Tag: rameshbabu bandisiddegowda

  • ನಿಯಮ ಉಲ್ಲಂಘಿಸಿ ರಮೇಶ್ ಬಾಬು ಬಂಡಿಸಿದ್ದೇಗೌಡ್ರಿಂದ ಸಂಭ್ರಮಾಚರಣೆ

    ನಿಯಮ ಉಲ್ಲಂಘಿಸಿ ರಮೇಶ್ ಬಾಬು ಬಂಡಿಸಿದ್ದೇಗೌಡ್ರಿಂದ ಸಂಭ್ರಮಾಚರಣೆ

    ಮಂಡ್ಯ: ಷರತ್ತು ಬದ್ಧ ಜಾಮೀನು ಪಡೆದ ಬಳಿಕ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಬೆಂಬಲಿಗರೊಂದಿಗೆ ಗುಂಪು ಕಟ್ಟಿಕೊಂಡು ಸಂಭ್ರಮಾಚರಣೆ ಮಾಡುವ ಮೂಲಕ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾಮಗಾರಿಗೆ ಅಡ್ಡಿ ಪಡಿಸಿ, ಜೆಸಿಬಿ ಚಾಲಕನ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಶ್ರೀರಂಗಪಟ್ಟಣದ ಜೆಎಂಎಫ್‍ಸಿ ಕೋರ್ಟಿನ ನ್ಯಾಯಾಧೀಶರ ಮುಂದೆ ನಿಲ್ಲಿಸಿದ್ರು.

    ನಂತರ ನ್ಯಾಯಾಧೀಶರು ರಮೇಶ್ ಬಾಬು ಬಂಡಿಸಿದ್ದೇಗೌಡ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದ್ದರು. ಬಳಿಕ ಹೊರಗೆ ಬಂದ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಗುಂಪು ಕಟ್ಟಿಕೊಂಡು ಸಂಭ್ರಮಾಚರಣೆ ನಡೆಸಿದ್ರು. ಈ ವೇಳೆ ಯಾರು ಕೂಡ ಮಾಸ್ಕ್ ಧರಿಸಿರಲಿಲ್ಲ ಅಲ್ಲದೇ ಸಾಮಾಜಿಕ ಅಂತರವು ಇರಲಿಲ್ಲ. ಕೊರೊನಾ ಅಟ್ಟಹಾಸದ ನಡುವೆ ಈ ರೀತಿಯ ವರ್ತನೆ ವಿಪರ್ಯಾಸದ ಸಂಗತಿಯಾಗಿದೆ.

  • ಕಾಲಭೈರವನ ಸನ್ನಿಧಿಯಲ್ಲಿ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

    ಕಾಲಭೈರವನ ಸನ್ನಿಧಿಯಲ್ಲಿ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

    ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಂತರ ಇದೀಗ ಜೆಡಿಎಸ್ ಬಂಡಾಯ ಶಾಸಕರಾದ ಚಲುವರಾಯಸ್ವಾಮಿ, ರಮೇಶ್‍ಬಾಬು ಬಂಡಿಸಿದ್ದೇಗೌಡ ಹಾಗೂ ಬಾಲಕೃಷ್ಣ ಆದಿಚುಂಚನಗಿರಿ ಕಾಲಭೈರವೇಶ್ವರ ಕ್ಷೇತ್ರಾದಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

    ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಆಗಮಿಸಿರುವ ಜೆಡಿಎಸ್ ಬಂಡಾಯ ಶಾಸಕರು, ಮೊದಲು ಹೋಮದಲ್ಲಿ ಪಾಲ್ಗೊಂಡ್ರು. ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿಗಳೇ ಮುಂದೆ ನಿಂತು ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕ ರೇವಣ್ಣ ದಂಪತಿ ಆಗಮಿಸಿ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ರು.

    ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಸತತ ಮೂರು ಅಮವಾಸ್ಯೆ ಪೂಜೆ ಸಲ್ಲಿಸಿದ್ರೆ ಇಷ್ಟಾರ್ಥ ಸಿದ್ಧಿ ಆಗುತ್ತೆ ಎಂಬ ಪ್ರಬಲವಾದ ನಂಬಿಕೆಯಿದೆ. ಹೀಗಾಗಿ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಮೂವರು ಪ್ರತ್ಯೇಕವಾಗಿ ಪತ್ನಿ ಸಮೇತರಾಗಿ ಆಗಮಿಸಿ ಮೂರು ಅಮವಾಸ್ಯೆ ಪೂಜೆ ನೆರವೇರಿಸಿದ್ರು. ರಾಜ್ಯದ ಜನರಿಗೆ ಒಳಿತಾಗಲಿ, ಜೆಡಿಎಸ್ ಅಧಿಕಾರಕ್ಕೆ ಬರಲಿ ಎಂದು ಕಾಲಭೈರವೇಶ್ವರ ಸ್ವಾಮಿಯಲ್ಲಿ ಕೇಳಿಕೊಂಡಿದ್ರು. ಇದೀಗ ಬಂಡಾಯ ಶಾಸಕರು ತಮ್ಮ ಪತ್ನಿ ಸಮೇತರಾಗಿ ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

    ಈ ಹಿಂದೆ ನಾನು ಜೆಡಿಎಸ್ ಪಕ್ಷಕ್ಕೆ, ವರಿಷ್ಠರಿಗೆ ಅನ್ಯಾಯ ಮಾಡಿಲ್ಲ. ಈ ಬಗ್ಗೆ ಮುಂದೊಂದು ದಿನ ಕಾಲಭೈರವೇಶ್ವರ ಸನ್ನಿಧಿಯಲ್ಲಿ ಪ್ರಮಾಣ ಕೂಡ ಮಾಡುತ್ತೇನೆ ಎಂದು ಚಲುವರಾಯಸ್ವಾಮಿ ಹೇಳಿದ್ರು. ಹೀಗಾಗಿ ಪೂಜೆ ನಂತ್ರ ಚಲುವರಾಯಸ್ವಾಮಿ ಪ್ರಮಾಣ ಮಾಡುತ್ತಾರಾ ಎಂಬ ಕುತೂಹಲವೂ ಮೂಡಿದ್ದು, ಬಂಡಾಯ ಶಾಸಕರ ಪೂಜೆ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.