Tag: Randeep Hooda

  • ‘ಲಾಪತಾ ಲೇಡಿಸ್’ ಬೆನ್ನಲ್ಲೇ ಆಸ್ಕರ್‌ಗೆ ಪ್ರವೇಶ ಪಡೆದ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರ

    ‘ಲಾಪತಾ ಲೇಡಿಸ್’ ಬೆನ್ನಲ್ಲೇ ಆಸ್ಕರ್‌ಗೆ ಪ್ರವೇಶ ಪಡೆದ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರ

    ‘ಲಾಪತಾ ಲೇಡಿಸ್’ (Laapataa Ladies) ಬೆನ್ನಲ್ಲೇ ಬಾಲಿವುಡ್ ನಟ ರಣ್‌ದೀಪ್ ಹೂಡಾ (Randeep Hooda) ನಟಿಸಿ, ನಿರ್ದೇಶಿಸಿರುವ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರವು ಅಧಿಕೃತವಾಗಿ 2025ರ (Oscar 2025) ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಇದನ್ನೂ ಓದಿ:ಹಿಂದಿ ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಾರಾ ಮಹೇಶ್ ಬಾಬು ಸಂಬಂಧಿ?

     

    View this post on Instagram

     

    A post shared by SANDEEP SINGH (@officialsandipssingh)

    ಆಮೀರ್‌ ಖಾನ್‌ ನಿರ್ಮಾಣದ ‘ಲಾಪತಾ ಲೇಡಿಸ್‌’ ಚಿತ್ರ ಆಸ್ಕರ್‌ ಆಯ್ಕೆಯಾದ ಬೆನ್ನಲ್ಲೇ ಈಗ ಈ ಸಿನಿಮಾ ಆಸ್ಕರ್ 2025ಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ‍್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ರಣ್‌ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ (Ankitha Lokhande) ನಟಿಸಿದ್ದರು. ಈ ಚಿತ್ರ ಕಳೆದ ವರ್ಷ 2024ರಲ್ಲಿ ತೆರೆಕಂಡಿತ್ತು.

    ಈ ಸಿನಿಮಾವೀಗ ಆಸ್ಕರ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಚಿತ್ರದ ನಿರ್ಮಾಪಕ ಸಂದೀಪ್ ಈ ಖುಷಿಯ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಗೌರವ ಹಾಗೂ ವಿನಮ್ರತೆ, ನಮ್ಮ ಸಿನಿಮಾ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಅಧಿಕೃತವಾಗಿ ಆಸ್ಕರ್‌ಗೆ ಆಯ್ಕೆಯಾಗಿದೆ. ಈ ಚಿತ್ರವನ್ನು ಗುರುತಿಸಿದ ‘Film Federation Of India’ ತಂಡಕ್ಕೆ ಧನ್ಯವಾದಗಳು. ನಮ್ಮನ್ನು ಬೆಂಬಲಿಸಿದವರಿಗೂ ಧನ್ಯವಾದಗಳು ಎಂದಿದ್ದಾರೆ.

  • ಸಾವರ್ಕರ್ ಪತ್ನಿ ಪಾತ್ರಕ್ಕೆ ನಯಾಪೈಸ್ ಸಂಭಾವನೆ ಪಡೆಯದ ಅಂಕಿತಾ

    ಸಾವರ್ಕರ್ ಪತ್ನಿ ಪಾತ್ರಕ್ಕೆ ನಯಾಪೈಸ್ ಸಂಭಾವನೆ ಪಡೆಯದ ಅಂಕಿತಾ

    ಬಿಗ್ ಬಾಸ್ ಸ್ಪರ್ಧಿ ಹಾಗೂ ಹೆಸರಾಂತ ನಟಿ ಅಂಕಿತಾ ಲೋಖಂಡೆ (Ankita Lokhande) ದುಡ್ಡು ತಗೆದುಕೊಳ್ಳದೇ ಯಾವುದೇ ಕೆಲಸ ಮಾಡುವುದಿಲ್ಲ ಎನ್ನುವ ಮಾತಿತ್ತು. ಆದರೆ, ಅವರು ಅದನ್ನು ಸುಳ್ಳು ಮಾಡಿದ್ದಾರೆ. ವೀರ ಸಾವರ್ಕರ್ ಸಿನಿಮಾಗಾಗಿ ಅವರು ಸಂಭಾವನೆಯಾಗಿ ನಯಾಪೈಸೆ ಕೂಡ ಪಡೆದಿಲ್ಲವೆಂದು ನಿರ್ಮಾಪಕರು ತಿಳಿಸಿದ್ದಾರೆ. ಸಾವರ್ಕರ್ ಪತ್ನಿ ಪಾತ್ರ ಅಂದಾಗ, ನನ್ನದೊಂದು ಬೇಡಿಕೆ ಇದೆ ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಎಂದರಂತೆ ಅಂಕಿತಾ.

    ನಟಿ ಇಟ್ಟ ಬೇಡಿಕೆ ಏನಿರಬಹುದು ಎನ್ನುವ ಗೊಂದಲ ನಿರ್ಮಾಪಕರಿಗೆ ಆಗಿತ್ತಂತೆ. ಆದರೆ, ಈ ಸಿನಿಮಾಗಾಗಿ ನಾನು ಯಾವುದೇ ಸಂಭಾವನೆ ಪಡೆಯುವುದಿಲ್ಲ. ಉಚಿತವಾಗಿ ನಟಿಸುತ್ತೇನೆ. ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಅಂದರಂತೆ ಅಂಕಿತಾ. ಇದು ನಟಿ ಬದ್ಧತೆ ಎಂದು ನಿರ್ಮಾಪಕರು ಹೇಳಿದ್ದಾರೆ.

    ನಾನಾ ಕಾರಣಗಳಿಂದ ಅತೀ ನಿರೀಕ್ಷೆ ಮೂಡಿಸಿದ್ದ ‘ಸ್ವಾತಂತ್ರ ವೀರ್ ಸಾವರ್ಕರ್’ (Savarkar) ಸಿನಿಮಾ ಇತ್ತೀಚೆಷ್ಟೇ ಬಿಡುಗಡೆ ಆಗಿದೆ. ಆದರೆ, ಅಂದುಕೊಂಡಷ್ಟು ಚಿತ್ರಕ್ಕೆ ಪ್ರತಿಕ್ರಿಯೆ ಸಿಕ್ಕಿಲ್ಲ ಎನ್ನುವುದು ಬಾಕ್ಸ್ ಆಫೀಸಿಗೆ (Box Office) ಹರಿದು ಬಂದ ಹಣವೇ ಹೇಳುತ್ತಿದೆ. ಮೊದಲ ದಿನದ ಕಲೆಕ್ಷನ್ 1.15 ಲಕ್ಷ ರೂಪಾಯಿ ಬಂದಿತ್ತು. ನಂತರದ ದಿನಗಳಲ್ಲಿ ಅಷ್ಟೇನೂ ಈ ಪ್ರಮಾಣ ಏರಿಲ್ಲ.

    ವಿವಾದಿತ ಚಿತ್ರಗಳು ಬಂದಾಗ ಜನರು ಅದನ್ನು ಮುಗಿಬಿದ್ದು ನೋಡಿ ಬಾಕ್ಸ್ ಆಫೀಸ್ ಕೂಡ ತುಂಬಿಸಿದ್ದಾರೆ. ಅದರಲ್ಲೂ ದಿ ಕಾಶ್ಮೀರ ಫೈಲ್ಸ್, ದಿ ಕೇರಳ ಸ್ಟೋರಿ ಚಿತ್ರಗಳನ್ನು ಸಖತ್ತಾಗಿಯೇ ಪ್ರೇಕ್ಷಕರಿಗೆ ಪ್ರಮೋಟ್ ಮಾಡಿದರು. ಆದರೆ, ವೀರ ಸಾವರ್ಕರ್ ಚಿತ್ರವನ್ನು ಅಷ್ಟಾಗಿ ಪ್ರೇಕ್ಷಕರು ಅಪ್ಪಿಕೊಂಡಿಲ್ಲ.

     

    ರಣ್ ದೀಪ್ ಹೂಡ (Randeep Hooda) ನಿರ್ದೇಶನದ ಹಾಗೂ ನಟನೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರ್ದೇಶಕರ ಕೆಲಸವನ್ನು ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ.  ರಣ್ ದೀಪ್ ಈ ಸಿನಿಮಾದಲ್ಲಿ ಸಾವರ್ಕರ್ ಪಾತ್ರ ಮಾಡಿದ್ದರೆ, ಅವರ ಪತ್ನಿಯಾಗಿ ಅಂಕಿತಾ ಲೋಖಂಡೆ ನಟಿಸಿದ್ದಾರೆ. ಕಲಾ ನಿರ್ದೇಶಕರು ಆ ಕಾಲವನ್ನು ಚಿತ್ರದಲ್ಲಿ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಆದರೂ, ಪ್ರೇಕ್ಷಕ ಮಾತ್ರ ತುಂಬಿದ ಪ್ರದರ್ಶನಕ್ಕೆ ಸಾಕ್ಷಿಯಾಗಿಲ್ಲ.

  • ‘ಸಾವರ್ಕರ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ: ಬಾಕ್ಸ್ ಆಫೀಸಿಗೆ ಬಂದಿದ್ದೆಷ್ಟು?

    ‘ಸಾವರ್ಕರ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ: ಬಾಕ್ಸ್ ಆಫೀಸಿಗೆ ಬಂದಿದ್ದೆಷ್ಟು?

    ನಾನಾ ಕಾರಣಗಳಿಂದ ಅತೀ ನಿರೀಕ್ಷೆ ಮೂಡಿಸಿದ್ದ ‘ಸ್ವಾತಂತ್ರ ವೀರ್ ಸಾವರ್ಕರ್’ (Savarkar) ಸಿನಿಮಾ ನಿನ್ನೆಯಷ್ಟೇ ಬಿಡುಗಡೆ ಆಗಿದೆ. ಆದರೆ, ಅಂದುಕೊಂಡಷ್ಟು ಚಿತ್ರಕ್ಕೆ ಪ್ರತಿಕ್ರಿಯೆ ಸಿಕ್ಕಿಲ್ಲ ಎನ್ನುವುದು ಬಾಕ್ಸ್ ಆಫೀಸಿಗೆ (Box Office) ಹರಿದು ಬಂದ ಹಣವೇ ಹೇಳುತ್ತಿದೆ. ಮೊದಲ ದಿನದ ಕಲೆಕ್ಷನ್ 1.15 ಲಕ್ಷ ರೂಪಾಯಿ ಬಂದಿದೆ ಎಂದು ಅಂದಾಜಿಸಲಾಗಿದೆ.

    ವಿವಾದಿತ ಚಿತ್ರಗಳು ಬಂದಾಗ ಜನರು ಅದನ್ನು ಮುಗಿಬಿದ್ದು ನೋಡಿ ಬಾಕ್ಸ್ ಆಫೀಸ್ ಕೂಡ ತುಂಬಿಸಿದ್ದಾರೆ. ಅದರಲ್ಲೂ ದಿ ಕಾಶ್ಮೀರ ಫೈಲ್ಸ್, ದಿ ಕೇರಳ ಸ್ಟೋರಿ ಚಿತ್ರಗಳನ್ನು ಸಖತ್ತಾಗಿಯೇ ಪ್ರೇಕ್ಷಕರಿಗೆ ಪ್ರಮೋಟ್ ಮಾಡಿದರು. ಆದರೆ, ವೀರ ಸಾವರ್ಕರ್ ಚಿತ್ರವನ್ನು ಅಷ್ಟಾಗಿ ಪ್ರೇಕ್ಷಕರು ಅಪ್ಪಿಕೊಂಡಿಲ್ಲ.

     

    ರಣ್ ದೀಪ್ ಹೂಡ (Randeep Hooda) ನಿರ್ದೇಶನದ ಹಾಗೂ ನಟನೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರ್ದೇಶಕರ ಕೆಲಸವನ್ನು ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ.  ರಣ್ ದೀಪ್ ಈ ಸಿನಿಮಾದಲ್ಲಿ ಸಾವರ್ಕರ್ ಪಾತ್ರ ಮಾಡಿದ್ದರೆ, ಅವರ ಪತ್ನಿಯಾಗಿ ಅಂಕಿತಾ ಲೋಖಂಡೆ ನಟಿಸಿದ್ದಾರೆ. ಕಲಾ ನಿರ್ದೇಶಕರು ಆ ಕಾಲವನ್ನು ಚಿತ್ರದಲ್ಲಿ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಆದರೂ, ಪ್ರೇಕ್ಷಕ ಮಾತ್ರ ತುಂಬಿದ ಪ್ರದರ್ಶನಕ್ಕೆ ಸಾಕ್ಷಿಯಾಗಿಲ್ಲ.

  • ಸಾವರ್ಕರ್ ಪಾತ್ರಕ್ಕೆ ಭಾರೀ ತೂಕ ಇಳಿಸಿಕೊಂಡ ರಣದೀಪ್ ಹೂಡಾ

    ಸಾವರ್ಕರ್ ಪಾತ್ರಕ್ಕೆ ಭಾರೀ ತೂಕ ಇಳಿಸಿಕೊಂಡ ರಣದೀಪ್ ಹೂಡಾ

    ಬಾಲಿವುಡ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ತಮ್ಮ ಪಾತ್ರಕ್ಕಾಗಿ ಬರೋಬ್ಬರಿ 30 ಕೆಜಿ ತೂಕವನ್ನು ಇಳಿಸಿಕೊಂಡಿದ್ದಾರಂತೆ ನಟ, ನಿರ್ದೇಶಕ ರಣದೀಪ್ ಹೂಡಾ (Randeep Hooda). ಈ ಸಿನಿಮಾದಲ್ಲಿ ಅವರು ಸಾವರ್ಕರ್ ಪಾತ್ರವನ್ನು ಮಾಡುತ್ತಿದ್ದು, ಜೈಲು ಸನ್ನಿವೇಶಗಳನ್ನು ಶೂಟ್ ಮಾಡುವುದಕ್ಕಾಗಿ ಈ ಪ್ರಮಾಣದಲ್ಲಿ ಅವರು ತೂಕ ಇಳಿಸಿಕೊಂಡಿದ್ದಾರೆ.

    ಈ ನಡುವೆ ಸಿನಿಮಾ ಬಗ್ಗೆ ಅಪಸ್ವರ ಕೇಳಿ ಬಂದಿದೆ. ನಿರ್ದೇಶಕರ ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ.

     

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • ಹೊಸ ಅತಿಥಿ ಆಗಮನದ ಬೆನ್ನಲ್ಲೇ ಇಲಿಯಾನಾ ಕೊಟ್ರು ಗುಡ್ ನ್ಯೂಸ್

    ಹೊಸ ಅತಿಥಿ ಆಗಮನದ ಬೆನ್ನಲ್ಲೇ ಇಲಿಯಾನಾ ಕೊಟ್ರು ಗುಡ್ ನ್ಯೂಸ್

    ಬಾಲಿವುಡ್ ಬ್ಯೂಟಿ ಇಲಿಯಾನಾ ಡಿ ಕ್ರೂಸ್ (Illeana  D’cruz) ಅವರು 8 ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮನೆಗೆ ಪುಟ್ಟ ರಾಜಕುಮಾರ ಆಗಮನದ ಬೆನ್ನಲ್ಲೇ ನಟಿ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. ಇಲಿಯಾನಾ ಮತ್ತೆ ನಟನೆಗೆ ಮರಳಿದ್ದಾರೆ.

    ಮಗನ ಆರೈಕೆಯ ನಡುವೆಯೂ ಸಿನಿಮಾ ಬಗ್ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಹೊಸ ಚಿತ್ರದ ಟ್ರೈಲರ್ ಮೂಲಕ ನಟಿ ಸದ್ದು ಮಾಡ್ತಿದ್ದಾರೆ. ‘ತೇರಾ ಕ್ಯಾ ಹೋಗಾ ಲವ್ಲಿ’ (Tera Kya Hoga Lovely) ಎಂಬ ಸಿನಿಮಾದಲ್ಲಿ ನಟಿ ಇಲಿಯಾನಾ ನಾಯಕಿಯಾಗಿ ನಟಿಸಿದ್ದಾರೆ.

    ಇಲಿಯಾನಾ, ಕರಣ್ ಕುಂದ್ರಾ, ರಣದೀಪ್ ಹೂಡಾ (Randeep Hooda) ನಟನೆಯ ‘ತೇರಾ ಕ್ಯಾ ಹೋಗಾ ಲವ್ಲಿ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಟ್ರೈಲರ್‌ನಲ್ಲಿ ಮುಖದ ಬಣ್ಣ ಮತ್ತು ವರದಕ್ಷಿಣೆಯ ವಿಚಾರವಾಗಿ ಸಮಾಜ ನೋಡುವ ರೀತಿಯ ಬಗ್ಗೆ ತೋರಿಸಲಾಗಿದೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ನೋಡಿ ಫ್ಯಾನ್ಸ್‌ ಫಿದಾ ಆಗಿದ್ದು, ಸಿನಿಮಾ ಕುರಿತು ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

    ಬಲ್ವಿಂದರ್ ಸಿಂಗ್ ಜಂಜುವಾ ನಿರ್ದೇಶನದ ಸಿನಿಮಾದಲ್ಲಿ ಇಲಿಯಾನಾ ಪಾತ್ರ ಭಿನ್ನವಾಗಿದ್ದು, ಮಧ್ಯಮ ಕುಟುಂಬದ ಹುಡುಗಿಯಾಗಿರುವ ನಾಯಕಿ ಇಲಿಯಾನಾ ಮದುವೆ ಸಂದರ್ಭದಲ್ಲಿ ಏನೆಲ್ಲ ಕಷ್ಟಗಳನ್ನು ಎದುರಿಸುತ್ತಾರೆ. ಬ್ಯೂಟಿ ಬಗ್ಗೆ ಸಮಾಜದ ನಡೆಯೇನು ಎಂಬುದನ್ನು ತೋರಿಸುವ ವಿಭಿನ್ನ ಸಿನಿಮಾ ಇದಾಗಿದೆ. ಇದನ್ನೂ ಓದಿ:ತಲೈವಾ ಜೊತೆ ಸಿನಿಮಾ ಮಾಡ್ತಿದ್ದಾರೆ ಬಾಲಿವುಡ್ ಖ್ಯಾತ ನಿರ್ಮಾಪಕ

    ಇಲಿಯಾನಾ ಜೊತೆ ಮೊದಲ ಬಾರಿಗೆ ತೆರೆಹಂಚಿಕೊಂಡಿರುವ ರಣದೀಪ್ ಹೂಡಾ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸಿದ್ದಾರೆ. ‘ತೇರಾ ಕ್ಯಾ ಹೋಗಾ ಲವ್ಲಿ’ ಚಿತ್ರವು ಮಹಿಳಾ ದಿನಾಚರಣೆ ಮಾರ್ಚ್ 8ರಂದು ರಿಲೀಸ್ ಆಗುತ್ತಿದೆ. ಮುದ್ದು ಮಗನ ಆಗಮನದ ನಂತರ ರಿಲೀಸ್ ಆಗ್ತಿರುವ ಈ ಚಿತ್ರದ ಬಗ್ಗೆ ಇಲಿಯಾನಾಗೆ ಹೆಚ್ಚಿನ ನಿರೀಕ್ಷೆಯಿದೆ.

    ಕನ್ನಡದ ಹುಡುಗ- ಹುಡುಗಿ ನಟಿ ಇಲಿಯಾನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಗಸ್ಟ್ 1ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ವಿಚಾರವನ್ನ ತಡವಾಗಿ ರಿವೀಲ್ ಮಾಡಿದ್ದರು. ಕೋವಾ ಫೀನಕ್ಸ್ ಡೋಲನ್ ಎಂದು ಮಗುವಿಗೆ ಹೆಸರನ್ನು ಇಟ್ಟಿದ್ದರು. ಪದಗಳಲ್ಲಿ ನಮ್ಮ ಸಂತಸವನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಈ ಪ್ರಪಂಚಕ್ಕೆ ನಮ್ಮ ಮಗುವಿನ ಆಗಮನವಾಗಿದೆ. ಅವನಿಗೆ ಸ್ವಾಗತ ಎಂದು ಸಂಭ್ರಮದಿಂದ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.

    ಧ್ಯಾನ್ ಜೊತೆ ಕನ್ನಡದ ಹುಡುಗ-ಹುಡುಗಿ ಸಿನಿಮಾದಲ್ಲಿ ಇಲಿಯಾನಾ ಸೊಂಟ ಬಳುಕಿಸಿದ್ದರು. ಸೌತ್- ಹಿಂದಿ ಸಿನಿಮಾಗಳ ಮೂಲಕ ಗಮನ ಸೆಳೆದಿರೋ ಈ ಸುಂದರಿ ಏಪ್ರಿಲ್‌ನಲ್ಲಿ ತಾವು ಪ್ರೆಗ್ನೆಂಟ್ ಎನ್ನುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇಲಿಯಾನಾಗೆ ಇನ್ನೂ ಮದುವೆ ಆಗಿಲ್ಲ. ಅಂದ್ಹಾಗೆ ಇಲಿಯಾನಾ, ಮೈಕಲ್ ಡೋಲನ್ ಎಂಬುವವರ ಜೊತೆ ಎಂಗೇಜ್ ಆಗಿದ್ದಾರೆ. ಮುದ್ದು ಮಗ ಕೋವಾ ಇವರ ಪ್ರೀತಿಗೆ ಸಾಕ್ಷಿಯಾಗಿದೆ.

  • ಸಾವರ್ಕರ್ ಪತ್ನಿ ಪಾತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ

    ಸಾವರ್ಕರ್ ಪತ್ನಿ ಪಾತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ

    ಬಾಲಿವುಡ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಪ್ರೊಮೋ ರಿಲೀಸ್ ಆಗಿದ್ದು, ಸಾರ್ವಕರ್ ಪತ್ನಿಯಾಗಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ ಲೋಕಂಡೆ  (Ankita Lokande) ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅವರೇ ಸಾವರ್ಕರ್ ಪಾತ್ರವನ್ನೂ ನಿರ್ವಹಿಸಿದ್ದಾರೆ.

    ಈ ನಡುವೆ ಸಿನಿಮಾ ಬಗ್ಗೆ ಅಪಸ್ವರ ಕೇಳಿ ಬಂದಿದೆ. ನಿರ್ದೇಶಕರ ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ.

     

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • ಮಾಡೆಲ್ ಜೊತೆ ಮದುವೆಯಾದ ಬಾಲಿವುಡ್ ನಟ ರಣ್ ದೀಪ್ ಹೂಡಾ

    ಮಾಡೆಲ್ ಜೊತೆ ಮದುವೆಯಾದ ಬಾಲಿವುಡ್ ನಟ ರಣ್ ದೀಪ್ ಹೂಡಾ

    ಬಾಲಿವುಡ್ ನ ಖ್ಯಾತನಟ ರಣ್ ದೀಪ್ ಹೂಡಾ (Randeep Hooda) ನಿನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಹಾಗೂ ಮಾಡೆಲ್ ಆಗಿರುವ ಲಿನ್ ಲೈಸ್ರಾಮ್ (Lin Laisram) ಜೊತೆ ಅವರು ದಾಂಪತ್ಯ (Marriage) ಜೀವನಕ್ಕೆ ಕಾಲಿಟ್ಟಿದ್ದಾರೆ.

    ಈ ಜೋಡಿಯ ಮದುವೆ ಮಣಿಪುರ ಸಂಪ್ರದಾಯದಂತೆ ನಡೆದಿದ್ದು, ಮದುವೆಯ ಫೋಟೋಗಳನ್ನು ರಣ್ ದೀಪ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಧು ವರರಿಗೆ ಹಾರೈಸಿ ಎಂದು ಕೇಳಿದ್ದಾರೆ.  ಮಣಿಪುರದ ಮೈಥಿಯಿ ಸಂಪ್ರದಾಯದಂತೆ ನಡೆದ ಮದುವೆಯಲ್ಲಿ ರಣ್ ದೀಪ್ ಕ್ರೀಮ್ ಬಣ್ಣದ ಧಿರಿಸಿನಲ್ಲಿ ಮಿಂಚುತ್ತಿದ್ದರು.

    ಮಾಡೆಲ್ ಲಿನ್ ಮೂಲತಃ ಮಣಿಪುರದವರು ಆಗಿದ್ದು, ಮಾಡೆಲಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಜೊತೆಗೆ ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಹೂಡಾಗೆ 47 ವರ್ಷ ವಯಸ್ಸಾಗಿದ್ದರೂ, ಮಣಿಪುರದ ಬೆಡಗಿ ಮೆಚ್ಚಿ ಮದುವೆಯಾಗಿದ್ದಾರೆ ಎನ್ನುವುದು ವಿಶೇಷ.

  • ಸಾವರ್ಕರ್  ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಸಾವರ್ಕರ್ ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಬಾಲಿವುಡ್ ನಟ, ನಿರ್ದೇಶಕ ರಣದೀಪ್ ಹೂಡಾ (Randeep Hooda) ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ಚೆನ್ನೈ ಟೀಮ್ ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ವಿಘ್ನೇಶ್ ಶಿವನ್ ಪೋಸ್

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • ಬಾಲಿವುಡ್ ಖ್ಯಾತನಟ ರಣದೀಪ್ ಹೂಡಾಗೆ ಅಪಘಾತ: ಸ್ಥಿತಿ ಗಂಭೀರ

    ಬಾಲಿವುಡ್ ಖ್ಯಾತನಟ ರಣದೀಪ್ ಹೂಡಾಗೆ ಅಪಘಾತ: ಸ್ಥಿತಿ ಗಂಭೀರ

    ಕುದುರೆ ಸವಾರಿ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದ ಪರಿಣಾಮ ಬಾಲಿವುಡ್ ನಟ ರಣದೀಪ್ ಹೂಡಾ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಣದೀಪ್ ಅವರಿಗೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ನಟ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಕುದುರೆ ಮೇಲಿಂದ ಬಿದ್ದ ಪರಿಣಾಮವಾಗಿ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರು ಸಿಕ್ಕಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಅವರನ್ನು ಕೋಕಿಲಾಬೆನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ವೈದ್ಯರು ಬೆಡ್ ರೆಸ್ಟ್ ತಗೆದುಕೊಳ್ಳುವಂತೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅವರು ಸಾವರ್ಕರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಆ ಸಿನಿಮಾ ದೃಶ್ಯಕ್ಕಾಗಿ ಅವರು ಕುದುರೆ ಸವಾರಿ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 15 ದಿನಗಳಿಂದ ಸುಧಾರಾಣಿ ಮನೆ ಶ್ವಾನ ನಾಪತ್ತೆ: ಬಿಬಿಎಂಪಿ ವಿರುದ್ಧ ನಟಿ ಗರಂ

    ಸಾವರ್ಕರ್ ಪಾತ್ರ ಮಾಡುವುದಕ್ಕಾಗಿಯೇ ಅವರು 22 ಕೆಜಿ ತೂಕವನ್ನು ಇಳಿಸಿಕೊಳ್ಳುತ್ತಿದ್ದರು. ಈ ನೆಪದಲ್ಲಿ ಕುದುರೆ ಸವಾರಿ ಕೂಡ ಅವರು ಮಾಡುತ್ತಿದ್ದರು. ಈ ಸಮಯದಲ್ಲಿ ಕುದುರೆ ಮೇಲಿಂದ ಬಿದ್ದು ತೀವ್ರಗಾಯಗೊಂಡಿದ್ದಾರೆ. ಬಿದ್ದಿರುವ ಹೊಡೆತಕ್ಕೆ ಪ್ರಜ್ಞೆ ಕೂಡ ಕಳೆದುಕೊಂಡಿದ್ದರು. ಈ ಹಿಂದೆಯೂ ರಾಧೆ ಸಿನಿಮಾದ ಶೂಟಿಂಗ್ ವೇಳೆಯೂ ರಣದೀಪ್ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಸಾವರ್ಕರ್’ ಸಿನಿಮಾದ ಶೂಟಿಂಗ್ ಶುರು: ನಿರ್ದೇಶನದ ಜೊತೆ ನಟಿಸಲಿರುವ ರಣದೀಪ್

    ‘ಸಾವರ್ಕರ್’ ಸಿನಿಮಾದ ಶೂಟಿಂಗ್ ಶುರು: ನಿರ್ದೇಶನದ ಜೊತೆ ನಟಿಸಲಿರುವ ರಣದೀಪ್

    ಕೆಲವು ತಿಂಗಳ ಹಿಂದೆ ವೀರ ಸಾವರ್ಕರ್ (Savarkar) ಬದುಕಿನ ಕುರಿತಾದ ಸಿನಿಮಾವೊಂದು ಬಾಲಿವುಡ್ ನಲ್ಲಿ ಮೂಡಿ ಬರಲಿದೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಮಾಡಿತ್ತು. ಈ ಸಿನಿಮಾದಲ್ಲಿ ಸಾವರ್ಕರ್ ಪಾತ್ರವನ್ನು ಬಾಲಿವುಡ್ ನಟ ರಣದೀಪ್ ಹೂಡ ಮಾಡಲಿದ್ದಾರೆ ಎಂದೂ ಹೇಳಲಾಗಿತ್ತು. ಇದೀಗ ಆ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಸಿನಿಮಾದ ಮುಹೂರ್ತ ಮುಗಿಸಿಕೊಂಡು ಶೂಟಿಂಗ್ ಶುರು ಮಾಡಿರುವುದಾಗಿ ಚಿತ್ರತಂಡ ತಿಳಿಸಿದೆ.

    ಈ ಸಿನಿಮಾ (Cinema) ತಂಡದಿಂದ ಸಿಕ್ಕಿರುವ ಮತ್ತೊಂದು ಅಪ್ ಡೇಟ್ ಏನೆಂದರೆ, ಸಾವರ್ಕರ್ ಅವರ ಪಾತ್ರವನ್ನು ನಿರ್ವಹಿಸುತ್ತಿರುವ ರಣದೀಪ್ ಹೂಡಾ (Randeep Hooda) ಅವರೇ ಈ ಸಿನಿಮಾದ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ರಣದೀಪ್ ನಟಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾ ಇದಾಗಿದೆ. ಈ ಕುರಿತು ಸ್ವತಃ ಹೂಡಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಾವು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದು ನಿಜ ಎಂದು ಖಚಿತ ಪಡಿಸಿದ್ದಾರೆ.

    ಕೈಯಲ್ಲಿ ಕ್ಲಾಪ್ ಬೋರ್ಡ್ ಹಿಡಿದುಕೊಂಡು ನಿರ್ಮಾಪಕರ ಜೊತೆ ಫೋಟೋ ತಗೆಸಿಕೊಂಡಿರುವ ರಣದೀಪ್, ಸಾವರ್ಕರ್ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಸಿನಿಮಾದ ನಿರ್ದೇಶನದ ಜವಾಬ್ದಾರಿ ನನ್ನ ಹೆಗಲ ಮೇಲೆ ಬಿದ್ದಿದೆ ಎಂದೂ ಬರೆದುಕೊಂಡಿದ್ದಾರೆ. ಈ ಸಿನಿಮಾ ನನ್ನಷ್ಟೇ ಎಲ್ಲರನ್ನೂ ಪ್ರಭಾವಿಸಲಿದೆ ಎಂದೂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್

    ಬಾಲಿವುಡ್ ಸಿನಿಮಾ ರಂಗದಲ್ಲಿ ಅನೇಕ ಬಯೋಪಿಕ್ ಗಳು ಬರುತ್ತಿವೆ. ಒಂದು ಕಡೆ ಸಾವರ್ಕರ್ ಸಿನಿಮಾ ಸೆಟ್ಟೇರಿದ್ದರೆ, ಮತ್ತೊಂದು ಕಡೆ ಕಂಗನಾ ರಾಣಾವತ್ (Kangana Ranaut) ಎಮರ್ಜನ್ಸಿ (Emergency) ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಆಗಿ ಅವರು ನಟಿಸುತ್ತಿದ್ದಾರೆ. ರಾಜಕೀಯ ನಾಯಕರ ಬದುಕನ್ನೇ ಆಧಾರಾವಾಗಿಟ್ಟುಕೊಂಡು ಹಲವು ಸಿನಿಮಾಗಳು ಬರುತ್ತಿವೆ. ಈ ಎಲ್ಲದರ ನಡುವೆ ಸದ್ಯ ಸಾವರ್ಕರ್ ಸಿನಿಮಾ ಸೆಟ್ಟೇರಿದೆ.

    Live Tv
    [brid partner=56869869 player=32851 video=960834 autoplay=true]