ಮನೆ ಹಾಗೂ ಮನಸ್ಸಿನ ಅಂಧಕಾರವನ್ನು ಕಳೆಯುವ ಬೆಳಕನ್ನು ಸಂಭ್ರಮಿಸಿ ಆರಾಧಿಸುವ ಹಬ್ಬವೇ ದೀಪಾವಳಿ. ಭಾರತದಲ್ಲಿ ದೀಪಾವಳಿ (Deepavali) ಹಬ್ಬಕ್ಕೆ ವಿಶೇಷವಾದ ಸ್ಥಾನವಿದೆ. ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ.
ದೀಪಾವಳಿ ಹಬ್ಬಕ್ಕೂ ರಾಮಾಯಣಕ್ಕೂ (Ramayana) ವಿಶೇಷ ನಂಟಿದೆ. ಶ್ರೀ ರಾಮ (Lord Rama) ರಾವಣನನ್ನು ಸಂಹರಿಸಿ ಸೀತೆಯನ್ನು ಮರಳಿ ಅಯೋಧ್ಯೆಗೆ ಕರೆ ತಂದ ದಿನವೇ ದೀಪಾವಳಿ ಎಂಬ ನಂಬಿಕೆ ಇದೆ. ರಾಮ ಅಯೋಧ್ಯೆಗೆ (Ayodhya) ಆಗಮಿಸಿದ ಆ ದಿನ ಅಯೋಧ್ಯೆಯ ಜನ ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮ ಹಾಗೂ ಸೀತೆಯನ್ನು ಸ್ವಾಗತಿಸಿದ್ದರು. ಇದೇ ಮುಂದೆ ದೀಪಾವಳಿಯಾಗಿ ಆಚರಣೆಗೆ ಬಂತು ಎನ್ನುವ ನಂಬಿಕೆ ಇದೆ. ಇದನ್ನೂ ಓದಿ: ಇಂದು ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ
ಭಾರತದ ಬೇರೆ ಬೇರೆ ಸ್ಥಳಗಳಲ್ಲಿ ದೀಪಾವಳಿಗೆ ವಿಶೇಷವಾದ ಮಹತ್ವವಿದೆ. ಅಲ್ಲದೇ ವಿಶೇಷವಾದ ಕೆಲವು ಸಂಪ್ರದಾಯಗಳು ಇರುತ್ತವೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ಹಬ್ಬವನ್ನು ಆಚರಿಸುತ್ತಾರೆ. ದೀಪಗಳು ಈ ಹಬ್ಬದಲ್ಲಿ ಪ್ರಮುಖ ಪಾತ್ರವಹಿಸುತ್ತವೆ.
ಇನ್ನು ಒಡಿಶಾ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ದೀಪಾವಳಿಯ ರಾತ್ರಿಯಂದು ಮಹಾಕಾಳಿಯ ಪೂಜಿಸುವ ಪದ್ಧತಿಯಿದೆ. ಪಾರ್ವತಿ ದೇವಿಯು ಕಾಳಿ ಅವತಾರವನ್ನು ತಾಳಿ ಅಸುರರನ್ನು ಸಂಹರಿಸಿದ ದಿನವನ್ನು ದೀಪಾವಳಿ ಎಂದು ಕರೆಯುತ್ತಾರೆ ಎಂಬ ನಂಬಿಕೆ ಕೂಡ ಇದೆ.
ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲದ ಸುದ್ದಿಗಳು ಹೊರ ಬರುತ್ತಲೇ ಇವೆ. ಅವುಗಳು ಅಧಿಕೃತವಾ ಅಥವಾ ಸುಳ್ಳಾ ಗೊತ್ತಿಲ್ಲ. ಆದರೂ, ದಿನಕ್ಕೊಂದು ಸುದ್ದಿಗಳು ಹೊರ ಬೀಳುತ್ತಿವೆ. ಈ ಸುದ್ದಿಗೊಂದು ಖಚಿತತೆ ಸಿಕ್ಕಿದೆ. ಈ ಸಿನಿಮಾದಲ್ಲಿ ಸೀತೆ (Seetha) ಪಾತ್ರವನ್ನು ಮಾಡುತ್ತಿರುವುದಾಗಿ ಸಾಯಿ ಪಲ್ಲವಿ (Sai Pallavi) ಒಪ್ಪಿಕೊಂಡಿದ್ದಾರೆ. ಆ ಪಾತ್ರಕ್ಕೆ ಜೀವ ತುಂಬುವಂತೆ ಪ್ರಯತ್ನ ಮಾಡುವೆ ಎಂದೂ ಹೇಳಿಕೊಂಡಿದ್ದಾರೆ.
ರಾವಣನಾಗ್ತಾರಾ ಯಶ್?
ಈ ಸಿನಿಮಾದಲ್ಲಿ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.
ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.
ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್ (Ranbir Kapoor) ನಿರ್ವಹಿಸಲಿದ್ದಾರೆ.
ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಭೋಪಾಲ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಆನಂದ್ ಸಾಗರ್ ಅವರ 2008ರ ದೂರದರ್ಶನ ಕಾರ್ಯಕ್ರಮ ‘ರಾಮಾಯಣ’ದಲ್ಲಿ ಹನುಮಾನ್ ಪಾತ್ರಕ್ಕಾಗಿ ಮಸ್ತಲ್ ಹೆಚ್ಚು ಹೆಸರುವಾಸಿಯಾಗಿದ್ದರು. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷವು ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಭಾನುವಾರ) ಪ್ರಕಟಿಸಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂಟೈನರ್ಗೆ ಡಿಕ್ಕಿ ಹೊಡೆದ ಟಿಟಿ – 12 ಮಂದಿ ಸಾವು, 23 ಮಂದಿಗೆ ಗಾಯ
ಬುಧ್ನಿ ಕ್ಷೇತ್ರದಿಂದ ಚೌಹಾಣ್ ವಿರುದ್ಧ ವಿಕ್ರಮ್ ಮಸ್ತಲ್ ಕಣಕ್ಕಿಳಿಯಲಿದ್ದಾರೆ. ಮಧ್ಯಪ್ರದೇಶದಲ್ಲಿ ಪಕ್ಷವು ಚಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಮತ್ತು ಪಿಸಿಸಿ ಮುಖ್ಯಸ್ಥ ಕಮಲ್ ನಾಥ್ ಅವರನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ ರಘೀಗತ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇವರು ಕಮಲ್ ನಾಥ್ ಸರ್ಕಾರದಲ್ಲಿ ಸಚಿವರಾಗಿದ್ದರು.
ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಸಚಿವೆ ವಿಜಯ್ ಲಕ್ಷ್ಮಿ ಸಾಧೋ ಅವರನ್ನು ಮಹೇಶ್ವರ್-ಎಸ್ಸಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮಾಜಿ ಕ್ಯಾಬಿನೆಟ್ ಸಚಿವ ಜಿತು ಪಟ್ವಾರಿ ಅವರನ್ನು ರಾವು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇದನ್ನೂ ಓದಿ: ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ
ಪಟ್ಟಿಯಲ್ಲಿ ಸಾಮಾನ್ಯ ವರ್ಗದಿಂದ 47, ಒಬಿಸಿ- 39, ಎಸ್ಟಿ- 30, ಎಸ್ಸಿ- 22, ಒಬ್ಬ ಮುಸ್ಲಿಂ ಮತ್ತು 19 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. 65 ಅಭ್ಯರ್ಥಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಬಿಜೆಪಿ ಈಗಾಗಲೇ ಮಧ್ಯಪ್ರದೇಶದ ಅರ್ಧದಷ್ಟು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 230 ಸ್ಥಾನಗಳ ಪೈಕಿ 136 ಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಧ್ಯಪ್ರದೇಶದ 230 ಕ್ಷೇತ್ರಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ನವೆಂಬರ್ 17 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ಬಾಲಿವುಡ್ ನಲ್ಲಿ ರಾಮಾಯಣ (Ramayana) ಸಿನಿಮಾ ಆಗುತ್ತಿರುವ ವಿಚಾರ ಹಲವಾರು ತಿಂಗಳಿಂದ ಹರಿದಾಡುತ್ತಲೇ ಇದೆ. ಅದರಲ್ಲೂ ಈ ಸಿನಿಮಾದಲ್ಲಿ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.
ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.
ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್ (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.
ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬಾಲಿವುಡ್ನಲ್ಲಿ(Bollywood) ರಾಮಾಯಣ ಸಿನಿಮಾ ಮಾಡಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಹಿಂದೆ ರಾವಣನ ಪಾತ್ರದಲ್ಲಿ ನಟಿಸಲು ‘ಕೆಜಿಎಫ್ 2’ (KGF 2) ಹೀರೋ ಯಶ್ಗೆ(Yash) ಆಫರ್ ನೀಡಲಾಗಿತ್ತು. ಆದರೆ ರಾಕಿ ಭಾಯ್ ನೋ ಎಂದಿದ್ದರು. ಈಗ ಸೀತಾ ಪಾತ್ರದಲ್ಲಿ ನಟಿಸಲು ಬಂದ ಆಫರ್ನ್ನ ಆಲಿಯಾ ಭಟ್ ರಿಜೆಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಸುದೀಪ್ ಹುಟ್ಟುಹಬ್ಬ: ಮನೆಗೆ ಬರಬೇಡಿ, ಅಭಿಮಾನಿಗಳ ಭೇಟಿಗೆ ಸ್ಥಳ ಫಿಕ್ಸ್
ಕೆಜಿಎಫ್ 2 ಬಳಿಕ ನ್ಯಾಷನಲ್ ಸ್ಟಾರ್ ಆಗಿ ಯಶ್ ಮಿಂಚುತ್ತಿದ್ದಾರೆ. ಬಾಲಿವುಡ್ ನಿರ್ದೇಶಕ, ನಿರ್ಮಾಪಕರ ಕಣ್ಣು ಯಶ್ ಮೇಲಿದೆ. ಸಾಕಷ್ಟು ಆಫರ್ಸ್ಗಳ ನಡುವೆ ಯಶ್ ರಾಮಾಯಣ ಸಿನಿಮಾಗೆ ನೋ ಎಂದಿದ್ದರು ಸಖತ್ ಸುದ್ದಿಯಾಗಿತ್ತು. ಈಗ ಆಲಿಯಾ ಭಟ್(Alia Bhatt) ಬೇಡವೇ ಬೇಡ ನಟಿಸಲ್ಲ ಅಂತಾ ಹೇಳಿರೋದು ಬಿಟೌನ್ನಲ್ಲಿ ಸದ್ದು ಮಾಡುತ್ತಿದೆ.
ಇತ್ತೀಚೆಗೆ ಪುರಣಾಗಳ ಕಥೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ನಡೆದಿದೆ. ಆ ಪೈಕಿ ಶಾಕುಂತಲಂ, ಆದಿಪುರುಷ್ ಸಿನಿಮಾಗಳು ಸೋತವು. ಹೀಗಿರುವಾಗ ನಿರ್ದೇಶಕ ನಿತೇಶ್ ತಿವಾರಿ ಅವರು ಮೂರು ಪಾರ್ಟ್ಗಳಲ್ಲಿ ರಾಮಾಯಣ (Ramayana) ಮಾಡಲು ಮುಂದಾಗಿದ್ದಾರೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್, ಸೀತೆಯ ಪಾತ್ರಕ್ಕೆ ಆಲಿಯಾ ಭಟ್ ಹಾಗೂ ರಾವಣನ ಪಾತ್ರಕ್ಕೆ ಯಶ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆ ನಿತೇಶ್ಗೆ ಇತ್ತು. ಆದರೆ, ಈಗ ಅವರ ಲೆಕ್ಕಾಚಾರ ಉಲ್ಟಾ ಆಗುತ್ತಿದೆ.
ನಿತೇಶ್ ಅವರು ಈ ಮೂವರನ್ನೂ ಭೇಟಿ ಮಾಡಿ ಆಫರ್ ನೀಡಿದ್ದರು. ಈ ಮೊದಲೇ ಯಶ್ ಅವರು ಆಫರ್ ರಿಜೆಕ್ಟ್ ಮಾಡಿದ್ದರು. ಈಗ ಆಲಿಯಾ ಭಟ್ ಅವರು ಸ್ವಲ್ಪ ಸಮಯ ತೆಗೆದುಕೊಂಡು ಈ ಆಫರ್ಗೆ ನೋ ಎಂದಿದ್ದಾರೆ. ಇದಕ್ಕೆ ಕಾರಣ ಡೇಟ್ಸ್ ಹೊಂದಾಣಿಕೆ ಆಗದೇ ಇರುವುದು.
ಸಿನಿಮಾಗಳ ಜೊತೆ ಮುದ್ದು ಮಗಳು ರಾಹಾ(Raha) ಆರೈಕೆಯಲ್ಲೂ ಬ್ಯುಸಿ ಇರುವ ಕಾರಣ, 3 ಪಾರ್ಟ್ಗಳಲ್ಲಿ ಬರುತ್ತಿರೋ ರಾಮಾಯಣಗೆ ಸಮಯ ಮೀಸಲಿಡುವುದು ಕಷ್ಟ ಎಂದು ಚಿತ್ರಕ್ಕೆ ನೋ ಹೇಳಿದ್ದಾರೆ ಆಲಿಯಾ ಭಟ್.
ಅಸಲಿ ರಾಮಾಯಣ (Ramayana) ಮತ್ತೆ ಮೆರವಣಿಗೆ ಹೊರಡಲಿದೆ. ಕೆಲವೇ ದಿನಗಳಲ್ಲಿ ರಮಾನಂದ್ ಸಾಗರ್ ನಿರ್ದೇಶನದ ರಾಮಾಯಣವನ್ನು ಜಗತ್ತಿನ ಭಾರತಿಯೆಲ್ಲರೂ ನೋಡಲಿದ್ದಾರೆ. ಮೂವತ್ತಾರು ವರ್ಷಗಳ ಹಿಂದೆ ನಿರ್ಮಾಣವಾದ ರಾಮಾಯಣ ಈಗಲೂ ಜನರ ಮನದಲ್ಲಿ ತಳಿರು ತೋರಣ. ಇದೇ ಹೊತ್ತಲ್ಲಿ ಆದಿಪುರುಷ್ (Adipurush) ನಿರ್ಮಾಣವಾಗಿ ಎಲ್ಲರಿಂದ ಟೀಕೆಗೆ ಒಳಪಟ್ಟಿದೆ. ನಮ್ಮ ರಾಮ, ಸೀತೆ, ರಾವಣ ಹೇಗಿರಬೇಕು ಎನ್ನುವುದನ್ನು ಪ್ರಭಾಸ್ಗೆ ತೋರಿಸಲು ಮರು ಪ್ರಸಾರ ಆಗುತ್ತಿದೆ ಎನ್ನುವ ಮಾತಿದೆ.
ರಾಮಾಯಣ. ಹೀಗಂದರೆ ಸಾಕು ಈಗಲೂ ಆ ದಿನಗಳು ನೆನಪಾಗುತ್ತವೆ. ಸುಮಾರು ಮೂವತ್ತಾರು ವರ್ಷಗಳ ಹಿಂದೆ ಭಾರತಿಯರ ಪಾಲಿಗೆ ದೈವಸ್ವರೂಪಿಯಂತೆ ಕಾಣಿಸಿದ ರಮಾನಂದ್ ಸಾಗರ್ ನಿರ್ದೇಶನದ ಆ ಮಹಾ ಧಾರಾವಾಹಿ (Serial). 1987ರಲ್ಲಿ ಅಂದಿನ ದೂರದರ್ಶನದಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ ಪ್ರಸಾರವಾಗುತ್ತಿತ್ತು. ಆಗ ಈಗಿನಷ್ಟು ಟಿವಿ ಮತ್ತು ಚಾನೆಲ್ಗಳು ಇರಲಿಲ್ಲ. ಒಂದು ಮನೆಯಲ್ಲಿ ಟಿವಿ ಇದ್ದರೆ ಅವರು ಶ್ರೀಮಂತರು ಎಂದು ಭಾವಿಸುವ ದಿನಮಾನ ಅವು. ಕಪ್ಪು ಬಿಳುಪು ಹಾಗೂ ಕಲರ್ ಟಿವಿಗಳಲ್ಲಿ ರಾಮಾಯಣ ನೋಡಲು ಜನರು ಮುಗಿ ಬೀಳುತ್ತಿದ್ದರು. ಬರೀ ಕತೆ ನೋಡಲು ಅಲ್ಲ, ಅಲ್ಲಿಯ ಶ್ರೀರಾಮಚಂದ್ರ ಹಾಗೂ ಸೀತಾದೇವಿಯನ್ನು ಕಣ್ಣು ತುಂಬಿಕೊಂಡು ಕೈ ಮುಗಿಯುತ್ತಿದ್ದರು.
ಭಾನುವಾರ ಬೆಳಿಗ್ಗೆ ಹತ್ತು ಗಂಟಗೆ ದೇಶದ ಬೀದಿ ಬೀದಿಗಳು ಭಣಗುಡುತ್ತಿದ್ದವು. ಮುಂಜಾನೆದ್ದು ಹೆಂಗಸರು ಮನೆ ಮಂದಿಗೆಲ್ಲ ತಿಂಡಿ ವ್ಯವಸ್ಥೆ ಮಾಡಿ, ಒಂಬತ್ತೂವರೆಗೆ ಟಿವಿ ಮುಂದೆ ಹಾಜರಾಗುತ್ತಿದ್ದರು. ಕೆಲವರು ಟಿವಿ ಪರದೆಗೆ ಪೂಜೆ ಮಾಡುತ್ತಿದ್ದರು. ಹೂವಿನ ಹಾರ ಹಾಕಿ, ದೀಪ ಬೆಳಗಿ, ಆರತಿ ಎತ್ತಿ ಶ್ರೀರಾಮ ಹಾಗೂ ಸೀತಾದೇವಿಯನ್ನು ಬರಮಾಡಿಕೊಳ್ಳುತ್ತಿದ್ದರು. ಅದು ಆ ರಾಮಾಯಣಕ್ಕೆ ಇದ್ದ ಗತ್ತು ಹಾಗೂ ಗೌರವ. ರಾಮಾಯಣ ಪ್ರಸಾರ ಆಗುತ್ತಿದ್ದ ಹೊತ್ತಿಗೆ ವಿದ್ಯುತ್ ಕೂಡ ತೆಗೆಯುತ್ತಿರಲಿಲ್ಲ. ಅಕಸ್ಮಾತ್ ತೆಗೆದರೆ ಮುಗಿಯಿತು. ಕೆಲವು ಕಡೆ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಗಲಾಟೆ ಕೂಡ ನಡೆಯುತ್ತಿದ್ದವು. ರಾಮಾಯಣ ಅಷ್ಟೊಂದು ಮೋಡಿ ಮಾಡಿತ್ತು. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು
ರಮಾನಂದ್ ಸಾಗರ್ ಅದ್ಯಾವ ಗಳಿಗೆಯಲ್ಲಿ ರಾಮಾಯಣವನ್ನು ನಿರ್ದೇಶಿಸಲು ಮನಸು ಮಾಡಿದರೋ ಏನೊ? ಅವರು ಅಲ್ಲಿವರೆಗೆ ಮಾಡಿದ ಸಿನಿಮಾ ಕೆಲಸಗಳು ಮರೆತು ಹೋದವು. ರಾಮಾಯಣ ಮಾತ್ರ ಅವರಿಗೆ ಕೊನೇವರೆಗೂ ದೇಶವ್ಯಾಪಿ ಮೆರವಣಿಗೆ ಮಾಡಿದವು. ಅದಕ್ಕೆ ಕಾರಣ ಅವರು ಕತೆಯನ್ನು ಹೇಳಿದ ರೀತಿ ಮಾತ್ರ ಅಲ್ಲ, ಪ್ರತಿಯೊಂದು ಪಾತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದ ಕಲಾವಿದರೂ ಕಾರಣ. ರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಕ್ಲಿಯಾ, ರಾವಣನಾಗಿ ಅರವಿಂದ್ ತ್ರಿವೇದಿ ಹಾಗೂ ಹನುಮಂತನಾಗಿ ಧಾರಾಸಿಂಗ್ ಜೀವ ತುಂಬಿದ್ದರು. ಪೌರಾಣಿಕ ಪಾತ್ರಗಳು ಹೀಗೆ ಇದ್ದಿರಬೇಕೆನ್ನುವಷ್ಟು ಭಕ್ತಿ ಮೂಡಿಸಿದ್ದವು.
ಮೂವತ್ತಾರು ವರ್ಷ. ಆಗ ಈಗಿನಷ್ಟು ತಂತ್ರಜ್ಞಾನ ಬೆಳೆದಿರಲಿಲ್ಲ. ಗ್ರೀನ್ ಮ್ಯಾಟ್, ವಿಎಫ್ಎಕ್ಸ್ ಇತ್ಯಾದಿ ಹೆಸರುಗಳೇ ಗೊತ್ತಿರಲಿಲ್ಲ. ಎಲ್ಲವನ್ನೂ ಕ್ಯಾಮೆರಾ ಟೆಕ್ನಿಕ್ನಿಂದ ಮಾಡಬೇಕಿತ್ತು. ಅಂಥ ಕ್ಯಾಮೆರಾಮನ್ ಕೂಡ ಇದ್ದರು. ರಾಮಾಯಣದಲ್ಲಿ ಎಂತೆಂಥ ಪವಾಡ ಸದೃಶ್ಯ ದೃಶ್ಯಗಳು ಬರುತ್ತವೆಂದು ಎಲ್ಲರಿಗೂ ಗೊತ್ತು. ಯುದ್ಧ, ಕಲ್ಲಿನಿಂದ ಸೇತುವೆ ಕಟ್ಟುವುದು, ಹನುಮಂತ ಬೆಟ್ಟವನ್ನು ಹೊತ್ತುಕೊಳ್ಳುವುದು, ಲಂಕಾ ದಹನ, ವಾನರ ಸೇನೆಯ ಕದನ ಪ್ರತಿಯೊಂದಕ್ಕೂ ಕ್ಯಾಮೆರಾ ಟೆಕ್ನಿಕ್ನಿಂದ ಮಾಡಿದ್ದರು ರಮಾನಂದ್ ಸಾಗರ್.
ಇಷ್ಟು ವರ್ಷಗಳ ನಂತರ ಅದೇ ಬೆಸ್ಟ್ ಎನ್ನುವಂತಿದೆ. ಹೀಗಾಗಿಯೇ ರಾಮಾಯಣ ಮರು ಪ್ರಸಾರ ಆಗುತ್ತಿದೆ. ಶಮೋರೋ ಚಾನೆಲ್ನಲ್ಲಿ ಜುಲೈ 3ರಿಂದ ದಿಬ್ಬಣ ಹೊರಡಲಿದೆ. ಏಕಾಏಕಿ ಈಗ್ಯಾಕೆ ರಾಮಾಯಣ ಮರು ಪ್ರಸಾರ ಮಾಡುತ್ತಿದ್ದಾರೆ? ಏನಿದರ ಹಿಂದಿನ ಉದ್ದೇಶ? ಪ್ರಶ್ನೆ ಏಳುವುದು ಸಹಜ. ಉತ್ತರ ಇಲ್ಲಿದೆ. ಇತ್ತೀಚೆಗೆ ತೆರೆ ಕಂಡ ಪ್ರಭಾಸ್ (Prabhas) ಅಭಿನಯದ ಆದಿಪುರುಷ್ ಯಾವ ಪರಿ ಉಗಿಸಿಕೊಂಡಿತೆಂದು ಎಲ್ಲರಿಗೂ ಗೊತ್ತು. ಐದು ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಆದಿಪುರುಷ್ ಇಡೀ ರಾಮಾಯಣದ ಕತೆ ಹಾಗೂ ಪಾತ್ರಗಳನ್ನು ವಿರೂಪಗೊಳಿಸಿತು. ರಾಮನ ಸೆಟ್ ಪ್ರಾಪರ್ಟಿಯಂಥ ಮುಖ, ರಾವಣನ ವಿಕಾರ ಹೇರ್ ಕಟ್, ಸಂಭಾಷಣೆ, ಹಾಲಿವುಡ್ ಹನುಮಂತ ಎಲ್ಲವೂ ನೆಗಪಾಟಲಿಗೆ ಈಡಾದವು. ಅದಕ್ಕೆ ಉತ್ತರವಾಗಿ ರಮಾನಂದ್ ಸಾಗರ್ (Ramanand Sagar) ರಾಮಾಯಣ ಪ್ರಸಾರ ಆಗುತ್ತಿದೆ ಎಂದು ಹೇಳಲಾಗುತ್ತಿದೆ.
ಐದು ನೂರು ಕೋಟಿ ಕಾಸು ಸುರಿದರೂ ಆದಿಪುರುಷ್ ಬಂಡವಾಳವನ್ನೂ ಬಾಚಿಕೊಳ್ಳಲಿಲ್ಲ. ಪ್ರಭಾಸ್ಗೆ ಹೆಚ್ಚು ಕಮ್ಮಿ ನೂರರಿಂದ ನೂರೈವತ್ತು ಕೋಟಿ ಗಂಟು ಮಡಗಿದ್ದಾರೆ. ಆದರೆ ಅವರ ಕಾಲ್ಶೀಟ್ ಕೇವಲ ಅರವತ್ತು ದಿನ. ಅಂದರೆ ಗ್ರೀನ್ ಮ್ಯಾಟ್ ಹಾಗೂ ಡ್ಯೂಪ್ ಬಳಸಿ ರಾಮನ ಪಾತ್ರದ ದೃಶ್ಯಗಳನ್ನು ಶೂಟ್ ಮಾಡಿದ್ದಾರೆ ನಿರ್ದೇಶಕ ಓಂರೌತ್. ಕಾರ್ಟೂನ್ನಂತಿರುವ ಗ್ರಾಫಿಕ್ಸ್, ಮಾಸ್ ಮಸಾಲಾ ಡೈಲಾಗ್ಸ್ ಎಲ್ಲಕ್ಕಿಂತ ಹೆಚ್ಚಾಗಿ ಇಡೀ ಚಿತ್ರಕತೆ ಆವರಿಸಿಕೊಳ್ಳಬೇಕಿದ್ದ ಭಕ್ತಿಭಾವವೇ ಮಾಯ. ಇದೆಲ್ಲ ಸೇರಿ ಆದಿಪುರುಷ್ಗೆ ಇಡೀ ವಿಶ್ವವೇ ಮಹಾ ಮಂಗಳಾರತಿ ಮಾಡುವಂತಾಯಿತು. ನೆನಪಿರಲಿ, ಆ ರಾಮಾಯಣ ಧಾರಾವಾಹಿ ಒಂಬತ್ತು ಲಕ್ಷದಲ್ಲಿ ನಿರ್ಮಾಣವಾಗಿತ್ತು.
ತೀರಾ ಕಮ್ಮಿ ಬಜೆಟ್ನಲ್ಲಿ ನಿರ್ಮಾಣವಾದ ಆ ರಾಮಾಯಣ ದೂರದರ್ಶನಕ್ಕೆ ನಲವತ್ತು ಲಕ್ಷ ಲಾಭ ತಂದು ಕೊಟ್ಟಿತು. ಸುಮಾರು ಅರವತ್ತು ಕೋಟಿ ಜನರು ಇದನ್ನು ನೋಡಿದ್ದರು. ರಾಮನಾಗಿದ್ದ ಅರುಣ್ ಗೋವಿಲ್ ಹಾಗೂ ಸೀತೆ ಪಾತ್ರದ ದೀಪಿಕಾ ಚಿಕ್ಲಿಯಾ ನಿಜಕ್ಕೂ ಅಭಿನವ ರಾಮ-ಸೀತೆಯಾಗಿ ಭಾರತಿಯರ ಮುಂದೆ ನಿಂತರು. ಅರುಣ್ ಮತ್ತು ದೀಪಿಕಾ ಎಲ್ಲೇ ಹೋದರೂ ಜನರು ಅವರ ಕಾಲು ಮುಟ್ಟಿ ನಮಸ್ಕಾರ ಮಾಡುತ್ತಿದ್ದರು. ಕೊರೋನಾ ನಂತರ ಅರುಣ್ ಗೋವಿಲ್ ವಿಮಾನ ನಿಲ್ದಾಣದಲ್ಲಿ ನಿಂತಾಗ ವಯಸ್ಸಾದ ಮಹಿಳೆ ‘ನೀನೇ ರಾಮ’ ಎಂದು ಕಾಲು ಮುಗಿದಿದ್ದು ಯಾರೂ ಮರೆತಿಲ್ಲ. ಅದು ರಾಮಾಯಣದ ನಿಜವಾದ ಗೆಲುವು, ಸಾಧನೆ.
ಸಿನಿಮಾ ರಂಗದಂತೆಯೇ ಕಿರುತೆರೆಯಲ್ಲೂ ಕಲಾವಿದೆಯರಿಗೆ ಸಾಕಷ್ಟು ಹಿಂಸೆ ಮಾಡಲಾಗುತ್ತಿದೆ ಎನ್ನುವ ಆರೋಪ ಪದೇ ಪದೇ ಕೇಳಿ ಬರುತ್ತಿದೆ. ಅದರಲ್ಲೂ ಬಾಲಿವುಡ್ ಅನೇಕ ನಟಿಯರು ತಮಗಾದ ಕಹಿ ಅನುಭವಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ. ಇದೀಗ ರಾಮಾಯಣ (Ramayana) ಧಾರಾವಾಹಿಯ ನಿರ್ದೇಶಕ ರಮಾನಂದ್ ಸಾಗರ್ (Ramanand Sagar) ಅವರ ಮರಿಮೊಮ್ಮಗಳು ಅಂಥದ್ದೊಂದು ಆರೋಪ ಮಾಡಿದ್ದಾರೆ.
ಈ ಕುರಿತು ಅವರು ಇನ್ಸಾಟಾಗ್ರಾಮ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದು, ನಾನು ಒಪ್ಪಿದ್ದ ರಿಯಾಲಿಟಿ ಶೋ (Reality Show) ಒಪ್ಪಂದ ಪ್ರಕಾರ ತಾಯಿಯೊಂದಿಗೆ ಪ್ರತಿದಿನ ಒಂದು ಬಾರಿ ಫೋನ್ ಕರೆ ಮಾಡಲು ಅವಕಾಶವಿತ್ತು. ಆದರೆ, ಅದಕ್ಕೆ ಅವರು ಅವಕಾಶ ಕೊಡುತ್ತಿರಲಿಲ್ಲ. ಕೊಟ್ಟರೆ ಅವರ ಬಣ್ಣ ಬಯಲು ಮಾಡುತ್ತೇನೆ ಎನ್ನುವ ಆತಂಕವೂ ಇತ್ತು. ಅಪರಿಚಿತರು ಬೆನ್ನು ಸ್ಪರ್ಶಿಸಿ ಗಾಯ ಮಾಡುತ್ತಿದ್ದರು. ಊಟ ಮಾಡಲು ಹೋದಾಗ ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದರು ಎಂದೆಲ್ಲ ಆರೋಪ ಮಾಡಿದ್ದಾರೆ.
ಈ ಕಿರುಕುಳವನ್ನು ಅವರು ಕಳೆದ ಒಂದು ವರ್ಷದಿಂದಲೂ ಅನುಭವಿಸುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಅಮ್ಮನಿಗೆ ಹೇಳುತ್ತೇನೆ ಎಂದಾಗ ಕೂತು, ಮಾತನಾಡಿಸಿ ಮತ್ತೊಂದು ಸಲ ಹೀಗೆ ಮಾಡುವುದಿಲ್ಲ ಎಂದು ಹೇಳುತ್ತಿದ್ದರು. ಭರವಸೆ ನೀಡುತ್ತಿದ್ದರು. ಆದರೂ, ಅವರು ಸರಿ ಹೋಗಲಿಲ್ಲ. ಕೆಲ ಶೋಗಳ ನಿರ್ಮಾಪಕರು ಕೊಳಕು ಮನರಂಜನೆಗಾಗಿ ಏನು ಮಾಡಲು ಸಿದ್ಧರು ಎಂದೆಲ್ಲ ಸಾಕ್ಷಿ ಆರೋಪ ಮಾಡಿದ್ದಾರೆ.
‘ನಾನು ಇರುವ ಕಡೆಯೇ ಎಲ್ಲರನ್ನೂ ಕರೆಯಿಸಿಕೊಂಡಿದ್ದೇನೆ. ನಾನೂ ಎಲ್ಲಿಗೂ ಹೋಗುವುದಿಲ್ಲ’ ಎಂದು ಹೇಳುವ ಮೂಲಕ ಚರ್ಚೆಗೆ ಕಾರಣರಾಗಿದ್ದಾರೆ ರಾಕಿಂಗ್ ಸ್ಟಾರ್ ಯಶ್ (Yash). ಹಲವು ದಿನಗಳಿಂದ ಯಶ್ ಬಾಲಿವುಡ್ (Bollywood) ಗೆ ಹೋಗುತ್ತಾರೆ ಎನ್ನುವ ಸುದ್ದಿಯಿತ್ತು. ರಾಮಯಣ ಇಟ್ಟುಕೊಂಡು ಬಾಲಿವುಡ್ ನಲ್ಲಿ ಸಿನಿಮಾವಾಗುತ್ತಿದ್ದು, ಅದರಲ್ಲಿ ಯಶ್ ರಾವಣನ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು.
ಬಿಟೌನ್ ನಲ್ಲಿ ಈ ಸುದ್ದಿಗೆ ಭಾರೀ ಬೇಡಿಕೆ ಬಂದಿತ್ತು. ಯಶ್ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆಂದು ಹಾಗೂ ಅವರು ರಾವಣನ ಪಾತ್ರ ಮಾಡಲಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಲಿವುಡ್ ನ ಅನೇಕರು ಮಾತನಾಡಿದರು. ಅದರಲ್ಲೂ ಕಂಗನಾ ರಣಾವತ್ (Kangana Ranaut), ಯಶ್ ಅವರು ರಾವಣನ (Raavan) ಪಾತ್ರ ಮಾಡುವುದು ಬೇಡ. ಅವರು ರಾಮನಾಗಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡರು.
ಯಶ್ ಅವರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಾಗಿ ಬಾಲಿವುಡ್ ಗೆ ಹೋಗುವುದು ನಿಜ ಇರಬಹುದು ಎಂದೇ ನಂಬಲಾಗಿತ್ತು. ಇವತ್ತು ಯಶ್ ಆ ಕುರಿತು ಮಾತನಾಡಿದ್ದಾರೆ. ಬಾಲಿವುಡ್ ಹಬ್ಬಿಸುವ ಸುಳ್ಳು ಸುದ್ದಿಗಳಿಗೆ ಬಲವಾದ ಏಟನ್ನೇ ಕೊಟ್ಟಿದ್ದಾರೆ.
ಮನೆ ದೇವರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್, ಮಾಧ್ಯಮಗಳ ಜೊತೆ ಮಾತನಾಡಿದರು. ಈ ಸಂದರ್ಭದಲ್ಲಿ ಬಾಲಿವುಡ್ ಗೆ ಹೋಗುವ ವಿಚಾರ ಕೂಡ ಬಂತು. ಅದಕ್ಕೆ ಪ್ರತಿಕ್ರಿಯೆ ನೀಡಿ ‘ನಾನು ಇರುವ ಕಡೆ ಎಲ್ಲರನ್ನೂ ಕರೆಸಿಕೊಂಡಿದ್ದೇನೆ. ನಾನು ಎಲ್ಲೂ ಹೋಗುವುದಿಲ್ಲ. ಡೋಂಟ್ ವರಿ’ ಎಂದರು ಯಶ್.
ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಸಮೇತ ಇಂದು ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.
ಸಿನಿಮಾ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಫ್ಯಾಮಿಲಿಗೆ ಟೈಮ್ ಕೊಟ್ಟಿದ್ದಾರೆ ಯಶ್. ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.
ಮೈಸೂರು ಯಶ್ ಅವರ ಹುಟ್ಟೂರು. ಅಲ್ಲದೇ, ಮೈಸೂರಿಗೆ ಹೋದಾಗೆಲ್ಲ ಯಶ್ ಹೀಗೆ ಪ್ರವಾಸ ಮಾಡುತ್ತಲೇ ಇರುತ್ತಾರೆ. ಇಷ್ಟದ ಸ್ಥಳಗಳಿಗೆ ಈ ಬಾರಿ ಹೆಂಡತಿ ಮತ್ತು ಹೆಂಡತಿ ಕುಟುಂಬವನ್ನು ಅವರು ಕರೆದುಕೊಂಡು ಹೋಗಿದ್ದಾರೆ. ಈ ಬಾರಿ ಮಕ್ಕಳಿಗೂ ತಮ್ಮ ಹುಟ್ಟೂರು ತೋರಿಸಿದ್ದಾರೆ ರಾಕಿಂಗ್ ಸ್ಟಾರ್.
ನಿತೀಶ್ ತಿವಾರಿ (Nitish Tiwari) ನಿರ್ದೇಶನದಲ್ಲಿ ಮೂಡಿ ಬರಲಿರುವ ರಾಮಾಯಣವನ್ನು ಆಧರಿಸಿದ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಈ ಸಿನಿಮಾದಲ್ಲಿ ಅವರು ರಾವಣನಾಗಿ ಅಬ್ಬರಿಸಲಿದ್ದಾರೆ ಎಂದು ಹೇಳಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಈ ಸುದ್ದಿ ಸದ್ದು ಮಾಡಿದ್ದರೂ, ಈ ಕುರಿತಾಗಿ ಯಶ್ ಆಗಲಿ ಅಥವಾ ಸಿನಿಮಾ ತಂಡವಾಗಲಿ ಯಾವುದೇ ಹೇಳಿಕೆ ಕೂಡ ನೀಡಿರಲಿಲ್ಲ. ಇದೀಗ ಮತ್ತೊಂದು ಸುದ್ದಿ ಹೊರ ಬಿದ್ದಿದ್ದು ಆ ಪಾತ್ರವನ್ನು ಮಾಡಲು ಯಶ್ ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಯಶ್ ಕುರಿತಾಗಿ ಗಾಸಿಪ್ ಮೇಲೆ ಗಾಸಿಪ್ ಹುಟ್ಟಿಕೊಳ್ಳುತ್ತಿದ್ದರೂ, ಅಧಿಕೃತವಾಗಿ ಯಾರೂ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಥವಾ ಅಲ್ಲಗಳೆಯುತ್ತಿಲ್ಲ. ರಾವಣನ ಪಾತ್ರವನ್ನು ಮಾಡಲ್ಲ ಎಂದು ಯಶ್ ಎಲ್ಲಿ ಅಧಿಕೃತವಾಗಿ ಹೇಳಿದ್ದಾರೋ ಗೊತ್ತಿಲ್ಲ. ಆದರೂ ಈ ಸುದ್ದಿ ಎಲ್ಲೆಡೆ ಪಸರಿಸಿದೆ. ಇತ್ತೀಚಿನ ವರ್ಷಗಳಲ್ಲಿ ಯಶ್ ಯಾವುದೇ ವಿಷಯವಿದ್ದರೂ ಅದನ್ನು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ಮೂಲಕವೇ ತಿಳಿಸುತ್ತಿದ್ದಾರೆ. ಅಲ್ಲಿಯೂ ಈ ವಿಷಯ ಪ್ರಸ್ತಾಪವಾಗಿಲ್ಲ. ಇದನ್ನೂ ಓದಿ:ಚಿಟ್ಟೆಯಂತೆ ಮಿಂಚಿದ ಸಂತೂರ್ ಮಮ್ಮಿ ಪ್ರಣಿತಾ ಸುಭಾಷ್
ರಾಮಾಯಣ (Ramayana) ಆಧಾರಿತ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹಲವು ತಿಂಗಳಿನಿಂದ ಬಾಲಿವುಡ್ ನಲ್ಲಿ ಹರಿದಾಡುತ್ತಿದೆ. ಇದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಭಾರತೀಯ ಸಿನಿಮಾ ರಂಗದ ಹೆಸರಾಂತ ನಟರು ಇರಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಅಧಿಕೃತವಾಗಿ ಸಿನಿಮಾ ಕುರಿತು ಯಾವುದೇ ಮಾಹಿತಿ ನೀಡದೇ ಇದ್ದರೂ, ತಾರಾಗಣದ ಯಾದಿ ಮಾತ್ರ ಹೊರಗೆ ಬಿದ್ದಿದೆ.
ಈ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ (Ranbir Kapoor) ಕಾಣಿಸಿಕೊಂಡರೆ, ಸೀತೆಯಾಗಿ ಆಲಿಯಾ ಭಟ್ (Alia Bhatt) ನಟಿಸಲಿದ್ದಾರೆ ಎನ್ನುವ ಸುದ್ದಿ ಇದೆ. ನಿಜ ಜೀವನದಲ್ಲೂ ಸತಿ-ಪತಿಯಾಗಿರುವ ರಣಬೀರ್ ಮತ್ತು ಆಲಿಯಾ ಭಟ್ ತೆರೆಯ ಮೇಲೂ ಅಂಥಧ್ದೇ ಪಾತ್ರ ಮಾಡಲಿದ್ದಾರೆ ಎಂದು ಬಿಟೌನ್ ಮಾತನಾಡಿಕೊಳ್ಳುತ್ತಿದೆ.
ಇದರ ಜೊತೆಗೆ ಕನ್ನಡದ ನಟಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಸ್ಟಾರ್ ಗಳ ಬಗ್ಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಟೀಕೆ ಮಾಡಿದ್ದರು. ಅದರಲ್ಲೂ ಪರೋಕ್ಷವಾಗಿ ರಣಬೀರ್ ಕಪೂರ್ ಟೀಕಿಸಿದ್ದರು. ಮಾದಕ ವ್ಯಸನಿ, ಬಿಳಿ ಇಲಿ ಅಂತೆಲ್ಲ ಕರೆದಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಕಂಗನಾ ರಣಾವತ್ (Kangana Ranaut), ‘ನಾನು ಇತ್ತೀಚಿನ ದಿನಗಳಲ್ಲಿ ರಾಮಾಯಣ ಸಿನಿಮಾ ಬಗ್ಗೆ ಕೇಳುತ್ತಿರುವೆ. ಅದರಲ್ಲಿ ಮಾದಕ ವ್ಯಸನಿಯೊಬ್ಬ ರಾಮನ ಪಾತ್ರ ಮಾಡಲಿದ್ದಾನಂತೆ. ತೆಳ್ಳಗಿನ ಬಿಳಿ ಇಲಿಯು ಕೆಟ್ಟ ರೀತಿಯಲ್ಲಿ ಬೇರೆಯವರ ಬಗ್ಗೆ ಪಿ.ಆರ್ ಮಾಡಿಕೊಂಡು ಓಡಾಡುವಲ್ಲಿ ಕುಖ್ಯಾತಿ ಪಡೆದವನು. ಇವನು ಕೇವಲ ನಟನಲ್ಲ, ಹೆಣ್ಣು ಬಾಕ ಕೂಡ. ಇಂಥವನು ರಾಮನಾಗಲು ಬೆಳೆದು ನಿಂತಿದ್ದಾನೆ’ ಎಂದು ಜರಿದಿದ್ದರು.
ಯಶ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ ಎಂದು ಕೇಳಿದ್ದೇನೆ. ರಾವಣ ಪಾತ್ರಕ್ಕಿಂತ ಅವರಿಗೆ ರಾಮನ ಪಾತ್ರ ಹೊಂದುತ್ತದೆ ಎಂದು ಪರೋಕ್ಷವಾಗಿ ರಾಕಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದರು. ಈ ಎಲ್ಲ ಹೇಳಿಕೆಗಳ ನಡುವೆಯೂ ಅವರು ರಣಬೀರ್ ಕಪೂರ್ ಎಚ್ಚರಿಕೆಯನ್ನೂ ನೀಡಿದ್ದು, ‘ನೀನು ಒಮ್ಮೆ ಹೊಡೆದರೆ ನಾನು ಸಾಯೋತನಕ ಹೊಡೆಯುತ್ತೇನೆ. ಗಲಾಟೆ ಮಾಡದೇ ದೂರ ಇರು’ ಎಂದು ಬರೆದುಕೊಂಡಿದ್ದರು.
ಬಾಲಿವುಡ್ ನಲ್ಲಿ ರಾಮಾಯಣ (Ramayana) ಆಧಾರಿತ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹಲವು ತಿಂಗಳಿನಿಂದ ಹರಿದಾಡುತ್ತಿದೆ. ಇದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಭಾರತೀಯ ಸಿನಿಮಾ ರಂಗದ ಹೆಸರಾಂತ ನಟರು ಇರಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಅಧಿಕೃತವಾಗಿ ಸಿನಿಮಾ ಕುರಿತು ಯಾವುದೇ ಮಾಹಿತಿ ನೀಡದೇ ಇದ್ದರೂ, ತಾರಾಗಣದ ಯಾದಿ ಮಾತ್ರ ಹೊರಗೆ ಬಿದ್ದಿದೆ.
ಈ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ (Ranbir Kapoor) ಕಾಣಿಸಿಕೊಂಡರೆ, ಸೀತೆಯಾಗಿ ಆಲಿಯಾ ಭಟ್ (Alia Bhatt) ನಟಿಸಲಿದ್ದಾರೆ ಎನ್ನುವ ಸುದ್ದಿ ಇದೆ. ನಿಜ ಜೀವನದಲ್ಲೂ ಸತಿ-ಪತಿಯಾಗಿರುವ ರಣಬೀರ್ ಮತ್ತು ಆಲಿಯಾ ಭಟ್ ತೆರೆಯ ಮೇಲೂ ಅಂಥಧ್ದೇ ಪಾತ್ರ ಮಾಡಲಿದ್ದಾರೆ ಎಂದು ಬಿಟೌನ್ ಮಾತನಾಡಿಕೊಳ್ಳುತ್ತಿದೆ. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್ ಎಂಗೇಜ್ಮೆಂಟ್
ಇದರ ಜೊತೆಗೆ ಕನ್ನಡದ ನಟಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸ್ಟಾರ್ ಗಳ ಬಗ್ಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಟೀಕೆ ಮಾಡಿದ್ದಾರೆ. ಅದರಲ್ಲೂ ಪರೋಕ್ಷವಾಗಿ ರಣಬೀರ್ ಕಪೂರ್ ಟೀಕಿಸಿದ್ದಾರೆ. ಮಾದಕ ವ್ಯಸನಿ, ಬಿಳಿ ಇಲಿ ಅಂತೆಲ್ಲ ಕರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಕಂಗನಾ ರಣಾವತ್ (Kangana Ranaut), ‘ನಾನು ಇತ್ತೀಚಿನ ದಿನಗಳಲ್ಲಿ ರಾಮಾಯಣ ಸಿನಿಮಾ ಬಗ್ಗೆ ಕೇಳುತ್ತಿರುವೆ. ಅದರಲ್ಲಿ ಮಾದಕ ವ್ಯಸನಿಯೊಬ್ಬ ರಾಮನ ಪಾತ್ರ ಮಾಡಲಿದ್ದಾನಂತೆ. ತೆಳ್ಳಗಿನ ಬಿಳಿ ಇಲಿಯು ಕೆಟ್ಟ ರೀತಿಯಲ್ಲಿ ಬೇರೆಯವರ ಬಗ್ಗೆ ಪಿ.ಆರ್ ಮಾಡಿಕೊಂಡು ಓಡಾಡುವಲ್ಲಿ ಕುಖ್ಯಾತಿ ಪಡೆದವನು. ಇವನು ಕೇವಲ ನಟನಲ್ಲ, ಹೆಣ್ಣು ಬಾಕ ಕೂಡ. ಇಂಥವನು ರಾಮನಾಗಲು ಬೆಳೆದು ನಿಂತಿದ್ದಾನೆ’ ಎಂದು ಜರಿದಿದ್ದಾರೆ.
ಯಶ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ ಎಂದು ಕೇಳಿದ್ದೇನೆ. ರಾವಣ ಪಾತ್ರಕ್ಕಿಂತ ಅವರಿಗೆ ರಾಮನ ಪಾತ್ರ ಹೊಂದುತ್ತದೆ ಎಂದು ಪರೋಕ್ಷವಾಗಿ ರಾಕಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ. ಈ ಎಲ್ಲ ಹೇಳಿಕೆಗಳ ನಡುವೆಯೂ ಅವರು ರಣಬೀರ್ ಕಪೂರ್ ಎಚ್ಚರಿಕೆಯನ್ನೂ ನೀಡಿದ್ದು, ‘ನೀನು ಒಮ್ಮೆ ಹೊಡೆದರೆ ನಾನು ಸಾಯೋತನಕ ಹೊಡೆಯುತ್ತೇನೆ. ಗಲಾಟೆ ಮಾಡದೇ ದೂರ ಇರು’ ಎಂದು ಬರೆದುಕೊಂಡಿದ್ದಾರೆ.
ನಿತೀಶ್ ತಿವಾರಿ (Nitish Tiwari) ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾವನ್ನು ಮಧು ಮಂಟೆನಾ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ತಾರಾಗಣದ ಬಗ್ಗೆ ಈ ಟೀಮ್ ತಲೆಕೆಡಿಸಿಕೊಂಡು ಕೂತಿದ್ದರೆ, ಇತ್ತ ಕಡೆ ಯಾರು, ಯಾವ ಪಾತ್ರ ಮಾಡಲಿದ್ದಾರೆ ಎನ್ನುವ ಲಿಸ್ಟ್ ಹೊರ ಬಿದ್ದಿದೆ. ಆದರೆ, ನಟರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.