Tag: Ramya Raghupathi

  • ರಮ್ಯಾ ರಘುಪತಿಗೆ ಕೋರ್ಟ್ ಶಾಕ್: ನಟ ನರೇಶ್ ಪ್ರತಿಕ್ರಿಯೆ ಏನು?

    ರಮ್ಯಾ ರಘುಪತಿಗೆ ಕೋರ್ಟ್ ಶಾಕ್: ನಟ ನರೇಶ್ ಪ್ರತಿಕ್ರಿಯೆ ಏನು?

    ಟ ನರೇಶ್ ಮತ್ತು ಪವಿತ್ರಾ ಲೋಕೇಶ್ ನಟನೆಯ ‘ಮತ್ತೆ ಮದುವೆ’ ಚಿತ್ರದ ಬಗ್ಗೆ ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಆ ಸಿನಿಮಾದಲ್ಲಿ ತಮ್ಮ ಮಾನಹಾನಿ ಮಾಡುವಂತಹ ಅಂಶಗಳು ಇವೆ. ಹಾಗಾಗಿ ಓಟಿಟಿಯಲ್ಲಿರುವ ಚಿತ್ರವನ್ನು ತೆಗೆದು ಹಾಕಬೇಕು ಎಂದು ರಮ್ಯಾ ಅರ್ಜಿ ಸಲ್ಲಿಸಿದ್ದರು. ಈ ವಿಷಯದಲ್ಲಿ ನರೇಶ್ ಪರ ತೀರ್ಪು ಬಂದಿತ್ತು. ಅಲ್ಲದೇ, ರಮ್ಯಾ ಅವರು ನಮ್ಮ ಮನೆಗೆ ಬಂದು ತೊಂದರೆ ನೀಡುತ್ತಿದ್ದಾರೆ. ಅವರು ಮನೆಗೆ ಬಾರದಂತೆ ನಿರ್ದೇಶನ ನೀಡಬೇಕು ಎಂದು ನರೇಶ್ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಇದರಲ್ಲೂ ನರೇಶ್ ಗೆ ಜಯ ಸಿಕ್ಕಿತ್ತು.

    ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ನರೇಶ್, ‘ನ್ಯಾಯಕ್ಕೆ ಜಯ ಸಿಕ್ಕಿದೆ. ರಮ್ಯಾ ಜೊತೆಗಿನ ಡಿವೋರ್ಸ್ ಗೆ ಈ ತೀರ್ಪು ಸಹಾಯಕ್ಕೆ ಬರುತ್ತದೆ. ಆದಷ್ಟು ಬೇಗ ಆಕೆಯಿಂದ ದೂರವಾಗಿ ಪವಿತ್ರಾ ಅವರ ಜೊತೆ ನೆಮ್ಮದಿಯಾಗಿ ಬದುಕುವೆ. ರಮ್ಯಾ ಸಾಕಷ್ಟು ಸಾಲ ಮಾಡಿಕೊಂಡಿದ್ದರಿಂದ ಸಾಲಗಾರರು ಮನೆಗೆ ಬರುತ್ತಿದ್ದರು. ಹಾಗಾಗಿ ನಮ್ಮ ಕುಟುಂಬ ಕೋರ್ಟಿಗೆ ಅರ್ಜಿ ಸಲ್ಲಿಸಬೇಕಾಯಿತು ಎಂದಿದ್ದಾರೆ.

    ಏನಿದು ಪ್ರಕರಣ?

    ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ (Naresh) ಮತ್ತು ನಟಿ ಪವಿತ್ರಾ ಲೋಕೇಶ್ (Pavitra Lokesh) ಸಿನಿಮಾ ಮಾಡಿದ್ದಾರೆ. ಅದು ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ. ಅರ್ಜಿಯಲ್ಲಿ ಯಾವುದೇ ಸಕರಾರಣವಿಲ್ಲದ ಕಾರಣದಿಂದಾಗಿ ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಈ ಹಿಂದೆ ಸಿನಿಮಾ (Matte Maduve ) ರಿಲೀಸ್ ವೇಳೆಯೂ ರಮ್ಯಾ ಇದೇ ರೀತಿಯಲ್ಲಿ ತಡೆಯಾಜ್ಞೆ ತರುವ ಪ್ರಯತ್ನ ಮಾಡಿದ್ದರು. ಸಿನಿಮಾದ ಕಥೆಯು ತಮ್ಮ ಜೀವನದ ಅನೇಕ ಘಟನೆಗಳನ್ನು ಹೋಲುತ್ತದೆ. ಹಾಗಾಗಿ ಚಿತ್ರವು ರಿಲೀಸ್ ಆಗಬಾರದು ಎಂದು ಕೋರ್ಟ್ ಮೆಟ್ಟಿಲು ಏರಿದ್ದರು. ಆಗಲೂ ಕೂಡ ರಮ್ಯಾಗೆ (Ramya Raghupathi) ಹಿನ್ನೆಡೆಯಾಗಿತ್ತು. ಸಿನಿಮಾದಲ್ಲಿ ಕಾಲ್ಪನಿಕ ಕಥೆಯಂದು ಹಾಕಲಾಗಿದೆ. ಸೆನ್ಸಾರ್ ಮಂಡಳಿ ಕೂಡ ಅದಕ್ಕೆ ಒಪ್ಪಿ ಪತ್ರ ಕೊಟ್ಟಿದೆ ಎಂದು ಕೋರ್ಟ್ (Court) ಅಭಿಪ್ರಾಯ ಪಟ್ಟಿತ್ತು.

    ಜೂನ್ 23 ರಿಂದ ಮತ್ತೆ ಮದುವೆ ಸಿನಿಮಾ ಪ್ರತಿಷ್ಠಿತ ಒಟಿಟಿ (OTT) ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗುತ್ತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್ ನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು.

    ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಇದನ್ನೂ ಓದಿ:ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ನಿರ್ಮಾಪಕ ಅನುರಾಗ್ ಕಶ್ಯಪ್ ಪುತ್ರಿ ಆಲಿಯಾ

    ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.

     

    ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್ ನಲ್ಲಿ ನೋಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ನರೇಶ್-ರಮ್ಯಾ ಡಿವೋರ್ಸ್: ನ್ಯಾಯಾಲಯ ಹೇಳಿದ್ದೇನು?

    ನಟ ನರೇಶ್-ರಮ್ಯಾ ಡಿವೋರ್ಸ್: ನ್ಯಾಯಾಲಯ ಹೇಳಿದ್ದೇನು?

    ತೆಲುಗಿನ ನಟ ನರೇಶ್ (Naresh) ಮತ್ತು ಬೆಂಗಳೂರಿನ ರಮ್ಯಾ ರಘುಪತಿ (Ramya Raghupathi) ಡಿವೋರ್ಸ್ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು (Court) ‘ಕಳೆದ ಆರು ವರ್ಷಗಳಿಂದ ರಮ್ಯಾ ಮತ್ತು ನರೇಶ್ ಪರಸ್ಪರ ಪ್ರತ್ಯೇಕವಾಗಿಯೇ ವಾಸಿಸುತ್ತಿರುವ ಕಾರಣದಿಂದಾಗಿ ಮದುವೆ ಅನೂರ್ಜಿತಗೊಳಿಸಬಹುದು ಎಂದು ಅಭಿಪ್ರಾಯ ಪಟ್ಟಿದೆ. ಹೀಗಾಗಿ ಅತೀ ಶೀಘ್ರದಲ್ಲೇ ನರೇಶ್ ಮತ್ತು ರಮ್ಯಾ ಅಧಿಕೃತವಾಗಿ ದೂರವಾಗಲಿದ್ದಾರೆ.

    ಈ ಅರ್ಜಿಯ ಜೊತೆಗೆ ನರೇಶ್ ಮತ್ತು ಕುಟುಂಬದವರು ರಮ್ಯಾ ತಮ್ಮ ನಿವಾಸಕ್ಕೆ ಅಧಿಕೃತವಾಗಿ ಪ್ರವೇಶ ಮಾಡುವುದನ್ನು ನಿಷೇಧಿಸುವಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೂ ಆದೇಶ ಹೊರಡಿಸಿದ್ದು ನರೇಶ್ ಅವರ ನಿವಾಸವನ್ನು ಪ್ರವೇಶಿಸುವುದಕ್ಕೆ ರಮ್ಯಾ ಅವರಿಗೆ ಕೋರ್ಟ್ ನಿರ್ಬಂಧ ಹೇರಿದೆ.

    ಸಿನಿಮಾ ವಿಷ್ಯದಲ್ಲೂ ರಮ್ಯಾಗೆ ಶಾಕ್

    ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ (Pavitra Lokesh) ಸಿನಿಮಾ ಮಾಡಿದ್ದಾರೆ. ಅದು ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ. ಅರ್ಜಿಯಲ್ಲಿ ಯಾವುದೇ ಸಕರಾರಣವಿಲ್ಲದ ಕಾರಣದಿಂದಾಗಿ ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಈ ಹಿಂದೆ ಸಿನಿಮಾ ರಿಲೀಸ್ ವೇಳೆಯೂ ರಮ್ಯಾ ಇದೇ ರೀತಿಯಲ್ಲಿ ತಡೆಯಾಜ್ಞೆ ತರುವ ಪ್ರಯತ್ನ ಮಾಡಿದ್ದರು. ಸಿನಿಮಾದ ಕಥೆಯು ತಮ್ಮ ಜೀವನದ ಅನೇಕ ಘಟನೆಗಳನ್ನು ಹೋಲುತ್ತದೆ. ಹಾಗಾಗಿ ಚಿತ್ರವು ರಿಲೀಸ್ ಆಗಬಾರದು ಎಂದು ಕೋರ್ಟ್ ಮೆಟ್ಟಿಲು ಏರಿದ್ದರು. ಆಗಲೂ ಕೂಡ ರಮ್ಯಾಗೆ ಹಿನ್ನೆಡೆಯಾಗಿತ್ತು. ಸಿನಿಮಾದಲ್ಲಿ ಕಾಲ್ಪನಿಕ ಕಥೆಯಂದು ಹಾಕಲಾಗಿದೆ. ಸೆನ್ಸಾರ್ ಮಂಡಳಿ ಕೂಡ ಅದಕ್ಕೆ ಒಪ್ಪಿ ಪತ್ರ ಕೊಟ್ಟಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿತ್ತು.

    ಜೂನ್ 23 ರಿಂದ ಮತ್ತೆ ಮದುವೆ ಸಿನಿಮಾ ಪ್ರತಿಷ್ಠಿತ ಒಟಿಟಿ (OTT) ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗುತ್ತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್ ನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು.

    ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

    ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.

     

    ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್ ನಲ್ಲಿ ನೋಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪವಿತ್ರಾ ಲೋಕೇಶ್-ನರೇಶ್ ಮತ್ತೆ ಮದುವೆ: ಪತ್ನಿ ರಮ್ಯಾಗೆ ಬಿಗ್ ಶಾಕ್ ನೀಡಿದ ಕೋರ್ಟ್

    ಪವಿತ್ರಾ ಲೋಕೇಶ್-ನರೇಶ್ ಮತ್ತೆ ಮದುವೆ: ಪತ್ನಿ ರಮ್ಯಾಗೆ ಬಿಗ್ ಶಾಕ್ ನೀಡಿದ ಕೋರ್ಟ್

    ಮ್ಮ ಜೀವನದ ಕಥೆಯನ್ನೇ ಪತಿ ನರೇಶ್ (Naresh) ಮತ್ತು ನಟಿ ಪವಿತ್ರಾ ಲೋಕೇಶ್ (Pavitra Lokesh) ಸಿನಿಮಾ ಮಾಡಿದ್ದಾರೆ. ಅದು ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ. ಅರ್ಜಿಯಲ್ಲಿ ಯಾವುದೇ ಸಕರಾರಣವಿಲ್ಲದ ಕಾರಣದಿಂದಾಗಿ ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಈ ಹಿಂದೆ ಸಿನಿಮಾ (Matte Maduve ) ರಿಲೀಸ್ ವೇಳೆಯೂ ರಮ್ಯಾ ಇದೇ ರೀತಿಯಲ್ಲಿ ತಡೆಯಾಜ್ಞೆ ತರುವ ಪ್ರಯತ್ನ ಮಾಡಿದ್ದರು. ಸಿನಿಮಾದ ಕಥೆಯು ತಮ್ಮ ಜೀವನದ ಅನೇಕ ಘಟನೆಗಳನ್ನು ಹೋಲುತ್ತದೆ. ಹಾಗಾಗಿ ಚಿತ್ರವು ರಿಲೀಸ್ ಆಗಬಾರದು ಎಂದು ಕೋರ್ಟ್ ಮೆಟ್ಟಿಲು ಏರಿದ್ದರು. ಆಗಲೂ ಕೂಡ ರಮ್ಯಾಗೆ (Ramya Raghupathi) ಹಿನ್ನೆಡೆಯಾಗಿತ್ತು. ಸಿನಿಮಾದಲ್ಲಿ ಕಾಲ್ಪನಿಕ ಕಥೆಯಂದು ಹಾಕಲಾಗಿದೆ. ಸೆನ್ಸಾರ್ ಮಂಡಳಿ ಕೂಡ ಅದಕ್ಕೆ ಒಪ್ಪಿ ಪತ್ರ ಕೊಟ್ಟಿದೆ ಎಂದು ಕೋರ್ಟ್ (Court) ಅಭಿಪ್ರಾಯ ಪಟ್ಟಿತ್ತು.

    ಜೂನ್ 23 ರಿಂದ ಮತ್ತೆ ಮದುವೆ ಸಿನಿಮಾ ಪ್ರತಿಷ್ಠಿತ ಒಟಿಟಿ (OTT) ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗುತ್ತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್ ನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು. ಇದನ್ನೂ ಓದಿ:ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

    ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.

     

    ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್ ನಲ್ಲಿ ನೋಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ನರೇಶ್-ಪವಿತ್ರಾಗೆ ಶಾಕ್ : ಗನ್ ಲೈಸೆನ್ಸ್ ಕೇಳಿದ ನಟ

    ನಟ ನರೇಶ್-ಪವಿತ್ರಾಗೆ ಶಾಕ್ : ಗನ್ ಲೈಸೆನ್ಸ್ ಕೇಳಿದ ನಟ

    ತೆಲುಗಿನ ನಟ ನರೇಶ್ (Naresh) ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್ (Pavitra Lokesh) ಒಟ್ಟಾಗಿ ನಟಿಸಿದ್ದ ಮತ್ತೆ ಮದುವೆಗೆ ಬ್ರೇಕ್ ಬಿದ್ದಿದೆ. ಮೊನ್ನೆಯಷ್ಟೇ ಈ ಸಿನಿಮಾ ಪ್ರೈಮ್ ನಲ್ಲಿ ರಿಲೀಸ್ ಆಗಿತ್ತು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದೆ. ಈ ನಡುವೆಯೇ ನರೇಶ್ ತಮ್ಮ ಆತ್ಮ ರಕ್ಷಣೆಗಾಗಿ ಗನ್ (Gun) ಲೈಸೆನ್ಸ್ ನೀಡುವಂತೆ ಅರ್ಜಿ ಹಾಕಿಕೊಂಡಿದ್ದಾರೆ.

    ತನ್ನನ್ನೇ ಗುರಿಯಾಗಿರಿಸಿಕೊಂಡು ಮತ್ತೆ ಮದುವೆ ಸಿನಿಮಾ ಮಾಡಿದ್ದಾರೆ ಎಂದು ನರೇಶ್ ಪತ್ನಿ ರಮ್ಯಾ ರಘುಪತಿ (Ramya Raghupathi) ಕೋರ್ಟ್ ಮೆಟ್ಟಿಲು ಏರಿದ್ದರು. ತನ್ನ ಸಂಸಾರದ ಬಗ್ಗೆ ಅವಹೇಳನ ಮಾಡುವಂತಹ ದೃಶ್ಯಗಳನ್ನು ಅದರಲ್ಲಿ ಹಾಕಿದ್ದಾರೆ ಎಂದು ರಮ್ಯಾ ಮಾತನಾಡಿದ್ದರು. ಈ ಸಿನಿಮಾ ಬಿಡುಗಡೆ ಆಗದಂತೆ ತಡೆಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಮಾನ್ಯವಾಗಿರಲಿಲ್ಲ.

    ಅಮೆಜಾನ್ ಪ್ರೈಮ್ ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದ್ದಂತೆಯೇ ಮತ್ತೆ ಕೋರ್ಟ್ ಮೆಟ್ಟಿಲು ಏರಿದ್ದ ರಮ್ಯಾ, ಓಟಿಟಿಯಿಂದ ಆ ಸಿನಿಮಾವನ್ನು ತೆಗೆದುಹಾಕುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಓಟಿಟಿಯಲ್ಲಿ ಮತ್ತೆ ಮದುವೆ ಸಿನಿಮಾವನ್ನು ತೆಗೆದುಹಾಕಲಾಗಿದೆ. ಈ ಮೂಲಕ ನರೇಶ್ ಅವರಿಗೆ ಹಿನ್ನೆಡೆಯಾಗಿದೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

    ಇತ್ತ ಥಿಯೇಟರ್ ನಲ್ಲೂ ಸಿನಿಮಾ ಓಡಲಿಲ್ಲ. ಅಂದುಕೊಂಡಷ್ಟು ಕಾಸೂ ಮಾಡಲಿಲ್ಲ. ಹಲವಾರು ಕೋಟಿ ಖರ್ಚು ಮಾಡಿ ತಯಾರಿಸಿದ್ದ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಳ್ಳಲಿಲ್ಲ. ತೆಲುಗು ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ರಿಲೀಸ್ ಮಾಡಿದ್ದರೂ, ಎರಡೂ ಭಾಷೆಗಳ ಪ್ರೇಕ್ಷಕರು ಸಿನಿಮಾ ನೋಡಲಿಲ್ಲ. ಹಾಗಾಗಿ ನರೇಶ್ ಅವರಿಗೆ ಭಾರೀ ಪೆಟ್ಟು ಬಿದ್ದಿತ್ತು.

    ಸಿನಿಮಾ ಸೋತ ನೋವು ಒಂದು ಕಡೆಯಾದರೆ, ರಮ್ಯಾ ಅವರು ನಿರಂತರ ಬೆನ್ನುಬಿದ್ದಿದ್ದಾರೆ. ಹಾಗಾಗಿ ತಮಗೆ ಭಯದ ವಾತಾವರಣ ಕಾಡುತ್ತಿದೆ ಎನ್ನುವುದು ನರೇಶ್ ವಾದ. ಹೀಗಾಗಿಯೇ ತಮಗೆ ಜೀವ ಬೆದರಿಕೆಯಿದೆ ಎಂದೂ, ಆತ್ಮರಕ್ಷಣೆಗಾಗಿ ಗನ್ ಪರವಾನಿಗೆ ನೀಡುವಂತೆ ಶ್ರೀಸತ್ಯಸಾಯಿ ಜಿಲ್ಲಾ ಎಸ್ಪಿ ಮಾಧವರೆಡ್ಡಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ತಾವು ನಕ್ಸಲ್ಸ್ ಹಿಟ್ ಲಿಸ್ಟ್ ನಲ್ಲಿ ಇದ್ದೆ ಎನ್ನುವುದನ್ನು ನೆನಪಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನರೇಶ್-ಪವಿತ್ರಾ ನಟನೆಯ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಮ್ಯಾ

    ನರೇಶ್-ಪವಿತ್ರಾ ನಟನೆಯ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಮ್ಯಾ

    ತೆಲುಗಿನ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh)  ನಟನೆಯ ‘ಮತ್ತೆ ಮದುವೆ’ (ಮಲ್ಲಿ ಪೆಲ್ಲಿ) (Matte Maduve) ಸಿನಿಮಾ ವಿರುದ್ಧ ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್  (Court) ಮೋರೆ ಹೋಗಿದ್ದಾರೆ. ತಮ್ಮ ಮಾನಹಾನಿ ಮಾಡುವಂತಹ ದೃಶ್ಯಗಳು ಸಿನಿಮಾದಲ್ಲಿ ಇವೆ ಎಂದು ಅವರು ಕೋರ್ಟಿಗೆ ತಿಳಿಸಿದ್ದಾರೆ. ವೈಯಕ್ತಿಕ ಜೀವನಕ್ಕೆ ಧಕ್ಕೆ ತರುವಂತಹ ಅಂಶಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಹಾಗಾಗಿ ಸಿನಿಮಾ ಪ್ರದರ್ಶನವಾಗದಂತೆ ತಡೆಯಬೇಕು ಎಂದು ಅವರು ಕುಕಟ್ ಪಲ್ಲಿಯಲ್ಲಿರುವ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

    ಚಿತ್ರದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ. ಇದನ್ನೂ ಓದಿ:60ನೇ ವಯಸ್ಸಿಗೆ 2ನೇ ಮದುವೆಯಾದ ನಟ ಆಶಿಶ್ ವಿದ್ಯಾರ್ಥಿ

    ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ (Ramya) ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ (Suchendra Prasad) ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು (M.S. Raju) ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

  • ರಮ್ಯಾಗೆ ಕ್ರಿಮಿನಲ್ ಜೊತೆ ಲಿಂಕ್ ಇದೆ : ಮಾಧ್ಯಮಗೋಷ್ಠಿಯಲ್ಲಿ ಬಾಂಬ್ ಸಿಡಿಸಿದ ನಟ ನರೇಶ್

    ರಮ್ಯಾಗೆ ಕ್ರಿಮಿನಲ್ ಜೊತೆ ಲಿಂಕ್ ಇದೆ : ಮಾಧ್ಯಮಗೋಷ್ಠಿಯಲ್ಲಿ ಬಾಂಬ್ ಸಿಡಿಸಿದ ನಟ ನರೇಶ್

    ತೆಲುಗಿನ (Tollywood) ಖ್ಯಾತ ನಟ ನರೇಶ್ (Naresh) ಮತ್ತು ಅವರ ಪತ್ನಿ ರಮ್ಯಾ (Ramya Raghupathi) ರಗಳೆ ಮುಗಿಯುವಂತೆ ಕಾಣುತ್ತಿಲ್ಲ. ಪತ್ನಿಯಿಂದ ತಮಗೆ ಕಿರುಕುಳ ಆಗುತ್ತಿದೆ. ಬೇಗ ಡಿವೋರ್ಸ್ ಕೊಡಿ ಎಂದು ಮೊನ್ನೆಯಷ್ಟೇ ನಟ ನರೇಶ್ ಕೋರ್ಟ್ ಗೆ ಮೊರೆ ಹೋಗಿದ್ದರು. ಇದೀಗ ನಿನ್ನೆ ಪತ್ರಿಕಾಗೋಷ್ಠಿ ಮಾಡಿ, ರಮ್ಯಾ ಬಗ್ಗೆ ಆರೋಪಗಳ ಸುರಿಮಳೆಗೈದಿದ್ದಾರೆ. ರಮ್ಯಾರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಹೇಳುವುದರ ಜೊತೆಗೆ ಆಕೆಗೆ ಕ್ರಿಮಿನಲ್ ಜೊತೆ ಒಡನಾಟ ಇರುವುದಾಗಿ ಮಾತನಾಡಿದ್ದಾರೆ.

    ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ನರೇಶ್, ‘ಜೀವನದಲ್ಲಿ ನನಗೆ ಬೇಸರವಾಗಿ ಸನ್ಯಾಸತ್ವ ತಗೆದುಕೊಳ್ಳಬೇಕು ಎಂದು ಹೊರಟಾಗ ಭೇಟಿಯಾದವರು ರಮ್ಯಾ. ತಮಗೆ ಶುಗರ್ ಇದೆ, ನನ್ನಂಥವಳನ್ನು ಯಾರು ಮದುವೆ ಆಗುತ್ತಾರೆ ಎಂದು ಕಣ್ಣೀರಿಟ್ಟಳು. ಅಲ್ಲದೇ, ನನ್ನ ತಾಯಿಯು ಕೂಡ ಆಕೆಯ ಬಗ್ಗೆ ಒಲವು ತೋರಿದ್ದರಿಂದ ಮದುವೆಯಾದೆ. ಆನಂತರದ ರಮ್ಯಾನೇ ಬೇರೆ ಇದ್ದಳು. ಕಂಠಪೂರ್ತಿ ಕುಡಿದು ಬರುತ್ತಿದ್ದಳು. ಗಲಾಟೆ ಮಾಡುತ್ತಿದ್ದಳು’ ಎಂದೆಲ್ಲ ಆರೋಪಿಸಿದ್ದಾರೆ. ಇದನ್ನೂ ಓದಿ: ‘ದಸರಾ’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್

    ಮುಂದುವರೆದು ಮಾತನಾಡಿದ ಅವರು, ‘ಆಕೆ ಮಾಡಿದ ಎಲ್ಲ ರಂಪಾಟವನ್ನೂ ಸಹಿಸಿಕೊಂಡು ಬಂದೆ. ಬ್ಯುಸಿನೆಸ್ ಮಾಡುತ್ತೇನೆ ಅಂದ್ಳು. ಅದಕ್ಕೂ ಸಪೋರ್ಟ್ ಮಾಡಿದೆ. ಬ್ಯುಸಿನೆಸ್ ಹೆಸರಲ್ಲಿ ಓಡಾಡೋಕೆ ಶುರು ಮಾಡಿದಳು. ಹದಿನೈದು ದಿನ ಮಾತ್ರ ಮನೆಯಲ್ಲಿ ಇರುತ್ತಿದ್ದಳು. ಹೇಳ್ತಾ ಹೋದರೆ ತುಂಬಾನೇ ಇದೆ. ಹೀಗಾಗಿ ರಮ್ಯಾ ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ, ನಾನೂ ಹೇಳಬೇಕಾಗಿದ್ದು ತುಂಬಾ ಇದೆ. ಎಲ್ಲವನ್ನೂ ಬಿಚ್ಚಿಡುತ್ತೇನೆ’ ಎಂದು ಎಚ್ಚರಿಕೆಯನ್ನೂ ನರೇಶ್ ಕೊಟ್ಟಿದ್ದಾರೆ.

    ರಮ್ಯಾ ಅವರು ಕ್ರಿಮಿನಲ್ ಜೊತೆ ಸಂಪರ್ಕದಲ್ಲಿ ಇದ್ದಾಳೆ ಎಂದೂ ನರೇಶ್ ಆರೋಪ ಮಾಡಿದ್ದಾರೆ. ತಮ್ಮ ಮೊಬೈಲ್ ಅನ್ನು ಟ್ರ್ಯಾಪ್ ಮಾಡಿಸಿದ್ದಾಗಿಯೂ ಅವರು ಹೇಳಿಕೊಂಡಿದ್ದಾರೆ. ನಾನು ಯಾರ ಜೊತೆ ಬೇಕಾದರೂ ಇರುತ್ತೇನೆ. ಅದು ನನ್ನ ಸ್ವಾತಂತ್ರ್ಯ. ಆದರೆ, ತೊಂದರೆ ಮಾಡುವುದನ್ನು ನಾನು ಸಹಿಸಲ್ಲ. ಪವಿತ್ರಾಳ ಮೇಲೆ ಸ್ಟ್ರಿಂಗ್ ಆಪರೇಷನ್ ಮಾಡಿಸ್ತೀಯಾ, ಇದೇ ರೀತಿ ಮುಂದುವರೆದರೆ ಬೇರೆ ರೀತಿಯಲ್ಲೇ ನಾನು ಉತ್ತರ ಕೊಡುತ್ತೇನೆ’ ಎಂದು ನರೇಶ್ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಮ್ಯಾ ವಿರುದ್ಧ ಮತ್ತೆ ಆರೋಪಗಳ ಸುರಿಮಳೆಗೈದ ನಟ ನರೇಶ್

    ರಮ್ಯಾ ವಿರುದ್ಧ ಮತ್ತೆ ಆರೋಪಗಳ ಸುರಿಮಳೆಗೈದ ನಟ ನರೇಶ್

    ತೆಲುಗು ನಟ ನರೇಶ್ (Naresh) ಮತ್ತು ಪತ್ನಿ ರಮ್ಯಾ ರಘುಪತಿ (Ramya Raghupathi) ಗಲಾಟೆ ಬೂದಿ ಮುಚ್ಚಿದ ಕೆಂಡದಂತೆ ಆಗಾಗ್ಗೆ ನಿಗಿನಿಗಿಸುತ್ತದೆ. ಈವರೆಗೂ ಸುಮ್ಮನೆ ಇದ್ದ ನರೇಶ್, ಇದೀಗ ಏಕಾಏಕಿ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ತಮ್ಮ ಹೆಂಡತಿ ವಿಪರೀತ ತೊಂದರೆ ಕೊಡುತ್ತಿದ್ದಾರೆ. ನನ್ನನ್ನು ಕೊಲ್ಲಲ್ಲು ಹಲವರು ನನ್ನ ಮನೆ ಸುತ್ತ ತಿರುಗುತ್ತಾರೆ. ರಮ್ಯಾಳಿಂದ ಆಗಿ ನಾನು ನೆಮ್ಮದಿ ಕಳೆದುಕೊಂಡಿದ್ದೇನೆ. ಕೂಡಲೇ ನನಗೆ ಬಿಡುಗಡೆ ಕೊಡಿ ಎಂದು ಅವರು ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

    ರಮ್ಯಾ ಮತ್ತು ನರೇಶ್ ಡಿವೋರ್ಸ್ (Divorced) ಕೇಸ್ ಕೋರ್ಟಿನಲ್ಲಿದೆ. ನರೇಶ್ ವಿಚ್ಚೇದನ ಕೊಡಲು ಒಪ್ಪಿದರೂ, ರಮ್ಯಾ ನಿರಾಕರಿಸುತ್ತಿ‍ದ್ದಾರೆ. ಮಗನ ಭವಿಷ್ಯದ ದೃಷ್ಟಿಯಿಂದ ಮತ್ತೆ ತಾವು ನರೇಶ್ ಜೊತೆ ಬದುಕು ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಪವಿತ್ರಾ ಲೋಕೇಶ್ ಜೊತೆ ಮದುವೆ ಆಗಲು ನರೇಶ್ ನನ್ನು ಬಿಡುವುದಿಲ್ಲ ಎಂದು ಮಾಧ್ಯಮಗಳ ಮುಂದೆಯೂ ಹೇಳಿಕೊಂಡಿದ್ದಾರೆ. ಡಿವೋರ್ಸ್ ಕೇಸ್ ಜಟಿಲವಾಗುತ್ತಿದ್ದಂತೆಯೇ ಮತ್ತೆ ನರೇಶ್ ಕೋರ್ಟ್ ಮುಂದೆ ನಿಂತಿದ್ದಾರೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ರಮ್ಯಾ ಈಗಾಗಲೇ ನರೇಶ್ ಮನೆ ಸೇರಿದ್ದಾರೆ. ಅದೇ ಮನೆಯಲ್ಲೇ ವಾಸ ಮಾಡುವುದಾಗಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ದೂರ ಆಗುವ ಪ್ರಶ್ನೆಯೇ ಇಲ್ಲವೆಂದು ಪ್ರತಿಕ್ರಿಯಿಸಿದ್ದಾರೆ. ಈ ಹಠವೇ ನರೇಶ್ ಗೆ ನುಂಗಲಾರದ ತುಪ್ಪವಾಗಿದೆ. ರಮ್ಯಾ ಅವರಿಂದ ದೂರವಾಗಿ ಪವಿತ್ರಾ ಲೋಕೇಶ್ ಜೊತೆ ಮದುವೆ ಆಗುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಅವರು ಹೊಸ ವರ್ಷದಂದು ಪವಿತ್ರಾಗೆ ಮುತ್ತು ಕೊಟ್ಟಿದ್ದ ವಿಡಿಯೋವನ್ನು ರಿಲೀಸ್ ಮಾಡಿದ್ದರು ಎಂದು ಹೇಳಲಾಗಿತ್ತು.

    ಈ ನಡೆಗೆ ವಿರೋಧವನ್ನೂ ವ್ಯಕ್ತ ಪಡಿಸಿದ್ದ ರಮ್ಯಾ, ಈ ವಿಡಿಯೋ ಆಚೆ ಬಂದ ನಂತರ ಮತ್ತಷ್ಟು ಗರಂ ಆಗಿದ್ದಾರೆ. ಯಾವುದೇ ಕಾರಣಕ್ಕೂ ಇಬ್ಬರನ್ನೂ ಸುಖವಾಗಿ ಇರುವುದಕ್ಕೆ ಬಿಡುವುದಿಲ್ಲ ಎಂದು ಅವರು ಶಪಥ ಮಾಡಿದ್ದಾರೆ. ಹಾಗಾಗಿಯೇ ಸೀದಾ ನರೇಶ್ ಮನೆಗೆ ಬಂದು ರಮ್ಯಾ ಠಿಕಾಣಿ ಹೂಡಿದ್ದಾರೆ. ರಮ್ಯಾ ಮನೆಗೆ ಬರುತ್ತಿದ್ದಂತೆಯೇ ನರೇಶ್ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಮ್ಮದೇ ಕಥೆಯನ್ನ ತೆರೆಯ ಮೇಲೆ ಬಿಚ್ಚಿಡಲಿದ್ದಾರೆ ನರೇಶ್- ಪವಿತ್ರಾ ಲೋಕೇಶ್

    ತಮ್ಮದೇ ಕಥೆಯನ್ನ ತೆರೆಯ ಮೇಲೆ ಬಿಚ್ಚಿಡಲಿದ್ದಾರೆ ನರೇಶ್- ಪವಿತ್ರಾ ಲೋಕೇಶ್

    ಟಾಲಿವುಡ್‌ನಲ್ಲಿ(Tollywood) ಮತ್ತೆ ಸುದ್ದಿಯಲ್ಲಿದ್ದಾರೆ ನರೇಶ್ ಮತ್ತು ಪವಿತ್ರಾ ಲೋಕೇಶ್(Pavitra Lokesh), ಇಷ್ಟು ದಿನ ತಮ್ಮ ಸ್ನೇಹ ಸಂಬಂಧ ವಿಚಾರವಾಗಿ ಸಖತ್ ಸದ್ದು ಮಾಡಿದ್ದರು. ಇದೀಗ ತಮ್ಮದೇ ಕಥೆಯನ್ನ ತೆರೆಯ ಮೇಲೆ ಹೇಳುವುದಕ್ಕೆ ಈ ಜೋಡಿ ಸಜ್ಜಾಗಿದ್ದಾರೆ.

    ತೆಲುಗು ಅಂಗಳದ ಹಿರಿಯ ನಟ ನರೇಶ್ (Actor Naresh) ಇತ್ತೀಚೆ ತಂದೆ ಕೃಷ್ಣ ನಿಧನ ನಂತರ ಮತ್ತೊಮ್ಮೆ ಚಾಲ್ತಿಯಲ್ಲಿದ್ದಾರೆ. ರಮ್ಯಾ ರಘುಪತಿ ಜೊತೆಗಿನ ಡಿವೋರ್ಸ್‌ ರಣರಂಗದ ಮಧ್ಯೆ ಪವಿತ್ರಾ ಲೋಕೇಶ್ ಹೆಸರು ಸಿಕ್ಕಾಪಟ್ಟೆ ಸಂಚಲನ ಮೂಡಿಸಿತ್ತು. ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇಷ್ಟೇಲ್ಲಾ ಸದ್ದು ಗದ್ದಲದ ನಡುವೆ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ತಮ್ಮ ಬಾಂಧವ್ಯ ಕಥೆಯನ್ನ ತೆರೆಯ ಮೇಲೆ ತೋರಿಸಲು ನರೇಶ್ ಪ್ಲ್ಯಾನ್ ಮಾಡಿದ್ದಾರೆ.

    ನರೇಶ್‌ಗೆ ರಮ್ಯಾ ರಘುಪತಿ ಮೂರನೇ ಹೆಂಡತಿಯಾಗಿದ್ದರು. ಮದುವೆಯಾಗಿ ಕೆಲವೇ ರ‍್ಷಗಳಲ್ಲಿ ಈ ಸಂಬಂಧಕ್ಕೂ ಫುಲ್ ಸ್ಟಾಪ್ ಇಡಲು ನಟ ತಯಾರಿ ನಡೆಸಿದ ಬೆನ್ನಲ್ಲೇ ಸೈಲೆಂಟ್ ಆಗಿ ಪವಿತ್ರಾ ಎಂಟ್ರಿ ಅಗಿದ್ದರು. ಗಂಡ ಹೆಂಡತಿ ಜಗಳ ದಶದಿಕ್ಕುಗಳಲ್ಲೂ ಸುದ್ದಿ ಮಾಡಿತ್ತು. ಆದರೆ ಯಾರದ್ದು ತಪ್ಪು, ಸರಿ ಎಂಬುದು ಉತ್ತರ ಸಿಗದ ಪ್ರಶ್ನೆಯಾಗಿದೆ. ಈ ಬೆನ್ನಲ್ಲೇ ನರೇಶ್, ತಮ್ಮ ಬಾಂದವ್ಯದ ಕಥೆಯನ್ನ ಸಿನಿಮಾ ರೂಪ ಕೊಡಲು ಮುಂದಾಗಿದ್ದಾರೆ. ಇದನ್ನೂ ಓದಿ:ರೂಪೇಶ್ ರಾಜಣ್ಣ ಸ್ವಾರ್ಥ ಬುದ್ದಿಗೆ ಶಿಕ್ಷೆ ಕೊಟ್ರು ಸುದೀಪ್‌

    ತಮ್ಮ ಕಥೆಗೆ ತಾವೇ ನಾಯಕ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರಾ ಅಥವಾ ಬೇರೇ ಕಲಾವಿದರು ಅವರ ಪಾತ್ರಕ್ಕೆ ಜೀವತುಂಬಲಿದ್ದಾರಾ ಎಂಬುದಕ್ಕೆ ಮುಂದೆ ಸ್ಪಷ್ಟನೆ ಸಿಗಲಿದೆ. ಆಡುವವರ ಬಾಯಿಗೆ ಈ ಸಿನಿಮಾ ಉತ್ತರವಾಗುತ್ತಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಪವಿತ್ರಾ ಲೋಕೇಶ್ ಮತ್ತು ನರೇಶ್ ರೊಮ್ಯಾಂಟಿಕ್ ವಿಡಿಯೋ ರಿಲೀಸ್

    ಪವಿತ್ರಾ ಲೋಕೇಶ್ ಮತ್ತು ನರೇಶ್ ರೊಮ್ಯಾಂಟಿಕ್ ವಿಡಿಯೋ ರಿಲೀಸ್

    ನ್ನಡದ ನಟಿ ಪವಿತ್ರಾ ಲೋಕೇಶ್ (Pavitra Lokesh) ಮತ್ತು ತೆಲುಗು ನಟ ನರೇಶ್ (Naresh) ಸಂಬಂಧದ ಬಗ್ಗೆ ಏನೆಲ್ಲ ಸುದ್ದಿಗಳು ಹರಿದಾಡಿದವು. ನರೇಶ್ ಪತ್ನಿ ರಮ್ಯಾ ರಘುಪತಿ (Ramya Raghupathi) ದೊಡ್ಡ ಗಲಾಟೆಯೇ ಮಾಡಿದರು. ಪವಿತ್ರಾ ಲೋಕೇಶ್ ಮತ್ತು ನರೇಶ್ ಇಬ್ಬರೂ ಮೈಸೂರು ಹೋಟೆಲ್ ವೊಂದರಲ್ಲಿ ಸಿಕ್ಕಾಕಿಕೊಂಡು ಈ ಘಟನೆಗೆ ಬೇರೆಯದ್ದೇ ದಿಕ್ಕು ತೋರಿಸಿದರು. ಈ ಘಟನೆ ಅಲ್ಲಿಗೆ ನಾನಾ ರೂಪ ಪಡೆದುಕೊಂಡಿತು.

    ಅಷ್ಟಾಗಿಯೂ ನರೇಶ್ ಮತ್ತು ಪವಿತ್ರಾ ಒಟ್ಟಿಗೆ ಕಾಣಿಸಿಕೊಳ್ಳುವುದನ್ನು ಬಿಟ್ಟಿಲ್ಲ. ನಿನ್ನೆಯಷ್ಟೇ ಇಬ್ಬರೂ ವಿಡಿಯೋವೊಂದನ್ನು ಮಾಡಿದ್ದು, ಆ ವಿಡಿಯೋ (Video) ಸಖತ್ ವೈರಲ್ ಕೂಡ ಹಾಕಿದೆ. ಪವಿತ್ರಾ ಲೋಕೇಶ್ ಭುಜದ ಮೇಲೆ ಕೈ ಇಟ್ಟು ಸಖತ್ ರೊಮ್ಯಾಂಟಿಕ್ (Romantic) ಆಗಿ ನರೇಶ್ ಮಾತನಾಡಿದ್ದಾರೆ. ತಾವಿಬ್ಬರೂ ಗಂಡ ಹೆಂಡತಿಯಾಗಿ ನಟಿಸಿರುವ ಕುರಿತು ಮತ್ತು ಆ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಬಂದಿರುವ ಕುರಿತು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ತಮಗಿಂತ 33 ವರ್ಷ ಕಿರಿಯವಳ ಜೊತೆ ಪ್ರೀತಿಯಲ್ಲಿ ಬಿದ್ದ ನಟ ಪೃಥ್ವಿರಾಜ್

    ಖ್ಯಾತ ತೆಲುಗು ನಟ ಅಲಿ ಆಲಿ ನಿರ್ಮಿಸಿ, ನಟಿಸಿರುವ  ‘ಅಂದರೂ ಬಾಗುಂಡಾಲಿ ಅಂದುಲೋ ನೇನುಂಡಾಲಿ’ ಸಿನಿಮಾ ಆಹಾ ಓಟಿಟಿ ವೇದಿಕೆಯಲ್ಲಿ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಪ್ರೇಕ್ಷಕರು ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಪವಿತ್ರಾ ಲೋಕೇಶ್ ಪಾತ್ರವನ್ನು ಮೆಚ್ಚಿ ತುಂಬಾ ಜನರು ಸಂದೇಶ ಕಳುಹಿಸಿದ್ದಾರಂತೆ. ಅದಕ್ಕಾಗಿ ನರೇಶ್ ಮತ್ತು ಪವಿತ್ರಾ ವಿಡಿಯೋ ಮೂಲಕ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

    ಈ ವಿಡಿಯೋ ನೋಡಿದ ಅನೇಕರು ಈ ಜೋಡಿಯ ರಿಲೇಶನ್ ಶಿಪ್ ಬಗ್ಗೆ ಮತ್ತೆ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಇಷ್ಟೊಂದು ಕ್ಲೋಸ್ ಆಗಿ, ರೊಮ್ಯಾಂಟಿಕ್ ಆಗಿ ಇರುವ ಜೋಡಿಯನ್ನು ಕಂಡರೆ ಎಲ್ಲರಿಗೂ ಹಾಗೆಯೇ ಅನಿಸುತ್ತದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಈ ಜೋಡಿಯ ಬಗ್ಗೆ ನೆಗೆಟಿವ್ ಕಾಮೆಂಟ್ ಗಳನ್ನು ಕೂಡ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಮ್ಯಾ ನನ್ನ ಮನೆಯಲ್ಲಿ ಇಲ್ಲ, ನನ್ನೊಂದಿಗೆ ವಾಸಿಸುತ್ತಿಲ್ಲ: ನಟ ನರೇಶ್ ಸ್ಪಷ್ಟನೆ

    ರಮ್ಯಾ ನನ್ನ ಮನೆಯಲ್ಲಿ ಇಲ್ಲ, ನನ್ನೊಂದಿಗೆ ವಾಸಿಸುತ್ತಿಲ್ಲ: ನಟ ನರೇಶ್ ಸ್ಪಷ್ಟನೆ

    ಮೈಸೂರಿನಲ್ಲಿ ನಡೆದ ಹೈ ಡ್ರಾಮಾ ನಂತರ ತೆಲುಗು ನಟ ನರೇಶ್ ಮತ್ತು ರಮ್ಯಾ ರಘುಪತಿ (Ramya Raghupathi) ಪ್ರಕರಣ ತಣ್ಣಗಾಗಿತ್ತು. ಕೋರ್ಟ್ ನಲ್ಲಿ ಈ ಪ್ರಕರಣವನ್ನು ನೋಡಿಕೊಳ್ಳುವುದಾಗಿ ನರೇಶ್ ಹೇಳಿದ್ದರು. ಇತ್ತ ಕಡೆ ರಮ್ಯಾ ಅವರ ತಾಯಿಗೆ ಹುಷಾರಿಲ್ಲದ ಕಾರಣ ಅವರ ಮೌನವಹಿಸಿದ್ದರು. ಇದೀಗ ಮತ್ತೆ ರಮ್ಯಾ ಅವರು ನರೇಶ್ ಅವರ ಮನೆಗೆ ಹೋಗಿದ್ದಾರೆ, ನರೇಶ್ ಜೊತೆಯೇ ವಾಸಿಸಲು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನುವ ಸುದ್ದಿ ಇತ್ತು. ಅದಕ್ಕೆ ನರೇಶ್ ಸ್ಪಷ್ಟನೆ ನೀಡಿದ್ದಾರೆ.

    ನನ್ನ ಮನೆಯಲ್ಲಿ ರಮ್ಯಾ ಇದ್ದಾರೆ, ಇಲ್ಲಿಗೆ ಬಂದಿದ್ದಾರೆ ಎನ್ನುವುದು ಸುಳ್ಳು. ಅದು ಸಾಧ್ಯವಾಗದೇ ಇರುವ ಕೆಲಸ. ಯಾರೋ ಮಾನಸಿಕ ಸರಿ ಇಲ್ಲದ ವ್ಯಕ್ತಿಯೊಬ್ಬ ಈ ರೀತಿ ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾನೆ. ರಮ್ಯಾ ಮತ್ತು ನಾನು ಎಂದಿಗೂ ಮತ್ತೆ ಒಂದಾಗಲು ಸಾಧ್ಯವೇ ಇಲ್ಲ. ಡಿವೋರ್ಸ್ ಕೇಸ್ ಕೋರ್ಟಿನಲ್ಲಿದೆ. ಕೋರ್ಟ್ ತೀರ್ಪಿಗಾಗಿ ನಾನು ಕಾಯುತ್ತಿದ್ದೇನೆ. ಯಾರೂ ವಂದತಿಗಳನ್ನು ಯಾರೂ ನಂಬಬಾರದು ಎಂದು ನರೇಶ್ (Naresh) ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ:ಹಿಂದಿ ಕಿರುತೆರೆಯಲ್ಲಿ ಬರಲಿದೆ `ಕೆಜಿಎಫ್ 2′ ಚಿತ್ರ: ರಾಕಿಭಾಯ್ ಎಂಟ್ರಿಗೆ ಕೌಂಟ್ ಡೌನ್

    ಅಲ್ಲದೇ, ರಮ್ಯಾ ಅವರು ಯಾವುದೇ ರೀತಿಯಲ್ಲೂ ತಮ್ಮನ್ನು ಸಂಪರ್ಕಿಸಿಲ್ಲ ಎನ್ನುವುದನ್ನು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟ ಪಡಿಸಿದ್ದು, ಡಿವೋರ್ಸ್ (Divorce) ತೀರ್ಪಿಗಾಗಿ ತಾವು ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಈ ರೀತಿ ರೂಮರ್ (Rumor) ಹರಡಿಸುವವರ ವಿರುದ್ಧವೂ ನರೇಶ್ ಹರಿಹಾಯ್ದಿದ್ದಾರೆ. ಇನ್ಮುಂದೆ ಇಂತಹ ಸುದ್ದಿಗಳು ಬಂದಾಗ ನಂಬಬೇಡಿ ಎಂದೂ ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]