Tag: ramalingareddy

  • ಒಂದು ಬಾರಿ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ: ರಾಮಲಿಂಗಾರೆಡ್ಡಿ

    ಒಂದು ಬಾರಿ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಒಂದು ಬಾರಿ ಬಿಗ್‌ಬಾಸ್ (Bigg Boss Kannada 12) ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ (Ramalingareddy) ಬಿಗ್‌ಬಾಸ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನಡೆಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

    ಬಿಗ್‌ಬಾಸ್‌ಗೆ ಬೀಗ ಹಾಕಿ ಮತ್ತೆ ತೆಗೆದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ವಿಷಯವನ್ನು ಮಾಧ್ಯಮಗಳ ಮೂಲಕ ನೋಡಿದೆ. ಮಾಲಿನ್ಯ ನಿಯಂತ್ರಣ ಬೋರ್ಡ್ ಅಧ್ಯಕ್ಷ ನರೇಂದ್ರಸ್ವಾಮಿ ಅವರು ಬಿಗ್‌ಬಾಸ್ ನಿಯಮ ಮೀರಿದ್ದಾರೆ ಅಂತ ನೋಟಿಸ್ ಕೊಟ್ಟಿದ್ದರು. ಅವರು ನೋಟಿಸ್‌ಗೂ ಕ್ಯಾರೆ ಎನ್ನಲಿಲ್ಲ ಅಂತ ಬೀಗ ಹಾಕಿದ್ರು. ಈಗ ನಿನ್ನೆ ಡಿಕೆ ಶಿವಕುಮಾರ್ (D.K.Shivakumar) ಅನುಮತಿ ಕೊಡಿ ಅಂತ ಹೇಳಿದ್ದಾರೆ ಅಂತ ಮಾಧ್ಯಮಗಳಲ್ಲಿ ನೋಡಿದೆ. ನನಗೆ ಇಷ್ಟೇ ಮಾಹಿತಿ ಗೊತ್ತಿರೋದು. ನಾನು ಊರಲ್ಲಿ ಇರಲಿಲ್ಲ. ಇಷ್ಟೇ ಗೊತ್ತಿರೋದು ಅಂತ ತಿಳಿಸಿದರು. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಒಂದು ಸಾರಿ ನೋಟಿಸ್ ಕೊಟ್ಟ ಮೇಲೆ, ಮುಚ್ಚಿದ ಮೇಲೆ ಅದು ಸರಿ ಆಗೋವರೆಗೂ ತೆಗೆಯೋಕೆ ಅವಕಾಶ ಕೊಡಬಾರದು. ನನಗೆ ಡಿಸಿ ಮಾಹಿತಿ ಕೊಡೋಕೆ ನಾನು ಊರಲ್ಲಿ ಇರಲಿಲ್ಲ. ಮಾಲಿನ್ಯ ‌ಬೋರ್ಡ್ ಸ್ವಾಯತ್ತ ಸಂಸ್ಥೆ. ಅದರ ಕೆಲಸ ಅದು ಮಾಡಿದೆ. ಏನಾಗಿದೆ ತಿಳಿದುಕೊಳ್ಳುತ್ತೇನೆ. ಈಗ ಏನ್ ಆಯ್ತು ಅಂತ ಡಿಕೆ ಶಿವಕುಮಾರ್ ಅವರನ್ನೇ ಕೇಳಿ ಎಂದರು.

    ಪರಿಸರ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಿಡದಿಯಲ್ಲಿರುವ ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ ಮಾಡಲಾಗಿತ್ತು. ಅಲ್ಲೇ ಇರುವ ಬಿಗ್‌ಬಾಸ್‌ ಮನೆಗೂ ಇದರ ಬಿಸಿ ತಟ್ಟಿತ್ತು. ರಾತ್ರೋರಾತ್ರಿ ಬಿಗ್‌ಬಾಸ್‌ ಸ್ಪರ್ಧಿಗಳನ್ನು ಮನೆಯಿಂದ ಹೊರಹಾಕಲಾಗಿತ್ತು. ಒಂದು ದಿನದ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ಜಾಲಿವುಡ್‌ ಸ್ಟುಡಿಯೋಸ್‌ ಗೇಟ್‌ಗೆ ಹಾಕಿರುವ ಸೀಲ್‌ ತೆಗೆಯುವಂತೆ ಡಿಸಿಎಂ ಸೂಚನೆ ನೀಡಿದರು. ಈಗ ಜಾಲಿವುಡ್‌ ಓಪನ್‌ ಆಗಿದ್ದು, ಸ್ಪರ್ಧಿಗಳು ಕೂಡ ಬಿಗ್‌ಬಾಸ್‌ ಮನೆಗೆ ವಾಪಸ್‌ ಆಗಿದ್ದಾರೆ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

  • ಕೆನರಾ ಬ್ಯಾಂಕ್ ಜೊತೆಗೆ KKRTC ಒಪ್ಪಂದ – ಸಾರಿಗೆ ನೌಕರರಿಗೆ 1 ಕೋಟಿ ಅಪಘಾತ ವಿಮೆ ಯೋಜನೆ ಜಾರಿ

    ಕೆನರಾ ಬ್ಯಾಂಕ್ ಜೊತೆಗೆ KKRTC ಒಪ್ಪಂದ – ಸಾರಿಗೆ ನೌಕರರಿಗೆ 1 ಕೋಟಿ ಅಪಘಾತ ವಿಮೆ ಯೋಜನೆ ಜಾರಿ

    ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು (KKRTC) ತನ್ನ ನೌಕರರಿಗೆ ಪ್ರೀಮಿಯಮ್ ರಹಿತ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ ಯೋಜನೆಗೆ ಕೆನರಾ ಬ್ಯಾಂಕ್‌ನೊಂದಿಗೆ (Canara Bank) ಒಪ್ಪಂದ ಮಾಡಿಕೊಂಡಿದೆ.

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಯವರ (Ramalinga Reddy) ಬೆಂಗಳೂರಿನ ಗೃಹ ಕಚೇರಿಯಲ್ಲಿ ಸಚಿವ ಸಮಕ್ಷಮ ಕೆನರಾ ಬ್ಯಾಂಕ್‌ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪಾ ಮತ್ತು ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ವಿಜಯಕುಮಾರ ಪರಸ್ಪರ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಇದನ್ನೂ ಓದಿ: ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಈ ಸಂದರ್ಭದಲ್ಲಿ ಸಚಿವ ರಮಾಲಿಂಗಾರೆಡ್ಡಿ ಮಾತನಾಡಿ, ಸಾರಿಗೆ ನಿಗಮದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗುತ್ತಿರುವ ಸಾವು-ನೋವುಗಳ ಪ್ರಮಾಣವನ್ನು ಗಮನಿಸಿ ಕೆ.ಕೆ.ಆರ್.ಟಿ.ಸಿ. ನಿಗಮವು ವೈಯಕ್ತಿಕ ಮತ್ತು ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ನೌಕರರು ನಿಧನರಾದಲ್ಲಿ 1 ಕೋಟಿ ರೂ. ಗಳ ಪ್ರೀಮಿಯಮ್ ರಹಿತ ಅಪಘಾತ ವಿಮೆ ಯೋಜನೆ ಜಾರಿಗೊಳಿಸಿದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಹೋಟೆಲ್‌, ರೆಸ್ಟೋರೆಂಟ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ!

    ಯಾರಿಗೆ ಅನುಕೂಲ?
    ಕೆ.ಕೆ.ಆರ್.ಟಿ.ಸಿ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ನಿಗಮದ ನೌಕರರಿಗೆ ಈ ವಿಮಾ‌‌ ಸೌಲಭ್ಯ ಸಿಗಲಿದೆ. ವೇತನ ಖಾತೆಗಳನ್ನು ಕೆನರಾ ಬ್ಯಾಂಕಿನ ʻಪೇ-ರೋಲ್ ಪ್ಯಾಕೇಜ್ ಸ್ಟೀಮ್ʼ ಅಡಿಯಲ್ಲಿ ತೆರೆದು ಈ ವಿಮಾ ಸೌಲಭ್ಯ ಶುಲ್ಕ ರಹಿತವಾಗಿ ಪಡೆಯಬಹುದಾಗಿದೆ. ಇದನ್ನೂ ಓದಿ: ಮುಡಾದಲ್ಲಿ ನಡೆದಿರೋದು 4-5 ಸಾವಿರ ಕೋಟಿ ಹಗರಣ: ಆರ್‌. ಅಶೋಕ್‌ ಬಾಂಬ್‌

    ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುರಕ್ಷಿತ, ಮಿತವ್ಯಯ ಸಾರಿಗೆ ಸೌಲಭ್ಯ ಕಲ್ಪಿಸುವುದರ ಜೊತೆಗೆ ನೌಕರರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನಿಗಮದ ನೌಕರರು ಅಪಘಾತ ವಿಮೆಗೆ ಒಳಪಟ್ಟಿರುತ್ತಾರೆ. ಇದೀಗ ಆ‌ ಸಾಲಿಗೆ ಕೆನರಾ ಬ್ಯಾಂಕ್‌ ಸೇರ್ಪಡೆಯಾಗಿದೆ. ಅಪಘಾತ ಹೊರತುಪಡಿಸಿ ಇತರೇ ನೈರ್ಸಗಿಕ ಸಾವುಗಳಿಗೆ ಕೆನರಾ ಬ್ಯಾಂಕ್ ಪ್ರೀಮಿಯಂ ರಹಿತ 6 ಲಕ್ಷ ರೂ. ವರೆಗೆ ಉಚಿತ ʻಟರ್ಮ್ ಇನ್ಶುರೆನ್ಸ್ʼ ಪಾಲಿಸಿ ಸಹ ನಿಡುತ್ತಿದೆ. ಇದಲ್ಲದೇ ನೌಕರರ ಮಕ್ಕಳ ವಿಧ್ಯಾಭ್ಯಾಸ, ಗೃಹ ಸಾಲ ಹಾಗೂ ವೈಯಕ್ತಿಕ ಮತ್ತು ವಾಹನ ಸಾಲಗಳಿಗೆ ವಿಶೇಷ ಬಡ್ಡಿ ದರ ನಿಗದಿಪಡಿಸಿದ್ದು, ನೌಕರ ವರ್ಗಕ್ಕೆ ಅನುಕೂಲವಾಗಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪಾ ಅವರು ಸಚಿವರ ಗಮನಕ್ಕೆ ತಂದರು.

    ಈ‌ ಸಂದರ್ಭದಲ್ಲಿ ಕೆ.ಕೆ.ಆರ್.ಟಿ.ಸಿ. ನಿಗಮ ಮತ್ತು ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

    ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalingareddy) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮೂರುವರೆ ವರ್ಷ ಎಲ್ಲಾ ಗ್ಯಾರಂಟಿ ಇದ್ದೇ ಇರುತ್ತದೆ. ಮುಂದೆ ಮತ್ತೆ ಚುನಾವಣೆ ಬರುತ್ತದೆ. ಆಗಲೂ ನಾವೇ ಗೆಲ್ಲುತ್ತೇವೆ. ಆಗಲೂ ಈ ಗ್ಯಾರಂಟಿ ಮುಂದುವರೆಯುತ್ತದೆ. ಬಿಜೆಪಿ ಬಡವರ ವಿರೋಧಿಗಳು. ಅವರು ಕೊಡೋದೂ ಇಲ್ಲ, ಕೊಟ್ಟವರನ್ನ ಸಹಿಸೋದು ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

    ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಸಾಲ ಹೊರಿಸಿ ಹೋದವರು. ಎಲ್ಲಾ ಕಡೆ ಸಾವಿರಾರು ಕೋಟಿ ಸಾಲ ಇಟ್ಟು ಹೋಗಿದ್ದಾರೆ. ಅಭಿವೃದ್ಧಿಗೆ ಮಾಡುವ ಖರ್ಚಿನ ಹಣ ಸೇರಿ ಎಲ್ಲಾ ಕಡೆ ಸಾಲ ಇಟ್ಟು ಹೋಗಿದ್ದಾರೆ. ಈಗ ನಮ್ಮ ಮೇಲೆ ಹೇಳುತ್ತಾರೆ. ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ: ಡಿಕೆಶಿ

  • 9 ಸಾವಿರ ಸಾರಿಗೆ ಸಿಬ್ಬಂದಿ ನೇಮಕ: ರಾಮಲಿಂಗಾರೆಡ್ಡಿ

    9 ಸಾವಿರ ಸಾರಿಗೆ ಸಿಬ್ಬಂದಿ ನೇಮಕ: ರಾಮಲಿಂಗಾರೆಡ್ಡಿ

    ಬೆಳಗಾವಿ: ನಾನು ಸಾರಿಗೆ ಮಂತ್ರಿ ಇದ್ದಾಗ ಕೊನೆಯಾಗಿ ನೇಮಕಾತಿಯಾತ್ತು. ಕಳೆದ ಏಳು ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಸಾರಿಗೆ ಸಿಬ್ಬಂದಿ ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದರು.

    ತಾಲೂಕಿನ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಸಚಿವರು ಮಾತನಾಡಿದರು.

    ಶಕ್ತಿ ಯೋಜನೆ (Shakti scheme) ಜಾರಿಯಾದ ಮೇಲೆ ಮೇಲೆ ಜನರು ಜಾಸ್ತಿ ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವಾಗ, ಬರುವಾಗ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ. ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ (Bus) ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್‌ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ

     

    ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ (BMTC) ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್‌ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದರು.

    2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹೆಚ್ಚು ಬಸ್ ನಿಲ್ದಾಣ ಕೊಟ್ಟಿದ್ದೇನೆ. ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣ ನೀಡಿದ್ದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇದನ್ನೂ ಓದಿ: ಪ್ರೇಮಿಗಾಗಿ ಪಾಕ್‌ ತೊರೆದು ಭಾರತಕ್ಕೆ ಬಂದ ಚೆಲುವೆ

     

    ಉತ್ತರ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸ್ವೀಕರಿಸಿದ್ದೇನೆ. ಬಿಸಿ ಊಟ ತಯಾರಿಸುವವರಿಗೆ ಗೌರವಧನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಶಿಳ್ಳೇಕ್ಯಾತ ಸಮಾಜದ ಬೇಡಿಕೆ, ಮಹಿಳೆಯರಿಗೆ ಅನಧಿಕೃತ ಗರ್ಭಕೋಶ ಆಪರೇಷನ್ ಹೀಗೆ ಅನೇಕ ಸಮಸ್ಯೆಗಳಿವೆ. ಪ್ರತಿಭಟನಾಕಾರರು ಕೊಟ್ಟಿರುವ ಮನವಿಗಳನ್ನು ಸಿಎಂಗೆ ಕೊಡುತ್ತೇನೆ. ಸರ್ಕಾರ ಕೂಡ ಅವರಿಗೆ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.

    ಉತ್ತರ ಕರ್ನಾಟಕ ಬಗ್ಗೆ ತಾರತಮ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ತಾರತಮ್ಯ ಅಷ್ಟೇನೂ ಇಲ್ಲ. ಕೆಲವೊಂದು ಲೋಪದೋಷಗಳು ಇರಬಹುದು. ಆದರೆ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗಿವೆ. ಸಾಕಷ್ಟು ನೀರಾವರಿ ಯೋಜನೆ, ರಸ್ತೆಗಳ ಅಭಿವೃದ್ಧಿ ವಿಚಾರದಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿಕೆ ನೀಡಿದರು.

    ಸುವರ್ಣ ಸೌಧಕ್ಕೆ ಕಚೇರಿ ಸ್ಥಳಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ ಸೌಧಕ್ಕೆ ಕಚೇರಿಗಳನ್ನ ಶಿಫ್ಟ್ ಮಾಡಿದರೆ ಜನರು ಬರುತ್ತಾರೆ ಹೋಗ್ತಾರೆ. ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡಬೇಕು ಎಂದು ಅವರು ಹೇಳಿದರು.

  • ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತೆಂದು ಸರ್ಕಾರದಿಂದ ಸುಳ್ಳು ಲೆಕ್ಕ: ರಾಮಲಿಂಗಾರೆಡ್ಡಿ

    ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತೆಂದು ಸರ್ಕಾರದಿಂದ ಸುಳ್ಳು ಲೆಕ್ಕ: ರಾಮಲಿಂಗಾರೆಡ್ಡಿ

    ಬೆಂಗಳೂರು: ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾವಿನ ಸುಳ್ಳು ಲೆಕ್ಕ ಕೊಡುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

    ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮಾಹಿತಿ ಪ್ರಕಾರ ಕೋವಿಡ್ ನಲ್ಲಿ ಸತ್ತಿರುವವರ ಸಂಖ್ಯೆ 37,318. ರಾಜ್ಯದಲ್ಲಿ ಜನನ ಹಾಗೂ ಮರಣ ಇಲಾಖೆಯ ಅಧಿಕೃತ ಅಂಕಿ ಅಂಶ ಹಾಗೂ ವರ್ಷವಾರು ಮೃತರ ಗಣತಿ ಪ್ರಕಾರ, 2018ರಲ್ಲಿ ಸತ್ತವರ ಸಂಖ್ಯೆ 4,83,511, 2019ರಲ್ಲಿ 5,08,584, 2020ರಲ್ಲಿ 5,51,808 ಜನ ಸತ್ತಿದ್ದಾರೆ. ಪ್ರತಿ ವರ್ಷ ಸತ್ತವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. 2021ರ ಆರಂಭಿಕ ಏಳು ತಿಂಗಳು ಅಂದರೆ ಜುಲೈ ತಿಂಗಳವರೆಗೂ 4.21 ಲಕ್ಷ ಜನ ಸತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಲಬುರಗಿ, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಾಧ್ಯತೆ: ಸಚಿವ ಅಶೋಕ್

    ಪ್ರತಿ ವರ್ಷ ಆರಂಭಿಕ ಏಳು ತಿಂಗಳ ಸಾವಿನ ಸಂಖ್ಯೆ ನೋಡುವುದಾದರೆ, 2018ರಲ್ಲಿ 2.69 ಲಕ್ಷ ಜನ ಮೃತಪಟ್ಟರೆ, 2019ರಲ್ಲಿ 2.79 ಲಕ್ಷ ಜನ ಸತ್ತಿದ್ದಾರೆ, 2020ರಲ್ಲಿ 2.64 ಲಕ್ಷ ಜನ ಸತ್ತಿದ್ದರು. 2021ರಲ್ಲಿ 4,26,790 ಜನ ಸತ್ತಿದ್ದಾರೆ. ಅಂದರೆ 1.62 ಲಕ್ಷ ಜನ ಹೆಚ್ಚುವರಿಯಾಗಿ ಸಾವನ್ನಪ್ಪಿದ್ದಾರೆ. ಈ 1.62 ಲಕ್ಷ ಜನ ಹೇಗೆ ಸತ್ತಿದ್ದಾರೆ? ರಾಜ್ಯದಲ್ಲಿ ಸುನಾಮಿ, ಭೂಕಂಪ, ಚಂಡಮಾರುತ ಬಂದಿತ್ತೇ? ಕಾಲರಾ, ಪ್ಲೇಗ್ ನಂತಹ ಬೇರೆ ಕಾಯಿಲೆಗಳು ಬಂದಿತ್ತೆ ಎಂದು ಪ್ರಶ್ನಿಸಿದ್ದಾರೆ.

    ಕಳೆದ ವರ್ಷವೇ ಕೋವಿಡ್ ನಿಂದ 30 ಸಾವಿರ ಜನ ಸತ್ತಾಗ ಕೇವಲ 3 ಸಾವಿರ ಜನ ಎಂದು ಲೆಕ್ಕ ತೋರಿಸಿದ್ದರು. ಸರ್ಕಾರ ಕೋವಿಡ್ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ ನೀಡುತ್ತಿದೆ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ. ಸರ್ಕಾರ ಹೇಗೆ ಈ ಸುಳ್ಳು ಲೆಕ್ಕ ನೀಡುತ್ತಿದೆ ಎಂಬುದು ತಿಳಿಯಬೇಕಾದರೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತರಾಗಿ ಚಿಕಿತ್ಸೆ ಪಡೆದವರು, ಟಿಬಿ, ಕ್ಯಾನ್ಸರ್, ಹೃದಯ ಸಂಬಂಧಿ, ಬಿಪಿ, ಆರ್ಥರೈಟಿಸ್, ಪಾಶ್ರ್ವವಾಯು, ಸೇರಿದಂತೆ ಇತರೆ ಅನಾರೋಗ್ಯವಿರುವವರು ಸತ್ತರೆ ಕೋವಿಡ್ ಸಾವು ಎಂದು ಮರಣಪತ್ರ ನೀಡುವುದಿಲ್ಲ. ಸೋಂಕಿತರು ನಂತರ ನೆಗೆಟಿವ್ ಬಂದರೆ ಅವರನ್ನು ಕೋವಿಡ್ ಎಂದು ಪರಿಗಣಿಸುವುದಿಲ್ಲ. ಹೀಗೆ ಸರ್ಕಾರಗಳು ತಪ್ಪು ಸಾವಿನ ಲೆಕ್ಕ ನೀಡುತ್ತಿದೆ ಎಂದು ಆರೋಪಿಸಿದರು.

    ಈ ಯಾವುದೇ ಕಾಯಿಲೆ ಇಲ್ಲದವರು ಕೋವಿಡ್ ನಿಂದ ಸತ್ತಿದ್ದರೆ ಅದನ್ನು ಮಾತ್ರ ಕೋವಿಡ್ ಸಾವು ಎಂದು ಪರಿಗಣಿಸಿದ್ದಾರೆ. ಆ ರೀತಿ ಸತ್ತಿರುವವರು 37 ಸಾವಿರ ಜನ ಇದ್ದಾರೆ.ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ 42.80 ಲಕ್ಷ ಜನ ಭಾರತದಲ್ಲಿ ಕೋವಿಡ್ ನಿಂದ ಸತ್ತಿದ್ದಾರೆ ಎಂದು ವರದಿ ನೀಡಿದೆ. ಮೃತರಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಆದರೆ ಸರ್ಕಾರ ಕೇವಲ 1 ಲಕ್ಷ ಪರಿಹಾರ ಘೋಷಿಸಿದ್ದು, ಅದರಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಪರಿಹಾರ ಇಲ್ಲ, ಕುಟುಂಬದಲ್ಲಿ ಒಬ್ಬರಿಗೆ, ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಪರಿಹಾರ ಎಂಬ ಷರತ್ತುಗಳನ್ನು ಹಾಕಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಆಪರೇಷನ್‌ ಕಲಬುರಗಿ: ಖರ್ಗೆ, ದೇವೇಗೌಡರು ಚರ್ಚಿಸಿದ್ದಾರೆ ಎಂದ ಡಿ.ಕೆ. ಶಿವಕುಮಾರ್

    ದೇಶದಲ್ಲಿ 41 ಲಕ್ಷ ಜನ ಸತ್ತಿರುವುದನ್ನು ಮುಚ್ಚಿಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ. ಕೋವಿಡ್ ಮೃತರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ತಾಂತ್ರಿಕವಾಗಿ ಮಾರ್ಗಸೂಚಿ ಹೊರಡಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಈ ಅಂಕಿ ಅಂಶಗಳು ಕೇವಲ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟವರ ಸಂಖ್ಯೆಯಾದರೆ, ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲಿ ಮೃತಪಟ್ಟವರ ಸಂಖ್ಯೆ ಬೇರೆಯಾಗಿದೆ ಎಂದರು.

    ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ತನ್ನ ವೈಫಲ್ಯ ಮುಚ್ಚಿಹಾಕಲು ಸುಳ್ಳು ಸಾವಿನ ಲೆಕ್ಕ ನೀಡುತ್ತಿದೆ. ಅಧಿವೇಶನದಲ್ಲಿ ಕೋವಿಡ್ ವಿಚಾರ ಬಂದಾಗ ಈ ಎಲ್ಲ ವಿಚಾರವೂ ಪ್ರಸ್ತಾಪವಾಗಲಿದೆ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ಹೊರಹಾಕಿದರು.

  • ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ

    ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ

    – ಮಹಿಳೆ ಸಮಾಜದ ಕಣ್ಣು, ಮಹಿಳೆಯರಿಗೆ ಗೌರವದ ಸಂಕೇತ ಬಾಗಿನ ವಿತರಣೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು ಎಂದು ಕೆಪಿಸಿಸಿ ಶಾಸಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಜಯನಗರ, ಸಾರಕ್ಕಿ ಸಿಂಧೂರ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಸೇವಕ್ ಮಹಿಳಾ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ 500 ಮಹಿಳೆಯರಿಗೆ ಬಾಗಿನ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಜನಜಾಗೃತಿ ಅಭಿಯಾನ ಮಾಡಲಾಗಿದೆ. ಈ ಅಭಿಯಾನಕ್ಕೆ ರಾಮಲಿಂಗಾರೆಡ್ಡಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದನ್ನೂ ಓದಿ:ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!

    ರಾಮಲಿಂಗಾರೆಡ್ಡಿ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ್ದು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು. ಇಂದು ಸ್ವ-ಸಹಾಯ ಗುಂಪಿನಿಂದ ಮಹಿಳೆಯರಿಗೆ ಸಾಲ ಸೌಲಭ್ಯ, ಸ್ವಯಂ ಉದ್ಯೋಗ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸಲು ಸ್ವಸಹಾಯ ಸಂಘ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

    ಬಾಗಿನ ನೀಡುವುದು ಶುಭಕರದ ಸಂಕೇತ. ಮಹಿಳೆಯರಿಗೆ ಪ್ರಮುಖ ಹಬ್ಬಗಳಲ್ಲಿ ಸಂಪ್ರದಾಯ ಪ್ರಕಾರ ಅರಿಶಿನ, ಕುಂಕುಮ, ಹಸಿರು ಗಾಜಿನ ಬಳೆ ವಿವಿಧ ಶುಭಕರವಾದ ವಸ್ತುಗಳ ಕೊಟ್ಟು, ಶುಭಾಶಯ ಕೋರುವುದು ವಿಶೇಷವಾಗಿದೆ. ಜೆ.ಪಿ.ನಗರದಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ಮೂಲಕ ಒಂದೇ ಕುಟುಂಬದವರಂತೆ ಸಹಬಾಳ್ಮೆ ಮೂಲಕ ಬದುಕೋಣ ಎಂಬ ಸಂದೇಶ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ನನ್ನ ಹೃದಯ ನಿನ್ನ ಬಳಿ ಇದೆ – ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ ಕತ್ರಿನಾ ಪೋಸ್ಟ್

    ಕೊರೊನಾ ಸಾಂಕ್ರಮಿಕ ರೋಗ ಇನ್ನೂ ಮುಕ್ತವಾಗಿಲ್ಲ. ಜನರು ಜಾಗೃತಿಯಿಂದ ಗಣೇಶ ಹಬ್ಬವನ್ನು ಮನೆಯಲ್ಲಿ ಅಚರಣೆ ಮಾಡಬೇಕು. ಸಾಮೂಹಿಕ ಗಣೇಶ ಹಬ್ಬ ಅಚರಣೆಗೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ತರಬೇಕು ಎಂದು ಆಗ್ರಹಿಸಿದ್ದಾರೆ. ಪರಿಸರ ಉಳಿದರೆ ಮಾತ್ರ ಮನುಷ್ಯ ಉಳಿಯುತ್ತಾನೆ. ಈ ಬಾರಿ ಗಣೇಶ ಪ್ರತಿಷ್ಠಾಪನೆ ಮಾಡುವ ಮನೆಗಳಲ್ಲಿ ಬಣ್ಣದ ರಾಸಯನಿಕ ಗಣೇಶ ಮೂರ್ತಿಗಳು ಬೇಡ ಅದರ ಬದಲು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ತನ್ನಿ. ಮಣ್ಣಿನ ಗಣೇಶ ನೀರಿನಲ್ಲಿ ಕರಗಿದರೆ ಯಾವುದೇ ಹಾನಿಯಿಲ್ಲ, ಪರಿಸರವು ಉಳಿಯುತ್ತೆ ಎಂದು ಸಂದೇಶವನ್ನು ನೀಡಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಶಾಸಕಿ ಸೌಮ್ಯರೆಡ್ಡಿ, ಕಾಂಗ್ರೆಸ್ ನ ಮುಖಂಡ ಅರುಣ್ ಕುಮಾರ್ ಸೇವಕ್, ಮಹಿಳಾ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಮಂಜುಳಾ ಅರುಣ್ ಕುಮಾರ್, ಚಲನಚಿತ್ರ ನಟಿ ರಾಧ ಮತ್ತು ಡಾ||ಗೀತಾ ಅವರು ಉದ್ಘಾಟನೆಯನ್ನು ನೆರವೇರಿಸಿದರು. ಇದನ್ನೂ ಓದಿ: ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

  • ಜ್ಞಾನ ದೀವಿಗೆಗೆ 4 ಲಕ್ಷ ರೂ. ನೀಡಿದ ರಾಮಲಿಂಗಾರೆಡ್ಡಿ

    ಜ್ಞಾನ ದೀವಿಗೆಗೆ 4 ಲಕ್ಷ ರೂ. ನೀಡಿದ ರಾಮಲಿಂಗಾರೆಡ್ಡಿ

    ಬೆಂಗಳೂರು: ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಸರ್ಕಾರಿ ಶಾಲೆಗಳ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ‘ಜ್ಞಾನ ದೀವಿಗೆ’ ಕಾರ್ಯಕ್ರಮಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಹಲವು ಜನರು ಸಹಾಯಕ್ಕೆ ಧಾವಿಸುತ್ತಿದ್ದಾರೆ. ಅದೇ ರೀತಿ ಇದೀಗ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ 4 ಲಕ್ಷ ರೂ.ಗಳನ್ನು ನೀಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದು,  ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಜ್ಞಾನ ದೀವಿಗೆ’ ಅಭಿಯಾನಕ್ಕೆ ಕೈ ಜೋಡಿಸುವ ಸಲುವಾಗಿ ಪಬ್ಲಿಕ್ ಟಿವಿಗೆ ಇಂದು 4 ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿದೆ. ಸರ್ಕಾರಿ ಶಾಲೆಗಳ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ. ಈ ವೇಳೆ ಮಾಜಿ ಕಾರ್ಪೋರೇಟರ್ ಬಿ.ಮೋಹನ್ ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆಯ ಸಹೋಗದಲ್ಲಿ ನಡೆಯುತ್ತಿರುವ ಜ್ಞಾನ ದೀವಿಗೆ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸರ್ಕಾರಿ ಶಾಲೆಗಳ ಬಡ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಹಲವರು  ಟ್ಯಾಬ್ ಗಳ ಸಹಾಯ ಮಾಡುತ್ತಿದ್ದಾರೆ.

  • ಡ್ರಗ್ಸ್ ಪ್ರಕರಣದಲ್ಲಿ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ: ರಾಮಲಿಂಗಾರೆಡ್ಡಿ

    ಡ್ರಗ್ಸ್ ಪ್ರಕರಣದಲ್ಲಿ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ: ರಾಮಲಿಂಗಾರೆಡ್ಡಿ

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಕೇವಲ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಇಂದು ಆನೇಕಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣದಲ್ಲಿ ಹೆಣ್ಣು ಮಕ್ಕಳು ಬಿಟ್ಟರೆ ಇನ್ನೂ ಯಾರೂ ಕೂಡ ಇಲ್ವಾ? ಬರಿ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಅವರು ತಪ್ಪು ಮಾಡಿರಬಹುದು ನಾನು ಇಲ್ಲ ಎಂದು ಹೇಳುವುದಿಲ್ಲ. ಆದರೆ ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದರು.

    ನಾನು ಕೂಡ ಗೃಹ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನಾನು ಡ್ರಗ್ಸ್ ತಡೆಯ ಬಗ್ಗೆ ಸಾಕಷ್ಟು ಪ್ರಿಯಾರಿಟಿ ಕೊಟ್ಟಿದ್ದೆ. ಡ್ರಗ್ಸ್ ಬರುತ್ತಿರುವ ಮೂಲವನ್ನು ಕಂಟ್ರೋಲ್ ಮಾಡಬೇಕಿದೆ. ಪೊಲೀಸರಿಗೂ ಕೂಡ ಸಾಕಷ್ಟು ಮಾಹಿತಿ ಇದೆ. ಡ್ರಗ್ಸ್ ಪ್ರಕರಣ ಯುವಜನಾಂಗವನ್ನು ಹಾಳುಮಾಡುತ್ತಿದೆ. ಮೂರು ಜನರನ್ನೇ ಟಾರ್ಗೆಟ್ ಮಾಡುತ್ತಿರುವುದನ್ನು ನೋಡಿದರೆ ಈ ಪ್ರಕರಣ ಹಳ್ಳ ಹಿಡಿಯಬಹುದು. ಉಳಿದವರ ಬಂಧನ ಯಾಕೆ ಆಗುತ್ತಿಲ್ಲ ಗೃಹ ಮಂತ್ರಿಗಳಿಗೆ ಮಾಹಿತಿ ಇಲ್ಲವಾ ಎಂದು ಪ್ರಶ್ನೆ ಮಾಡಿದರು.

    ಇದೇ ವೇಳೆ ಆರ್.ಆರ್.ನಗರ ಚುನಾವಣಾ ಕೇಸ್ ವಿಚಾರವಾಗಿ ಮಾತನಾಡಿ, ಸಣ್ಣಪುಟ್ಟ ವಿಚಾರಕ್ಕೆ ಕೇಸು ದಾಖಲಿಸುವುದು ಸರಿಯಲ್ಲ. ಚಾಲಕನಿಗೆ ಗೊತ್ತಾಗದೆ 100 ಮೀಟರ್ ಒಳಗೆ ಹೋಗಿದ್ದಾರೆ. ಇನ್ನು ಮೇಲೆ ಬರಬಾರದು ಅಂತ ಪೊಲೀಸರು ಹೇಳಿದರೆ ಮುಗಿದುಹೋಗುತ್ತಿತ್ತು. ಅದನ್ನೇ ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಡಿಜೆ ಹಳ್ಳಿ ಕೆಜಿಹಳ್ಳಿ ಗಲಾಟೆ ವಿಚಾರ ಹೇಳಿಕೆ ನೀಡಿದ ರಾಮಲಿಂಗಾರೆಡ್ಡಿ, ಪೊಲೀಸರು ಸರಿಯಾಗಿ ನಿರ್ವಹಣೆ ಮಾಡದಿರುವುದೇ ಗಲಾಟೆಗೆ ಕಾರಣ. ಸರ್ಕಾರ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಸಂಪತ್ ರಾಜ್ ತಪ್ಪು ಮಾಡಿದರೆ ಕ್ರಮಕೈಗೊಳ್ಳಲಿ. ನವೀನನನ್ನು ಕೂಡಲೇ ಬಂಧಿಸಿದರೆ ಈ ಗಲಾಟೆ ಆಗುತ್ತಿರಲಿಲ್ಲ. ಆರ್ ಆರ್ ನಗರ ಚುನಾವಣೆಗೆ ಒಂದು ವಾರ್ಡಿಗೆ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಕೂಡ ನೇಮಕ ಮಾಡಲಾಗಿದೆ. ಅವರು ಕೂಡ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದರು.

  • ಸುಳ್ಳು ಹೇಳುವುದಕ್ಕೆ ನೊಬೆಲ್ ಪ್ರಶಸ್ತಿ ನೀಡಿದರೆ ಮೊದಲು ಮೋದಿಗೆ ಬರುತ್ತೆ- ರಾಮಲಿಂಗಾರೆಡ್ಡಿ

    ಸುಳ್ಳು ಹೇಳುವುದಕ್ಕೆ ನೊಬೆಲ್ ಪ್ರಶಸ್ತಿ ನೀಡಿದರೆ ಮೊದಲು ಮೋದಿಗೆ ಬರುತ್ತೆ- ರಾಮಲಿಂಗಾರೆಡ್ಡಿ

    ಬೆಂಗಳೂರು: ಸುಳ್ಳು ಹೇಳುವರಿಗೆ ನೊಬೆಲ್ ಪ್ರಶಸ್ತಿ ಕೊಟ್ಟರೆ ಮೊದಲು ಪ್ರಧಾನಿ ನರೇಂದ್ರ ಮೋದಿಗೆ ನೀಡಬೇಕು. ಈ ಕುರಿತು ನಾವೆಲ್ಲ ಸೇರಿ ಶಿಫಾರಸು ಮಾಡೋಣ ಎಂದು ಮಾಜಿ ಸಚಿವ ರಾಮಲಿಂಗ ರೆಡ್ಡಿ ವ್ಯಂಗ್ಯವಾಡಿದ್ದಾರೆ.

    ಎನ್‌ಆರ್‌ಸಿ, ಸಿಎಎ ಜಾರಿ ಖಂಡಿಸಿ ಮುಸ್ಲಿಂ ಸಂಘಟನೆಗಳು ನಗರದ ಜಯನಗರದ ಈದ್ಗಾ ಮೈದಾನದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಕಿಡಿಕಾರಿದರು. ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಜನರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

    ಎರಡನೇ ಬಾರಿಗೆ ದೇಶದ ಜನತೆ ದೊಡ್ಡ ಮಟ್ಟದಲ್ಲಿ ಮತ ಹಾಕಿ ಗೆಲ್ಲಿಸಿಕೊಟ್ಟರು. ಇದೇ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ತಲೆಗೇರಿದೆ. ಹೀಗಾಗಿ ಆನೆ ನಡೆದಿದ್ದೇ ದಾರಿ ಎಂಬಂತೆ ತಾವು ಮಾಡುವುದೇ ಸರಿ ಎಂದು ಇಷ್ಟ ಬಂದಂತೆ ಮಾಡುತ್ತಿದ್ದಾರೆ. ಹಿಂದೂಗಳಿಗೆ ಪೌರತ್ವ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಅವರಿಗೂ ಪೌರತ್ವ ನೀಡಲಿ. ಆದರೆ ದೇಶದಲ್ಲಿ ನೂರಾರು ವರ್ಷಗಳಿಂದ ಇರುವ ಜನರಿಗೆ ತೊಂದರೆ ನೀಡಬೇಡಿ ಎಂದರು.

    ಬಿಜೆಪಿ ಎಂದರೆ ಬುರುಡೆ ಜನರ ಪಕ್ಷ, ಬರೀ ಸುಳ್ಳು ಹೇಳುವುದು ಅವರ ನಿತ್ಯ ಕಾಯಕವಾಗಿ ಬಿಟ್ಟಿದೆ. ಬಿಜೆಪಿಯವರು ನೂರು ಸುಳ್ಳು ಹೇಳಿ ಒಂದು ನಿಜ ಮಾಡುವ ವಂಶಸ್ಥರು. ಬಿಜೆಪಿಯ ಯಾರೂ ಸಹ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ದೇಶದ ದುರದೃಷ್ಟ ಎಂದರೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದವರ ಕೈಯಲ್ಲಿ ಅಧಿಕಾರ ಇದೆ. ಮಾತೆತ್ತಿದರೆ ಪಾಕಿಸ್ತಾನ ಎನ್ನುವ ಮೋದಿ ಯಾಕೆ ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದರು? ಮೋದಿ ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದರು. ಆದರೆ ಯಾರ ಖಾತೆಗೆ ಹಣ ಬಂದಿದೆಯೇ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು. ದೇಶದಲ್ಲಿ ಆರ್ಥಿಕ ಸ್ಥಿತಿ ಕುಂಠಿತವಾಗಿದೆ, ಗ್ಯಾಸ್, ಪೆಟ್ರೋಲ್ ಬೆಲೆ ಹೆಚ್ಚಾಗ್ತಿದೆ. ಇದನ್ನು ಮರೆ ಮಾಚಲು ಶಾ, ಮೋದಿ ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

  • ಅನುದಾನ ಹಂಚಿಕೆಯಲ್ಲಿ ತಾರತಮ್ಯ – ಕಾಂಗ್ರೆಸ್‍ನಿಂದ ಪ್ರತಿಭಟನೆ

    ಅನುದಾನ ಹಂಚಿಕೆಯಲ್ಲಿ ತಾರತಮ್ಯ – ಕಾಂಗ್ರೆಸ್‍ನಿಂದ ಪ್ರತಿಭಟನೆ

    ಬೆಂಗಳೂರು: ಬಿಜೆಪಿ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದೆ ಎಂದು ಆರೋಪಿಸಿ ಬಿಟಿಎಂ ಲೇಔಟ್ ಹಾಗೂ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ನಗರದ ಟೌನ್‍ಹಾಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

    ಬಿಟಿಎಮ್ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರ 387 ಕೋಟಿ ರೂ.ಅನುದಾನ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ 234 ಕೋಟಿ ರೂ.ಗೆ ಕಡಿತ ಮಾಡಿ ಕೇವಲ 152.84 ಕೋಟಿ ರೂ. ನಿಗದಿಪಡಿಸಿದೆ. ಹಾಗೆ ಜಯನಗರ ಕ್ಷೇತ್ರಕ್ಕೆ 194 ಕೋಟಿ ರೂ. ಅನುದಾನ ಕಡಿತಗೊಳಿಸಿ ಕೇವಲ 122 ಕೋಟಿ ರೂ. ಕೊಡಲಾಗಿದೆ. ಇದನ್ನು ವಿರೋಧಿಸಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಸೌಮ್ಯರೆಡ್ಡಿ, ರಾಜ್ಯಸಭಾ ಸದಸ್ಯ ಹರಿಪ್ರಸಾದ್ ನೇತೃತ್ವದಲ್ಲಿ ಬಿಬಿಎಂಪಿ ಸದಸ್ಯರು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.

    ಈ ವೇಳೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಭ್ರಷ್ಟ ಬಿಜೆಪಿಯನ್ನು ಸೋಲಿಸಿ ನಾವು ಅಧಿಕಾರಕ್ಕೆ ಬಂದಿದ್ದೆವು. ಆ ಸಂದರ್ಭದಲ್ಲಿ ನಾವು ಯಾವುದೇ ತಾರತಮ್ಯ, ದ್ವೇಷದ ರಾಜಕಾರಣ ಮಾಡಿಲ್ಲ. ಇಂದು ಬಿಜೆಪಿ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ನಮ್ಮ ಬಜೆಟ್ ತಡೆ ಹಿಡಿದು, ಅನುದಾನ ನೀಡಿಲ್ಲ. ಡಿಪಿಆರ್, ವರ್ಕ್ ಆರ್ಡರ್ ಎಲ್ಲಾ ಆಗಿದ್ದರೂ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ 5 ಕ್ಷೇತ್ರಗಳಿಗೆ 2700 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಆದರೆ ನಮ್ಮ ಕ್ಷೇತ್ರಗಳಿಗೆ ಅನ್ಯಾಯ ಮಾಡಿದ್ದು ಸರಿಯೇ ಎಂದು ಮಾಜಿ ಸಚಿವ ಪ್ರಶ್ನಿಸಿದರು.

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಅನುದಾನವನ್ನು ಬಿಜೆಪಿ ಸರ್ಕಾರ ಬಂದಮೇಲೆ ಕಡಿತ ಮಾಡಿ, ರಾಜಿನಾಮೆ ನೀಡಿದ ಶಾಸಕರ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಾಗಿದೆ. ಬಿಜೆಪಿ ಶಾಸಕರಿಗೆ ಸಾವಿರ ಕೋಟಿ ರೂ. ಅನುದಾನ ಕೊಡಲಿ ಆದರೆ ನಮ್ಮ ಅನುದಾನ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಎಲ್ಲ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ ಎಂದರು ಆಕ್ರೋಶ ವ್ಯಕ್ತಪಡಿಸಿದರು.

    ಈಜೀಪುರ ಮೇಲ್ಸೇತುವೆ ಕೆಲಸ ನಿಂತು ಹೋಗಿದೆ. ಬಿಜೆಪಿಗರಲ್ಲಿ ಅಧಿಕಾರದ ಮದ ತುಂಬಿದೆ. ವೈಟ್ ಟಾಪಿಂಗ್ ಬೇಡ, ಹೆಚ್ಚು ವೆಚ್ಚವಾಗುತ್ತದೆ ಕಿತ್ತು ಹಾಕಿ ಎಂದು ನಾವೇ ಹೇಳಿದ್ದೆವು. ಆದರೆ ಉತ್ತಮ ಟಾರ್ ರಸ್ತೆ ನೀಡಲಿ. ಬೆಂಗಳೂರು ಶಾಸಕರೆಲ್ಲ ಸೇರಿ ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ, ಅಧಿವೇಶನದ ಸಮಯದಲ್ಲಿ ವಿಧಾನಸೌಧದ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

    ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಆಪರೇಷನ್ ಕಮಲ ನಡೆಸಲು ಸಾವಿರಾರು ಕೋಟಿ ರೂ. ಖರ್ಚು ಮಾಡಿದ್ದಾರೆ. ಆದರೆ ಈಗ ನೆರೆ ಪರಿಹಾರ ನೀಡುವುದಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ ಎನ್ನುತ್ತಿದ್ದಾರೆ. ನಮ್ಮ ಕ್ಷೇತ್ರದ 316 ಕೋಟಿ ರೂ. ಅನುದಾನದಲ್ಲಿ ಕಡಿತ ಮಾಡಿ ಕೇವಲ 122 ಕೋಟಿ ರೂ.ನೀಡಿದ್ದಾರೆ. ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡಿದ್ದಾರೆ. ಅಲ್ಲದೆ ಸಿಎಂ ನಗರ ಪ್ರದಕ್ಷಿಣೆ ವೇಳೆಯೂ ಸ್ಥಳೀಯ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.