Tag: ramnath kovind

  • ನಿರ್ಗಮಿತ ರಾಷ್ಟ್ರಪತಿಗೆ ಮುಫ್ತಿ ಅಪಮಾನ- ಖರ್ಗೆಗೆ ಆಸನ ನಿಗದಿಯಲ್ಲಿ ಶಿಷ್ಟಾಚಾರ ಉಲ್ಲಂಘನೆ

    ನಿರ್ಗಮಿತ ರಾಷ್ಟ್ರಪತಿಗೆ ಮುಫ್ತಿ ಅಪಮಾನ- ಖರ್ಗೆಗೆ ಆಸನ ನಿಗದಿಯಲ್ಲಿ ಶಿಷ್ಟಾಚಾರ ಉಲ್ಲಂಘನೆ

    ನವದೆಹಲಿ: ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಎಲ್ಲೆಡೆಯಿಂದ ಗೌರವಯುತ ಬೀಳ್ಕೊಡುಗೆ ಸಿಗುತ್ತಿದೆ. ಆದರೆ ಈ ವಿಚಾರದಲ್ಲಿಯೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಕೋವಿಂದ್‍ರನ್ನು ಅಪಮಾನಿಸುವ ರೀತಿ ಟ್ವೀಟ್ ಮಾಡಿದ್ದಾರೆ.

    ನಿರ್ಗಮಿತ ರಾಷ್ಟ್ರಪತಿಗಳು, ದೇಶದ ಸಂವಿಧಾನಕ್ಕೆ ಅನೇಕ ಬಾರಿ ವಿರುದ್ಧವಾಗಿ ನಡೆದುಕೊಳ್ಳುವ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ ಎಂದು ಬರೆದುಕೊಂಡಿದ್ದಾರೆ. ತಮ್ಮ ವಾದವನ್ನು ಸಮರ್ಥನೆ ಮಾಡಿಕೊಳ್ಳಲು ಆರ್ಟಿಕಲ್ 370 ರದ್ದು, ಸಿಎಎ, ಅಲ್ಪಸಂಖ್ಯಾತರು ಮತ್ತು ದಲಿತರನ್ನು ನಿರ್ಲಜ್ಜವಾಗಿ ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ. ಬಿಜೆಪಿಯ ಅಜೆಂಡಾಗಳನ್ನು ಈಡೇರಿಸಲು ಕೋವಿಂದ್ ಅವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಜುಲೈ 25ರಂದೇ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಯಾಕೆ?

    ಇತ್ತ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪದಗ್ರಹಣ ಕಾರ್ಯಕ್ರಮಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಅವರ ಸ್ಥಾನಮಾನಕ್ಕೆ ಅನುಗುಣವಾಗಿ ಆಸನ ವ್ಯವಸ್ಥೆ ಮಾಡದೇ ಅಪಮಾನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರೊಟೋಕಾಲ್ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯಸಭೆ ಚೇರ್ಮನ್‍ಗೆ ಪತ್ರ ಬರೆದಿದೆ. ಈ ಕಾರ್ಯಕ್ರಮಕ್ಕೆ ಬಿಹಾರ ಸಿಎಂ ನಿತೀಶ್ ಗೈರಾಗಿರುವುದು ಸಹ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಬಿಜೆಪಿಯಿಂದ ಆಹ್ವಾನ ಇದ್ದರೂ, ಕಳೆದ ಒಂದು ವಾರದಲ್ಲಿ ನಿತೀಶ್ ಕುಮಾರ್ ಗೈರಾಗುತ್ತಿರುವ ಮೂರನೇ ಕಾರ್ಯಕ್ರಮ ಇದು. ಎನ್‍ಡಿಎಯಿಂದ ನಿತೀಶ್ ದೂರ ಸರಿಯುತ್ತಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

    Live Tv
    [brid partner=56869869 player=32851 video=960834 autoplay=true]

  • ಸಂಸತ್‍ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಬೀಳ್ಕೊಡುಗೆ

    ಸಂಸತ್‍ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಬೀಳ್ಕೊಡುಗೆ

    ನವದೆಹಲಿ: ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭವು ಇಂದು ಸಂಸತ್ತಿನಲ್ಲಿ ನಡೆದಿದೆ. ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೋವಿಂದ್ ಅವರು, ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಬಳಿಕ ಸುದೀರ್ಘ ಭಾಷಣ ಮಾಡಿದ ಅವರು, 5 ವರ್ಷಗಳ ಹಿಂದೆ ಇದೇ ವೇದಿಕೆಯಲ್ಲಿ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದೆ. ಇದೀಗ ಹಲವು ಸ್ಮರಣೀಯ ನೆನೆಪುಗಳನ್ನು ಹೊತ್ತು ವಿದಾಯ ಹೇಳುತ್ತಿದ್ದೇನೆ. ಎಲ್ಲ ಸಂಸದರಿಗೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದರು.

    ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಭಾರತ ಶಕ್ತವಾಗಿ ಹೋರಾಟ ಮಾಡಿದ್ದು, ಕಡಿಮೆ ಸಮಯದಲ್ಲಿ 200 ಕೋಟಿ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕಡಿಮೆ ಅವಧಿಯಲ್ಲಿ ಲಸಿಕೆ ಅಭಿವೃದ್ಧಿ ಪಡಿಸಿ, ಸೋಂಕು ನಿಯಂತ್ರಿಸಿದ್ದೇವೆ. ಇದರಿಂದ ಭವಿಷ್ಯದಲ್ಲಿ ಎದುರಾಗಲು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಾರ್ಗಸೂಚಿಯನ್ನು ನಿರ್ಮಿಸಲಾಗಿದೆ. ಇದು ಅಭಿನಂದನೆಗೆ ಅರ್ಹ. ಕಷ್ಟದ ಸಮಯದಲ್ಲಿ, ಭಾರತದ ಪ್ರಯತ್ನಗಳನ್ನು ಪ್ರಪಂಚದಾದ್ಯಂತ ಶ್ಲಾಘಿಸಲಾಗಿದೆ ಎಂದು ಕೋವಿಂದ್ ತಿಳಿಸಿದರು. ಇದನ್ನೂ ಓದಿ: ಯಾವುದಕ್ಕೆ ಎಷ್ಟು ಲಂಚ ಕೊಡ್ಬೇಕೆಂದು ರೇಟ್ ಫಿಕ್ಸ್ ಮಾಡಿ ಬೋರ್ಡ್ ಹಾಕಿ: ಡಿಕೆಶಿ ಕ್ಲಾಸ್

    ಶುದ್ಧ ಕುಡಿಯುವ ನೀರು ಹಾಗೂ ಪ್ರತಿ ಮನೆಗೆ ಶೌಚಾಲಯ ಸೌಲಭ್ಯವನ್ನೂ ಕೇಂದ್ರ ಸರ್ಕಾರ ಒದಗಿಸುತ್ತಿದೆ. ಉಡಾನ್ ಯೋಜನೆಯಡಿಯಲ್ಲಿ ವಿಮಾನ ನಿಲ್ದಾಣ, ವಿಮಾನ ಪ್ರಯಾಣವನ್ನು ದೇಶದ ಮೂಲೆ ಮೂಲೆಗೂ ವಿಸ್ತರಿಸಲಾಗಿದೆ. ದೇಶದ ಪ್ರತಿಯೊಬ್ಬ ಮಗುವಿಗೆ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಸರ್ಕಾರದ್ದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರಾಷ್ಟ್ಪೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ ಎಂದರು.

    ಇದೇ ವೇಳೆ ರಾಷ್ಟ್ರಪತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ದ್ರೌಪದಿ ಮುರ್ಮುಗೆ ಕೋವಿಂದ್ ಅಭಿನಂದನೆ ಸಲ್ಲಿಸಿದರು.‌ ಅಲ್ಲದೆ ದ್ರೌಪದಿಯವರ ಮಾರ್ಗದರ್ಶನದಿಂದ ದೇಶಕ್ಕೆ ಪ್ರಯೋಜನವಾಗಲಿದೆ ಎಂದು ಶುಭ ಹಾರೈಸಿದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಾಗೆಯೇ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಜನಪ್ರತಿನಿಧಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ ಕೋವಿಂದ್ ಧನ್ಯವಾದ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ – ಮೊದಲ ದಿನವೇ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ – ಮೊದಲ ದಿನವೇ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ ಕಣ ರಂಗೇರಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಸಂಖ್ಯಾಬಲದ ಜಟಾಪಟಿ ನಡೆಯುತ್ತಿದೆ. ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ.

    ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿಯಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಮುಗಿಯಲಿದ್ದು, ಆ ಸ್ಥಾನಕ್ಕೆ ಚುನಾವಣೆಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ. ನಾಮನಿರ್ದೇಶನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜೂನ್ 29ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಚುನಾವಣೆಯ ಭದ್ರತಾ ಠೇವಣಿ 15 ಸಾವಿರ ರೂ. ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ಅಭ್ಯರ್ಥಿಯು ಮತದಾರರಾಗಿ ನೋಂದಾಯಿಸಿಕೊಂಡಿರುವ ಪಟ್ಟಿಯಲ್ಲಿ ತನ್ನ ಹೆಸರನ್ನು ತೋರಿಸುವ ನಮೂನೆಯ ಪ್ರಮಾಣೀಕೃತ ಪ್ರತಿಯನ್ನು ಲಗತ್ತಿಸದ ಕಾರಣ ಒಬ್ಬ ಅಭ್ಯರ್ಥಿಯ ನಾಮನಿರ್ದೇಶನವನ್ನು ತಿರಸ್ಕರಿಸಲಾಗಿದೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ತಮಿಳುನಾಡಿನ ಕೆ.ಪದ್ಮರಾಜನ್ ಮೊದಲು ನಾಮಪತ್ರ ಸಲ್ಲಿಸಿದ್ದಾರೆ. ಆ ನಂತರ ಎ.ಮಣಿಥನ್, ದೆಹಲಿಯಿಂದ ಜೀವನ್ ಕುಮಾರ್ ಮಿತ್ತಲ್, ದಯಾ ಶಂಕರ್ ಅಗರ್ವಾಲ್, ಓಂಪ್ರಕಾಶ್ ಖರಬಂದ, ಮಹಾರಾಷ್ಟ್ರದ ಮೊಹಮ್ಮದ್ ಎ.ಹಮಿದ್ ಪಟೇಲ್, ನಾಮಕ್ಕಲ್‌ನಿಂದ ಟಿ. ರಮೇಶ್, ಬಿಹಾರದಿಂದ ಶ್ಯಾಮ್ ನಂದನ್ ಪ್ರಸಾದ್, ಲಾಲೂ ಪ್ರಸಾದ್ ಯಾದವ್ ಹಾಗೂ ಆಂಧ್ರಪ್ರದೇಶದಿಂದ ಮಂದತಿ ತಿರುಪತಿ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.

    ರಾಷ್ಟ್ರಪತಿ ಚುನಾವಣೆಗೆ NCP ನಾಯಕ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಉದ್ದೇಶಿಸಲಾಗಿತ್ತು. ಕಾಂಗ್ರೆಸ್, ಜೆಡಿಎಸ್, ಟಿಎಂಸಿ, ಆರ್‌ಜೆಡಿ ಸೇರಿದಂತೆ ಮೊದಲಾದ ಪಕ್ಷಗಳೂ ಇದಕ್ಕೆ ಬೆಂಬಲ ಸೂಚಿಸಿದ್ದವು. ಇದಕ್ಕಾಗಿ ನಿನ್ನೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಮಾರು 18 ರಾಜಕೀಯ ಪಕ್ಷದ ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ತಾವು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಪವಾರ್ ಸ್ಪಷ್ಟಪಡಿಸಿದ್ದಾರೆ.

    Live Tv

  • ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

    ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

    ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಆಡಳಿತಾರೂಢ ಹಾಗೂ ಪ್ರತಿ ಪಕ್ಷಗಳೂ ಪ್ರಭಾವಿ ನಾಯಕರನ್ನು ಕಣಕ್ಕಿಳಿಸಲು ಮಾತುಕತೆ ನಡೆಸಿವೆ.

    ಈ ನಡುವೆ ಎನ್‌ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿವೆ. ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಬೆಂಬಲ ನೀಡಿದ್ದು, ಪವಾರ್ ಅವರನ್ನೇ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಮುಂದಾಗಿವೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಯಸಿರುವ ವಿಪಕ್ಷಗಳು, ಈ ಕುರಿತು ಹಲವು ಸುತ್ತಿನ ಸರಣಿ ಸಭೆಗಳನ್ನು ನಡೆಸುತ್ತಿವೆ. ಶರದ್ ಪವಾರ್ ಅವರನ್ನೇ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಈ ಕುರಿತು ಖುದ್ದು ಶರದ್ ಪವಾರ್ ಅವರಾಗಲಿ, ಎನ್‌ಸಿಪಿ ಪಕ್ಷವಾಗಲಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

    ಆದಾಗ್ಯೂ, ರಾಷ್ಟ್ರಪತಿ ಚುನಾವಣೆಗೆ ಶರದ್ ಪವಾರ್ ಅವರು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಲಿರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

    ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಪವಾರ್ ಅವರನ್ನು ಭೇಟಿ ಮಾಡಿ, ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸುವ ಬಗ್ಗೆ ಚರ್ಚಿಸಿರುವುದಾಗಿಯೂ ಖರ್ಗೆ ಸ್ಪಷ್ಟಪಡಿಸಿದ್ದರು.

    ಇದೀಗ ಶರದ್ ಪವಾರ್ ಅವರೇ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್, ಶಿವಸೇನೆ, ಟಿಎಂಸಿ, ಡಿಎಂಕೆ ಪಕ್ಷಗಳು ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ತಮ್ಮ ಸಹಮತವನ್ನು ತೋರಲಿವೆ ಎನ್ನಲಾಗಿದೆ. ಆಮ್ ಆದ್ಮಿ ಪಕ್ಷವೂ ಪವಾರ್ ಅವರನ್ನು ಬೆಂಬಲಿಸುವುದರಲ್ಲಿ ಅಚ್ಚರಿ ಏನೂ ಇಲ್ಲವೆಂದು ಹೇಳಲಾಗುತ್ತಿದೆ.

  • ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

    ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

    ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಪಗ್ರತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.

    ಏಕಾಂಗಿಯಾಗಿ 7 ಸುರಂಗಗಳನ್ನು ಕೊರೆದು ಕೃಷಿ ಭೂಮಿಗೆ ನೀರು ಹರಿಸಿದ ಮಹಾಲಿಂಗ ನಾಯ್ಕ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇಧಿಗ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡರು. ಈ ವೇಳೆ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿರುವುದು ಎಲ್ಲರ ಗಮನ ಸೆಳೆದಿದೆ.

    ಮಹಾಲಿಂಗ ನಾಯ್ಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. 27 ವರ್ಷದ ಮಹಾಲಿಂಗ ನಾಯ್ಕ ಅವರು ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‍ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಸುರಂಗ ನೀರಿನ ವ್ಯವಸ್ಥೆಯ ಮೊರೆ ಹೋದರು. ಹೀಗೆ ವಿದ್ಯುತ್ ರಹಿತವಾಗಿ ಗುರುತ್ವದ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಮನೆ ಮಾತಾದರು.

    6 ಸುರಂಗ ಕೊರೆದರೂ ಮಹಾಲಿಂಗ ನಾಯ್ಕ ಅವರಿಗೆ ನೀರು ಸಿಕ್ಕಿರಲಿಲ್ಲ. ಆದರೂ ತನ್ನ ಪ್ರಯತ್ನ ಬಿಡದ ಅವರು 7 ಸುರಂಗ ಕೊರೆದೇ ಬಿಟ್ಟರು. ಈ ವೇಳೆ ಅವರ ಪ್ರಯತ್ನ ಯಶಸ್ಸು ದೊರಕಿತ್ತು. ಇದೀಗ ಇವರ ಈ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದನ್ನೂ ಓದಿ: ಸುರಂಗ ಕೊರೆದು ನೀರು ಹರಿಸಿದ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ

    ಇವರ ಜೊತೆಗೆ ಧಾರವಾಡ ಜಿಲ್ಲೆ ಅಣ್ಣಿಗೇರಿಯ ಅಬ್ದುಲ್ ಖಾದರ್ ನಡಕಟ್ಟಿನ, ಶಿವಮೊಗ್ಗದ ಹೆಚ್. ಆರ್ ಕೇಶವಮೂರ್ತಿ, ಮಾಜಿ ಮುಖ್ಯಮಂತ್ರಿ ದಿ. ಕಲ್ಯಾಣ್ ಸಿಂಗ್, ಭಾರತ್ ಬಯೋಟೆಕ್‍ನ ಕೃಷ್ಣ ಎಲ್ಲಾ ದಂಪತಿ, , ನಟಿ ಸಾಹುಕಾರ್ ಜಾನಕಿ, ಗಾಯಕ ಸೋನು ನಿಗಂ, ಒಲಿಂಪಿಕ್ ವಿಜೇತ ಕ್ರೀಡಾಪಟು ನೀರಜ್ ಚೋಪ್ರಾ ಸೇರಿದಂತೆ ಒಟ್ಟು 74 ಗಣ್ಯರಿಗೆ ಪದ್ಮ ಪ್ರದಾನ ಮಾಡಲಾಯಿತು.

  • ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

    ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

    ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ.

    ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ.

    ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ 3.30 ರಿಂದ 4.30ರವರೆಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

    ಅ.08 ರ ಬೆಳಗ್ಗೆ 11.50ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿಗಳ ಪ್ರವಾಸ ಪಟ್ಟಿಯನ್ನು ರಾಷ್ಟ್ರಪತಿಗಳ ಆಪ್ತ ಕಾರ್ಯದರ್ಶಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಾನಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದವಳು ನೆರೆ ಮನೆಯವನೊಂದಿಗೆ ಎಸ್ಕೇಪ್- ವೀಡಿಯೋ ಮಾಡಿ ಪತಿ ಆತ್ಮಹತ್ಯೆ

    ಕಳೆದ ಎರಡು ದಿನಗಳ ಹಿಂದೆ ರಾಷ್ಟ್ರಪತಿ ಭವನದ ಸೂಚನೆ ಮೇರೆಗೆ ಚಾಮರಾಜನಗರದ ಎಡಿಸಿ ಕಾತ್ಯಾಯಿನಿ ದೇವಿ ನೇತೃತ್ವದಲ್ಲಿ ಬಿಳಿಗಿರಿರಂಗನ ಬೆಟ್ಟ ಹಾಗೂ ಚಾಮರಾಜನಗರದ ಯಡಪುರ ಬಳಿ ಜಾಗ ಗುರುತಿಸಿದ್ದಾರೆ.

    ಚಾಮರಾಜನಗರ ಹೊರ ವಲಯದಲ್ಲಿರುವ ಯಡಬೆಟ್ಟದ ಮೆಡಿಕಲ್ ಕಾಲೇಜಿನ ಬಳಿ ಸುಮಾರು 163 ಕೋಟಿ ರೂ.ವೆಚ್ಚದಲ್ಲಿ 450 ಬೆಡ್ ಸೌಲಭ್ಯವುಳ್ಳ ಆಸ್ಪತ್ರೆ ನಿರ್ಮಾಣಗೊಂಡಿದ್ದು ಉದ್ಘಾಟನೆಗಾಗಿ ಕಾಯುತ್ತಿದೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!

  • ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಎನ್.ವಿ ರಮಣ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

    ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಎನ್.ವಿ ರಮಣ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

    ನವದೆಹಲಿ: ಭಾರತದ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರಾಗಿ ಹಿರಿಯ ನ್ಯಾಯಾಧೀಶರಾದ ಎನ್.ವಿ ರಮಣ ಅವರನ್ನು ಆಯ್ಕೆ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

    ಈ ಮೂಲಕ ಎನ್.ವಿ ರಮಣ ಅವರು 48ನೇ ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಏಪ್ರಿಲ್ 24 ರಂದು ಅಧಿಕಾರ ಸ್ವೀಕರಿಸಲಿದ್ದು, ಇವರಿಗೆ 2022ರ ಆಗಸ್ಟ್ 26ವರೆಗೆ ಸೇವಾವಧಿ ಇರಲಿದೆ.

    ಕಳೆದ ತಿಂಗಳು ಹಾಲಿ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರು ಮುಂದಿನ ನ್ಯಾಯಮೂರ್ತಿಯಾಗಿ ಎನ್.ವಿ ರಮಣ ಅವರನ್ನು ಶಿಫಾರಸು ಮಾಡಿದ್ದರು. ಇದರಂತೆ ಇದೀಗ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ರಮಣ ಅವರನ್ನು ಆಯ್ಕೆ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಅಂಕಿತವನ್ನು ಹಾಕಿ ನೇಮಕ ಮಾಡಿಕೊಂಡಿದ್ದಾರೆ.

    ಏಪ್ರಿಲ್ 23ರಂದು ಹಾಲಿ ಮುಖ್ಯ ನ್ಯಾಯಾಧೀಶರಾದ ಎಸ್.ಎ ಬೋಬ್ಡೆ ಅವರು ನಿವೃತ್ತಿಯಾಗುತ್ತಿದ್ದಾರೆ. ಬಳಿಕ ಏಪ್ರಿಲ್ 24ರಂದು ರಮಣ ಅವರು ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

    1957 ಆಗಸ್ಟ್ 27ರಂದು ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ, ಪೊನ್ನವರಂನಲ್ಲಿ ಜನಿಸಿದ ರಮಣ ಅವರು, 1983 ಫೆಬ್ರವರಿ 10 ರಂದು ವಕೀಲರಾಗಿ ಸೇವೆ ಆರಂಭಿಸಿದರು. ನಂತರ 2000ರ ಜೂನ್ ನಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್‍ಗೆ ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ಬಳಿಕ 2013 ರಲ್ಲಿ ರಮಣ ಅವರು ದೆಹಲಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡು ಸೇವೆ ಸಲ್ಲಿಸಿದ್ದರು. ನಂತರ 2014ರ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಅವರನ್ನು ಉನ್ನತೀಕರಿಸಲಾಯಿತು.

    ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಪೈಕಿ ಅತಿ ಹೆಚ್ಚು ಸೇವಾ ಹಿರಿತನ ಹೊಂದಿರುವವರನ್ನು ಸಿಜೆಐ ಆಗಿ ನೇಮಕ ಮಾಡುವುದು ಸಂಪ್ರದಾಯ. ಹಾಲಿ ಸಿಜೆಐ ಎಸ್‍ಎ ಬೋಬ್ಡೆ ಬಳಿಕ ನ್ಯಾ. ಎನ್.ವಿ ರಮಣ ಅವರೇ ಸುಪ್ರೀಂಕೋರ್ಟ್‍ನಲ್ಲಿ ಅತಿ ಹಿರಿಯ ನ್ಯಾಯಮೂರ್ತಿ ಎನಿಸಿದ್ದಾರೆ. ಹಾಗಾಗಿ ನ್ಯಾ.ರಮಣ ಅವರನ್ನು ಮುಂದಿನ ಸಿಜೆಐ ಆಗಿ ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೋಬ್ಡೆ ಅವರು ಶಿಫಾರಸು ಮಾಡಿದ್ದರು.

  • ಹೆಲಿಕಾಪ್ಟರ್ ಲೋನ್‍ಗಾಗಿ ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ

    ಹೆಲಿಕಾಪ್ಟರ್ ಲೋನ್‍ಗಾಗಿ ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ

    ಭೋಪಾಲ್: ಮಹಿಳೆಯೊಬ್ಬರು ತನಗೆ ಹೆಲಿಕಾಪ್ಟರ್ ಖರೀದಿಗಾಗಿ ಲೋನ್ ಮತ್ತು ಅದರಲ್ಲಿ ಹಾರಾಟ ನಡೆಸಲು ಪರವಾನಿಗೆ ನೀಡಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಬಸಂತಿ ಬಾಯಿ ಲೋಹರ್ ಅವರು ಮಾಂಡ್ಸೌರ್ ಜಿಲ್ಲೆ, ಅಗರ್ ಗ್ರಾಮದಲ್ಲಿ ವಾಸಿಸುತ್ತಿದ್ದು. ಕಳೆದ ಕೆಲದಿನಗಳ ಹಿಂದೆ ತಮ್ಮ ಮಕ್ಕಳು ಬಸಂತಿ ಬಾಯಿ ಲೋಹರ್ ಅವರು ಜಮೀನಿಗೆ ಹೋಗುವ ರಸ್ತೆಯನ್ನು ಬಂದ್ ಮಾಡಿದ್ದಾರೆ. ಹಾಗಾಗಿ ರಾಷ್ಟ್ರಪತಿಗೆ ಪತ್ರ ಬರೆದು ಹೆಲಿಕಾಪ್ಟರ್ ಖರೀದಿಸಿ ಜಮೀನಿಗೆ ಹೋಗುವ ಉಪಾಯ ಮಾಡಿದ್ದಾರೆ.

    ಬಸಂತಿ ಬಾಯಿ ಲೋಹರ್ ಪತ್ರವನ್ನು ಹಿಂದಿಯಲ್ಲಿ ಬರೆದಿದ್ದು, ನನ್ನ ಮಕ್ಕಳಾದ ಲವ ಮತ್ತು ಕುಶ ಹಾಗೂ ಸ್ಥಳೀಯ ನಿವಾಸಿ ಪರಮಾನಂದ್ ಪಾಟಿದಾರ್ ಸೇರಿಕೊಂಡು ದಿನನಿತ್ಯ ನಾನೂ ಸಂಚರಿಸುವ ಜಮೀನಿನ ದಾರಿಯನ್ನು ಮುಚ್ಚಿದ್ದಾರೆ. ಹಾಗಾಗಿ ಜಮೀನಿಗೆ ಯಾವುದೇ ವಸ್ತುಗಳು ಮತ್ತು ದನಕರುಗಳನ್ನು ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಮುಕ್ತಿ ಹೊಂದಲು ಹೆಲಿಕಾಪ್ಟರ್ ಖರೀದಿಗೆ ಸಾಲ ಕೊಡುವಂತೆ ರಾಷ್ಟ್ರಪತಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ಜಮೀನಿನ ದಾರಿಯ ತಕರಾರನ್ನು ಸರಿಪಡಿಸುವಂತೆ ಮತ್ತೊಂದು ಪತ್ರ ಬರೆದಿರುವ ಬಸಂತಿ. ಈ ಪತ್ರವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರದು ಸಮಸ್ಯೆ ಬಗೆಹರಿಸುವಂತೆ ಕೇಳಿಕೊಂಡಿದ್ದಾರೆ.

    ಮಾಂಡ್ಸೌರ್ ಜಿಲ್ಲೆಯ ಸ್ಥಳೀಯಾಡಳಿತ ಪತ್ರದ ಕುರಿತು ತನಿಖೆ ನಡೆಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಪತ್ರ ವೈರಲ್ ಆಗುತ್ತಿದ್ದಂತೆ ಈ ಕುರಿತು ಕಂದಾಯ ಇಲಾಖೆ ಗಮನಹರಿಸಿದ್ದು ಜಿಲ್ಲಾ ತಾಹಶೀಲ್ದಾರ್ ಬಸಂತಿ ಅವರ ಮನೆಗೆ ತೆರಳಿ ಸ್ಥಳ ಪರಿಶೀಲಿಸಿದ್ದಾರೆ. ಆದರೆ ಅಲ್ಲಿ ಯಾವುದೇ ರೀತಿಯ ಸಮಸ್ಯೆ ಇರಲಿಲ್ಲ ಎಂದು ಜಿಲ್ಲಾಧಿಕಾರಿ ಮನೋಜ್ ಪುಷ್ಪ್ ತಿಳಿಸಿದ್ದಾರೆ.

  • ರಾಷ್ಟ್ರಪತಿಗಳಿಂದ ನಾಳೆ ತಲಕಾವೇರಿಯಲ್ಲಿ ಪೂಜೆ- ಮಂಜಿನ ನಗರಿ ಸಜ್ಜು

    ರಾಷ್ಟ್ರಪತಿಗಳಿಂದ ನಾಳೆ ತಲಕಾವೇರಿಯಲ್ಲಿ ಪೂಜೆ- ಮಂಜಿನ ನಗರಿ ಸಜ್ಜು

    – ಜನರಲ್ ತಿಮ್ಮಯ್ಯರ ಸನ್ನಿಸೈಡ್ ಮ್ಯೂಸಿಯಂ ಉದ್ಘಾಟಿಸಲಿರುವ ಕೋವಿಂದ್

    ಮಡಿಕೇರಿ: ಸೇನೆಯ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂ ಉದ್ಘಾಟನೆಗೆ ಮಡಿಕೇರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಸ್ವಕುಟುಂಬ ಸಮೇತರಾಗಿ ನಾಳೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

    ಈಗಾಗಲೇ ತಲಕಾವೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದು, ತಲಕಾವೇರಿಯ ಹೆಬ್ಬಾಗಿಲಿನಲ್ಲೇ ಸೇನೆ ಬಿಡಾರಗಳನ್ನು ಹಾಕಿ ಹೈ ಅಲರ್ಟ್ ಆಗಿದೆ. ತಲಕಾವೇರಿಯ ಎಲ್ಲಡೆ ರೆಡ್ ಕಾರ್ಪೆಟ್ ಹಾಕಿ ಸಿದ್ಧಗೊಳಿಸಲಾಗಿದೆ. ಬಾಗಮಂಡಲ ಸಮೀಪದ ಚೆಟ್ಟಿಮಾನಿಯಲ್ಲಿ ಸಿದ್ಧಗೊಂಡಿರುವ ಹೆಲಿಪ್ಯಾಡ್ ನಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ರಾಮನಾಥ್ ಕೋವಿಂದ್ ಅವರು ಇಳಿಯಲಿದ್ದಾರೆ. ಬಳಿಕ ಕಾರಿನ ಮೂಲಕ ತಲಕಾವೇರಿಗೆ ತೆರಳಿಲಿದ್ದು, 12:30ರ ವರೆಗೆ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಿದ್ದಾರೆ.

    ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಬಾಗಮಂಡಲದಿಂದ ತಲಕಾವೇರಿಯವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಪೊಲೀಸ್, ಸೇನಾಧಿಕಾರಿಗಳು, ಅಗ್ನಿಶಾಮಕ ದಳ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ರೂಟ್ ಮಾರ್ಚ್ ಮಾಡಿ ಪೂರ್ವ ತಯಾರಿ ನಡೆಸಿದ್ದಾರೆ.

    ಸೇನೆಯ ಅತ್ಯುನ್ನತ್ತ ಹುದ್ದೆಯನ್ನು ಅಲಂಕರಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತ್ತಿಸಿಕೊಂಡಿದ್ದ ಕೊಡಗಿನ ಕೆ.ಎಸ್.ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂ ಅನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಳೆ ಉದ್ಘಾಟಿಸಲಿದ್ದಾರೆ. ಮ್ಯೂಸಿಯಂ ಈಗಾಗಲೇ ಸಂಪೂರ್ಣ ಸಿದ್ಧಗೊಂಡಿದೆ. ಯುದ್ಧಟ್ಯಾಂಕರ್, ಸೂಪರ್ ಸಾನಿಕ್ ಯುದ್ಧವಿಮಾನ ಮುಂತಾದವುಗಳನ್ನು ಅಂತಿಮವಾಗಿ ಸಿದ್ಧಗೊಳಿಸಲಾಗುತ್ತಿದೆ.

    ಇಡೀ ಮ್ಯೂಸಿಯಂ ಸಿಂಗಾರಗೊಂಡಿದ್ದು, ವೈಮಾನಿಕ ದೃಶ್ಯವನ್ನು ನೀವೂ ಕಣ್ತುಂಬಿಕೊಳ್ಳಬಹುದು. ಯುದ್ಧ ಸ್ಮಾರಕ ಮತ್ತು ಮ್ಯೂಸಿಯಂ ಒಳಗೆ ಹಾಗೂ ಹೊರಗೆ ಸಂಪೂರ್ಣ ಸೈನಿಕರು ಮತ್ತು ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮ್ಯೂಸಿಯಂ ಒಳಗೆ ಈಗಾಗಲೇ ಡಾಗ್ ಸ್ಕ್ವಾಡ್ ಕೂಡ ಪರಿಶೀಲನೆ ನಡೆಸಿದ್ದು, ಮ್ಯೂಸಿಯಂ ಮತ್ತು ಯುದ್ಧ ಸ್ಮಾರಕ ಸೇರಿದಂತೆ ಎಲ್ಲೆಡೆ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ. ಸಂಪೂರ್ಣ ಪೊಲೀಸ್ ಮತ್ತು ಸೈನಿಕರ ಹಿಡಿತದಲ್ಲಿದೆ.

    ನಾಳೆ ಮಧ್ಯಾಹ್ನ ಒಂದು ಗಂಟೆಗೆ ಮಡಿಕೇರಿಯ ಎಫ್‍ಎಂಸಿ ಕಾಲೇಜು ಮೈದಾನದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ಗೆ ಬರಲಿರುವ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಲ್ಲಿಂದ ಆರ್ಮಿ ಕ್ಯಾಂಟೀನ್, ಎಲ್‍ಐಸಿ ರಸ್ತೆ ರಾಜಾಸೀಟ್ ರಸ್ತೆ ಮತ್ತು ಈಸ್ಟ್ ಎಂಡ್ ಹೊಟೇಲ್ ರಸ್ತೆ ಮೂಲಕ ಸುದರ್ಶನ್ ಗೆಸ್ಟ್ ಹೌಸ್ ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಿಮ್ಮಯ್ಯ ಮ್ಯೂಸಿಯಂಗೆ ಆಗಮಿಸಲಿರುವ ರಾಮನಾಥ್ ಕೋವಿಂದ್, 45 ನಿಮಿಷಗಳ ಕಾಲ ಮ್ಯೂಸಿಯಂನಲ್ಲೇ ಇರಲಿದ್ದಾರೆ. ಬಳಿಕ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.

  • ಇಂದು ಸೇನಾ ದಿನವನ್ನಾಗಿ ಯಾಕೆ ಆಚರಿಸಲಾಗುತ್ತಿದೆ..?- ಇದರ ಮಹತ್ವವೇನು..?

    ಇಂದು ಸೇನಾ ದಿನವನ್ನಾಗಿ ಯಾಕೆ ಆಚರಿಸಲಾಗುತ್ತಿದೆ..?- ಇದರ ಮಹತ್ವವೇನು..?

    ನವದೆಹಲಿ: ಇಂದು ಭಾರತೀಯ ಸೇನಾ ದಿನದ ಅಂಗವಾಗಿ ಸೈನಿಕರಿಗಾಗಿ ವಿಶೇಷ ಮ್ಯಾರಥಾನ್ ಆಯೋಜಿಸುವ ಮೂಲಕ ನಮ್ಮ ದೇಶದ ವೀರ ಪುತ್ರರಿಗೆ ಗೌರವ ಸಲ್ಲಿಸಲಾಗಿದೆ.

    ಭಾರತವು ಇಂದು 73ನೇ ವರ್ಷದ ಸೇನಾ ದಿನವನ್ನು ಆಚರಿಸುತ್ತಿದೆ. ಸೈನಿಕರು ದೇಶಕ್ಕಾಗಿ ಮಾಡುವ ನಿಸ್ವಾರ್ಥ ಸೇವೆಯ ಭಾಗವಾಗಿ ಪ್ರತಿ ವರ್ಷ ಅವರಿಗೆ ಗೌರವ ಸಲ್ಲಿಸುವ ಕೆಲಸ ಎಲ್ಲಾ ಆರ್ಮಿ ಕಮಾಂಡ್ ಪ್ರಧಾನ ಕಚೇರಿಗಳಲ್ಲಿ ಆಯೋಜಿಸಲಾಗುತ್ತದೆ. ಈ ವರ್ಷ ಕೂಡ ಸಂಪ್ರದಾಯ ಮುಂದುವರಿದಿದೆ.

    1949 ರಂದು ಭಾರತ, ಬ್ರಿಟಿಷ್ ಕಮಾಂಡರ್‍ಗಳಿಂದ ಅಧಿಕಾರ ವಹಿಸಿಕೊಂಡಾಗ ಆ ದಿನವನ್ನು ಭಾರತ ವಿಜಯ ದಿನವಾಗಿ ಆಚರಿಸಲಾಯಿತು. ಈ ಸಂಪ್ರದಾಯ ಹೀಗೆ ಮುಂದುವರರಿದಿದ್ದು ಪ್ರತಿ ವರ್ಷ ಸೇನಾ ದಿನದಂದು ಬೇರೆ ಬೇರೆ ವಿಷಯವನ್ನು ಆರಿಸಿಕೊಂಡು ಈ ದಿನವನ್ನು ಸ್ಮರಣೀಯವಾಗಿ ಆಚರಿಸಲಾಗುತ್ತಿದೆ. ಕಳೆದ ವರ್ಷ ಸೈನ್ಯ ದಿನವನ್ನು ‘ರಕ್ಷಣಾ ಡಿಜಿಟಲ್ ಪರಿವರ್ತನೆ’ ದಿನವಾಗಿ ಆಚರಿಸಲಾಗಿತ್ತು. ಈ ಬಾರಿ 1971 ರಲ್ಲಿ ಪಾಕಿಸ್ತಾನ ವಿರುದ್ಧ ಹೋರಾಡಿ ವಿಜಯಗಳಿಸಿದ ಸ್ವಾರ್ನಿಮ್ ವಿಜಯ್ ವರ್ಷದ ಸವಿನೆನಪಿಗಾಗಿ ವಿಜಯ್ ರನ್ ಎಂಬ ಮ್ಯಾರಥಾನ್ ಆಯೋಜಿಸಲಾಗಿದೆ.

    ಪ್ರತಿ ವರ್ಷ ಸೇನಾ ದಿನದಂದು ಧೈರ್ಯಶಾಲಿ ವೀರ ಸೈನಿಕರಿಗಾಗಿ ದೇಶಾದ್ಯಂತ ಗೌರವ ಸೂಚಿಸಲಾಗಿತ್ತದೆ. ಈ ಬಾರಿಯು ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ದೇಶದ ರಾಷ್ಟ್ರಪತಿ ರಮಾನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಶುಭಾಶಯಗಳನ್ನು ಹೆಮ್ಮಯೆ ವೀರ ಯೋಧರಿಗೆ ಸಲ್ಲಿಸಿದ್ದಾರೆ.

    ಜನವರಿ 15 ಅನ್ನು ಪ್ರತಿ ವರ್ಷ ಭಾರತೀಯ ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಏಕೆಂದರೆ 1949ರಲ್ಲಿ ಈ ದಿನದಂದು ಭಾರತವು ದೇಶದ ಮೊದಲ ಸೇನಾ ಮುಖ್ಯಸ್ಥರನ್ನು ಪೆಡೆದ ದಿನವಾಗಿದೆ. ಭಾರತ ದೇಶವು ಮೊದಲ ಚೀಫ್ ಇನ್ ಕಮಾಂಡರ್ ಲೆಫ್ಟೆನೆಂಟ್ ಜನರಲ್ ಕೆ.ಎಂ.ಕರಿಯಪ್ಪ, ಭಾರತದ ಕೊನೆಯ ಬ್ರಿಟಿಷ್ ಕಮಾಂಡರ್ ಚೀಫ್ ಇನ್ ಜನರಲ್ ಸರ್ ಫ್ರಾನ್ಸಿಸ್ ಬುತ್ಚೆರ್ ಅವರಿಂದ ಅಧಿಕಾರ ವಹಿಸಿಕೊಂಡ ದಿನವಾಗಿದೆ. ಆ ದಿನ ಭಾರತ ವಿಜಯ ದಿನವಾಗಿ ಆಚರಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ಭಾರತೀಯ ಸೇನಾ ದಿನವನ್ನು ಪ್ರತಿವರ್ಷ ಸಂಭ್ರಮದಿಂದ ಆಚರಿಸಿ ಸೈನಿಕರಿಗೆ ಗೌರವ ಸೂಚಿಸಲಾಗುತ್ತಿದೆ.