Tag: raped

  • ಸೇಲ್ಸ್‌ಗರ್ಲ್‌ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಬಂಧನ

    ಸೇಲ್ಸ್‌ಗರ್ಲ್‌ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಬಂಧನ

    ಆನೇಕಲ್: ಉತ್ಪನ್ನಗಳನ್ನು ಮಾರಾಟ ಮಾಡಲು ಬಂದಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹೊಸಕೋಟೆ ತಾಲ್ಲೂಕಿನ ಬೈಲ ನರಸಾಪುರ ಪ್ರದೇಶದ ಬಳಿ ನಡೆದಿದೆ.

    ತಾಲ್ಲೂಕಿನ ಗಂಗಾಪುರ ಗ್ರಾಮದ ನಿವಾಸಿ ರಮೇಶ್ (40) ಬಂಧಿತ ಆರೋಪಿಯಾಗಿದ್ದು, ನಿನ್ನೆ ಸಂಜೆ ಬೈಲ ನರಸಾಪುರ ಬಳಿ ಘಟನೆ ನಡೆದಿದೆ.

    ಏನಿದು ಪ್ರಕರಣ?
    ಬೈಲ ನರಸಾಪುರದಲ್ಲಿ ಸಾಮಾಗ್ರಿಗಳನ್ನು ಮಾರಾಟ ಮಾಡಲು ಯುವತಿ ಆಗಮಿಸಿದ್ದಳು. ಸಂಜೆಯಾಗಿದ್ದರಿಂದ ಮರಳಿ ಮನೆಗೆ ಹೊರಡಲು ಸಿದ್ಧರಾಗಿ ಬಸ್ಸಿಗೆ ಕಾಯುತ್ತಿದ್ದಳು. ಆದರೆ ಬಸ್ ಬಾರದ ಕಾರಣ ಯುವತಿ ಟಿವಿಎಸ್ ಬೈಕಿನಲ್ಲಿ ಬರುತ್ತಿದ್ದ ಆರೋಪಿಯ ಬಳಿ ಡ್ರಾಪ್ ಕೇಳಿದ್ದಳು. ಯುವತಿಯನ್ನು ಬೈಕ್ ಹತ್ತಿಸಿಕೊಂಡಿದ್ದ ಆರೋಪಿ ರಮೇಶ್ ಬೈಲನರಸಾಪುರದಿಂದ ಗಂಗಾಪುರಕ್ಕೆ ಹೋಗುವ ಮಾರ್ಗವಾಗಿ ಮುಖ್ಯರಸ್ತೆಗೆ ಆಗಮಿಸಿ ಆ ಬಳಿಕ ಅಲ್ಲಿಂದ ಅಡ್ಡ ದಾರಿ ಇದೆ ಬೇಗ ಹೋಗಬಹುದು ಎಂದು ಕರೆದುಕೊಂಡು ಹೋಗಿದ್ದಾನೆ.

    ಮುಖ್ಯರಸ್ತೆ ಇಂದ ಆರೋಪಿ ಯುವತಿಯನ್ನ ತಮ್ಮದೇ ತೋಟದ ಪಂಪ್ ಹೌಸ್ ಬಳಿ ಕರೆದುಕೊಂಡು ಬಂದಿದ್ದು, ಅಲ್ಲಗೆ ಬರುತ್ತಿದಂತೆ ಯುವತಿಯ ಕತ್ತಿನ ಮೇಲೆ ಕುಡುಗೋಲಿನಿಂದ ಹಲ್ಲೆಗೆ ಮುಂದಾಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಹಂತದಲ್ಲಿ ಆರೋಪಿಯಿಂದ ತಪ್ಪಿಸಿಕೊಂಡ ಯುವತಿ ಗ್ರಾಮದ ಕಡೆ ಓಡಿ ಬಂದಿದ್ದು, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಘಟನೆ ಬಗ್ಗೆ ಯುವತಿ ನಂದಗುಡಿ ಪೊಲೀಸರಿಗೆ ದೂರು ನೀಡಿದ್ದು, ದೂರು ಪಡೆದ ಪೊಲೀಸರು ಆರೋಪಿ ರಮೇಶ್ ನನ್ನ ಬಂಧಿಸಿ ತನಿಖೆ ಆರಂಭಿಸಿದ್ದಾರೆ.

  • 13 ಬಾಲೆ ಮೇಲೆ ಅತ್ಯಾಚಾರ – ಕರೆಂಟ್ ಶಾಕ್ ನೀಡಿ ಕೊಲೆಗೈದ ಅಪ್ರಾಪ್ತ

    13 ಬಾಲೆ ಮೇಲೆ ಅತ್ಯಾಚಾರ – ಕರೆಂಟ್ ಶಾಕ್ ನೀಡಿ ಕೊಲೆಗೈದ ಅಪ್ರಾಪ್ತ

    ಚೆನ್ನೈ: ಅಪ್ರಾಪ್ತ ಬಾಲಕನೊಬ್ಬ ನೆರೆ ಮನೆಯ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಉತ್ತರ ಮದುರೈ ಪ್ರದೇಶದ ದಿಂಡಿಗಲ್ ಬಳಿ ನಡೆದಿದೆ.

    ಬಾಲಕಿಯ ಪೋಷಕರು ಕೂಲಿ ಕಾರ್ಮಿಕರಾಗಿದ್ದು ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಇದೇ ಸಮಯ ನೋಡಿ ಆರೋಪಿ ಮನೆಗೆ ಪ್ರವೇಶ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಪ್ರತಿರೋಧ ತೋರಿದ್ದು, ರಕ್ಷಣೆಗಾಗಿ ಕಿರುಚಾಡಲು ಆರಂಭಿಸಿದ್ದಾಳೆ. ಈ ವೇಳೆ ಬಾಲಕಿ ಮೇಲೆ ಹಲ್ಲೆ ನಡೆಸಿದ ಆರೋಪಿ ಅಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ಆರೋಪಿಯ ಕೃತ್ಯದಿಂದ ಆಕೆ ಮನೆಯಲ್ಲಿ ಪ್ರಜ್ಞಾನಹೀಳಾಗಿ ಬಿದ್ದಿದ್ದು, ತನ್ನ ಕೃತ್ಯವನ್ನು ಎಲ್ಲಿ ಬಯಲಿಗೆ ತರುತ್ತಾಳೋ ಎಂಬ ಭಯದಿಂದ ಆರೋಪಿ ಮನೆಯಲ್ಲಿದ್ದ ವಿದ್ಯುತ್ ತಂತಿಯನ್ನು ಆಕೆಯ ಬಾಯಿಗೆ ಇಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

    ಕೆಲಸ ಮುಗಿಸಿ ಸಂಜೆ ವೇಳೆಗೆ ಪೋಷಕರು ಮನೆಗೆ ಹಿಂದಿರುಗಿದ್ದು, ಈ ವೇಳೆ ಬಾಲಕಿ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿದ್ದಾಳೆ ಎಂದು ತಿಳಿದು ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ಬಾಲಕಿಯ ಮೂಗಿನಿಂದ ಹಾಗೂ ದೇಹದ ಮೇಲೆ ರಕ್ತದ ಕಲೆ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು ಖಚಿತವಾಗಿತ್ತು.

    ಬಾಲಕಿಯ ಪೋಷಕರು ಅಪ್ರಾಪ್ತ ಬಾಲಕನ ಮೇಲೆ ಅನುಮಾನ ವ್ಯಕ್ತಪಡಿಸಿದ ವೇಳೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೃತ್ಯವನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

  • ದೇವರ ಆದೇಶದಂತೆ ರೇಪ್ ಮಾಡಿದ್ದೇನೆ ಎಂದಿದ್ದ ದೇವಮಾನವನಿಗೆ 15 ವರ್ಷ ಜೈಲು

    ದೇವರ ಆದೇಶದಂತೆ ರೇಪ್ ಮಾಡಿದ್ದೇನೆ ಎಂದಿದ್ದ ದೇವಮಾನವನಿಗೆ 15 ವರ್ಷ ಜೈಲು

    ಸಿಯೋಲ್: ಚರ್ಚ್‍ನಲ್ಲಿ 8 ಜನ ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದ ಧರ್ಮ ಗುರುವಿಗೆ ದಕ್ಷಿಣ ಕೊರಿಯಾ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

    ಸಿಯೋಲ್‍ನ ಮಮಿನ್ ಸೆಂಟ್ರಲ್ ಚರ್ಚ್‍ನ ಲೀ ಜೇ ರಾಕ್ (75) ಜೈಲು ಶಿಕ್ಷೆಗೆ ಗುರಿಯಾದ ಧರ್ಮಗುರು. ಇತನು ಕ್ರಿಶ್ಚಿಯನ್ನರು ನಡೆಸುತ್ತಿದ್ದ ಸಂಸ್ಥೆಯ ಮುಖ್ಯಸ್ಥನಾಗಿದ್ದು, 1.30 ಲಕ್ಷ ಅನುಯಾಯಿಗಳನ್ನು ಹೊಂದಿದ್ದ. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಆರೋಪದಡಿ ಮೇ ತಿಂಗಳಿನಲ್ಲಿ ಬಂಧಿಸಲಾಗಿದ್ದ ಲೀ ಜೇ ರಾಕ್‍ಗೆ ಬುಧವಾರ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

    ಕೆಲಸ ಮಾಡುವಂತೆ ದೇವರಿಂದ ಆದೇಶ ಬಂದಿತ್ತು. ನಾನು ದೇವಮಾನವನಾಗಿದ್ದು ಹೀಗಾಗಿ ಮಾಡಿರುವೆ ಎಂದು ಲೀ ಜೇ ರಾಕ್, ಕೋರ್ಟ್ ಆದೇಶ ಬಳಿಕ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾನೆ.

    ಏನಿದು ಪ್ರಕರಣ?:
    ಲೀ ಜೇ ರಾಕ್ ತನ್ನ ಅಪಾರ್ಟಮೆಂಟ್‍ಗೆ ಬರುವಂತೆ ಹಾಗೂ ಲೈಂಗಿಕ ಕ್ರಿಯೆಗೆ ಒಳಗಾಗುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಮೂರು ಜನರ ಮಹಿಳೆ ದೂರು ನೀಡಿದ್ದರು. ನಾನು ಅವನ ವಿರುದ್ಧ ನಿಲ್ಲಲು ಸಾಧ್ಯವಾಗುತ್ತಿಲ್ಲ. ಅವನು ರಾಜ, ದೇವರು ಇದ್ದಂತೆ ಎಂದು ಸಂತ್ರಸ್ತ ಮಹಿಳೆಯೊಬ್ಬಳು ಭಯದಿಂದಲೇ ಮಾಧ್ಯಮಗಳ ಮುಂದೆ ತನ್ನ ಅಳಲು ತೋಡಿಕೊಂಡಿದ್ದಳು. ಈ ಮಹಿಳೆ ಹುಟ್ಟಿನಿಂದಲೇ ಚರ್ಚ್‍ನಲ್ಲಿ ವಾಸ್ತವ್ಯ ಪಡೆದಿದ್ದಳು.

    ಒಟ್ಟು 8 ಜನ ಸಂತ್ರಸ್ತ ಮಹಿಳೆಯರು ಲೀ ಜೇ ರಾಕ್ ವಿರುದ್ಧ ಧ್ವನಿ ಎತ್ತಿದ್ದರು. ಆರೋಪ ಬಂದ ಹಿನ್ನೆಲೆಯಲ್ಲಿ ಆತನನ್ನು ಮೇ ತಿಂಗಳಿನಲ್ಲಿ ಬಂಧಿಸಲಾಗಿತ್ತು. ಆರೋಪಿಯು ಸಂತ್ರಸ್ತ ಮಹಿಳೆಯರ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಹಾಗೂ ಕಿರುಕುಳ ನೀಡಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಕೋರ್ಟ್ ವಿಚಾರಣೆ ವೇಳೆ ಧರ್ಮಗುರುವಿನ ಮೇಲಿನ ಆರೋಪ ಸಾಬೀತಾಗಿತ್ತು.

    ನಾನು ದೇವಮಾನವ, ಪವಿತ್ರವಾದ ವ್ಯಕ್ತಿ, ಪರಿಶುದ್ಧ ಆತ್ಮ, ದೈವಿಕ ಶಕ್ತಿಯನ್ನು ಹೊಂದಿರುವುದಾಗಿ ಹೇಳಿಕೊಂಡು ಚರ್ಚ್ ಪ್ರಾರ್ಥನೆಗೆ ಬಂದು ಭಕ್ತರಿಗೆ ಮೋಸ ಮಾಡುತ್ತಿದ್ದ ಎಂದು ವರದಿಯಾಗಿದೆ.

    ಮಹಿಳೆಯ ಚರ್ಚ್ ಪ್ರವೇಶವನ್ನು ತಡೆದಿದ್ದಕ್ಕೆ ಲೈಂಗಿಕ ದೌರ್ಜನ್ಯ ಕೇಸ್ ಹಾಕಲಾಗಿದೆ ಎಂದು ಆರೋಪಿ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಆರೋಪ ಸಾಬೀತು ಆಗುತ್ತಿದ್ದಂತೆ ಕೋರ್ಟ್ 15 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆಟವಾಡುತ್ತಿದ್ದ 5ರ ಬಾಲೆಯ ಮೇಲೆ 12ರ ಪೋರನಿಂದ ಅತ್ಯಾಚಾರ!

    ಆಟವಾಡುತ್ತಿದ್ದ 5ರ ಬಾಲೆಯ ಮೇಲೆ 12ರ ಪೋರನಿಂದ ಅತ್ಯಾಚಾರ!

    ಲಕ್ನೋ: ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಷಹಜಾನ್‍ಪುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

    ಅತ್ಯಾಚಾರ ಎಸಗಿದ ಬಾಲಕ 12 ವರ್ಷದವನಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ಈ ಕುರಿತು ಕಾಲನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆದಿದೆ ಅಂತಾ ಗುರುವಾರ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಘಟನೆಯ ವಿವರ:
    ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಯೇ ಇದ್ದ 12 ವರ್ಷದ ಬಾಲಕ ಅಕೆಯನ್ನು ಮನೆಯ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    16ರ ಬಾಲೆ ಮೇಲೆ ಅತ್ಯಾಚಾರ:
    ಇಂತಹದ್ದೇ ಘಟನೆಯೊಂದು ಸೋಮವಾರ ರಾಜಸ್ಥಾನದ ಭೋಪಾ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿತ್ತು. ನೆರಮನೆಯಲ್ಲಿ ಕೈ ಬೋರ್ ನೀರು ತರಲು ಹೋಗಿದ್ದ 16 ವರ್ಷದ ಬಾಲಕಿಯ ಮೇಲೆ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಸೋಮವಾರ ನಡೆದಿತ್ತು. ಈ ಕುರಿತು ಸಂತ್ರಸ್ತ ಬಾಲಕಿಯ ಸಹೋದರ ಭೋಪಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ.

    ಬೋರ್ ನೀರು ತರಲು ಸಹೋದರಿ ಹೋಗಿದ್ದಳು. ಈ ವೇಳೆ ಅಲ್ಲಿಯೇ ಇದ್ದ ಕೆಲವು ಯುವಕರು ಆಕೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಅತ್ಯಾಚಾರದ ದೃಶ್ಯ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಸಹೋದರ ದೂರಿನಲ್ಲಿ ತಿಳಿಸಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬೆಂಗ್ಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್-ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

    ಬೆಂಗ್ಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್-ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

    ಬೆಂಗಳೂರು: 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂತೋಷ್, ಆಕಾಶ್ ಹಾಗೂ ಜೋಸೆಫ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಮಧ್ಯಾಹ್ನದ ವೇಳೆ ಬಾಲಕಿಯ ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

    ಸಂತ್ರಸ್ತ ಬಾಲಕಿಗೆ ಬಂಧಿತ ಆರೋಪಿ ಜೋಸೆಫ್ ಪರಿಚಯವಿತ್ತು ಎನ್ನಲಾಗಿದ್ದು. ಬಾಲಕಿಗೆ ಮಾತನಾಡುಲು ಬರುವಂತೆ ಹೇಳಿ ಕಾರಿಗೆ ಹತ್ತಿಸಿಕೊಂಡು ಹೆಬ್ಬಾಳದ ಮನೋರಾಯನ ಪಾಳ್ಯ ಬಳಿ ಅಪಹರಣ ಮಾಡಿದ್ದಾರೆ. ಬಳಿಕ ಮೂವರು ಆರೋಪಿಗಳು ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

    ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳು ಬಳಿಕ ಆಕೆಯನ್ನು ವಾಪಸ್ ಕರೆತಂದು ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯ ಪಾರ್ಕ್ ಬಳಿ ಬಿಟ್ಟು ತೆರಳಿದ್ದಾರೆ. ಬಾಲಕಿ ಮನೆಗೆ ವಾಪಸ್ ಆದ ವೇಳೆ ಅತ್ಯಾಚಾರ ಎಸಗಿದ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿ ನೀಡಿದ ಮಾಹಿತಿ ಮೇರೆಗೆ ಮೂರು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಘಟನೆಯ ಕುರಿತು ದೂರು ದಾಖಲಾಗಿದೆ.

  • 15 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ 70,000ಕ್ಕೆ ಮಾರಿಬಿಟ್ರು!

    ನವದೆಹಲಿ: ಛತ್ತೀಸ್‍ಗಢಕ್ಕೆ ಹೋಗಬೇಕಾಗಿದ್ದ 15 ವರ್ಷದ ಬಾಲಕಿ ರೈಲಿನಲ್ಲಿ ದೆಹಲಿಗೆ ಬಂದಿಳಿದಿದ್ದು, ಕಿಡಿಗೇಡಿಗಳು ಆಕೆಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಬಳಿಕ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಹುಮಾಯೂನ್ ಸಮಾಧಿ ಬಳಿ ಶುಕ್ರವಾರ ಬಂಧಿಸಿದ್ದಾರೆ.

    ನಡೆದಿದ್ದೇನು?: 15 ವರ್ಷದ ಬಾಲಕಿ ಚತ್ತೀಸ್ ಗಢದಲ್ಲಿರುವ ತಮ್ಮ ಸಂಬಂಧಿಕರ ಮನೆಗೆಂದು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಹೊರಟಿದ್ದಳು. ಆದ್ರೆ ಆಕೆ ಆಕಸ್ಮಿಕವಾಗಿ ಬೇರೆ ರೈಲು ಹತ್ತಿದ್ದರಿಂದ ದೆಹಲಿಗೆ ಬಂದಿಳಿದಿದ್ದಾಳೆ. ಈ ವೇಳೆ ಬಾಲಕಿಗೆ ರೈಲ್ವೆ ನಿಲ್ದಾಣದಲ್ಲಿ ನೀರಿನ ಬಾಟಲಿಗಳನ್ನು ಮಾರುತ್ತಿದ್ದ ಅರ್ಮಾನ್ ಎಂಬಾತ ಪರಿಚಯವಾಗುತ್ತಾನೆ. ಬಳಿಕ ಪತ್ನಿ ಹಸೀನಾಳ ನೆರವಿನೊಂದಿಗೆ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದನು. ನಂತರ ಪಪ್ಪು ಯಾದವ್ ಎಂಬಾತನಿಗೆ ದಂಪತಿ 70,000 ರೂ.ಗೆ ಬಾಲಕಿಯನ್ನು ಮಾರಾಟ ಮಾಡಿದ್ದರು.

    ಬಾಲಕಿಯನ್ನು ಮದುವೆಯಾಗುವುದಾಗಿ ಹೇಳಿದ್ದ ಪಪ್ಪು ಜೊತೆ ಬಾಲಕಿ 2 ತಿಂಗಳವರೆಗೂ ಫರೀದಾಬಾದ್ ನ ಮನೆಯಲ್ಲಿ ದೈಹಿಕ ಹಾಗೂ ಮಾನಸಿಕ ಹಿಂಸೆಯೊಂದಿಗೆ ನೆಲೆಸಿದ್ದಳು. ಬಳಿಕ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ಓಡಿ ಬಂದಿದ್ದ ಬಾಲಕಿಗೆ ಮತ್ತೆ ಹಸೀನಾ ಎದುರಾಗಿದ್ದಳು. ಈ ವೇಳೆ ಮತ್ತು ಬರುವ ಪಾನೀಯವನ್ನು ಬಾಲಕಿಗೆ ಕುಡಿಸಿದ ಹಸೀನಾ ಅವಳನ್ನು 22 ವರ್ಷದ ಮೊಹಮ್ಮದ್ ಅಫ್ರೋಜ್ ಎಂಬ ಯುವಕನಿಗೆ ಮಾರಾಟ ಮಾಡಿದ್ದಾಳೆ.

    ರೈಲ್ವೆ ನಿಲ್ದಾಣದಲ್ಲೇ ಅಫ್ರೋಜ್ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹಸೀನಾಗೆ ಒಂದಷ್ಟು ಹಣವನ್ನು ನೀಡಿದ್ದನು. ಹೇಗೋ ಕಾಮುಕನ ಕೈಯಿಂದ ತಪ್ಪಿಸಿಕೊಂಡ ಬಾಲಕಿ ಪ್ರಯಾಣಿಕರ ನೆರವಿನಿಂದ ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಪಪ್ಪು ಯಾದವ್ ಹಾಗೂ ಅಫ್ರೋಜ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹಾಗೂ ತಲೆಮರೆಸಿಕೊಂಡಿರೋ ಪ್ರಮುಖ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಸದ್ಯ ಬಾಲಕಿಗೆ ಏಮ್ಸ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್ ನಡೆಯುತ್ತಿದೆ.