ಆಚಾರ್ಯ ದಂಪತಿ

    ರಾಮಲಲ್ಲಾನಿಗೆ 27 ಕಿಲೋ ತೂಗುವ ಬೆಳ್ಳಿದೀಪ ನೀಡಿದ ಆಚಾರ್ಯ ದಂಪತಿ

    – ಗರ್ಭಗುಡಿಯಲ್ಲಿ ದೀಪ ಬೆಳಗಿದ ಪೇಜಾವರ ಸ್ವಾಮೀಜಿ

    ಉಡುಪಿ: ಪೇಜಾವರ ಮಠದ ಭಕ್ತ, ಮುಂಬೈ ಉದ್ಯಮಿ ನಾಗೇಂದ್ರ ಆಚಾರ್ಯ-ಅರುಣಾ ಆಚಾರ್ಯ ದಂಪತಿ ಅಯೋಧ್ಯೆ ರಾಮನಿಗೆ (Ayodhya Ram Mandir) ವಿಶಿಷ್ಟ ದೀಪಸೇವೆ ಸಲ್ಲಿಕೆ ಮಾಡಿದ್ದಾರೆ.

    ಬೆಳ್ಳಿಯ ಎರಡು ಬೃಹತ್ ಕಾಲುದೀಪಗಳನ್ನು ಅಯೋಧ್ಯೆಗೆ ಅರ್ಪಿಸಿದ್ದಾರೆ. ಪೇಜಾವರ ಮಠದ ಶಿಷ್ಯರಾಗಿರುವ ದಂಪತಿ ರಾಮಸೇವೆ ಮಾಡುವ ಸಂಕಲ್ಪ ಮಾಡಿದ್ದು, ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ಮೂಲಕ ಅವರು ದೊಡ್ಡ ದೊಡ್ಡ ದೀಪಗಳನ್ನು ಅರ್ಪಿಸಿದ್ದಾರೆ.

    ಎರಡು ದೀಪಗಳು ತಲಾ ಮೂರೂವರೆ ಅಡಿ ಎತ್ತರವಿದ್ದು, ತಲಾ 13.5 ಕೆ.ಜಿ.ತೂಕವಿವೆ. ಉದ್ಯಮಿ ಆಚಾರ್ಯ ದಂಪತಿ, ಎ.ಕೆ. ಆರ್. ಟ್ರಸ್ಟ್‌ನ ವಿಶ್ವಸ್ಥರೂ ಆಗಿದ್ದು ಉಡುಪಿಯ ಕೃಷ್ಣಮಠ, ಅಷ್ಟ ಮಠಗಳ ಭಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಹೊಸ ದೀಪಗಳನ್ನು ರಾಮಮಂದಿರದ ಗರ್ಭಗುಡಿಯ ಮುಂಭಾಗದಲ್ಲಿ ಪೇಜಾವರ ಸ್ವಾಮೀಜಿ ಬೆಳಗಿದರು. ಇದನ್ನೂ ಓದಿ: ಕೋಟಿ ಕೋಟಿ ಒಡೆಯ ಅಯೋಧ್ಯೆ ಬಾಲರಾಮ – ಒಂದು ತಿಂಗಳಲ್ಲಿ 25 ಕೋಟಿ ಸಂಗ್ರಹ

  • ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ

    ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ

    – ನನ್ನನ್ನು ದ್ವೇಷಿಸುವವರು ಪಾಕಿಸ್ತಾನಕ್ಕೆ ಹೋಗಲಿ ಅಂದ್ರು ಉಮರ್‌ ಅಹ್ಮದ್‌

    ಅಯೋಧ್ಯೆ: ಜನವರಿ 22 ರಂದು ನಡೆದ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಿದ್ದ ಆಲ್ ಇಂಡಿಯಾ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ವಿರುದ್ಧ ಫತ್ವಾ (Fatwa) ಹೊರಡಿಸಲಾಗಿದೆ.

    ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ (Dr Imam Umer Ahmed Ilyasi) ಅವರಿಗೆ ಫತ್ವಾ ಹೊರಡಿಸಲಾಗಿದೆ. ಈ ವಿಚಾರವನ್ನು ಸ್ವತಃ ಉಮರ್‌ ಅಹ್ಮದ್‌ ಅವರೇ ತಿಳಿಸಿದ್ದಾರೆ. ಮುಖ್ಯ ಇಮಾಮ್ ಆಗಿ ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ (Ayodhya Ram Mandir) ಹೋಗಲು ನಿರ್ಧರಿಸಿದೆ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಡೀಸೆಂಟ್ ಜಂಟಲ್‍ ಮ್ಯಾನ್, ಕಾಂಗ್ರೆಸ್ಸಿಗರು ಉಳಿಸಿಕೊಳ್ಳಬೇಕಾಗಿತ್ತು: ಹರಿಪ್ರಸಾದ್

    ಕ್ಷಮೆ ಕೇಳಲ್ಲ: ಭಾನುವಾರ ಫತ್ವಾ ಹೊರಡಿಸಲಾಗಿದೆ. ಜನವರಿ 22 ರ ಸಂಜೆಯಿಂದ ನನಗೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿವೆ. ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು ಹಾಗೂ ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಪ್ರಾಣಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ತಾನಕ್ಕೆ ಹೋಗಲಿ. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ಈ ಸಂಬಂಧ ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ. ಅವರು ಏನು ಬೇಕಾದರೂ ಮಾಡಬಹುದು ಎಂದು ಅವರು ಹೇಳಿದ್ದಾರೆ.

    ಈ ಕುರಿತು ಮುಖ್ಯ ಇಮಾಮ್ ಅವರು ಕೇಂದ್ರ ಗೃಹ ಸಚಿವಾಲಯ ಮತ್ತು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಅವರ ವಿರುದ್ಧದ ಫತ್ವಾ ದುರದೃಷ್ಟಕರ ಮತ್ತು ಖಂಡನೀಯ ಕೃತ್ಯ ಎಂದು ವಿಎಚ್‌ಪಿ ಬಣ್ಣಿಸಿದೆ. ಕೆಲವು ಮೂಲಭೂತವಾದಿಗಳು ಇಸ್ಲಾಂ ಅನ್ನು ತಮ್ಮ ಆಸ್ತಿ ಎಂದು ಪರಿಗಣಿಸುತ್ತಾರೆ ಎಂದು ಕಿಡಿಕಾರಿದೆ.

  • ರಾಮಲಲ್ಲಾ ಕೆತ್ತಿದ ಗಣೇಶ್ ಭಟ್‍ರಿಗೆ ಬರ್ತಿದೆ ಬೇರೆ ಬೇರೆ ರಾಜ್ಯಗಳಿಂದ ಕರೆ!

    ರಾಮಲಲ್ಲಾ ಕೆತ್ತಿದ ಗಣೇಶ್ ಭಟ್‍ರಿಗೆ ಬರ್ತಿದೆ ಬೇರೆ ಬೇರೆ ರಾಜ್ಯಗಳಿಂದ ಕರೆ!

    ಬೆಂಗಳೂರು: ಅಯೋಧ್ಯೆಯಲ್ಲಿ (Ayodhya Ram Mandir) ರಾಮಲಲ್ಲಾನ ಕೆತ್ತಿದ ಗಣೇಶ್ ಭಟ್‍ರಿಗೆ (Ganesh Bhat) ಈಗ ಬೇರೆ ಬೇರೆ ರಾಜ್ಯಗಳಿಂದ ಕರೆ ಬರುತ್ತಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಅಸ್ಸಾಂ, ಛತ್ತೀಸ್‍ಗಢ್ ಹಾಗೂ ಜಮ್ಮುಕಾಶ್ಮೀರ ಸೇರಿದಂತೆ ಅನೇಕ ರಾಜ್ಯಗಳಿಂದ ಅಯೋಧ್ಯೆಯಲ್ಲಿ ಕೆತ್ತಿದ ರಾಮಲಲ್ಲಾನ ಪ್ರತಿಮೆ ಕೊಡುವಂತೆ ಕರೆಗಳು ಬರುತ್ತಿದೆ. ಕೆಲವರು ಅದೇ ವಿಗ್ರಹ ನೀಡುವಂತೆ ಕೇಳುತ್ತಿದ್ದಾರೆ, ಇನ್ನೂ ಕೆಲವರು ಹೊಸ ವಿಗ್ರಹ ಕೆತ್ತನೆಗೆ ಹೇಳಿದ್ದಾರೆ ಎಂದರು. ಇದನ್ನೂ ಓದಿ: Loksabha Elections: ಬಿಜೆಪಿ ರಾಜ್ಯವಾರು ಚುನಾವಣಾ ಉಸ್ತುವಾರಿಗಳ ಪಟ್ಟಿ ಪ್ರಕಟ

    ಅಯೋಧ್ಯೆಯಲ್ಲಿ ನಾನು ಕೆತ್ತಿದ ವಿಗ್ರಹ ಅದು ಅಯೋಧ್ಯೆಯ (Ayodhya) ಟ್ರಸ್ಟ್ ಸ್ವತ್ತಾಗಿದೆ. ಅವರು ರಾಮಮಂದಿರದಲ್ಲಿಯೇ ಇಡೋದಾಗಿ ಹೇಳಿದ್ದಾರೆ. ನಾನು ಕೆತ್ತಿದ ವಿಗ್ರಹವನ್ನು ಆಲಯ ಗರ್ಭಗುಡಿಯೊಳಗೆ ಇಟ್ಟರೆ ಸೂಕ್ತ ಅನ್ನೋದು ನನ್ನ ಅಭಿಪ್ರಾಯವಾಗಿದೆ. ಹೀಗಾಗಿ ಅದನ್ನು ಕರುನಾಡಿನ ಪ್ರಸಿದ್ಧ ಸ್ಥಳದಲ್ಲಿ ಪ್ರತಿಷ್ಟಾಪಿಸಿದ್ರೂ ನನಗೆ ಬಹಳ ಸಂತಸ. ಯಾಕೆಂದರೆ ಕಂಕಣ ಕಟ್ಟಿ ಸಾಕಷ್ಟು ವಿಧಿ-ವಿಧಾನ ಪೂಜೆ ಮಾಡಿ ಶಾಸ್ತ್ರೋಕ್ತವಾಗಿ ಕೆತ್ತಿರೋದು ಮ್ಯೂಸಿಯಂ ಅಥವಾ ಸರ್ಕಲ್ ನಲ್ಲಿ ಇಡೋದು ಸೂಕ್ತವು ಅಲ್ಲ. ತೀರ್ಥ ಭೂಮಿ ಟ್ರಸ್ಟ್ ನವರ ನಿರ್ಧಾರ ಏನು ಅನ್ನೋದರ ಬಗ್ಗೆ ನಾನು ಕಾಯುತ್ತಿದ್ದೇನೆ ಎಂದು ಹೇಳಿದರು.

    ಈಗಾಗಲೇ ಕರ್ನಾಟಕದಲ್ಲಿಯೂ ಈ ವಿಗ್ರಹವನ್ನು ಟ್ರಸ್ಟ್ ನವರು ನೀಡಲು ಒಪ್ಪಿದ್ರೆ ರಾಮದೇವರ ಬೆಟ್ಟ ಅಥವಾ ಕಲ್ಲು ಸಿಕ್ಕ ಜಮೀನಿನಲ್ಲಿ ಪ್ರತಿಷ್ಠಾಪನೆಯ ಬಗ್ಗೆಯೂ ಜನಪ್ರತಿನಿಧಿನಿಧಿಗಳಿಗೆ ಆಸಕ್ತಿ ಇದೆ ಎಂದರು. ಇದನ್ನೂ ಓದಿ: 7 ಶಾಸಕರನ್ನ ಖರೀದಿಸಲು ಬಿಜೆಪಿಯಿಂದ ತಲಾ 25 ಕೋಟಿ ರೂ. ಆಫರ್‌ – ಕೇಜ್ರಿವಾಲ್‌ ಹೊಸ ಬಾಂಬ್‌

  • ಜ.22ಕ್ಕೆ ರಾಮಲಲ್ಲಾನ ಪ್ರತಿಷ್ಠಾಪನೆ- ಮನೆ ಮನೆಗೂ ತಲುಪಲಿದೆ ಅಯೋಧ್ಯೆಯ ಮಂತ್ರಾಕ್ಷತೆ

    ಜ.22ಕ್ಕೆ ರಾಮಲಲ್ಲಾನ ಪ್ರತಿಷ್ಠಾಪನೆ- ಮನೆ ಮನೆಗೂ ತಲುಪಲಿದೆ ಅಯೋಧ್ಯೆಯ ಮಂತ್ರಾಕ್ಷತೆ

    ಬೆಂಗಳೂರು: ಅಯೋಧ್ಯೆಯಲ್ಲಿ (Ayodhye) ರಾಮವೈಭವಕ್ಕೆ ಸಜ್ಜಾಗುತ್ತಿದೆ. ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅಯೋಧ್ಯೆ ನಗರಿಯ ಸಂಭ್ರಮದಲ್ಲಿ ಕರುನಾಡು ಭಾಗಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದ ಮನೆ ಮನೆಗೂ ಅಯೋಧ್ಯೆಯ ಮಂತ್ರಾಕ್ಷತೆ ತಲುಪಲಿದೆ.

    ಸಂಘರ್ಷ ಸವಾಲಿನ ಮಧ್ಯೆ ಪುರುಷೋತ್ತಮ ಶ್ರೀರಾಮನ (Ramamandir) ಸಂಭ್ರಮದ ತೇರಿಗೆ ಮುಹೂರ್ತ ನಿಗದಿಯಾಗಿದೆ. ಮುಂದಿನ ವರ್ಷ ಜನವರಿ 22ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರಭೆ ಪ್ರಜ್ವಲಿಸಲಿದೆ. ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಈಗ ಶ್ರೀರಾಮ ಭಕ್ತರಿಗೆ ಹಬ್ಬವಿದ್ದಂತೆ. ಕರುನಾಡಿನ ಪ್ರತಿ ಮನೆ ಮನೆಗೂ ಅಯೋಧ್ಯೆಯ ಶ್ರೀರಾಮನ ಸನ್ನಿಧಾನದಿಂದಲೇ ಮಂತ್ರಾಕ್ಷತೆ ತಲುಪಿಸುವ ಕೆಲಸವನ್ನು ವಿಶ್ವಹಿಂದೂ ಪರಿಷತ್ ಮಾಡುತ್ತಿದೆ. ಬೆಂಗಳೂರಿನ ವಿವಿಪುರಂನ ಆಂಜನೇಯನ ದೇಗುಲದಲ್ಲಿ ಕಲಶದಲ್ಲಿ ಮಂತ್ರಾಕ್ಷತೆ, ರಾಮನ ಭಾವಚಿತ್ರ ಪ್ರತಿ ಮನೆ ಮನೆಗೂ ತಲುಪಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:

    ಡಿಸೆಂಬರ್ 22ರೊಳಗೆ ಮಂತ್ರಾಕ್ಷತೆಯನ್ನು ಬೆಂಗಳೂರು ಸೇರಿದಂತೆ ರಾಜ್ಯದ ಪ್ರತಿ ಗ್ರಾಮ ಗ್ರಾಮಗಳಿಗೆ ತಲುಪಿಸುವ ಕಾರ್ಯ ನಡೆಯಲಿದೆ. ಇನ್ನು ಪ್ರಾಣ ಪ್ರತಿಷ್ಠಾಪನೆಯ ದಿನ ಸೂರ್ಯಾಸ್ತವಾದ ಮೇಲೆ ಪ್ರತಿ ಮನೆಯಲ್ಲಿ ದೀಪ ಬೆಳಗಿ ದೀಪೋತ್ಸವ ಆಚರಿಸಲು ಸಂಘಟನೆ ಮನವಿ ಮಾಡಿ ಕರಪತ್ರ ಹಂಚಲಿದೆ. ಪ್ರತಿ ಮನೆಗೂ ಆಯೋಧ್ಯೆಯ ಮಂತ್ರಾಕ್ಷತೆ ತಲುಪುವಂತೆ ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧಾರ ಮಾಡಿದೆ. ರಾಮ ಸಂಭ್ರಮಕ್ಕೆ ಎಲ್ಲಡೆ ಪಸರಿಸಲು ಈ ವಿಶಿಷ್ಠ ಪ್ರಯತ್ನವನ್ನು ಮಾಡುತ್ತಿದೆ.