Tag: ranchi

  • ಖವಾಜಾ ಶತಕ, ಫಿಂಚ್ ಫಿಫ್ಟಿ – ಬೃಹತ್ ಮೊತ್ತ ಗುರಿ ಪಡೆದ ಟೀಂ ಇಂಡಿಯಾ

    ಖವಾಜಾ ಶತಕ, ಫಿಂಚ್ ಫಿಫ್ಟಿ – ಬೃಹತ್ ಮೊತ್ತ ಗುರಿ ಪಡೆದ ಟೀಂ ಇಂಡಿಯಾ

    ರಾಂಚಿ: ಸರಣಿ ಜೀವಂತವಾಗಿರಿಸಲು ಹೋರಾಟ ನಡೆಸುತ್ತಿರುವ ಆಸ್ಟ್ರೇಲಿಯಾ ತಂಡದ ಆಟಗಾರರು ಟೀಂ ಇಂಡಿಯಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ 313 ರನ್‍ಗಳ ಬಹೃತ್ ಮೊತ್ತದ ಸವಾಲು ನೀಡಿದ್ದಾರೆ.

    ಟಾಸ್ ಸೋತು ಬ್ಯಾಟಿಂಗ್ ಅವಕಾಶ ಪಡೆದ ಆಸೀಸ್ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 313 ರನ್ ಗಳಿಸಿದೆ. ಬ್ಯಾಟಿಂಗ್ ಇಳಿದ ಆಸೀಸ್ ಪಡೆ ಭರ್ಜರಿ ಆರಂಭವನ್ನು ಪಡೆಯಿತು. ಆಸೀಸ್ ನಾಯಕ ಆ್ಯರೋನ್ ಫಿಂಚ್ ಫಾರ್ಮ್ ಗೆ ಮರಳಿದರೆ, ಖವಾಜಾ ಶತಕ ಸಿಡಿಸಿ ಭಾರತ ನೆಲದಲ್ಲಿ ಮೊದಲ ಶತಕ ಸಿಡಿಸಿದ ಸಾಧನೆ ಮಾಡಿದರು.

    ಆರಂಭದಿಂದಲೂ ಟೀಂ ಇಂಡಿಯಾ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ ಆಸೀಸ್ ಆರಂಭಿಕ ಆಟಗಾರರು, ಬೌಲರ್ ಗಳನ್ನು ದಂಡಿಸುತ್ತಲೇ ಬ್ಯಾಟ್ ಬೀಸಿದರು. ಆ್ಯರೋನ್ ಫಿಂಚ್ ಹಾಗೂ ಖವಾಜಾ ಜೋಡಿ ಮೊದಲ ವಿಕೆಟ್‍ಗೆ ಬರೋಬ್ಬರಿ 193 ರನ್ ಗಳ ದಾಖಲೆಯ ಜೊತೆಯಾಟವನ್ನು ನೀಡಿದರು.

    ಮೊದಲ 50 ರನ್ ಗಳನ್ನು 9.5 ಓವರ್ ಗಳಲ್ಲಿ ಗಳಿಸಿದ ಆಸೀಸ್, 16.3 ಓವರ್ ಗಳಲ್ಲಿ 100 ರನ್ ಗಡಿ ದಾಟಿತು. ಫಿಂಚ್ 51 ಎಸೆತಗಳಲ್ಲಿ ಅರ್ಧ ಶತಕ ಪೂರ್ಣಗೊಳಿಸಿ ಏಕದಿನ ಕ್ರಿಕೆಟ್‍ನಲ್ಲಿ 19ನೇ ಅರ್ಧ ಶತಕ ಪೂರ್ಣಗೊಳಿಸಿದರು. ಇತ್ತ ಖವಾಜಾ 56 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದರು. ಟೀಂ ಇಂಡಿಯಾ ಬೌಲರ್ ಗಳ ಬೆವರು ಹರಿಸಿದ ಈ ಜೋಡಿ ಕೇದರ್ ಜಾಧವ್ ರ ಮೊದಲ 2 ಓವರ್ ಗಳಲ್ಲಿ 32 ರನ್ ಗಳಿಸಿತ್ತು. ಇತ್ತ ಬೌಲರ್ ಗಳು ವಿಕೆಟ್ ಪಡೆಯಲು ವಿಫಲವಾಗುತ್ತಿದ್ದರೆ, ಕಳಪೆ ಫೀಲ್ಡಿಂಗ್ ನಡೆಸಿ ಆಟಗಾರರು ಆಸೀಸ್ ರನ್ ವೇಗಕ್ಕೆ ಕಡಿವಾಣ ಹಾಕಲು ಪರದಾಡಿದರು. 24.4 ಓವರ್ ಗಳಲ್ಲೇ ಆಸೀಸ್ 150 ರನ್ ಗಡಿ ದಾಟಿತ್ತು.

    ಇತ್ತ ಉತ್ತಮವಾಗಿ ಆಡುತ್ತ ಶತಕದಂಚಿನಲ್ಲಿದ್ದ ಫಿಂಚ್ ರನ್ನು ಎಲ್‍ಬಿ ಬಲೆಗೆ ಕೆಡವಿದ ಕುಲ್ದೀಪ್ ಯಾದವ್ ಈ ಜೋಡಿಯನ್ನು ಬೇರ್ಪಡಿಸಲು ಯಶಸ್ವಿಯಾದರು. 99 ಎಸೆತ ಎದುರಿಸಿದ್ದ ಫಿಂಚ್ 10 ಬೌಂಡರಿ, 3 ಸಿಕ್ಸರ್ ನೆರವಿನಿಂದ 93 ರನ್ ಗಳಿಸಿ ನಿರ್ಗಮಿಸಿದರು. ಆ ಬಳಿಕ ಬಂದ ಮಾಕ್ಸ್ ವೆಲ್ ಕೂಡ ಬಿರುಸಿನ ಬ್ಯಾಟಿಂಗ್ ಆಡಿ ರನ್ ಗತಿಗೆ ಮತ್ತಷ್ಟು ವೇಗ ತುಂಬಿದರು. ಇತ್ತ ಖವಾಜಾ 107 ಎಸೆತಗಳಲ್ಲಿ ಶತಕ ಸಾಧನೆ ಮಾಡಿದರು. ಇದರ ಬೆನ್ನಲ್ಲೇ ಶಮಿ ಬೌಲಿಂಗ್‍ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಪಂದ್ಯದಲ್ಲಿ 113 ಎಸೆತಗಳನ್ನು ಎದುರಿಸಿದ ಖವಾಜಾ 11 ಬೌಂಡರಿ, ಸಿಕ್ಸರ್ ನೆರವಿನಿಂದ 104 ರನ್ ಗಳಿಸಿದರು.

    ಖವಾಜಾ ಔಟಾಗುತ್ತಿದಂತೆ ಬಿರುಸಿನ ಆಟವಾಡುತ್ತಿದ್ದ ಮ್ಯಾಕ್ಸ್ ವೆಲ್‍ಗೆ ರನೌಟ್‍ಗೆ ಬಲಿಯಾದ್ರು. 31 ಎಸೆತಗಳಲ್ಲಿ 47 ರನ್ ಗಳಿಸಿ ಮ್ಯಾಕ್ಸ್ ವೆಲ್ ಪೆವಿಲಿಯನ್‍ಗೆ ಮರಳಿದರು. ಆ ಬಳಿಕ ಬಂದ ಮಾರ್ಚ್ 7 ರನ್, ಹ್ಯಾಡ್ ಕಾಮ್ಸ್ ಶೂನ್ಯ ಸುತ್ತುವ ಮೂಲಕ ಬಂದಷ್ಟೇ ವೇಗದಲ್ಲಿ ಹಿಂದಿರುಗಿದರು. ಈ ಹಂತದಲ್ಲಿ ಟೀಂ ಇಂಡಿಯಾ ಬೌಲರ್ ಗಳು ಅಲ್ಪ ಯಶಸ್ಸು ಕಂಡರು ಕೂಡ ರನ್ ವೇಗಕ್ಕ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ.

    ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಟೋಯಿನ್ಸ್ 30 ರನ್ ಹಾಗೂ ಕ್ಯಾರಿ 21 ರನ್ ಗಳಿಸಿದರು. ಅಂತಿಮವಾಗಿ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 313 ರನ್ ಗಳಿಸಿ ಬೃಹತ್ ಗುರಿ ನೀಡಿತು. ಭಾರತದ ಪರ ಎಲ್ಲಾ ಬೌಲರ್ ಗಳು ಕೂಡ ದುಬಾರಿಯಾದರು. ಕುಲ್ದೀಪ್ 3 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಆಟಗಾರರು – ಪಂದ್ಯದ ಸಂಭಾವನೆ ಸೈನಿಕರ ನಿಧಿಗೆ

    ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಆಟಗಾರರು – ಪಂದ್ಯದ ಸಂಭಾವನೆ ಸೈನಿಕರ ನಿಧಿಗೆ

    ರಾಂಚಿ: ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಏಕದಿನ ಟೂರ್ನಿಯ 3ನೇ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟೀಂ ಇಂಡಿಯಾ ಆಟಗಾರರು ಪಂದ್ಯದಲ್ಲಿ ವಿಶೇಷ ಆರ್ಮಿ ಕ್ಯಾಪ್ ಧರಿಸಿ ಕಣಕ್ಕೆ ಇಳಿದಿದ್ದಾರೆ.

    ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಸೈನಿಕರಿಗೆ ಗೌರವ ನೀಡಲು ವಿಶೇಷವಾಗಿ ಭಾರತದ ಸೇನೆಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಕ್ಯಾಫ್ ಧರಿಸಲಾಗಿದೆ. ಪಂದ್ಯದಲ್ಲಿ ವಿಶೇಷ ಕ್ಯಾಪ್ ಧರಿಸಿ ಆಡುವುದು ಮಾತ್ರವಲ್ಲದೇ ಯೋಧರ ಮಕ್ಕಳ ಶಿಕ್ಷಣ, ಕುಟುಂಬಗಳ ನೆರವಿಗೆ ಧವಿಸುವ ರಾಷ್ಟ್ರೀಯ ರಕ್ಷಣಾ ನಿಧಿಗೆ ಹಣ ಸಂಗ್ರಹಿಸಲು ಕೂಡ ಟೀಂ ಇಂಡಿಯಾ ಮುಂದಾಗಿದೆ.

    ಈ ಪಂದ್ಯದ ಸಂಭಾವನೆಯನ್ನು ಟೀಂ ಇಂಡಿಯಾ ಎಲ್ಲಾ ಸಿಬ್ಬಂದಿ, ಆಟಗಾರರು ಕೂಡ ರಾಷ್ಟ್ರೀಯ ರಕ್ಷಣಾ ನಿಧಿಗೆ ನೀಡಲಿದ್ದಾರೆ. ಅಲ್ಲದೇ ದೇಶದ ನಾಗರಿಕರು ಕೂಡ ಸೈನಿಕರಿಗೆ ನೆರವು ನೀಡಿ ಎಂದು ಕೊಹ್ಲಿ ಮನವಿ ಮಾಡಿದ್ದಾರೆ.

    ಪಂದ್ಯದ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡದ ಎಲ್ಲಾ ಆಟಗಾರರಿಗೆ ಕ್ಯಾಪ್ ನೀಡಿದರು. ಈಗಾಗಲೇ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಪಡೆದಿರುವ ಟೀಂ ಇಂಡಿಯಾ ರಾಂಚಿ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಜಯಿಸುವ ಗುರಿ ಹೊಂದಿದೆ. ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತವರಿನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಚಾಲಕನಾದ ಧೋನಿ – ಭರ್ಜರಿ ಔತಣಕೂಟ

    ತವರಿನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಚಾಲಕನಾದ ಧೋನಿ – ಭರ್ಜರಿ ಔತಣಕೂಟ

    ರಾಂಚಿ: ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯ ಆಡಲು ಟೀಂ ಇಂಡಿಯಾ ರಾಂಚಿಗೆ ಬಂದಿಳಿದಿದ್ದು, ತವರು ನೆಲಕ್ಕೆ ಆಗಮಿಸಿರುವ ಟೀಂ ಇಂಡಿಯಾ ಆಟಗಾರರ ಕಾರನ್ನು ಸ್ವತಃ ಧೋನಿಯೇ ಡ್ರೈವ್ ಮಾಡಿದ್ದಾರೆ.

    ಧೋನಿ ಕಾರು ಡ್ರೈವ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಂಚಿ ವಿಮಾನ ನಿಲ್ದಾಣದಿಂದ ಆಟಗಾರರು ತಂಗುವ ಹೋಟೆಲ್ ವರೆಗೂ ಧೋನಿ ಡ್ರೈವ್ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಧೋನಿ ಪತ್ನಿ ಸಾಕ್ಷಿ ಧೋನಿ ಟೀಂ ಇಂಡಿಯಾ ಆಟಗಾರರಿಗೆ ಔತಣಕೂಟವನ್ನು ಆಯೋಜಿಸಿದ್ದು, ಧೋನಿಯ ಮನೆಯಲ್ಲಿ ನಡೆದ ಪಾರ್ಟಿಯಲ್ಲಿ ತಂಡದ ಬಹುತೇಕ ಸದಸ್ಯರು ಭಾಗವಹಿಸಿದ್ದರು. ಈ ಕುರಿತು ಸ್ಪಿನ್ ಬೌಲರ್ ಯಜುವೇಂದ್ರ ಚಹಲ್ ಫೋಟೋ ಟ್ವೀಟ್ ಮಾಡಿ ಧೋನಿ ಹಾಗೂ ಸಾಕ್ಷಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

    https://www.instagram.com/p/BuqatYHnER2/?utm_source=ig_embed&utm_campaign=embed_video_watch_again

    ಬುಧವಾರ ರಾಂಚಿಗೆ ಬಂದಿಳಿದ ಧೋನಿ ಸೇರಿದಂತೆ ಟೀಂ ಇಂಡಿಯಾ ಆಟಗಾರರಿಗೆ ಭರ್ಜರಿ ಸ್ವಾಗತ ನೀಡಲಾಗಿತ್ತು. 37 ವರ್ಷದ ಧೋನಿ ಸರಣಿಯ ಮೊದಲ ಪಂದ್ಯದಲ್ಲಿ ತಂಡ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಿ ಗೆಲುವಿಗೆ ಕಾರಣರಾಗಿದ್ದರು. ಆದರೆ 2ನೇ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗುವ ಮೂಲಕ 9 ವರ್ಷಗಳ ಬಳಿಕ ಗೋಲ್ಡನ್ ಡಕೌಟ್ ಆಗಿದ್ದರು.

    ಸದ್ಯ ಧೋನಿ ಟೀಂ ಇಂಡಿಯಾ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದು, 216 ಸಿಕ್ಸರ್ ಗಳೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಸರಣಿಯಲ್ಲಿ ಹೈದರಾಬಾದ್ ಹಾಗೂ ನಾಗ್ಪುರ ಏಕದಿನ ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಟೀ ಇಂಡಿಯಾ ಶುಕ್ರವಾರ ನಡೆಯಲಿರುವ 3ನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ಉದ್ದೇಶವನ್ನು ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಟುಂಬದ ಐವರನ್ನು ಕೊಲೆಗೈದು ಮನೆಗೆ ಬೆಂಕಿ ಹಚ್ಚಿದ..!

    ಕುಟುಂಬದ ಐವರನ್ನು ಕೊಲೆಗೈದು ಮನೆಗೆ ಬೆಂಕಿ ಹಚ್ಚಿದ..!

    ರಾಂಚಿ: ವ್ಯಕ್ತಿಯೊಬ್ಬ ತನ್ನ ಕುಟುಂಬದ ಐವರನ್ನು ಕೊಲೆ ಮಾಡಿದಲ್ಲದೆ ಮನೆಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಾರ್ಖಂಡ್‍ನ ಸೆರೈಕೇಲಾ ಜಿಲ್ಲೆಯಲ್ಲಿ ನಡೆದಿದೆ.

    ಚಿನ್ನು ಸೋರೇನ್(40) ಬಂಧಿತ ಆರೋಪಿ. ಚಿನ್ನು ಶುಕ್ರವಾರ ರಾತ್ರಿ ಕುಡಿದು ತನ್ನ ಪಕ್ಕದ ಮನೆಯಲ್ಲಿ ಇದ್ದನು. ಬಳಿಕ ಇಂದು ಬೆಳಗ್ಗೆ ತನ್ನ ಮನೆಗೆ ತೆರಳಿ ಹಿರಿಯ ಸಹೋದರ ರಬಿ ಮಂಜಿ(45)ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಚಿನ್ನು ತನ್ನ ಸಹೋದರನ ಮೇಲೆ ಹಲ್ಲೆ ಮಾಡಿದ ಬಳಿಕ ತನ್ನ ಅತ್ತಿಗೆ ಪಾರ್ವತಿ(30)ಯನ್ನು ಕೊಲೆ ಮಾಡಿದ್ದಾನೆ. ಅಲ್ಲದೆ ಆಕೆಯ ಮೂವರು ಮಕ್ಕಳಾದ ಜೀತನ್(15), ಸುರೇಶ್(13) ಹಾಗೂ ಪರೇಶ್(11) ನನ್ನು ಕೊಲೆ ಮಾಡಿದ್ದಾನೆ.

    ನಂತರ ಆರೋಪಿ ತನ್ನ ತಾಯಿ ಹಾಗೂ ಎರಡನೇ ಸಹೋದರ ಮೇಲೆ ಹಲ್ಲೆ ಮಾಡಿದ್ದಾನೆ. ಸದ್ಯ ಇವರಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿನ್ನು ಮನೆಯವರ ಮೇಲೆ ಹಲ್ಲೆ ಮಾಡಿದ ಬಳಿಕ ಮನೆಗೆ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸ್ ಅಧಿಕಾರಿ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

    ಪೊಲೀಸರು ಆರೋಪಿ ಚಿನ್ನು ಸೋರೇನ್‍ನನ್ನು ಬಂಧಿಸಿದ್ದಾರೆ. ಗ್ರಾಮಸ್ಥರ ಪ್ರಕಾರ ಆರೋಪಿ ಚಿನ್ನು ಸೋರೇನ್ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಈ ಕೊಲೆಗೆ ನಿಖರ ಕಾರಣ ಏನು ಎಂಬುದು ಅಧಿಕೃತವಾಗಿ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳೆಯನ್ನು ವಿವಸ್ತ್ರಗೊಳಿಸಿ ಬೆತ್ತಲೆಯಾಗಿ ಮೆರವಣಿಗೆ!

    ಮಹಿಳೆಯನ್ನು ವಿವಸ್ತ್ರಗೊಳಿಸಿ ಬೆತ್ತಲೆಯಾಗಿ ಮೆರವಣಿಗೆ!

    ರಾಂಚಿ: ಮಾಟಗಾತಿ ಎಂದು ತಿಳಿದು ಗ್ರಾಮಸ್ಥರು ಮಹಿಳೆಯ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ ಅಮಾನವೀಯ ಘಟನೆ ಜಾರ್ಖಂಡ್‍ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

    50 ವರ್ಷದ ಮಹಿಳೆ ಮಾಟಗಾತಿ ಎಂದು ಆರೋಪಿಸಿ ಮಹೇಶ್ ಲಿತಿ ಗ್ರಾಮದ ನಿವಾಸಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು 7 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

    ಸೋನಲಾಲ್ ಕಿಶ್ಕು ಎನ್ನುವರು ಭಾನುವಾರ ಬೆಳಗ್ಗೆ ರಾಜಕೀಯದ ರ್ಯಾಲಿಯಲ್ಲಿ ಭಾಗವಹಿಸಿದ್ದರು. ರ್ಯಾಲಿ ಮುಗಿಸಿ ಹಿಂದಿರುಗುವಾಗ ಸೋನಲಾಲ್ ಬಸ್ಸಿನ ಸೀಟ್‍ನಲ್ಲೇ ಪ್ರಾಣ ಬಿಟ್ಟಿದ್ದಾನೆ. ಸೋನಲಾಲ್ ಕಾಯಿಲೆಯಿಂದ ಮೃತಪಟ್ಟಿದ್ದನು. ಆದರೆ ಆತ ಮಾಟಮಂತ್ರದಿಂದ ಮೃತಪಟ್ಟಿದ್ದಾನೆ. ಮೃತನ ಹಿರಿಯ ಸಹೋದರನ ಪತ್ನಿ ಮಾಟಮಂತ್ರ ಮಾಡಿ ಈ ಕೆಲಸ ಮಾಡಿದ್ದಾಳೆಂದು ಗ್ರಾಮಸ್ಥರು ಆರೋಪಿಸಿ ಆಕೆಯ ಮಗಳು ಹಾಗೂ ಸೊಸೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಎಸ್‍ಐ ಸಂತೋಷ್ ಕುಮಾರ್ ಹೇಳಿದ್ದಾರೆ.

    ಹಲ್ಲೆ ಮಾಡಿದ ಬಳಿಕ ಗ್ರಾಮಸ್ಥರು ಮಹಿಳೆಯನ್ನು ಬೆತ್ತಲೆಗೊಳಿಸಿ ಊರು ತುಂಬಾ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಮಹಿಳೆ ಹಾಗೂ ಆಕೆಯ ಮಗಳನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಏಳು ಜನರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಗೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಿಕ್‍ನಿಕ್‍ಗೆಂದು ಕರೆದು ಗೆಳೆಯನಿಂದ್ಲೇ ಅಪ್ರಾಪ್ತೆಯರ ಮೇಲೆ 7ದಿನ ಅತ್ಯಾಚಾರ..!

    ಪಿಕ್‍ನಿಕ್‍ಗೆಂದು ಕರೆದು ಗೆಳೆಯನಿಂದ್ಲೇ ಅಪ್ರಾಪ್ತೆಯರ ಮೇಲೆ 7ದಿನ ಅತ್ಯಾಚಾರ..!

    ರಾಂಚಿ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಏಳು ದಿನಗಳ ಕಾಲ ಕೂಡಿಹಾಕಿ ಅತ್ಯಾಚಾರ ಮಾಡಲಾಗಿದೆ. ಈ ಸಂಬಂಧ ಶುಕ್ರವಾರ ಟಾಟಿಸಿಲ್ವಾಯಿ ಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    ಈ ಘಟನೆ ಜಾರ್ಖಂಡ್‍ನ ಟಾಟಿಸಿಲ್ವಾಯಿನಲ್ಲಿ ನಡೆದಿದ್ದು, ಆರೋಪಿಗಳಲ್ಲಿ ಓರ್ವನನ್ನು ಟಾಟಿಸಿಲ್ವಾಯಿ ನಿವಾಸಿ ಮನೀಶ್ ಕುಮಾರ್ ಎಂದು ಗುರುತಿಸಲಾಗಿದೆ. 13 ಮತ್ತು 16 ವಯಸ್ಸಿನ ಅಪ್ರಾಪ್ತ ಬಾಲಕಿಯರ ಮೇಲೆ ಒಂದು ವಾರದವರೆಗೂ ಅತ್ಯಾಚಾರ ಎಸಗಿದ್ದಾನೆ.

    ಘಟನೆ ವಿವರ:
    ಜನವರಿ 2ರಂದು ಸಂತ್ರಸ್ತೆಯರಿಬ್ಬರು ಕಾಣೆಯಾಗಿದ್ದು, ಈ ಬಗ್ಗೆ ಜನವರಿ 7 ರಂದು ಸಂತ್ರಸ್ತೆಯ ತಾಯಿ ಜಗನ್ನಾಥಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಬಾಲಕಿಯರ ತಾಯಿಯ ಹೇಳಿಕೆಯ ಮೇರೆಗೆ ಎಫ್‍ಐಆರ್ ದಾಖಲಿಸಿಕೊಂಡಿದ್ದೆವು ಎಂದು ಜಗನ್ನಾಥ್ಪುರ ಪೊಲೀಸ್ ಠಾಣೆಯ ಅಧಿಕಾರಿ ಅನಿಲ್ ಕರ್ಮಕರ್ ಹೇಳಿದ್ದಾರೆ.

    ಆರೋಪಿಗಳಲ್ಲಿ ಒಬ್ಬ ನಮ್ಮ ಸ್ನೇಹಿತನಾಗಿದ್ದನು ಎಂದು ಸಂತ್ರಸ್ತೆಯರು ಹೇಳಿದ್ದಾರೆ. ಆತ ಜನವರಿ 2ರಂದು ಟಾಟಿಸಿಲ್ವಾಯಿಯಲ್ಲಿ ನಾವು ಪಿಕ್‍ನಿಕ್ ಮಾಡುತ್ತಿದ್ದೇವೆ ನೀವು ಬಂದು ಸೇರಿಕೊಳ್ಳಿ ಎಂದು ಕರೆದಿದ್ದಾನೆ. ಅದರಂತೆಯೇ ಇಬ್ಬರೂ ಬಾಲಕಿಯರು ಆತ ಹೇಳಿದ ಸ್ಥಳಕ್ಕೆ ಹೋಗಿದ್ದಾರೆ. ಅಲ್ಲಿ ಅವರಿಬ್ಬರನ್ನು ಕೂಡಿಹಾಕಿ ಏಳು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಎಸ್.ಪಿ. ಅಶುತೋಷ್ ಶೇಖರ್ ತಿಳಿಸಿದ್ದಾರೆ.

    ಇತ್ತ ಕಾಣೆಯಾದ ಬಾಲಕಿಯರ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡಿದ್ದು, ಅವರ ಹುಡುಕಾಟಕ್ಕಾಗಿ ಒಂದು ತಂಡವನ್ನು ಪೊಲೀಸರು ನಿಯೋಜಿಸಿದ್ದರು. ಬಳಿಕ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯಕ್ಕೆ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳುತ್ತಾರೆ. ಈ ಕುರಿತು ಪೋಕ್ಸೋ ಕಾಯ್ಡೆಯಡಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 6 ಮಂದಿ, 2 ದಿನ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‍ರೇಪ್

    6 ಮಂದಿ, 2 ದಿನ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‍ರೇಪ್

    ರಾಂಚಿ: 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಆರು ಮಂದಿ ಕಾಮುಕರು ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್‍ನ ಚಕ್ರಧರ್ಪುರದಲ್ಲಿ ನಡೆದಿದೆ.

    ಸಂತ್ರಸ್ತೆ ಒಡಿಶಾದ ರೌರ್ಕೆಲಾದ ಮೂಲದವಳಾಗಿದ್ದು, ಆಕೆಯ ಸಹೋದರನ ಸ್ನೇಹಿತ ಆಕೆಯನ್ನು ಅಪಹರಿಸಿ ಚಕ್ರಧರ್ಪುರದ ಲೋಟಪಹಾರ್ ಪ್ರದೇಶದ ಒಂದು ಮನೆಯಲ್ಲಿ ಕೂಡಿ ಹಾಕಿದ್ದಾನೆ. ಬಳಿಕ ಆತನೊಂದಿಗೆ ಐವರು ಸೇರಿಕೊಂಡು ಎರಡು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ನಂತರ ಜನವರಿ 1ರಂದು ವಿದ್ಯಾರ್ಥಿನಿಯನ್ನು ಸಮೀಪದ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದಾರೆ.

    ಘಟನೆ ವಿವರ:
    ಸಂತ್ರಸ್ತೆ ಡಿಸೆಂಬರ್ 30 ರಂದು ಜಾರ್ಸಗುಡದಲ್ಲಿರುವ ತನ್ನ ಮನೆಗೆ ತೆರಳಲೆಂದು ರೈಲ್ವೆ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಈ ವೇಳೆ ಸಹೋದರನ ಸ್ನೇಹಿತ ಸಂತ್ರಸ್ತೆಯನ್ನು ಭೇಟಿಯಾಗಿ ಮಾತನಾಡಿಸಿ ಮನೆಗೆ ಹೋಗಲು ತನ್ನೊಂದಿಗೆ ಬೇರೆ ರೈಲು ಹತ್ತುವಂತೆ ಹೇಳಿದ್ದಾನೆ. ಅದರಂತೆಯೇ ಸಂತ್ರಸ್ತೆ ಆತನ ಜೊತೆ ರೈಲು ಹತ್ತಿದ್ದಾಳೆ. ಆದ್ರೆ ತಾನು ಹೋಗುತ್ತಿರುವ ರೈಲು ತನ್ನ ಮನೆಯ ಚಕ್ರಧರ್ಪುರದ ಕಡೆಗೆ ಹೋಗುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಆಗ ಆರೋಪಿ ಸ್ನೇಹಿತ ಜಾರ್ಖಂಡ್‍ನ ಲೋಟಪಹಾರ್ ರೈಲ್ವೆ ನಿಲ್ದಾಣದಲ್ಲಿ ಕೆಳಗಿಳಿದು ಅಲ್ಲಿಂದ ಬಸ್ಸಿನಲ್ಲಿ ಮನೆಗೆ ಹೋಗಬೇಕೆಂದು ಹೇಳಿದ್ದಾನೆ ಎಂದು ರೌರ್ಕೆಲಾ ಎಸ್‍ಪಿ ಅಜಯ್ ಪ್ರತಾಪ್ ಸ್ವೈನ್ ಅವರು ಹೇಳಿದ್ದಾರೆ.

    ಸಂತ್ರಸ್ತೆ ಲೋಟಪಾಹಾರ್ ತಲುಪಿದ ನಂತರ ಆರೋಪಿ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಈತನ ಜೊತೆ ಐದು ಮಂದಿ ಸೇರಿಕೊಂಡು ಎರಡು ದಿನಗಳ ಕಾಲ ಕೂಡಿಹಾಕಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಸಂತ್ರಸ್ತೆಯನ್ನು ಸಮೀಪದ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದಾರೆ. ಬಳಿಕ ಎಚ್ಚರಗೊಂಡ ಸಂತ್ರಸ್ತೆ ಸ್ಥಳೀಯ ಠಾಣೆಗೆ ತೆರಳಿ ನಡೆದ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.

    ಸದ್ಯಕ್ಕೆ ಸಂತ್ರಸ್ತೆ ರೂರ್ಕೆಲಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ತನಿಖೆ ಮಾಡಲು ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಇದುವರೆಗೂ ಯಾರನ್ನು ಕೂಡ ಬಂಧಿಸಿಲ್ಲ ಎಂದು ಎಸ್‍ಪಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 7 ವರ್ಷದ ಬಾಲಕಿ ಮೇಲೆ 9ರ ಬಾಲಕನಿಂದ ಅತ್ಯಾಚಾರ..!

    7 ವರ್ಷದ ಬಾಲಕಿ ಮೇಲೆ 9ರ ಬಾಲಕನಿಂದ ಅತ್ಯಾಚಾರ..!

    ರಾಂಚಿ: ಜಾರ್ಖಂಡ್‍ನ ಸಿಂಗ್ಬಾಮ್ ಜಿಲ್ಲೆಯಲ್ಲಿ 9 ವರ್ಷದ ಬಾಲಕನೊಬ್ಬ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಸಿಂಗ್ಬಾಮ್ ಜಿಲ್ಲೆಯ ಬ್ಯಾಗ್ಬೆರಾ ಪ್ರದೇಶದಲ್ಲಿ ಡಿ. 12ರಂದು ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಅಜ್ಜ-ಅಜ್ಜಿ ಪೊಲೀಸರಿಗೆ ಕಳೆದ ಭಾನುವಾರದಂದು ದೂರು ನೀಡಿದ್ದಾರೆ. ಕೆಲವು ದಿನಗಳಿಂದ ಬಾಲಕಿಯ ವರ್ತನೆಯಲ್ಲಿ ವ್ಯತ್ಯಾಸ ಕಂಡು ಅಜ್ಜಿ ವಿಚಾರಿಸಿದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಅಪ್ರಾಪ್ತ ಬಾಲಕನ ಮೇಲೆ ಬ್ಯಾಗ್ಬೆರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಈಗಾಗಲೇ ಆರೋಪಿ ಬಾಲಕನನ್ನು ಜುವೆನೈಲ್ ನ್ಯಾಯಾಂಗ ಮಂಡಳಿ(Juvenile Justice Board) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪುಷ್ಪಾ ರಾಣಿ ಟಿರ್ಕಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಸದ್ಯ ಅಪ್ರಾಪ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ಈಗಾಗಲೇ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಆರೋಪ ಸಾಬೀತಾದರೆ ಬಾಲಕನಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಪೊಲೀಸ್ ಹಿರಿಯ ಅಧಿಕಾರಿ ಆಲೋಕ್ ರಾಜನ್ ತಿಳಿಸಿದ್ದಾರೆ.

    ಈ ಹಿಂದೆ ಬೋಪಾಲ್‍ನಲ್ಲಿ ಕೂಡ 8 ವರ್ಷದ ಬಾಲಕಿ ಮೇಲೆ ಆಕೆಯ ತರಗತಿಯಲ್ಲಿ ಓದುತ್ತಿದ್ದ ಬಾಲಕ ಹಾಗೂ ಇನ್ನೋರ್ವ ಸೇರಿ ಆಕೆಯ ಮನೆಯ ಬಳಿಯೇ ಅತ್ಯಾಚಾರ ಮಾಡಿದ್ದ ಪ್ರಕರಣ ದಾಖಲಾಗಿತ್ತು. ಅಲ್ಲದೆ ಇಬ್ಬರು ಆರೋಪಿ ಬಾಲಕರ ವಿರುದ್ಧ ಐಪಿಸಿ ಸೆಕ್ಷನ್ 376 ಹಾಗೂ ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಧೋನಿ ರಣಜಿ ಆಡುವುದು ಒಳ್ಳೆ ಚಿಂತನೆ ಅಲ್ಲ : ಜಾರ್ಖಂಡ್ ಕೋಚ್

    ಧೋನಿ ರಣಜಿ ಆಡುವುದು ಒಳ್ಳೆ ಚಿಂತನೆ ಅಲ್ಲ : ಜಾರ್ಖಂಡ್ ಕೋಚ್

    ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಆಸೀಸ್ ಟೂರ್ನಿಯಲ್ಲಿ ಭಾಗವಹಿಸದ ಕಾರಣ ರಣಜಿ ಪಂದ್ಯದಲ್ಲಿ ಆಡಬೇಕಿತ್ತು ಎಂದು ಟೀಕೆ ಮಾಡಿದ್ದ ವಿಶ್ಲೇಷಕರಿಗೆ ಜಾರ್ಖಂಡ್ ತಂಡಧ ಕೋಚ್ ಉತ್ತರಿಸಿದ್ದು, ಇದು ಯುವ ಕ್ರಿಕೆಟ್ ಆಟಗಾರರ ಮೇಲೆ ಪರಿಣಾಮ ಉಂಟು ಮಾಡುತ್ತದೆ ಎಂದು ತಿಳಿಸಿದ್ದಾರೆ.

    ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಕೋಚ್ ರಾಜೀವ್ ಕುಮಾರ್, ಧೋನಿ ರಣಜಿ ಕ್ರಿಕೆಟ್ ಆಡುವುದು ಒಳ್ಳೆಯ ಚಿಂತನೆ ಅಲ್ಲ. ಏಕೆಂದರೆ ಹಲವು ಯುವ ಆಟಗಾರರು ಪಂದ್ಯದಲ್ಲಿ ಆಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿ ಆಯ್ಕೆಗಾರರ ಗಮನ ಸೆಳೆಯಲು ಶ್ರಮಿಸುತ್ತಿದ್ದಾರೆ. ಆದರೆ ಧೋನಿ ಆಡುವುದರಿಂದ ಯುವ ಆಟಗಾರರ ಅವಕಾಶ ಕೈ ತಪ್ಪುತ್ತದೆ ಎಂದು ತಿಳಿಸಿದ್ದಾರೆ.

    ಧೋನಿ ಯುವ ಆಟಗಾರರ ಬಗ್ಗೆ ಸಾಕಷ್ಟು ಆಸಕ್ತಿ ವಹಿಸಿದ್ದು ತರಬೇತಿ ವೇಳೆ ಹಲವು ಬಾರಿ ಹಾಜರಿದ್ದು, ಬ್ಯಾಟಿಂಗ್ ಸೇರಿದಂತೆ ಹಲವು ವಿಚಾರಗಳಲ್ಲಿ ಸಲಹೆ ನೀಡಿದ್ದಾರೆ. ಇದರಿಂದ ಆಟಗಾರರ ಪ್ರದರ್ಶನ ಶೈಲಿಯೇ ಬದಲಾಗಿದೆ. ಇದು ಆಟಗಾರರಿಗೆ ಮತ್ತಷ್ಟು ಸಹಕಾರಿ ಆಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಟೀಂ ಇಂಡಿಯಾ ಮಾಜಿ ನಾಯಕ ಸುನೀಲ್ ಗವಾಸ್ಕರ್, ಧೋನಿ ಹಾಗೂ ಶಿಖರ್ ಧವನ್ ಆಸೀಸ್ ಟೂರ್ನಿಯಲ್ಲಿ ಭಾಗವಹಿಸದಿದ್ದರು ಯಾಕೆ ರಣಜಿ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದರು.

    ಧೋನಿ ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗಿರಲಿಲ್ಲ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಟೆಸ್ಟ್ ಟೂರ್ನಿ ಆಡಿಲ್ಲ. ಅಂದರೆ ಅಕ್ಟೋಬರ್ ನಿಂದ ಮುಂದಿನ ಜನವರಿ ವರೆಗೂ ಧೋನಿ ಟೀಂ ಇಂಡಿಯಾ ಪರ ಆಡಿಲ್ಲ. ಅದ್ದರಿಂದ ರಣಜಿ ಟೂರ್ನಿಯಲ್ಲಿ ಧೋನಿ ಭಾಗವಹಿಸಬೇಕಿತ್ತು. ಒಂದೊಮ್ಮೆ ಆಸೀಸ್ ಹಾಗೂ ಮುಂದಿನ ನ್ಯೂಜಿಲೆಂಡ್ ಸರಣಿಯಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡದಿದ್ದರೆ, ಮುಂದಿನ ವಿಶ್ವಕಪ್ ತಂಡಕ್ಕೆ ಧೋನಿ ಆಯ್ಕೆ ಮಾಡುವ ಪ್ರಶ್ನೆ ಉದ್ಭವಿಸುತ್ತದೆ. ಆಟದಲ್ಲಿ ಹೆಚ್ಚಿನ ಸಮಯ ವಿಶ್ರಾಂತಿ ತೆಗೆದುಕೊಳ್ಳುವುದು ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ ಎಂದು ಸುನೀಲ್ ಗವಾಸ್ಕರ್ ಹೇಳಿದ್ದರು.

    ಉಳಿದಂತೆ ಜನವರಿ 12 ರಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಧೋನಿ ಭಾಗವಹಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶವವನ್ನು ಕುಕ್ಕಿ ಕುಕ್ಕಿ ತಿಂದ ನರಭಕ್ಷಕ ಕಾಗೆ

    ಶವವನ್ನು ಕುಕ್ಕಿ ಕುಕ್ಕಿ ತಿಂದ ನರಭಕ್ಷಕ ಕಾಗೆ

    ರಾಂಚಿ: ಜಾರ್ಖಂಡ್‍ನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ರಿಮ್ಸ್ ಆಸ್ಪತ್ರೆಯಲ್ಲಿ ಶವಗಾರದ ಮುಂದೆ ಇರಿಸಿದ್ದ ಶವವನ್ನು ಕಾಗೆಯೊಂದು ಕುಕ್ಕಿ ಕುಕ್ಕಿ ತಿಂದಿದೆ.

    ಮಂಗಳವಾರ ಬೆಳಗ್ಗೆ ರಾಂಚಿಯ ಮಾರ್ಕೆಟ್ ಬಳಿಯ ಛಾಂದ್ರಿ ಕೆರೆಯಲ್ಲಿ ಅನಾಥ ಶವವೊಂದು ಪತ್ತೆಯಾಗಿತ್ತು. ಪೊಲೀಸರು ಆ ಶವವನ್ನು ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ತಂದಿದ್ದರು. ಆಸ್ಪತ್ರೆಯ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಮುಗಿಸಿ ಬರಲು ಪೊಲೀಸರು ಶವವನ್ನು ಶವಗಾರದ ಮುಂದೆ ಇರಿಸಿ ತೆರಳಿದ್ದಾರೆ. ಈ ವೇಳೆ ಕಾಗೆಯೊಂದು ಶವದ ಮೇಲೆ ಕೂತು ಮೃತನ ತಲೆ ಭಾಗದ ಮಾಂಸವನ್ನು ಕುಕ್ಕಿ ಕುಕ್ಕಿ ತಿಂದಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ರಿಮ್ಸ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಈ ತರಹದ ಘಟನೆಗಳು ಮುಂದೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಆಸ್ಪತ್ರೆಯಲ್ಲಿ ಕಾಗೆ ಶವವನ್ನು ತಿನ್ನುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕಾಗೆ ವಿಡಿಯೋ ವೈರಲ್ ಆಗಿದ್ದು, ಇದನ್ನು ನೋಡಿ ಜನ ಎಂಥಾ ಕಾಲ ಬಂತಪ್ಪಾ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv