Tag: Ramesh Kumar

  • ನನ್ನ ಸ್ನೇಹಿತ ರಾಜಶೇಖರ ಲಿಂಗಾಯತ, ಮೂಳೆಯಲ್ಲಿದ್ದ ಮಾಂಸ ಬಿಡದೇ ತಿಂತಿದ್ದ: ಸಿದ್ದರಾಮಯ್ಯ

    ನನ್ನ ಸ್ನೇಹಿತ ರಾಜಶೇಖರ ಲಿಂಗಾಯತ, ಮೂಳೆಯಲ್ಲಿದ್ದ ಮಾಂಸ ಬಿಡದೇ ತಿಂತಿದ್ದ: ಸಿದ್ದರಾಮಯ್ಯ

    ಬೆಂಗಳೂರು: ನನ್ನ ಜೊತೆ ಶಿವಮೊಗ್ಗದ ಒಬ್ಬ ಲಿಂಗಾಯತ ಸ್ನೇಹಿತ ಇದ್ದ ಅವನು ಮೂಳೆಯಲ್ಲಿ ಒಂದಿಷ್ಟು ಮಾಂಸ ಪೀಸ್ ಉಳಿಯದಂತೆ ತಿನ್ನುತ್ತಿದ್ದ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸ್ವಾರಸ್ಯಕರ ಘಟನೆಯೊಂದನ್ನು ಮೆಲುಕು ಹಾಕಿದರು.

     

    ಮಾಂಸ ತಿನ್ನುವ ವಿಚಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಯ್ತು. ಚುನಾವಣೆ ಸುಧಾರಣೆ ಅಗತ್ಯತೆ ಕುರಿತ ಚರ್ಚೆ ವೇಳೆ ಕಾರಜೋಳ ಅವರು ಚುನಾವಣೆಯಲ್ಲಿ ಹೆಂಡ ಕೊಟ್ಟಿಲ್ಲ ಅಂತ ಹೇಳುತ್ತಿದ್ದರು ಅಂತಾ ಸಿದ್ದರಾಮಯ್ಯ ಉಲ್ಲೇಖಿಸಿದ್ರು. ಆಗ ಗೋವಿಂದ ಕಾರಜೋಳ ಎದ್ದು ನಿಂತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಒಬ್ಬ ಎರಡು ಕೋಳಿ ನೀಡಿದ್ದ. ಮತ್ತೊಬ್ಬ ಕುರಿ ನೀಡಿ ಜೊತೆಗೆ ಸ್ವೀಟ್ ಬಾಕ್ಸ್ ನೀಡಿದ್ದ ಏಕೆಂದರೆ, ರಮೇಶ್ ಕುಮಾರ್ ಮತ್ತು ಕಾಗೇರಿ ಅಂತವರು ಇರುತ್ತಾರೆ ಅವರಿಗೆ ಸ್ವೀಟ್ ಕೊಟ್ಟಿದ್ದ ಎಂದು ಕಾರಜೋಳ ಹೇಳಿದ್ರು. ಆಗ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ ಅಂದರೆ ರಮೇಶ್ ಕುಮಾರ್ ಮಾಂಸ ತಿನ್ನುತ್ತಾನೆ ಎಂದು ಎಲ್ಲರ ಮುಂದೆ ಬಾಯಿ ಬಿಟ್ಟು ಹೇಳುತ್ತೀಯಾ ಎಂದು ಕಾಲೆಳೆದ್ರು. ಇದನ್ನೂ ಓದಿ: ಸಿದ್ದರಾಮಯ್ಯ ಶ್ರೀಕೃಷ್ಣ ಎಂದ ರಮೇಶ್‍ಕುಮಾರ್ – ಪಟೇಲರ ಕಚ್ಚೆ ನೆನಪಿಸಿಕೊಂಡ ಸಿದ್ದು

    ಈ ವೇಳೆ ಮತ್ತೆ ಮಧ್ಯಪ್ರವೇಶ ಮಾಡಿದ ಗೋವಿಂದ ಕಾರಜೋಳ, ನಾವು ನೀವು ಮಾಂಸ ತಿನ್ನುವ ಜಾತಿಯಲ್ಲಿ ಹುಟ್ಟಿದ್ದೇವೆ. ಆದರೆ, ರಮೇಶ್ ಕುಮಾರ್ ಅವರ ರೀತಿ ಮಾಂಸ ತಿನ್ನಲು ಬರುವುದಿಲ್ಲ ನಮಗೆ ಎಂದರು. ಆಗ ಸಿದ್ದರಾಮಯ್ಯ ರಮೇಶ್ ಕುಮಾರ್ ಕಾಲೆಳೆದ್ರು. ನಾನೂ ರಮೇಶ್ ಕುಮಾರ ಜೊತೆ ಸಾಕಷ್ಟು ಬಾರಿ ಊಟ ಮಾಡಿದ್ದೇನೆ. ಅವನಷ್ಟು ಕ್ಲೀನಾಗಿ ಊಟ ಮಾಡಲು ನನಗೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ನಕ್ಕರು. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

    ಈ ವೇಳೆ ರಮೇಶ್ ಕುಮಾರ್ ಜೋರಾಗಿ ನಗುತ್ತಿದ್ದರು. ಇದೇ ವೇಳೆ ನನ್ನ ಜೊತೆ ಶಿವಮೊಗ್ಗದ ಒಬ್ಬ ಲಿಂಗಾಯತ ಸ್ನೇಹಿತ ಇದ್ದ ಅವನು ಮೂಳೆಯಲ್ಲಿ ಒಂದಿಷ್ಟು ಮಾಂಸ ಪೀಸ್ ಉಳಿಯದಂತೆ ತಿನ್ನುತ್ತಿದ್ದ ಎಂದರು. ಆಗ ಇಡೀ ಸದನ ನಗೆಗಡಲಲ್ಲಿ ತೇಲಿತು. ಬಳಿಕ ಮಾಂಸದ ಮಾತು ಸಾಕು, ಚುನಾವಣೆ ಬಗ್ಗೆ ಮಾತನಾಡಿ ಎಂದು ಸ್ಪೀಕರ್ ಸಲಹೆ ಕೊಟ್ಟಾಗ ನೋಡಿ ನಿಮಗೆ ಈ ವಿಷಯ ಕೇಳೋಕೆ ಅಸಹ್ಯ ಅನಿಸುತ್ತಿದೆ ಎಂದು ಸಿದ್ದರಾಮಯ್ಯ ಹಾಸ್ಯ ಮಾಡಿದ್ರು.

  • ಸಿದ್ದರಾಮಯ್ಯ ಶ್ರೀಕೃಷ್ಣ ಎಂದ ರಮೇಶ್‍ಕುಮಾರ್ – ಪಟೇಲರ ಕಚ್ಚೆ ನೆನಪಿಸಿಕೊಂಡ ಸಿದ್ದು

    ಸಿದ್ದರಾಮಯ್ಯ ಶ್ರೀಕೃಷ್ಣ ಎಂದ ರಮೇಶ್‍ಕುಮಾರ್ – ಪಟೇಲರ ಕಚ್ಚೆ ನೆನಪಿಸಿಕೊಂಡ ಸಿದ್ದು

    ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಶ್ರೀಕೃಷ್ಣ ಎಂದ ಶಾಸಕ ರಮೇಶ್ ಕುಮಾರ್ ಪ್ರಸ್ತಾಪ ಪಟೇಲರು, ರಾಮಕೃಷ್ಣ ಹೆಗಡೆ ಅವರನ್ನು ಇಂದು ವಿಧಾನಸಭೆಯಲ್ಲಿ ನೆನಪಿಸಿಕೊಳ್ಳುವಂತೆ ಮಾಡಿತು.

    ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಅಗತ್ಯತೆ ಕುರಿತ ಚರ್ಚೆ ವೇಳೆ ಸಿದ್ದರಾಮಯ್ಯ ಮಾತನಾಡುವಾಗ ರಾಮನ ಲೆಕ್ಕ – ಕೃಷ್ಣನ ಲೆಕ್ಕದ ಬಗ್ಗೆ ಪ್ರಸ್ತಾಪಿಸಿದ್ರು. ಚುನಾವಣೆ ಮುಗಿದ ಬಳಿಕ ಒಂದು ತಿಂಗಳಲ್ಲಿ ಖರ್ಚು ವೆಚ್ಚ ಕೊಡಬೇಕು ಅಂತ ಚುನಾವಣಾ ಆಯೋಗ ಹೇಳುತ್ತದೆ. ಆದರೆ ನಾವು ಆತ್ಮವಂಚನೆ ಮಾಡಿಕೊಂಡು ಲೆಕ್ಕ ಹೇಳ್ತೇವೆ. ಆಯೋಗಕ್ಕೆ ಕೊಡುವಾಗ ರಾಮನ ಲೆಕ್ಕ – ಭೀಮನ ಲೆಕ್ಕ ಅಂತ ಕೊಡ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ರು. ಆಗ ಸಿದ್ದರಾಮಯ್ಯ ಮಾತಿಗೆ ಸಿದ್ದು ಸವದಿ ಆಕ್ಷೇಪ ಅದು ರಾಮನ ಲೆಕ್ಕ – ಕೃಷ್ಣನ ಲೆಕ್ಕ ಎಂದ್ರು. ಆಗ ಸಿದ್ದರಾಮಯ್ಯ ಮಾತನಾಡಿ ಯಾಕೇ ಭೀಮನ ಲೆಕ್ಕ ಅಲ್ವಾ? ಯಾಕೆ ಭೀಮ ಬೇಡ್ವಾ? ಕೃಷ್ಣನ ಲೆಕ್ವಾ? ಓಕೆ ರಾಮನ ಲೆಕ್ಕ – ಕೃಷ್ಣನ ಲೆಕ್ಕ ಬಿಡಿ ಎಂದರು. ಇದನ್ನೂ ಓದಿ: ಚುನಾವಣಾ ವ್ಯವಸ್ಥೆ ಬದಲಾಗದಿದ್ರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತೆ: ಸಿದ್ದರಾಮಯ್ಯ

    ಈ ವೇಳೆ ಮಧ್ಯೆ ಪ್ರವೇಶ ಮಾಡಿದ ಶಾಸಕ ರಮೇಶ್ ಕುಮಾರ್, ಅದು ರಾಮನ ಲೆಕ್ಕ – ಕೃಷ್ಣನ ಲೆಕ್ಕ ಅಂತ ಮಾಮೂಲು ಹೇಳೋದು. ರಾಮನಿಗೆ ಒಬ್ಬ ಪತ್ನಿ – ಕೃಷ್ಣನಿಗೆ ಲೆಕ್ಕ ಇಲ್ಲ. ನೀವು ಹೇಗಿದ್ದರೂ ಕೃಷ್ಣ ಅಲ್ವಾ ಅಂತಾ ರಮೇಶ್ ಕುಮಾರ್ ಸಿದ್ದರಾಮಯ್ಯ ಕಾಲೆಳೆದ್ರು. ಅದಕ್ಕೆ ಜೆ.ಹೆಚ್.ಪಟೇಲ್ ಹೇಳಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಹಿಂದೆ ಜೆ ಹೆಚ್ ಪಟೇಲ್ ಹೇಳ್ತಾ ಇದ್ರು. ನಾನು ಮೊದಲು ಕಚ್ಚೆ ಹಾಕ್ತಿದೆ, ಅಮೇಲೆ ಪಂಚೆ ಹಾಕಲು ಶುರು ಮಾಡಿದೆ, ಏಕೆಂದರೆ ನನ್ನ ಕಚ್ಚೆ ಹರಕ ಅಂತಿದ್ರು ಅಂತಾ ಪಟೇಲರು ಹೇಳ್ತಿದ್ರು. ಈ ಸಮಾಜದಲ್ಲಿ ಎರಡು ವರ್ಗ ಇರುತ್ತದೆ – ಒಂದು ರಾಮನ ವರ್ಗ – ಇನ್ನೊಂದು ಕೃಷ್ಣನ ವರ್ಗ. ನಾನು ಕೃಷ್ಣನ ವರ್ಗದವನು ಅಂತ ಪಟೇಲ್ ಹೇಳ್ತಾ ಇದ್ರು ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು. ಇದನ್ನೂ ಓದಿ: ಡಿಕೆಶಿ ವಿದೇಶಕ್ಕೆ ತೆರಳಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್

    ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶ ಮಾಡಿ, ರಾಮಕೃಷ್ಣ ಹೆಗಡೆ ಅವರ ಬರ್ತ್ ಡೇ ದಿನ ಕಾರ್ಯಕ್ರಮದಲ್ಲೇ ಪಟೇಲರು ಬಹಿರಂಗವಾಗಿ ಹೇಳಿಕೆ ನೀಡಿದ್ರು. ಹೆಗಡೆ ಅವರೇ ಇಷ್ಟು ವರ್ಷ ಆಯ್ತು. ಇಷ್ಟು ದಿನ ಕೃಷ್ಣನ ಥರಾ ಇದ್ರಿ, ಇನ್ನು ಮುಂದೆಯಾದ್ರೂ ರಾಮನ ಥರಾ ಇರಿ ಎಂದು ಪಟೇಲರು ಅಂದಿದ್ದರು ಎಂದು ಸಿಎಂ ನೆನಪಿಸಿಕೊಂಡ್ರು. ಇಬ್ಬರು ಮಾಜಿ ಸಿಎಂಗಳ ಅಂದಿನ ಮಾತುಕತೆ ಪ್ರಸಂಗ ಹೇಳಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತು.

  • ವಿಧಾನಸಭೆಯಲ್ಲಿ ಹಾಲಿ ಸ್ಪೀಕರ್‌ಗೆ ಮಾಜಿ ಸ್ಪೀಕರ್ ಸವಾಲ್ – ಸಸ್ಪೆಂಡ್ ಮಾಡ್ಬಿಡಿ ಎಂದ ರೇವಣ್ಣ

    ವಿಧಾನಸಭೆಯಲ್ಲಿ ಹಾಲಿ ಸ್ಪೀಕರ್‌ಗೆ ಮಾಜಿ ಸ್ಪೀಕರ್ ಸವಾಲ್ – ಸಸ್ಪೆಂಡ್ ಮಾಡ್ಬಿಡಿ ಎಂದ ರೇವಣ್ಣ

    ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸವಾಲು ಹಾಕಿದ ಘಟನೆ ನಡೆಯಿತು. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿಗೆ ಸ್ಪೀಕರ್ ಕೂಡ ಗರಂ ಆಗಿದ್ದರು.

    ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಇವತ್ತು ಕೂಡ ಧರಣಿ ಮುಂದುವರಿಸಿ ಕಲಾಪಕ್ಕೆ ಅಡ್ಡಿ ಪಡಿಸಿತು. ಆ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಚರ್ಚೆಯಲ್ಲಿ ಭಾಗವಹಿಸಿ, ಧರಣಿ ಕೈಬಿಡಿ. ಕಲಾಪಕ್ಕೆ ಅಡ್ಡಿ ಮಾಡುವುದು ಸರಿಯಾದ ಕ್ರಮ ಅಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ಅಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇದು ಶೋಭೆ ಅಲ್ಲ. ಹೊರಗಡೆ ಏನಾದರೂ ಮಾಡಿ, ಕಲಾಪ ನಡೆಸಲು ಅವಕಾಶ ಕೊಡಿ ಅಂತಾ ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ರಾಜ್ಯದ ಮಕ್ಕಳಿಗೆ ದ್ರೋಹ ಮಾಡ್ತಿದೆ, ಇದು ರಾಜದ್ರೋಹ: ಬೊಮ್ಮಾಯಿ ಕಿಡಿ

    ನಮ್ಮ ಮೇಲೆ ಏಕೆ ಗೂಬೆ ಕೂರಿಸ್ತೀರಾ?: ಈ ನಡುವೆ ಸದನದ ಬಾವಿಯಿಂದ ತಮ್ಮ ಆಸನಕ್ಕೆ ಬಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸ್ಪೀಕರ್ ಕಾಗೇರಿಗೆ ಸವಾಲು ಹಾಕಿದರು. ಸಸ್ಪೆಂಡ್ ಮಾಡಲು ನಿಮಗೆ ಅವಕಾಶ ಇದೆ. ಸಸ್ಪೆಂಡ್ ಮಾಡಿ. ಸುಮ್ಮನೇ ನಮ್ಮ ಮೇಲೆ ಏಕೆ ಗೂಬೆ ಕೂರಿಸುತ್ತೀರಾ ಅಂತಾ ಸ್ಪೀಕರ್‌ಗೆ ತಿರುಗೇಟು ಕೊಟ್ಟರು. ಇದೇ ವೇಳೆ ಮಧ್ಯಪ್ರವೇಶ ಮಾಡಿದ ಶಾಸಕ ಹೆಚ್.ಡಿ.ರೇವಣ್ಣ, ಅವರೇ ಹೇಳ್ತಿದಾರಲ್ಲ, ಸಸ್ಪೆಂಡ್ ಮಾಡಿ. ಕಲಾಪ ನಡೆಸಲು ಕಾಂಗ್ರೆಸ್ ಅವರು ಅವಕಾಶ ಕೊಡಲಿ, ಇಲ್ಲದಿದ್ದರೆ ಸಸ್ಪೆಂಡ್ ಮಾಡಿ ಅಂತಾ ಒತ್ತಾಯಿಸಿದರು.

    ರಾತ್ರಿ ಇಲ್ಲೇ ಮಲಗೋಣ ಎಂದ ಸಿದ್ದರಾಮಯ್ಯ: ಆಗ ಮಧ್ಯಪ್ರವೇಶ ಮಾಡಿದ ಸ್ಪೀಕರ್, ರಮೇಶ್ ಕುಮಾರ್‌ಗೆ ಟಾಂಗ್ ಕೊಟ್ಟರು. ಸಸ್ಪೆಂಡ್ ಮಾಡಿ ಅಂತಾ ರಮೇಶ್ ಕುಮಾರ್ ಸಲಹೆ ಕೊಟ್ಟಿದ್ದಾರೆ. ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಬರೆದು ಕೊಡಲಿ. ಸಿದ್ದರಾಮಯ್ಯ ಹಿರಿಯರಿದ್ದಾರೆ, ಅನುಭವಿಗಳಿದ್ದಾರೆ. ಅಂತಹವರನ್ನು ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಸಲಹೆ ಕೊಡ್ತಿದ್ದಾರೆ ಅಂತಾ ತಿರುಗೇಟು ನೀಡಿದರು. ಇದನ್ನೂ ಓದಿ: ನನಗೆ ವಯಸ್ಸಾಗಿದ್ರೂ ಹಾಗೆ ಕಾಣಲ್ಲ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಬಳಿಕವೂ ಗದ್ದಲ ಮುಂದುವರಿದಾಗ ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಲಾಯಿತು. ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ. ಸೋಮವಾರದವರೆಗೂ ಧರಣಿ ಮಾಡೋಣ, ಯಾರೂ ಹೋಗಬೇಡಿ, ಇಲ್ಲೇ ಕೂರಿ. ರಾತ್ರಿ ವಿಧಾನಸಭೆಯಲ್ಲಿ ಮಲಗೋಣ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಸದಸ್ಯರಿಗೆ ಖಡಕ್ ಸೂಚನೆ ಕೊಟ್ಟಿದ್ದು, ಧರಣಿ ಮುಂದುವರಿದಿದೆ.

  • ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ: ರಮೇಶ್ ಕುಮಾರ್

    ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ: ರಮೇಶ್ ಕುಮಾರ್

    ಬೆಳಗಾವಿ: ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

    ರಮೇಶ್ ಕುಮಾರ್ ಅವರಿಗೆ ಮಾಧ್ಯಮಗಳ ಮೇಲೆ ಇನ್ನೂ ಕೋಪ ತಣ್ಣಗಾದಂತಿಲ್ಲ. ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ರಮೇಶ್ ಕುಮಾರ್ ನಕಾರ ಮಾಡಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಕೈ ಮುಗಿದು ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಹೇಳುತ್ತಾ ಹೊರಟಿದ್ದಾರೆ.

    ಅತ್ಯಾಚಾರದ ಕುರಿತು ರಮೇಶ್ ಕುಮಾರ್ ಅವರು ಬೆಳಗಾವಿ ವಿಧಾನಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿ ಎಡವಟ್ಟು ಮಾಡಿಕೊಂಡಿದ್ದರು. ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ಕಿಡಿಕಾರಿದ್ದಾರೆ. ರಮೇಶ್ ಕುಮಾರ್ ಅವರು ಹೆಣ್ಣಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎನ್ನುವ ಟೀಕೆಗಳು ವ್ಯಕ್ತವಾಗಿದ್ದವು. ಇದನ್ನೂ ಓದಿ:  ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಇತ್ತ ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕರು, ಸಚಿವರು ಒತ್ತಾಯಿಸಿದ್ದರು. ನಂತರ ರಮೇಶ್ ಕುಮಾರ್ ಟ್ವೀಟ್ ಮಾಡಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಅಲ್ಲದೆ ಸದನಸದಲ್ಲಿಯೂ ಎಲ್ಲರ ಮುಂದೆಯೂ ಕ್ಷಮೆ ಕೇಳಿದ್ದರು. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್

  • ಸ್ಪೀಕರ್‌ ಆಗಿದ್ದವರ ಅಸಭ್ಯ ಹೇಳಿಕೆ ವಿಕೃತಿಯ ಪರಮಾವಧಿ: ಹೆಚ್‌ಡಿಕೆ ವಾಗ್ದಾಳಿ

    ಸ್ಪೀಕರ್‌ ಆಗಿದ್ದವರ ಅಸಭ್ಯ ಹೇಳಿಕೆ ವಿಕೃತಿಯ ಪರಮಾವಧಿ: ಹೆಚ್‌ಡಿಕೆ ವಾಗ್ದಾಳಿ

    ನವದೆಹಲಿ: ಸದನದಲ್ಲಿ ಅತ್ಯಾಚಾರ ಕುರಿತ ಹೇಳಿಕೆ ವಿಚಾರವಾಗಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹಾಗೂ ಹಾಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

    ನವದೆಹಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಬಾರಿ ಸ್ಪೀಕರ್‌ ಆಗಿದ್ದವರು, ಸಾಂವಿಧಾನಿಕ ಹುದ್ದೆಯಲ್ಲಿದ್ದವರು, ಸ್ವಯಂ ಘೋಷಿತ ಸಂವಿಧಾನ ತಜ್ಞರು ಆಗಿರುವ ರಮೇಶ್‌ ಕುಮಾರ್‌ ಅವರು ಸದನದಲ್ಲಿ ಮಹಿಳೆಯರಿಗೆ ಘೋರ ಅಪಮಾನ ಮಾಡಿದ್ದಾರೆ. ಅಲ್ಲದೇ ಮಹಿಳೆಯರ ಜತೆಗೆ ಸಭಾಧ್ಯಕ್ಷ ಪೀಠಕ್ಕೂ ಅಪಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರೇಪ್ ಎಂಜಾಯ್ ಹೇಳಿಕೆಗೆ ಎಲ್ಲೆಡೆ ಆಕ್ರೋಶ – ರಮೇಶ್ ಪ್ರತಿಕೃತಿಗೆ ಪೊರಕೆ ಸೇವೆ

    ಎರಡು ಬಾರಿ ಸ್ಪೀಕರ್‌ ಆಗಿದ್ದ ಮಹಾನುಭಾವರು ಅದೇ ಪೀಠದಲ್ಲಿ ಕುಳಿತಿದ್ದವರು ಕಲಾಪ ನಡೆಸುವಾಗ ಎದುರಿಸುವ ಕಷ್ಟ, ಒತ್ತಡದ ಪರಿಸ್ಥಿತಿಯನ್ನು ಅತ್ಯಾಚಾರಕ್ಕೆ ಒಳಗಾಗುವ ಅಸಹಾಯಕ ಮಹಿಳೆಗೆ ಹೋಲಿಸುವ ಮೂಲಕ ಸಂವಿಧಾನದತ್ತವಾದ ಸಭಾಧ್ಯಕ್ಷರ ಪೀಠಕ್ಕೆ ಕ್ಷಮಾರ್ಹವಲ್ಲದ ಅಪಮಾನ ಮಾಡಿದ್ದಾರೆ. ಜತೆಗೆ ಸದನದಲ್ಲಿ ಮಹಿಳೆಯರಿಗೂ ಅಪಮಾನ ಮಾಡಿದ್ದಾರೆ. ಕೆಟ್ಟ ಶಬ್ದಗಳನ್ನು ಬಳಕೆ ಮಾಡುವ ಮೂಲಕ ಇಡೀ ಸ್ತ್ರೀ ಕುಲವನ್ನೇ ಹೀಯಾಳಿಸಿದ್ದಾರೆ. ಬುದ್ಧಿಜೀವಿಯ ಸೋಗಿನಲ್ಲಿ ತಮ್ಮ ವಿಕೃತಿ ಪ್ರದರ್ಶನ ಮಾಡಿದ್ದಾರೆ. ಅವರು ಪದೇ ಪದೆ ಇದನ್ನೇ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

    ಕಲಾಪ ನಡೆಸುವ ಒತ್ತಡದಲ್ಲಿರುವ ಸಭಾಧ್ಯಕ್ಷರ ಪೀಠದ ಎದುರೇ ಈ ರೀತಿ ಅಸಭ್ಯವಾಗಿ ಮಾತನಾಡುವುದು ಸರಿಯಲ್ಲ. ಇದು ಸಂಸದೀಯ ವ್ಯವಸ್ಥೆಗೆ ಭೂಷಣವಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಘೋರ ಅಪರಾಧ, ಅದಕ್ಕೆ ಪೂರ್ಣ ವಿರಾಮ ಹಾಕಿ – ರಮೇಶ್ ಕುಮಾರ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

    ಮಾಜಿ ಸಿಎಂ ಆಗಿ, ಶಾಸಕರಾಗಿ ಅದಿವೇಶನ ನಡೆಯುವ ಸಂದರ್ಭದಲ್ಲಿ ದೆಹಲಿಯಲ್ಲಿ ಇರುವ ಕುರಿತು ಪ್ರತಿಕ್ರಿಯಿಸಿ, ಸದನದ ಕಲಾಪದಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವ ವಿಚಾರಗಳು ಚರ್ಚೆಯಾಗಿವೆ. ಕಲಾಪದಲ್ಲಿ ಏನೆಲ್ಲಾ ಚರ್ಚೆ ಆಗಿದೆ ಎನ್ನುವುದನ್ನು ನಾನು ಗಮನಿಸಿದ್ದೇನೆ. ನನ್ನ ತಂದೆಯವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ನನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಾನು ಮೊದಲೇ ಸ್ಪೀಕರ್ ಅವರ ಬಳಿ ಅನುಮತಿ ಪಡೆದು ದೆಹಲಿಗೆ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕಲಾಪದಲ್ಲಿ ನಡೆಯುತ್ತಿರುವ ಪ್ರತಿಯೊಂದನ್ನು ನಾನು ನೋಡುತ್ತಿದ್ದೇನೆ. ರಾಜ್ಯದ ಅನುಭವಿ ರಾಜಕಾರಣಿ, ಸ್ಪೀಕರ್ ಆಗಿದ್ದವರು ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ರಮೇಶ್ ಕುಮಾರ್ ಅವರ ಮಾತು, ಸ್ಪೀಕರ್ ನಡೆದುಕೊಂಡ ರೀತಿ ಖಂಡನೀಯ. ಮಹಿಳೆಯರ ಬಗ್ಗೆ ಮಾತನಾಡುವಾಗ ಆ ಪದ ಬಳಕೆ ಅಗತ್ಯ ಏನಿತ್ತು? ಮೊದಲು ಮಾತನಾಡಿ ನಂತರ ಕ್ಷಮೆ ಕೋರಿದರೆ ಮುಗಿಯುವುದಿಲ್ಲ. ಇವರೆಲ್ಲಾ ಪಾರ್ಲಿಮೆಂಟರಿ ವ್ಯವಸ್ಥೆಯನ್ನು ಕುಲಗೆಡಿಸುತ್ತಿದ್ದಾರೆ. ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದೇ ಸದನದ ದಾಖಲೆಯೇ ಎಂದು ಪ್ರಶ್ನಿಸಿದ್ದಾರೆ.

  • ರೇಪ್ ಎಂಜಾಯ್ ಹೇಳಿಕೆಗೆ ಎಲ್ಲೆಡೆ ಆಕ್ರೋಶ – ರಮೇಶ್ ಪ್ರತಿಕೃತಿಗೆ ಪೊರಕೆ  ಸೇವೆ

    ರೇಪ್ ಎಂಜಾಯ್ ಹೇಳಿಕೆಗೆ ಎಲ್ಲೆಡೆ ಆಕ್ರೋಶ – ರಮೇಶ್ ಪ್ರತಿಕೃತಿಗೆ ಪೊರಕೆ ಸೇವೆ

    ಕೋಲಾರ: ವಿಧಾನಸಭೆ ಕಲಾಪದಲ್ಲಿ ರೇಪ್ ಎಂಜಾಯ್ ಮಾಡಬೇಕು ಎಂದು ಹೇಳಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಎಲ್ಲೆಡೆ ಆಕ್ರೋಶ ಹೆಚ್ಚಾಗಿದ್ದು, ಅವರ ಪ್ರತಿಕೃತಿ ದಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

    ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಜಾ ಸದಸ್ಯರು ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ರಮೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಪೊರಕೆ ಸೇವೆ ಮಾಡಿದ ಮಹಿಳೆಯರು, ಹೆಣ್ಣು ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: 20 ವರ್ಷದಿಂದ ಮಕ್ಕಳ ಅಶ್ಲೀಲ ಫೋಟೋ, ವೀಡಿಯೋ ಚಿತ್ರಿಸುತ್ತಿದ್ದ ಸಂಗೀತಗಾರ

    ಈ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ರಮೇಶ್ ಅವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುವಂತೆ ಒತ್ತಾಯವನ್ನು ಮಾಡುತ್ತಿದ್ದಾರೆ.

    ಮುಳುಬಾಗಿಲು ನಗರ ಹಾಗೂ ಶ್ರೀನಿವಾಸಪುರ ಪಟ್ಟಣದಲ್ಲಿ ರಮೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ರು.

  • ಅತ್ಯಾಚಾರ ಘೋರ ಅಪರಾಧ, ಅದಕ್ಕೆ ಪೂರ್ಣ ವಿರಾಮ ಹಾಕಿ – ರಮೇಶ್ ಕುಮಾರ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

    ಅತ್ಯಾಚಾರ ಘೋರ ಅಪರಾಧ, ಅದಕ್ಕೆ ಪೂರ್ಣ ವಿರಾಮ ಹಾಕಿ – ರಮೇಶ್ ಕುಮಾರ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

    ನವದೆಹಲಿ: ಅತ್ಯಾಚಾರದ ವಿಚಾರವಾಗಿ ಶಾಸಕ ರಮೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದು, ಅವು ಅಸಮರ್ಥನೀಯ ಎಂದು ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ಅವರು ನೀಡಿರುವ ಹೇಳಿಕೆಯನ್ನು ನಾನು ಮನಃಪೂರ್ವಕವಾಗಿ ಖಂಡಿಸುತ್ತೇನೆ. ರಮೇಶ್ ಕುಮಾರ್ ಅಂತಹ ಪದಗಳನ್ನು ಯಾರಾದರೂ ಹೇಗೆ ಹೇಳಲು ಸಾಧ್ಯ ಎಂಬುವುದನ್ನು ವಿವರಿಸಲಾಗದು. ಅವು ಅಸಮರ್ಥನೀಯವಾಗಿದೆ. ಅತ್ಯಾಚಾರ ಒಂದು ಘೋರ ಅಪರಾಧ. ಅದಕ್ಕೆ ಪೂರ್ಣ ವಿರಾಮ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೆಣ್ಣು ಕುಲಕ್ಕೆ ಕ್ಷಮೆ ಕೇಳಿದ ರಮೇಶ್ ಕುಮಾರ್ – ಮುಂದುವರಿಸೋದು ಬೇಡ ಎಂದ ಸ್ಪೀಕರ್ ಕಾಗೇರಿ

    ಗುರುವಾರ ವಿಧಾನಸಭೆಯಲ್ಲಿ ಮಾತನಾಡುತ್ತಾ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಆಗದಿದ್ರೆ ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಹೇಳಿಕೆ ನೀಡಿದ್ದರು. ರಮೇಶ್ ಕುಮಾರ್ ಈ ರೀತಿ ಹೇಳುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮಂದಿ ಸದಸ್ಯರು ಇದನ್ನು ತಮಾಷೆಯಾಗಿ ತೆಗೆದುಕೊಂಡರು. ಆದರೆ ಈ ಹೇಳಿಕೆಗೆ ಇದೀಗ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ರಮೇಶ್ ಕುಮಾರ್ ಮುಖವಾಡ ಹಾಕಿಕೊಂಡು ಬದುಕುತ್ತಿದ್ದಾರೆ: ಸುಧಾಕರ್

    ಈ ಹೇಳಿಕೆ ಕುರಿತಂತೆ ರಮೇಶ್ ಕುಮಾರ್ ಅವರು, ಅತ್ಯಾಚಾರ ಸಂಬಂಧ ಅಧಿವೇಶನದಲ್ಲಿ ನೀಡಿರುವ ನನ್ನ ಹೇಳಿಕೆ ಕುರಿತು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸುವುದು ನನ್ನ ಉದ್ದೇವಾಗಿರಲಿಲ್ಲ. ಮಾತಿನ ಭರದಲ್ಲಿ ಆ ಮಾತು ಬಂದಿದೆ. ಇನ್ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸುತ್ತೇನೆಂದು ಟ್ವೀಟ್ ಮೂಲಕ ಕ್ಷಮೆಯಾಚಿಸಿದ್ದರು. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಕಲಾಪ ನಡೆಯುವ ವೇಳೆ ಪ್ರಶ್ನೆ ಕೇಳುವವರ ಸಂಖ್ಯೆ ಹೆಚ್ಚಾಗಿತ್ತು. ನಾನೂ ಕೂಡ ಇದನ್ನು ಅನುಭವಿಸ್ತಿದ್ದೇನೆ ಎಂದು ನೋವು ತೋಡಿಕೊಂಡೆ ನಾನು ಇಂಗ್ಲಿಷ್ ಭಾಷೆಯಲ್ಲಿರುವ ಒಂದು ಮಾತು ಉಲ್ಲೇಖ ಮಾಡಿದೆ ಅಷ್ಟೇ. ಹೆಣ್ಣಿಗೆ ಅಪಮಾನ ಮಾಡೋದು ಅಥವಾ ಸದನದ ಗೌರವ ಕಡಿಮೆ ಮಾಡೋದು, ಲಘುವಾಗಿ ವರ್ತಿಸಬೇಕು ಎನ್ನುವ ಯಾವುದೇ ದುರುದ್ದೇಶ ಇಲ್ಲ. ಯಾವ ಸನ್ನಿವೇಶದಲ್ಲಿ ಹೇಗೆ ಹೇಳ್ತೀವಿ ಅನ್ನೋದು ನಿರ್ಧಾರವಾಗಲಿದೆ. ಸಂದರ್ಭದಲ್ಲಿ ಕಲಾಪ ನಡೆಯುವಾಗ, ನಾನು ಇಲ್ಲಿ ಉಲ್ಲೇಖ ಮಾಡಿದ ಮಾತು. ಯಾರ ಮೇಲೂ ಚಾಲೆಂಜ್ ಮಾಡುವ ಉದ್ದೇಶ ಇಲ್ಲ. ಸ್ಪೀಕರ್ ಅವರೇ ತಮ್ಮನ್ನೂ ಸಹ ಅಪರಾಧಿ ಮಾಡಿದ್ದಾರೆ. ಚಿಂತಕ ಕನ್ಫೂಶಿಯಸ್ ಒಂದು ಮಾತು ಹೇಳ್ತಾನೆ. One mistake, ends up in a single mistake.. To Deny mistake, about multiple mistakes ಅಂತಾ ಹೇಳ್ತಾನೆ. ನನ್ನಿಂದ ಅಪರಾಧ ಆಗಿದೆ ಅಂತಾ ತೀರ್ಪನ್ನೇ ಕೊಟ್ಟಿರೋದ್ರಿಂದ, ನಾನು ಕ್ಷಮೆ ಕೇಳುತ್ತೇನೆ. ಇದಕ್ಕೆ ಇಲ್ಲೇ ಸುಖಾಂತ್ಯವನ್ನು ಹಾಡಿ, ಕಲಾಪ ಮುಂದುವರೆಸೋಣ. ಗ್ರಹಚಾರಕ್ಕೆ, ನೀವು ಹೇಳಿದ ಹಾಗೆ ನಾನು ಪ್ರತಿಕ್ರಿಯಿಸಿದೆ ಎಂದು ಕಲಾಪದಲ್ಲಿ ಕೂಡ ಎಲ್ಲರ ಸಮ್ಮುಖ ಕ್ಷಮೆ ಕೇಳಿದರು.

  • ಹೆಣ್ಣು ಕುಲಕ್ಕೆ ಕ್ಷಮೆ ಕೇಳಿದ ರಮೇಶ್ ಕುಮಾರ್ – ಮುಂದುವರಿಸೋದು ಬೇಡ ಎಂದ ಸ್ಪೀಕರ್ ಕಾಗೇರಿ

    ಹೆಣ್ಣು ಕುಲಕ್ಕೆ ಕ್ಷಮೆ ಕೇಳಿದ ರಮೇಶ್ ಕುಮಾರ್ – ಮುಂದುವರಿಸೋದು ಬೇಡ ಎಂದ ಸ್ಪೀಕರ್ ಕಾಗೇರಿ

    ಬೆಳಗಾವಿ: ವಿಧಾನಸಭೆಯಲ್ಲಿ ಸೂಕ್ಷ್ಮತೆ ಕಳೆದುಕೊಂಡು ಅಗೌರವದಿಂದ ವಿವಾದಾತ್ಮಕ ಮಾತನಾಡಿದ್ದ ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇಂದು ಕ್ಷಮೆ ಕೇಳಿದ್ದಾರೆ.

    ದೇಶದ ಎಲ್ಲ ಕಡೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದ ರಮೇಶ್ ಕುಮಾರ್ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಲು ಮುಂದಾದ್ರು. ಸ್ಪೀಕರ್ ಅನುಮತಿ ಪಡೆದಿದ್ದೇನೆ ಅಂತಾ ಮಾತು ಶುರು ಮಾಡಿದ ರಮೇಶ್ ಕುಮಾರ್, ಹೆಣ್ಣಿಗೆ ಅಪಮಾನ ಮಾಡುವುದು, ಸದನದ ಗೌರವ ಕಡಿಮೆ ಮಾಡುವುದು, ಲಘುವಾಗಿ ವರ್ತಿಸುವ ಉದ್ದೇಶ ಇಲ್ಲ. ಮಾತನಾಡಿದ ಸಂದರ್ಭದ ಬಗ್ಗೆ ಸಮರ್ಥನೆ ಮಾಡಲ್ಲ. ನಾನು ಉಲ್ಲೇಖ ಮಾಡಿದ ಮಾತು ಯಾರಿಗೂ ನೋವಾಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಸಾಮಾನ್ಯ ಹಿನ್ನೆಲೆಯಿಂದ ಬಂದವನು, ಸದನದ ಗೌರವದಲ್ಲಿ ನಡೆದುಕೊಳ್ಳಬೇಕು ಎಂಬ ಪ್ರಯತ್ನ ಮಾಡುತ್ತೇನೆ. ನನಗೆ ಯಾವುದೇ ಪ್ರತಿಷ್ಠೆ ಇಲ್ಲ, ನೀವು ನಗಾಡಿದ್ದೀರಿ, ನಮ್ಮನ್ನೂ ಸಹ ಅಪರಾಧಿ ಮಾಡಿದ್ದಾರೆ, ನಿಮ್ಮದೂ ಆ ಉದ್ದೇಶ ಇರಲಿಕ್ಕಿಲ್ಲ ಎಂದು ಸ್ಪೀಕರ್ ಕಾಗೇರಿ ಅವರನ್ನು ಜೊತೆ ಸೇರಿಸಿಕೊಂಡು ಸ್ಪಷ್ಟನೆ ಕೊಟ್ಟರು. ಇದನ್ನೂ ಓದಿ: ರಮೇಶ್ ಕುಮಾರ್ ಮುಖವಾಡ ಹಾಕಿಕೊಂಡು ಬದುಕುತ್ತಿದ್ದಾರೆ: ಸುಧಾಕರ್

    ನಿನ್ನೆ ಕಲಾಪ ನಡೆಯುವ ವೇಳೆ ಪ್ರಶ್ನೆ ಕೇಳುವವರ ಸಂಖ್ಯೆ ಹೆಚ್ಚಾಗಿತ್ತು. ನಾನೂ ಕೂಡ ಇದನ್ನು ಅನುಭವಿಸ್ತಿದ್ದೇನೆ ಎಂದು ನೋವು ತೋಡಿಕೊಂಡೆ ನಾನು ಇಂಗ್ಲಿಷ್ ಭಾಷೆಯಲ್ಲಿರುವ ಒಂದು ಮಾತು ಉಲ್ಲೇಖ ಮಾಡಿದೆ ಅಷ್ಟೇ. ಹೆಣ್ಣಿಗೆ ಅಪಮಾನ ಮಾಡೋದು ಅಥವಾ ಸದನದ ಗೌರವ ಕಡಿಮೆ ಮಾಡೋದು, ಲಘುವಾಗಿ ವರ್ತಿಸಬೇಕು ಎನ್ನುವ ಯಾವುದೇ ದುರುದ್ದೇಶ ಇಲ್ಲ. ಯಾವ ಸನ್ನಿವೇಶದಲ್ಲಿ ಹೇಗೆ ಹೇಳ್ತೀವಿ ಅನ್ನೋದು ನಿರ್ಧಾರವಾಗಲಿದೆ. ಸಂದರ್ಭದಲ್ಲಿ ಕಲಾಪ ನಡೆಯುವಾಗ, ನಾನು ಇಲ್ಲಿ ಉಲ್ಲೇಖ ಮಾಡಿದ ಮಾತು. ಯಾರ ಮೇಲೂ ಚಾಲೆಂಜ್ ಮಾಡುವ ಉದ್ದೇಶ ಇಲ್ಲ. ಸ್ಪೀಕರ್ ಅವರೇ ತಮ್ಮನ್ನೂ ಸಹ ಅಪರಾಧಿ ಮಾಡಿದ್ದಾರೆ. ಚಿಂತಕ ಕನ್ಫೂಶಿಯಸ್ ಒಂದು ಮಾತು ಹೇಳ್ತಾನೆ. One mistake, ends up in a single mistake.. To Deny mistake, about multiple mistakes ಅಂತಾ ಹೇಳ್ತಾನೆ. ನನ್ನಿಂದ ಅಪರಾಧ ಆಗಿದೆ ಅಂತಾ ತೀರ್ಪನ್ನೇ ಕೊಟ್ಟಿರೋದ್ರಿಂದ, ನಾನು ಕ್ಷಮೆ ಕೇಳುತ್ತೇನೆ. ಇದಕ್ಕೆ ಇಲ್ಲೇ ಸುಖಾಂತ್ಯವನ್ನು ಹಾಡಿ, ಕಲಾಪ ಮುಂದುವರೆಸೋಣ. ಗ್ರಹಚಾರಕ್ಕೆ, ನೀವು ಹೇಳಿದ ಹಾಗೆ ನಾನು ಪ್ರತಿಕ್ರಿಯಿಸಿದೆ ಎಂದು ರಮೇಶ್ ಕುಮಾರ್ ಕ್ಷಮೆ ಕೇಳಿದರು. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ರಮೇಶ್ ಕುಮಾರ್ ಕ್ಷಮೆ ಬಳಿಕ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿವಾದವನ್ನ ಬೆಳಸಬೇಡಿ, ಸಾಂದರ್ಭಿಕವಾಗಿ ಹೇಳಿದ್ದುಅಷ್ಟೇ. ನಮ್ಮ ಸದನ ಮಹಿಳೆಯರ ಬಗ್ಗೆ ಗೌರವವನ್ನು ಇಟ್ಟುಕೊಂಡಿದೆ. ನಾವೆಲ್ಲರೂ ಕುಟುಂಬದಲ್ಲಿ ಇರುವವವರು. ಇದನ್ನು ಬೆಳೆಸೋದು ಬೇಡ, ಈಗ ಆಯಿತು. ಈಗಾಗಲೇ ರಮೇಶ್ ಕುಮಾರ್ ಕ್ಷಮೆ ಕೇಳಿ ವಿಷಾದ ವ್ಯಕ್ತಪಡಿಸಿ ಆಗಿದೆ. ನಿನ್ನೆ ನಾನು ಹೇಳಿದ ಮಾತಿಗೆ ರಮೇಶ್ ಕುಮಾರ್ ಒಂದು ಮಾತು ಹೇಳಿದರು. ನಮ್ಮ ಸದನ ಮಹಿಳೆಯರ ಬಗ್ಗೆ ಇರುವ ಸ್ಥಾನವನ್ನು ಇಟ್ಟುಕೊಂಡಂತವರೇ. ವಿವಾದದ ಘಟನೆಯನ್ನು ಬೆಳೆಸುವುದು ಬೇಡ ಕಲಾಪ ಮುಂದುವರಿಸೋಣ. ಇದನ್ನು ಇನ್ನು ಎಲ್ಲೂ ಯಾರೂ ಹೇಳುವುದು ಬೇಡ ಎಂದು ಸ್ಪೀಕರ್ ಹೇಳಿದರು. ಇದೇ ವೇಳೆ ಕೆಲ ಮಹಿಳಾ ಶಾಸಕಿಯರ ಮಾತನಾಡಲು ಪ್ರಯತ್ನಿಸಿದಾಗ ಅವಕಾಶ ಕೊಡದ ಸ್ಪೀಕರ್ ಪ್ರಶ್ನೋತ್ತರ ಕಲಾಪ ಆರಂಭಿಸಿಯೇ ಬಿಟ್ಟರು.

  • ಮಹಿಳೆಯರೇ ಕ್ಷಮಿಸಿಬಿಡಿ, ಇನ್ಮುಂದೆ ಇಂತಹ ಮಾತುಗಳು ಮರುಕಳಿಸಲ್ಲ: ಡಿಕೆಶಿ ಕ್ಷಮೆ

    ಮಹಿಳೆಯರೇ ಕ್ಷಮಿಸಿಬಿಡಿ, ಇನ್ಮುಂದೆ ಇಂತಹ ಮಾತುಗಳು ಮರುಕಳಿಸಲ್ಲ: ಡಿಕೆಶಿ ಕ್ಷಮೆ

    ಬೆಂಗಳೂರು: ಅತ್ಯಾಚಾರವನ್ನು ಆನಂದಿಸಿ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆ ರಾಜ್ಯಾದ್ಯಂತ ಭಾರೀ ಕೋಲಾಹಲ ಎಬ್ಬಿಸಿತ್ತು. ಈ ಬೆನ್ನಲ್ಲೇ ಮಾಜಿ ಸ್ಪೀಕರ್ ಸದನದಲ್ಲಿಯೇ ಸಾರಿ ಕೆಳಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಕ್ಷಮೆಯಾಚಿಸಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಡಿಕೆಶಿ, ಕಾಂಗ್ರೆಸ್ ಶಾಸಕರು ಮಾಡಿರುವ ಪದ ಬಳಕೆ ಬಗ್ಗೆ ವಿಷಾದಿಸುತ್ತೇನೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರ ಬಳಿ ಕ್ಷಮೆ ಕೇಳುತ್ತೇನೆ. ಅಲ್ಲದೆ ಮತ್ತೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಖಚಿತಪಡಿಸುವುದಾಗಿ ತಿಳಿಸಿದ್ದಾರೆ.

    ನಿನ್ನೆ ನಡೆದ ಕಲಾಪದಲ್ಲಿ ನಮ್ಮದೇ ಶಾಸಕರೊಬ್ಬರು ಆಡಿದ ಮಾತನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಮಹಿಳೆಯರ ವಿರುದ್ಧದ ಅಸಂವೇದನಾಶೀಲ ಹೇಳಿಕೆಗಳು ಲಿಂಗ ಸಮಾನತೆಯ ಮೌಲ್ಯಗಳಿಗೆ ವಿರುದ್ಧವಾದುದಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿರುವ ನನಗೆ ಕಾಂಗ್ರೆಸ್ ಶಾಸಕರೊಬ್ಬರು ಇಂತಹ ಮಾತುಗಳನ್ನು ಆಡಿದ್ದಕ್ಕೆ ಅತೀವ ಬೇಸರವಾಗಿದೆ. ಕರ್ನಾಟಕದ ಎಲ್ಲಾ ಮಹಿಳೆಯರು ಕ್ಷಮಿಸಿ ಬಿಡಿ. ಅಲ್ಲದೆ ಈ ರೀತಿಯ ಮಾತುಗಳು ಎಂದಿಗೂ ಪುನರಾವರ್ತನೆಯಾಗದಂತೆ ನಾನು ಖಚಿತಪಡಿಸುತ್ತೇನೆ ಎಂದು ಬರೆದು ಕೊಂಡಿದ್ದಾರೆ.

    ಗುರುವಾರ ವಿಧಾನಸಭೆಯಲ್ಲಿ ಮಾತನಾಡುತ್ತಾ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಆಗದಿದ್ರೆ ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಹೇಳಿಕೆ ನೀಡಿದ್ದರು. ರಮೇಶ್ ಕುಮಾರ್ ಈ ರೀತಿ ಹೇಳುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮಂದಿ ಸದಸ್ಯರು ಇದನ್ನು ತಮಾಷೆಯಾಗಿ ತೆಗೆದುಕೊಂಡಿದ್ದರು.

    ಇತ್ತ ಸದನದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತವಾಗುತ್ತಿದ್ದಂತೆಯೇ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜ್ಯದ ಜನರ ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸ್ಪೀಕರ್, ‘ಅತ್ಯಾಚಾರ’ ಸಂಬಂಧ ಅಧಿವೇಶನದಲ್ಲಿ ನೀಡಿರುವ ನನ್ನ ಹೇಳಿಕೆ ಕುರಿತು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸುವುದು ನನ್ನ ಉದ್ದೇವಾಗಿರಲಿಲ್ಲ. ಮಾತಿನ ಭರದಲ್ಲಿ ಆ ಮಾತು ಬಂದಿದೆ. ಇನ್ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

  • ರಮೇಶ್ ಕುಮಾರ್ ಮಹಿಳೆಯರ ಬಗ್ಗೆ ಅವಹೇಳನ ಮಾಡಬಾರದಾಗಿತ್ತು: ಜಗದೀಶ್ ಶೆಟ್ಟರ್

    ರಮೇಶ್ ಕುಮಾರ್ ಮಹಿಳೆಯರ ಬಗ್ಗೆ ಅವಹೇಳನ ಮಾಡಬಾರದಾಗಿತ್ತು: ಜಗದೀಶ್ ಶೆಟ್ಟರ್

    ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್ ಅಂತಹ ಹಿರಿಯರು ಮಹಿಳೆಯರ ಬಗ್ಗೆ ಅವಹೇಳನ ಮಾಡಬಾರದಾಗಿತ್ತು. ಅವರು ಯಾಕೆ ಆ ರೀತಿ ಹೇಳಿದರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡುವುದು ಸರಿ ಅಲ್ಲ. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು. ಇವತ್ತು ಕೇಳಿದ್ದಾರೆ. ಅವರೊಬ್ಬ ಒಳ್ಳೆ ರೀತಿಯ ಸಂಸದೀಯ ಪಟು, ಆದರೆ ನಡುವಳಿಕೆ ಇದಲ್ಲ. ಅವರು ಒಬ್ಬ ಸ್ಪೀಕರ್ ಆಗಿ ಕೆಲಸ ಮಾಡಿದವರು, ಮಾತನಾಡುವಾಗ ಬಹಳಷ್ಟು ಚಿಂತಿಸಿ ಮತನಾಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಕ್ರಿಸ್ತನಿಗೆ ಪರಿವರ್ತನೆಯಾದ್ರೆ ಸಿದ್ದರಾಮಯ್ಯಗೆ ಜಾಗ ಎಲ್ಲಿದೆ: ಸಿ.ಟಿ ರವಿ

    ಸದನದಲ್ಲಿ ಸರಿಯಾದ ಚರ್ಚೆ ನಡೆಯದೇ ಇರುವ ವಿಚಾರವಾಗಿ ಮಾತನಾಡಿದ ಅವರು, ಸದನದಲ್ಲಿ ನಾವು ಸರ್ಕಾರ ನಡೆಸುವುದಕ್ಕೆ ಉತ್ತರ ಕೊಡುವುದಕ್ಕೆ ಸಿದ್ಧರಾಗಿರುತ್ತೇವೆ. ಸ್ಪಷ್ಟವಾಗಿ ಅವರು ಯಾವುದನ್ನು ಮಂಡಿಸಬೇಕು ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಸದನದಲ್ಲಿ ಧರಣಿ ಮಾಡುವುದು, ಬಾಯ್ಕಾಟ್ ಮಾಡುವುದು, ಬೀದಿಲಿ ಪ್ರತಿಭಟನೆ ಮಾಡುವುದೆಲ್ಲಾ ರಾಜಕೀಯ ಗಿಮಿಕ್, ಈ ಭಾಗದ ಅಭಿವೃದ್ಧಿ ಬಗ್ಗೆ ಕಾಳಜಿ ಇದ್ದರೆ ಸರ್ಕಾರಕ್ಕೆ ಸಲಹೆ ನೀಡಿ, ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಆದರೆ ಅದಕ್ಕೆ ಯಾವುದೇ ಆಧಾರ ಇಲ್ಲ, ಸರಿಯಾಗಿ ಸದನ ನಡೆಯದೇ ಇಡುವುದಕ್ಕೆ ಕಾಂಗ್ರೆಸ್ಸಿಗರ ಅಸಹಕಾರ ಕಾರಣ ಆರೋಪಿಸಿದರು.

    ಮತಾಂತರ ಕಾಯ್ದೆ ವಿಚಾರವಾಗಿ ಮಾತನಾಡಿದ ಅವರು, ಸ್ವಯಂಪ್ರೇರಿತ ಮತಾಂತರಕ್ಕೆ ಯಾವುದೇ ನಿರ್ಬಂಧ ಇಲ್ಲ, ಆದರೆ ಬಲವಂತವಾಗಿ ಇವತ್ತು ಮತಾಂತರ ನಡೆಯುತ್ತಿದೆ, ಆಸೆ, ಆಮಿಷ ಒಡ್ಡಿ ಮತಾಂತರ ಮಾಡುವುದಕ್ಕೆ ನಮ್ಮ ತಡೆ ಇದೆ. ಯಾವುದೇ ಸಮುದಾಯ ಇರಲಿ ಮತಾಂತರ ನಿಷೇಧ ಕಾಯ್ದೆ ಕಾಂಗ್ರೆಸ್‍ಗೆ ಯಾಕೆ ಅನ್ವಯವಾಗುತ್ತದೆ. ಬಿಲ್ ನಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಮಾತ್ರ ಅಂತ ಇರುವುದಿಲ್ಲ, ನೀವು ತಪ್ಪು ಮಾಡದಿದ್ದರೆ ಹೆದರುವ ಪ್ರಶ್ನೆ ಇಲ್ಲ ಎಂದರು. ಇದನ್ನೂ ಓದಿ: ಸಾಕಾನೆಗಳಿಂದ ಉಪಟಳ – ಬಂಡೀಪುರಕ್ಕೆ 8 ಆನೆಗಳ ಸ್ಥಳಾಂತರ

    ಮಹಾದಾಯಿ ವಿಚಾರದಲ್ಲಿ ಕೆಲ ಕಾನೂನು ತೊಡಕಿದೆ, ಕೋರ್ಟ್‍ನಲ್ಲಿ ಕೇಸ್ ಪೆಂಡಿಂಗ್ ಇದೆ, ಸರ್ಕಾರದ ಹಂತದಲ್ಲಿ ಬಗೆಹರಿಸಬೇಕಾಗುತ್ತದೆ. ನ್ಯಾಯಾಲಯದಲ್ಲಿ ನಮಗೆ ಮಹದಾಯಿ ನೀರಿನ ಬಗ್ಗೆ ಹಕ್ಕಿದೆ ಎನ್ನುವ ತೀರ್ಪು ಬಂದಿದೆ. ನಮಗೆ ಬರಬೇಕಾದ ನೀರು ನಮಗೆ ಬರುವುದು ನಿಶ್ಚಿತ ಎಂದು ಹೇಳಿದರು.