Tag: Ramanath Rai

  • ಜನಾರ್ದನ ಪೂಜಾರಿಯವರ ಕಾಲು ಮುಟ್ಟಿ ಆಶೀರ್ವಾದ ಕೋರಿದ ರಮಾನಾಥ ರೈ

    ಜನಾರ್ದನ ಪೂಜಾರಿಯವರ ಕಾಲು ಮುಟ್ಟಿ ಆಶೀರ್ವಾದ ಕೋರಿದ ರಮಾನಾಥ ರೈ

    ಮಂಗಳೂರು: ಬಂಟ್ವಾಳ ಕ್ಷೇತ್ರದ ಶಾಸಕರು ಹಾಗೂ ಈ ಬಾರಿ ಅಭ್ಯರ್ಥಿಯೂ ಆಗಿರುವ ಸಚಿವ ರಮಾನಾಥ ರೈ ಅವರು ಇಂದು ಹಿರಿಯ ಕಾಂಗ್ರೆಸಿಗ ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದ್ದರು.

    ನಾಳೆ ನಾಮಪತ್ರ ಸಲ್ಲಿಸಲಿರುವ ಸಚಿವರು ಅದಕ್ಕೂ ಮುನ್ನ ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದರು. ರಮಾನಾಥ ರೈ ತಮ್ಮನ್ನು ನಿಂದಿಸಿದರೆಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಅತ್ತಿದ್ದರು. ಇದೇ ವಿಚಾರವಾಗಿ ಕ್ಷೇತ್ರದ ಬಿಲ್ಲವ ಮತದಾರರಲ್ಲಿ ರೈ ವಿರುದ್ಧ ಆಕ್ರೋಶ ಮೂಡುವಂತಾಗಿತ್ತು.

    ಪೂಜಾರಿಯವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದೇ ರಮಾನಾಥ ರೈ ಎಂಬ ಆರೋಪವೂ ಕೇಳಿಬಂದಿತ್ತು. ಆ ನಂತರ ಒಂದು ವರ್ಷ ಕಾಲ ಜನಾರ್ದನ ಪೂಜಾರಿ ಮತ್ತು ರಮಾನಾಥ ರೈ ನಡುವೆ ಅಂತರ ಕಂಡುಬಂದಿತ್ತು.

    ಚುನಾವಣೆ ಹೊಸ್ತಿಲಲ್ಲಿ ಸಚಿವ ರಮಾನಾಥ ರೈಯವರು ಜನಾರ್ದನ ಪೂಜಾರಿಯವರ ಕಾಲು ಮುಟ್ಟಿ ಆಶೀರ್ವಾದ ಕೋರಿದ್ದಾರೆ. ವೈಮನಸ್ಸು ಏನಿದ್ದರೂ, ಪೂಜಾರಿಯವರು ರಮಾನಾಥ ರೈ ಭೇಟಿ ಸಂದರ್ಭ ತೋರಿಸಿಕೊಂಡಿಲ್ಲ. ಬೆಂಬಲಿಗರ ಜೊತೆ ಮನೆಗೆ ಬಂದ ರೈ ಅವರನ್ನು ವಾಹನದ ವರೆಗೂ ಬಂದು ಬೀಳ್ಕೊಟ್ಟಿದ್ದಾರೆ.

  • ರಾಹುಲ್ ಗಾಂಧಿಯದ್ದು ನೆಹರೂ ರಕ್ತ, ಟೀಕೆ ಮಾಡುವ ಬಿಜೆಪಿ ಬ್ರಿಟಿಷರ ಜೊತೆ ಕೈ ಜೋಡಿಸಿತ್ತು: ರಮಾನಾಥ ರೈ ಗರಂ

    ರಾಹುಲ್ ಗಾಂಧಿಯದ್ದು ನೆಹರೂ ರಕ್ತ, ಟೀಕೆ ಮಾಡುವ ಬಿಜೆಪಿ ಬ್ರಿಟಿಷರ ಜೊತೆ ಕೈ ಜೋಡಿಸಿತ್ತು: ರಮಾನಾಥ ರೈ ಗರಂ

    ಉಡುಪಿ: ದೇಶದಲ್ಲಿ ಅಭಿಪ್ರಾಯ ಬೇಧವಿದೆ. ತಮ್ಮ ಸ್ವಂತ ಅಭಿಪ್ರಾಯ ಮಂಡಿಸಿದವರಿಗೆ ಸಸ್ಪೆಂಡ್ ಶಿಕ್ಷೆ ಎಂದು ಅರಣ್ಯ ಸಚಿವ ರಮಾನಾಥ ರೈ ತಿರುಗೇಟು ನೀಡಿದ್ದಾರೆ.

    ಅರಣ್ಯ ಇಲಾಖೆಯ ವತಿಯಿಂದ ನಿರ್ಮಾಣವಾದ ಸಾಲುಮರದ ತಿಮ್ಮಕ್ಕ ಪಾರ್ಕ್ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು `ಬಂಡಲ್ ಶಾ’ ಎಂದು ಟೀಕಿಸಿದ್ದ ದ.ಕ ಜಿಲ್ಲೆ ಪುತ್ತೂರಿನ ಕಾನೂನು ವಿದ್ಯಾರ್ಥಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇದು ಸರಿಯಲ್ಲ. ವಿದ್ಯಾರ್ಥಿಯಿಂದ ತಪ್ಪಾಗಿದ್ದರೆ ಕೂತು ಪರಿಹರಿಸಬಹುದಿತ್ತು ಅಂತ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಶಿಕ್ಷಣ ಸಂಸ್ಥೆ ಸಮಾಜವನ್ನು ಸುಶಿಕ್ಷಿತರನ್ನಾಗಿಸಬೇಕು. ಅದು ಬಿಟ್ಟು ಸಸ್ಪೆಂಡ್ ಮಾಡಿದ್ದಾರೆ. ಅದು ಖಾಸಗಿ ಶಿಕ್ಷಣ ಸಂಸ್ಥೆ, ಅವರ ವಿವೇಚನೆ ಮೇಲೆ ಕ್ರಮ ಕೈಗೊಂಡಿದ್ದಾರೆ. ಅಸಹಿಷ್ಣುತೆ, ಅಭಿವ್ಯಕ್ತಿ ಸ್ವಾತಂತ್ಯ ವಿಚಾರ ಮಾತಾಡಿದಾಗ ಟೀಕಿಸುತ್ತಾರೆ. ಆದರೆ ಅಂತಹ ವಾತಾವರಣ ದೇಶದಲ್ಲಿರುವುದು ನಿಜ ಅಂದಿದ್ದಾರೆ.

    ಶೋಭಾ ಕರಂದ್ಲಾಜೆಗೆ ಟಾಂಗ್: ಇದೇ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸವನ್ನು ಟೀಕಿಸಿದ್ದ ಶೋಭಾ ಕರಂದ್ಲಾಜೆಗೆ ರೈ ಟಾಂಗೆ ಕೊಟ್ಟರು. ರಾಹುಲ್ ಮೋತಿಲಾಲ್ ನೆಹರೂ ಕುಟುಂಬದ ರಕ್ತ. ರಾಹುಲ್ ಗಾಂಧಿಗೂ, ಬೇರೆಯವರಿಗೂ ಹೋಲಿಕೆ ಇಲ್ಲ. ಪಾರಂಪರಿಕ ಇತಿಹಾಸ ಇರುವುದು ಯಾರಿಗೆ ಅನ್ನೋದು ಜನರು ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟದ ಸಂದರ್ಭ ಬಿಜೆಪಿ, ಸಂಘ ಪರಿವಾರ ಬ್ರಿಟಿಷರ ಜೊತೆ ಕೈ ಜೋಡಿಸಿತ್ತು. ಕಾಂಗ್ರೆಸ್ ನಲ್ಲಿ ಯಾರೋ ಒಬ್ಬ ತಪ್ಪು ಮಾಡಿದ್ದಾರೆ, ಅವರಿಗೆ ತಕ್ಕ ಶಾಸ್ತಿಯಾಗಿದೆ. ಹಾಗೆ ನೋಡುವುದಾದರೆ ಬಾಳಿಗಾ ಕೊಂದ ನರೇಶ್ ಶೆಣೈ ಗೆ ಬಿಜೆಪಿ ವಿಐಪಿ ಪಾಸ್ ನೀಡುತ್ತೆ ಎಂದು ಕುಟುಕಿದರು.

    ನರೇಂದ್ರ ಮೋದಿ ಜೊತೆ ಶೆಣೈ ಒಟ್ಟಿಗೆ ತಿರುಗಾಡುತ್ತಾರೆ. ಮೊದಲು ಬಿಜೆಪಿಗರು ಏನು ಎನ್ನುವುದು ತಿಳಿದುಕೊಳ್ಳಲಿ. ರಾಹುಲ್ ಗಾಂಧಿ ದೇಶಕ್ಕಾಗಿ ಸರ್ವಸ್ವವನ್ನು ಕೊಟ್ಟ ಕುಟುಂಬದಿಂದ ಬಂದವರು. ಸ್ವಾತಂತ್ರ್ಯ ಹೋರಾಟ ಬಿಜೆಪಿ ದೃಷ್ಟಿಯಲ್ಲಿ ಸಣ್ಣದಿರಬಹುದು. ಬಿಜೆಪಿಗರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ ಇರುವವರು. ಯಾಕೆಂದರೆ ಬಿಜೆಪಿಗರು ಬ್ರಿಟಿಷರ ಜೊತೆ ಕೈ ಜೋಡಿಸಿದ್ದವರು ಎಂದು ಮಾತಿನಲ್ಲೇ ಚಾಟಿ ಬೀಸಿದರು.

  • ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    – ರೈ ವಿರುದ್ಧ ರಾಹುಲ್‍ಗೆ ದೂರು

    ಬೆಂಗಳೂರು: ಕಾಡಿನ ರಕ್ಷಣೆ ಮಾಡಬೇಕಾದ ಅರಣ್ಯ ಸಚಿವ ರಮಾನಾಥ್ ರೈ ಟಿಂಬರ್ ಮಾಫಿಯಾಗೆ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಹಿಂದೆ ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕೈ ಹಾಕಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ರು. ಮರ ಕಡಿಯಲಾಗುತ್ತೆ ಮತ್ತು ಪರಿಸರ ನಾಶವಾಗುತ್ತೆ ಅನ್ನೋ ಕೂಗು ಗಟ್ಟಿಯಾದಾಗ ಸರ್ಕಾರ ಈ ಯೋಜನೆಯನ್ನ ಕೈಬಿಟ್ಟಿತ್ತು.

    ಈಗ ಸದ್ದಿಲ್ಲದೇ 50ಕ್ಕೂ ಹೆಚ್ಚು ಜಾತಿಯ ಮರಗಳನ್ನು ಯಾರ ಅನುಮತಿಗೂ ಕಾಯದೆ ಕಡಿಯಬಹುದು ಅಂತಾ ಮರಗಳ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದು ಆದೇಶ ಹೊರಡಿಸಲು ಸಜ್ಜಾಗಿದೆ. ಅಲ್ಲದೇ ಇದಕ್ಕಾಗಿ ಮಸೂದೆಯನ್ನು ಮಂಡಿಸಲಾಗಿದೆ. ಹಳ್ಳಿಯ ರೈತರ ಹಿತದೃಷ್ಟಿಯಿಂದ ಈ ಕಾಯ್ದೆ ಅಂತಾ ಅರಣ್ಯ ಸಚಿವ ರಮಾನಾಥ್ ರೈ ಮರ ಕಡಿಯಲು ಅಸ್ತ್ರ ಹಿಡಿದಿದ್ದಾರೆ. ಸರ್ಕಾರ ಗುಲ್‍ಮೋಹರ್, ಆಫ್ರಿಕನ್ ಟ್ಯೂಲಿಪ್, ಲಕ್ಷ್ಮಿತರು ಮರ, ನುಗ್ಗೇಕಾಯಿ ಮರ, ಬಾಗೇಮರ ಸೇರಿದಂತೆ ಐವತ್ತಕ್ಕೂ ಹೆಚ್ಚು ಜಾತಿಯ ಮರಗಳ ಹೆಸರನ್ನು ಲಿಸ್ಟ್ ಮಾಡಿಕೊಂಡಿದೆ.

    ಈ ಸಂಬಂಧ ರಮಾನಾಥ್ ರೈ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ದಾರೆ. ಈ ಕಾಯ್ದೆ ಜಾರಿಯಾದ್ರೆ ದೊಡ್ಡ ಹೋರಾಟವಾಗಲಿದೆ. ನಿಮ್ಮ ಸಚಿವರಿಗೆ ಬುದ್ಧಿ ಹೇಳಿ ಅಂತಾ ಪರಿಸರ ಪ್ರೇಮಿ ನಿಶಾಂತ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

    ಸರ್ಕಾರ ಟಿಂಬರ್ ಮಾಫಿಯಾಗೆ ಕುಮ್ಮಕ್ಕು ಕೊಡೋಕೆ ಈ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ ಅನ್ನೋ ಅನುಮಾನ ಮೂಡಿದೆ.

  • ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮತ್ತೆ ಕಣ್ಣೀರು!

    ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮತ್ತೆ ಕಣ್ಣೀರು!

    ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮತ್ತೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೀರಾ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ.

    ಅರಣ್ಯ ಸಚಿವ ರಮಾನಾಥ ರೈ ಆಡಿದ ಅಶ್ಲೀಲ ಮಾತುಗಳನ್ನು ನೆನೆದು ಭಾಷಣದ ಆರಂಭದಲ್ಲೇ ಗಳಗಳನೇ ಅತ್ತಿದ್ದು, ತನ್ನ ವಿರುದ್ಧ ಅವಾಚ್ಯ ಶಬ್ಧ ಬಳಸಿ ನಿಂದಿಸಿದರೆಂಬ ವಿಚಾರವನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿಕೊಂಡು ಅತ್ತುಬಿಟ್ಟಿದ್ದಾರೆ.

    ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪೂಜಾರಿಯವರು ತನ್ನ ತಾಯಿ ಹೆಸರು ಹೇಳಿಕೊಂಡು ಗದ್ಗದಿತರಾಗಿದ್ದು, ಇದು ಸತ್ಯ ನ್ಯಾಯಕ್ಕಾಗಿ ಹೋರಾಡಿದ ಕೋಟಿ ಚೆನ್ನಯರ ಗರೋಡಿ. ನನ್ನ ತಾಯಿ ಚೆನ್ನಮ್ಮ. ತಾಯಿಯ ತಾಯಿ ನನ್ನ ಅಜ್ಜಿ ದೇಯಿ ಬೈದೆತಿ. ಅದೇ ರೀತಿ ಕೋಟಿ ಚೆನ್ನಯರ ತಾಯಿಯೂ ದೇಯಿ ಬೈದೆತಿ. ಹಾಗಾದ್ರೆ ರಮಾನಾಥ ರೈ ಹೇಳಿದಂತೆ ನನ್ನ ತಾಯಿ ಸೂಳೆ, ನಾನು ಸೂಳೆಯ ಮಗ ಎಂಬ ಪ್ರಶ್ನೆ ಮುಂದಿಟ್ಟು ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ.

    ಮಂಗಳೂರಲ್ಲಿ ನಡೆದ ಕೋಟಿ-ಚೆನ್ನಯ್ಯ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಸಾವಿರಾರು ಜನ ಸೇರಿದ್ದ ಸಭೆಯಲ್ಲಿ 80 ವರ್ಷದ ಹಿರಿಯರಾದ ಜನಾರ್ದನ ಪೂಜಾರಿಯವರು ಅತ್ತು ಕರೆದಾಗ, ವೇದಿಕೆ ಮೇಲಿದ್ದ ಮಂಗಳೂರು ಪಾಲಿಕೆ ಮೇಯರ್ ಕವಿತಾ ಸನಿಲ್ ಕೂಡಾ ಕಣ್ಣೀರು ಹಾಕಿದ್ದಾರೆ. ವೇದಿಕೆಯಲ್ಲಿ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.

    ಬಂಟ್ವಾಳದಲ್ಲಿ ನಡೆದ ಬಿಲ್ಲವ ಸಂಘದ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಮತ್ತು ಅವರ ಆಪ್ತ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಪಾಲ್ಗೊಂಡಿದ್ದರು. ಹರಿಕೃಷ್ಣ ಬಂಟ್ವಾಳ್ ವೇದಿಕೆಯಲ್ಲಿ ಮಾತನಾಡುತ್ತಾ, ಸಚಿವ ರಮಾನಾಥ ರೈ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಹಿರಿಯರಾದ ಜನಾರ್ದನ ಪೂಜಾರಿಗೆ ಅವಮಾನಿಸಿದ್ದು, ಇಡೀ ಬಿಲ್ಲವ ಸಮುದಾಯಕ್ಕೆ ಮಾಡಿದ ಅವಮಾನ. ಪೂಜಾರಿಯವರೆಂದ್ರೆ ತನಗೆ ತಂದೆ ಸಮಾನ. ರಮಾನಾಥ ರೈ ತಮ್ಮನ್ನು ತೀರಾ ಅವಾಚ್ಯವಾಗಿ ನಿಂದಿಸಿದ್ದು ಎಷ್ಟು ಬೇಸರವಾಗಿತ್ತು ಅಂದ್ರೆ ಅವರಿಗಷ್ಟೆ ಗೊತ್ತು ಅನ್ನುವಾಗ ಪೂಜಾರಿಯವರು ದುಃಖ ತಾಳಲಾರದೆ ವೇದಿಕೆಯಲ್ಲೇ ಅತ್ತು ಬಿಟ್ಟಿದ್ದರು.

    ಕಂಕನಾಡಿಯ ಪ್ರಸಿದ್ಧ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರದಂದು ಹಸಿರು ಹೊರೆಕಾಣಿಕೆಯ ಉದ್ಘಾಟನೆಯ ಕಾರ್ಯಕ್ರಮ ನಡೆದಿತ್ತು. ಜನಾರ್ದನ ಪೂಜಾರಿ, ಶಾಸಕ ಜೆರ್ ಲೋಬೋ ಸೇರಿದಂತೆ ಚಿತ್ರನಟ ರಾಜಶೇಖರ್ ಕೋಟ್ಯಾನ್ ಕೂಡಾ ಭಾಗವಹಿಸಿದ್ದರು. ಜನಾರ್ದನ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ರಾಜಶೇಖರ್ ಕೋಟ್ಯಾನ್ ದೀಪ ಬೆಳಗಲು ಮುಂದಾಗಿದ್ದು, ಈ ಸಂಧರ್ಭದಲ್ಲಿ ಜನಾರ್ದನ ಪೂಜಾರಿ ಕೋಟ್ಯಾರ್ ರನ್ನು ತಡೆದಿದ್ದರು. ನನ್ನನ್ನು ಅವ್ಯಾಚವಾಗಿ ನಿಂದಿಸಿದವರ ಪರವಾಗಿ ನೀವು ಇದ್ದೀರಿ. ನೀವು ತಪ್ಪು ಮಾಡಿದ್ದೀರಿ. ನನ್ನ ತಾಯಿಯನ್ನೇ ಅವಮಾನಿಸಿದ ಜನರ ಹಿಂದೆ ಹೋಗಿದ್ದೀರಿ. ಇದನ್ನು ಕ್ಷಮಿಸಲು ಸಾಧ್ಯ ಇಲ್ಲ. ದೇವರಲ್ಲಿ ತಪ್ಪಾಯ್ತು ಎಂದು ಕ್ಷಮೆ ಕೇಳಿದ ಬಳಿಕ ಈ ಕ್ಷೇತ್ರಕ್ಕೆ ಬನ್ನಿ ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಪೂಜಾರಿಯವರ ಈ ಮಾತನ್ನು ಕೇಳಿ ನೆರೆದಿದ್ದವರೆಲ್ಲಾ ವಿಚಲಿತರಾಗಿದ್ದರು. ಇದನ್ನು ಓದಿ: ನಾನು ಆರು ಬಾರಿ ಶಾಸಕನಾಗಲು ಮುಸ್ಲಿಂ ಸಮುದಾಯದ ಜಾತ್ಯತೀತ ನಿಲುವೇ ಕಾರಣ : ರಮಾನಾಥ ರೈ

    https://www.youtube.com/watch?v=3tD5oKIc3EY

    https://www.youtube.com/watch?v=PJ8h1JAxwDk

  • ಬಹಿರಂಗ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು

    ಬಹಿರಂಗ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು

    ಮಂಗಳೂರು: ಸಚಿವ ರಮಾನಾಥ ರೈ ತನ್ನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಚಾರದ ಬಗ್ಗೆ ತಿಳಿದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೀರಾ ಗದ್ಗದಿತರಾಗಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.

    ಬಂಟ್ವಾಳದಲ್ಲಿ ನಡೆದ ಬಿಲ್ಲವ ಸಂಘದ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಮತ್ತು ಅವರ ಆಪ್ತ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಪಾಲ್ಗೊಂಡಿದ್ದರು. ಹರಿಕೃಷ್ಣ ಬಂಟ್ವಾಳ್ ವೇದಿಕೆಯಲ್ಲಿ ಮಾತನಾಡುತ್ತಾ, ಸಚಿವ ರಮಾನಾಥ ರೈ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ರು. ಹಿರಿಯರಾದ ಜನಾರ್ದನ ಪೂಜಾರಿಗೆ ಅವಮಾನಿಸಿದ್ದು ಇಡೀ ಬಿಲ್ಲವ ಸಮುದಾಯಕ್ಕೆ ಮಾಡಿದ ಅವಮಾನ. ಪೂಜಾರಿಯವರೆಂದ್ರೆ ತನಗೆ ತಂದೆ ಸಮಾನ. ರಮಾನಾಥ ರೈ ತಮ್ಮನ್ನು ತೀರಾ ಅವಾಚ್ಯವಾಗಿ ನಿಂದಿಸಿದ್ದು ಎಷ್ಟು ಬೇಸರವಾಗಿತ್ತು ಅಂದ್ರೆ ಅವರಿಗಷ್ಟೆ ಗೊತ್ತು ಅನ್ನುವಾಗ ಪೂಜಾರಿಯವರು ದುಃಖ ತಾಳಲಾರದೆ ವೇದಿಕೆಯಲ್ಲೇ ಅತ್ತು ಬಿಟ್ಟರು.

     

    ಈ ವಿದ್ಯಮಾನ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಚಿವ ರಮಾನಾಥ ರೈ ವಿರುದ್ಧ ಆಕ್ರೋಶದ ಮಾತು ಕೇಳಿಬಂದಿದೆ. ನಾಲ್ಕು ತಿಂಗಳ ಹಿಂದೆ ಸಚಿವ ರಮಾನಾಥ ರೈ ಮದುವೆ ಕಾರ್ಯಕ್ರಮವೊಂದರಲ್ಲಿ ಪರೋಕ್ಷವಾಗಿ ನಿಂದಿಸಿ ಮಾತನಾಡಿದ್ದು ಕಾಂಗ್ರೆಸಿಗರಲ್ಲೇ ಅಸಮಾಧಾನ ಸೃಷ್ಟಿಸಿತ್ತು.

    ಕಂಕನಾಡಿಯ ಪ್ರಸಿದ್ಧ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರದಂದು ಹಸಿರು ಹೊರೆಕಾಣಿಕೆಯ ಉದ್ಘಾಟನೆಯ ಕಾರ್ಯಕ್ರಮ ನಡೆದಿದ್ದು, ಜನಾರ್ದನ ಪೂಜಾರಿ, ಶಾಸಕ ಜೆರ್ ಲೋಬೋ ಸೇರಿದಂತೆ ಚಿತ್ರನಟ ರಾಜಶೇಖರ್ ಕೋಟ್ಯಾನ್ ಕೂಡಾ ಭಾಗವಹಿಸಿದ್ದರು. ಜನಾರ್ದನ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ರಾಜಶೇಖರ್ ಕೋಟ್ಯಾನ್ ದೀಪ ಬೆಳಗಲು ಮುಂದಾಗಿದ್ದು, ಈ ಸಂಧರ್ಭದಲ್ಲಿ ಜನಾರ್ದನ ಪೂಜಾರಿ ಕೋಟ್ಯಾರ್ ರನ್ನು ತಡೆದರು.

    ನನ್ನನ್ನು ಅವ್ಯಾಚವಾಗಿ ನಿಂದಿಸಿದವರ ಪರವಾಗಿ ನೀವು ಇದ್ದೀರಿ. ನೀವು ತಪ್ಪು ಮಾಡಿದ್ದೀರಿ. ನನ್ನ ತಾಯಿಯನ್ನೇ ಅವಮಾನಿಸಿದ ಜನರ ಹಿಂದೆ ಹೋಗಿದ್ದೀರಿ. ಇದನ್ನು ಕ್ಷಮಿಸಲು ಸಾಧ್ಯ ಇಲ್ಲ. ದೇವರಲ್ಲಿ ತಪ್ಪಾಯ್ತು ಎಂದು ಕ್ಷಮೆ ಕೇಳಿದ ಬಳಿಕ ಈ ಕ್ಷೇತ್ರಕ್ಕೆ ಬನ್ನಿ ಎಂದು ಕ್ಲಾಸ್ ತೆಗೆದುಕೊಂಡರು. ಪೂಜಾರಿಯವರ ಈ ಮಾತನ್ನು ಕೇಳಿ ನೆರೆದಿದ್ದವರೆಲ್ಲಾ ವಿಚಲಿತರಾದ್ರು.

  • ಕಲ್ಲಡ್ಕ ಪ್ರಭಾಕರ್‍ ಭಟ್‍ಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ: ರಮಾನಾಥ ರೈ

    ಕಲ್ಲಡ್ಕ ಪ್ರಭಾಕರ್‍ ಭಟ್‍ಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ: ರಮಾನಾಥ ರೈ

    ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರಿಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಅವರು ವಾಗ್ದಾಳಿ ನಡೆಸಿದ್ದಾರೆ.

    ಬಂಟ್ವಾಳ ತಾಲೂಕಿನ ಬಿಸಿ ರೋಡ್‍ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಭಾಕರ್ ಭಟ್ ಅವರು ಜನರಲ್ಲಿ ಭಿಕ್ಷೆ ಕೇಳುತ್ತಿದ್ದಾರೆ. ಮಕ್ಕಳ ಕೈಯಲ್ಲಿ ತಟ್ಟೆ ಹಿಡಿದು ರಸ್ತೆಯಲ್ಲಿ ನಿಲ್ಲಿಸಿದ್ದಕ್ಕೆ ಇನ್ನು ಮುಂದೆ ಇವರೇ ತಟ್ಟೆ ಹಿಡಿದು ನಿಲ್ಲುವ ಪರಿಸ್ಥಿತಿ ಬರಲಿದೆ. ಭಿಕ್ಷೆ ಬೇಡುವಂಥ ಸ್ಥಿತಿ ಇವರಿಗೆ ಬರಲಿದೆ ಅಂತಾ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

    ನಾವು ಬಡವರ ಹೊಟ್ಟೆಗೆ ಮೇಲೆ ಹೊಡೆಯುವುದಿಲ್ಲ. ಮಕ್ಕಳು ತಟ್ಟೆ ಹಿಡಿಯ ಬೇಕಾಗಿಲ್ಲ ಇವರು ತಟ್ಟೆ ಹಿಡಿಯಬೇಕು. ಪ್ರಜ್ಞಾವಂತ ನಾಗರೀಕರು ಇವುಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು.

    ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಶ್ರೀದೇವಿ ವಿದ್ಯಾಕೇಂದ್ರಕ್ಕೆ ಸರ್ಕಾರ ಅನುದಾನ ಕಡಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಎರಡೂ ವಿದ್ಯಾಕೇಂದ್ರಗಳ ವಿದ್ಯಾರ್ಥಿಗಳು ಆಗಸ್ಟ್ ನಲ್ಲಿ ಬಿಸಿ ರೋಡ್‍ನಲ್ಲಿ ತಟ್ಟೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಿದ್ದರು.

  • ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು: ರಮಾನಾಥ್ ರೈ

    ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು: ರಮಾನಾಥ್ ರೈ

    ಬಾಗಲಕೋಟೆ: ರಾಷ್ಟ್ರಭಕ್ತರು ಸ್ವಾತಂತ್ರ್ಯ ಹೋರಾಟಗಾರರನ್ನು ನಾನು ಹಿಯಾಳಿಸೋದಿಲ್ಲ. ಮೋತಿಲಾಲ್ ನೆಹರು ಒಬ್ಬ ಸ್ವಾತಂತ್ರ್ಯ ಹೋರಾಟಗಾರರು. ಹತ್ತು ವರ್ಷಗಳ ಕಾಲ ಅವರು ಜೈಲು ವಾಸ ಅನುಭವಿಸಿದ್ದಾರೆ. ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು ಎಂದು ಅರಣ್ಯ ಖಾತೆ ಸಚಿವ ರಮಾನಾಥ್ ರೈ ಹೇಳಿದ್ದಾರೆ.

    ಜಮಖಂಡಿ ಪಟ್ಟಣಕ್ಕೆ ಭೇಟಿ ನೀಡಿದ್ದ ರಮಾನಾಥ್ ರೈ, ನಾನು ಕಾಂಗ್ರೆಸ್ ಪಕ್ಷದ ಕಟ್ಟಾಳು. ಕಾಂಗ್ರೆಸ್ ಈಸ್ ಮೈ ರಿಲಿಜಿಯನ್ ಎಂದು ಪಕ್ಷಾಭಿಮಾನ ಮೆರೆದರು. ನಮ್ಮ ಜಿಲ್ಲೆಯಲ್ಲಿ ಸಾಮರಸ್ಯ ಹಾಳು ಮಾಡ್ತಿರೋರು ಬಿಜೆಪಿಯವರು. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದು ವ್ಯಂಗ್ಯವಾಡಿದರು.

    ಒಂದು ಕಡೆ ಬಿಜೆಪಿ ಮತ್ತೊಂದು ಕಡೆ ಎಸ್‍ಟಿಪಿ ಕಾರ್ಯಕರ್ತರು ಮತೀಯ ಭಾವನೆ ಇಟ್ಟುಕೊಂಡು ಸಾಮರಸ್ಯ ಹಾಳು ಮಾಡ್ತಿದ್ದಾರೆ. ಒಬ್ಬ ಅಲ್ಪಸಂಖ್ಯಾತ ಮತೀಯವಾದಿಯಾಗಿದ್ದರೆ ಸಮುದಾಯಕ್ಕೆ ಅಪಾಯ, ಬಹುಸಂಖ್ಯಾತ ಮತೀಯವಾದಿಯಾದರೆ ದೇಶಕ್ಕೆ ಅಪಾಯ ಅಂದ್ರು.

    ಕಲ್ಲಡ್ಕ ಪ್ರಭಾಕರ್ ಕುರಿತು ಮಾತನಾಡಿದ ರಮಾನಾಥ್ ರೈ, ಅವರ ಶಾಲೆಗೆ ಅನ್ನ ನೀಡದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಅದು ಒಂದು ಅನುದಾನ ಸಹಿತ ಶಾಲೆ. ಎಲ್ಲ ಅನುದಾನ ಸಹಿತ ಶಾಲೆಗಳಿಗೂ ನಾವೂ ಅನ್ನ ಕೊಡ್ತೇವೆ. ಆದರೆ ಅವರಿಗೆ ಅನ್ನ ಬೇಕಿಲ್ಲ, ದುಡ್ಡು ಬೇಕು. ಅವರಿಗೆ ಕೊಲ್ಲೂರು ದೇವಸ್ಥಾನದಿಂದ ಆಹಾರದ ಬದಲಾಗಿ ದುಡ್ಡಿನ ರೂಪದಲ್ಲಿ ಸಂದಾಯವಾಗ್ತಿದೆ ಎಂದು ಪ್ರಭಾಕರ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

  • ರಮಾನಾಥ ರೈಗೆ ಸಿಗಬೇಕಿದ್ದ ಗೃಹ ಇಲಾಖೆ ಕೊನೆಕ್ಷಣದಲ್ಲಿ ರಾಮಲಿಂಗಾ ರೆಡ್ಡಿಗೆ ಸಿಕ್ಕಿದ್ದು ಹೇಗೆ?

    ರಮಾನಾಥ ರೈಗೆ ಸಿಗಬೇಕಿದ್ದ ಗೃಹ ಇಲಾಖೆ ಕೊನೆಕ್ಷಣದಲ್ಲಿ ರಾಮಲಿಂಗಾ ರೆಡ್ಡಿಗೆ ಸಿಕ್ಕಿದ್ದು ಹೇಗೆ?

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಾಮನಾಥ ರೈ ಅವರಿಗೆ ಗೃಹ ಇಲಾಖೆ ಸಿಗುತ್ತಿದ್ದರೂ ಕೊನೆಯ ಕ್ಷಣದಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ಸಿಎಂ ಈ ಹುದ್ದೆಯ ಜವಾಬ್ದಾರಿಯನ್ನು ನೀಡಿದ್ದಾರೆ.

    ರಮಾನಾಥ ರೈಗೆ ಗೃಹಖಾತೆ ನೀಡಿದರೆ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಎಚ್ಚರಿಸಿತ್ತು. ಬಿಜೆಪಿಯ ಬೆದರಿಕೆ ಬಗ್ಗಿ ಸರ್ಕಾರ ಕೊನೇ ಕ್ಷಣದಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಗೃಹಖಾತೆ ಜವಾಬ್ದಾರಿ ನೀಡಿದ್ಯಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಇಂದು ಏನಾಯ್ತು?
    ಸ್ವತಃ ರಮಾನಾಥ ರೈ ಗೃಹಖಾತೆ ಬೇಡ ಎಂದಿದ್ದರಂತೆ. ನಾನು ಗೃಹ ಸಚಿವನಾದರೆ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಕರಾವಳಿಯ ಅವಳಿ ಜಿಲ್ಲೆಯಲ್ಲಿ ಮತ್ತಷ್ಟು ಕೊಮು ಗಲಭೆಗೆ ಪ್ರಚೋದನೆ ನೀಡಬಹುದು. ಹೀಗಾಗಿ, ಎರಡು ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದೇ ಕೆಲಸವಾಗುತ್ತದೆ ಎಂದು ಸಿಎಂ ಬಳಿ ರಮಾನಾಥ್ ರೈ ಹೇಳಿಕೊಂಡಿದ್ದರಂತೆ. ಹೀಗಾಗಿ ಮಧ್ಯಾಹ್ನವೇ ರಾಮಲಿಂಗಾರೆಡ್ಡಿ ಜೊತೆ ಸಿಎಂ ಒಂದು ಸುತ್ತಿನ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಇದನ್ನೂ ಓದಿ: ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

  • ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

    ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

    ಚಿಕ್ಕಮಗಳೂರು: ರಮಾನಾಥ ರೈ ಗೃಹ ಸಚಿವ ಆಗುವುದು ನನಗೆ ಸಂತೋಷ ತಂದಿದೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಹೇಳಿದರು.

    ಮೂಡಿಗೆರೆಯ ಸಾರ್ವಜನಿಕ ಗಣಪತಿ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಮಾನಾಥ ರೈ ಅವರು ಸಿಟ್ಟಿನಿಂದ, ದ್ವೇಷದಿಂದ, ಆವೇಷದಿಂದ ಧರ್ಮವಿರೋಧಿ ಕೆಲಸ ಮಾಡಬಾರದು. ಏಕೆಂದರೆ ಗೃಹ ಅಂದರ ಮನೆ, ಮನೆ ಆನಂದ, ಸಂತೋಷ ನೀಡುವಂತಹ ಜಾಗ. ರೈ ಅವರಿಗೆ ಇಡೀ ರಾಜ್ಯವೇ ಮನೆ ಇದ್ದ ಹಾಗೆ. ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಿ ರಾಜಕೀಯ ವೈರತ್ವ ಮರೆತು ಕೆಲಸ ಮಾಡಲಿ ಎಂದು ರೈ ಅವರಿಗೆ ಸಲಹೆ ನೀಡಿದರು.

    ಕೊಲ್ಲೂರು ದೇವಾಲಯದಿಂದ ಕಲ್ಲಡ್ಕ ಶ್ರೀರಾಮ ಶಾಲೆಗೆ ಅನುದಾನ ನಿಲ್ಲಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಕಾನೂನು ಸಮರ ನಿಲ್ಲಿಸೋದು ಇಲ್ಲ, ಅವರ ಕಾಲಿಗೂ ಬೀಳೋದಿಲ್ಲ. ಸರ್ಕಾರ ಮಕ್ಕಳಿಗೆ ಮೋಸ ಮಾಡುತ್ತಿದೆ ಎಂದು ಹೇಳಿದರು.

    ಸಿದ್ದರಾಮಯ್ಯ ನಾನು ಅಹಿಂದ ಸಿಎಂ ಎಂದು ಹೇಳುತ್ತಾರೆ. ಆದರೆ ಕಲ್ಲಡ್ಕ ಶಾಲೆಯಲ್ಲಿ ಶೇ.94 ರಷ್ಟು ಅಹಿಂದ ಮಕ್ಕಳಿದ್ದಾರೆ. ಈ ಸರ್ಕಾರ ಮಕ್ಕಳ ಹೊಟ್ಟೆ ಮೇಲೆ ಹೊಡೆದಿದೆ. ಇದು ಅಧರ್ಮದಲ್ಲಿ ನಡೆಯುತ್ತಿರೋ ಸರ್ಕಾರ. ಇವರಿಗೆ ರಾಜಕೀಯ ದ್ವೇಷವಿದ್ದರೆ ಅಖಾಡಕ್ಕೆ ಬರಲಿ ಹೋರಾಡೋಣ. ಅದನ್ನು ಬಿಟ್ಟು ಮಕ್ಕಳ ಜೊತೆ ಹೋರಾಡಬಾರದು ಯಾರೇ ಆಗಲಿ ಯಾವ ಪಕ್ಷದವರೇ ಆಗಲಿ, ಮಕ್ಕಳ ಅನ್ನಕ್ಕೆ ಕನ್ನ, ಕಲ್ಲು ಹಾಕಬಾರದು ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.

    ಮೂಡಿಗೆರೆಯ ಹ್ಯಾಂಡ್ ಪೋಸ್ಟ್‍ನಿಂದ ಬೈಕ್ ಜಾಥಾ ಮಾಡುವ ಮೂಲಕ ಪ್ರಭಾಕರ್ ಭಟ್ ಅವರನ್ನು ಸ್ವಾಗತಿಸಿಕೊಂಡರು. ಕಲ್ಲಡ್ಕ ಪ್ರಭಾಕರ್ ಭಟ್ ಮೆರವಣಿಗೆಗಾಗಿ ಸ್ಥಳೀಯರು ತೆರೆದ ಜೀಪ್ ಸಿದ್ಧಪಡಿಸಿಕೊಂಡಿದ್ದರು. ಆದರೆ ಪ್ರಭಾಕರ್ ಭಟ್ ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ತಮ್ಮ ಕಾರಿನಲ್ಲಿ ನೇರವಾಗಿ ರಂಗಮಂದಿರದ ಬಳಿ ಬಂದು ಗಣಪತಿಯ ಹೋಮ-ಹವನ ಪೂಜೆಯಲ್ಲಿ ಪಾಲ್ಗೊಂಡು ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

    ನಗರದಾದ್ಯಂತ 800 ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅನೇಕ ಷರತ್ತು ವಿಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಆಗಮನಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದರು.