Tag: Ranjit Savarkar

  • ಪಠ್ಯಪುಸ್ತಕದಲ್ಲಿ ಸಾವರ್ಕರ್ ವಿಚಾರ ಕಡಿತದಿಂದ ವಿದ್ಯಾರ್ಥಿಗಳಿಗೆ ವಂಚನೆ: ರಂಜಿತ್ ಸಾವರ್ಕರ್

    ಪಠ್ಯಪುಸ್ತಕದಲ್ಲಿ ಸಾವರ್ಕರ್ ವಿಚಾರ ಕಡಿತದಿಂದ ವಿದ್ಯಾರ್ಥಿಗಳಿಗೆ ವಂಚನೆ: ರಂಜಿತ್ ಸಾವರ್ಕರ್

    ಪಣಜಿ: ಸಾವರ್ಕರ್ (VD Savarkar) ಕುರಿತಾದ ವಿಚಾರಗಳನ್ನು ಪಠ್ಯಪುಸ್ತಕಗಳಿಂದ (Textbook) ಕೈಬಿಡುವ ಕಾಂಗ್ರೆಸ್ (Congress) ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ (Ranjit Savarkar) ಹೇಳಿದ್ದಾರೆ.

    ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸಾವರ್ಕರ್ ಅವರ ವಿಚಾರಗಳ ಮಾಹಿತಿ ಸಿಗುತ್ತದೆ. ಈಗಾಗಲೇ ಅವರ ಬರಹಗಳನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಮುಂದಿನ ದಿನಗಳಲ್ಲಿ ಆ ಬರಹಗಳನ್ನು ಕನ್ನಡದಲ್ಲೂ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಸ್ವಾಮೀಜಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

    ಯಾವುದನ್ನು ತಡೆಯಲು ಬಯಸುತ್ತೇವೆಯೋ ಅದು ಮತ್ತಷ್ಟು ಪ್ರಬಲಗೊಳ್ಳುತ್ತದೆ. ಪ್ರತಿಯೊಂದು ಕ್ರಿಯೆಗೂ ಅದರ ಸಮಾನ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂಬ ನ್ಯೂಟನ್‍ನ ಮೂರನೇ ನಿಯಮವನ್ನು ಉದಾಹರಣೆ ನೀಡಿದ್ದಾರೆ.

    ಕರ್ನಾಟಕದ (Karnataka) ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ನಡೆಸಲು ಮುಂದಾಗಿದೆ. 6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸರ್ಕಾರ ಅನುಮತಿ ನೀಡಿದೆ. ಆರ್‌ಎಸ್‌ಎಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಮತ್ತು ಸಾವರ್ಕರ್ ಸೇರಿದಂತೆ ಇತರರ ಅಧ್ಯಾಯಗಳನ್ನು ತೆಗೆದುಹಾಕಿರುವ ಸರ್ಕಾರದ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಇದನ್ನೂ ಓದಿ: ಶಾಲಾ ಕಾಂಪೌಂಡ್ ಕುಸಿದು ವಿದ್ಯಾರ್ಥಿಗೆ ಗಂಭೀರ ಗಾಯ – 5 ಶಿಕ್ಷಕಿಯರಿಗೆ ಶೋಕಾಸ್ ನೋಟಿಸ್

  • ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ: ರಾಗಾಗೆ ಸಾವರ್ಕರ್ ಮೊಮ್ಮಗ ಸವಾಲು

    ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ: ರಾಗಾಗೆ ಸಾವರ್ಕರ್ ಮೊಮ್ಮಗ ಸವಾಲು

    ನವದೆಹಲಿ: ಸಾವರ್ಕರ್ (Savarkar) ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಿ ಎಂದು ರಾಹುಲ್ ಗಾಂಧಿಗೆ (Rahul Gandhi) ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ (Ranjit Savarkar) ಎಂದು ಸವಾಲು ಹಾಕಿದರು.

    ರಾಹುಲ್ ಗಾಂಧಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಹೇಳಿಕೆಗಳು ಬಾಲಿಶವಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ರಾಹುಲ್ ಗಾಂಧಿ ಅವರು ಸಾವರ್ಕರ್ ಅಲ್ಲದ ಕಾರಣ ಕ್ಷಮೆ ಕೇಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೇ ಬ್ರಿಟಿಷರಲ್ಲಿ ಸಾವರ್ಕರ್ ಕ್ಷಮೆಯಾಚಿಸಿದ್ದಾರೆ ಎನ್ನುವುದರ ಕುರಿತು ದಾಖಲೆಗಳನ್ನು ತೋರಿಸಲು ರಾಹುಲ್ ಗಾಂಧಿಗೆ ಸವಾಲು ಹಾಕಿದರು.

    ರಾಜಕೀಯ ಪ್ರಚಾರಕ್ಕಾಗಿ ದೇಶಭಕ್ತರ ಹೆಸರನ್ನು ಬಳಸುವುದು ತಪ್ಪು ಹಾಗೂ ಶೋಚನೀಯವಾಗಿದೆ. ಈ ರೀತಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ

    ಲೋಕಸಭೆಯಿಂದ ಅನರ್ಹಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ. ಗಾಂಧಿ ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಇದನ್ನೂ ಓದಿ: ಮೋದಿ ಫೋಟೋ ಹರಿದಿದ್ದ ಶಾಸಕನಿಗೆ 99 ರೂ. ದಂಡ

  • ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ- ಸಾವರ್ಕರ್ ಮೊಮ್ಮಗ

    ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ- ಸಾವರ್ಕರ್ ಮೊಮ್ಮಗ

    ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿವಾದಾತ್ಮಕ ಹೇಳಿಕೆ ಕುರಿತು ಆಕ್ರೋಶ ಭುಗಿಲೆದ್ದಿದ್ದು, ವೀರ್ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.

    ಹಿಂದುತ್ವದ ಪ್ರತೀಕಪಾದಕರಾಗಿರುವ ವೀರ್ ಸಾವರ್ಕರ್ ಕುರಿತು ರಾಹುಲ್ ಗಾಂಧಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಾನು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ ಎಂದು ಹೇಳಿದ್ದರು. ಇದಕ್ಕೆ ಆಡಳಿತ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದೀಗ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭೇಟಿ ನಂತರ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಈ ರೀತಿ ಹೇಳಿಕೆ ನೀಡಿರುವುದು ದುರದೃಷ್ಟಕರ. ಇಂತಹ ಹೇಳಿಕೆಗಳನ್ನು ನೀಡುವುದನ್ನೇ ಅಭ್ಯಾಸವನ್ನಾಗಿಸಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜವಾಹರ್‍ಲಾಲ್ ನೆಹರು ಅವರು ಶಿವಾಜಿ ಮಹಾರಾಜರನ್ನು ಲೂಟಿಕೋರ ಎಂದು ಕರೆದಿದ್ದರು. ನಂತರ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರು. ಇದೀಗ ಅವರ ಕುಟುಂಬದ ತಪ್ಪನ್ನು ಮತ್ತೆ ಪುನರಾವರ್ತಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ನಾವು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ಸಾವರ್ಕರ್ ಅವರಿಗೆ ಅವಮಾನ ಮಾಡುತ್ತಿದೆ. ಶಿವ ಸೇನೆ ಕಾಂಗ್ರೆಸ್‍ನ ಸಚಿವರನ್ನು ತೆಗೆದು ಹಾಕಬೇಕು ಎಂದು ರಂಜಿತ್ ಒತ್ತಾಯಿಸಿದ್ದಾರೆ.

    ರಾಹುಲ್ ಗಾಂಧಿ ಹೇಳಿದ್ದೇನು?
    ರಾಮಲೀಲಾ ಮೈದಾನದಲ್ಲಿ ನಡೆದ ಭಾರತ್ ಬಚಾವೋ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು, ರಾಹುಲ್ ಸಾವರ್ಕರ್ ಅಲ್ಲ. ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

    ಸತ್ಯ ಹೇಳಿದ್ದರ ಕುರಿತು ನಾನೆಂದೂ ಕ್ಷಮೆಯಾಚಿಸುವುದಿಲ್ಲ. ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ. ನಾನು ಕ್ಷಮೆಯಾಚಿಸುವುದಿಲ್ಲ, ಕಾಂಗ್ರೆಸ್‍ನ ಯಾವ ನಾಯಕರೂ ಈ ರೀತಿ ಕ್ಷಮೆಯಚಿಸುವುದಿಲ್ಲ. ಅಲ್ಲದೆ ಕ್ಷಮೆ ಕೇಳಬೇಕಿರುವುದು ನಾನಲ್ಲ. ದೇಶದ ಆರ್ಥಿಕತೆಯನ್ನು ನಾಶಪಡಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಹಾಯಕ ಅಮಿತ್ ಶಾ ಕ್ಷಮೆಯಾಚಿಸಬೇಕು. ಲೋಕಸಭೆಯ ಅಧಿವೇಶನದಲ್ಲಿಯೂ ನಾನು ಈ ಕುರಿತು ಸ್ಪಷ್ಟಪಡಿಸಿದ್ದೇನೆ. ನಾನು ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ತಿರಸ್ಕರಿಸಿದರು.

    ತಮ್ಮ ಹೇಳಿಕೆ ಕುರಿತು ಲೋಕಸಭೆಯ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಆದರೆ ಯಾವುದೇ ಪತ್ರಿಕೆಗಳನ್ನು ತೆರೆದು ನೋಡಿದರೂ ಅದರಲ್ಲಿ ಬಹುತೇಕ ಅತ್ಯಾಚಾರದ ಸುದ್ದಿಗಳೇ ಕಣ್ಣಿಗೆ ಕಾಣುತ್ತವೆ. ಹೀಗಾಗಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಆಗಿದೆ ಎಂದು ಹೇಳಿಕೆ ನೀಡಿದೆ ಎಂದರು.

    ಜಾರ್ಖಂಡ್‍ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮೇಕ್ ಇಂಡಿಯಾ ಎಂದು ಹೇಳುತ್ತಾರೆ. ಆದರೆ ದೇಶದಲ್ಲಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆಡಳಿತ ಪಕ್ಷಗಳು ಭಾರೀ ಆಕ್ರೋಶ ವ್ಯಕ್ತಪಡಿಸಿ, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದವು. ಅಲ್ಲದೆ ಈ ಕುರಿತು ಲೋಕಸಭೆಯಲ್ಲಿ ಸಹ ಪಟ್ಟು ಹಿಡಿಯುವ ಮೂಲಕ ಗದ್ದಲ ಎಬ್ಬಿಸಲಾಗಿತ್ತು. ಅಲ್ಲದೆ ಈ ಹಿಂದೆ ವೈಯನಾಡಿಗೆ ಭೇಟಿ ನೀಡಿದ ವೇಳೆ ಭಾರತ ರೇಪ್ ರಾಜಧಾನಿಯಾಗಿದೆ ಎಂದು ಹೇಳಿಕೆ ನೀಡಿ ಚರ್ಚೆಗೆ ಕಾರಣರಾಗಿದ್ದರು.