Tag: Ramcharan

  • ರಾಮ್ ಚರಣ್ ಮಗುವಿಗೆ ‘ನಾಟು ನಾಟು’ ಗಾಯಕನಿಂದ ಸ್ಪೆಷಲ್ ಗಿಫ್ಟ್

    ರಾಮ್ ಚರಣ್ ಮಗುವಿಗೆ ‘ನಾಟು ನಾಟು’ ಗಾಯಕನಿಂದ ಸ್ಪೆಷಲ್ ಗಿಫ್ಟ್

    ಇಂದು ಬೆಳಗ್ಗೆಯಷ್ಟೇ ರಾಮ್ ಚರಣ್ ತಂದೆಯಾಗಿದ್ದಾರೆ. ‘ಹೆಣ್ಣು ಮಗುವಿನ (Baby Girl) ತಂದೆಯಾಗಿದ್ದಕ್ಕೆ ಹೆಮ್ಮೆ ಪಡುತ್ತೇನೆ’ ಎಂದು ಬೆಳಗ್ಗೆಯಷ್ಟೇ ರಾಮ್ ಚರಣ್ (Ramcharan) ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದರು. ಆ ಮಗುವಿಗಾಗಿ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ (Natu Natu) ಹಾಡಿನ ಗಾಯಕ ಕಾಲ ಭೈರವ್ (Kala Bhairav) ವಿಶೇಷ ಗಿಫ್ಟ್ ವೊಂದನ್ನು ಕೊಟ್ಟಿದ್ದಾರೆ. ಆ ಉಡುಗೊರೆಯನ್ನು ರಾಮ್ ಚರಣ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ರಾಮ್ ಚರಣ್ ಮತ್ತು ಉಪಾಸನಾ (Upasana) ದಂಪತಿಯ ಮಗುವಿಗಾಗಿ ಕಾಲ ಭೈರವ್ ಮೆಲೊಡಿ ಟ್ಯೂನ್ ವೊಂದನ್ನು ಕಂಪೋಸ್ ಮಾಡಿದ್ದು, ‘ಇಂಥದ್ದೊಂದು ರಾಗವನ್ನು ಕಂಪೋಸ್ ಮಾಡಿ ನನ್ನ ಮಗುವಿಗೆ ಉಡುಗೊರೆಯಾಗಿ (Gift) ನೀಡಿದ್ದಕ್ಕೆ ಧನ್ಯವಾದಗಳು ಕಾಲ ಭೈರವ’ ಎಂದು ರಾಮ್ ಚರಣ್ ಟ್ವೀಟ್ ಮಾಡಿದ್ದಾರೆ. ಅನೇಕರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ಇಂದು ಬೆಳಗ್ಗೆಯಷ್ಟೇ ಹೈದರಾಬಾದ್ ನ ಜುಬ್ಲಿ ಹಿಲ್ಸ್ ಅಪೋಲೊ ಆಸ್ಪತ್ರೆಯಲ್ಲಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ಅವರಿಗೆ ನಿಮ್ಮ ಹಾರೈಕೆ ಇರಲಿ ಎಂದು ರಾಮ್ ಚರಣ್ ತಿಳಿಸಿದ್ದಾರೆ. ಇದನ್ನೂ ಓದಿ:ಮನುಷ್ಯರಂತೆ ವರ್ತಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ- ‘ಪುಷ್ಪ’ ನಟಿ ಅನಸೂಯಾ

    ನಿನ್ನೆಯಷ್ಟೇ ತಮ್ಮ ಕುಟುಂಬದ ಕುಡಿಗಾಗಿ ಶಾಪಿಂಗ್ ಮಾಡುತ್ತಿರುವ ವಿಷಯವನ್ನು ಹಾಗೂ ಪ್ರಜ್ವಲ್ ಫೌಂಡೇಶನ್ ತಮ್ಮ ಮಗುವಿಗಾಗಿ ಸ್ಪೆಷಲ್ ತೊಟ್ಟಿಲನ್ನು ಗಿಫ್ಟ್ ನೀಡಿರುವುದಾಗಿ ಉಪಾಸನಾ ತಿಳಿಸಿದ್ದರು. ಪ್ರಜ್ವಲ್ ಫೌಂಡೇಶನ್ ನಲ್ಲಿ ಕೆಲಸ ಮಾಡುವ ಮಹಿಳೆಯರೇ ಈ ಸ್ಪೆಷಲ್ ತೊಟ್ಟಿಲನ್ನು ರೆಡಿ ಮಾಡಿದ್ದು, ಅದು ಮರದ ತೊಟ್ಟಿಲಾಗಿದೆ. ಉಪಾಸನಾ ಮಗುವಿಗಾಗಿಯೇ ಅದನ್ನು ಸಿದ್ಧ ಮಾಡಲಾಗಿದೆ ಎಂದು ತಿಳಿಸಲಾಗಿತ್ತು. ಅದೊಂದು ತೂಗು ತೊಟ್ಟಿಲಾಗಿದ್ದು ಕುಸುರಿ ಕೆಲಸವನ್ನೂ ಹೊಂದಿದೆ.

    ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದರು.

    ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ತಿಳಿಸಿದ್ದರು.

     

    ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ. ಕೊನೆಗೂ ತಮ್ಮದೇ ಆಸ್ಪತ್ರೆಯಲ್ಲಿ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

  • ಹೆಣ್ಣು ಮಗುವಿನ ತಂದೆಯಾದ ನಟ ರಾಮ್ ಚರಣ್

    ಹೆಣ್ಣು ಮಗುವಿನ ತಂದೆಯಾದ ನಟ ರಾಮ್ ಚರಣ್

    ತೆಲುಗಿನ ಖ್ಯಾತ ನಟ ರಾಮ್ ಚರಣ್ (Ramcharan) ಹಾಗೂ ಉಪಾಸನಾ (Upasana) ದಂಪತಿಗೆ ಹೆಣ್ಣು ಮಗುವಾಗಿದೆ. ಹೈದರಾಬಾದ್ ನ ಜುಬ್ಲಿ ಹಿಲ್ಸ್ ಅಪೋಲೊ ಆಸ್ಪತ್ರೆಯಲ್ಲಿ ಉಪಾಸನಾ ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ಅವರಿಗೆ ನಿಮ್ಮ ಹಾರೈಕೆ ಇರಲಿ ಎಂದು ರಾಮ್ ಚರಣ್ ತಿಳಿಸಿದ್ದಾರೆ.

    ನಿನ್ನೆಯಷ್ಟೇ ತಮ್ಮ ಕುಟುಂಬದ ಕುಡಿಗಾಗಿ ಶಾಪಿಂಗ್ ಮಾಡುತ್ತಿರುವ ವಿಷಯವನ್ನು ಹಾಗೂ ಪ್ರಜ್ವಲ್ ಫೌಂಡೇಶನ್ ತಮ್ಮ ಮಗುವಿಗಾಗಿ ಸ್ಪೆಷಲ್ ತೊಟ್ಟಿಲನ್ನು ಗಿಫ್ಟ್ ನೀಡಿರುವುದಾಗಿ ಉಪಾಸನಾ ತಿಳಿಸಿದ್ದರು. ಪ್ರಜ್ವಲ್ ಫೌಂಡೇಶನ್ ನಲ್ಲಿ ಕೆಲಸ ಮಾಡುವ ಮಹಿಳೆಯರೇ ಈ ಸ್ಪೆಷಲ್ ತೊಟ್ಟಿಲನ್ನು ರೆಡಿ ಮಾಡಿದ್ದು, ಅದು ಮರದ ತೊಟ್ಟಿಲಾಗಿದೆ. ಉಪಾಸನಾ ಮಗುವಿಗಾಗಿಯೇ ಅದನ್ನು ಸಿದ್ಧ ಮಾಡಲಾಗಿದೆ ಎಂದು ತಿಳಿಸಲಾಗಿತ್ತು. ಅದೊಂದು ತೂಗು ತೊಟ್ಟಿಲಾಗಿದ್ದು ಕುಸುರಿ ಕೆಲಸವನ್ನೂ ಹೊಂದಿದೆ.

    ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದರು.ಇದನ್ನೂ ಓದಿ:Exclusive: ತನ್ನ ನಿರ್ದೇಶನದ ಸಿನಿಮಾ ಬೆನ್ನಲ್ಲೇ ಹೊಸ ಪ್ರಾಜೆಕ್ಟ್‌ಗೆ ರಾಕೇಶ್ ಅಡಿಗ ಗ್ರೀನ್ ಸಿಗ್ನಲ್

    ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ತಿಳಿಸಿದ್ದರು.

     

    ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ. ಕೊನೆಗೂ ತಮ್ಮದೇ ಆಸ್ಪತ್ರೆಯಲ್ಲಿ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

  • ರಾಮ್ ಚರಣ್ ಪತ್ನಿ ಉಪಾಸನಾಗೆ ತೊಟ್ಟಿಲು ಗಿಫ್ಟ್

    ರಾಮ್ ಚರಣ್ ಪತ್ನಿ ಉಪಾಸನಾಗೆ ತೊಟ್ಟಿಲು ಗಿಫ್ಟ್

    ತೆಲುಗಿನ ಖ್ಯಾತ ನಟ ರಾಮ್ ಚರಣ್ (Ramcharan) ಹಾಗೂ ಉಪಾಸನಾ ದಂಪತಿ ತಮ್ಮ ಕುಟುಂಬಕ್ಕೆ ಮಗುವನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಿದ್ದಾರೆ. ತಮ್ಮ ಕುಟುಂಬದ ಕುಡಿಗಾಗಿ ಈಗಿನಿಂದಲೇ ಶಾಪಿಂಗ್ ಕೂಡ ಶುರು ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಉಪಾಸನಾ ಖುಷಿ ಸುದ್ದಿಯೊಂದನ್ನು ಹಂಚಿಕೊಂಡಿದ್ದು, ಪ್ರಜ್ವಲ್ ಫೌಂಡೇಶನ್ ತಮ್ಮ ಮಗುವಿಗಾಗಿ (Baby) ಸ್ಪೆಷಲ್ ತೊಟ್ಟಿಲನ್ನು (cradle) ಗಿಫ್ಟ್ ನೀಡಿರುವುದಾಗಿ ತಿಳಿಸಿದ್ದಾರೆ.

    ಪ್ರಜ್ವಲ್ ಫೌಂಡೇಶನ್ (Prajwal Foundation) ನಲ್ಲಿ ಕೆಲಸ ಮಾಡುವ ಮಹಿಳೆಯರೇ ಈ ಸ್ಪೆಷಲ್ ತೊಟ್ಟಿಲನ್ನು (Tottilu) ರೆಡಿ ಮಾಡಿದ್ದು, ಅದು ಮರದ ತೊಟ್ಟಿಲಾಗಿದೆ. ಉಪಾಸನಾ ಮಗುವಿಗಾಗಿಯೇ ಅದನ್ನು ಸಿದ್ಧ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅದೊಂದು ತೂಗು ತೊಟ್ಟಿಲಾಗಿದ್ದು ಕುಸುರಿ ಕೆಲಸವನ್ನೂ ಹೊಂದಿದೆ. ಇದನ್ನೂ ಓದಿ:ಅಪ್ಪ- ಅಮ್ಮನ ಕ್ಯೂಟ್ ಲವ್‌ ಸ್ಟೋರಿ ಹಂಚಿಕೊಂಡು ಮದುವೆ ವಾರ್ಷಿಕೋತ್ಸವಕ್ಕೆ ರಾಧಿಕಾ ವಿಶ್‌ ‌

    ಉಪಾಸನಾ (Upasana) ಹೆರಿಗೆ ವಿಚಾರ ಹಲವು ದಿನಗಳಿಂದ ಚರ್ಚೆ ಆಗುತ್ತಲೇ ಇದೆ. ರಾಮ್ ಚರಣ್ ಕುಟುಂಬಕ್ಕೆ ಯಾವ ಮಗು ಬರಲಿದೆ ಎನ್ನುವ ಪ್ರಶ್ನೆಯನ್ನು ಕೂಡ ಅಭಿಮಾನಿಗಳು ಕೇಳಿದ್ದರು. ಇದೀಗ ಆ ಕುರಿತು ಸ್ವತಃ ಉಪಾಸನಾ ಅವರೇ ಉತ್ತರಿಸಿದ್ದಾರೆ. ಜುಲೈನಲ್ಲಿ (July) ಹೆರಿಗೆ (Delivery) ಆಗಲಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

    ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದಾರೆ.

    ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ಹೇಳಿದ್ದಾರೆ.

    ಹಾಲಿವುಡ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ರಾಮ್ ಚರಣ್ ಅಮೆರಿಕಾಗೆ ಹೋಗಿದ್ದರು. ಅಲ್ಲಿ ವಾಹಿನಿಯೊಂದರ ಸಂದರ್ಶನದಲ್ಲಿ ಮೊದಲ ಮಗುವಿನ ಜನನದ ಕುರಿತು ಮಾತನಾಡಿದ್ದಾರೆ. ಪತ್ನಿಯ ಹೆರಿಗೆಗಾಗಿ ಸಿದ್ಧರಾಗಿ ಎಂದು ವೈದ್ಯರೊಬ್ಬರಿಗೆ ಹೇಳಿದ್ದರು. ಈ ಕಾರಣದಿಂದಾಗಿಯೇ ಗೊಂದಲ ಮೂಡಿತ್ತು. ಅಮೆರಿಕಾದಲ್ಲೇ ಉಪಾಸನ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು.

    ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ.

  • ಕ್ರಿಸ್‌ಮಸ್ ಗೆಟ್ ಟುಗೆದರ್ ಸಂಭ್ರಮದಲ್ಲಿ ಮೆಗಾ ಕಸಿನ್ಸ್

    ಕ್ರಿಸ್‌ಮಸ್ ಗೆಟ್ ಟುಗೆದರ್ ಸಂಭ್ರಮದಲ್ಲಿ ಮೆಗಾ ಕಸಿನ್ಸ್

    ಟಾಲಿವುಡ್‌ನ (Tollywood)  ಮೆಗಾ ಸ್ಟಾರ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಒಂದ್ ಕಡೆ ರಾಮ್ ಚರಣ್ (Ram Charan) ದಂಪತಿ ಪೋಷರಾಗುತ್ತಿರುವ ಗುಡ್ ನ್ಯೂಸ್ ನಡುವೆ ಕ್ರಿಸ್‌ಮಸ್ ಪಾರ್ಟಿಗೂ ಅದ್ದೂರಿ ಚಾಲನೆ ಸಿಕ್ಕಿದೆ. ರಾಮ್ ಚರಣ್ ಮತ್ತು ಅಲ್ಲು ಅರ್ಜುನ್ (Allu arjun) ಕುಟಂಬ ಪಾರ್ಟಿಯಲ್ಲಿ ಫನ್ ಮಾಡಿದ್ದಾರೆ.

    ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಕುಟುಂಬಗಳಲ್ಲಿ ಮೆಗಾ ಸ್ಟಾರ್ ಕುಟುಂಬ ಕೂಡ ಒಂದಾಗಿದ್ದು, ಈಗ ಮೆಗಾ ಕಸಿನ್ಸ್ ಕ್ರಿಸ್‌ಮಸ್ ಸಂಭ್ರಮದಲ್ಲಿ ಎಂಜಾಯ್ ಮಾಡಿದ್ದಾರೆ. ಸೀಕ್ರೆಟ್ ಸಂತಾ ಜೊತೆ ಎಲ್ಲರೂ ಫನ್ ಮಾಡಿದ್ದಾರೆ. ಹೈದರಾಬಾದ್ ಮನೆಯಲ್ಲಿ ರಾಮ್ ಚರಣ್ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಎಲ್ಲಾ ಕಸಿನ್ಸ್ ಒಟ್ಟಾಗಿ ಗೆಟ್ ಟುಗೆದರ್ ಪಾರ್ಟಿ ಮಾಡಿದ್ದಾರೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ಶ್ರುತಿ ಹಾಸನ್

    ಈ ಕುರಿತ ಫೋಟೋವನ್ನು ರಾಮ್ ಚರಣ್ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಲ್ಲು ಅರ್ಜುನ್ ದಂಪತಿ, ಸಾಯಿ ಧರಮ್ ತೇಜ್, ನಿಹಾರಿಕಾ, ವರುಣ್ ತೇಜ್, ಅಲ್ಲು ಸಿರೀಶ್, ರಾಮ್ ಚರಣ್ ಸಹೋದರಿ ಶ್ರೀಜಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಡಿಗೆ ತಾಯಿಯ ಮೂಲಕ ಮಗು ಪಡೆಯುತ್ತಿದ್ದಾರಾ ರಾಮ್‌ಚರಣ್ ದಂಪತಿ?

    ಬಾಡಿಗೆ ತಾಯಿಯ ಮೂಲಕ ಮಗು ಪಡೆಯುತ್ತಿದ್ದಾರಾ ರಾಮ್‌ಚರಣ್ ದಂಪತಿ?

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಪುತ್ರ ರಾಮ್‌ಚರಣ್ (Ramcharan) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಚೊಚ್ಚಲ ಮಗುವನ್ನ ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ ರಾಮ್ ಚರಣ್ ದಂಪತಿ. ಈ ಬೆನ್ನಲ್ಲೇ ಈ ಜೋಡಿ ಬಾಡಿಗೆ ತಾಯಿಯ(Surrogacy) ಮೂಲಕ ಮಗುವನ್ನ ಪಡೆಯುತ್ತಿದ್ದಾರೆ ಎಂಬ ಸುದ್ದಿ ಟಿಟೌನ್‌ನಲ್ಲಿ ಸದ್ದು ಮಾಡ್ತಿದೆ.

    ಇತ್ತೀಚೆಗಷ್ಟೇ ರಾಮ್ ಚರಣ್ ದಂಪತಿ ತಾವೂ ಪೋಷಕರಾಗುತ್ತಿರುವ ಬಗ್ಗೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದರು. ಮದುವೆಯಾಗಿ 10 ವರ್ಷಗಳ ನಂತರ ಚರಣ್- ಉಪಾಸನಾ(Upasana) ತಂದೆ ತಾಯಿ ಆಗುತ್ತಿರುವ ವಿಚಾರ ಮೆಗಾ ಫ್ಯಾಮಿಲಿಯಲ್ಲಿ ಖುಷಿ ಕೊಟ್ಟಿದೆ. ಆದರೆ ಇದೆಲ್ಲದರ ನಡುವೆ ಚರಣ್- ಉಪಾಸನಾ ಬಾಡಿಗೆ ತಾಯಿಯ ಮೂಲಕ ಮಗು ಪಡೆಯುತ್ತಾರಾ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ತಮ್ಮದೇ ಕೆಲ ಊಹಾಪೋಹದ ಲೆಕ್ಕಾಚಾರವನ್ನು ಮುಂದಿಡುತ್ತಿದ್ದಾರೆ. ನಟಿ ನಯನತಾರಾ(Nayanatara)  ಹಾದಿಯಲ್ಲೇ ಈ ಜೋಡಿ ಕೂಡ ಸಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

    ಇನ್ನು ಮೆಗಾ ಫ್ಯಾಮಿಲಿಗೆ ಹೊಸ ಅತಿಥಿಯ ಆಗಮನದ ಬಗ್ಗೆ ಇಷ್ಟೆಲ್ಲಾ ಚರ್ಚೆ ಆಗುತ್ತಿರುವಾಗ ಉಪಾಸನಾ ತವರು ಮನೆಗೆ ಹೋಗಿದ್ದಾರೆ. ಇನ್ನೂ ಇತ್ತೀಚೆಗೆ ಉಪಾಸನಾ ಅವರು ಮಾಡಿರುವ ಇನ್ಸ್ಟಾಗ್ರಾಂ ಪೋಸ್ಟ್ ಸದ್ದು ಮಾಡಿದೆ. ತನ್ನ ತಾಯಿ, ಅಜ್ಜಿ ಸೇರಿದಂತೆ ಕುಟುಂಬದ ಮಹಿಳಾ ಸದಸ್ಯರ ಆಶೀರ್ವಾದ ಪಡೆದಿದ್ದಾರೆ. ಮಾತೃತ್ವ ಅನುಭವಿಸಲು ಮುಂದಾಗಿರುವುದಾಗಿ ಹೇಳಿದ್ದಾರೆ. ತನ್ನ ಅತ್ತೆಯನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಬಾಡಿಗೆ ತಾಯಿಯ ಮೂಲಕ ಅವರು ಮಗು ಪಡೆಯುತ್ತಾರೆ ಎನ್ನುವುದೆಲ್ಲಾ ಸುಳ್ಳು, ಉಪಾಸನಾ ಅವರ ಈ ಪೋಸ್ಟ್‌ನಲ್ಲಿ ಅದು ಅರ್ಥವಾಗುತ್ತೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

    ಸರೋಗೆಸಿ ಸುದ್ದಿಯಾಗಲು ಕಾರಣ ಇತ್ತೀಚೆಗೆ ರಾಮ್‌ಚರಣ್‌ ದಂಪತಿ ಸಾಕಷ್ಟು ಕಡೆಗೆ ವೆಕೇಷನ್‌ಗೆ ತೆರಳಿದ್ದರು. ಈ ಪರಿಣಾಮ, ಉಪಾಸನಾ ನಿಜಕ್ಕೂ ಪ್ರೆಗ್ನೆಂಟ್ ಆಗಿದ್ದಾರಾ ಎಂಬ ಅನುಮಾನ ಶುರುವಾಗಿತ್ತು. ಪ್ರೆಗ್ನೆಂಟ್‌ ಆದವರು ಹೀಗೆ ಹೊರಗಡೆ ಸುತ್ತಾಡುತ್ತಾರಾ ಎಂಬ ವಿಷ್ಯ ಭಾರಿ ಚರ್ಚೆಗೆ ಗ್ರಾಸವಾಗಿತ್ತು.  ಅಷ್ಟಕ್ಕೂ ಈ ಸುದ್ದಿ ನಿಜಾನಾ ಕೇವಲ ಗಾಸಿಪ್‌ಗಷ್ಟೇ ಸೀಮಿತನಾ ಎಂಬುದನ್ನ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • `ಆರ್‌ಆರ್‌ಆರ್’ ಪಾರ್ಟ್ 2 ಬಗ್ಗೆ ಮಾಹಿತಿ ಬಿಚ್ಚಿಟ್ಟ ರಾಜಮೌಳಿ

    `ಆರ್‌ಆರ್‌ಆರ್’ ಪಾರ್ಟ್ 2 ಬಗ್ಗೆ ಮಾಹಿತಿ ಬಿಚ್ಚಿಟ್ಟ ರಾಜಮೌಳಿ

    ಸಿನಿಮಾರಂಗದಲ್ಲಿ ಹವಾ ಕ್ರಿಯೇಟ್ ಮಾಡಿರುವ ಸಿನಿಮಾ ಅಂದ್ರೆ ರಾಜಮೌಳಿ(RajaMouli) ನಿರ್ದೇಶನದ `ಆರ್‌ಆರ್‌ಆರ್'(RRR) ಚಿತ್ರ. ರಾಮ್‌ಚರಣ್(Ramcharan) ಮತ್ತು ತಾರಕ್ (Tarak) ಜುಗಲ್‌ಬಂದಿಗೆ ಫ್ಯಾನ್ಸ್ ಫಿದಾ ಆಗಿದ್ದರು. ಇದೀಗ `ಆರ್‌ಆರ್‌ಆರ್’ ಪಾರ್ಟ್ 2 ಬರೋದರ ಬಗ್ಗೆ ಸಂದರ್ಶನವೊಂದರಲ್ಲಿ ರಾಜಮೌಳಿ ರಿವೀಲ್ ಮಾಡಿದ್ದಾರೆ.

    ಈ ವರ್ಷ ತ್ರಿಬಲ್ ಆರ್ ಭಾರತದಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ಚಿತ್ರ ಪ್ರೇಕ್ಷಕ ಪ್ರಭುಗಳು ಫಿದಾ ಆಗಿದ್ದರು. ಇತ್ತೀಚೆಗೆ ಈ ಚಿತ್ರವನ್ನು ಜಪಾನ್ ನಲ್ಲೂ ರಿಲೀಸ್ ಮಾಡಲಾಯಿತು. ಅಲ್ಲೂ ಕೂಡ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. `ಆರ್‌ಆರ್‌ಆರ್’ ಸೂಪರ್ ಸಕ್ಸಸ್ ಆದ ಬೆನ್ನಲ್ಲೇ ಸಿನಿಮಾದ ಸೀಕ್ವೆಲ್ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿತ್ತು. ಇದೀಗ ಮೊದಲ ಬಾರಿಗೆ ಆರ್‌ಆರ್‌ಆರ್ ಪಾರ್ಟ್ 2(RRR Part 2) ಬಗ್ಗೆ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಮದುವೆ ಸುದ್ದಿ ನಂತರ ಮತ್ತೊಂದು ಗುಡ್ ನ್ಯೂಸ್ ಕೊಟ್ರು ಹನ್ಸಿಕಾ ಮೋಟ್ವಾನಿ

    ನಿರ್ದೇಶಕ ರೌಜಮೌಳಿ ಆರ್‌ಆರ್‌ಆರ್ -2 ಬರುವುದು ಕನ್ಫರ್ಮ್ ಎಂದು ಹೇಳಿದ್ದಾರೆ. ಇತ್ತೀಚಿಗಷ್ಟೆ ಚಿಕಾಗೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜಮೌಳಿ ಆರ್‌ಆರ್‌ಆರ್ ಸೀಕ್ವೆಲ್ ಬಗ್ಗೆ ವಿವರಿಸಿದ್ದಾರೆ. ಆರ್ ಆರ್ ಆರ್-2 ಬರುತ್ತಾ ಇಲ್ವೋ ಎನ್ನುವ ಅಭಿಮಾನಿಗಳ ಗೊಂದಲಕ್ಕೆ ಉತ್ತರ ನೀಡಿದ್ದಾರೆ. ಈ ಬಗ್ಗೆ ಆರ್‌ಆರ್‌ಆರ್ ನಿರ್ದೇಶಕ, ನನ್ನ ಎಲ್ಲಾ ಸಿನಿಮಾಗಳಿಗೆ ನನ್ನ ತಂದೆಯೇ ಕಥೆ ಬರೆಯುವುದು. ನಾವು `ಆರ್‌ಆರ್‌ಆರ್ 2′ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಅವರೇ ಕಥೆಯ ಮೇಲೆ ಕೆಲಸ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

    `ಬಾಹುಬಲಿ’ ಬಳಿಕ ರೌಜಮೌಳಿ ಆರ್‌ಆರ್‌ಆರ್ ಸಿನಿಮಾ ಮೂಲಕ ಮತ್ತೆ ಸದ್ದು ಮಾಡಿದರು. ಇಡೀ ವಿಶ್ವ ಟಾಲಿವುಡ್ ಕಡೆ ತಿರುಗಿ ನೋಡುವಂತೆ ಮಾಡಿದರು. ದಕ್ಷಿಣದ ಸಿನಿಮಾಗಳ ಬಗ್ಗೆ ಮತ್ತೆ ದೇಶ ವಿದೇಶಗಳಲ್ಲಿ ಚರ್ಚೆಯಾಗುವಂತೆ ಮಾಡಿದರು. ಇದೀಗ ಆರ್‌ಆರ್‌ಆರ್ ಸೀಕ್ವೆಲ್ ಬಗ್ಗೆ ಕೇಳಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿಗೆ ವಿಶೇಷ ಮನವಿ ಮಾಡಿದ ಜ್ಯೂ.ಮೆಗಾಸ್ಟಾರ್

    ಪತ್ನಿಗೆ ವಿಶೇಷ ಮನವಿ ಮಾಡಿದ ಜ್ಯೂ.ಮೆಗಾಸ್ಟಾರ್

    ಟಾಲಿವುಡ್ ಸ್ಟಾರ್ ರಾಮ್‌ಚರಣ್ `ಆರ್‌ಆರ್‌ಆರ್’ ಚಿತ್ರದ ನಂತರ ಸಕ್ಸಸ್ ನಂತರ ಮತ್ತೆ ಸಿನಿಮಾಗಳಲ್ಲಿ ಆಕ್ಟೀವ್ ಆಗಿದ್ದಾರೆ. ಜ್ಯೂ.ಮೆಗಾಸ್ಟಾರ್ ರಾಮ್‌ಚರಣ್ ಸಿನಿಮಾ ಶೂಟಿಂಗ್‌ಗಾಗಿ ವಿಶಾಖಪಟ್ಟಣದಲ್ಲಿ ಬೀಡುಬಿಟ್ಟಿದ್ದಾರೆ. ಈ ಗ್ಯಾಪ್‌ನಲ್ಲಿ ಪತ್ನಿ ಉಪಾಸನಾಗೆ ವಿಶೇಷ ಮನವಿಯೊಂದನ್ನ ಮಾಡಿದ್ದಾರೆ. ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗ್ತಿದೆ.

    ರಾಮ್ ಚರಣ್ ನಟನೆಯ `ಆರ್‌ಆರ್‌ಆರ್’ ಚಿತ್ರ ಸೂಪರ್ ಸಕ್ಸಸ್ ಕಂಡಿದೆ. ಆದರೆ `ಆಚಾರ್ಯ’ ಸಿನಿಮಾ ಕಲೆಕ್ಷನ್‌ನಲ್ಲಿ ಸೋತಿದೆ. ಈ ಎರಡು ಸಿನಿಮಾಗಳ ನಂತರ ಬ್ರೇಕ್ ತೆಗೆದುಕೊಳ್ಳದೇ ಜ್ಯೂ.ಮೆಗಾಸ್ಟಾರ್ ಶಂಕರ್ ನಿರ್ದೇಶನದ `ಆರ್‌ಸಿ 15′ ಚಿತ್ರದ ಶೂಟಿಂಗ್‌ಗೆ ವಿಶಾಖಪಟ್ಟಣಕ್ಕೆ ತೆರೆಳಿದ್ದಾರೆ. ಹೀಗಾಗಿ ವಕೇಶನ್‌ಗೆ ತೆರಳಲು ಇನ್ನೂ ಒಂದಿಷ್ಟು ಸಮಯ ಕಾಯಬೇಕಾಗುತ್ತದೆ ಅಂತಾ ಪತ್ನಿಗೆ ತಿಳಿಸಿದ್ದಾರೆ.

    ಕೊವೀಡ್ ಕಾರಣದಿಂದ ಒಂದು ಚಿತ್ರ ಮುಗಿದ ತಕ್ಷಣ ಬೇರೆ ಪ್ರಾಜೆಕ್ಟ್ ಕೈಗಿತ್ತಿಕೊಳ್ತಿದ್ದಾರೆ. ಹಾಗಾಗಿ ಬ್ರೇಕ್‌ಯಿಲ್ಲದೇ ಕೆಲಸ ಮಾಡ್ತಿರೋ ರಾಮ್‌ಚರಣ್ ಇದೀಗ ತಮ್ಮ ಫೋಟೋ ಶೇರ್ ಮಾಡಿ, ಮಡದಿಗೆ ವಿಶೇಷವಾಗಿ ಮನವಿ ಮಾಡಿದ್ದಾರೆ. ವಕೇಶನ್‌ಗೆ ಹೋಗಲು ಇನ್ನು ಒಂದಿಷ್ಟು ಸಮಯ ಬೇಕು ಅಂತಾ ಪ್ರೀತಿಯಿಂದ ಮನವಿ ಮಾಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗ್ತಿದೆ. ಇದನ್ನೂ ಓದಿ: ಕಾಲಿವುಡ್‌ನಲ್ಲೂ ಯಶ್‌ ಮೇನಿಯಾ: 100 ಕೋಟಿ ಬಾಚಿದ `ಕೆಜಿಎಫ್ 2′

     

    View this post on Instagram

     

    A post shared by Ram Charan (@alwaysramcharan)

    ರಾಮ್‌ಚರಣ್ ನಟನೆಯ 15ನೇ ಸಿನಿಮಾಗೆ ಶಂಕರ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ವಿಭಿನ್ನ ಪಾತ್ರದ ಮೂಲಕ ಸಿನಿರಸಿಕರ ಗಮನ ಸೆಳೆಯಲು ಸಜ್ಜಾಗಿದ್ದಾರೆ.

  • ಬಾಕ್ಸಾಫೀಸ್‍ನಲ್ಲಿ ಮಕಾಡೆ ಮಲಗಿದ ಆಚಾರ್ಯರು: ಮೆಗಾ ಸ್ಟಾರ್ ಅಭಿಮಾನಿಗಳಿಗೆ ನಿರಾಸೆ

    ಬಾಕ್ಸಾಫೀಸ್‍ನಲ್ಲಿ ಮಕಾಡೆ ಮಲಗಿದ ಆಚಾರ್ಯರು: ಮೆಗಾ ಸ್ಟಾರ್ ಅಭಿಮಾನಿಗಳಿಗೆ ನಿರಾಸೆ

    ಮೆಗಾಸ್ಟಾರ್ ಚಿರಂಜೀವಿ ಹಾಗೂ ಮೆಗಾ ಪವರ್ ಸ್ಟಾರ್ ರಾಮ್‍ಚರಣ್ ಅಭಿನಯಿಸಿರುವ ಆಚಾರ್ಯ ಚಿತ್ರ ಏಪ್ರಿಲ್ 29 ರಂದು ಜಗತ್ತಿನಾದ್ಯಂತ ತೆರೆ ಕಂಡಿತ್ತು. ಚಿತ್ರವು ಬಾಕ್ಸಾಫೀಸ್‍ನಲ್ಲಿ ಅಷ್ಟೇನು ಹೇಳಿಕೊಳ್ಳುವಷ್ಟು ಕಮಾಲು ಮಾಡದೆ ನೀರಸ ಪ್ರದರ್ಶನ ತೋರಿದೆ.

    ಚಿತ್ರದಲ್ಲಿ ಇಬ್ಬರು ಮಹಾನ್ ಕಲಾವಿದರಿದ್ದರು. ಸಿನಿಮಾದ ಮೇಕಿಂಗ್ ಸರಿ ಇಲ್ಲ ಎನ್ನುವ ಕಾರಣಕ್ಕೇ ಪ್ರೇಕ್ಷಕರು ದೂರ ಸರಿಯಿತ್ತಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಈಗ ಈ ಚಿತ್ರ ಜಗತ್ತಿನಾದ್ಯಂತ ಹಣ ಗಳಿಸಲು ಹೆಣಗಾಡುತ್ತಿದೆ. ಇದನ್ನೂ ಓದಿ: ಬಾಲಿವುಡ್ ಗಲ್ಲಾಪೆಟ್ಟಿಗೆಯಲ್ಲಿ 18ನೇ ದಿನವೂ ರಾಕಿಭಾಯ್ ಅಬ್ಬರ: 400 ಕೋಟಿಯತ್ತ `ಕೆಜಿಎಫ್ 2′

    ಮೂರು ದಿನಗಳಲ್ಲಿ ಆಚಾರ್ಯ ವಿಶ್ವಾದ್ಯಂತ 73.1 ಕೋಟಿ ಕಲೆಕ್ಷನ್ ಮಾಡಿದ್ದು, ಥಿಯೇಟರ್‌ಗಳಲ್ಲಿ ಇನ್ನೇನೂ ಬಹಳ ದಿನ ರನ್ ಆಗುವ ಹಂತದಲ್ಲಿಲ್ಲ. ವರದಿಯ ಪ್ರಕಾರ ಚಿತ್ರದ ಥಿಯೇಟ್ರಿಕಲ್ ರೈಟ್ಸ್ 140 ಕೋಟಿ ರೂ. ಸಂಗ್ರಹವನ್ನು ನೋಡಿದರೆ ಆಚಾರ್ಯರು ಗಲ್ಲಾ ಪೆಟ್ಟಿಗೆಯಲ್ಲಿ ಮಕಾಡೆ ಮಲಗುವುದಂತು ಗ್ಯಾರಂಟಿ. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ಮೊದಲವಾರಂತ್ಯದಲ್ಲಿ ಚಿತ್ರವೂ ಕೇವಲ ರೂ. 73 ಕೋಟಿ ಕಲೆಕ್ಷನ್ ಮಾಡಿದ್ದು, ಆರ್‍ಆರ್‍ಆರ್ ಮತ್ತು ಕೆಜಿಎಫ್-ಚಾಪ್ಟರ್ 2 ಚಿತ್ರದ ಅಬ್ಬರದಿಂದಾಗಿ ಚಿತ್ರ ತಂಡಕ್ಕೆ ದೊಡ್ಡ ನಿರಾಸೆಯಾಗಿದೆ. ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದು, ನಾಯಕಿಯಾಗಿ ಕನ್ನಡತಿ ಪೂಜಾ ಹೆಗ್ಡೆ ನಟಿಸಿದ್ದಾರೆ.

  • RRR ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ರೆಡ್ಡಿ ಹಾಡಿದ ಕೊಮ್ಮ ಉಯ್ಯಾಲ ಹಾಡು ರಿಲೀಸ್

    RRR ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ರೆಡ್ಡಿ ಹಾಡಿದ ಕೊಮ್ಮ ಉಯ್ಯಾಲ ಹಾಡು ರಿಲೀಸ್

    ಗಾಗಲೇ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿರುವ ಆರ್‌ಆರ್‌ಆರ್ ಚಿತ್ರತಂಡವು ವೀಕೆಂಡ್‌ನಲ್ಲಿ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದೆ.

    ವೀಕೆಂಡ್ ಖುಷಿಯಲ್ಲಿರುವ ಅಭಿಮಾನಿಗಳಿಗಾಗಿ ಚಿತ್ರದ ಆರಂಭದಲ್ಲೇ ಬರುವ `ಕೊಮ್ಮ ಉಯ್ಯಾಲ’ ಗೀತೆಯನ್ನು ಬಿಡುಗಡೆ ಮಾಡಿದೆ. ಕನ್ನಡ, ತೆಲುಗು, ಹಿಂದಿ ಹಾಗೂ ತಮಿಳು, ಮಲಯಾಳಂ ಭಾಷೆಗಳಲ್ಲೂ ಯುಟ್ಯೂಬ್‌ನಲ್ಲಿ ಸಾಂಗ್ ರಿಲೀಸ್ ಆಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೆ ವೀವ್ಸ್ ಪಡೆದಿದೆ. ಇದನ್ನೂ ಓದಿ: ಆಲಿಯಾ- ರಣಬೀರ್ ಮದುವೆಗೆ ರಾಕಿ ಸಾವಂತಗಿಲ್ಲ ಆಹ್ವಾನ: ರಾಕಿ ಆ ಬಯಕೆ ಈಡೇರಲೇ ಇಲ್ಲ

    RRR NEW SONG ONE

    ಆರ್‌ಆರ್‌ಆರ್ ಚಿತ್ರತಂಡ ಈಗಾಗಲೇ ಬಿಡುಗಡೆ ಮಾಡಿರುವ `ನಾಟು ನಾಟು’ ಸಾಂಗ್ 5 ಭಾಷೆಗಲ್ಲೂ ಸಖತ್ ಸೌಂಡ್ ಮಾಡಿದೆ. ರಾಮ್‌ಚರಣ್ ಹಾಗೂ ಜ್ಯೂ. ಎನ್‌ಟಿಆರ್ ಈ ಹಾಡಿಗೆ ಹಾಕಿರುವ ಜಬರ್ದಸ್ತ್ ಸ್ಟೆಪ್‌ಗಳು ಅಭಿಮಾನಿಗಳನ್ನು ಹುಚ್ಚೆಂದು ಕುಣಿಯುವಂತೆ ಮಾಡಿದೆ.

    ಇದೀಗ ಪ್ರತಿಯೊಬ್ಬರಿಗೂ ಇಷ್ಟವಾಗುವಂತ ಕೊಮ್ಮಾ ಉಯ್ಯಾಲ ಗೀತೆಯನ್ನು 5 ಭಾಷೆಗಳಲ್ಲೂ ಬಿಡುಗಡೆ ಮಾಡಿದ್ದು, ಮೆಚ್ಚುಗೆ ಗಳಿಸಿದೆ. ಅಜಾದ್ ವರದರಾಜ್ ಅವರು ಬರೆದಿರುವ ಈ ಸಾಂಗ್ ಅನ್ನು ಎಂ.ಎಂ.ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಖ್ಯಾತ ಗಾಯಕಿ ಪ್ರಕೃತಿ ರೆಟ್ಟಿ ಹಾಡಿ ಮಿಂಚಿದ್ದಾರೆ. 2.49 ನಿಮಿಷದ ಗೀತೆ ಎಲ್ಲರಿಗೂ ಅಚ್ಚುಮೆಚ್ಚಾಗಿದೆ. ಇದನ್ನೂ ಓದಿ : ಪೂಜಾ ಹೆಗ್ಡೆ 1 ಕೋಟಿ ಸಂಭಾವನೆ ಪಡೆದ ಹಾಡಿನಲ್ಲಿ ಏನಿದೆ?: ಫನ್ ಅಂಡ್ ಫ್ರಸ್ಟ್ರೇಷನ್ 

    ಹಸಿರು ಪ್ರಕೃತಿಯ ಅನಾವರಣದಿಂದ ಆರಂಭವಾಗುವ ಈ ಗೀತೆಗೆ ನುಡಿಸಿರುವ ವಾದ್ಯಗಳು ಹಾಗೂ ವಾತಾವರಣ ಅಪ್ಪಟ ಜನಪದ ಶೈಲಿಯಿಂದ ಕೂಡಿದಂತಿದೆ. ಕಾಡುಜನರ ಮುಗ್ಧ ಮನಸ್ಥಿತಿಯನ್ನೂ ಮುಖಭಾವದಲ್ಲಿ ಅರಳಿಸಿದ್ದಾರೆ. ಅಲ್ಲಲ್ಲಿ ಚಿತ್ರದ ಸನ್ನಿವೇಶಗಳನ್ನು ಹಿಡಿದಿದ್ದರೂ ಪ್ರಕೃತಿ ಸೌಂದರ್ಯವನ್ನೇ ಹೆಚ್ಚಾಗಿ ಕೇಂದ್ರೀಕರಿಸಿದೆ. ವಾದ್ಯಕ್ಕೆ ದನಿಗೂಡಿಸಿದಂತೆ ಕೇಳಿಬರುವ ಹಕ್ಕಿಗಳ ಚಿಲಿಪಿಲಿ ನಾದ ಪ್ರಕೃತಿ ಪ್ರಿಯರನ್ನೂ ಸೆಳೆಯುತ್ತದೆ.

    RRR NEW SONG (1)

    ತೆಲುಗಿನಲ್ಲಿ `ಕೋಮ್ಮಾ ಉಯ್ಯಾಲಾ ಕೋನಾ ಜಂಪಾಲ, ಅಮ್ಮಾ ಉಳ್ಳೋ ನೇನು ರೋಜು ವೋಗಾಲ ರೋಜು ವೋಗಾಲ’, ಕನ್ನಡದಲ್ಲಿ `ಕೊಂಬೆ ಉಯ್ಯಾಲೆ, ಕಾಡೆ ಹೊಂಬಾಳೆ, ಅಮ್ಮನ ಮಡಿಲೆನಗೆ ಲಾಲಿ ಸುವ್ವಾಲಿ’ ಹಾಗೂ ಹಿಂದಿ ಭಾಷೆಯಲ್ಲಿ `ಅಂಬರ್‌ಸೆ ತೋಡ, ಸೂರಜ್‌ಕೋ ಪ್ಯಾರಾ’ ಶೀರ್ಷಿಕೆಯೊಂದಿಗೆ ಮೂಡಿ ಬಂದಿರುವ ಈ ಗೀತೆ ಲಕ್ಷಾಂತರ ಅಭಿಮಾನಿಗಳಿಂದ ಬೇಶ್ ಎನಿಸಿಕೊಂಡಿದೆ. ಇದನ್ನೂ ಓದಿ : ಕೆಜಿಎಫ್-2 : ಎರಡನೇ ದಿನಕ್ಕೆ 240 ಕೋಟಿ ಬಾಚಿದ ರಾಕಿ ಭಾಯ್ : ಗ್ರೌಂಡ್ ರಿಪೋರ್ಟ್

    ಕೊಮ್ಮ ಉಯ್ಯಲ ಹಾಡನ್ನು ಬಳ್ಳಾರಿಯ ಪ್ರಕೃತಿ ರೆಡ್ಡಿ ಹಾಡಿದ್ದಾಳೆ. 2010 ಜುಲೈ 21ರಂದು ಬಳ್ಳಾರಿಯಲ್ಲಿ ಜನಿಸಿದ ಈಕೆ ತೆಲುಗಿನ ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಪರ್ಧೆ ಮಾಡಿದ್ದಳು. ಪ್ರಸ್ತುತ ಈಕೆ ಪೋಷಕರ ಜೊತೆ ಮುಂಬೈನಲ್ಲಿ ನೆಲೆಸಿದ್ದಾಳೆ.

  • ಮಧ್ಯರಾತ್ರಿಯೇ RRR ರಿಲೀಸ್ – ಥಿಯೇಟರ್‌ನತ್ತ ಮುಗಿಬೀಳುತ್ತಿದ್ದಾರೆ ಅಭಿಮಾನಿಗಳು

    ಮಧ್ಯರಾತ್ರಿಯೇ RRR ರಿಲೀಸ್ – ಥಿಯೇಟರ್‌ನತ್ತ ಮುಗಿಬೀಳುತ್ತಿದ್ದಾರೆ ಅಭಿಮಾನಿಗಳು

    ಬೆಂಗಳೂರು: ಟಾಲಿವುಡ್ ನಟ ರಾಮ್‍ಚರಣ್ ತೇಜ ಹಾಗೂ ಜೂ.ಎನ್‌ಟಿಆರ್ ಅಭಿನಯದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾ ಇಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ.

    ಬಹುಬಲಿ ನಿರ್ದೇಶಕ ರಾಜಮೌಳಿ ಇದೇ ಮೊದಲ ಬಾರಿಗೆ ತೆಲುಗಿನ ಇಬ್ಬರು ಸ್ಟಾರ್ ನಟರಿಗೆ ಒಂದೇ ಸಿನಿಮಾದಲ್ಲಿ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ನೋಡಲು ಅಭಿಮಾನಿಗಳು ಥಿಯೇಟರ್‌ನತ್ತ ಮುಗಿಬೀಳುತ್ತಿದ್ದಾರೆ. ಅಲ್ಲದೇ ರಾಮ್‍ಚರಣ್ ಹಾಗೂ ಜೂ.ಎನ್‍ಟಿಆರ್ ಕಟೌಟ್‍ಗಳಿಗೆ ಹಾರ ಹಾಕಿ, ಕ್ಷೀರಾಭಿಷೇಕ ಮಾಡಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಅಂಜನ್ ಚಿತ್ರ ಮಂದಿರದಲ್ಲಿ ತಡರಾತ್ರಿ 12:30ಕ್ಕೆ ಆರ್‌ಆರ್‌ಆರ್‌ ಮೊದಲ ಶೋ ಬಿಡುಗಡೆಯಾಗಿದ್ದು, ಸಿನಿಮಾ ವೀಕ್ಷಿಸಿದ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಅಂಜನ್ ಥಿಯೇಟರ್ ಆವರಣದಲ್ಲಿ ರಾಮ್ ಚರಣ್ ಹಾಗೂ ಜೂ.ಎನ್‌ಟಿಆರ್ ಅಭಿಮಾನಿಗಳ ಪರಸ್ಪರ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಅಲ್ಲದೇ ನಗರದ 14ಕ್ಕೂ ಹೆಚ್ಚು ಚಿತ್ರ ಮಂದಿರದಲ್ಲಿ ರಾತ್ರಿ 12 ಹಾಗೂ ಬೆಳಿಗ್ಗೆ 4 ಗಂಟೆಗೆ ಮೊದಲ ಶೋ ಪ್ರದರ್ಶನ ಕಂಡಿದೆ.

    ಬಾಹುಬಲಿ ಸಿನಿಮಾ ನಂತರ ರಾಜಮೌಳಿ ಅವರು ಆರ್‌ಆರ್‌ಆರ್‌ ಸಿನಿಮಾವನ್ನು ನಿರ್ದೇಶಿಸಿದ್ದು, ಈ ಚಿತ್ರದಲ್ಲಿ ಜೂ.ಎನ್‌ಟಿಆರ್ ಮತ್ತು ರಾಮ್ ಚರಣ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ ಮತ್ತು ಬಾಲಿವುಡ್ ನಟ ಅಜಯ್ ದೇವಗನ್, ನಟಿ ಆಲಿಯಾ ಭಟ್ ಸೇರಿದಂತೆ ಹಲವಾರು ಕಲಾವಿದರು ಆರ್‍ಆರ್‍ಆರ್ ಸಿನಿಮಾದಲ್ಲಿ ಬಣ್ಣಹಚ್ಚಿದ್ದಾರೆ. ಇದನ್ನೂ ಓದಿ: ‘ಗಂಗೂಬಾಯಿ’ ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಪಾಕ್ ನಟ

    ಡಿವಿವಿ ಎಂಟರ್‍ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್‌ಆರ್‌ಆರ್‌ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಿದೆ.