Tag: Ramlalla Prana Pratistha

  • ದೇಶ ಗುಲಾಮಗಿರಿಯಿಂದ ಮುಕ್ತವಾಗಿದೆ, ಸಾವಿರಾರು ವರ್ಷಗಳ ನಂತರವೂ ಈ ಕ್ಷಣ ನೆನಪಿಸಿಕೊಳ್ತಾರೆ: ಮೋದಿ

    ದೇಶ ಗುಲಾಮಗಿರಿಯಿಂದ ಮುಕ್ತವಾಗಿದೆ, ಸಾವಿರಾರು ವರ್ಷಗಳ ನಂತರವೂ ಈ ಕ್ಷಣ ನೆನಪಿಸಿಕೊಳ್ತಾರೆ: ಮೋದಿ

    – ಮಂದಿರ ವಿಳಂಬಕ್ಕೆ ಶ್ರೀರಾಮನಿಗೆ ಕ್ಷಮೆ ಕೋರಿದ ಪ್ರಧಾನಿ

    ಅಯೋಧ್ಯೆ (ಉತ್ತರಪ್ರದೇಶ): ಇಡೀ ದೇಶ ಈಗ ಗುಲಾಮಗಿರಿಯಿಂದ ಮುಕ್ತವಾಗಿದೆ. ಸಾವಿರಾರು ವರ್ಷಗಳ ನಂತರವೂ ಈ ದಿನವನ್ನು ಮತ್ತು ಈ ಕ್ಷಣವನ್ನು ಜನರು ನೆನಪಿಸಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ.

    ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಬೃಹತ್‌ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ದೇಗುಲ ಪ್ರವೇಶಿಸಲು ಅನುಮತಿ ನಿರಾಕರಣೆ – ನಾನೇನು ಅಪರಾಧ ಮಾಡಿದ್ದೇನೆ: ರಾಗಾ ಪ್ರಶ್ನೆ

    ಶತಮಾನಗಳ ಕಾಯುವಿಕೆಯ ನಂತರ ಭವಾನ್‌ ಶ್ರೀರಾಮ (Sri Ram) ತನ್ನ ಮೂಲ ನಿವಾಸಕ್ಕೆ ಬಂದಿದ್ದಾನೆ. ಅಭೂತಪೂರ್ವ ತಾಳ್ಮೆ, ಲೆಕ್ಕವಿಲ್ಲದಷ್ಟು ತ್ಯಾಗ, ತಪಸ್ಸುಗಳ ನಂತರ ನಮ್ಮ ಪ್ರಭುರಾಮ ಬಂದಿದ್ದಾನೆ. ಇನ್ಮುಂದೆ ನಮ್ಮ ರಾಮ ಟೆಂಟ್‌ನಲ್ಲಿ ಉಳಿಯುವುದಿಲ್ಲ ಭವ್ಯವಾದ ದೇವಾಲಯದಲ್ಲಿ ಉಳಿಯುತ್ತಾರೆ. ಜನವರಿ 22ರ ದಿನ ಕೇವಲ ದಿನಾಂಕವಲ್ಲ, ಹೊಸ ಯುಗದ ಆರಂಭ. ಈ ರಾಮಮಂದಿರ ನಿರ್ಮಾಣವು ಜನರಲ್ಲಿ ಹೊಸ ಶಕ್ತಿ ತರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಉದಯವಾಗಿದೆ: ನರೇಂದ್ರ  ಮೋದಿ

    ದೇಶವು ಈಗ ಗುಲಾಮಗಿರಿಯಿಂದ ಮುಕ್ತವಾಗಿದ್ದು, ಸಾವಿರಾರು ವರ್ಷಗಳ ನಂತರವೂ ಈ ದಿನ ಮತ್ತು ಈ ಕ್ಷಣವನ್ನು ದೇಶದ ಜನ ನೆನಪಿಸಿಕೊಳ್ಳುತ್ತಾರೆ. ಏಕೆಂದರೆ ಭಗವಾನ್‌ ಶ್ರೀರಾಮ ಎಲ್ಲ ಭಾರತೀಯರ ಅಂತರಂಗದಲ್ಲಿ ನೆಲೆಸಿದ್ದಾರೆ. ಈ ಕ್ಷಣಕ್ಕಾಗಿ ಇಡೀ ದೇಶವೇ ಇಂದು ದೀಪಾವಳಿ ಆಚರಿಸಲಿದೆ ಎಂದು ಶ್ಲಾಘಿಸಿದ್ದಾರೆ.

    ಶ್ರೀರಾಮನಿಗೆ ಕ್ಷಮೆ ಕೋರಿದ ಮೋದಿ:
    ರಾಮಮಂದಿರ ವಿಳಂಬಕ್ಕಾಗಿ ನಾನು ಭಗವಾನ್‌ ಶ್ರೀರಾಮನಿಗೆ ಕ್ಷಮೆಯಾಚಿಸುತ್ತೇನೆ. ಇಂದು ಈ ಆತಂಕ ದೂರವಾಗಿದೆ. ಇದರಿಂದ ಭಗವಾನ್‌ ರಾಮ ನಮ್ಮನ್ನು ಕ್ಷಮಿಸುತ್ತಾನೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದರು. ಇದೇ ವೇಳೆ ಐತಿಹಾಸಿಕ ತೀರ್ಪು ನೀಡುವ ಮೂಲಕ ರಾಮಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂ ಕೋರ್ಟ್‌ಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

    ಪ್ರಾಣಪ್ರತಿಷ್ಠೆ ಸಂಪನ್ನ:
    ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ದೇವಾಲಯ ಆವರಣದಲ್ಲಿ ಸರಿಸುಮಾರು 8 ಸಾವಿರ ಅತಿಥಿಗಳು ನೆರೆದಿದ್ದರು. ಇದನ್ನೂ ಓದಿ: ಮಂದಸ್ಮಿತ, ಮುಗ್ಧಮುಖದ ಬಾಲರಾಮನ ಕಣ್ತುಂಬಿಕೊಂಡು ಪುನೀತರಾದ ರಾಮಭಕ್ತರು 

  • ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ – ರಾಜ್ಯದ ನಾಯಕರಲ್ಲಿ ಹರ್ಷೋದ್ಘಾರ

    ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ – ರಾಜ್ಯದ ನಾಯಕರಲ್ಲಿ ಹರ್ಷೋದ್ಘಾರ

    – ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾದ ಪುಣ್ಯ ನನ್ನದಾಯಿತು – ಹೆಚ್‌ಡಿಕೆ ಭಾವುಕ

    ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿದ್ದು, ರಾಜ್ಯದ ನಾಯಕರೂ ಸಂತಸಗೊಂಡಿದ್ದಾರೆ.

    ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ `ವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ (Ramlalla Prana Pratistha) ನೆರವೇರಿಸಲಾಯಿತು. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ (Narendra Modi) ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ನಾಯಕರು ಶುಭ ಸಂದೇಶವನ್ನು ಹಂಚಿಕೊಂಡಿದ್ದಾರೆ.

    ಹೆಚ್‌.ಡಿ ಕುಮಾರಸ್ವಾಮಿ:
    ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ ಪುಣ್ಯ ನನ್ನದಾಯಿತು. ಈ ದೈವ ಕಾರ್ಯದಲ್ಲಿ ಪೂಜ್ಯ ತಂದೆ-ತಾಯಿ ಅವರೊಂದಿಗೆ ಭಾಗವಹಿಸಿದ್ದು ನನಗೆ ಧನ್ಯತೆಯ ಅನುಭೂತಿ ನೀಡಿದೆ. ನಿಖಿಲ್‌ ಕುಮಾರಸ್ವಾಮಿ ಅವರು ಸಹ ಈ ದಿವ್ಯಕ್ಷಣಕ್ಕೆ ಸಾಕ್ಷಿಯಾದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

    ಬಿ.ವೈ ವಿಜಯೇಂದ್ರ:
    ಕೋಟ್ಯಂತರ ಭಾರತೀಯರ ಆರಾಧ್ಯದೈವ ಪ್ರಭು ಶ್ರೀರಾಮಚಂದ್ರರ ಪ್ರಾಣಪ್ರತಿಷ್ಠಾಪನೆ ನೆರವೇರಿತು. ಪವಿತ್ರ ರಾಮಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನ ಕೃಪೆ ದೇಶದ ಮೇಲಿರಲಿ. ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು, ಮೋಹನ್‌ ಭಾಗವತ್‌, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಸೇರಿದಂತೆ ಸಹಸ್ರಾರು ಸಾಧುಸಂತರ ಸಮಕ್ಷಮದಲ್ಲಿ ಬಾಲರಾಮನ ಪ್ರತಿಷ್ಠಾಪನೆಯ ವಿಧಿವಿಧಾನಗಳು ಯಶಸ್ವಿಯಾಗಿ ನೆರವೇರಿವೆ. ರಾಮಜ್ಯೋತಿ ಬೆಳಗಲಿ, ರಾಮ ನಾಮ ಮೊಳಗಲಿ, ರಾಮರಾಜ್ಯ ನಿರ್ಮಾಣವಾಗಲಿ, ಜೈ ಶ್ರೀರಾಮ್‌

    ಬಿ.ಎಸ್‌ ಯಡಿಯೂರಪ್ಪ:
    ಭಾರತೀಯರ ಆರಾಧ್ಯದೈವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರ ಮತ್ತೆ ಅಯೋಧ್ಯೆಯ ರಾಮ ಜನ್ಮಭೂಮಿಯ ಪವಿತ್ರ ಸನ್ನಿಧಾನದಲ್ಲಿ, ಭವ್ಯ ಶ್ರೀರಾಮ ಮಂದಿರದಲ್ಲಿ ವಿರಾಜಮಾನನಾಗಿದ್ದಾನೆ. ಕೋಟ್ಯಂತರ ಭಕ್ತರ ಶತ ಶತಮಾನಗಳ ತಪಸ್ಸು ಇಂದು ಸಾಕಾರಗೊಂಡಿದೆ. ಈ ಕ್ಷಣದ ಸಾರ್ಥಕ ಅನುಭೂತಿಯನ್ನು ಶಬ್ದಗಳಲ್ಲಿ ವರ್ಣಿಸಲಾಗದು. ಪ್ರಭು ಶ್ರೀರಾಮಲಲಾನ ಅನುಗ್ರಹ ಎಲ್ಲ ಭಕ್ತರ ಮೇಲೆ, ಭಾರತದೇಶದ ಮೇಲೆ ನಿರಂತರವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.

    ಆರ್‌.ಅಶೋಕ:
    ಬಾಲರಾಮನ ಪ್ರಾಣ ಪ್ರತಿಷ್ಠಾಪನೆ, ಭಾರತದ ಆತ್ಮ ಪ್ರತಿಷ್ಠೆಯ ಪುನಃಸ್ಥಾಪನೆ. ಅಯೋಧ್ಯೆಗೆ ಪ್ರಭು ಶ್ರೀರಾಮನ ಪುನರಾಗಮನ, ಸನಾತನ ಹಿಂದೂ ಧರ್ಮದ ಪುನರುತ್ಥಾನ. ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಮೋದಿ ಸಾಷ್ಟಾಂಗ ನಮಸ್ಕಾರ

    ಬಿಜೆಪಿ ಕರ್ನಾಟಕ:
    ರಾಮನ ಪಾದದ ಮೇಲಾಣೆ, ಮಂದಿರವಲ್ಲೇ ಕಟ್ಟುವೆವು ಎಂದಿದ್ದೆವು. ಅಸಂಖ್ಯ ರಾಮಭಕ್ತರ ಶತಮಾನಗಳ ಕನಸು ನನಸಾಗಿದೆ, ಮಂದಿರವಲ್ಲೇ ಕಟ್ಟಿದೆವು.  ಇದನ್ನೂ ಓದಿ: ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು: ಅಯೋಧ್ಯೆಯಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ ಮಾತು