Tag: Rapid Test

  • ಮಂಗಳೂರು ಏರ್ ಪೋರ್ಟ್ ರ್‍ಯಾಪಿಡ್ ಪಿಸಿಆರ್ ಟೆಸ್ಟ್ – ಅನಿವಾಸಿಗಳ ಬೇಡಿಕೆಗೆ ಸ್ಪಂದಿಸಿದ ದ.ಕ. ಡಿಸಿ

    ಮಂಗಳೂರು ಏರ್ ಪೋರ್ಟ್ ರ್‍ಯಾಪಿಡ್ ಪಿಸಿಆರ್ ಟೆಸ್ಟ್ – ಅನಿವಾಸಿಗಳ ಬೇಡಿಕೆಗೆ ಸ್ಪಂದಿಸಿದ ದ.ಕ. ಡಿಸಿ

    ಮಂಗಳೂರು: ಭಾರತದಿಂದ ಯುಎಇಗೆ ತೆರಳುವ ವಿಮಾನಕ್ಕೆ ಹಲವು ತಿಂಗಳು ನಿಷೇಧ ಹೇರಿದ್ದ ಯುಎಇ ಸರ್ಕಾರ ಆಗಸ್ಟ್ 5ರಂದು ನಿಷೇಧ ಹಿಂತೆಗೆದು ಹಲವು ಷರತ್ತು ಗಳೊಂದಿಗೆ ಪ್ರಯಾಣಿಸಲು ಅನುಮತಿ ನೀಡಿತ್ತು.

    ಯುಎಇ ರೆಸಿಡೆನ್ಸ್ ವಿಸಾ ಹೊಂದಿರಬೇಕು, ಎರಡು ವ್ಯಾಕ್ಸೀನೇಷನ್ ಪಡೆದಿರಬೇಕು, 48 ಘಂಟೆ ಮುಂಚೆ ಪಿಸಿಆರ್ ಟೆಸ್ಟ್ ನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಪಡೆದಿರಬೇಕು ಎಂಬ ಷರತ್ತಿನೊಂದಿಗೆ ಪ್ರಯಾಣ ಹೊರಡುವ ಮುನ್ನ ವಿಮಾನ ನಿಲ್ದಾಣದಲ್ಲಿಯೂ ರ್‍ಯಾಪಿಡ್ ಆರ್ಟಿ ಪಿಸಿಆರ್ ಟೆಸ್ಟ್ ನಡೆಸಬೇಕು ಎಂಬ ಹೊಸ ಷರತ್ತು ಸೇರ್ಪಡೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್‍ಯಾಪಿಡ್ ಆರ್ಟಿ ಪಿಸಿಆರ್ ಟೆಸ್ಟ್ ವ್ಯವಸ್ಥೆ ಇಲ್ಲದ ಕಾರಣ ಮಂಗಳೂರಿನಿಂದ ಯುಎಇಗೆ ವಿಮಾನಯಾನ ಆರಂಭವಾಗಿಲ್ಲ. ಕರಾವಳಿಯ ಕರ್ನಾಟಕದ ಸಾವಿರಾರು ಅನಿವಾಸಿಗಳು ಯುಎಇಗೆ ತೆರಳಲು ಬೆಂಗಳೂರು, ಮುಂಬೈ ವಿಮಾನ ನಿಲ್ದಾಣದ ಮೊರೆ ಹೋಗಬೇಕಾಗಿತ್ತು. ಇದನ್ನೂ ಓದಿ: ಮೂರನೇ ದೀರ್ಘ ಭಾಷಣ ಮಾಡಿದ ಪ್ರಧಾನಿ ಮೋದಿ

    ಅನಿವಾಸಿ ಕನ್ನಡಿಗರ ಈ ಸಮಸ್ಯೆಗಳ ಕುರಿತು ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾದ ಹಿದಾಯತ್ ಅಡ್ಡೂರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿರವರ ಗಮನಕ್ಕೆ ತಂದಾಗ ಅತೀ ಶೀಘ್ರದಲ್ಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಅವರು ನೀಡಿದ ಭರವಸೆಯಂತೆ ಇಂದು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್‍ಯಾಪಿಡ್ ಆರ್ಟಿ ಪಿಸಿಆರ್ ಟೆಸ್ಟ್ ಮಾಡುವ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಶೀಘ್ರವೇ ಮಂಗಳೂರು ಮೂಲಕ ಯುಎಇ ವಿಮಾನಯಾನ ಆರಂಭಗೊಳ್ಳಲಿದೆ.

    ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸ್ಪಂದನೆಗೆ ಹಿದಾಯತ್ ಅಡ್ಡೂರ್, ಕೆಎನ್‍ಆರ್‍ಐ ಯುಎಇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಇ ಮೂಳೂರು, ಬಿ.ಡಬ್ಲ್ಯು.ಎಫ್ ಅಧ್ಯಕ್ಷ ಮಹಮ್ಮದ್ ಆಲಿ ಉಚ್ಚಿಲ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಸಲೀಂ, ಕನ್ನಡ ಮಿತ್ರರು ಯುಎಇ ಅಧ್ಯಕ್ಷ ಶಶಿಧರ ನಾಗರಾಜಪ್ಪ ಹಾಗೂ ಇತರ ಕನ್ನಡ ಪರ ಸಂಘಟನೆಗಳು, ಕನ್ನಡಿಗರು ಧನ್ಯವಾದ ವ್ಯಕ್ತಪಡಿಸಿದ್ದಾರೆ.

  • ಕೋರ್ಟ್ ಆವರಣದಲ್ಲಿ ಕೋವಿಡ್ ಟೆಸ್ಟ್- ವರದಿ ಬಳಿಕವಷ್ಟೇ ನ್ಯಾಯಾಲಯಕ್ಕೆ ಎಂಟ್ರಿ

    ಕೋರ್ಟ್ ಆವರಣದಲ್ಲಿ ಕೋವಿಡ್ ಟೆಸ್ಟ್- ವರದಿ ಬಳಿಕವಷ್ಟೇ ನ್ಯಾಯಾಲಯಕ್ಕೆ ಎಂಟ್ರಿ

    ಶಿವಮೊಗ್ಗ: ಎಲ್ಲೆಡೆ ಅಪಾಯಕಾರಿಯಾಗಿ ಹರಡುತ್ತಿರುವ ಕೊರೊನಾ ಮಹಾಮಾರಿ ವೈರಸ್‍ನ ನಿಯಂತ್ರಣಕ್ಕೆ ಶಿವಮೊಗ್ಗ ಸತ್ರ ನ್ಯಾಯಾಲಯ ಮತ್ತಷ್ಟು ಬಿಗಿ ಕ್ರಮ ತೆಗೆದುಕೊಂಡಿದೆ. ಇಷ್ಟು ದಿನ ಆನ್‍ಲೈನ್ ಮೂಲಕ ಮತ್ತು ಕೋರ್ಟ್ ಒಳಭಾಗದಲ್ಲಿ ವಕೀಲರಿಗಷ್ಟೇ ಎಂಟ್ರಿ ನೀಡಿ ನಡೆಸಲಾಗುತ್ತಿದ್ದ ಕಲಾಪಕ್ಕೆ ಇದೀಗ ಕಕ್ಷಿದಾರರಿಗೂ ಅವಕಾಶ ನೀಡಲಾಗಿದೆ. ಆದರೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಿ ನ್ಯಾಯಾಲಯಕ್ಕೆ ಪ್ರವೇಶ ನೀಡಲು ಅನುಮತಿ ನೀಡಲಾಗುತ್ತಿದೆ.

    ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂಭಾಗದಲ್ಲಿಯೂ ಇದೀಗ ರ‍್ಯಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ನ್ಯಾಯಾಲಯದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ವಕೀಲರು, ಕಕ್ಷಿದಾರರು, ಆರೋಪಿಗಳು ಸೇರಿದಂತೆ ಎಲ್ಲರೂ ಕೋರ್ಟ್ ಒಳಗೆ ಪ್ರವೇಶಿಸಬೇಕೆಂದರೆ ಕೋವಿಡ್ ಟೆಸ್ಟ್ ಗೆ ಒಳಗಾಗುವುದು ಕಡ್ಡಾಯ. ಅಲ್ಲದೇ ನೆಗೆಟಿವ್ ವರದಿ ಬಂದ ಬಳಿಕವಷ್ಟೇ ಕೋರ್ಟ್ ಕಲಾಪಕ್ಕೆ ಪ್ರವೇಶ ನೀಡಲಾಗುತ್ತಿದೆ. ಪರಿಣಾಮ ಸದಾ ಜನರಿಂದ ಗಿಜಿಗುಡುತ್ತಿದ್ದ ನ್ಯಾಯಾಲಯದ ಆವರಣ ಇದೀಗ ಖಾಲಿ ಖಾಲಿ ಹೊಡೆಯುತ್ತಿದೆ

    ನಿನ್ನೆಯಿಂದ ಕೊರೋನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಶಿವಮೊಗ್ಗ ನ್ಯಾಯಾಲಯದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಬೆಳಗ್ಗೆ ಹಾಗೂ ಮಧ್ಯಾಹ್ನ ತಲಾ 10 ಪ್ರಕರಣಗಳಷ್ಟೇ ತೆಗೆದುಕೊಳ್ಳುತ್ತಿರುವ ನ್ಯಾಯಾಲಯ, ಅಗತ್ಯ ಬಿದ್ದರಷ್ಟೇ ಕಕ್ಷಿದಾರರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುತ್ತಿದೆ. ಆದರೆ ಇದಕ್ಕೂ ಕೂಡ ಕೊರೊನಾ ಟೆಸ್ಟ್ ಕಡ್ಡಾಯವಾಗಿದೆ. ಈಗಾಗಲೇ ನಿನ್ನೆಯಿಂದ ಸುಮಾರು 100 ರಿಂದ 150 ಜನರಿಗೆ ಉಚಿತವಾಗಿ ರ‍್ಯಾಪಿಡ್ ಟೆಸ್ಟ್ ನಡೆಸಿದ್ದು, ಇದರಲ್ಲಿ ಸುಮಾರು ಐವರಿಗೆ ಪಾಸಿಟಿವ್ ಬಂದಿದೆ. ಕೋರ್ಟ್ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಕೂಡ ನೆಮ್ಮದಿ ಮತ್ತು ಧೈರ್ಯದಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗಿದೆ. ಇತರೇ ಸರ್ಕಾರಿ ಕಚೇರಿಗಳು ಕೂಡ, ಬಿಗಿ ಕ್ರಮ ತೆಗೆದುಕೊಳ್ಳುವ ಮೂಲಕ ಕೊರೊನಾ ನಿಯಂತ್ರಣ ಮಾಡಬೇಕಿದೆ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ.

  • ರ‍್ಯಾಪಿಡ್ ಟೆಸ್ಟ್ ನೆಗೆಟಿವ್, ಸ್ವ್ಯಾಬ್ ಟೆಸ್ಟ್ ಪಾಸಿಟಿವ್ – 60ಕ್ಕೂ ಹೆಚ್ಚು ಮಂದಿ ಹೋಂ ಕ್ವಾರಂಟೈನ್

    ರ‍್ಯಾಪಿಡ್ ಟೆಸ್ಟ್ ನೆಗೆಟಿವ್, ಸ್ವ್ಯಾಬ್ ಟೆಸ್ಟ್ ಪಾಸಿಟಿವ್ – 60ಕ್ಕೂ ಹೆಚ್ಚು ಮಂದಿ ಹೋಂ ಕ್ವಾರಂಟೈನ್

    – ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಿ ಎಡವಟ್ಟು ಮಾಡಿದ ಆರೋಗ್ಯ ಇಲಾಖೆ

    ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ವರದಿ ಬರುವ ಮುನ್ನವೆ ಮೃತಪಟ್ಟ ವ್ಯಕ್ತಿಯ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿ ಆರೋಗ್ಯ ಇಲಾಖೆ ಎಡವಟ್ಟು ಮಾಡಿದೆ.

    ಮೃತ ವ್ಯಕ್ತಿಯ ಶವ ಪಡೆದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿ ಮೇಲೆ ಮೃತವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 60ಕ್ಕೂ ಹೆಚ್ಚು ಮಂದಿಯಲ್ಲಿ ಆತಂಕ ಶುರುವಾಗಿದೆ. ಯಳಂದೂರು ಬಳೇಪೇಟೆ ವರ್ಷದ ವೃದ್ಧರೊಬ್ಬರಿಗೆ ಗ್ಯಾಂಗ್ರಿನ್ ಆಗಿತ್ತು. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಲು ಬಂದಾಗ ಅವರಿಗೆ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗಿತ್ತು. ವರದಿ ನೆಗೆಟಿವ್ ಬಂದಿತ್ತು. ನಂತರ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು.

    ಆದರೆ ಅವರಿಗೆ ಕೋವಿಡ್-19 ಲಕ್ಷಣಗಳು ಕಂಡು ಬಂದಿದ್ದರಿಂದ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮುಂಚಯೇ ಅವರು ಮೃತಪಟ್ಟಿದ್ದರು. ಈ ವೇಳೆ ಎಡವಟ್ಟು ಮಾಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿ ಬರುವವರೆಗೂ ಕಾಯದೆ ಮೃತ ವ್ಯಕ್ತಿಯ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ಶವವನ್ನು ಯಳಂದೂರಿಗೆ ತೆಗೆದುಕೊಂಡು ಹೋದ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಇದೇ ವೇಳೆ ವರದಿ ಬಂದಿದ್ದು ಮೃತವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.

    ಈ ವಿಷಯ ತಿಳಿಯುವುದರೊಳಗೆ ಅಂತ್ಯಕ್ರಿಯೆ ಪೂರ್ಣ ಗೊಂಡಿತ್ತು. ಕೊರೊನಾ ಪಾಸಿಟಿವ್ ಸುದ್ದಿ ಕೇಳಿ ಮೃತನ ಕುಟುಂಬಸ್ಥರಲ್ಲಿ ಹಾಗೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡವರಲ್ಲಿ ಆತಂಕ ಶುರುವಾಗಿದೆ. ಇದೀಗ ಆರೋಗ್ಯ ಇಲಾಖೆ ಯಳಂದೂರಿನ ಬಳೇಪೇಟೆ ಪ್ರದೇಶಕ್ಕೆ ಸೋಂಕುನಿವಾರಕ ದ್ರಾವಣ ಸಿಂಪಡಿಸಿ ಸೀಲ್‍ಡೌನ್ ಮಾಡಿದ್ದಾರೆ. ಜೊತೆಗೆ ಇಲ್ಲಿನ ನಿವಾಸಿಗಳ ಕೊರೊನಾ ಟೆಸ್ಟ್ ಗೆ ಮುಂದಾಗಿದೆ.

  • ರ‍್ಯಾಪಿಡ್ ಟೆಸ್ಟ್‌ನಲ್ಲಿ ಪಾಸಿಟಿವ್, ಮೆಸೇಜ್‍ನಲ್ಲಿ ನೆಗೆಟಿವ್- ಸಹಾಯಕ್ಕಾಗಿ ಯುವಕನ ಕಣ್ಣೀರು

    ರ‍್ಯಾಪಿಡ್ ಟೆಸ್ಟ್‌ನಲ್ಲಿ ಪಾಸಿಟಿವ್, ಮೆಸೇಜ್‍ನಲ್ಲಿ ನೆಗೆಟಿವ್- ಸಹಾಯಕ್ಕಾಗಿ ಯುವಕನ ಕಣ್ಣೀರು

    ಬೆಂಗಳೂರು: ಕೊರೊನಾ ರ‍್ಯಾಪಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಆತನ ಮೊಬೈಲ್‍ಗೆ ನೆಗೆಟಿವ್ ಎಂದು ಸಂದೇಶ ಕಳುಹಿಸಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

    ನೆಲಮಂಗಲದಲ್ಲಿ ಜುಲೈ 24 ರಂದು ನಡೆಸಿದ್ದ ರ‍್ಯಾಪಿಡ್ ಟೆಸ್ಟ್ ನಲ್ಲಿ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಾಹಿತಿ ನೀಡಿದ್ದರು. ಅಲ್ಲದೆ ಅಂದೇ ಆತನನ್ನು ಬೆಂಗಳೂರಿನ ಜ್ಞಾನ ಭಾರತಿ ಕ್ಯಾಂಪಸ್‍ನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್ ಮಾಡಿದ್ದರು. ಆದರೆ ಮರುದಿನ ಜುಲೈ 25 ರಂದು ಆತನ ಮೊಬೈಲ್‍ಗೆ ನಿಮ್ಮ ಟೆಸ್ಟ್ ನೆಗೆಟಿವ್ ಬಂದಿದೆ ಎಂದು ಸಂದೇಶ ಬಂದಿದೆ.

    ಸದ್ಯ ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ಸಹಾಯ ಮಾಡುವಂತೆ ಮನವಿ ಮಾಡಿರುವ ಯುವಕ, ನನಗೆ ಪಾಸಿಟಿವ್ ಬಂದಿದೆ ಎಂದು ಕರೆ ಮಾಡಿ ಮಾಹಿತಿ ನೀಡಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಲು ತಿಳಿಸುತ್ತಾರೆ. ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೆ ನಿಮ್ಮ ಗ್ರಾಮ ಪಂಚಾಯಿತಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಎಂದು ಹೇಳುತ್ತಾರೆ.

    ನಾನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿರುವುದರಿಂದ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕ ಮಾಡಲು ಆಗುತ್ತಿಲ್ಲ. ಕ್ವಾರಂಟೈನ್ ಕೇಂದ್ರದಲ್ಲಿ 1,500ಕ್ಕೂ ಹೆಚ್ಚು ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೊಮ್ಮೆ ನನಗೆ ಸೋಂಕು ಇಲ್ಲದಿದ್ದರೂ ಇಲ್ಲಿ ಒಂದೇ ಬಾತ್ ರೂಂ ಬಳಕೆ ಮಾಡುವುದರಿಂದ ಸೋಂಕು ಹರಡುವ ಭಯವಿದೆ. ಮನೆಯಲ್ಲಿ 6 ತಿಂಗಳ ಗರ್ಭಿಣಿ ಪತ್ನಿ ಇದ್ದು, ಆಕೆಯೂ ಇದರಿಂದ ಸಾಕಷ್ಟು ನೊಂದಿದ್ದಾರೆ. ದಯವಿಟ್ಟು ನನ್ನ ಸಮಸ್ಯೆಯನ್ನ ಬಗೆಹರಿಸಿ ಎಂದು ಯುವಕ ಕಣ್ಣೀರಿಟ್ಟು ಮನವಿ ಮಾಡಿದ್ದಾರೆ.

  • ಸೋಂಕಿತರಿಗೆ ನೆಗೆಟಿವ್‌, ಆರೋಗ್ಯವಂತರಿಗೆ ಪಾಸಿಟಿವ್‌

    ಸೋಂಕಿತರಿಗೆ ನೆಗೆಟಿವ್‌, ಆರೋಗ್ಯವಂತರಿಗೆ ಪಾಸಿಟಿವ್‌

    ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಫಲಿತಾಂಶದ ಬಗ್ಗೆ ಗೊಂದಲ

    ಬೆಂಗಳೂರು: ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಫಲಿತಾಂಶದ ನಿಖರತೆ ಬಗ್ಗೆ ಹಲವು ಸಂದೇಹಗಳು ಎದ್ದಿವೆ. ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಡೆ ಆಟಿಜೆನ್ ಟೆಸ್ಟ್‌ಗಳ ಅಸಲಿ ಬಂಡವಾಳ ಬಯಲಾಗ್ತಿದೆ.

    ಪರೀಕ್ಷೆಯ ವೇಳೆ ಸೋಂಕಿತರಿಗೆ ನೆಗೆಟಿವ್ ಎಂದು, ಆರೋಗ್ಯವಂತರಿಗೆ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಆಂಟಿಜೆನ್ ಟೆಸ್ಟ್‌ಗಳ ಖಚಿತತೆ ಬಗ್ಗೆ ವೈದ್ಯರೇ ಅನುಮಾನ ವ್ಯಕ್ತಪಡಿಸ್ತಿದ್ದಾರೆ. ಆಂಟಿಜೆನ್ ಟೆಸ್ಟ್ ಮಾಡಿಸಿದ್ದರೂ ಆರ್‌ಟಿ – ಪಿಸಿಆರ್ ಟೆಸ್ಟ್ ಮಾಡಿಸಲು ಸೂಚಿಸುತ್ತಿದ್ದಾರೆ.

    ಹೊತ್ತಲ್ಲಿ ರಾಜ್ಯ ಸರ್ಕಾರ, ಇನ್ನೂ 5 ಲಕ್ಷ ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‍ಗಳ ಖರೀದಿಗೆ ಮುಂದಾಗಿದೆ. ಬೆಂಗಳೂರಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, 5 ಲಕ್ಷ ಆಂಟಿಜೆನ್ ಟೆಸ್ಟ್ ಖರೀದಿಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಇನ್ಮುಂದೆ ಟೆಸ್ಟ್‌ಗಳ ಸಂಖ್ಯೆಯನ್ನು ಜಾಸ್ತಿ ಮಾಡುತ್ತೇವೆ. 5 ಲಕ್ಷದಲ್ಲಿ ಅರ್ಧದಷ್ಟನ್ನು ಬೆಂಗಳೂರಿನಲ್ಲಿಯೇ ಬಳಸುತ್ತೇವೆ ಎಂದಿದ್ದಾರೆ.

    ನಿನ್ನೆ ಅಪೂರ್ಣಗೊಂಡಿದ್ದ ಕೋವಿಡ್‌ ಟಾಸ್ಕ್ ಫೋರ್ಸ್‌ ಸಭೆ ಇಂದು ನಡೆಯಿತು. ಈ ವೇಳೆ 5 ಲಕ್ಷ ರ‍್ಯಾಪಿಡ್ ಆಂಟಿಜನ್‌ ಕಿಟ್ ಖರೀದಿಗೆ ಅನುಮೋದನೆ ನೀಡಲಾಯಿತು. ರ‍್ಯಾಪಿಡ್ ಆಂಟಿಜನ್‌ ಟೆಸ್ಟ್‌ಗಳಿಗೆ ಸಂಬಂಧಿಸಿದಂತೆ ಸರ್ಕಾರ ಕಳುಹಿಸುವ ರೋಗಿಗಳಿಗೆ ಎರಡು ಸಾವಿರ ರೂ. ಮತ್ತು ಖಾಸಗಿಯಾಗಿ ಪರೀಕ್ಷೆಗೆ ಬಂದವರಿಗೆ ಮೂರು ಸಾವಿರ ರೂ. ಶುಲ್ಕ ನಿಗದಿಗೆ ತೀರ್ಮಾನಿಸಲಾಗಿದೆ.

    ಹೊಸದಾಗಿ 16 – ಆರ್‌ಟಿ – ಪಿಸಿಆರ್‌ ಮತ್ತು 15- ಆಟೋಮೇಟೆಡ್‌ ಆರ್‌ಎನ್‌ಎ ಎಕ್ಸಟ್ರಾಕ್ಷನ್‌ ಲ್ಯಾಬ್ ಸ್ಥಾಪನೆಗೂ ಸರ್ಕಾರ ಅನುಮೋದನೆ ನೀಡಲಾಗಿದೆ. ಇದರಿಂದ ಈಗ ಲಭ್ಯವಿರುವ ಲ್ಯಾಬ್‌ಗಳ ಜತೆಗೆ ಹೆಚ್ಚುವರಿಯಾಗಿ ಸೇರ್ಪಡೆಯಾಗಲಿದೆ. ಟೆಸ್ಟ್‌ಗಳ ಸಂಖ್ಯೆ ಸಹಜವಾಗಿ ಹೆಚ್ಚಾಗಲಿದ್ದು ದಿನಕ್ಕೆ ಐವತ್ತು ಸಾವಿರ ಟೆಸ್ಟ್‌ಗಳ ಗುರಿ ತಲುಪಲು ಸಾಧ್ಯವಾಗಲಿದೆ.

    ಏನಿದು ರ‍್ಯಾ‍‍ಪಿಡ್ ಟೆಸ್ಟ್‌?
    ಈಗ ಸಾಮಾನ್ಯ ಜ್ವರ ಬಂದರೂ ಕೊರೊನಾ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಇದರಲ್ಲಿ ನಿಖರ ಫಲಿತಾಂಶ ಬಂದರೂ ಫಲಿತಾಂಶ ಬರುವುದು ತಡವಾಗುತ್ತದೆ. ಹೀಗಾಗಿ ಸರ್ಕಾರ ರ‍್ಯಾ‍‍ಪಿಡ್ ಟೆಸ್ಟ್‌ಗೆ ಮುಂದಾಗಿದೆ. ಪಲ್ಸ್‌ ಆಕ್ಸಿ ಮೀಟರ್‌’ ಬಳಸಿ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದವರನ್ನು ಅವರಿದ್ದ ಸ್ಥಳಕ್ಕೆ ಹೋಗಿ ಪರೀಕ್ಷೆ ಮಾಡಬಹುದು. ಕೇವಲ 20 ರಿಂದ 30 ನಿಮಿಷದ ಒಳಗಡೆ ಫಲಿತಾಂಶವನ್ನು ಪಡೆಯಬಹುದು.