Tag: Ramesh Kumar

  • ವೇದಿಕೆ ಮೇಲೆ ಕಣ್ಣೀರು ಹಾಕಿದ ಸ್ಪೀಕರ್ ರಮೇಶ್ ಕುಮಾರ್ – ವಿಡಿಯೋ ನೋಡಿ

    ವೇದಿಕೆ ಮೇಲೆ ಕಣ್ಣೀರು ಹಾಕಿದ ಸ್ಪೀಕರ್ ರಮೇಶ್ ಕುಮಾರ್ – ವಿಡಿಯೋ ನೋಡಿ

    ಕೋಲಾರ: ನಗರದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ವೇದಿಕೆ ಮೇಲೆಯೇ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರು ಹಾಕಿದ್ದಾರೆ.

    ಕೋಲಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಕುರುಬರ ಸಂಘದ ವತಿಯಿಂದ ನಗರದ ಜಿಲ್ಲಾಸ್ಪತ್ರೆ ವೃತ್ತದಲ್ಲಿ ಅದ್ಧೂರಿ ಕನಕ ಜಯಂತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ರಮೇಶ್ ಕುಮಾರ್ ಅವರು ಭಾವುಕರಾದರು. ಅಲ್ಲದೇ ಸಿದ್ದರಾಮಯ್ಯನವರ ಸೋಲು ನನ್ನ ಸಾವಿಗಿಂತ ಹೆಚ್ಚು ನೋವುಂಟು ಮಾಡಿದೆ ಎಂದು ಹೇಳಿ ಕಣ್ಣೀರು ಹಾಕಿದರು.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದ್ದೆ. ಆದರೆ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸೋಲು ಅನುಭವಿಸಿದರು. ಸಿದ್ದರಾಮಯ್ಯ ಅವರು ಸೋತಿದ್ದು ತುಂಬಾ ದು:ಖವಾಯಿತು. ಒಬ್ಬ ಕುರಿಕಾಯೋ ಸಮಾಜದಲ್ಲಿ ಹುಟ್ಟಿ 13 ಬಾರಿ ಬಜೆಟ್ ಮಂಡಿಸಿದ ಧೀಮಂತ ನಾಯಕ ಸಿದ್ದರಾಮಯ್ಯ. ಅವರನ್ನ ಏಕವಚನದಲ್ಲಿ ಮಾತನಾಡಿಸುವವರಿಗೆ ತಕ್ಕ ಪಾಠ ಕಲಿಸಿ ಎಂದು ಹೇಳುವ ಮೂಲಕ ಕೋಲಾರದ ಮಾಜಿ ಶಾಸಕ ವರ್ತೂರು ಪ್ರಕಾಶ್ ಅವರಿಗೆ ರಮೇಶ್ ಕುಮಾರ್ ಟಾಂಗ್ ನೀಡಿದರು.

    ಸಮಾಜದಲ್ಲಿ ಎಲ್ಲಾ ವರ್ಗದವರ ಒಳಿತಿಗಾಗಿ ಸಿದ್ದರಾಮಯ್ಯ ಅವರು ಶ್ರಮಿಸಿದ್ದಾರೆ. ಅವರ ಆಡಳಿತದಲ್ಲಿ ಯಾರಿಗೂ ಅನ್ಯಾಯ ಮಾಡದೇ ಯಶಸ್ವಿಯಾಗಿ ಸರ್ಕಾರ ನಡೆಸಿದ್ದಾರೆ. ಇಂತಹ ಧೀಮಂತ ನಾಯಕನನ್ನು ಕೆಳಗೆ ಬೀಳಲು ಬಿಡಬಾರದು ಎಂದು ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಮಾಜ ಮೆಚ್ಚಿಸುವ ಕೆಲಸ ಬೇಡ: ರಮೇಶ್‍ಕುಮಾರ್

    ಸಮಾಜ ಮೆಚ್ಚಿಸುವ ಕೆಲಸ ಬೇಡ: ರಮೇಶ್‍ಕುಮಾರ್

    – ರೇವಾ ವಿಶ್ವವಿದ್ಯಾನಿಲಯದಲ್ಲಿ ಕುವೆಂಪು ಸಭಾಂಗಣ ಲೋಕಾರ್ಪಣೆ

    ಬೆಂಗಳೂರು: ಸಮಾಜವನ್ನು ಮೆಚ್ಚಿಸುವ ಕೆಲಸ ಮಾಡುವುದಕ್ಕಿಂತ, ಸಮಾಜಕ್ಕೆ ಏನಾದರೂ ಕೊಡುಗೆ ನೀಡುವುದು ಇಂದಿನ ಅವಶ್ಯವಾಗಿದೆ. ನಮ್ಮ ನಂತರವೂ ನಾವು ಬದುಕಲು ಬಯಸಿದರೆ, ಅದು, ನಾವು ಸಮಾಜಕ್ಕೇನು ಕೊಡುಗೆ ನೀಡಿದ್ದೇವೆ ಎನ್ನುವುದನ್ನು ಅವಲಂಬಿಸಿರುತ್ತದೆ ಎಂದು ವಿಧಾನಸಭಾ ಸಭಾಪತಿ ಕೆ.ಆರ್. ರಮೇಶ್‍ಕುಮಾರ್ ಮಾರ್ಮಿಕವಾಗಿ ನುಡಿದರು.

    ರೇವಾ ವಿಶ್ವವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕುವೆಂಪು ಸಭಾಂಗಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬುದ್ಧ, ಅಶೋಕ, ಕಾರ್ಲ್ ಮಾರ್ಕ್ಸ್, ನೆಲ್ಸನ್‍ಮಂಡೆಲಾ, ಮಹಾತ್ಮ ಗಾಂಧಿ, ಅಬ್ದುಲ್ ಕಲಾಂ, ಬೋಸ್. ಮುಂತಾದವರು ಕೇವಲ ಒಂದು ಸಮುದಾಯ, ಪ್ರದೇಶ, ದೇಶಕ್ಕೆ ಸೀಮಿತರಾದವರಲ್ಲ. ಇವರೆಲ್ಲ ವಿಶ್ವಚೇತನಗಳು, ಇವರು ಸಮಾಜಕ್ಕಾಗಿ ಸ್ವಾರ್ಥವನ್ನು ತ್ಯಜಿಸಿದ್ದಾರೆ. ಆದ್ದರಿಂದಲೇ ಇಂದಿಗೂ ಅವರು ಜೀವಂತವಾಗಿದ್ದಾರೆ ಎಂದರು.

    ದುರದೃಷ್ಟವಶಾತ್ ಇಂದು ಜನರು ಚಲಚಿತ್ರ ನಟರ ಬಗ್ಗೆ ತಿಳಿದುಕೊಂಡ ಈ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದುಕೊಂಡಿಲ್ಲ ಎಂದು ಹಾಸ್ಯ ಮಿಶ್ರಿತ ಖೇದ ವ್ಯಕ್ತಪಡಿಸಿದರು. ಇತ್ತೀಚೆಗೆ ನಮ್ಮಲ್ಲಿ ಬದಲಾಗುತ್ತಿರುವ ನಡತೆಗಳಿಂದಾಗಿ ನಮ್ಮ ಸಾಂಸ್ಕೃತಿಕ ಮೌಲ್ಯಗಳು ನಾಶವಾಗುತ್ತಿವೆ. ಯಾವುದೇ ಕಾರಣಕ್ಕೂ ಸಾಂಸ್ಕೃತಿಕ ಮೌಲ್ಯಗಳು ಮಾತ್ರ ನಾಶವಾಗಬಾರದು. ನಾವು ಹಿಂದೆ ಹೇಗಿದ್ದೆವು, ನಮ್ಮ ಸುತ್ತಮುತ್ತಲಿನವರೊಂದಿಗೆ ನಮ್ಮ ವರ್ತನೆ ಹೇಗಿದೆ ಎನ್ನುವುದನ್ನು ಅರಿತುಕೊಳ್ಳುವುದು ಅವಶ್ಯವಾಗಿದೆ ಎಂದ ಅವರು ಸಾಂಸ್ಕೃತಿಕ ಮೌಲ್ಯಗಳು ಒಬ್ಬ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಕೊಂಡ್ಯೊಯುತ್ತವೆ ಎನ್ನುವುದಕ್ಕೆ ನಿದರ್ಶನವಾಗಿ ಡಾ. ಶ್ಯಾಮರಾಜು ನಿಲ್ಲುತ್ತಾರೆ ಎಂದು ಹೇಳಿದರು.

    ಕುವೆಂಪು ಸಭಾಂಗಣ ಕುರಿತು ಮಾತನಾಡಿದ ಅವರು, ಕುವೆಂಪು ಅವರ ಹೆಸರಿನಿಂದ ಲೋಕಾರ್ಪಣೆಗೊಂಡ ಈ ಸಭಾಂಗಣ ಸಾಂಸ್ಕೃತಿಕ ಮೌಲ್ಯಗಳು ಮತ್ತು ಆಧುನಿಕ ಸಾಧನಗಳ ಸಂಯೋಜನೆ. ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒಳಗೊಂಡಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರಸಂಕಿರಣಗಳನ್ನು ನಡೆಸುವುದಕ್ಕೆ ಸೂಕ್ತವಾಗಿದೆ ಎಂದರು.

    ರೇವಾ ವಿಶ್ವವಿದ್ಯಾನಿಲಯವು ಸಮಾಜ ಸೇವೆಯ ಆಧಾರದ ಮೇಲೆ ಮಾನವೀಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ನೀಡುತ್ತಿರುವುದು ಸಂತೋಷ ವಿಷಯ. ಮುಂದಿನ ದಿನಗಳಲ್ಲಿ ರೇವಾ ವಿವಿ ಈ ಸಮಾಜಕ್ಕೆ ಕುವೆಂಪು, ಕಲಾಂರಂಥ ಅನೇಕ ಮಹನೀಯರ ಕೊಡುಗೆ ನೀಡಲಿ ಎಂದು ಹಾರೈಸಿದರು.

    ಉಪ ಸಭಾಪತಿ ಎಂ. ಕೃಷ್ಣಾ ರೆಡ್ಡಿ ಮಾತನಾಡಿ, ಒಬ್ಬ ವ್ಯಕ್ತಿಯ ಆಯುಷ್ಯದಲ್ಲಿ ದಲ್ಲಿ 25 ವರ್ಷ ಕಲಿಕೆಗೆ ಮೀಸಲಾಗಿರುತ್ತವೆ. ಈ ಅವಧಿಯಲ್ಲಿ ಏನನ್ನು ಕಲಿತ್ತಿದ್ದೇವೆ ಎನ್ನುವುದರ ಆಧಾರದ ಮೇಲೆ ಮುಂದಿನ 75 ವರ್ಷಗಳು ಸಾಗುತ್ತವೆ. ಬೋಧಕರ ಕೈಯಲ್ಲಿ ವಿದ್ಯಾರ್ಥಿಗಳ ಭವಿಷ್ಯವಿರುವುದರಿಂದ ಅವರು, ದೇಶಪ್ರೇಮ, ಮಾನವೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕಾಗಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದ ಅವರು, ಕುವೆಂಪು ಅವರು ಒಂದು ವಿಶ್ವವಿದ್ಯಾನಿಲಯಕ್ಕೆ ಸಮವಾಗಿದ್ದಾರೆ. ಅವರ ಹೆಸರಿನಲ್ಲಿ ಸಭಾಂಗಣ ನಿರ್ಮಿಸಿರುವುದು ರೇವಾ ವಿವಿಯು ಮಾನವೀಯ ಮೌಲ್ಯಗಳಿಗೆ ನೀಡುವ ಮಹತ್ವದ ಸೂಚಕವಾಗಿದೆ ಎಂದು ಹೊಗಳಿದರು.

    ರೇವಾ ವಿವಿ ಕುಲಪತಿ ಡಾ. ಪಿ. ಶ್ಯಾಮರಾಜು ಮಾತನಾಡಿ, ರೇವಾ ವಿವಿಯ ಘನತೆ ಹೆಚ್ಚುತ್ತಿದೆ. ಇದಕ್ಕೆಲ್ಲ ನಿಮ್ಮ ಪರಿಶ್ರಮ ಕಾರಣವಾಗಿದೆ. ಜೊತೆಗೆ ಇದನ್ನು ಕಾಪಾಡಿಕೊಂಡುವ ಹೋಗುವ ಹೊಣೆಯು ನಿಮ್ಮ ಮೇಲಿದೆ ಎಂದು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ತಿಳಿಸಿದರು.

    ಕಾರ್ಯಕ್ರಮದಲ್ಲಿ ರೇವಾ ವಿವಿಯ ವಿಶ್ರಾಂತ ಕುಲಪತಿ ಡಾ. ವಿ.ಜಿ. ತಳವಾರ್, ರಿಜಿಸ್ಟ್ರಾರ್ ಡಾ. ಎಂ. ಧನಂಜಯ, ಡಾ. ಎನ್. ರಮೇಶ್, ಡಾ. ಬೀನಾ ಜಿ, ಡಾ. ಶುಭಾ ಎ. ವೇದಿಕೆ ಮೇಲಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ರೇವಾ ವಿವಿಯ ಪ್ರದರ್ಶನ ಕಲಾ ವಿಭಾಗದ ಮಾಯಾ ಮತ್ತು ಮುದ್ರಾ ಅವರಿಂದ ಕತಕ್, ಸ್ವಾತಿ ತಿರುನಾಳ ಸಂಗಡಿಗರಿಂದ ಮೋಹಿನಿ ಆಟ್ಟಂ ಮತ್ತು ಭರತನಾಟ್ಯದಲ್ಲಿ ಅರ್ಧನಾರೀಶ್ವರ ರೂಪಕವನ್ನು ಪ್ರದರ್ಶಿಸಲಾಯಿತು.

  • ಮೆಚ್ಚುಗೆ ಕೆಲಸದ ಬದಲು, ಸಮಾಜಕ್ಕೆ ಕೊಡುಗೆ ನೀಡಿ: ರಮೇಶ್ ಕುಮಾರ್

    ಮೆಚ್ಚುಗೆ ಕೆಲಸದ ಬದಲು, ಸಮಾಜಕ್ಕೆ ಕೊಡುಗೆ ನೀಡಿ: ರಮೇಶ್ ಕುಮಾರ್

    ಬೆಂಗಳೂರು: ಸಮಾಜವನ್ನು ಮೆಚ್ಚಿಸುವ ಕೆಲಸ ಮಾಡುವುದಕ್ಕಿಂತ, ಸಮಾಜಕ್ಕೆ ಏನಾದರೂ ಕೊಡುಗೆ ನೀಡುವುದು ಇಂದಿನ ಅವಶ್ಯವಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

    ರೇವಾ ವಿಶ್ವವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕುವೆಂಪು ಸಭಾಂಗಣ ಲೋಕಾರ್ಪಣೆ ಮಾಡಿ ಬಳಿ ಮಾತನಾಡಿದ ಅವರು, ಬುದ್ಧ, ಅಶೋಕ,  ನೆಲ್ಸನ್ ಮಂಡೇಲಾ, ಮಹಾತ್ಮ ಗಾಂಧಿ, ಅಬ್ದುಲ್ ಕಲಾಂ, ಬೋಸ್ ಮುಂತಾದವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತರಾದವರಲ್ಲ, ಇವರೆಲ್ಲರೂ ವಿಶ್ವಚೇತನರು. ಇವರು ಸಮಾಜಕ್ಕಾಗಿ ದುಡಿದವರು ಎಂದು ತಿಳಿಸಿದರು.

    ಇಂದಿನ ಯುವಕರು ಸಿನಿಮಾ ನಟರ ಬಗ್ಗೆ ತಿಳಿದುಕೊಂಡಷ್ಟು ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದುಕೊಂಡಿಲ್ಲ ಎಂದು ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

  • ಇಂದಿರಾ ಕ್ಯಾಂಟೀನ್‍ನಲ್ಲಿ ಭ್ರಷ್ಟಾಚಾರ ಹೇಗೆ ನಡೆಯುತ್ತಿದೆ: ದಾಖಲೆಯೊಂದಿಗೆ ಅಕ್ರಮ ಬಿಚ್ಚಿಟ್ಟ ರಾಮದಾಸ್

    ಇಂದಿರಾ ಕ್ಯಾಂಟೀನ್‍ನಲ್ಲಿ ಭ್ರಷ್ಟಾಚಾರ ಹೇಗೆ ನಡೆಯುತ್ತಿದೆ: ದಾಖಲೆಯೊಂದಿಗೆ ಅಕ್ರಮ ಬಿಚ್ಚಿಟ್ಟ ರಾಮದಾಸ್

    ಬೆಂಗಳೂರು: ಇಂದಿರಾ ಕ್ಯಾಂಟೀನ್ ಅವ್ಯವಹಾರ ದಾಖಲೆಗಳನ್ನು ನೀಡಲು ಮುಂದಾಗಿದ್ದೆ, ಈ ವೇಳೆ ಆಡಳಿತ ಪಕ್ಷವು ಹಿಟ್ ಅಂಡ್ ರನ್ ಅಂತ ಹೇಳಿತು. ಆದರೆ ಇದು ಹಿಟ್ ಅಂಡ್ ರನ್ ಅಲ್ಲ, ಹಿಟ್ ಅಂಡ್ ಕ್ಯಾಚ್ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವ್ಯಂಗ್ಯವಾಡಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಆದರೆ ದಾಖಲೆಗಳ ಸಮೇತ ಆರೋಪ ಮಾಡುವಂತೆ ಸರ್ಕಾರ ಸೂಚಿಸಿತ್ತು. ಅದನ್ನು ಚಾಲೆಂಜ್ ಆಗಿ ತೆಗೆದುಕೊಂಡು ನಾನು ದಾಖಲೆಗಳ ಸಮೇತ ಬಂದಿದ್ದೆ. ಹೀಗಾಗಿ ಇವತ್ತು ಕಲಾಪದಲ್ಲಿ ಚರ್ಚೆಗೆ ತೆಗೆದುಕೊಳ್ಳಬೇಕು ಅಂತಾ ಎಂದು ಮನವಿ ಮಾಡಿದ್ದೆ. ಇದಕ್ಕೆ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇಂದಿರಾ ಕ್ಯಾಂಟೀನ್ ಹಗರಣ ಸಂಬಂಧ ಹೈಕೋರ್ಟ್ ನಲ್ಲಿ ದೂರು ನೀಡುತ್ತೇನೆ. ಅಕ್ರಮಕ್ಕೆ ಒಂದು ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ಮಾಡುತ್ತೇನೆ ಎಂದು ಅವರು ಗರಂ ಆಗಿಯೇ ಮಾತನಾಡಿದರು.

    ರಾಮದಾಸ್ ಆರೋಪಗಳೇನು?
    ರಾಜ್ಯದಲ್ಲಿ 308 ಇಂದಿರಾ ಕ್ಯಾಂಟೀನ್‍ಗಳು ಇದ್ದು, ಪ್ರತಿನಿತ್ಯ 6.75 ಲಕ್ಷ ಮಂದಿಗೆ ಅನುಕೂಲವಾಗುತ್ತದೆ. ರಾಜ್ಯ ಸರ್ಕಾರ ಪ್ರತಿ ತಿಂಗಳು ಇದಕ್ಕಾಗಿ 24 ಕೋಟಿ ರೂ. ನೀಡುತ್ತದೆ. ಆದರೆ ಸರಾಸರಿ ಕೇವಲ 100 ರಿಂದ 150 ಮಂದಿ ಮಾತ್ರ ಅನುಕೂಲ ಆಗುತ್ತಿದೆ. ಲೆಡ್ಜ್‍ರಗಳನ್ನು ಇಟ್ಟು ಲೆಕ್ಕಕೊಡದೇ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ. ಹೊರ ರಾಜ್ಯದವರಿಗೆ ಮಾತ್ರ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕೆಲಸ ಕೊಟ್ಟಿದ್ದಾರೆ. ಒಂದೇ ದಿನ ಎರಡು ಒಪ್ಪಂದಗಳನ್ನು ಮಾಡಿಕೊಳ್ಳುತ್ತಾರೆ. ಒಂದು ಒಪ್ಪಂದದಲ್ಲಿ 57 ರೂ., 60 ರೂ. ರೀತಿ ಒಪ್ಪಂದ ಆಗಿದೆ. ದಿನಕ್ಕೆ ಮೂರು ಹೊತ್ತಿನ ಒಂದು ಊಟಕ್ಕೆ ಈ ದರ ಕೊಟ್ಟಿದ್ದಾರೆ. ಹೆಚ್ಚಳವಾಗಿರುವ ಹಣದಲ್ಲಿ ಯಾರಿಗೆ ಕಿಕ್‍ಬ್ಯಾಕ್ ಹೋಗುತ್ತದೆ ಎನ್ನುವುದನ್ನ ಸ್ಪಷ್ಟಪಡಿಸಬೇಕು. ದುಬೈ ಮೂಲದ ಕೆಇಎಫ್, ಇನ್‍ಫ್ರಾ ಲಿಮಿಟೆಡ್‍ಗೆ ಗುತ್ತಿಗೆ ನೀಡಿ ಅಕ್ರಮ ಎಸಗಲಾಗುತ್ತಿದೆ ಎಂದು ಎಂದು ಆರೋಪಿಸಿದರು.

  • ಅಸೆಂಬ್ಲಿಯನ್ನ ಹುಚ್ಚಾಸ್ಪತ್ರೆ ಮಾಡ್ಬೇಡಿ: ಶಾಸಕರ ವಿರುದ್ಧ ರಮೇಶ್ ಕುಮಾರ್ ಗರಂ

    ಅಸೆಂಬ್ಲಿಯನ್ನ ಹುಚ್ಚಾಸ್ಪತ್ರೆ ಮಾಡ್ಬೇಡಿ: ಶಾಸಕರ ವಿರುದ್ಧ ರಮೇಶ್ ಕುಮಾರ್ ಗರಂ

    ಬೆಂಗಳೂರು: ಅಸೆಂಬ್ಲಿಯನ್ನು ಹುಚ್ಚಾಸ್ಪತ್ರೆ ಮಾಡಲು ಹೊರಟಿದ್ದೀರಾ ಎಂದು ಶಾಸಕರ ವಿರುದ್ಧ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಅವರು ಗರಂ ಆಗಿ ಪ್ರಶ್ನೆ ಮಾಡಿದ್ದಾರೆ.

    ನಾನು ಕರೆಯದೆ ಯಾರೂ ಸಹ ಎದ್ದು ನಿಂತು ಮಾತನಾಡುವಂತಿಲ್ಲ. ಸಂಸದೀಯ ವ್ಯವಸ್ಥೆಯ ಶಿಸ್ತು ಮೀರಿದರೆ ಸುಮ್ಮನಿರಲ್ಲ ಎಂದು ಶಾಸಕರನ್ನು ಎಚ್ಚರಿಸಿದ ಅವರು, ಲಿಂಗಾಯತ ಧರ್ಮ ವಿಚಾರವಾಗಿ ಬಿಜೆಪಿಯ ರಾಜಕುಮಾರ್ ಪಾಟೀಲ್, ಪಾಟೀಲ್ ನಡಹಳ್ಳಿ ಮತ್ತು ಸಚಿವ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಮಧ್ಯೆ ವಾಗ್ವಾದ ನಡೆದಿದ್ದಕ್ಕೆ ಸ್ಪೀಕರ್ ರಮೇಶ್ ಕುಮಾರ್ ಬಿಸಿ ಮುಟ್ಟಿಸಿದರು.

    ನೀರಾವರಿ ಇಲಾಖೆಯಲ್ಲಿ ಕೆಲಸ ಆಗಿಲ್ಲ ಎಂದು ಶಾಸಕ ಗೋವಿಂದ ಕಾರಜೋಳ ಟೀಕಿಸಿದರು. ಇದಕ್ಕೆ ತಿರುಗೇಟು ಕೊಡುವ ಬರದಲ್ಲಿ ಸಚಿವ ಶಿವಾನಂದ ಪಾಟೀಲ್ ಅವರು ಎಂ.ಬಿ.ಪಾಟೀಲ್ ಅವರನ್ನು ನಿಮ್ಮ ಯತ್ನಾಳ್ ಹೊಗಳುತ್ತಾರೆ. ಆದರೆ ನೀವು ತೆಗಳುತ್ತಿರುವಿರಿ. ಇದಕ್ಕೆ ಬಿಜೆಪಿಗರು ಕಿಡಿಕಾರಿದರು. ಸಚಿವರು ತಮ್ಮ ಮಾತನ್ನು ವಾಪಸ್ ಪಡೆದರು. ಈ ವೇಳೆ ಇದು ಪಾಟೀಲರ ಜಗಳವೇ ಅಂತಾ ಬೊಮ್ಮಾಯಿ ಕಿಚಾಯಿಸಿದರು. ಆಗ ಪಾಟೀಲರ ನಡುವೆ ಶೆಟ್ಟರಿಗೆ ಏನು ಕೆಲಸ ಅಂತಾ ಯತ್ನಾಳ್ ಕಾಲೆಳೆದರು. ವಿಚಾರ ಗೊತ್ತಾಯ್ತು ಬಿಡಿ ಅಂತ ಸ್ಪೀಕರ್ ಹಾಸ್ಯ ಚಟಾಕಿ ಹಾರಿಸಿದರು.

  • ಸೀಟ್ ವಾಸ್ತುಪ್ರಕಾರ ಸರಿಯಾಗಿದೆ, ಮುಂದೆ ಬನ್ನಿ: ನಗೆಗಡಲಲ್ಲಿ ತೇಲಿಸಿದ ಸ್ಪೀಕರ್

    ಸೀಟ್ ವಾಸ್ತುಪ್ರಕಾರ ಸರಿಯಾಗಿದೆ, ಮುಂದೆ ಬನ್ನಿ: ನಗೆಗಡಲಲ್ಲಿ ತೇಲಿಸಿದ ಸ್ಪೀಕರ್

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇಂದು ಸದನದಲ್ಲಿ ಹಿಂದಿನ ಸಾಲಿನಲ್ಲಿ ಕುಳಿತುಕೊಂಡಿದ್ದರು. ಆಗ ಅದನ್ನು ಗಮನಿಸಿದ ವಿಧಾನಸಭಾ ಸಭಾಪತಿ ರಮೇಶ್ ಕುಮಾರ್ ರೇವಣ್ಣರನ್ನು ಕರೆದು ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುವಂತೆ ಹೇಳಿದರು.

    ತಕ್ಷಣ ಸಭಾಪತಿಗಳ ಮಾತಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಮುಂದಿನ ಸೀಟುಗಳನ್ನು ಹಿರಿಯರಿಗೆ ಬಿಟ್ಟಿದ್ದೇನೆ. ಹೀಗಾಗಿ ಇಲ್ಲಿ ಕುಳಿತ್ತಿದ್ದೇನೆ ಎಂದು ಉತ್ತರಿಸಿದರು. ಅದಕ್ಕೆ ಸ್ಪೀಕರ್, ನೀವು ಮುಂದಿನ ಸಾಲಿನಲ್ಲಿ ಕುಳಿತರೇ ಲಕ್ಷಣ. ಬನ್ನಿ ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳಿ. ನೀವು ಮುಂದಿನ ಸಾಲಿನಲ್ಲಿ ಕುಳಿತುಕೊಂಡಿದ್ದರೆ ಅದನ್ನು ನೋಡಲು ಲಕ್ಷಣವಾಗಿರುತ್ತೆ. ಅಲ್ಲದೇ ಮುಂದಿನ ಸೀಟ್ ವಾಸ್ತುಪ್ರಕಾರವೂ ಚೆನ್ನಾಗಿದೆ ಎಂದು ಹೇಳಿ ಸದನದಲ್ಲಿ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದರು. ಇದನ್ನು ಓದಿ:  ವಾಸ್ತು ಪ್ರಕಾರ ಪೂಜೆ ಮಾಡ್ತಿಲ್ಲ ಅಂತಾ ಸಚಿವ ರೇವಣ್ಣರಿಂದ ಅರ್ಚಕರಿಗೆ ಕ್ಲಾಸ್

    ಅಲ್ಲದೇ ಈ ಸಂದರ್ಭದಲ್ಲಿ ಎಲ್ಲಿ ಇನ್ನೂ ಇಬ್ಬರು ಸಚಿವರು ಕಾಣ್ತಿಲ್ಲ, ಜಮೀರ್ ಅಹ್ಮದ್ ಮತ್ತು ಯು ಟಿ ಖಾದರ್ ಇನ್ನು ಬಂದಿಲ್ಲ ಅಂತಾ ಸಭಾಪತಿ ರಮೇಶ್ ಕುಮಾರ್ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಗೆ ಪ್ರಶ್ನಿಸಿದರು.

  • ಅಧಿವೇಶನದ ಮೊದಲ ದಿನವೇ ಸ್ಪೀಕರ್ ರಮೇಶ್ ಕುಮಾರ್ ಫುಲ್ ಕ್ಲಾಸ್

    ಅಧಿವೇಶನದ ಮೊದಲ ದಿನವೇ ಸ್ಪೀಕರ್ ರಮೇಶ್ ಕುಮಾರ್ ಫುಲ್ ಕ್ಲಾಸ್

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನ ಮೊದಲ ದಿನವೇ ಮಾನ್ಯ ಎಲ್ಲಾ ಸದಸ್ಯರುಗಳಿಗೆ ಕ್ಲಾಸ್ ತೆಗೆದುಕೊಳ್ಳುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರು ಸುಗಮ ಅಧಿವೇಶನದ ನಡೆಸುವ ಸೂಚನೆ ನೀಡಿದ್ದಾರೆ.

    ಸರ್ಕಾರದ ಜಂಟಿ ಅಧಿವೇಶನ ಕುರಿತು ಗವರ್ನರ್ ಭಾಷಣ ಮುಗಿಯುತ್ತಿದ್ದಂತೆ ಎಲ್ಲಾ ಶಾಸಕರು ಆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳದೆ ಓಡಾಡುತ್ತಿದ್ದರು. ಇದನ್ನು ನೋಡಿದ ಸ್ಪೀಕರ್ ರಮೇಶ್ ಕುಮಾರ್ ಫುಲ್ ಕ್ಲಾಸ್ ತೆಗೆದುಕೊಂಡರು

    ಶಾಸಕರು ತಮ್ಮ ತಮ್ಮ ಸ್ಥಳಗಳಿಗೆ ಹೋಗುವಂತೆ ಮೊದಲು ಮನವಿ ಮಾಡಿದರು. ಆದರೆ ಸ್ಪೀಕರ್ ಮಾತನ್ನು ಯಾರು ಗಮನಿಸದ ವೇಳೆ ಶಾಸಕರ ಹೆಸರು ಕರೆದ ಸ್ಪೀಕರ್ ಅವರು ರಹೀಂಖಾನ್, ಹ್ಯಾರಿಸ್, ರಾಜೇಗೌಡ ಹೆಸರು ಕೂಗಿ ನಿಮ್ಮ ಸ್ಥಾನದಲ್ಲಿ ನೀವು ಕುಳಿತು ಕೊಳ್ಳಿ ಎಂದು ಸೂಚಿಸಿದರು. ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಇದನ್ನು ಓದಿ: ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಮಾತನಾಡಿದ ಸ್ಪೀಕರ್, ಸದನದ ನಿಯಮಾವಳಿಗಳು ಕೆಲವು ಬದಲಾವಣೆ ಆಗಿದೆ. ಈ ಕುರಿತು ಮಾಹಿತಿ ನೀಡಲಾಗಿದೆ. ಈ ಬಾರಿ ಸಭೆಯಲ್ಲಿ ಸುಮಾರು 100 ಹೊಸ ಶಾಸಕರಿದ್ದು ಅವರು ಸೇರಿದಂತೆ ಎಲ್ಲರಿಗೂ ಮೊದಲು ಮನವಿ ಮಾಡುತ್ತೇನೆ, ಬಳಿಕ ಸೂಚನೆ ನೀಡುತ್ತೇನೆ. ಸದನ ಕಲಾಪ ಆರಂಭದ ವೇಳೆಗೆ ಶಾಸಕರು ಮುಖ್ಯಮಂತ್ರಿಗಳಿಗೆ ಯಾವುದೇ ಅರ್ಜಿಗಳನ್ನು ಸದನದಲ್ಲಿ ನೀಡುವಂತಿಲ್ಲ. ಇದರಿಂದ ಸದನದ ಚರ್ಚೆ ಬಗ್ಗೆ ಸಿಎಂ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಅದ್ದರಿಂದ ಶಾಸಕರಿಗೆ ಅಂತಹ ತುರ್ತು ಕಾರ್ಯವಿದ್ದರೆ ಶಾಸಕರು ಸಿಎಂ ಅವರನ್ನು ತಮ್ಮ ಕಚೇರಿಗೆ ಕರೆದುಕೊಂಡು ಹೋಗಬಹುದು. ಇದಕ್ಕೆ ನಾನು ಯಾವುದೇ ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ಒಬ್ಬ ಶಾಸಕನಾಗಿ ಇಂತಹ ಕಾರ್ಯವನ್ನು ನಾನು ಎಂದು ಮಾಡಿಲ್ಲ. ಅದ್ದರಿಂದ ಇದನ್ನು ನಾನು ಹೇಳುವ ನೈತಿಕ ಆರ್ಹತೆ ಹೊಂದಿದ್ದೇನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ಆಗಿದ್ದ ಸನ್ನಿವೇಶ ಗಮನಿಸಿದ್ದೇನೆ ಅದ್ದರಿಂದ ಯಾವುದೇ ಕಾರಣಕ್ಕೂ ಸದನಕ್ಕೆ ತೊಂದರೆ ನೀಡಬಾರದು ಎಂದು ಎಲ್ಲ ಶಾಸಕರಿಗೆ ಸೂಚನೆ ನೀಡಿದರು. ಇದನ್ನು ಓದಿ: ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ!

  • ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಿದೆ. ಎರಡು ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣವನ್ನು ಮಾಡಿದ್ದಾರೆ. ರಾಜ್ಯಪಾಲರನ್ನು ವಿಧಾನ ಸಭೆಗೆ ಸ್ಪೀಕರ್ ಕರೆತರೋದು ಮತ್ತು ಕಳುಹಿಸಿ ಕೊಡುವುದು ಸಂಪ್ರದಾಯ. ಆದರೆ ರಾಜ್ಯಪಾಲರ ನಿರ್ಗಮನ ವೇಳೆ ಈ ಶಿಷ್ಟಾಚಾರ ಉಲ್ಲಂಘನೆ ಆಗಿತ್ತು.

    ರಾಜ್ಯಪಾಲ ವಜೂಭಾಯಿ ವಾಲಾ ತಮ್ಮ ಭಾಷಣ ಮುಗಿಸಿ ವಿಧಾನಸಭೆಯಿಂದ ನಿರ್ಗಮಿಸುತ್ತಿದ್ದರು. ಈ ವೇಳೆ ರಾಜ್ಯಪಾಲರ ಹಿಂದೆ ವಿಧಾನ ಪರಿಷತ್ ಹಂಗಾಮಿ ಸ್ಪೀಕರ್ ಬಸವರಾಜ ಹೊರಟ್ಟಿ ನಡೆದುಕೊಂಡು ಬರುತ್ತಿದ್ದರು. ಕೂಡಲೇ ಎಚ್ಚೆತ್ತ ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್ ಮುಂದೆ ನಡೆದು ಹೋಗುತ್ತಿದ್ದ ಹೊರಟ್ಟಿಯವರ ಬೆನ್ನು ತಟ್ಟಿ ಪಕ್ಕಕ್ಕೆ ತೆರಳಲು ಸೂಚಿಸಿದ್ದಾರೆ. ಈ ವೇಳೆ ಹೊರಟ್ಟಿಯವರ ಪಕ್ಕದಲ್ಲಿದ್ದ ಸಿಎಂ ಸಹ ನನ್ನ ಕಡೆ ಬನ್ನಿ ಅಂತಾ ಸನ್ನೆ ಮಾಡಿದರು.

    ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕಾಗಿ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ನಾಡಿನ ಕೃಷಿಕ ಬಂಧುಗಳು ಸಮಸ್ಯೆಗಳು ಬಗೆಹರಿಯಲಿವೆ. ಯಾವ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು ಎಂದು ಮನವಿ ಮಾಡಿಕೊಂಡರು. ಸರ್ಕಾರ ಅಖಂಡ ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದು, ಹಳೆಯ ಯೋಜನೆಗಳೊಂದಿಗೆ ಹೊಸ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದು ತಿಳಿಸಿದರು.

  • ಅಪ್ಪನಿಗಾಗಿ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ ಸೌಮ್ಯಾ ರೆಡ್ಡಿ!

    ಅಪ್ಪನಿಗಾಗಿ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ ಸೌಮ್ಯಾ ರೆಡ್ಡಿ!

    ಬೆಂಗಳೂರು: ಜಯನಗರ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಶಾಸಕಿ ಸೌಮ್ಯಾರೆಡ್ಡಿಯವರು ತಂದೆಯ ಆಗಮನಕ್ಕಾಗಿ 40 ನಿಮಿಷ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಸೋಮವಾರ ಸಂಜೆ 4 ಗಂಟೆಯ ವೇಳೆಗೆ ಸ್ಪೀಕರ್ ಕಚೇರಿಯಲ್ಲಿ ನೂತನ ಶಾಸಕಿ ಸೌಮ್ಯಾರೆಡ್ಡಿಯವರ ಪ್ರಮಾಣ ವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸೌಮ್ಯರೆಡ್ಡಿಯವರು ತಮ್ಮ ತಾಯಿ ಹಾಗೂ ತಮ್ಮನ ಜೊತೆ ಕಚೇರಿಗೆ ಆಗಮಿಸಿದ್ದರು. ಇನ್ನೆನೂ ಕಾರ್ಯಕ್ರಮ ಪ್ರಾರಂಭಿಸಬೇಕು ಎನ್ನುವಷ್ಟರಲ್ಲಿ ಸೌಮ್ಯಾರೆಡ್ಡಿಯವರು ನಮ್ಮ ತಂದೆ ಬರುವವರೆಗೂ ಸ್ವಲ್ಪ ಹೊತ್ತು ಕಾಯುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಲ್ಲಿ ಮನವಿಮಾಡಿಕೊಂಡರು. ಸೌಮ್ಯಾರೆಡ್ಡಿಯವರ ಪಿತೃಪ್ರೇಮವನ್ನು ಕಂಡು ಸ್ಪೀಕರ್ ಕೂಡ ರಾಮಲಿಂಗರೆಡ್ಡಿಯವರಿಗಾಗಿ ಕಾದು ಕುಳಿತರು.

    ಸುಮಾರು 40 ನಿಮಿಷಗಳ ಕಾಲ ಕಾದರೂ ರಾಮಲಿಂಗರೆಡ್ಡಿಯವರು ಆಗಮಿಸಲಿಲ್ಲ. ಕೊನೆಗೆ ತಾಯಿ ಮತ್ತು ಸಹೋದರ ಸಮ್ಮುಖದಲ್ಲಿ ಭಗವಂತ ಹಾಗೂ ಸತ್ಯ ನಿಷ್ಠೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ನಂತರ ಮಾತನಾಡಿದ ಸೌಮ್ಯರೆಡ್ಡಿ ಜಯನಗರ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ ಎಂದು ಹೇಳಿದರು.

  • ಎಚ್‍ಡಿಡಿ ಪಾದಪೂಜೆ ಮಾಡಿದ್ದ ವಿನಯ್ ಗುರೂಜಿ 6 ತಿಂಗ್ಳು ಭಕ್ತರಿಗೆ ದರ್ಶನ ನೀಡಲ್ಲ!

    ಎಚ್‍ಡಿಡಿ ಪಾದಪೂಜೆ ಮಾಡಿದ್ದ ವಿನಯ್ ಗುರೂಜಿ 6 ತಿಂಗ್ಳು ಭಕ್ತರಿಗೆ ದರ್ಶನ ನೀಡಲ್ಲ!

    ಚಿಕ್ಕಮಗಳೂರು: ನಡೆದಾಡುವ ದೇವರೆಂದೇ ಎಂದೇ ಖ್ಯಾತಿಯಾಗಿರೋ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗೌರಿಗದ್ದೆಯ ಸ್ವರ್ಣ ಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಇನ್ನು ಆರು ತಿಂಗಳು ಭಕ್ತರಿಗೆ ದರ್ಶನ ನೀಡುವುದಿಲ್ಲ.

    ಕಳೆದ ಎಂಟು ವರ್ಷದಿಂದ ಪ್ರತಿ ಗುರುವಾರ ಭಕ್ತರಿಗೆ ದರ್ಶನ ನೀಡ್ತಿದ್ದ ಗುರೂಜಿ ಇದೀಗ, ಮೌನ ವ್ರತಕ್ಕೆ ಮುಂದಾಗಿದ್ದಾರೆ. ಆರು ತಿಂಗಳು ಗೌಪ್ಯ ಸ್ಥಳದಲ್ಲಿ ಮೌನ ವ್ರತ ನಡೆಸಲಿದ್ದು, ಎಲ್ಲಿರುತ್ತಾರೆಂಬ ಮಾಹಿತಿ ಆಶ್ರಮದ ಸಿಬ್ಬಂದಿಗೂ ತಿಳಿದಿಲ್ಲ. ಇದನ್ನೂ ಓದಿ: ಎಚ್‍ಡಿಕೆ ಸಿಎಂ ಆಗ್ತಾರೆ ಅಂತ 2 ವರ್ಷದ ಹಿಂದೆಯೇ ಭವಿಷ್ಯ – ಗುರೂಜಿಗೆ ದೇವೇಗೌಡ್ರು, ಸ್ಪೀಕರ್ ಪಾದಪೂಜೆ

    ಇತ್ತೀಚೆಗೆ ರಾಜಕಾರಣಿಗಳ ಭೇಟಿಯಿಂದ ಗುರೂಜಿ ಸಾಕಷ್ಟು ಸುದ್ದಿಯಾಗಿದ್ದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗುರೂಜಿಯ ಪಾದಪೂಜೆ ನಡೆಸಿದ್ರೆ, ಸ್ಪೀಕರ್ ರಮೇಶ್ ಕುಮಾರ್ ಗುರೂಜಿಗೆ ಆರತಿ ಬೆಳಗಿದ್ರು. ಇದೆಲ್ಲಾ ಮಾಧ್ಯಮದಲ್ಲಿ ಸುದ್ದಿಯಾದ ಮೇಲೆ ಬರುವ ಭಕ್ತರ ಸಂಖ್ಯೆ ಕೂಡ ಡಬಲ್ ಆಗಿತ್ತು.

    ಪ್ರಚಾರ ಬೇಡವೆಂದರೂ ಸಾಕಷ್ಟು ಪ್ರಚಾರ ಸಿಕ್ಕಿದ್ರಿಂದ ಮೌನ ವ್ರತಕ್ಕೆ ಮುಂದಾಗಿದ್ದಾರೆ. ಹೀಗಾಗಿ ಸದ್ಯ ಗುರೂಜಿಯನ್ನ ಕಾಣಲು ಬರುತ್ತಿರುವ ಭಕ್ತರು ಬೇಸರದಿಂದ ವಾಪಸ್ ಹೋಗ್ತಿದ್ದಾರೆ.