Tag: Ramesha Bandisiddegowda

  • ಮುಡಾ ಹಗರಣಕ್ಕೆ ಅಧಿಕಾರಿ ಕಾರಣವೇ ಹೊರತು ಪ್ರಾಧಿಕಾರ ಸಮಿತಿಯಲ್ಲ – ರಮೇಶ ಬಂಡಿಸಿದ್ದೇಗೌಡ

    ಮುಡಾ ಹಗರಣಕ್ಕೆ ಅಧಿಕಾರಿ ಕಾರಣವೇ ಹೊರತು ಪ್ರಾಧಿಕಾರ ಸಮಿತಿಯಲ್ಲ – ರಮೇಶ ಬಂಡಿಸಿದ್ದೇಗೌಡ

    ಹಾಸನ: ಅಧಿಕಾರಿಗಳು 50:50 ನಿವೇಶನ ಕೊಡುವುದನ್ನು ಯಾವುದೇ ಕಾರಣಕ್ಕೂ ಸಭೆಗೆ ಮಂಡಿಸಲ್ಲ. ಅವರಿಗೆ ಆ ಅಧಿಕಾರವಿದೆ. ಮುಡಾ ಹಗರಣಕ್ಕೆ (MUDA Scam) ಅಧಿಕಾರಿಗಳು ಕಾರಣವೇ ಹೊರತು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಮಿತಿಯಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesha Bandisiddegowda) ಹೇಳಿದರು.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರು ನೇರ ಅರ್ಜಿದಾರರಲ್ಲ. ಸಿದ್ದರಾಮಯ್ಯ ಅವರ ಒಂದೇ ಒಂದು ಸಹಿ ಇಲ್ಲ. ಯಾರ ಗಮನಕ್ಕೂ ತರದೇ ಅಧಿಕಾರಿಗಳೇ ಇದನ್ನ ಮಾಡಿದ್ದಾರೆ. ಇದು ಮುಡಾ ಅಧ್ಯಕ್ಷರು ಮತ್ತು ಯಾವ ಸದಸ್ಯರ ಗಮನಕ್ಕೂ ಬರಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಸವಲತ್ತು ಪಡೆದಿರುವ ಎಲ್ಲರ ಹೆಸರು ಹೇಳಬೇಕು. ತನಿಖೆ ನಡೆಯುತ್ತಿದೆ ಸತ್ಯಾಂಶ ಹೊರಬರುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Fashion Tips| ಹೆಣ್ಣಿಗೆ ಸೀರೆ ಯಾಕೆ ಅಂದ?- ನಾರಿಮಣಿಯರ ಗಮನ ಸೆಳೆದ ಬನಾರಸ್ ಸೀರೆ

    ನಾನು ಒಬ್ಬ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ. ನಾನು ಮೂರು ಬಾರಿ ಶಾಸಕನಾಗಿ ಮುಡಾದಲ್ಲಿ ಕೆಲಸ ಮಾಡಿದ್ದೇನೆ. ಅರ್ಜಿ ಇಲ್ಲದೇನೆ ಹೇಗೆ ಮಂಜೂರಾತಿ ಮಾಡಲು ಆಗುತ್ತೆ? ಅರ್ಜಿ ಇಲ್ಲ ಎಂದು ನಾವೇನು ಹೇಳಿಲ್ಲ. ಮಂಜೂರಾತಿ ಮಾಡಿಕೊಡಿ ಎಂದು ಅರ್ಜಿ ಕೊಟ್ಟಿದ್ದಾರೆ. ತಪ್ಪು ಬರೆದಾಗ ವೈಟ್ನರ್ ಹಾಕೋದು ಸಹಜ. ನ್ಯಾಯಾಂಗ ತನಿಖೆಗೆ ಕೊಟ್ಟಿದ್ದೇವೆ ಪರಿಶೀಲನೆ ಮಾಡಲಿ ಎಂದು ತಿಳಿಸಿದರು. ಇದನ್ನೂ ಓದಿ: ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು – ಶರಣ ಪ್ರಕಾಶ್ ಪಾಟೀಲ್

    ಯಡಿಯೂರಪ್ಪ (BS Yediyurappa) ಅವರ ತಂಗಿ ಮಕ್ಕಳಿಗೆ ನಿವೇಶನಗಳನ್ನು ಕೊಟ್ಟಿಲ್ವಾ? 50:50 ಯಲ್ಲಿ ನಿವೇಶನ ತಗೊಂಡಿಲ್ವಾ? ಪ್ರಾಮಾಣಿಕರಾಗಿದ್ದರೆ ಅವರು ತಿಳಿಸಲಿ. ಜೆಡಿಎಸ್ ಶಾಸಕರು (JDS MLAs) 50:50 ಹಂಚಿಕೆ ಅಡಿಯಲ್ಲಿ ಎಷ್ಟು ನಿವೇಶನ ತೆಗೆದುಕೊಂಡಿದ್ದಾರೆ? 1800-2000 ಸೈಟ್‌ಗಳನ್ನು ವ್ಯವಸ್ಥಿತವಾಗಿ ತೆಗೆದುಕೊಂಡಿದ್ದಾರಲ್ಲಾ? ಅದು ಯಾರದ್ದು? ಇವರು, ಇವರ ತಮ್ಮನ ಮಕ್ಕಳು, ಅಕ್ಕನ ಮಕ್ಕಳು, ಚಿಕ್ಕಪ್ಪ, ದೊಡ್ಡಪ್ಪನ ಮಕ್ಕಳಿಗೆ ಕೊಟ್ಟಿಲ್ವಾ? ಎಂದು ಕಿಡಿಕಾರಿದರು.

    ಸಿಎಂ, ಡಿಸಿಎಂ ದೆಹಲಿ ಭೇಟಿಯ ವಿಚಾರ ತಿಳಿಸಿದ ಅವರು, ಎಲ್ಲಾ ಶಾಸಕರು ದೆಹಲಿಗೆ ಹೋಗಿಲ್ಲ. ಸಿಎಂ ಮತ್ತು ಡಿಸಿಎಂ ಅವರು ರಾಜ್ಯದ ಇವತ್ತಿನ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡಲು ದೆಹಲಿಗೆ ಹೋಗಿದ್ದಾರೆ. ಅವರನ್ನು ದೆಹಲಿಗೆ ಹೋಗುವುದಕ್ಕೆ ಎಲ್ಲಾ ಶಾಸಕರು ಒತ್ತಾಯ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಂಬಂಧಿಕನಿಂದಲೇ 10ರ ಬಾಲಕಿ ಮೇಲೆ ಅತ್ಯಾಚಾರ – ಅರೆಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ; ಕಾಮುಕ ಅರೆಸ್ಟ್

    ರಾಷ್ಟ್ರಪತಿ ಅವರನ್ನು ಭೇಟಿ ಮಾಡೋಣ ಎಂದಿದ್ದೇವೆ. ಬಿಜೆಪಿ-ಜೆಡಿಎಸ್ ನವರು ಗದಾಪ್ರಹಾರ ಮಾಡುತ್ತಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಮನದಟ್ಟು ಮಾಡಿಕೊಡೋಣ ಎಂದು ಹೇಳಿದ್ದೇವೆ. ಆದಷ್ಟು ಬೇಗ ಎಲ್ಲಾ ಶಾಸಕರು ಹೋಗಿ ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು.

  • ಪ್ರಜಾಪ್ರಭುತ್ವ ಚುನಾಯಿತ ಸರ್ಕಾರ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    ಪ್ರಜಾಪ್ರಭುತ್ವ ಚುನಾಯಿತ ಸರ್ಕಾರ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    – ಸೋಮವಾರದಿಂದ ಪ್ರತಿದಿನ ರಾಜ್ಯಪಾಲರ ವಿರುದ್ಧ ಕಪ್ಪು ದಿನ ಆಚರಣೆ

    ಮಂಡ್ಯ: ಪ್ರಜಾಪ್ರಭುತ್ವ ಚುನಾಯಿತ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ. ಏನು ಕಳ್ಳತನ ಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್ (Prosecution)  ಕೊಟ್ಟಿದ್ದಾರೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesha Bandisiddegowda) ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ವಿಚಾರವನ್ನು ವಿರೋಧಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾನು ಒಬ್ಬ ಮುಡಾ ಸದಸ್ಯನಾಗಿದ್ದೇನೆ. ಯಾರ ಕಾಲದಲ್ಲಿ 50:50 ಅಡಿ ಸೈಟ್ ಕೊಟ್ಟಿರೋದು? ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್ ಕೊಡಬಾರದಿತ್ತು. ಹಾಗಿದ್ರೆ ಮೊದಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ಬಾಮಿ ಮೇಲೆ ಪ್ರಾಷಿಕ್ಯೂಷನ್ ಕೊಡಬೇಕು. ಬಿಜೆಪಿಯವರು ಸ್ವತಂತ್ರ ಹರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೆಚ್‌ಡಿಕೆ, ನಿರಾಣಿ ಮೇಲೆ ಪ್ರಾಸಿಕ್ಯೂಷನ್ ಕೇಳಿದ್ದಾರೆ. ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದಲೇ ರೇಪ್ – ಆಸ್ಪತ್ರೆಗೆ ದಾಖಲಾದ 20 ದಿನಗಳ ಬಳಿಕ ಸಾವು

    ಇಂದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ಸಿದ್ದರಾಮಯ್ಯರ ಪರ 135 ಶಾಸಕರಿದ್ದೇವೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಕೆಳಗಿಳಿಯಲು ಬಿಡಲ್ಲ. ಕಳಂಕರಹಿತ ಸಿಎಂ ಮೇಲೆ ಆಪಾದನೆ ಮಾಡುತ್ತಿರೋದು ಸರಿಯಲ್ಲ. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಸೋಮವಾರದಿಂದ ಪ್ರತಿದಿನ ರಾಜ್ಯಪಾಲರ ವಿರುದ್ಧ ಕಪ್ಪು ದಿನ ಆಚರಣೆ ಮಾಡುತ್ತೇವೆ ಎಂದು ಹರಿಹಾಯ್ದರು. ಇದನ್ನೂ ಓದಿ: ಇದು ದೊಡ್ಡ ಷಡ್ಯಂತ್ರ.. ಕಾನೂನಿನಡಿ ಹೋರಾಟ ಮಾಡ್ತೀನಿ: ಸಿಎಂ ಸಿದ್ದರಾಮಯ್ಯ