Tag: Ramayan

  • ರಾಮಾಯಣ ನಾಟಕ ಪ್ರದರ್ಶಿಸಿದ್ದಕ್ಕೆ ವಿದ್ಯಾರ್ಥಿಗಳಿಗೆ 1.02 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

    ರಾಮಾಯಣ ನಾಟಕ ಪ್ರದರ್ಶಿಸಿದ್ದಕ್ಕೆ ವಿದ್ಯಾರ್ಥಿಗಳಿಗೆ 1.02 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

    ಮುಂಬೈ: ರಾಮಾಯಣ (Ramayan) ನಾಟಕ ಪ್ರದರ್ಶಿಸಿದ 8 ವಿದ್ಯಾರ್ಥಿಗಳಿಗೆ ಬಾಂಬೆ ಐಐಟಿ (IIT Bombay) 1.02 ಲಕ್ಷ ರೂ. ದಂಡ ವಿಧಿಸಿದೆ. ಈ ನಾಟಕವು ನಮ್ಮ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಲಾಗಿದೆ.

    ಮಾರ್ಚ್ 31 ರಂದು ಇನ್ಸ್ಟಿಟ್ಯೂಟ್‌ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್‌ನಲ್ಲಿ ‘ರಾಹೋವನ’ ಎಂಬ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದ್ದರು. ಎಲ್ಲಾ ಎಂಟು ವಿದ್ಯಾರ್ಥಿಗಳ ಮೇಲೆ ಬಾಂಬೆ ಐಐಟಿ ದಂಡ ಹಾಕಿದೆ. ಇದನ್ನೂ ಓದಿ: ಮೆಕ್ಕಾದಲ್ಲಿ ಮೃತಪಟ್ಟ 645 ಹಜ್ ಯಾತ್ರಿಕರ ಪೈಕಿ 68 ಮಂದಿ ಭಾರತೀಯರು!

    ಮೇ 8 ರಂದು ನಡೆದ ಶಿಸ್ತು ಕ್ರಮ ಸಮಿತಿ (ಡಿಎಸಿ) ಸಭೆಯಲ್ಲಿ ಐಐಟಿ ಈ ವಿಷಯವನ್ನು ಪ್ರಸ್ತಾಪಿಸಿ ಕ್ರಮಕೈಗೊಂಡಿದೆ. ಜೂನ್ 4 ರಂದು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸಿದೆ. ಸಂಸ್ಥೆಯು ನಾಲ್ಕು ವಿದ್ಯಾರ್ಥಿಗಳಿಗೆ 1.20 ಲಕ್ಷ ರೂ. ದಂಡ ವಿಧಿಸಿದೆ. ಪದವಿಪೂರ್ವ ವಿದ್ಯಾರ್ಥಿಗಳಾದ ಇತರ ನಾಲ್ವರು ವಿದ್ಯಾರ್ಥಿಗಳಿಗೆ 40,000 ರೂ. ದಂಡವನ್ನು ಪಾವತಿಸುವಂತೆ ಹೇಳಲಾಗಿದೆ. ಅಲ್ಲದೇ ಹಾಸ್ಟೆಲ್ ವಸತಿಗಳನ್ನು ಖಾಲಿ ಮಾಡುವಂತೆ ಅವರಿಗೆ ಆದೇಶಿಸಲಾಗಿದೆ.

    ‘ರಾವೋಹಣ’ದ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಕಲಾತ್ಮಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸಂವೇದನೆಗಳ ಬಗ್ಗೆ ಭಾರಿ ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ: ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಎಂಎಸ್‌ಪಿ ಹೆಚ್ಚಿಸಿದ ಕೇಂದ್ರ – ಇಲ್ಲಿದೆ ನೋಡಿ ದರ ಪಟ್ಟಿ..

    ಐಐಟಿ ವಿದ್ಯಾರ್ಥಿಗಳ ಗುಂಪೊಂದು ಸಂಸ್ಥೆಯಲ್ಲಿ ಔಪಚಾರಿಕ ದೂರು ದಾಖಲಿಸಿದೆ. ನಾಟಕವು ಹಿಂದೂ ನಂಬಿಕೆಗಳ ಅವಹೇಳನಕಾರಿ ಉಲ್ಲೇಖಗಳನ್ನು ಒಳಗೊಂಡಿದೆ. ರಾಮನನ್ನು ‘ದೆವ್ವ’ ಎಂದು ಚಿತ್ರಿಸಲಾಗಿದೆ. ಸೀತಾ, ರಾಮ ಮತ್ತು ಲಕ್ಷ್ಮಣನ ಪಾತ್ರಗಳಲ್ಲಿ ಅನುಚಿತ ಭಾಷೆ ಮತ್ತು ಸನ್ನೆಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

  • ಲಾಕ್‍ಡೌನ್ ಎಫೆಕ್ಟ್- ಜನರ ಮನರಂಜನೆಗಾಗಿ ರಾಮಬಾಣ ಬಿಟ್ಟ ಕೇಂದ್ರ ಸರ್ಕಾರ

    ಲಾಕ್‍ಡೌನ್ ಎಫೆಕ್ಟ್- ಜನರ ಮನರಂಜನೆಗಾಗಿ ರಾಮಬಾಣ ಬಿಟ್ಟ ಕೇಂದ್ರ ಸರ್ಕಾರ

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಕೆಲವರು ಮನೆಯಲ್ಲಿ ಕುಳಿತು ಎಲ್ಲಾ ವೆಬ್ ಸಿರೀಸ್‍ಗಳನ್ನು ನೋಡಿ ಮುಗಿಸುತ್ತಿದ್ದಾರೆ. ಹೀಗಾಗಿ ಜನರಿಗೆ ಮನರಂಜನೆ ನೀಡಲು ಸರ್ಕಾರ ರಾಮಬಾಣವನ್ನು ಬಿಟ್ಟಿದ್ದು, 80ರ ದಶಕದ ಪ್ರಸಿದ್ಧ ಟಿವಿ ಧಾರಾವಾಹಿ ರಾಮಾಯಣವು ಮತ್ತೊಮ್ಮೆ ದೂರದರ್ಶನ ಚಾನೆಲ್‍ನಲ್ಲಿ ನಾಳೆ ಆರಂಭವಾಗಲಿದೆ.

    ಈ ಕುರಿತು ಟ್ವೀಟ್ ಮಾಡಿರುವ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್, ಸಾರ್ವಜನಿಕರ ಬೇಡಿಕೆಯ ಮೇರೆಗೆ ದೂರದರ್ಶನದ ರಾಷ್ಟ್ರೀಯ ಚಾನೆಲ್‍ನಲ್ಲಿ ಮಾರ್ಚ್ 28ರ ಶನಿವಾರ ‘ರಾಮಾಯಣ’ ಪ್ರಸಾರ ಮತ್ತೆ ಪ್ರಾರಂಭವಾಗಲಿದೆ. ಮೊದಲ ಎಪಿಸೋಡ್ ಬೆಳಗ್ಗೆ 9ಕ್ಕೆ ಮತ್ತು ಎರಡನೇ ಎಪಿಸೋಡ್ ರಾತ್ರಿ 9ಕ್ಕೆ ಪ್ರಸಾರವಾಗಲಿದೆ ಎಂದು ತಿಳಿಸಿದ್ದಾರೆ.

    ಅಷ್ಟೇ ಅಲ್ಲ ಬಿ.ಆರ್.ಚೋಪ್ರಾ ಅವರ ಪ್ರಸಿದ್ಧ ಧಾರಾವಾಹಿ ‘ಮಹಾಭಾರತ’ವನ್ನು ಮರು ಪ್ರಸಾರ ಮಾಡುವ ಸಾಧ್ಯತೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ. ರಾಮಾನಂದ್ ಸಾಗರ್ ಅವರ ‘ರಾಮಾಯಣ’ ಮೊದಲ ಬಾರಿಗೆ 1987ರಲ್ಲಿ ಪ್ರಸಾರವಾಗಿತ್ತು. ಬಿ.ಆರ್.ಚೋಪ್ರಾ ಅವರ ‘ಮಹಾಭಾರತ’ 1988ರಲ್ಲಿ ದೂರದರ್ಶನದಲ್ಲಿ ಮೊದಲ ಬಾರಿಗೆ ಪ್ರಸಾರವಾಗಿತ್ತು.

    ಕೊರೊನಾ ವೈರಸ್ ಸೋಂಕಿನಿಂದಾಗಿ 21 ದಿನಗಳ ಲಾಕ್‍ಡೌನ್ ಘೋಷಣೆಯಾದಾಗಿನಿಂದಲೂ ಜನರು ಸಾಮಾಜಿಕ ಜಾಲತಾಣದಲ್ಲಿ ‘ರಾಮಾಯಣ’ ಮತ್ತು ‘ಮಹಾಭಾರತ’ವನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡುವಂತೆ ಸಚಿವರಿಗೆ ಒತ್ತಾಯಿಸಿದ್ದರು. ಇದರಿಂದಾಗಿ ಸಚಿವ ಪ್ರಕಾಶ್ ಜಾವ್ಡೇಕರ್ ಅವರ ಸಲಹೆಯಿಂದ ಪ್ರಸಾರ ಭಾರತಿ ಸಿಇಒ ಶಶಿ ಶೇಖರ್ ಅವರು ‘ರಾಮಾಯಣ’ ಮತ್ತು ‘ಮಹಾಭಾರತ’ ಹಕ್ಕುದಾರರೊಂದಿಗೆ ಮಾತುಕತೆ ನಡೆಸಿದ್ದಾರೆ.

    80ರ ದಶಕದ ಉತ್ತರಾರ್ಧದಲ್ಲಿ ‘ರಾಮಾಯಣ’ ಮತ್ತು ‘ಮಹಾಭಾರತ’ ಧಾರಾವಾಹಿಗಳು ತಮ್ಮ ಪ್ರಸಾರದ ಸಮಯದಲ್ಲಿ ರಸ್ತೆಗಳಲ್ಲಿ ಜನರನ್ನು ನಿರ್ಜನಗೊಳಿಸುತ್ತಿದ್ದವು. ಎರಡೂ ಧಾರಾವಾಹಿಗಳನ್ನು ಭಾರತೀಯ ಟಿವಿ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಧಾರಾವಾಹಿಗಳೆಂದು ಪರಿಗಣಿಸಲಾಗಿದೆ. ‘ರಾಮಾಯಣ’ ಮತ್ತು ‘ಮಹಾಭಾರತ’ಗಳನ್ನು 55 ದೇಶಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ವೀಕ್ಷಿಸಿದ್ದರು.