Tag: Ranil vikram singhe

  • ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಕೊಲಂಬೋ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ. ಹಂಗಾಮಿ ಅಧ್ಯಕ್ಷರಾಗಿ ರನೀಲ್ ವಿಕ್ರಮಸಿಂಘೆ ನೇಮಕಗೊಂಡ ಬೆನ್ನಲ್ಲೇ ಅಲ್ಲಿನ ಜನ ಮತ್ತೆ ಸಿಡಿದೆದ್ದಿದ್ದಾರೆ. ವಿಕ್ರಮಸಿಂಘೆ ಕಚೇರಿಗೆ ನುಗ್ಗಿ ಜನ ದಾಂಧಲೆ ನಡೆಸಿದ್ದಾರೆ.

    ಸೇನಾ ಪಡೆಗಳ ಅಶ್ರುವಾಯು ಸೇರಿ ಹಲವು ರೀತಿಯ ಬಲ ಪ್ರಯೋಗಕ್ಕೂ ಬೆದರದೇ ಅಧ್ಯಕ್ಷರ ಭವನದ ಬಳಿಕ ಪ್ರಧಾನಿ ಕಚೇರಿಯನ್ನೂ ಆಕ್ರಮಿಸಿ ಗಲಾಟೆ ಮಾಡಿದ್ದಾರೆ. ಘರ್ಷಣೆಯಲ್ಲಿ ಓರ್ವ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕ್ಷಣ ಕ್ಷಣಕ್ಕೂ ಬೀದಿಗಳಲ್ಲಿ ಪ್ರತಿಭಟನೆ ಹೆಚ್ಚುತ್ತಿದೆ. ಇದನ್ನೂ ಓದಿ: ರಾಜಪಕ್ಸೆ ಪಲಾಯನ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

    ಸರ್ಕಾರಿ ಸ್ವಾಮ್ಯದ ರೆಡಿಯೋ, ಟಿವಿ ಚಾನೆಲ್‍ಗಳ ಮೇಲೆಯೂ ದಾಳಿ ನಡೆದಿದೆ. ಪರಿಸ್ಥಿತಿ ಹತೋಟಿಗೆ ತರಲು ಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಕೊಲಂಬೋ ಸೇರಿ ಪಶ್ಚಿಮ ಪ್ರಾಂತ್ಯದಲ್ಲಿ ಕಫ್ರ್ಯೂ ವಿಧಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಹೊಣೆಯನ್ನು ಸೇನೆಗೆ ನೀಡಲಾಗಿದೆ. ಇದನ್ನೂ ಓದಿ: ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ನಾವು ಸಹಕಾರ ನೀಡಿಲ್ಲ ಎಂದ ಭಾರತ

    ರಾಜೀನಾಮೆ ನೀಡದ ಗೊಟಬಯ ಮಾಲ್ಡೀವ್ಸ್‍ನಿಂದ ಸಿಂಗಾಪುರಕ್ಕೆ ತೆರಳಲಿದ್ದಾರೆ ಎನ್ನಲಾಗ್ತಿದೆ. ಮಾಲ್ಡೀವ್ಸ್‍ಗೆ ಎಸ್ಕೇಪ್ ಆಗಲು ಅಲ್ಲಿನ ಮಾಜಿ ಅಧ್ಯಕ್ಷ ನಶೀದ್ ಸಹಾಯ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಪ್ರಾಣಭೀತಿಯಲ್ಲಿ ಗೊಟಬಯ ಸೋದರ, ಮಾಜಿ ಸಚಿವ ಬಸಿಲ್ ಕೂಡ ವಿದೇಶಕ್ಕೆ ಪರಾರಿಯಾಗಿದ್ದಾರೆ. ಗೊಟಬಯ ಮಾಲ್ಡೀವ್ಸ್‍ಗೆ ತೆರಳಲು ಭಾರತ ನೆರವು ನೀಡಿದೆ ಎಂಬ ಆರೋಪವನ್ನು ಶ್ರೀಲಂಕಾದಲ್ಲಿರೋ ಭಾರತೀಯ ಹೈಕಮೀಷನ್ ತಳ್ಳಿಹಾಕಿದೆ.

    ಭಾರತ ಹಾಗೂ ಶ್ರೀಲಂಕಾ ನಡುವಿನ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ ಅಂತ ಭಾರತದ ರಫ್ತು ಸಂಘಟನೆಗಳ ಒಕ್ಕೂಟ ಹೇಳಿದೆ. ಇದೆಲ್ಲದರ ಮಧ್ಯೆ ಲಂಕಾದಲ್ಲಿ ಔಷಧಿಗಳ ಬಿಕ್ಕಟ್ಟು ಎದುರಾಗಿದ್ದು, ಕಾಯಿಲೆ ಬೀಳದಂತೆ ಆರೋಗ್ಯ ಕಾಪಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹರಕೆ ತೀರಿಸಲು ಕೊಲ್ಲೂರಿಗೆ ಆಗಮಿಸಿದ ಲಂಕಾ ಪ್ರಧಾನಿ

    ಹರಕೆ ತೀರಿಸಲು ಕೊಲ್ಲೂರಿಗೆ ಆಗಮಿಸಿದ ಲಂಕಾ ಪ್ರಧಾನಿ

    ಉಡುಪಿ: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಇಂದು ಕೊಲ್ಲೂರಿಗೆ ಭೇಟಿ ನೀಡಿದ್ದಾರೆ.

    ಬೆಳಗ್ಗೆಯೇ ನೂರಾರು ಭಕ್ತರು ದೇವರ ದರ್ಶನ ಪೂಜೆ ಕೈಗೊಂಡರು. ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಆಗಮನ ಹಿನ್ನೆಲೆಯಲ್ಲಿ ಕೊಲ್ಲೂರು ದೇವಳದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭಾರತೀಯ ಸೇನೆ ಲಂಕಾ ಪ್ರಧಾನಿಗೆ ಭದ್ರತೆ ಕೊಟ್ಟಿದೆ. ದೇವಸ್ಥಾನ ಭದ್ರತೆಯ ಮೇಲೂ ನಿಗಾ ವಹಿಸಿದೆ. ಲಂಕಾ ಪ್ರಧಾನಿ ದೇವಳ ಭೇಟಿ ಹಿನ್ನೆಲೆಯಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆಯನ್ನು ಬಂದ್ ಮಾಡಲಾಗಿದೆ.

    ಕೊಲಂಬೋ ಟು ಕೊಲ್ಲೂರು:
    ಕೊಲಂಬೋದಿಂದ ಬೆಂಗಳೂರಿಗೆ ಬಂದಿರುವ ಸಿಂಘೆ, ಅಲ್ಲಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿದ್ದಾರೆ. ಹೆಲಿಕಾಪ್ಟರ್ ಮೂಲಕ ಲಂಕಾ ಪ್ರಧಾನಿ ಬೈಂದೂರು ತಾಲೂಕಿನ ಅರೆ ಶೀರೂರಿಗೆ ಬಂದಿಳಿಯಬೇಕಿತ್ತು. ಉಡುಪಿಯಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ. ಮೋಡ ಮುಸುಕಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಹಾರಾಟಕ್ಕೆ ಅಧಿಕಾರಿಗಳು ನಿರಾಕರಿಸಿದ್ದಾರೆ.

    ಹೀಗಾಗಿ ರಸ್ತೆ ಮೂಲಕ ಕೊಲ್ಲೂರಿಗೆ ತೆರಳುವಂತೆ ಸೂಚಿಸಿದ್ದಾರೆ. ಮಂಗಳೂರಿಂದ ಕೊಲ್ಲೂರು ವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು 130 ಕೀ.ಮಿ. ರಸ್ತೆ ಮಾರ್ಗದ ಮೂಲಕ ಪ್ರಯಾಣ ಮಾಡಲಿದ್ದಾರೆ.

    ಈ ನಡುವೆ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ನವಚಂಡಿಕಾ ಯಾಗ ಆರಂಭವಾಗಿದ್ದು, ದೇವಸ್ಥಾನದ ಋತ್ವಿಜರಿಂದ ಹೋಮದ ವಿಧಿ ವಿಧಾನ ನಡೆದಿದೆ. ವಿಶೇಷ ಪೂಜೆಯ ಜೊತೆ ಯಜ್ಞಶಾಲೆಯಲ್ಲಿ ಹೋಮ ಆರಂಭವಾಗಿದೆ. ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಮಧ್ಯಾಹ್ನ 12.30 ರ ಸುಮಾರಿಗೆ ನಡೆಯಲಿರುವ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಲಂಕಾ ಪ್ರಧಾನಿ ನವಚಂಡಿಕಾಯಾಗದ ಹರಕೆಯನ್ನು ಈ ಹಿಂದೆಯೇ ಹೇಳಿದ್ದರು.