Tag: rapist

  • ಎಲ್ಲಾ ಪುರುಷರು ಅತ್ಯಾಚಾರಿಗಳು ಎನ್ನುವುದು ಸರಿಯಲ್ಲ: ಸ್ಮೃತಿ ಇರಾನಿ

    ಎಲ್ಲಾ ಪುರುಷರು ಅತ್ಯಾಚಾರಿಗಳು ಎನ್ನುವುದು ಸರಿಯಲ್ಲ: ಸ್ಮೃತಿ ಇರಾನಿ

    ನವದೆಹಲಿ: ದೇಶದ ಮಹಿಳೆ ಮತ್ತು ಮಕ್ಕಳ ರಕ್ಷಣೆ ಮುಖ್ಯ ಆದ್ಯತೆಯಾಗಬೇಕು. ಆದರೆ ಎಲ್ಲಾ ಮದುವೆಯೂ ಹಿಂಸಾತ್ಮಕ, ಎಲ್ಲಾ ಪುರುಷರು ಅತ್ಯಾಚಾರಿಗಳು ಎನ್ನುವುದು ಸರಿಯಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಭಿಪ್ರಾಯಪಟ್ಟಿದ್ದಾರೆ.

    ಸಿಪಿಐ ನಾಯಕ ಬಿನೋಯ್‌ ವಿಶ್ವಂ ಅವರ ವೈವಾಹಿಕ ಅತ್ಯಾಚಾರ ಹೇಳಿಕೆಗೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ ಅವರು, ಎಲ್ಲಾ ಮದುವೆಯೂ ಹಿಂಸಾತ್ಮಕ, ಎಲ್ಲಾ ಪುರುಷರೂ ಅತ್ಯಾಚಾರಿಗಳು ಎಂದು ಖಂಡಿಸುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ

    ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ದೇಶದಲ್ಲಿ ಮಹಿಳೆಯರನ್ನು ರಕ್ಷಿಸುವುದು ಸರ್ಕಾರದ ಪ್ರಯತ್ನವಾಗಿದೆ. ಪ್ರಸ್ತುತ ದೇಶಾದ್ಯಂತ 30 ಕ್ಕೂ ಹೆಚ್ಚು ಸಹಾಯವಾಣಿಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದ ಈವರೆಗೆ 66 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸಹಾಯವಾಗಿದೆ. ಅಲ್ಲದೇ 703 ʼಒನ್‌ ಸ್ಟಾಪ್‌ ಕೇಂದ್ರʼಗಳು ಕಾರ್ಯನಿರ್ವಹಿಸುತ್ತಿದ್ದು, ಇದರಿಂದ 5 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸಹಾಯವಾಗಿದೆ ಎಂದು ಹೇಳಿದ್ದಾರೆ.

    ಸಂಸತ್‌ನ ಪ್ರತಿ ಸದಸ್ಯರು ತಮ್ಮ ಜಿಲ್ಲೆಗಳಲ್ಲಿ ತಮ್ಮದೇ ನಾಯಕತ್ವದಲ್ಲಿ ದಿಶಾ ಸಭೆಯನ್ನು ಏರ್ಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಮಹಿಳಾ ಹಕ್ಕುಗಳ ಹೋರಾಟದಲ್ಲಿ ಬದ್ಧತೆಯಿಂದ ತೊಡಗಿಸಿಕೊಂಡರೆ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬಹುದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಜಯಲಲಿಲಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ – ಪೊಲೀಸರಿಗೆ ಸಂಕಷ್ಟ

    ಮಹಿಳೆಯರ ವಿರುದ್ಧ ಹೆಚ್ಚು ಅಪರಾಧಗಳು ನಡೆಯುವ ಸ್ಥಳಗಳಲ್ಲಿ ನಾವು ರಾಜ್ಯ ಸರ್ಕಾರಗಳ ಜೊತೆಗೆ ಹೆಚ್ಚುವರಿ ಒನ್‌ ಸ್ಟಾಪ್‌ ಕೇಂದ್ರಗಳನ್ನು ಸ್ಥಾಪಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

  • 3 ವರ್ಷದ ಮಗು ಮೇಲೆ 30ರ ಕಾಮಿಯಿಂದ ಅತ್ಯಾಚಾರಕ್ಕೆ ಯತ್ನ

    ಧಾರವಾಡ: 3 ವರ್ಷದ ಮಗು ಮೇಲೆ 30 ವರ್ಷದ ವಿಕೃತ ಕಾಮಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಕಾಮುಕನು ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪಾಪಿಯು ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ

    ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ಕಾಮುಕನನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

  • ದೀಪಾವಳಿಯಂದು ಪೂಜೆ ಮಾಡ್ತಿದ್ದ ಮಹಿಳೆ ಮೇಲೆ ಪೆಟ್ರೋಲ್ ಸುರಿದು ದೀಪ ಎಸೆದ!

    ದೀಪಾವಳಿಯಂದು ಪೂಜೆ ಮಾಡ್ತಿದ್ದ ಮಹಿಳೆ ಮೇಲೆ ಪೆಟ್ರೋಲ್ ಸುರಿದು ದೀಪ ಎಸೆದ!

    – ಮಹಿಳೆಯನ್ನು ಸುಟ್ಟು ಹಾಕಿದ ಅತ್ಯಾಚಾರಿ

    ಜೈಪುರ: ದೀಪಾವಳಿ ಹಬ್ಬದ ಪ್ರಯುಕ್ತ ಮಹಿಳೆಯೊಬ್ಬರು ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯ ಮೇಲೆ ಪೆಟ್ರೋಲ್ ಸುರಿದು ದೀಪ ಎಸೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಆರೋಪಿಯನ್ನು ಲೇಖರಾಜ್ 3ಂದು ಗುರುತಿಸಲಾಗಿದೆ. ಈತ ಮಹಿಳೆಯ ಪಕ್ಕದ ಮನೆ ನಿವಾಸಿಯಾಗಿದ್ದಾನೆ. ಈ ಹಿಂದೆ ಇದೇ ಮಹಿಳೆಯನ್ನು ಅತ್ಯಾಚಾರ ಎಸಗಿ ನಂತರ ಬ್ಲಾಕ್‍ಮೇಲ್ ಮಾಡುತ್ತಿದ್ದನು. ಹೀಗಾಗಿ ಮಹಿಳೆ ಲೇಖರಾಜ್ ವಿರುದ್ಧ ಜೈಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದರು. ಆದರೆ ಇದೂವರೆಗೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

    ಶನಿವಾರ ಅಂದರೆ ದೀಪಾವಳಿ ಹಬ್ಬದಂದು ರಾತ್ರಿ ಲೇಖರಾಜ್ ಏಕಾಏಕಿ ಮಹಿಳೆಯ ಮನೆಗೆ ನುಗ್ಗಿದ್ದಾನೆ. ಈ ವೇಳೆ ಪೂಜೆ ಮಾಡುತ್ತಿದ್ದ ಆಕೆಯ ಮೇಲೆ ಪೆಟ್ರೋಲ್ ಸುರಿದು ಉರಿಯುತ್ತಿದ್ದ ದೀಪವನ್ನು ಆಕೆಯ ಮೇಲೆ ಎಸೆದಿದ್ದಾನೆ. ಪರಿಣಾಮ ಮಹಿಳೆ ಬೆಂಕಿಗಾಹುತಿಯಾಗಿದ್ದಾರೆ.

    ಘಟನೆ ನಡೆದ ಕೂಡಲೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಹಿಳೆಯ ಮನೆಗೆ ಜೈಪುರ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇತ್ತ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಿಕೊಂಡರೂ ಆರೋಪಿಯನ್ನು ಇದೂವರೆಗೆ ಬಂಧಿಸಿಲ್ಲ.

  • ಕಳ್ಳತನಕ್ಕೆ ಹೋಗಿ ಯುವತಿ ಮೇಲೆ ರೇಪ್ ಮಾಡಿದ್ದ ಸೈಕೋ ರೇಪಿಸ್ಟ್ ಅರೆಸ್ಟ್

    ಕಳ್ಳತನಕ್ಕೆ ಹೋಗಿ ಯುವತಿ ಮೇಲೆ ರೇಪ್ ಮಾಡಿದ್ದ ಸೈಕೋ ರೇಪಿಸ್ಟ್ ಅರೆಸ್ಟ್

    ಬೆಂಗಳೂರು: ಕಳ್ಳತನ ಮಾಡಲು ಹೋಗಿ ಯುವತಿಯನ್ನು ರೇಪ್ ಮಾಡಿದ್ದ ಸೈಕೋ ರೇಪಿಸ್ಟ್ ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

    ದೇವರಾಜ್(21) ಅರೆಸ್ಟ್ ಆದ ರೇಪಿಸ್ಟ್. ನವೆಂಬರ್ 8ರಂದು ದೇವರಾಜ್ ಕಳ್ಳತನ ಮಾಡಲು ಹೋಗಿ ಮನೆಯಲ್ಲಿದ್ದ ಉತ್ತರ ಭಾರತೀಯ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದನು. ಕುರುಬರಹಳ್ಳಿಯ ಜೆ.ಸಿ ನಗರದ ನಿವಾಸಿಯಾಗಿರುವ ದೇವರಾಜ್‍ನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ದೇವರಾಜ್ ಜೆ.ಸಿ ನಗರದಲ್ಲಿ ತನ್ನ ಪೋಷಕರ ಜೊತೆ ವಾಸವಾಗಿದ್ದು, ರಾಜಾಜಿನಗರದಲ್ಲಿ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.

    ನಡೆದಿದ್ದೇನು?
    ಉತ್ತರ ಭಾರತೀಯ ಮೂಲದ ಮಹಿಳೆ ತನ್ನ ಇಬ್ಬರು ಸ್ನೇಹಿತರ ಜೊತೆ ಬಸವೇಶ್ವರ ನಗರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಹಿಳೆ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದು, ದೀಪಾವಳಿಗೆಂದು ಆಕೆಯ ಇಬ್ಬರು ಸ್ನೇಹಿತರು ಊರಿಗೆ ತೆರೆಳಿದ್ದರು. ನ. 8ರಂದು ದೇವರಾಜ್ ರಾತ್ರಿ ಸುಮಾರು 9.30ಕ್ಕೆ ಕಳ್ಳತನಕ್ಕೆಂದು ಮಹಿಳೆಯ ಮನೆಯ ಕಾಲಿಂಗ್ ಬೆಲ್ ಒತ್ತಿದ್ದಾನೆ. ಮಹಿಳೆ ಬಾಗಿಲು ತೆರೆಯುತ್ತಿದ್ದಂತೆ ದೇವರಾಜ್ ಆಕೆಯನ್ನು ತಳ್ಳಿಕೊಂಡು ಹೋಗಿ ಬಲವಂತವಾಗಿ ಮನೆಗೆ ಪ್ರವೇಶಿಸಿದ್ದಾನೆ. ಅಲ್ಲದೇ ಮಹಿಳೆಯ ಕೈ ಕಚ್ಚಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದಾನೆ.

    ಬಂಧಿಸಿದ್ದು ಹೇಗೆ?
    ಕೃತ್ಯ ಎಸಗಿದ ಬಳಿಕ ದೇವರಾಜ್ ಮನೆಯಿಂದ ಓಡಿ ಹೋಗಿದ್ದ. ರಾತ್ರಿ ಸುಮಾರು 10.49ಕ್ಕೆ ದೇವರಾಜ್ ಮನೆಯಿಂದ ಓಡಿ ಹೋಗುವಾಗ ರಸ್ತೆಯಲ್ಲೇ ಆರೋಪಿ ದೇವರಾಜ್ ಶರ್ಟ್ ಹಾಕಿಕೊಂಡ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪೊಲೀಸರು ಈ ಘಟನೆಯ ತನಿಖೆ ನಡೆಸುವಾಗ ಮೊದಲು ಸಿಸಿಟಿವಿ ದೊರೆತಿದೆ. ಈ ಸಿಸಿಟಿವಿ ದೃಶ್ಯಾವಳಿ ಮೂಲಕ ಆರೋಪಿಯ ಗುರುತು ಪತ್ತೆಯಾಗಿದ್ದು, ಇದಾದ ಬಳಿಕ ಪೊಲೀಸರು ಬೇರೆಡೆಯ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿದ್ದರು. ಅಂತಿಮವಾಗಿ ಶುಕ್ರವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ಮೇಲೆ ಪ್ರಕರಣಗಳು:
    ಆರೋಪಿ ದೇವರಾಜ್ ಮೇಲೆ ಈಗಾಗಲೇ ಪ್ರಕರಣಗಳು ದಾಖಲಾಗಿದೆ. ನಿಲ್ಲಿಸಿದ್ದ ವಾಹನಗಳ ಗಾಜನ್ನು ಒಡೆದಿದ್ದಕ್ಕೆ ಆರೋಪಿ ವಿರುದ್ಧ ನಂದಿನಿ ಲೇಔಟ್ ಹಾಗೂ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ ಮೂರು ತಿಂಗಳ ಹಿಂದೆ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಜೈಲು ಪಾಲಾಗಿದ್ದ. ಆದರೆ ಈಗ ಕಳ್ಳತನಕ್ಕೆ ಹೋಗಿ ಪೊಲೀಸರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೋರ್ಟ್ ಆವರಣದಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಅತ್ಯಾಚಾರ ಆರೋಪಿ

    ಕೋರ್ಟ್ ಆವರಣದಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಅತ್ಯಾಚಾರ ಆರೋಪಿ

    ಗುವಾಹಟಿ: ಮಗಳ ಮೇಲೆ ಆತ್ಯಾಚಾರ ಆರೋಪಕ್ಕೊಳಗಾಗಿದ್ದ ಆರೋಪಿಯು ತನ್ನ ಪತ್ನಿಯನ್ನು ಕೋರ್ಟ್ ಆವರಣದಲ್ಲೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಅಸ್ಸಾಂನ ದಿಬ್ರುಗರ್ ಜಿಲ್ಲೆಯಲ್ಲಿ ನಡೆದಿದೆ.

    ಪತ್ನಿ ರೀಟಾ ನೇಹಾರ್ ದೇಕಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಪೂರ್ಣ ನೇಹಾರ್ ದೇಕಾನು ಇಂದು ಬೆಳಗ್ಗೆ 10.30ರಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಳೆದ 9 ತಿಂಗಳ ಹಿಂದೆ ಆರೋಪಿಯ ವಿರುದ್ಧ ಪತ್ನಿಯು ಮಗಳ ಮೇಲೆ ಅತ್ಯಾಚಾರ ಮಾಡಿದ ದೂರು ದಾಖಲಿಸಿದ್ದಳು. ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಆರೋಪಿಯು ಸೆರೆವಾಸ ಅನುಭವಿಸಿ, ಕೆಲವು ದಿನಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಪ್ರಕರಣ ಕುರಿತಂತೆ ಇಂದು ಕೋರ್ಟ್ ನಲ್ಲಿ ವಿಚಾರಣೆಗೆ ಇಬ್ಬರೂ ಆಗಮಿಸಿದ್ದಾರೆ. ದಂಪತಿ ಕೋರ್ಟ್ ಆವರಣದ ಬೆಂಚ್ ಮೇಲೆ ಕುಳಿತಿದ್ದಾಗ ಆರೋಪಿಯು ಏಕಾಏಕಿ ಹರಿತವಾದ ಆಯುಧಗಳಿಂದ ಪತ್ನಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಸಿದೆಸ್ವರ್ ಬೋಹ್ರಾ ಹೇಳಿಕೆ ನೀಡಿದ್ದಾರೆ.

    ಕೂಡಲೇ ಮಹಿಳೆಯನ್ನು ದಿಬ್ರುಗರ್‍ನ ಅಸ್ಸಾಂ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗ ಮಧ್ಯೆಯೇ ಮೃತ ಪಟ್ಟಿದ್ದಾಳೆಂದು ವೈದ್ಯರು ದೃಢಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಆರೋಪಿ ಪೂರ್ಣ ನೇಹಾರ್ ದೇಕಾನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಘಟನೆ ಕುರಿತು ಆರೋಪಿಯು ಮಾಧ್ಯಮಗಳ ಮುಂದೆ, ನಾನು ಅಮಾಯಕ, ಆಕೆ ನನ್ನ ವಿರುದ್ಧ ಮಗಳ ಮೇಲೆ ಅತ್ಯಾಚಾರ ಆರೋಪದ ಸುಳ್ಳು ದೂರು ದಾಖಲಿಸಿದ್ದಳು. ನಾನು ಜಾಮೀನು ಪಡೆದು ಮನೆಗೆ ಬಂದಾಗ ನನ್ನನ್ನು ಮನೆಯ ಒಳಗೆ ಸೇರಿಸಿಕೊಳ್ಳಲಿಲ್ಲ ಆದ್ದರಿಂದ ಆಕೆಯನ್ನು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ.

  • ಕೊಡಲಿ ಹಿಡಿದು ಹಿಂಬಾಲಿಸಿದ ರೇಪಿಸ್ಟ್ ನಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ನಗ್ನವಾಗಿ ಓಡಿದ ಮಹಿಳೆ!

    ಕೊಡಲಿ ಹಿಡಿದು ಹಿಂಬಾಲಿಸಿದ ರೇಪಿಸ್ಟ್ ನಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ನಗ್ನವಾಗಿ ಓಡಿದ ಮಹಿಳೆ!

    ಭೋಪಾಲ್: ಬುರ್ಹಾನ್‍ಪುರ್ ಜೈಲಿನಿಂದ ಆಗ ತಾನೇ ಹೊರಬಂದಿದ್ದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗುಪ್ತೇಶ್ವರ್ ದೇವಸ್ಥಾನ ಪ್ರದೇಶದಲ್ಲಿನ ಅಮ್ರಾವತಿ ಹೆದ್ದಾರಿಯ ಬಳಿ ನಡೆದಿದೆ.

    ಆರೋಪಿ ರಮ್ಜಾನ್ ಸಂತ್ರಸ್ತೆಯನ್ನ ನಡುರಸ್ತೆಯಲ್ಲಿ ನಗ್ನ ಮಾಡಿ ಆಕೆಯ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ದು, ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ. ಇದರಿಂದ ಸಂತ್ರಸ್ತೆಯ ಮೈ ಮೇಲೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

    ಸಂತ್ರಸ್ತೆ ನಿರಂತರವಾಗಿ 20 ನಿಮಿಷಗಳ ಕಾಲ ಹಲ್ಲೆ ಮಾಡಿದ ವ್ಯಕ್ತಿ ಜೊತೆ ಹೋರಾಡಿದ್ದಾರೆ. ದೇಹವೆಲ್ಲಾ ರಕ್ತಸಿಕ್ತವಾಗಿ, ಆತನಿಂದ ತಪ್ಪಿಸಿಕೊಳ್ಳಲು ನಗ್ನವಾಗಿಯೇ ಸುಮಾರು ಅರ್ಧ ಕಿ.ಮೀ ದೂರ ಸಹಾಯಕ್ಕಾಗಿ ಓಡಿದ್ದಾರೆ. ಇದನ್ನು ನೋಡಿದ ಮತ್ತೊಬ್ಬ ಮಹಿಳೆ ಸಹಾಯಕ್ಕೆ ಧಾವಿಸಿದ್ದಾರೆ. ಅಷ್ಟೂ ಹೊತ್ತು ಸಂತ್ರಸ್ತೆಯ ಬಟ್ಟೆ ರಸ್ತೆಯಲ್ಲಿ ಬಿದ್ದಿತ್ತು. ನಂತರ ಮಹಿಳೆ ಬಟ್ಟೆಯನ್ನು ಸಂತ್ರಸ್ತೆಯ ಮೇಲೆ ಹೊದಿಸಿ, ಹೆದ್ದಾರಿವರೆಗೆ ಕರೆದುಕೊಂಡು ಹೋಗಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಆರೋಪಿ ರಮ್ಜಾನ್ ಈ ಹಿಂದೆ ಅನೇಕ ಬಾರಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ನಾನು ಪೊಲೀಸರಿಗೆ ದೂರು ನೀಡಿದ್ದರೂ ಅವರು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಿಟ್ಟು ಕಳಿಸಿದ್ದರು. ಎರಡು ವಾರಗಳ ಹಿಂದೆ ಮತ್ತೆ ಆರೋಪಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದ. ಆಗಲೂ ಪೊಲೀಸರಿಗೆ ಆತನ ವಿರುದ್ಧ ದೂರು ನೀಡಿದ್ದೆ. ಆಗ ಪೊಲೀಸರು ಮತ್ತೆ ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸರು ನಾನು ಕೊಟ್ಟ ದೂರನ್ನು ಗಂಭೀರವಾಗಿ ಪರಿಗಣಿಸಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ.

    ಈಗ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ವೈದ್ಯರು ಇಂದೋರ್‍ಗೆ ರವಾನಿಸಲು ಹೇಳಿದ್ದಾರೆ. ಸದ್ಯ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 307, 294, 323, 324 ಮತ್ತು 506ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ಸಂತ್ರಸ್ತೆಯ ಪತಿ 5 ವರ್ಷಗಳ ಹಿಂದೆ ಮೃತಪಟ್ಟಿದ್ದು, ಇಬ್ಬರು ಮ್ಕಕಳನ್ನು ಸಾಕಲು ದುಡಿಯುತ್ತಿದ್ದರು. ಜಮೀನಿನ ಕೆಲಸ ಮತ್ತು ಕಾಡಿನಿಂದ ಜಾನುವಾರುಗಳಿಗೆ ಮೇವು ಸಂಗ್ರಹಿಸುವ ಕೆಲಸ ಮಾಡಿಕೊಂಡಿದ್ದರು. ಮಹಿಳೆ ಒಬ್ಬರೇ ಕೆಲಸ ಮಾಡುವುದನ್ನು ನೋಡಿದ್ದ ಆರೋಪಿ ರಮ್ಜಾನ್, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಪ್ರತಿ ಬಾರಿಯೂ ಮಹಿಳೆ ಇದಕ್ಕೆ ವಿರೋಧಿಸಿದ್ದರು. ಆದ್ರೆ ಒಂದು ದಿನ ಅತ್ಯಾಚಾರ ಮಾಡಿಯೇಬಿಟ್ಟ. ಅನಂತರವೂ ಹಲವು ಬಾರಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ. ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರೇ ಹೊರತು ಈವರೆಗೆ ಅತ್ಯಾಚಾರ ಪ್ರಕರಣ ದಾಖಲಿಸಿರಲಿಲ್ಲ ಎಂದು ವರದಿಯಾಗಿದೆ.

  • ಗ್ಯಾಂಗ್‍ರೇಪ್ ಎಸಗಿ, ಅಪ್ರಾಪ್ತೆಯ ಗುಪ್ತಾಂಗವನ್ನು ಗಂಭೀರ ಗಾಯಗೊಳಿಸಿ ಚಲಿಸುತ್ತಿರುವ ರೈಲಿನಿಂದ ಎಸೆದ್ರು!

    ಗ್ಯಾಂಗ್‍ರೇಪ್ ಎಸಗಿ, ಅಪ್ರಾಪ್ತೆಯ ಗುಪ್ತಾಂಗವನ್ನು ಗಂಭೀರ ಗಾಯಗೊಳಿಸಿ ಚಲಿಸುತ್ತಿರುವ ರೈಲಿನಿಂದ ಎಸೆದ್ರು!

    ಪಾಟ್ನಾ: ಚಲಿಸುತ್ತಿರುವ ರೈಲಿನಲ್ಲೇ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ಗುಪ್ತಾಂಗವನ್ನು ಗಂಭೀರ ಗಾಯಗೊಳಿಸಿ ಬಳಿಕ ರೈಲಿನಿಂದ ಎಸೆದ ಅಮಾನವೀಯ ಘಟನೆಯೊಂದು ಬಿಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸಂತ್ರಸ್ತೆ 10 ತರಗತಿ ಓದುತ್ತಿದ್ದು, ಭಾನುವಾರ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿಯ ಆಸ್ಪತ್ರೆಗೆ ಬಂದ ವೇಳೆ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಸದ್ಯ ಬಾಲಕಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾಳೆ.

    ನಡೆದಿದ್ದೇನು?: ಲಖಿಸರಾಯಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಬಹಿರ್ದೆಸೆಗೆಂದು ಹೊರಬಂದಿದ್ದ ವೇಳೆ ಸಂತೋಷ್ ಯಾದವ್ ಹಾಗೂ ಮೃತ್ಯುಂಜಯ್ ಯಾದವ್ ಎಂಬ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಬಳಿಕ 6 ಮಂದಿ ಕಾಮುಕರು ಅತ್ಯಾಚಾರವೆಸಗಲು ಮುಂದಾದ್ರು. ಅಲ್ಲದೇ ರೈಲಿನೊಳಗೆ ಕರೆದುಕೊಂಡು ಹೋಗಿ ಮತ್ತೆ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಗುಪ್ತಾಂಗವನ್ನು ಗಂಭೀರ ಗಾಯಗೊಳಿಸಿದ್ದಾರೆ. ಕೊಲೆ ಮಾಡಿ ರೈಲಿನಿಂದ ಬಿಸಾಕುವುದಾಗಿ ಮಾತನಾಡುತ್ತಿದ್ದಿದ್ದು ಕೇಳಿಸಿತ್ತು. ಆದ್ರೆ ನನಗೆ ಪ್ರಜ್ಞೆ ಬಂದಾಗ ಆಸ್ಪತ್ರೆಯಲ್ಲಿದ್ದೆ ಅಂತಾ ಸಂತ್ರಸ್ತೆ ತಿಳಿಸಿದ್ದಾಳೆ.

    ಕಾಮುಕರು ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಗಂಭೀರ ಗಾಯಗೊಳಿಸಿ ಕಿವುಲ್ ಜಂಕ್ಷನ್ ಬಳಿ ರೈಲಿನಿಂದ ಆಕೆಯನ್ನು ಎಸೆದಿದ್ದರು. ಅರೆಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯನ್ನು ಕಂಡ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಆಕೆಯ ಪೋಷಕರು ಹಾಗೂ ಸಂಬಂಧಿಕರಿಗೆ ವಿಚಾರ ತಲುಪಿಸಿದ್ದಾರೆ. ತದನಂತರ ಬಾಲಕಿಯ ಪೋಷಕರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ.

    ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಿಂದ ಪಾಟ್ನಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲೆಂದು ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಅಲ್ಲಿ ಆಕೆಗೆ ಬೆಡ್ ವ್ಯವಸ್ಥೆ ಸಿಗದೆ ಕೆಲವು ಗಂಟೆಗಳ ಕಾಲ ನೆಲದ ಮೇಲೆಯೇ ಬಾಲಕಿ ನರಳಾಟ ಅನುಭವಿಸಿದ್ದಳು.

    ಸದ್ಯ ಬಾಲಕಿಯ ಗುಪ್ತಾಂಗಕ್ಕೆ 2 ಡಜನ್ ನಷ್ಟು ಸ್ಟಿಚ್ ಹಾಕಿದ್ದಾರೆ. ಎರಡೂ ಪಾದಗಳಿಗೂ ಗಂಭೀರ ಗಾಯಗಳಾಗಿವೆ. ಅಲ್ಲದೇ ಸೊಂಟ, ದೇಹದ ಎಲುಬುಗಳಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಅಂತಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

    ಪ್ರಕರಣ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಘಟನೆಗೆ ಸಂಬಂಧಿಸಿದಂತೆ ಶೀಘ್ರವೇ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಅಂತಾ ಮೂಲಗಳು ತಿಳಿಸಿವೆ. ಆದ್ರೆ ಸ್ಥಳೀಯ ಪೊಲೀಸರು ಪ್ರೇಮ ಸಂಬಂಧ ಕಲ್ಪಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

    ಪ್ರಕರಣದ ಗಂಭೀರತೆ ಮತ್ತು ಮಾಧ್ಯಮದಲ್ಲಿ ಹೆಚ್ಚು ಸುದ್ದಿಯಾದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವ ಆರೋಪಿ ಜುವೆಲಿನ್ ಎಂಬಾತನನ್ನು ಬಂಧಿಸಿದ್ದಾರೆ.