Tag: rana

  • ತರುಣ್ ಸುಧೀರ್ ನಿರ್ಮಾಣದ `ಏಳುಮಲೆ’ ಚಿತ್ರದಿಂದ ಬಂತು ಫಸ್ಟ್ ಸಾಂಗ್

    ತರುಣ್ ಸುಧೀರ್ ನಿರ್ಮಾಣದ `ಏಳುಮಲೆ’ ಚಿತ್ರದಿಂದ ಬಂತು ಫಸ್ಟ್ ಸಾಂಗ್

    ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ `ಏಳುಮಲೆ’ (Elumale) ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.

    ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು ಆನಂದ್ ಆಡಿಯೋ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲಿಯೂ ಗೀತೆಯನ್ನು ಅನಾವರಣ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದಾರೆ. ಡಿ ಇಮ್ಮನ್ ಸಂಗೀತ ಒದಗಿಸಿದ್ದಾರೆ. ಇದನ್ನೂ ಓದಿ: ನನ್ನ ಹೆಸರಿನ ನಕಲಿ ಅಕೌಂಟ್‌ನಿಂದ ಅವಹೇಳನಕಾರಿ ಪೋಸ್ಟ್ – ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಎಸ್.ನಾರಾಯಣ್

    ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ. ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ – ತಪ್ಪಿತಸ್ಥರಿಗೆ 5 ವರ್ಷ ಜೈಲು, ದಂಡ: ಸೈಬರ್ ತಜ್ಞರ ಮಾಹಿತಿ

    ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ (Tharun Sudhir) ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

    ಸಹ ನಿರ್ದೇಶಕರಾಗಿ, ಗೀತ ಸಾಹಿತಿಯಾಗಿ `ಕಾಟೇರ’, `ಗುರುಶಿಷ್ಯರು’ ಸೇರಿದಂತೆ ಅನೇಕ ಸಿನಿಮಾಗಳನ್ನು ಮಾಡಿರುವ ಪುನೀತ್ ರಂಗಸ್ವಾಮಿ ಈಗ `ಏಳುಮಲೆ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಅದ್ವಿತ್ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ, ಡಿ.ಇಮ್ಮನ್ ಸಂಗೀತ ಚಿತ್ರಕ್ಕಿದೆ. ಈ ಸಿನಿಮಾ ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗುತ್ತಿದೆ.

  • ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್

    ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್

    ರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ನಿನ್ನೆ ಟೈಟಲ್ ಲಾಂಚ್ ಕಾರ್ಯಕ್ರಮ ನಡೆಯಿತು. ಕರುನಾಡ ಚಕ್ರವರ್ತಿ ಶಿವಣ್ಣ ಟೈಟಲ್ ಟೀಸರ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಜೋಗಿ ಪ್ರೇಮ್ ಕೂಡ ಕಾರ್ಯಕ್ರಮಕ್ಕೆ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದರು. ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಏಳುಮಲೆ ಎಂಬ ಟೈಟಲ್ ಇಡಲಾಗಿದೆ. ರಕ್ಷಿತಾ ಸಹೋದರ ರಾಣಾ ಹಾಗೂ ಮಹಾನಟಿ ಖ್ಯಾತಿಯ ಪ್ರಿಯಾಂಕಾ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.

    ಟೈಟಲ್ ಟೀಸರ್ ರಿಲೀಸ್ ಬಳಿಕ ಮಾತನಾಡಿದ ಶಿವಣ್ಣ , ಟೈಟಲ್ ಟೀಸರ್ ತುಂಬಾ ಚೆನ್ನಾಗಿದೆ. ಒಳ್ಳೆಯವರಿಗೆ ಒಳ್ಳೆದಾಗುತ್ತದೆ ಎನ್ನುವುದಕ್ಕೆ ಟೈಟಲ್ ಟೀಸರ್ ಸಾಕ್ಷಿ. ರಾಣಾ ತುಂಬಾ ಹ್ಯಾಂಡ್ಸಮ್ ಇದ್ದಾನೆ. ವಿಲನ್ ಸಮಯದಲ್ಲಿ ಅವನಿಗೆ ಹೇಳಿದ್ದೇ ಹೀರೋ ಆಗ್ತಾನೆ ಎಂದು. ಏಳುಮಲೆ ಪ್ರಾಮಿಸಿಂಗ್ ಆಗಿದೆ. ಪ್ರಿಯಾಂಕಾ ಫಸ್ಟ್ ಟೈಮ್ ಅನಿಸುವುದಿಲ್ಲ. ಹೊಸಬರು ಬರಬೇಕು ಸಿನಿಮಾ ಮಾಡಬೇಕು. ಮೆಚ್ಚುಗೆ ಬಂದ ಮೇಲೆ ಹಣ ಮಾಡೋದು ಹೆಚ್ಚಿಗೆ ಆಮೇಲೆ ಇದ್ದೇ ಇದೆ. ಅದು ತಾನಾಗಿಯೇ ಆಗಲಿದೆ. ಮೊದಲು ಮೆಚ್ಚಿಗೆ ಆಮೇಲೆ ಹೆಚ್ಚಿಗೆ ಎಂದು ಹೇಳಿದರು.

    ಜೋಗಿ ಪ್ರೇಮ್ ಮಾತನಾಡಿ, ಜೋಗಿ ಸಿನಿಮಾ ಮಾಡುವಾಗ ಅಪ್ಪಾಜಿ ಜೊತೆಯಲ್ಲಿ ಕಾಲ ಕಳೆದಿದ್ದೆ. ನಮ್ಮ ಕಾಡಿನವರು ಎಂದು ಹೇಳುತ್ತಿದ್ದರು. ನಮ್ಮ ಯಜಮಾನ್ರು ಶಿವಣ್ಣ ಲಾಂಚ್ ಮಾಡಿದ್ದಾರೆ. ನೂರಷ್ಟು ಸಿನಿಮಾ ಸಕ್ಸಸ್ ಆಗಲಿದೆ ಎಂದು ಶುಭ ಹಾರೈಸಿದರು.

    ಚಿತ್ರದ ನಿರ್ಮಾಪಕ ತರುಣ್ ಸುಧೀರ್ ಮಾತನಾಡಿ, ಕರ್ನಾಟಕದ ಎಲ್ಲಾ ಭಾಗದಲ್ಲಿಯೂ ಏಳುಮಲೆ ಊರು ಹಾಗೂ ಮಲೆಮಹದೇಶ್ವರ ದೇವಸ್ಥಾನ, ಅದರ ಐತಿಹಾಸ ಸಿನಿಮಾ ಮೂಲಕ ಹೇಳುವುದರಲ್ಲಿ ನಿಸ್ಸಾಮರು ಅಂದರೆ ಶಿವಣ್ಣ ಹಾಗೂ ಪ್ರೇಮ್ ಸರ್. ಶಿವಣ್ಣ ಅವರಿಂದ ಟೈಟಲ್ ಲಾಂಚ್ ಆಗುತ್ತಿರುವುದು ಬ್ಲೆಸ್ಸಿಂಗ್. ಚಿತ್ರರಂಗ ಅನ್ನೋದು ಗೋಲ್ಡ್ ಮೈನಿಂಗ್. ಕೆಲವೊಮ್ಮೆ ಬೇಗ ಚಿನ್ನ ಸಿಗುತ್ತದೆ. ಮತ್ತೆ ಕೆಲವೊಮ್ಮೆ ಲೇಟ್ ಆಗಿ ಚಿನ್ನ ಸಿಗುತ್ತದೆ. ಚಿನ್ನಕ್ಕೆ ಬರ ಸಿಗುತ್ತದೆ. ಚಿನ್ನ ಕನ್ನಡ ಚಿತ್ರರಂಗದಲ್ಲಿದೆ. ಇವತ್ತು ಟೈಟಲ್ ಟೀಸರ್ ಲಾಂಚ್ ಮಾಡುತ್ತಿದ್ದೇವೆ. ಒಂದೊಳ್ಳೆ ಮೊತ್ತಕ್ಕೆ ಆನಂದ್ ಆಡಿಯೋ ಆಗಿದೆ. ಟೈಟಲ್ ರಿಲೀಸ್ ಗೂ ಮೊದ್ಲೇ ಸಿನಿಮಾ ಮಾರಾಟವಾಗಿದೆ. ಒಂದೊಳ್ಳೆ ಪ್ರಾಡೆಕ್ಟ್ ಹಾಗೂ ಕಂಟೆಂಟ್ ಇರುವ ಸಿನಿಮಾ ಬಂದರೆ ಅದಕ್ಕೆ ಬೆಲೆ ಇದೆ ಎಂದರು.

    ನಿರ್ದೇಶಕ ಪುನೀತ್ ರಂಗಸ್ವಾಮಿ, ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ. ಜೊತೆಗೆ ನಾವೇನು ತೆಗೆದುಕೊಂಡಿದ್ದೇವೆ ಆ ಕಾಲಘಟ್ಟದಲ್ಲಿ ನಡೆದ ಕಥೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ ಎಂದು ತಿಳಿಸಿದರು.

    ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರುವಂತಿದೆ ಟೀಸರ್. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

    ಚಿತ್ರದಲ್ಲಿ ಯಾರಿದ್ದಾರೆ?
    ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ. ಅದ್ವಿತ್ ಗುರುಮೂರ್ತಿ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ, ಡಿ ಇಮ್ಮನ್ ಸಂಗೀತ ಚಿತ್ರಕ್ಕಿದೆ. ಈ ಸಿನಿಮಾ ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗುತ್ತಿದೆ.

  • ಮದುವೆ ವಿಚಾರದಲ್ಲಿ ನಟಿ ತ್ರಿಷಾಗೆ ನಟರೇ ಮೋಸ ಮಾಡಿದರು: ಏನಿದು ವಿವಾದ?

    ಮದುವೆ ವಿಚಾರದಲ್ಲಿ ನಟಿ ತ್ರಿಷಾಗೆ ನಟರೇ ಮೋಸ ಮಾಡಿದರು: ಏನಿದು ವಿವಾದ?

    ಮಿಳಿನ ಹೆಸರಾಂತ ನಟಿ ತ್ರಿಷಾ (Trisha) ಮದುವೆ ವಿಚಾರವಾಗಿ ದಿನಕ್ಕೊಂದು ಸುದ್ದಿ ಬರುತ್ತಿವೆ. ಮೊನ್ನೆಯಷ್ಟೇ ‘ಪೊನ್ನಿಯನ್ ಸೆಲ್ವನ್ 2’ ಪತ್ರಿಕಾಗೋಷ್ಠಿಯಲ್ಲಿ ತ್ರಿಷಾ ಮದುವೆ ವಿಚಾರ ಮಾತನಾಡಿದ್ದರು. ‘ಮದುವೆ ಎನ್ನುವುದು ಕನಸಿನ ಮಾತು, ನನ್ನ ಜೀವನ ಅಭಿಮಾನಿಗಳಿಗೆ ಮೀಸಲು’ ಎಂದಿದ್ದರು. ಅಲ್ಲಿಗೆ ನಲವತ್ತರ ಸನಿಹದ ತ್ರಿಷಾ ಮದುವೆ ಆಗಲ್ಲವಾ ಎನ್ನುವ ಅನುಮಾನ ಮೂಡಿತ್ತು.

    ಈ ಹಿಂದೆ ತ್ರಿಷಾ ಉದ್ಯಮಿಯೊಬ್ಬರನ್ನು ಮದುವೆ (Marriage) ಆಗಲಿದ್ದಾರೆ ಎಂದು ಸುದ್ದಿ ಆಗಿತ್ತು. ಎಲ್ಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್ ಆಯಿತು ಎನ್ನುವ ಮಾಹಿತಿ ಹೊರಬಿತ್ತು. ಈ ಹಿಂದೆಯೂ ತ್ರಿಷಾ ಅವರ ಜೀವನದಲ್ಲಿ ಲವ್ ಫೆಲ್ಯೂವರ್ ಆಗಿದ್ದರಿಂದ ಮದುವೆ ವಿಚಾರವನ್ನೇ ಅವರು ಮರೆತಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ:ವರುಣ್ ಧವನ್ ಜೊತೆ ಇಂಗ್ಲೆಂಡ್‌ಗೆ ಹಾರಿದ ಸಮಂತಾ

    ಈ ಮದುವೆ ವಿಚಾರವಾಗಿ ನಟ, ವಿವಾದಿತ ಯೂಟ್ಯೂಬರ್ ಬೈಲ್ವಾನ್ ರಂಗನಾಥನ್ (Bailwan Ranganathan) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇವರ ಹೇಳಿಕೆ ತಮಿಳು ಚಿತ್ರೋದ್ಯಮದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇಬ್ಬರು ಸ್ಟಾರ್ ನಟರ ಅಭಿಮಾನಿಗಳು ಬೈಲ್ವಾನ್ ರಂಗನಾಥನ್ ವಿರುದ್ಧ ಹರಿಹಾಯ್ದಿದ್ದಾರೆ.

    ತ್ರಿಷಾ ಈವರೆಗೂ ಮದುವೆ ಆಗದೇ ಇರುವುದಕ್ಕೆ ಕಾರಣ ಸ್ಟಾರ್ ನಟರಾದ ಸಿಂಬು (Simbu) ಮತ್ತು ರಾಣಾ (Rana) ಎಂದು ಬೈಲ್ವಾನ್ ಹೇಳಿದ್ದಾರೆ. ಇಬ್ಬರ ಜೊತೆಯೂ ತ್ರಿಷಾ ಲವ್ ಇತ್ತು. ಒಬ್ಬರ ನಂತರ ಒಬ್ಬರು ತ್ರಿಷಾಗೆ ಮೋಸ ಮಾಡಿ ದೂರವಾದರು. ಇದರಿಂದಾಗಿ ತ್ರಿಷಾ ಮದುವೆ ಆಗದೇ ಹಾಗೆಯೇ ಉಳಿದುಕೊಂಡಿದ್ದಾರೆ ಎಂದು ಬೈಲ್ವಾನ್ ಮಾತನಾಡಿದ್ದಾರೆ.

    ಬೈಲ್ವಾನ್ ರಂಗನಾಥನ್ ಈ ರೀತಿಯ ಹೇಳಿಕೆಗಳನ್ನು ಕೊಡುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ ಅನೇಕ ಕಲಾವಿದರ ಮತ್ತು ನಿರ್ದೇಶಕರ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ. ಅವೆಲ್ಲವೂ ವಿವಾದವಾಗಿಯೇ ಕೊನೆಗೊಂಡಿವೆ. ಈ ಬಾರಿ ತ್ರಿಷಾ ಗೂಡಿಗೆ ಅವರು ಕಲ್ಲು ಹೊಡೆದಿದ್ದಾರೆ. ಈ ಕುರಿತು ತ್ರಿಷಾ ಏನು ಹೇಳುತ್ತಾರೋ ಕಾದು ನೋಡಬೇಕು.

  • ಎಲ್ಲ ನಟರ ಫ್ಯಾನ್ಸ್‌ಗೆ ಮನವಿ ಜೊತೆ ಬುದ್ಧಿವಾದ ಹೇಳಿದ ನಟ ಧ್ರುವ ಸರ್ಜಾ

    ಎಲ್ಲ ನಟರ ಫ್ಯಾನ್ಸ್‌ಗೆ ಮನವಿ ಜೊತೆ ಬುದ್ಧಿವಾದ ಹೇಳಿದ ನಟ ಧ್ರುವ ಸರ್ಜಾ

    ಟ ಧ್ರುವ ಸರ್ಜಾ (Dhruva Sarja) ನಿನ್ನೆಯಷ್ಟೇ ನಡೆದ ರಾಣ (Rana) ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿ, ಎಲ್ಲ ನಟರ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ. ತಮ್ಮ ಮನವಿಯನ್ನು ಫ್ಯಾನ್ಸ್ ಈಡೇರಿಸಿದರೆ, ಕನ್ನಡದ ಎಲ್ಲ ಸಿನಿಮಾಗಳು ಗೆಲ್ಲುತ್ತವೆ ಎನ್ನುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ದಯವಿಟ್ಟು, ನನ್ನ ಮಾತು ಕೇಳಿ ಎಂದೂ ಅವರು ಹೇಳಿದ್ದಾರೆ.

    ರಾಣ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿ ಮಾತನಾಡಿದ ಅವರು, ‘ನಾನು ಅವರ ಫ್ಯಾನ್, ನೀನು ಇವರ ಫ್ಯಾನ್ (Fans) ಅಂತ ಹೇಳದೇ, ಕನ್ನಡದ (Kannada) ಎಲ್ಲ ನಟರ, ಎಲ್ಲ ಸಿನಿಮಾಗಳನ್ನು (Cinema) ನೋಡಿ. ಅದರಲ್ಲೂ ಕನ್ನಡದ ಸಿನಿಮಾಗಳನ್ನು ನೋಡಿ. ಆಗ ಕನ್ನಡ ಸಿನಿಮಾ ರಂಗ ಮತ್ತಷ್ಟು ಬೆಳೆಯುತ್ತದೆ ಎಂದು ಅವರು ಹೇಳಿದ್ದಾರೆ. ಪರೋಕ್ಷವಾಗಿ ಅವರು ಫ್ಯಾನ್ಸ್ ವಾರ್ ಕುರಿತಾಗಿಯೂ ಕುಟುಕಿದ್ದಾರೆ. ಇದನ್ನೂ ಓದಿ:ದೇವರು ಮೆಚ್ಚೋದಿಲ್ಲ ಎಂದು ಸಾನ್ಯ ವಿರುದ್ಧ ರಾಂಗ್ ಆದ ಸಂಬರ್ಗಿ

    ಇತ್ತೀಚಿನ ದಿನಗಳಲ್ಲಿ ಫ್ಯಾನ್ಸ್ ವಾರ್ ಜೋರಾಗಿಯೇ ನಡೆಯುತ್ತಿದೆ. ತಮ್ಮ ನೆಚ್ಚಿನ ನಟರ ಸಿನಿಮಾಗಳನ್ನು ನೋಡಿ, ಉಳಿದ ನಟರ ಸಿನಿಮಾಗಳನ್ನು ನಿರ್ಲಕ್ಷ್ಯ ಮಾಡುತ್ತಾರೆ ಎನ್ನುವ ಮಾತೂ ಗಾಂಧಿ ನಗರದಲ್ಲಿ ಕೇಳಿ ಬರುತ್ತಿದೆ. ಅಲ್ಲದೇ, ಬೇರೆ ನಟರ ಸಿನಿಮಾಗಳ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡುವಂತಹ ಕೆಟ್ಟ ಚಾಳಿಯೊಂದು ಇತ್ತೀಚೆಗೆ ಶುರುವಾಗಿದೆ. ಇದನ್ನೆಲ್ಲ ಗಮನಿಸಿಯೇ ಧ್ರುವ ಸರ್ಜಾ ಎಲ್ಲ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

    ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

    ಕ್ ಲವ್ ಯಾ’ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಗ್ರ್ಯಾಂಡ್  ಎಂಟ್ರಿ ಕೊಟ್ಟ ನಟಿ ರಕ್ಷಿತಾ (Rakshita Prem) ಸಹೋದರ ರಾಣಾ ಮೊದಲ ಸಿನಿಮಾದಲ್ಲೇ ಭರವಸೆ ಹುಟ್ಟು ಹಾಕಿದ್ದು ಗೊತ್ತೇ ಇದೆ. ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬಂದ ಲವ್ ಕಹಾನಿಗೆ ಪ್ರೇಕ್ಷಕರು ಮೆಚ್ಚುಗೆ ಮುದ್ರೆ ಜೊತೆಗೆ ರಾಣಾ (Rana) ನಟನೆಯನ್ನು ಮೆಚ್ಚಿ ಕೊಂಡಾಡಿದ್ರು. ನಿರ್ದೇಶಕ ಪ್ರೇಮ್ ಕುಲುಮೆಯಲ್ಲಿ ಪಳಗಿರೋ ರಾಣಾ ಚಂದನವನಕ್ಕೆ ಭರವಸೆಯ ನಟನಾಗೋ ಸಕಲ ಲಕ್ಷಣಗಳನ್ನು ಹೊಂದಿದ್ದಾರೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಅನುಭವಿ ಕಲಾವಿದನಂತೆ ಮೊದಲ ಸಿನಿಮಾದಲ್ಲೇ ಮಿಂಚಿ ಚಿತ್ರರಸಿಕರಮನಗೆದ್ದ ರಾಣಾ ಈಗೇನು ಮಾಡ್ತಿದ್ದಾರೆ.? ಮುಂದಿನ ಸಿನಿಮಾ ಯಾವ್ದು..? ಯಾರ ನಿರ್ದೇಶನದಲ್ಲಿ ರಾಣಾ ಮುಂದಿನ ಸಿನಿಮಾ (New Movie) ಮೂಡಿಬರಲಿದೆ ಎಂಬೆಲ್ಲ ಪ್ರಶ್ನೆಗಳು ಮೂಡೋದು ಸಹಜ ಅದಕ್ಕೀಗ ಉತ್ತರ ಸಿಕ್ಕಿದೆ. ಹೌದು, ರಾಣಾ ಮುಂದಿನ ಸಿನಿಮಾ ನಿರ್ದೇಶನ ಮಾಡ್ತಿರೋದು ಯುವ ನಿರ್ದೇಶಕ. ಅದು ಬೇರೆ ಯಾರೂ ಅಲ್ಲ ಪ್ರೇಮ್ ನೆಚ್ಚಿನ ಶಿಷ್ಯ. ನಿರ್ದೇಶಕ ಪ್ರೇಮ್ (Jogi Prem) ಜೊತೆಗೆ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ವಿಜಯ್ ಈಶ್ವರ್ (Vijay Eshwar) ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆಯಲು ಸಜ್ಜಾಗಿದ್ದು ಮೊದಲ ಸಿನಿಮಾವನ್ನು ರಾಣಾಗೆ ಡೈರೆಕ್ಟ್ ಮಾಡುತ್ತಿದ್ದಾರೆ.

    ವಿಜಯ್ ಈಶ್ವರ್ ಮಾಡಿಕೊಂಡ ಸಬ್ಜೆಕ್ಟ್ ರಾಣಾಗೂ ಇಂಪ್ರೆಸ್ ಮಾಡಿದ್ದು, ವಿಜಯ್ ಜೊತೆ ಕೈ ಜೋಡಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪ್ರೇಮ್, ರಕ್ಷಿತಾ ಕೂಡ ವಿಜಯ್ ಈಶ್ವರ್ ಹೇಳಿದ ಕಥೆ ಕೇಳಿ ಥ್ರಿಲ್ ಆಗಿದ್ದಾರಂತೆ. ಯಾವ ರೀತಿಯ ಸಬ್ಜೆಕ್ಟ್, ರಾಣಾ ಲುಕ್ ಹೇಗಿರುತ್ತೆ, ಸಿನಿಮಾದ ತಯಾರಿ ಯಾವ ಹಂತದಲ್ಲಿದೆ ಇದೆಲ್ಲದಕ್ಕೂ ಸದ್ಯದಲ್ಲೇ ಉತ್ತರ ಸಿಗಲಿದೆ.

    Live Tv
    [brid partner=56869869 player=32851 video=960834 autoplay=true]

  • ನಿರ್ಮಾಪಕ ಕೆ.ಮಂಜು ಪುತ್ರನ ‘ರಾಣ’ ಸಿನಿಮಾದ ಹಾಡು ರಿಲೀಸ್ ಮಾಡಿದ ಜೋಗಿ ಪ್ರೇಮ್

    ನಿರ್ಮಾಪಕ ಕೆ.ಮಂಜು ಪುತ್ರನ ‘ರಾಣ’ ಸಿನಿಮಾದ ಹಾಡು ರಿಲೀಸ್ ಮಾಡಿದ ಜೋಗಿ ಪ್ರೇಮ್

    ನಿರ್ಮಾಪಕ ಕೆ.ಮಂಜು (, K. Manju) ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ “ರಾಣ” (Rana) ಚಿತ್ರದ “ಗಲ್ಲಿ ಬಾಯ್” ಹಾಡನ್ನು ಜೋಗಿ ಪ್ರೇಮ್ (Jogi Prem) ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು.

    ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ.  ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್ 11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕ ಶ್ರೇಯಸ್ (Shreyash). ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

    ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತ್‌ ಆಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty)  ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು ನಾಯಕಿ ರೀಷ್ಮಾ ನಾಣಯ್ಯ. ಗುಜ್ಜಲ್ ಪುರುಷೋತ್ತಮ್ ಅವರು ಒಂದು ಸಿನಿಮಾ ಮಾಡುತ್ತಿದ್ದೇನೆ. ನೀವು ಜೊತೆಗಿರಬೇಕು ಎಂದರು.  ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ, ನಾನು ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ. “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ.  ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ (Nandakishor) ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11ಕ್ಕೆ ಚಿತ್ರ ತೆರೆಗೆ ಬರುತ್ತಿದೆ ಎಂದು ತಿಳಿಸಿದ ಕೆ.ಮಂಜು, ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಹೇಳಿದರು.

    ಹಾಡು (Song) ಬಿಡುಗಡೆ ಮಾಡಿದ ಪ್ರೇಮ್ ಸರ್ ಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.‌ ನವೆಂಬರ್ 11ರಂದು ಬಿಡುಗಡೆಯಾಗಲಿದೆ. ತಂಡದವರೆಲ್ಲಾ ಸೇರಿ ಉತ್ತಮ ಚಿತ್ರ ಮಾಡಿದ್ದೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನಂದಕಿಶೋರ್. ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್. ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ  ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಕೋಟೆ ಪ್ರಭಾಕರ್, ಅಶೋಕ್, ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಚಿತ್ರದ ಕುರಿತು ಮಾತನಾಡಿದರು. ರೈತ ಕೇಶವ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾಡುಗಳ್ಳರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ ಇನ್ನು ನೆನಪು ಮಾತ್ರ

    ಕಾಡುಗಳ್ಳರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ ಇನ್ನು ನೆನಪು ಮಾತ್ರ

    ಚಾಮರಾಜನಗರ: ʻರಾಣಾʼ ಅರಣ್ಯ ಇಲಾಖೆಯಲ್ಲಿ ಹಂಟಿಂಗ್ ಸ್ಪೆಷಲಿಷ್ಟ್ ಎಂಬ ಬಿರುದು ಪಡೆದುಕೊಂಡಿತ್ತು. ಕಾಡುಗಳ್ಳರ ಪಾಲಿಗಂತೂ ಸಿಂಹಸ್ವಪ್ನವಾಗಿತ್ತು. ಕರ್ನಾಟಕದಲ್ಲಷ್ಟೇ ಅಲ್ಲ ಪಕ್ಕದ ತಮಿಳುನಾಡಿನಲ್ಲೂ ಕೂಡಾ ಫೇಮಸ್ ಆಗಿತ್ತು. ಹುಲಿ ಕಾರ್ಯಾಚರಣೆಗೂ ಕೂಡಾ ಬಳಕೆಯಾಗ್ತಿತ್ತು. ಆದ್ರೆ ಇಷ್ಟೆಲ್ಲಾ ಪ್ರಸಿದ್ದಿ ಪಡೆದಿದ್ದ ಆ ಶ್ವಾನ ಇನ್ನು ನೆನಪು ಮಾತ್ರ.

    ಬಂಡೀಪುರದ ಹಂಟಿಂಗ್ ಸ್ಪೆಷಲಿಷ್ಟ್ ರಾಣಾ ಇನ್ನು ನೆನಪು ಮಾತ್ರ. ಹೌದು, 13 ವರ್ಷ ವಯಸ್ಸಿನ ರಾಣಾ ಅನಾರೋಗ್ಯದಿಂದ ಇಂದು ಮೃತಪಟ್ಟಿದೆ. ಈ ʻರಾಣಾʼ ಬಂಡೀಪುರದ ಅರಣ್ಯ ಪ್ರದೇಶದಲ್ಲಿ ಕಾಡುಗಳ್ಳರಿಗೆ ಸಿಂಹಸ್ವಪ್ನವಾಗಿತ್ತು. ಕಾಡುಗಳ್ಳರ ಜಾಡನ್ನು ಹಿಡಿಯುವುದರಲ್ಲಿ ಎತ್ತಿದ ಕೈ. ಕಾಡುಗಳ್ಳರು ಎಷ್ಟೇ ಚಾಲಾಕಿಗಳಾಗಿದ್ದರೂ ಅವರ ಜಾಡನ್ನು ಹಿಡಿದು ಬಿಡುತ್ತಿದ್ದ. ಇದರಿಂದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಣಾ ಮೇಲೆ ವಿಶೇಷ ಅಕ್ಕರೆ. ಇಂತಹ ರಾಣಾ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿದ್ದರಿಂದ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ನಂತರ ಸ್ವಲ್ಪ ಚೇತರಿಕೆ ಕಂಡಿದ್ದ ರಾಣಾ ಮತ್ತೇ ನಿನ್ನೆ ಅನಾರೋಗ್ಯಕ್ಕೀಡಾಯಿತು. ನಿನ್ನೆ ಸಹಾ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಬೆಳಗ್ಗೆ ಮೃತಪಟ್ಟಿದೆ. ಇದನ್ನೂ ಓದಿ: ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ – ವಿ.ಸೋಮಣ್ಣ

    ರಾಣಾ ಅರಣ್ಯ ಕಳ್ಳರನ್ನು ಹಿಡಿಯುವುದು ಮಾತ್ರವಲ್ಲದೇ ಕೂಂಬಿಂಗ್ ಪರಿಣಿತ ಸಹ ಆಗಿತ್ತು. ಅನೇಕ ಹುಲಿ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ರಾಣಾನನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಬಳಿ ಹುಲಿ ದಾಳಿ ನಡೆಸಿ ಇಬ್ಬರನ್ನೂ ಬಲಿ ಪಡೆದಿತ್ತು. ಈ ವೇಳೆ ಹುಲಿ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ರಾಣಾ ಪಾತ್ರ ಮಹತ್ವದ್ದು. ಅಲ್ಲದೇ ಪಕ್ಕದ ತಮಿಳುನಾಡಿದ ಮಧುಮಲೈ ಅರಣ್ಯ ವಲಯದಲ್ಲಿ ಹುಲಿ ದಾಳಿ ನಡೆಸಿ ಮೂರು ಮಂದಿಯನ್ನು ಕೊಂದಿತ್ತು. ಇದನ್ನು ಹಿಡಿಯಲು ಸಹ ತಮಿಳುನಾಡಿನ ಅರಣ್ಯ ಇಲಾಖೆ ಸಿಬ್ಬಂದಿ ʻರಾಣಾʼನ ನೆರವು ಪಡೆದಿದ್ದರು.

    ಒಟ್ನಲ್ಲಿ ಬಂಡೀಪುರ ಅರಣ್ಯ ವಲಯದಲ್ಲಿ ಸರ್ಕಾರಿ ಗೌರವಗಳೊಂದಿಗೆ ರಾಣಾನ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅರಣ್ಯ ಇಲಾಖೆಯ ಸಿಬ್ಬಂದಿ ಭಾರವಾದ ಮನಸ್ಸಿನಿಂದ ರಾಣಾನ ಅಂತಿಮ‌ ದರ್ಶನ ಪಡೆದು ಕಣ್ಣೀರು ತುಂಬಿಕೊಂಡರು. ಕಳ್ಳರಿಗೆ ಸಿಂಹ ಸ್ವಪ್ನವಾಗಿ ಕಾಡಿ ಅರಣ್ಯ ಇಲಾಖೆ ಮತ್ತು ಸಾರ್ವಜನಿಕರ ಪ್ರೀತಿ ಗಳಿಸಿದ್ದ ರಾಣಾನ ಆತ್ಮಕ್ಕೆ ಶಾಂತಿ ಸಿಗಲಿ. ಇದನ್ನೂ ಓದಿ: ಮುಜರಾಯಿ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಗಿಫ್ಟ್ – ಮಹಿಳೆಯರಿಗೆ ಬಳೆ, ಅರಿಶಿನ-ಕುಂಕುಮ

    Live Tv
    [brid partner=56869869 player=32851 video=960834 autoplay=true]

  • ಆರು ವರ್ಷದ ನಂತರ ‘ರಾಜೀವ ಗಾಂಧಿ ಹತ್ಯೆ’ಯ ಸಿನಿಮಾಗೆ ಚಾಲನೆ

    ಆರು ವರ್ಷದ ನಂತರ ‘ರಾಜೀವ ಗಾಂಧಿ ಹತ್ಯೆ’ಯ ಸಿನಿಮಾಗೆ ಚಾಲನೆ

    ವಿವಾದಿತ ವಿಷಯಗಳನ್ನು ನಾಜೂಕಾಗಿ ತೋರಿಸುತ್ತಲೇ ಕನ್ನಡ ಸಿನಿಮಾ ರಂಗದಲ್ಲಿ ಒಂದು ಬ್ರ್ಯಾಂಡ್ ಕ್ರಿಯೇಟ್ ಮಾಡಿರುವ ಎ.ಎಂ.ಆರ್ ರಮೇಶ್ 2017ರಲ್ಲಿ ರಾಜೀವ ಗಾಂಧಿ ಹತ್ಯೆಯ ಕುರಿತಾಗಿ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಆಗ ಈ ಸಿನಿಮಾವನ್ನು ಅವರು ರಾಣಾ ಜತೆ ಮಾಡುವುದಾಗಿಯೂ ಸುದ್ದಿ ಆಗಿತ್ತು. ಭೇಟಿ ಕೂಡ ಮಾಡಿದ್ದರು. ಆ ನಂತರ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಇದೀಗ ಮತ್ತೆ ಆ ಸಿನಿಮಾಗೆ ಮರುಜೀವ ಬಂದಿದೆ. ಇದನ್ನೂ ಓದಿ : ಮೇ 11ಕ್ಕೆ ನಟಿ ಮಮತಾ ರಾವುತ್ ಮದುವೆ : ಡಾಕ್ಟರ್ ಜತೆ ಸಪ್ತಪದಿ ತುಳಿಯಲಿರುವ ನಟಿ

    ರಾಜೀವ ಗಾಂಧಿ ಹತ್ಯೆಯ ಹಿಂದಿರುವ ವ್ಯಕ್ತಿಗಳ ಕುರಿತು ಎ.ಎಂ.ಆರ್ ರಮೇಶ್ ಈಗಾಗಲೇ ‘ಸೈನೆಡ್’ ಹೆಸರಿನಲ್ಲಿ ಚಿತ್ರ ಮಾಡಿದ್ದಾರೆ. ಆ ಸಿನಿಮಾ ಕನ್ನಡ ಸಿನಿಮಾ ರಂಗದಲ್ಲೇ ಹೊಸ ಸಂಚಲನ ಸೃಷ್ಟಿ ಮಾಡಿತ್ತು. ಆನಂತರ ವೀರಪ್ಪನ್ ಕುರಿತಾಗಿಯೂ ಅವರೊಂದು ಚಿತ್ರ ಮಾಡಿದ್ದರು. ಅದು ಕೂಡ ಸದ್ದು ಮಾಡಿತ್ತು. ಆದ ಘಟನೆಗಳನ್ನು ಎತ್ತಿಕೊಂಡು, ಅದಕ್ಕೆ ಹೊಸ ರೂಪ ಕೊಡುವ ನಿರ್ದೇಶಕರ ಜಾಣ್ಮೆಗೆ ಎಲ್ಲರೂ ಮೆಚ್ಚಿಕೊಂಡಿದ್ದರು. ಹೀಗಾಗಿ ರಾಜೀವ ಗಾಂಧಿಯ ಹತ್ಯೆಗೆ ಬೇರೆ ದೃಷ್ಟಿ ಕೋನ ಕೊಡುವ ನಿಟ್ಟಿನಲ್ಲಿ ‘ಆಸ್ಪೋಟ’ ಹೆಸರಿನಲ್ಲಿ ಈ ಸಿನಿಮಾ ಮಾಡುವುದಾಗಿ ರಮೇಶ್ ಘೋಷಿಸಿದ್ದರು. ಇದನ್ನೂ ಓದಿ : ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದು ಹೇಳಿ ನಾಚಿ ನೀರಾದ ಆಲಿಯಾ

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ರಾಣಾ ಪ್ರಮುಖ ಪಾತ್ರ ನಿರ್ವಹಿಸಬೇಕಿತ್ತು. ಮತ್ತು ಈ ಸಿನಿಮಾಗೆ ಅವರು ಕೂಡ ಹಣ ಹೂಡಬೇಕಿತ್ತು. ಈಗ ಅದೆಲ್ಲವೂ ಬದಲಾಗಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಸಿನಿಮಾದಲ್ಲಿ ರಾಣಾ ಇಲ್ಲ. ಅವರು ಹಣವನ್ನೂ ಹಾಕುತ್ತಿಲ್ಲ. ಬದಲಾಗಿ ಎ.ಎಂ.ಆರ್ ರಮೇಶ್ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಮುಂದಿನ ತಿಂಗಳಿಂದ ಶೂಟಿಂಗ್ ಗೂ ಕೂಡ ಪ್ಲ್ಯಾನ್ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ರಿಯಲ್ ಸ್ಟಾರ್ ಉಪೇಂದ್ರ ಅಂದರೆ ಸುಮ್ನೇನಾ? ಟಾಲಿವುಡ್ ಸೂಪರ್ ಸ್ಟಾರ್ ಗೆ ಅಣ್ಣನಾದ ಉಪ್ಪಿ

    ಮುಂದಿನ ತಿಂಗಳಿಂದ ಶೂಟಿಂಗ್ ಶುರುವಾದರೂ, ರಾಜೀವ ಗಾಂಧಿ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎನ್ನುವ ಗುಟ್ಟನ್ನು ಮಾತ್ರ ಎ.ಎಂ.ಆರ್ ರಮೇಶ್ ಬಿಟ್ಟು ಕೊಟ್ಟಿಲ್ಲ. ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿರುವ ರಮೇಶ್, ‘ಪಾತ್ರಗಳ ಆಯ್ಕೆ ನಡೆಯುತ್ತಿದೆ. ಯಾರು, ಯಾವ ಪಾತ್ರವನ್ನು ಮಾಡಿದರೆ ಸರಿ ಇರುತ್ತೆ ಎನ್ನುವ ಕುರಿತು ಮಾತುಕತೆ ಆಗಿದೆ. ಆದರೆ, ಯಾವುದೂ ಅಂತಿಮವಾಗಿಲ್ಲ. ಹತ್ತು ದಿನದ ಒಳಗೆ ಒಂದಷ್ಟು ಕ್ಲ್ಯಾರಿಟಿ ಸಿಗಬಹುದು. ಇದೊಂದು ಪ್ಯಾನ್ ಇಂಡಿಯಾ ಮಾದರಿಯ ಸಿನಿಮಾವಾಗಿದ್ದರಿಂದ, ಬೇರೆ ಬೇರೆ ಕಲಾವಿದರೂ ಈ ಸಿನಿಮಾದಲ್ಲಿ ಇರಲಿದ್ದಾರೆ’ ಎಂದರು.

  • ಪ್ರೇಮಿಗಳ ದಿನಕ್ಕೆ ಪ್ರೇಮ್ ಉಡುಗೊರೆ – ‘ಏಕ್ ಲವ್ ಯಾ’ ಲಿರಿಕಲ್ ಸಾಂಗ್ ರಿಲೀಸ್

    ಪ್ರೇಮಿಗಳ ದಿನಕ್ಕೆ ಪ್ರೇಮ್ ಉಡುಗೊರೆ – ‘ಏಕ್ ಲವ್ ಯಾ’ ಲಿರಿಕಲ್ ಸಾಂಗ್ ರಿಲೀಸ್

    ಬೆಂಗಳೂರು: ಸ್ಟಾರ್ ಡೈರೆಕ್ಟರ್ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಸೆಟ್ಟೇರಿದ ದಿನದಿಂದಲೂ ಸಖತ್ ಸುದ್ದಿಯಲ್ಲಿರುವ ಸಿನಿಮಾ. ಬಹಳ ವರ್ಷಗಳ ನಂತರ ಶೋಮ್ಯಾನ್ ಪ್ರೇಮ್ ಲವ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು ಮತ್ತೊಂದು ಸೂಪರ್ ಡೂಪರ್ ಹಿಟ್ ನೀಡುವ ಎಲ್ಲಾ ಲಕ್ಷಣಗಳೂ ಕಂಡು ಬರುತ್ತಿದ್ದು, ಪ್ರೇಮಿಗಳ ದಿನದಂದು ಏಕ್ ಲವ್ ಯಾ ಲಿರಿಕಲ್ ಸಾಂಗ್ ಬಿಡುಗಡೆ ಮಾಡಿದ್ದಾರೆ.

    ಈ ಬಾರಿ ತಮ್ಮ ಕುಟುಂಬದ ಸದಸ್ಯನಿಗೆ ಪ್ರೇಮ್ ಆಕ್ಷನ್ ಕಟ್ ಹೇಳುತ್ತಿದ್ದು, ರಕ್ಷಿತಾ ಪ್ರೇಮ್ ಸಹೋದರ ರಾಣಾ ಈ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ನಾಯಕ ನಟನಾಗಿ ಎಂಟ್ರಿ ಕೊಡುತ್ತಿದ್ದಾರೆ. ಮೇಕಿಂಗ್ ಟೀಸರ್ ಮೂಲಕ ಸಿನಿಮಾದ ಸಣ್ಣ ಝಲಕ್ ತೋರಿಸಿ ನಿರೀಕ್ಷೆ ಹುಟ್ಟಿಸಿದ್ದ ‘ಏಕ್ ಲವ್ ಯಾ’ ಚಿತ್ರತಂಡ. ಇದೀಗ ಪ್ರೇಮಿಗಳ ದಿನಕ್ಕೆ ಉಡುಗೊರೆಯಾಗಿ ಚಿತ್ರದ ಯಾರೇ ಯಾರೇ ಲಿರಿಕಲ್ ಹಾಡು ಬಿಡುಗಡೆ ಮಾಡಿ ಮ್ಯೂಜಿಕಲ್ ಟ್ರೀಟ್ ನೀಡಿದೆ.

    ನಿರ್ದೇಶಕ ಪ್ರೇಮ್ ಸಾಹಿತ್ಯದಲ್ಲಿ ಅರಳಿರುವ ಈ ಹಾಡಿಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಮ್ಯೂಸಿಕ್ ಮ್ಯಾಜಿಕ್, ಅರ್ಮಾನ್ ಮಲ್ಲಿಕ್ ದನಿ ಬೆರೆತು ಹಾಡಿನ ಶ್ರೀಮಂತಿಕೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಸಖತ್ ವೈರಲ್ ಆಗುತ್ತಿರುವ ಈ ಹಾಡು ಪ್ರೇಮಿಗಳ ಆಂಥಮ್ ಆಗುತ್ತಿದೆ.

    ರಕ್ಷಿತಾಸ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾಗೆ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಬಂಡವಾಳ ಹೂಡಿದ್ದಾರೆ. ಅದ್ಧೂರಿಯಾಗಿ ಮೂಡಿ ಬರ್ತಿರುವ ‘ಏಕ್ ಲವ್ ಯಾ’ ಸಿನಿಮಾದಲ್ಲಿ ನಾಯಕಿಯರಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ, ರಚಿತಾ ರಾಮ್ ನಟಿಸಿದ್ದಾರೆ. ನಾಲ್ಕು ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಮಹೆನ್ ಸಿಂಹ ಕ್ಯಾಮೆರಾ ನಿರ್ದೇಶನವಿದೆ.

  • ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

    ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

    ಬೆಂಗಳೂರು: ಐ ಲವ್ ಯು ಸಿನಿಮಾದಲ್ಲಿ ಸಖತ್ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡು ಡಿಂಪಲ್ ಕ್ವೀನ್ ರಚಿತಾ ರಾಮ್ ಸಖತ್ ಸದ್ದು ಮಾಡಿದ್ದರು. ಈಗ ಮತ್ತೆ ತಮ್ಮ ಹೊಸ ಸಿನಿಮಾದಲ್ಲಿ ಹಿಂದೆಂದೂ ಕಾಣಿಸಿಕೊಳ್ಳ ಪಾತ್ರದಲ್ಲಿ ನಟಿಸಿ ಮತ್ತೆ ಎಲ್ಲೆಡೆ ಸುದ್ದಿಯಾಗಿದ್ದಾರೆ.

    ಹೌದು. ರಚಿತಾ ತಮ್ಮ ಹೊಸ ಚಿತ್ರ `ಏಕ್ ಲವ್ ಯಾ’ ಸಿನಿಮಾದಲ್ಲಿ ಮತ್ತೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಅದರಲ್ಲೂ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ರಚಿತಾ ಸಿಗರೇಟ್ ಸೇದಿ, ಹೀರೋಗೆ ಲಿಪ್ ಕಿಸ್ ಕೊಟ್ಟ ದೃಶ್ಯ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದೆ.

    ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯದ ಮೂಲಕ ಟೀಸರ್ ಆರಂಭವಾಗುತ್ತದೆ. ನಾಯಕ ರಾಣಾಗೆ ರಚಿತಾ ಲಿಪ್ ಕಿಸ್ ಮಾಡುವ ದೃಶ್ಯದೊಂದಿಗೆ ಟೀಸರ್ ಮುಗಿಯುತ್ತದೆ. 1 ನಿಮಿಷ 40 ಸೆಕೆಂಡ್‍ಗಳ ಟೀಸರ್ ನಲ್ಲಿ ರಾಣಾ ಆ್ಯಕ್ಷನ್ ಹಾಗೂ ರಚಿತಾ ಲುಕ್ ಎಲ್ಲರ ಗಮನ ಸೆಳೆದಿದೆ.

    `ಏಕ್ ಲವ್ ಯಾ’ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದು, ನಟಿ ರಕ್ಷಿತಾ ಪ್ರೇಮ್ ನಿರ್ಮಾಣ ಮಾಡುತ್ತಿದ್ದು, ಅವರ ಸಹೋದರ ರಾಣಾ ನಾಯಕನಾಗಿ ಅಭಿನಯಿಸಿದ್ದಾರೆ. ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿ ಎಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ಟೀಸರ್ ಆರಂಭದಲ್ಲಿ ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಅರ್ಪಿಸಲಾಗಿದೆ.

    ಐ ಲವ್ ಯು ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆ ನಟಿ ರಚಿತಾ ರಾಮ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ನಂತರದ ದಿನಗಳಲ್ಲಿ ಸ್ವತಃ ರಚಿತಾ ಅವರೇ, ‘ಇನ್ನುಮುಂದೆ ಅಂಥ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲ್ಲ’ ಎಂದು ಹೇಳಿಕೊಂಡಿದ್ದರು. ಈಗ ರಚಿತಾ ಬಿಂದಾಸ್ ಆಗಿ ಸಿಗರೇಟ್ ಸೇದುತ್ತಿರುವ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    ಈ ಕುರಿತು ಪ್ರೇಮ್ ಸಹ ಖಚಿತಪಡಿಸಿದ್ದು, ಇದು ನಮ್ಮ ಏಕ್ ಲವ್ ಯಾ ಚಿತ್ರದ ಸ್ಟಿಲ್. ಹೇಗೆ ಹೊರಬಂತೋ ನಮಗೂ ಗೊತ್ತಿಲ್ಲ. ಈ ಚಿತ್ರದಲ್ಲಿ ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯವಿದೆ. ಟೀಸರ್‍ನಲ್ಲಿ ಇನ್ನಷ್ಟು ಅಚ್ಚರಿಗಳು ಕಾದಿವೆ. ಹಿಂದೆಂದೂ ಕಾಣಿಸಿಕೊಳ್ಳದ ಪಾತ್ರದಲ್ಲಿ ರಚಿತಾ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದ್ದರು.