Tag: Ranjitha

  • ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

    ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

    ತಿರುವನಂತಪುರಂ: ನರ್ಸ್‌ ರಂಜಿತಾ (Ranjitha) ಸಾವನ್ನು ವ್ಯಂಗ್ಯಮಾಡಿದ್ದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ಡೆಪ್ಯೂಟಿ ತಹಶೀಲ್ದಾರ್ ಪವಿತ್ರನ್ (A Pavithran) ಅವರನ್ನು ಕೇರಳ ಸರ್ಕಾರ (Kerala Government) ಅಮಾನತು ಮಾಡಿದೆ.

    ಕೇರಳ ಸರ್ಕಾರಕ್ಕೆ ರಜೆ ಸಲ್ಲಿಸಿ ಹೋಗಿದ್ದಕ್ಕೆ ರಂಜಿತಾಗೆ ಸಾವು ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪವಿತ್ರನ್ ವ್ಯಂಗ್ಯವಾಗಿ ಕಮೆಂಟ್ ಹಾಕಿದ್ದರು. ಇನ್ನೊಂದು ಪೋಸ್ಟ್‌ ಮಾಡಿ ಆಕೆ ಇನ್ನೂ ಎತ್ತರಕ್ಕೇರಲಿ ಎಂದು ಪವಿತ್ರನ್‌ ಕಮೆಂಟ್‌ ಮಾಡಿದ್ದರು. ಇದನ್ನೂ ಓದಿ: ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

     
    ಪವಿತ್ರನ್‌ ಪೋಸ್ಟ್‌ಗೆ ಕೇರಳದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ಆನ್‌ಲೈನ್‌ನಲ್ಲಿ ಹಲವು ಮಂದಿ ದೂರು ಸಲ್ಲಿಸಿದ್ದರು. ಈ ದೂರಿನ ಬೆನ್ನಲ್ಲೇ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಶೇಖರನ್ ಪವಿತ್ರನ್‌ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟುದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ಯುಕೆಯಲ್ಲಿ ನರ್ಸ್‌ ಆಗಿದ್ದ ರಂಜಿತಾ ರಜೆಯ ಮೇಲೆ ಕೇರಳಕ್ಕೆ ಬಂದಿದ್ದರು. ರಂಜಿತಾ ಅವರಿಗೆ ಕೇರಳ ಆರೋಗ್ಯ ಇಲಾಖೆಯಲ್ಲಿ ಕೆಲಸ ಸಿಕ್ಕಿತ್ತು. ಹೀಗಾಗಿ ಸಹಿ ಹಾಕಲು ಕೇರಳಕ್ಕೆ ಆಗಮಿಸಿದ್ದರು. ಆದರೆ ಯುಕೆ ಆಸ್ಪತ್ರೆಯಲ್ಲಿ ಮಾಡಿಕೊಂಡಿದ್ದ ಒಪ್ಪಂದವನ್ನು ಪೂರ್ಣಗೊಳಿಸಲು ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.

  • ನಿತ್ಯಾನಂದನ ಕೈಲಾಸ ದೇಶಕ್ಕೆ ನಟಿ ರಂಜಿತಾ ಪ್ರಧಾನಿ

    ನಿತ್ಯಾನಂದನ ಕೈಲಾಸ ದೇಶಕ್ಕೆ ನಟಿ ರಂಜಿತಾ ಪ್ರಧಾನಿ

    ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ (Nityananda) ತನ್ನ ಆತ್ಮೀಯ ಶಿಷ್ಯಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ (Prime Minister) ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ (Kailasa Desha) ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ ಅಲ್ಲಿಯೇ ನೆಲೆಯೂರಿದ್ದಾನೆ. ಇದೀಗ ಆ ದೇಶಕ್ಕೆ ಪ್ರಧಾನಿಯನ್ನು ನೇಮಕ ಮಾಡಿದ್ದಾನೆ.

    ನಟಿ ರಂಜಿತಾ (Ranjitha) ಕಾರಣದಿಂದಾಗಿಯೇ ನಿತ್ಯಾನಂದ ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ. ಇಬ್ಬರ ನಡುವಿನ ಖಾಸಗಿ ವಿಡಿಯೋ ವಿಚಾರವಾಗಿ ಕೋರ್ಟ್ ಮೆಟ್ಟಿಲು ಕೂಡ ಏರಿದ್ದ. ನಂತರ ದೇಶವನ್ನೇ ಬಿಡಬೇಕಾಗಿ ಬಂತು. ದೇಶವನ್ನು ತೊರೆಯುವಾಗ ತನ್ನ ಅಷ್ಟೂ ಶಿಷ್ಯರನ್ನು ವಿಮಾನ ಏರಿಸಿ ಹೊರಟೇ ಬಿಟ್ಟ. ಹೊಸ ದೇಶ ಕಟ್ಟಿ ಮತ್ತೆ ಅಚ್ಚರಿ ಮೂಡಿಸಿದೆ. ಈ ದೇಶಕ್ಕೆ ರಂಜಿತಾ ಅವರನ್ನು ಪ್ರಧಾನಿ ಮಾಡಿದ್ದಾನೆ ಎನ್ನುವುದು ಸದ್ಯದ ವರ್ತಮಾನ. ಇದನ್ನೂ ಓದಿ:ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ‘ರಾನಿ’ ಸಿನಿಮಾದ ಟೀಸರ್ ಔಟ್

    ಈ ಹಿಂದೆ ತನ್ನ ದೇಶದ ಕರೆನ್ಸಿಯನ್ನು ನಿತ್ಯಾನಂದ ಬಿಡುಗಡೆ ಮಾಡಿದ್ದ. ತನ್ನ ದೇಶದ ವೀಸಾ ಕೂಡ ಘೋಷಿಸಿದ್ದ. ಕೈಲಾಸ ದೇಶಕ್ಕೆ ಬರುವವರು ಯಾವೆಲ್ಲ ನಿಯಮ ಪಾಲಿಸಬೇಕು ಎನ್ನುವ ಕುರಿತಾದ ವೆಬ್ ಸೈಟ್ ಕೂಡ ನಿತ್ಯಾನಂದ ಮಾಡಿಕೊಂಡಿದ್ದಾನೆ. ಯಾರಿಗೆಲ್ಲ ವೀಸಾ ಕೊಡಲಾಗುತ್ತದೆ ಎನ್ನುವ ವಿವರಣೆಯನ್ನು ಅದರಲ್ಲಿ ನೀಡಿದ್ದಾನೆ.

    ಅದು ಪಕ್ಕಾ ಹಿಂದೂಗಳೇ ಇರುವ ದೇಶವೆಂದು ನಿತ್ಯಾನಂದ ಈ ಹಿಂದೆ ಘೋಷಿಸಿಕೊಂಡಿದ್ದ. ಜೊತೆಗೆ ಶಿಷ್ಯ ರಂಜಿತಾಳ ಹೆಸರನ್ನೇ ಬದಲಾಯಿಸಿ ನಿತ್ಯಾನಂದಮಯಿ (Nityanandamayi)ಎಂದೂ ಹೆಸರಿಟ್ಟಿದ್ದ. 2019ರಲ್ಲಿ ದೇಶದಿಂದ ಪರಾರಿಯಾಗಿ ಇದೀಗ ಹೊಸ ದೇಶದಲ್ಲಿ ಖುಷಿಯಾಗಿದ್ದಾನೆ. ಪ್ರಧಾನಿಯನ್ನೂ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾನೆ. ಈ ಕುರಿತು ಖಚಿತ ಮಾಹಿತಿ ಇರದೇ ಇದ್ದರೂ, ತಮಿಳು ಪತ್ರಿಕೆಗಳು ಈ ಸುದ್ದಿಯನ್ನು ದೊಡ್ಡದಾಗಿ ಪ್ರಚಾರ ಮಾಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಮ್ಯಾಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ತಾಯಿ ರಂಜಿತಾ ಕಣ್ಣೀರು!

    ರಮ್ಯಾಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ತಾಯಿ ರಂಜಿತಾ ಕಣ್ಣೀರು!

    ಮಂಡ್ಯ: ನಟಿ, ಮಾಜಿ ಸಂಸದೆ ರಮ್ಯಾಗೆ ಮಂಡ್ಯ ಟಿಕೆಟ್ ಕೈ ತಪ್ಪಿದ್ದಕ್ಕೆ ತಾಯಿ ರಂಜಿತಾ ಕಣ್ಣೀರು ಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ರಮ್ಯಾ 5 ಲಕ್ಷ ಮತಗಳನ್ನ ಪಡೆದು ಗೆದ್ದಿದ್ದರು. ಅಂಬರೀಶ್ ಕಾಂಗ್ರೆಸ್‍ಗೆ ದ್ರೋಹ ಮಾಡಿ ಜೆಡಿಎಸ್‍ನ್ನ ಗೆಲ್ಲಿಸಿದ್ರು. ಮಂಡ್ಯ ಋಣ ತೀರಿಸಲು ಕೆಲವರಿಗೆ ಅವಕಾಶವಿತ್ತು, ಋಣನೂ ತೀರಿಸಲಿಲ್ಲ, ಕೆಲಸನೂ ಮಾಡಿಲ್ಲ. ನಾವು ಕಾಂಗ್ರೆಸ್‍ನಲ್ಲಿದ್ದೇವೆ, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡುತ್ತೇವೆ ಎಂದು ಹೇಳಿದ್ರು.

    ರಮ್ಯಾ ಅಥವಾ ನಾನು ಇಲ್ಲಿ ಸೋಲಿಸೋಕೆ ಏನೂ ಇಲ್ಲ. ನಮ್ಮ ಮಂಡ್ಯ ಮತದಾರರು ತುಂಬಾ ಬುದ್ಧಿವಂತರಿದ್ದಾರೆ. ಮಂಡ್ಯ ಜಿಲ್ಲೆಗೆ ಮಾತ್ರವಲ್ಲ ಇಡೀ ದೇಶಕ್ಕೆ ರಮ್ಯಾ ಸೋತಿದ್ದಕ್ಕೆ ಕಾರಣ ಯಾರು, ಸೋಲಿಸಿದವರು ಯಾರು ಎಂದು ಗೊತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಯಾರಿಂದ ಸರ್ವನಾಶ ಆಗಿದೆ. 7 ಶಾಸಕರು ಯಾರಿಂದ ಸೋತಿದ್ದರು. ಮಂಡ್ಯದಲ್ಲಿ ನಮ್ಮ 5 ಲಕ್ಷ ಮತದಾರರು ಯಾರಿಂದ ಅನಾಥರಾಗಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಇಲ್ಲದಂತೆ ಮಾಡಿದ್ದು ಯಾರು ಎಂದು ಮಂಡ್ಯ ಜನತೆಗೆ ಗೊತ್ತಾಗಿದೆ. ಹೀಗಾಗಿ ನಾವೇನೂ ಹೇಳಕ್ಕಾಗಲ್ಲ. ಅವರೇ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದ್ರು.

    ನಾನು ಮಣ್ಣಿನ ನಿಜವಾದ ಮಗಳು. ಈ ಭೂಮಿಗೋಸ್ಕರ ನಾವು ಈ ಜನಕ್ಕೆ ಕೆಲಸ ಮಾಡಬೇಕು ಎಂದು ಆಸೆ ಇಟ್ಟುಕೊಂಡು ಬಂದಿದ್ದವರು. ನಮಗೆ ಬೇಕಾದಂತೆ ಬದುಕಬಹುದಿತ್ತು. ಯಾಕಂದ್ರೆ ವೈಭವ, ದುಡ್ಡು ಎಲ್ಲವೂ ಇತ್ತು. ಇವುಗಳನ್ನೆಲ್ಲಾ ಬಿಟ್ಟು ಮಂಡ್ಯ ಜಿಲ್ಲೆಗೆ ಸೇವೆ ಮಾಡಬೇಕು ಎಂದು ಬಂದೆವು. ಹಾಗೆಯೇ ಒಂದು ಅವಕಾಶನೂ ಕೊಟ್ಟರು. ಯಾರ್ಯಾರು ಎಷ್ಟೆಷ್ಟೋ ಗೆದ್ದಿದ್ದರೂ ಬೇಕಾದಷ್ಟು ಸಮಯವಿತ್ತು. ಕೆಲವರಿಗೆ ಋಣ ತೀರಿಸಲು, ಕೆಲಸ ಮಾಡಲು ಸಮಯವಿತ್ತು. ಆದ್ರೆ ಯಾರೂ ಏನೂ ಮಾಡಿಲ್ಲ ಎಂದು ಭಾವುಕರಾದ್ರು.

    ಮಂಡ್ಯ ಜನತೆ ದಡ್ಡರಲ್ಲ. ತುಂಬಾ ಬುದ್ಧಿವಂತರಾಗಿದ್ದು, ಯೋಚನೆ ಮಾಡುವ ಶಕ್ತಿ ಇದೆ. ಇಂದು ರಮ್ಯಾ ಅವರಿಗೆ ಯಾಕೆ ಅವಕಾಶ ಸಿಕ್ಕಿಲ್ಲ ಎಂದು ಜಿಲ್ಲೆಯ ಜನತೆಗೆ ಗೊತ್ತಿದೆ. ರಮ್ಯಾರನ್ನು ಯಾರು ಸೋಲಿಸಿದ್ರು, ಯಾರು ನಮ್ಮ ಕೈ ಬಿಟ್ಟರು ಇವೆಲ್ಲ ಜನತೆಗೆ ಗೊತ್ತಿದೆ. ಜಿಲ್ಲೆಯ ಜನರಿಗೆ ಇನ್ನೂ ನಮ್ಮ ಮೇಲೆ ಪ್ರೀತಿ, ಕರುಣೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುವುದರಿಂದ ಮೈತ್ರಿ ಧರ್ಮ ಪಾಲಿಸುವುದು ನಮ್ಮ ಧರ್ಮವಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯನ್ನು ನಮ್ಮದೇ ಅಭ್ಯರ್ಥಿ ಎಂದು ತಿಳಿದುಕೊಂಡು, ಮಂಡ್ಯದಲ್ಲಿ ಅವರನ್ನು ಗೆಲ್ಲಿಸುವುದಕ್ಕೆ ಬೆಂಬಲಿಸುತ್ತೇವೆ. ಸದ್ಯ ಮಂಡ್ಯದಲ್ಲಿ ನಿಖಿಲ್ ಪರ ಪ್ರಚಾರ ಮಾಡೋದಿಕ್ಕೆ ಬಂದಿದ್ದೇನೆ ಅಂದ್ರು.

  • ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸ್ತಿದ್ದಾರೆ ರಮ್ಯಾ ತಾಯಿ!

    ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸ್ತಿದ್ದಾರೆ ರಮ್ಯಾ ತಾಯಿ!

    ಮಂಡ್ಯ: ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸಲು ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ತಯಾರಿ ನಡೆಸುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ರಂಜಿತಾ ಅವರು ಈಗಾಗಲೇ ಅಫಿಡವಿಡ್ ರೆಡಿ ಮಾಡುತ್ತಿದ್ದಾರೆ.

    ದಾಖಲೆಯಲ್ಲಿ ಯಾವುದೇ ರೀತಿ ತಪ್ಪಾಗದಂತೆ ತಮ್ಮ ಆಪ್ತ ವಕೀಲರನ್ನು ಭೇಟಿ ಮಾಡಿ ಸಲಹೆ ಪಡೆದಿದ್ದಾರೆ. ಸಡನ್ ಆಗಿ ಹೆಸರು ಅನೌನ್ಸ್ ಮಾಡಿದ್ರೆ ಸಿದ್ಧವಿರೋಣ ಅಂತಾ ಅಫಿಡವಿಡ್ ರೆಡಿ ಮಾಡ್ತಿದ್ದೇವೆ ಅಂತ ಸುದ್ದಿಗಾರರಿಗೆ ಹೇಳಿದ್ದಾರೆ.

    ಜೆಡಿಎಸ್‍ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಡುವುದು ಸಮಂಜಸವಲ್ಲ. ಈಗಲೂ ಅಭ್ಯರ್ಥಿ ಹಾಕದಿದ್ರೆ 2019ರ ಚುನಾವಣೆಯಲ್ಲಿ ಕಷ್ಟ ಆಗುತ್ತೆ. ಮಂಡ್ಯದಲ್ಲಿ ರಮ್ಯಾಗೆ ಮತ್ತೆ ಅವಕಾಶ ಕೊಡಿ. ಅವರು ವಾಪಸ್ ಬರ್ತಾರೆ. ಇಲ್ಲ ನನಗೆ ಅವಕಾಶ ಕೊಡಿ. ನಾನು ಸ್ವತಂತ್ರ ಅಭ್ಯರ್ಥಿ ಆಗಿ ಸ್ಪರ್ಧಿಸಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ಕೇಳುತ್ತೇವೆ ಅಂತ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್‍ನಿಂದ ಯಾರೇ ಸ್ಪರ್ಧಿಸಿದ್ರು ಅವರ ಪರ ಪ್ರಚಾರ ಮಾಡ್ತೇನೆ- ರಮ್ಯಾ ತಾಯಿ!

    ಕಾಂಗ್ರೆಸ್‍ನಿಂದ ಯಾರೇ ಸ್ಪರ್ಧಿಸಿದ್ರು ಅವರ ಪರ ಪ್ರಚಾರ ಮಾಡ್ತೇನೆ- ರಮ್ಯಾ ತಾಯಿ!

    ಮಂಡ್ಯ: ಕಾಂಗ್ರೆಸ್‍ನಿಂದ ಯಾರೇ ಸ್ಪರ್ಧಿಸಿದರು ಅವರ ಪರ ಮಂಡ್ಯಕ್ಕೆ ಬಂದು ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.

    ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಸರಿಯಾಗಿ ಗುರುತಿಸುತ್ತಿಲ್ಲ ಎಂದು ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದಿದ್ದ ರಂಜಿತ ತಮ್ಮ ನಿರ್ಧಾರದಿಂದ ಹಿಂದೆ ಸರಿದು ಬುಧವಾರ ಮಂಡ್ಯಕ್ಕೆ ಆಗಮಿಸಿ ಅಧಿಕೃತವಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದರು.

    ಹಿರಿಯ ನಾಯಕರು, ಹಿತೈಷಿಗಳ ಸಲಹೆಯಂತೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ಮುಂಬರುವ ದಿನಗಳಲ್ಲಿ ಪಕ್ಷದಿಂದ ಸೂಕ್ತ ಅವಕಾಶ ಸಿಗುವ ಭರವಸೆಯಿದೆ. ಬುಧವಾರ ಬಸವ ಜಯಂತಿ. ಈ ಶುಭದಿನದಿಂದ ಕಾಂಗ್ರೆಸ್ ಪರ ಪ್ರಚಾರ ಮಾಡಲು ಬಂದಿದ್ದೇನೆ. ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷದಿಂದ ಯಾರೇ ಸ್ಪರ್ಧಿಸಿದ್ದರು ಅವರ ಪರ ಪ್ರಚಾರ ಮಾಡುತ್ತೇನೆ. ಮಂಡ್ಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ರಂಜಿತ ತಿಳಿಸಿದ್ದಾರೆ.

    ಇದೇ ಸಮಯದಲ್ಲಿ ರಮ್ಯಾ ಮಂಡ್ಯಕ್ಕೆ ಆಗಮಿಸುವ ಬಗ್ಗೆ ಮಾತನಾಡಿದ ಅವರು, ರಮ್ಯಾ ಅವರ ಹೆಸರು ಸ್ಟಾರ್ ಕ್ಯಾಂಪೇನ್ ಲಿಸ್ಟ್ ನಲ್ಲಿದೆ. ಅವರು ಎಲ್ಲ ಕಡೆ ಬಂದು ಪ್ರಚಾರ ಮಾಡುತ್ತಾರೆ. ಖಂಡಿತ ಮಂಡ್ಯಕ್ಕೆ ಬಂದು ಪ್ರಚಾರ ಮಾಡ್ತಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧವೇ ಸಿಡಿದ ರಮ್ಯಾ ತಾಯಿ-30 ವರ್ಷ ದುಡಿದ್ರೂ ಕಾಂಗ್ರೆಸ್‍ನಿಂದ ಅನ್ಯಾಯ!

    ಅಷ್ಟೇ ಅಲ್ಲದೇ ಸಿದ್ದರಾಮಯ್ಯ ಅವರ ಯೋಜನೆಗಳನ್ನು ಹಾಡಿ ಹೊಗಳಿದ ರಂಜಿತ, ಸಿಎಂ ಒಳ್ಳೊಳ್ಳೆ ಕೆಲಸ ಮಾಡಿದ್ದಾರೆ. ಎಲ್ಲ ರೀತಿಯ ಭಾಗ್ಯ ಕೊಟ್ಟಿದ್ದಾರೆ. ಜನರು ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಾರೆ. ಕಾಂಗ್ರೆಸ್ ಪಕ್ಷದ ಪರ ಯಾರೇ ನಿಂತರೂ ಗೆಲ್ಲುತ್ತಾರೆ. ಖಂಡಿತ ಈ ಬಾರೀ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಾಗಲೇ ರಮ್ಯಾ ತಾಯಿ ಕೈ ವಿರುದ್ಧ ಅಪಸ್ವರ ಎತ್ತಿದ್ದೇಕೆ?

    https://youtu.be/uwuE6Mz5wVU

  • ಮೋಹಕ ನಟಿ ರಮ್ಯಾ ಮದ್ವೆ ಆಗ್ತಾರಾ? ರಹಸ್ಯ ಬಿಚ್ಚಿಟ್ರು ತಾಯಿ ರಂಜಿತಾ

    ಮೋಹಕ ನಟಿ ರಮ್ಯಾ ಮದ್ವೆ ಆಗ್ತಾರಾ? ರಹಸ್ಯ ಬಿಚ್ಚಿಟ್ರು ತಾಯಿ ರಂಜಿತಾ

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್, ಲಕ್ಕಿ ಸ್ಟಾರ್ ರಮ್ಯಾ ಯಾವಾಗ ಮದುವೆ ಆಗ್ತಾರೆ ಎಂಬ ಕೂತುಹೂಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಆದ್ರೆ ಚಿತ್ರರಂಗದಿಂದ ದೂರ ಉಳಿದು ಸಕ್ರೀಯ ರಾಜಕಾರಣದಲ್ಲಿ ತೊಡಗಿಕೊಂಡಿರುವ ರಮ್ಯಾ ಮದುವೆ ಬಗ್ಗೆ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ನೀಡ್ತಿಲ್ಲ. ರಮ್ಯಾ ತಾಯಿ ರಂಜಿತಾ ಅವರು ಮಗಳ ಮದುವೆ ಬಗ್ಗೆ ಮಾತನಾಡಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಮ್ಯಾ ತಾಯಿ, ರಮ್ಯಾ ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಹಲವು ಬಾರಿ ಜಗಳ ಆಗಿದೆ. ರಾಜಕೀಯದಲ್ಲಿ ಒಂಟಿಯಾಗಿ ಇರೋದು ಕಷ್ಟವಾಗುತ್ತದೆ. ಹಾಗಾಗಿ ಆದಷ್ಟು ಬೇಗ ಮದುವೆಯಾಗು ಅಂತಾ ಸಲಹೆಯನ್ನು ಸಹ ನೀಡಿದ್ದೇನೆ. ಆದ್ರೆ ರಮ್ಯಾ ರಾಜಕೀಯ ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಗುರಿಯನ್ನು ಹೊಂದಿದ್ದಾರೆ. ನನ್ನ ಜೀವನದಲ್ಲಿ ಮದುವೆ ಎರಡನೇ ಸ್ಥಾನದಲ್ಲಿ, ಮೊದಲ ಗುರಿ ಸಾಧನೆ. ಹೀಗಾಗಿ ಸಾಧಿಸಿದ ಬಳಿಕ ಆಗುತ್ತೇನೆ ಅಂತಾ ಹೇಳಿರುವುದಾಗಿ ಅವರು ತಿಳಿಸಿದ್ದಾರೆ.

    ರಮ್ಯಾ 2003ರಲ್ಲಿ ‘ಅಭಿ’ ಚಿತ್ರದ ಮೂಲಕ ಸ್ಯಾಂಡಲ್‍ವುಡ್ ಗೆ ಪಾದಾರ್ಪಣೆ ಮಾಡಿದ್ದರು. ತಮ್ಮ ಮೋಹಕ ನಟನೆಯ ಮೂಲಕ ರಮ್ಯಾ ಸ್ಯಾಂಡಲ್‍ವುಡ್ ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಆಕ್ರಮಣಕಾರಿ ಟ್ವೀಟ್ ಗಳ ಮೂಲಕ ರಾಜಕೀಯದಲ್ಲಿಯೂ ಗುರುತಿಸಿಕೊಂಡಿದ್ದಾರೆ.

  • ಕಾಂಗ್ರೆಸ್ ವಿರುದ್ಧವೇ ಸಿಡಿದ ರಮ್ಯಾ ತಾಯಿ-30 ವರ್ಷ ದುಡಿದ್ರೂ ಕಾಂಗ್ರೆಸ್‍ನಿಂದ ಅನ್ಯಾಯ!

    ಕಾಂಗ್ರೆಸ್ ವಿರುದ್ಧವೇ ಸಿಡಿದ ರಮ್ಯಾ ತಾಯಿ-30 ವರ್ಷ ದುಡಿದ್ರೂ ಕಾಂಗ್ರೆಸ್‍ನಿಂದ ಅನ್ಯಾಯ!

    – ಅಂಬರೀಶ್ ವಿರುದ್ಧ ರಂಜಿತಾ ಸ್ಪರ್ಧೆ

    ಮಂಡ್ಯ: 2018 ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದೆ ರಮ್ಯಾ ಅವರ ತಾಯಿ ಸ್ಪರ್ಧೆ ಮಾಡಲಿದ್ದು, ಈ ಬಗ್ಗೆ ಇನ್ನೊಂದು ವಾರದಲ್ಲಿ ಮಂಡ್ಯಕ್ಕೆ ಬಂದು ಬೆಂಬಲಿಗರ ಜೊತೆ ಚರ್ಚಿಸಲಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ತಮ್ಮ ಆಪ್ತರ ಬಳಿ ನೋವು ತೋಡಿಕೊಂಡಿರುವ ರಮ್ಯಾ ತಾಯಿ ರಂಜಿತಾ, ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇವೆ. 1980ರ ದಶಕದಲ್ಲಿ 2 ರೂಪಾಯಿ ಕೊಟ್ಟು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದೇವೆ. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷಕ್ಕಾಗಿ ಮನೆ ಮನೆ ಬಾಗಿಲಿಗೆ ಹೋಗಿ ಕ್ಯಾಂಪೇನ್ ಮಾಡಿದ್ದೇವೆ. ಆದ್ರೆ ಕಾಂಗ್ರೆಸ್ ಪಕ್ಷದವರು ಪಕ್ಷಕ್ಕಾಗಿ ದುಡಿದ ನಮ್ಮನ್ನು ಕಡೆಗಣಿಸಿದ್ದಾರೆ ಅಂತ ತನ್ನ ಅಳಲುತೋಡಿಕೊಂಡಿದ್ದಾರೆ.

    ರಮ್ಯಾ ಅವರು ಸೋತ ನಂತರ ಅವರಿಗೂ ಯಾವುದೇ ಸ್ಥಾನಮಾನ ಕೊಡಲಿಲ್ಲ. ಕಾಂಗ್ರೆಸ್ ಪಕ್ಷದ ಒಳಗಿದ್ದುಕೊಂಡೇ ರಮ್ಯಾರನ್ನು ಸೋಲಿಸಿದ್ರು. ರಾಜ್ಯ ರಾಜಕಾರಣದಲ್ಲಿ ರಮ್ಯಾರನ್ನು ಕಡೆಗಣಿಸಲಾಗಿದೆ. ಇದೆಲ್ಲ ಮನಸ್ಸಿಗೆ ನೋವುಂಟು ಮಾಡಿದೆ. ಈ ನೋವು ರಮ್ಯಾಗೂ ಇದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯುತ್ತೇನೆ ಅಂತ ಅಸಮಾಧಾನ ಹೊರಹಾಕಿದ್ದಾರೆ.

    ಜನ ಆಶೀರ್ವಾದ ಮಾಡಿದ್ರೆ ಅವರ ಸೇವೆ ಮಾಡುತ್ತೇನೆ. ಕಾಂಗ್ರೆಸ್ ಪಕ್ಷದಿಂದಲೇ ಟಿಕೆಟ್ ಕೇಳುತ್ತಿದ್ದೆ. ಆದ್ರೆ ಅಂಬರೀಶ್ ಅಣ್ಣ ಕಾಂಗ್ರೆಸ್ ಪಕ್ಷದಿಂದ ಎಲೆಕ್ಷನ್‍ಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಪಕ್ಷದಿಂದ ಟಿಕೆಟ್ ಕೇಳಿಲ್ಲ. ನನ್ನ ಸ್ಪರ್ಧೆಯ ಬಗ್ಗೆ ರಮ್ಯಾ ಜೊತೆ ಮಾತನಾಡಿಲ್ಲ. ರಮ್ಯಾರನ್ನು ನಂಬಿ ಓಟ್ ಮಾಡಿದ ಮತದಾರರಿಗಾಗಿ ದುಡಿಯಬೇಕಿದೆ. ಹಾಗಾಗಿ ಚುನಾವಣೆಗೆ ನಿಲ್ಲುತ್ತೇನೆ ಅಂತ ಆಪ್ತರ ಬಳಿ ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.

  • ನಿತ್ಯಾನಂದ ಸ್ವಾಮೀಜಿ ಭಕ್ತರಿಂದ ಹಿಟ್ ಆ್ಯಂಡ್ ರನ್- ಶಿಷ್ಯೆ, ನಟಿ ರಂಜಿತಾ ಎಸ್ಕೇಪ್

    ನಿತ್ಯಾನಂದ ಸ್ವಾಮೀಜಿ ಭಕ್ತರಿಂದ ಹಿಟ್ ಆ್ಯಂಡ್ ರನ್- ಶಿಷ್ಯೆ, ನಟಿ ರಂಜಿತಾ ಎಸ್ಕೇಪ್

    ಬೆಂಗಳೂರು: ಕಾಮಿ ಸ್ವಾಮಿ ಕುಖ್ಯಾತಿಯ ನಿತ್ಯಾನಂದ ಸ್ವಾಮೀಜಿಯ ಶಿಷ್ಯೆ ರಂಜಿತಾ ಹೋಗ್ತಿದ್ದ ಧ್ಯಾನಪೀಠ ಆಶ್ರಮಕ್ಕೆ ಸೇರಿದ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ನಟಿ, ಶಿಷ್ಯೆ ರಂಜಿತಾ ಬೇರೊಂದು ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ.

    ಇಂದು ಮಧ್ಯಾಹ್ನ ನೆಲಮಂಗಲದ ಜಿಂದಾಲ್ ಬಳಿ ರಂಜಿತಾ ಮತ್ತು ಸಹಚರರಿದ್ದ ಫೋರ್ಡ್ ಕಾರ್, ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ನಾರಾಯಣ ಗೌಡ ಮತ್ತು ಹಿಂಬದಿ ಸವಾರ ಲಕ್ಷ್ಮೀಕಾಂತ್ ರಕ್ತದ ಮಡುವಿನಲ್ಲಿ ಬಿದ್ದಿದ್ರೂ ಕಾರ್ ನಿಲ್ಲಿಸದೆ ನಿತ್ಯಾನಂದ ಭಕ್ತರು ಎಸ್ಕೇಪ್ ಆಗಿದ್ದಾರೆ.

    ಕಾರು ನಿಲ್ಲಿಸದೇ ಎಸ್ಕೇಪ್ ಆದ ರಂಜಿತಾ ಆ್ಯಂಡ್ ಟೀಂನ್ನು ಸ್ಥಳೀಯರು ಬೆನ್ನಟ್ಟಿದ್ದಾರೆ. ನಗರದ ಎಂಟನೇ ಮೈಲಿನ ಬಳಿ ಕಾರನ್ನು ತಡೆದು ನೋಡಿದಾಗ ಒಳಗಡೆ ರಂಜಿತಾ ಇರೋದು ಗೊತ್ತಾಗಿದೆ. ಎಲ್ಲರಿಗೂ ಕಾರಿನಿಂದ ಕೆಳಗೆ ಇಳಿಯುವಂತೆ ಸಾರ್ವಜನಿಕರು ಹೇಳಿದ್ರೂ, ಯಾರು ಹೊರಗಡ ಬಂದಿಲ್ಲ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಕಾರಿನ ಗ್ಲಾಸ್ ಪುಡಿ ಪುಡಿ ಆಗುತ್ತಿದ್ದಂತೆ ರಂಜಿತಾ ಮತ್ತೊಂದು ವಾಹನದಲ್ಲಿ ಪರಾರಿ ಆಗಿದ್ದಾರೆ.

    ಈ ಸಂಬಂಧ ನೆಲಮಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಂಜಿತಾ ಚೆಲಿಸುತ್ತಿದ್ದ ಕಾರಿನ ಚಿತ್ರೀಕರಣಕ್ಕೆ ತೆರಳಿದ್ದ ಮಾದ್ಯಮದವರ ಮೇಲೆ ನಿತ್ಯಾನಂದರ ಶಿಷ್ಯರು ಹರಿಹಾಯ್ದಿದ್ದಾರೆ. ಮಾಧ್ಯಮದವರ ಫೋಟೋ ಕ್ಲಿಕ್ಕಿಸಿ ಬೆದರಿಕೆ ಹಾಕಿರುವ ಘಟನೆಯೂ ನಡೆದಿದೆ.

    https://www.youtube.com/watch?v=o6GPPAzSC-Y