Tag: Rani Jhari

  • ರಾಣಿಝರಿ, ಬಂಡಾಜೆ ಫಾಲ್ಸ್ ಬಳಿ ಟಿಕೆಟ್ ಗೋಲ್ಮಾಲ್‌ – ಸರ್ಕಾರದ ಹಣ ಪ್ರಿಯತಮೆ ಖಾತೆಗೆ

    ರಾಣಿಝರಿ, ಬಂಡಾಜೆ ಫಾಲ್ಸ್ ಬಳಿ ಟಿಕೆಟ್ ಗೋಲ್ಮಾಲ್‌ – ಸರ್ಕಾರದ ಹಣ ಪ್ರಿಯತಮೆ ಖಾತೆಗೆ

    ಚಿಕ್ಕಮಗಳೂರು: ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನಲ್ಲಿ ನಡೆದಿದೆ.

     ಸರ್ಕಾರಕ್ಕೆ ಮೋಸ ಮಾಡಿರುವುದು ಸಾಬೀತಾಗಿದ್ದು, 9 ಸಾವಿರ ರೂ. ಸರ್ಕಾರದ ಹಣವನ್ನು ಪ್ರಿಯತಮೆಯ ಖಾತೆಗೆ ವರ್ಗಾವಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತುಗೊಳಿಸಿ ಕೊಪ್ಪ ಡಿ.ಎಫ್.ಓ. ಉಪೇಂದ್ರ ಪ್ರತಾಪ್ ಸಿಂಗ್ ಆದೇಶಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನ ಪ್ರವೇಶ ವೇಳೆ ಹಿಂದೂ ಎಂಬುದಕ್ಕೆ ಸಾಕ್ಷಿ ತೋರಿಸಿ ಎಂದರು-‘ನೀಲಕಂಠ’ ನಟಿ ನಮಿತಾ

    ಆನ್‌ಲೈನ್ ಟಿಕೆಟ್ ಫೋರ್ಜರಿ ಮಾಡುವ ಮೂಲಕ ಈ ಹಣವನ್ನು ವಂಚನೆ ಮಾಡಲಾಗಿದೆ. ರಾಣಿಝರಿ ಜಲಪಾತ, ಬಂಡಾಜೆ ಫಾಲ್ಸ್ ಬಳಿ ಟಿಕೆಟ್ ಗೋಲ್ಮಾಲ್‌ ಮಾಡಿರುವುದು ಬೆಳಕಿಗೆ ಬಂದಿದೆ.

    ಬೆಳಕಿಗೆ ಬಂದಿದ್ದು ಹೇಗೆ?
    ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರು ಬಂಡಾಜೆ ಫಾಲ್ಸ್ ನೋಡಲು ತೆರಳಿದ್ದರು.ಮಧ್ಯೆ ಚೆಕ್ ಮಾಡಲು ಹೋಗಿದ್ದ ಪೊಲೀಸರಿಗೆ ಪ್ರವಾಸಿಗರು ಸಿಕ್ಕಿ ಬಿದ್ದಿದ್ದಾರೆ. ವಿಚಾರಣೆ ಮಾಡಿದಾಗ ಜೂನ್ ತಿಂಗಳ ಆನ್‌ಲೈನ್ ಟಿಕೆಟ್ ಬುಕ್ಕಿಂಗ್, ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ತಾಳೆ ಆಗುತ್ತಿರಲಿಲ್ಲ. ಪೊಲೀಸರು ಪ್ರವಾಸಿಗರನ್ನು ವಿಚಾರಣೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಫ್ಟ್

    ಈಗ ಇಲಾಖೆ ವಿಚಾರಣೆ ನಡೆಸುತ್ತಿದೆ. ಇಲಾಖೆಯ ಲಕ್ಷಗಟ್ಟಲೇ ಹಣ ಮೋನಿಕಾ ಎಂಬ ಯುವತಿಯ ಖಾತೆಗೆ ಜಮಾ ಆಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

  • ಬೆಂಗಳೂರಿನ ಟೆಕ್ಕಿಯ ಶವ 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆ- ಕೆಲಸ ಹೋಗಿದ್ದಕ್ಕೆ ರಾಣಿ ಝರಿಗೆ ಹಾರಿ ಆತ್ಮಹತ್ಯೆ?

    ಬೆಂಗಳೂರಿನ ಟೆಕ್ಕಿಯ ಶವ 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆ- ಕೆಲಸ ಹೋಗಿದ್ದಕ್ಕೆ ರಾಣಿ ಝರಿಗೆ ಹಾರಿ ಆತ್ಮಹತ್ಯೆ?

    ಚಿಕ್ಕಮಗಳೂರು: ಬೆಂಗಳೂರಿನ ಬಹುರಾಷ್ಟ್ರೀಯ ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಆತ ಕೆಲಸ (Job) ಕಳ್ಕೊಂಡಿದ್ದ.‌ ಕಂಪನಿ ಮುಂಗಡ ಸಂಬಳ (Salary) ನೀಡಿ ನಿಮ್ಮ ಸೇವೆ ತೃಪ್ತಿದಾಯಕವಾಗಿದೆ ಎಂದಿತ್ತು.‌ ಮನಸ್ಸಿಗೆ ಬೇಜಾರು ಮಾಡಿಕೊಂಡು ತನ್ನ‌ ಹೋಂಡಾ ಹಾರ್ನೆಟ್ ಬೈಕಿನಲ್ಲಿ ಕಾಫಿನಾಡಿಗೆ ಪ್ರವಾಸ ಬಂದಿದ್ದ. ರಾಣಿಝರಿ ಜಲಪಾತದ (Rani Jhari Falls) ಬಳಿ ಬೈಕ್, ಕೋಟ್, ಚಪ್ಪಲಿ, ಟೀಶರ್ಟ್ ಬಿಚ್ಚಿಟ್ಟು 3 ದಿನದಿಂದ ನಾಪತ್ತೆಯಾಗಿದ್ದ. ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮನೆಯವರು, ಪೊಲೀಸರು, ಸ್ಥಳೀಯರು ಹುಡುಕಾಡಿದರೂ ಸುಳಿವಿರಲಿಲ್ಲ. ಆದರೆ ಈಗ ಆತನ ಶವ ಪ್ರಪಾತದಲ್ಲಿ ಪತ್ತೆಯಾಗಿದೆ.

    ಬೆಂಗಳೂರು ಮೂಲದ 30 ವರ್ಷದ ಟೆಕ್ಕಿ ಭರತ್‌ ಇತ್ತೀಚಿಗೆ ಕೆಲಸ ಕಳೆದುಕೊಂಡಿದ್ದ. ಸಂಸ್ಥೆ 3 ತಿಂಗಳ ಮುಂಗಡ ಸಂಬಳ ನೀಡಿ ಸೇವೆಯಿಂದ ಮುಕ್ತಿಗೊಳಿಸಿತ್ತು.‌ ಕೆಲಸ ಕಳೆದುಕೊಂಡಿದ್ದ ಆತ ಬೈಕ್‌ ಏರಿ ನೇರವಾಗಿ ಬಂದಿದ್ದು ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿ ಝರಿ ಇರುವ ಜಾಗಕ್ಕೆ.

    ಟ್ರಕ್ಕಿಂಗ್‌ ಬಂದಿದ್ದ ಭರತ್‌ ಡಿ.6 ರಿಂದ ನಾಪತ್ತೆಯಾಗಿದ್ದ ಆತ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ರಾಣಿಝರಿ ಬಳಿ ಭರತ್ ಬೈಕ್ ಇತ್ತು.‌ ಬೈಕ್ ಬಳಿ ಮೊಬೈಲ್, ಟೀ ಶರ್ಟ್, ಚಪ್ಪಲಿ ಸಿಕ್ಕಿದ್ದವು. ಬೈಕ್‌ಗೆ ವೋಟರ್‌ ಐಡಿ ಕಾರ್ಡ್ ಮತ್ತು ಬ್ಯಾಗ್ ಸಿಕ್ಕಿಸಲಾಗಿತ್ತು.  ಇದನ್ನೂ ಓದಿ: ಹುಡುಗಿಗೆ ಬೈಕ್‌ನಲ್ಲಿ ಡ್ರಾಪ್‌ ಕೊಟ್ಟ ದಲಿತ ಯುವಕನಿಗೆ ಶಾದಿಮಹಲ್‌ನಲ್ಲಿ ಹಲ್ಲೆ – ಪೋಕ್ಸೋ ಕೇಸ್‌ ದಾಖಲು

    ಮಗ ಮನೆಗೂ ಬಂದಿಲ್ಲ, ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಮನೆಯವರು ಹುಡುಕಿಕೊಂಡು ಬಂದಿದ್ದರು. ಬಾಳೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ರಾಣಿ ಝರಿ ಬಳಿಯ ಸುಮಾರು 3 ಸಾವಿರ ಅಡಿ ಎತ್ತರದ ಬೆಟ್ಟದಿಂದ ಭರತ್‌ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿ ಹುಡುಕಾಟ ಆರಂಭವಾಗಿತ್ತು. ಅರಣ್ಯ ಇಲಾಖೆ, ಪೊಲೀಸ್, ಧರ್ಮಸ್ಥಳ ವಿಪತ್ತು ನಿರ್ವಹಣ ತಂಡ, ಬಣಕಲ್ ಸಮಾಜ ಸೇವಕ ಆರೀಫ್ ಮತ್ತು ಸ್ಥಳಿಯರು ಏಳು ಡ್ರೋನ್ ಕ್ಯಾಮರಾ ಬಳಸಿ ಹುಡುಕಾಡಿದ್ದು ಯುವಕ ಶವ ಪ್ರಪಾತದಲ್ಲಿ ಪತ್ತೆಯಾಗಿದೆ.

    ಶೋಧ ಕಾರ್ಯ ನಡೆಸುತ್ತಿದ್ದ 25 ಜನರ ತಂಡ ಬೆಳ್ತಂಗಡಿಯ ಮೈದಾಡಿ ಕಡೆಯಿಂದ ಬೆಟ್ಟವನ್ನು ಇಳಿದು ಅರಣ್ಯದಲ್ಲಿ ಶವವನ್ನ ಪತ್ತೆ ಹಚ್ಚಿದ್ದಾರೆ. ಸುಮಾರು 4 ಸಾವಿರ ಅಡಿಯಿಂದ ಯುವಕ ಕೆಳಗೆ ಬಿದ್ದಿದ್ದು, ಆತನ ದೇಹ ಛಿದ್ರವಾಗಿದ್ದು, ಕೊಳೆತುಹೋಗಿದೆ. ಮೃತದೇಹ ವ್ಯೂ ಪಾಯಿಂಟ್‌ ನೇರವಾಗಿರುವ ಪ್ರಪಾತದಲ್ಲಿಯೇ ಪತ್ತೆಯಾಗಿದ್ದು, ಭರತ್ ವ್ಯೂ ಪಾಯಿಂಟ್ ಬಳಿಯಿಂದಲೇ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.

    ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಸಾವಿನ ಸುತ್ತ ಅನುಮಾನದ ಹುತ್ತ ಇದೆಯೋ ಗೊತ್ತಿಲ್ಲ. ಪೊಲೀಸರಾಗಲಿ ಅಥವಾ ಕುಟುಂಬಸ್ಥರಾಗಲಿ ಭರತ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು‌ ಅಧಿಕೃತವಾಗಿ ಹೇಳಿಲ್ಲ.