Tag: Ramesh Pokhriyal

  • ಮಾಜಿ ಸಿಎಂ ಪುತ್ರಿಗೆ ವಂಚನೆ- 4 ಕೋಟಿ ಪಂಗನಾಮ ಹಾಕಿದ ಖದೀಮರು

    ಮಾಜಿ ಸಿಎಂ ಪುತ್ರಿಗೆ ವಂಚನೆ- 4 ಕೋಟಿ ಪಂಗನಾಮ ಹಾಕಿದ ಖದೀಮರು

    ತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ (Ramesh Pokhriyal Nishank) ಪುತ್ರಿ ಆರುಷಿ ನಿಶಾಂಕ್‌ಗೆ (Aarushi Nishank) ಮುಂಬೈ ಮೂಲದ ದಂಪತಿ 4 ಕೋಟಿ ರೂ. ಪಂಗನಾಮ ಹಾಕಿದ್ದಾರೆ. ನಟಿ ಆರುಷಿ ನಿಶಾಂಕ್ ಡೆಹ್ರಾಡೂನ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.‌ ಇದನ್ನೂ ಓದಿ:‘ಬಿಗ್ ಬಾಸ್‌’ನಲ್ಲಿ ಗೆದ್ದ 50 ಲಕ್ಷ ಏನಾಯ್ತು?- ಅಚ್ಚರಿಯ ಉತ್ತರ ಕೊಟ್ಟ ಹನುಮಂತ

    ಮುಂಬೈ ಮೂಲದ ಮಾನ್ಸಿ ಹಾಗೂ ವರುಣ್ ಬಾಂಗ್ಲಾ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ ಎಂದು ಆರುಷಿ ನಿಶಾಂಕ್ ಆರೋಪಿಸಿದ್ದಾರೆ. ತಮ್ಮ ನಿವಾಸಕ್ಕೆ ವರುಣ್ ದಂಪತಿ ಬಂದು ‘ಅಂಯೋಂ ಕಿ ಗುಸ್ತಾಖಿಯಾನ್’ ಚಿತ್ರದಲ್ಲಿ ಪಾತ್ರ ನೀಡೋದಾಗಿ ಹೇಳಿದ್ದರು. ಅದಕ್ಕಾಗಿ 5 ಕೋಟಿ ರೂ. ತಮಗೆ ಕೇಳಿದ್ದರು. ಚಿತ್ರ ರಿಲೀಸ್ ಆದ್ಮೇಲೆ ಬಂದ ಲಾಭದಲ್ಲಿ 20% ಸೇರಿ 15 ಕೋಟಿ ರೂ. ಕೊಡೋದಾಗಿ ಭರವಸೆ ನೀಡಿದ್ದರು. ಬಳಿಕ ತನ್ನಿಂದ ಸಿನಿಮಾಗೆ 4 ಕೋಟಿ ರೂ. ಹೂಡಿಕೆ ಮಾಡಿಸಿದ್ದರು. ಇದಕ್ಕೆ ಆರುಷಿ ಕೂಡ ಒಪ್ಪಿಕೊಂಡು 4 ಕಂತುಗಳಲ್ಲಿ 4 ಕೋಟಿ ರೂ. ನೀಡಿರೋದಾಗಿ ತಿಳಿಸಿದ್ದರು.

    ನನ್ನ ಸ್ಕ್ರೀಪ್ಟ್ ಅನ್ನು ತಾವೇ ಫೈನಲ್ ಮಾಡುವುದಕ್ಕೂ ಅವಕಾಶವಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಮೋಟ್ ಮಾಡಲು ಅವಕಾಶ ನೀಡುವುದಾಗಿ ಹೇಳಿದ್ದರು. ಇನ್ನೂ ಈ ವರ್ಷ ಫೆಬ್ರವರಿ 2ರಂದು ಭಾರತದಲ್ಲಿ ಆಗಬೇಕಾದ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಲಾಗಿದ್ದು, ಉಳಿದ ಭಾಗವನ್ನು ಯುರೋಪಿನಲ್ಲಿ ಚಿತ್ರೀಕರಿಸುವ ಪ್ಲ್ಯಾನ್ ಮಾಡಲಾಗಿದೆ. ಆದ್ರೆ ನನ್ನನ್ನು ಆಯ್ಕೆ ಮಾಡಿದ್ದ ಸ್ಥಾನದಲ್ಲಿ ಬೇರೆ ನಟಿಯನ್ನು ಆಯ್ಕೆ ಮಾಡಲಾಗಿದೆ ಎಂದು ನಟಿ ಆರೋಪಿಸಿದ್ದಾರೆ. ಪಾತ್ರವು ಇಲ್ಲ, ಇತ್ತ ತನ್ನ ಹಣ ಹಿಂದಿರುಗಿಸಿ ಕೊಡುವಂತೆ ಕೇಳಿದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಸದ್ಯ ನಟಿ ಆರುಷಿ ನಿಶಾಂಕ್ ದೂರಿನ ಮೇಲೆ ಮಾನ್ಸಿ ವರುಣ್ ದಂಪತಿ ಕೇಸ್ ದಾಖಲಿಸಿಕೊಂಡು ಡೆಹ್ರಾಡೂನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಹೊಸ ಶೈಕ್ಷಣಿಕ ಅವಧಿಗೆ ಪಠ್ಯಕ್ರಮ ಇಳಿಕೆ ಸಾಧ್ಯತೆ – ಸಲಹೆ ನೀಡುವಂತೆ ಸಚಿವ ರಮೇಶ್ ಪೊಖ್ರಿಯಾಲ್ ಮನವಿ

    ಹೊಸ ಶೈಕ್ಷಣಿಕ ಅವಧಿಗೆ ಪಠ್ಯಕ್ರಮ ಇಳಿಕೆ ಸಾಧ್ಯತೆ – ಸಲಹೆ ನೀಡುವಂತೆ ಸಚಿವ ರಮೇಶ್ ಪೊಖ್ರಿಯಾಲ್ ಮನವಿ

    ನವದೆಹಲಿ: 2020-2021ರ ಅವಧಿಯ ಹೊಸ ಶೈಕ್ಷಣಿಕ ವರ್ಷ ಆರಂಭಿಸುವ ಸಿದ್ಧತೆಯಲ್ಲಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಒಂದು ವರ್ಷದ ಅವಧಿಗೆ ಮೂರು ತಿಂಗಳ ಪಠ್ಯಕ್ರಮ ಇಳಿಕೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಸೂಕ್ತ ಸಲಹೆಗಳನ್ನು ನೀಡುವಂತೆ ಶಿಕ್ಷಕರಿಗೆ ಮನವಿ ಮಾಡಿದೆ.

    ದೇಶದ್ಯಾಂತ ಕೊರೊನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆ ಶಾಲೆಗಳನ್ನು ಪುನಾರಂಭಿಸಲು ಪೋಷಕರ ವಿರೋಧ ಕೇಳಿ ಬಂದಿತ್ತು. ಇದಕ್ಕಾಗಿ ಅಗಸ್ಟ್ ಬಳಿಕ ಶಾಲಾ ಕಾಲೇಜುಗಳು ಆರಂಭಿಸಲು ಸಿದ್ದತೆ ಮಾಡಿಕೊಳ್ಳುತ್ತಿರುವ ಕೇಂದ್ರ ಪಠ್ಯಕ್ರಮ ಇಳಿಕೆ ಮಾಡಲು ಚಿಂತಿಸಿದೆ.

    ಆಗಸ್ಟ್ ಬಳಿಕ ಶಾಲಾ ಕಾಲೇಜುಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಮೂರು ತಿಂಗಳು ಕಡಿಮೆ ಆಗಬಹುದು. ಇದರಿಂದ ಹೆಚ್ಚು ಪಠ್ಯಕ್ರಮ ಮಕ್ಕಳು ಮತ್ತು ಶಿಕ್ಷಕರ ಮೇಲೆ ಹೊರೆಯಾಗಬಹುದು. ಕೊರೊನಾ ದೃಷ್ಟಿಯಿಂದ ಮಕ್ಕಳು ಹೆಚ್ಚು ಶಾಲೆಯಲ್ಲಿ ಇರುವುದು ಒಳಿತಲ್ಲ. ಈ ಹಿನ್ನಲೆ ಪಠ್ಯಕ್ರಮ ಹಾಗೂ ಶಾಲಾ ಕಾಲೇಜು ಸಮಯದ ಇಳಿಕೆ ಬಗ್ಗೆ ಪೋಷಕರು ಮನವಿ ಮಾಡಿದ್ದಾರೆ.

    ಈ ಮನವಿಗೆ ಸ್ಪಂದಿಸಿರುವ ಸಚಿವ ರಮೇಶ ಪೋಖ್ರಿಯಾಲ್ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಫೇಸ್ ಬುಕ್, ಟ್ವಿಟರ್ ಖಾತೆಗೆ ಟ್ಯಾಗ್ ಅಥವಾ ಕಮೆಂಟ್ ಮೂಲಕ ಪಠ್ಯಕ್ರಮ ಇಳಿಕೆ ಮಾಡುವ ಬಗ್ಗೆ ಸಲಹೆ, ಅಭಿಪ್ರಾಯ ನೀಡುವಂತೆ ಶಿಕ್ಷಕರು, ಶಿಕ್ಷಣ ತಜ್ಞರಿಗೆ ಮನವಿ ಮಾಡಿದ್ದಾರೆ.

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಬರುವ ಸಲಹೆಗಳನ್ನು ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದ್ದು ಸಿಬಿಎಸ್‍ಸಿ ಪಠ್ಯಕ್ರಮದಲ್ಲಿ ಮೂರು ತಿಂಗಳಷ್ಟು ಪಠ್ಯವನ್ನು ಕಡಿತ ಮಾಡುವ ಎಲ್ಲ ಸಾಧ್ಯತೆಗಳಿವೆ. ಇನ್ನು ರಾಜ್ಯ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಲು ಸಾಧ್ಯತೆ ಇದೆ ಎನ್ನಲಾಗಿದೆ.

  • ಆಗಸ್ಟ್ ಬಳಿಕವಷ್ಟೇ ಶಾಲೆ ಕಾಲೇಜು ಪುನಾರಂಭ – ಸಚಿವ ರಮೇಶ್ ಪೋಖ್ರಿಯಾಲ್

    ಆಗಸ್ಟ್ ಬಳಿಕವಷ್ಟೇ ಶಾಲೆ ಕಾಲೇಜು ಪುನಾರಂಭ – ಸಚಿವ ರಮೇಶ್ ಪೋಖ್ರಿಯಾಲ್

    ನವದೆಹಲಿ: ಮಾರ್ಚ್ 16ರಿಂದ ದೇಶದ್ಯಾಂತ ಬಂದ್ ಆಗಿರುವ ಶಾಲೆ ಕಾಲೇಜುಗಳು ಆಗಸ್ಟ್ ಬಳಿಕವಷ್ಟೇ ಪುನಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

    ದೆಹಲಿಯಲ್ಲಿ ನಡೆದ ಖಾಸಗಿ ಸಂದರ್ಶನದಲ್ಲಿ ಮಾತನಾಡಿರುವ ಅವರು ಶಾಲೆ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಮಾತನಾಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಆಗಸ್ಟ್ ಬಳಿಕ ಶಾಲೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಶಿಕ್ಷಕರು ಇತರೆ ಸಿಬ್ಬಂದಿಗಳಿಂದ ಪ್ರತ್ಯೇಕ ಮೂರು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.

    ಲಾಕ್‍ಡೌನ್ ವಿನಾಯತಿ ಬಳಿಕ ದೇಶದಲ್ಲಿ ಶಾಲೆ ಕಾಲೇಜು ಪುನಾರಂಭಗೊಳ್ಳುವ ಮಾತುಗಳು ಕೇಳಿ ಬರುತ್ತಿದೆ. ಶಾಲೆ ಕಾಲೇಜುಗಳು ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳುತ್ತಿದ್ದು, ಜುಲೈನಿಂದ ಶಾಲೆ ಕಾಲೇಜುಗಳು ಶೇಕಡಾ 30% ಹಾಜರಾತಿಯೊಂದಿಗೆ ಬೆಳಗ್ಗೆ ಮತ್ತು ಸಂಜೆಯ ಕ್ಲಾಸ್‍ಗಳು ಆರಂಭವಾಗಲಿದೆ. ಅಲ್ಲದೇ ಹಸಿರು ಕಿತ್ತಳೆ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಶುರುವಾಗಲಿದೆ. ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಶಾಲೆ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಸದ್ಯ ಅನುಮತಿ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

    ಆದರೆ ಸಿಬಿಎಸ್‍ಸಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪಿಯುಸಿ ಹಾಗೂ ಡಿಪ್ಲೋಮಾ, ಪದವಿ ಪರೀಕ್ಷೆಗಳು ಬಾಕಿ ಉಳಿದುಕೊಂಡಿದ್ದು ಆಗಸ್ಟ್ ಅಂತ್ಯದ ವೇಳೆಗೆ ಪರೀಕ್ಷೆ ನಡೆಸಿ ಫಲಿತಾಂಶ ನೀಡುವ ಪ್ರಯತ್ನ ಮಾಡಲಿದ್ದೇವೆ. ಆಗಸ್ಟ್ ಬಳಿಕ ಪರಿಸ್ಥಿತಿ ಅನುಸರಿಸಿ ಶಾಲೆ ಕಾಲೇಜುಗಳನ್ನು ಆರಂಭಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

  • ಮಂಡ್ಯ ಕೇಂದ್ರೀಯ ವಿದ್ಯಾಲಯದ ಸಮಸ್ಯೆಗಳ ಕ್ರಮಕ್ಕೆ ಕೇಂದ್ರ ಸಚಿವರಿಗೆ ಸುಮಲತಾ ಮನವಿ

    ಮಂಡ್ಯ ಕೇಂದ್ರೀಯ ವಿದ್ಯಾಲಯದ ಸಮಸ್ಯೆಗಳ ಕ್ರಮಕ್ಕೆ ಕೇಂದ್ರ ಸಚಿವರಿಗೆ ಸುಮಲತಾ ಮನವಿ

    ನವದೆಹಲಿ: ಮಂಡ್ಯದ ಕೇಂದ್ರೀಯ ವಿದ್ಯಾಲಯದಲ್ಲಿರುವ ಸಮಸ್ಯೆಗಳಿಗೆ ತ್ವರಿತ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಅಂಬರೀಶ್ ಅವರು, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಸುಮಲತಾ ಅವರು, ಗುರುವಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನು ಭೇಟಿಯಾಗಿ ಮಂಡ್ಯ ಕೇಂದ್ರೀಯ ವಿದ್ಯಾಲಯದಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದಿರುವೆ. ಜೊತೆಗೆ ತ್ವರಿತವಾಗಿ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿರುವೆ. ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಸುಮಲತಾ ಅವರು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಮಂಡ್ಯದಲ್ಲಿನ ಹಲವು ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಅನುದಾನ ಕೊಡಿಸುವಂತೆ ಮನವಿ ಸಲ್ಲಿಸಿದ್ದರು. ಜೊತೆಗೆ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಬಗ್ಗೆ ಸುಮಲತಾ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿಕೊಂಡು, ದೇಶದ ಗೃಹ ಸಚಿವರೊಂದಿಗೆ ಕ್ಷೇತ್ರದ ಹಲವಾರು ಕೆಲಸಗಳಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದರು.

    ಮಂಡ್ಯ ಜಿಲ್ಲೆಯ ಕಡೆ ಮುಂಗಾರು ಕೈ ಕೊಟ್ಟಿದೆ. ಮಂಡ್ಯದ ರೈತರು ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಆದರೆ ಸರಿಯಾಗಿ ಮಳೆಯಾಗದ ಕಾರಣ ಕಾವೇರಿ ನದಿಯೂ ತುಂಬಿಲ್ಲ. ಇದರಿಂದ ರೈತರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ಸುಮಲತಾ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಜಿಲ್ಲೆಯ ಸಮಸ್ಯೆಯನ್ನು ಹೇಳಿಕೊಂಡಿದ್ದರು.

    ಇತ್ತೀಚೆಗಷ್ಟೆ ಸುಮಲತಾ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ದಿನನಿತ್ಯ ಮೈಸೂರು- ಮಂಡ್ಯ-ಬೆಂಗಳೂರು ನಡುವೆ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಹೆಚ್ಚಿನ ಮಹಿಳಾ ಬೋಗಿಗಳನ್ನು ಅಳವಡಿಸುವಂತೆ ಹಾಗೂ ಹೆಚ್ಚಿನ ಪೊಲೀಸ್ ಬಂದೋಬಸ್ತುಗಳನ್ನು ಒದಗಿಸುವಂತೆ ಮನವಿ ಮಾಡಿಕೊಂಡಿದ್ದರು.

    ಅಷ್ಟೇ ಅಲ್ಲದೇ ಮುಂಬೈ ಮಾದರಿಯಲ್ಲಿ ವಿಶೇಷ ಮಹಿಳಾ ರೈಲನ್ನು ಬೆಳಗ್ಗೆ ಮತ್ತು ಸಂಜೆ ಕೆಲಸಕ್ಕೆ ತೆರಳುವ ಮಹಿಳೆಯರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದರು. ಜೊತೆಗೆ ಕೆ.ಆರ್ ನಗರದಲ್ಲಿ ರೈಲ್ವೆ ಪೊಲೀಸ್ ಫೋರ್ಸ್ ಟ್ರೈನಿಂಗ್ ಸೆಂಟರನ್ನು ತೆರೆಯಲು ಮನವಿ ಮಾಡಿದ್ದರು.