Tag: ravan

  • ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌-ಬಿಜೆಪಿ ನಡುವೆ ಶುರುವಾಯ್ತು ಪೋಸ್ಟರ್ ವಾರ್

    ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌-ಬಿಜೆಪಿ ನಡುವೆ ಶುರುವಾಯ್ತು ಪೋಸ್ಟರ್ ವಾರ್

    ನವದೆಹಲಿ: ಪಂಚರಾಜ್ಯಗಳ ಚುನಾವಣೆ ಘೋಷಣೆಗೆ ಇನ್ನೂ ಕೆಲವೇ ದಿನ ಬಾಕಿ ಇದ್ದು, ಚುನಾವಣೆ ಘೋಷಣೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ವಾರ್ ಶುರುವಾಗಿದೆ. ಬಿಜೆಪಿ ಸಂಸದ ರಾಹುಲ್‌ ಗಾಂಧಿಯನ್ನು (Rahul Gandhi) ಹೊಸ ಕಾಲದ ರಾವಣ ಎಂದರೆ, ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನ ಸುಳ್ಳುಗಾರ ಎಂದು ಕರೆದಿದೆ.

    ಶುಕ್ರವಾರ ಎಕ್ಸ್‌ ಪೋಸ್ಟ್‌ನಲ್ಲಿ ಎರಡು ಪಕ್ಷಗಳ ನಡುವೆ ಪೋಸ್ಟರ್ ಸಮರ ಏರ್ಪಟ್ಟಿದೆ. ಹತ್ತು ತಲೆಗಳಿರುವ ರಾಹುಲ್ ಗಾಂಧಿ ಫೋಟೋ ಶೇರ್ ಮಾಡಿರುವ ಬಿಜೆಪಿ ಹೊಸ ಕಾಲದ ರಾವಣ ಎಂದು ಸಂಭೋಧಿಸಿದೆ. ಅವನು ದುಷ್ಟ, ಧರ್ಮ ವಿರೋಧಿ, ರಾಮನ ವಿರೋಧಿ. ಅವನ ಗುರಿ ಭಾರತವನ್ನು ನಾಶ ಮಾಡುವುದು ಎಂದು ಬಿಜೆಪಿ ಪೋಸ್ಟರ್‌ನಲ್ಲಿ ಹೇಳಿದೆ‌. ಇದನ್ನೂ ಓದಿ: ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ – ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ

    ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ಕಾಂಗ್ರೆಸ್ (Congress) ದೊಡ್ಡ ಸುಳ್ಳುಗಾರ ಎಂದು ಟೀಕಿಸಿದೆ. ಮುಂದುವರಿದು ಇನ್ನೂ ಹಲವು ಪೋಸ್ಟರ್ ಪೋಸ್ಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಅದಾನಿ’, ‘ಜುಮ್ಲಾ ಬಾಯ್’ ಎಂದು ಶೀರ್ಷಿಕೆ ನೀಡಿ ಫೋಟೋ ಅಪ್ಲೋಡ್ ಮಾಡಿದೆ.

    ಬಳಿಕ ಈ ಬಗ್ಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಇದೊಂದು ಅಸಹ್ಯಕರ ಪೋಸ್ಟ್, ರಾವಣ ಪೋಸ್ಟರ್ ಮೂಲಕ ರಾಹುಲ್ ಗಾಂಧಿ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶ ಹೊಂದಿದೆ ಎಂದು ಹೇಳಿದೆ. ರಾಹುಲ್‌ ಗಾಂಧಿ ತಂದೆ ಮತ್ತು ಅಜ್ಜಿಯನ್ನು ದುಷ್ಟ ಶಕ್ತಿಗಳಿಂದ ಹತ್ಯೆ ಮಾಡಲಾಗಿದೆ. ಈಗ ಬಿಜೆಪಿ (BJP) ಭಾರತವನ್ನು ವಿಭಜಿಸಲು ಬಯಸುತ್ತದೆ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್ – ದಿನಾಂಕ ಘೋಷಣೆ ಯಾವಾಗ?

    ಪೋಸ್ಟರ್‌ಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಗೌರವಾನ್ವಿತ ನರೇಂದ್ರ ಮೋದಿ ಅವರೇ ಮತ್ತು ಜೆ.ಪಿ. ನಡ್ಡಾ ಅವರೇ ನೀವು ರಾಜಕೀಯ ಮತ್ತು ಚರ್ಚೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಲು ಬಯಸುತ್ತೀರಿ? ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಟ್ವೀಟ್‌ಗಳನ್ನು ನೀವು ಒಪ್ಪುತ್ತೀರಾ? ನಿಮ್ಮ ಪಕ್ಷದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆಯೇ? ನೀವು ಮಾಡಿದ ಭರವಸೆಗಳಂತೆಯೇ ನೀವು ಮಾಡಿದ ಪ್ರಮಾಣಗಳನ್ನು ಮರೆತುಬಿಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ – ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ

    ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ – ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ

    ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ರಾವಣನಂತೆ (Ravan) ಬಿಂಬಿಸಿ, ನವಯುಗದ ರಾವಣ ಎಂದು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಈ ವಿವಾದಾತ್ಮಕ ಪೋಸ್ಟರ್‌ನ್ನು ಬಿಜೆಪಿ (BJP) ತನ್ನ ಎಕ್ಸ್ ಖಾತೆಯಲ್ಲಿ (ಟ್ವಿಟ್ಟರ್) ಹಂಚಿಕೊಂಡಿದೆ. ಈ ಟ್ವೀಟ್ ಈಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

    ಪೋಸ್ಟರ್‌ನಲ್ಲಿ ಬಿಜೆಪಿ, ರಾವಣ, ಕಾಂಗ್ರೆಸ್ ಪಕ್ಷದ ನಿರ್ಮಾಣ, ಜಾರ್ಜ್ ಸೊರೊಸ್ ನಿರ್ದೇಶನ ಎಂದು ಬರೆದಿದೆ. ಅಲ್ಲದೇ ಚಿತ್ರದಲ್ಲಿ ರಾವಣನಂತೆಯೇ ರಾಹುಲ್ ಗಾಂಧಿಯವರಿಗೆ ಬಹು ತಲೆಗಳನ್ನು ಬಿಡಿಸಲಾಗಿದೆ. ಅಲ್ಲದೇ ರಾವಣನಂತೆ ರಕ್ಷಾಕವಚವನ್ನು ಧರಿಸಿರುವುದನ್ನು ತೋರಿಸಲಾಗಿದೆ. ಇದರ ಜೊತೆ ಹೊಸ ಯುಗದ ರಾವಣ ಬಂದಿದ್ದಾನೆ. ಅವನು ದುಷ್ಟ, ಧರ್ಮ ವಿರೋಧಿ, ರಾಮನ ವಿರೋಧಿ ಮತ್ತು ಅವನ ಗುರಿ ಭಾರತವನ್ನು ನಾಶಮಾಡುವುದು ಎಂದು ಬಿಜೆಪಿ ಬರೆದುಕೊಂಡಿದೆ. ಇದನ್ನೂ ಓದಿ: ಸಿರಿಯಾದಲ್ಲಿ ಉಗ್ರರ ಅಟ್ಟಹಾಸ – 100 ಕ್ಕೂ ಹೆಚ್ಚು ಮಂದಿ ಬಲಿ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಎಕ್ಸ್ ಪೋಸ್ಟ್‌ನಲ್ಲಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಬಿಜೆಪಿ ಈ ರೀತಿ ಮಾಡಿದೆ ಎಂದು ಬರೆದುಕೊಂಡಿದ್ದಾರೆ.

    ಮತ್ತೋರ್ವ ನಾಯಕ ಕೆ.ಸಿ ವೇಣುಗೋಪಾಲ್ ಅವರು ಸಹ ಬಿಜೆಪಿಯ ಈ ನಡೆಯನ್ನು ಖಂಡಿಸಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಇದನ್ನು ಖಂಡಿಸಲು ಯಾವುದೇ ಪದಗಳಿಲ್ಲ. ಅವರ ದುಷ್ಟ ಉದ್ದೇಶಗಳು ಸ್ಪಷ್ಟವಾಗಿವೆ. ಆ ಪೋಸ್ಟರ್‌ನ ಉದ್ದೇಶ ರಾಹುಲ್ ಅವರ ಅಜ್ಜಿ ಹಾಗೂ ತಂದೆಯಂತೆ ಅವರನ್ನು ಕೊಲ್ಲುವುದಾಗಿದೆ ಎಂದು ಬರೆದುಕೊಂಡಿದ್ದಾರೆ.

    ಈ ಪೋಸ್ಟರ್ ಮೂಲಕ ಹಂಗೇರಿಯನ್-ಅಮೆರಿಕನ್ ಉದ್ಯಮಿ ಸೊರೊಸ್ ಅವರನ್ನು ಬಿಜೆಪಿ ಮತ್ತೆ ಎಳೆದು ತಂದಿದೆ. ಪ್ರಪಂಚದಾದ್ಯಂತದ ಅನೇಕ ಗುಂಪುಗಳಿಗೆ ದೇಣಿಗೆಗಳನ್ನು ನೀಡಿ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎಂಬ ಮಾತುಗಳು ಅವರ ವಿರುದ್ಧ ಕೇಳಿ ಬಂದಿವೆ. ಇದನ್ನೂ ಓದಿ: ದೇಶ ಬಿಟ್ಟು ತೊಲಗುವಂತೆ ಅಫ್ಘಾನ್‌ ನಿರಾಶ್ರಿತರಿಗೆ ಪಾಕ್ ಸರ್ಕಾರ ವಾರ್ನಿಂಗ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾವಣನ ಪ್ರತಿಕೃತಿಯ ತಲೆಗಳು ಸುಟ್ಟುಹೋಗದಕ್ಕೆ ನೌಕರ ಅಮಾನತು

    ರಾವಣನ ಪ್ರತಿಕೃತಿಯ ತಲೆಗಳು ಸುಟ್ಟುಹೋಗದಕ್ಕೆ ನೌಕರ ಅಮಾನತು

    ರಾಯ್ಪುರ: ದಸರಾ (Dasara) ಆಚರಣೆಯ ವೇಳೆ ರಾವಣನ (Ravan) ಪ್ರತಿಕೃತಿ ಸುಟ್ಟಾಗ ಅದರ 10 ತಲೆಗಳು ಸುಡದೇ ಹೋಗಿದ್ದಕ್ಕೆ ಛತ್ತೀಸ್‌ಗಢದ (Chhattisgarh) ಧಮ್ತಾರಿ (Dhamtari) ನಾಗರಿಕ ಸಂಸ್ಥೆಯ ನೌಕರನನ್ನು ಅಮಾನತುಗೊಳಿಸಿ, ನಾಲ್ವರು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಿರುವ ಘಟನೆ ವರದಿಯಾಗಿದೆ.

    ಅಕ್ಟೋಬರ್ 5 ರಂದು ಧಮ್ತಾರಿಯ ರಾಮಲೀಲಾ ಮೈದಾನದಲ್ಲಿ ನಡೆದ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ರಾವಣನ ಮುಂಡ ಮಾತ್ರವೇ ಸುಟ್ಟು ಹೋಗಿದ್ದು, ತಲೆಗಳು ಸುಡದೇ ಹಾಗೇ ಉಳಿದು ಹೋಗಿತ್ತು.

    ಈ ಕಾರ್ಯಕ್ರಮವನ್ನು ಸ್ಥಳೀಯ ನಾಗರಿಕ ಸಂಸ್ಥೆ ಆಯೋಜಿಸಿತ್ತು. ರಾವಣನ ಮೂರ್ತಿ ತಯಾರಿಕೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಧಮ್ತಾರಿ ಮುನ್ಸಿಪಲ್ ಕಾರ್ಪೊರೇಷನ್ (ಡಿಎಂಸಿ) ಗುಮಾಸ್ತ ರಾಜೇಂದ್ರ ಯಾದವ್ ಅವರನ್ನು ಅಮಾನತುಗೊಳಿಸಿದೆ. ಇದನ್ನೂ ಓದಿ: ನನಗೆ ವೋಟು ಹಾಕಬೇಡಿ – ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ಅಪ್ಪಚ್ಚು ರಂಜನ್ ತಿರುಗೇಟು

    ರಾವಣನ ಪ್ರತಿಕೃತಿ ನಿರ್ಮಾಣದಲ್ಲಿ ಪಾತ್ರವಹಿಸಿದ್ದ ಸಹಾಯಕ ಎಂಜಿನಿಯರ್ ವಿಜಯ್ ಮೆಹ್ರಾ, ಉಪ ಎಂಜಿನಿಯರ್‌ಗಳಾದ ಲೋಮಸ್ ದೇವಾಂಗನ್, ಕಮಲೇಶ್ ಠಾಕೂರ್ ಹಾಗೂ ಕಮತಾ ನಾಗೇಂದ್ರ ಅವರಿಗೆ ಡಿಎಂಸಿ ಶೋಕಾಸ್ ನೋಟೀಸ್ ನೀಡಿದೆ.

    ದಸರಾ ಅಥವಾ ವಿಜದಶಮಿಯಂದು (Vijayadashami) ವಾರ್ಷಿಕ ದುರ್ಗಾ ಪೂಜೆಯ ಉತ್ಸವದ ಕೊನೆಯಲ್ಲಿ ರಾವಣನ ಪ್ರತಿಕೃತಿಯನ್ನು ಸುಡಲಾಗುತ್ತದೆ. ದುಷ್ಟರ ವಿರುದ್ಧ ವಿಜಯವನ್ನು ಸಂಕೇತಿಸಲು ರಾವಣನ ಪ್ರತಿಕೃತಿಯನ್ನು ಹಲವು ರಾಜ್ಯಗಳಲ್ಲಿ ಸುಡಲಾಗುತ್ತದೆ. ಇದನ್ನೂ ಓದಿ: ಕರಾವಳಿ ಜನರ ಇಚ್ಛೆಯಿಂದ ನನಗೆ ಆನಂದವಾಗಿದೆ: ಮುತಾಲಿಕ್

    Live Tv
    [brid partner=56869869 player=32851 video=960834 autoplay=true]

  • ಕಿರೀಟ ಹೆಲ್ಮೆಟ್ ಆಗಲ್ಲ: ಕಿರೀಟ ಹಾಕ್ಕೊಂಡು ಹ್ಯಾರ್ಲಿ ಡೇವಿಡ್‍ಸನ್ ಓಡಿಸಿದ ನಟ ಮುಖೇಶ್ ರಿಶಿಗೆ ದಂಡ

    ಕಿರೀಟ ಹೆಲ್ಮೆಟ್ ಆಗಲ್ಲ: ಕಿರೀಟ ಹಾಕ್ಕೊಂಡು ಹ್ಯಾರ್ಲಿ ಡೇವಿಡ್‍ಸನ್ ಓಡಿಸಿದ ನಟ ಮುಖೇಶ್ ರಿಶಿಗೆ ದಂಡ

    ನವದೆಹಲಿ: ಹೆಲ್ಮೆಟ್ ಧರಿಸದೇ ರಾವಣನ ವೇಷಭೂಷಣದಲ್ಲಿ ಹ್ಯಾರ್ಲಿ ಡೇವಿಡ್‍ಸನ್ ಬೈಕ್ ಚಾಲನೆ ಮಾಡಿದ ನಟ ಮುಖೇಶ್ ರಿಶಿಗೆ ದೆಹಲಿ ಪೊಲೀಸರು ದಂಡ ವಿಧಿಸಿದ್ದಾರೆ.

    ದೆಹಲಿ ರಾಮ್‍ಲೀಲಾದಲ್ಲಿ ರಾವಣನ ಪಾತ್ರ ನಿರ್ವಹಿಸಿದ ನಟ ಮುಖೇಶ್ ರಿಶಿ ಹೆಲ್ಮೆಟ್ ಬದಲು ಕಿರೀಟ ಧರಿಸಿ ಬೈಕ್ ಚಾಲನೆ ಮಾಡಿದ್ದಕ್ಕೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ಹಾಕಿದ್ದಾರೆ. ರಾವಣನ ಅವತಾರದಲ್ಲಿ ನಟ ರಿಶಿ ರಾಷ್ಟ್ರಪತಿ ಭವನದ ಮುಂದೆ ಹ್ಯಾರ್ಲಿ ಡವಿಡ್‍ಸನ್ ಬೈಕ್ ಚಾಲನೆ ಮಾಡುವ ವಿಡಿಯೋ ವೈರಲ್ ಆಗಿತ್ತು. ಇದರಿಂದ ಪೊಲೀಸರು ನಟನಿಗೆ ನೋಟೀಸ್ ನೀಡುವಂತೆ ಮಾಡಿದೆ.

    ಅಲ್ಲದೆ ಟ್ರಾಫಿಕ್ ಪೊಲೀಸರು ವಿಡಿಯೋ ಮಾಡಿ ತೋಡಾಪುರ್‍ನ ರೋಡ್ ಅಂಡ್ ಸೇಫ್ಟಿ ಸೆಲ್ ಮುಖ್ಯ ಕಚೇರಿಗೆ ಕಳಿಸಿದ್ದರು. ವಾಹನ ಮಾಲೀಕರನ್ನು ಪತ್ತೆ ಮಾಡಿದ ನಂತರ ಅವರ ವಾಹನ ನೋಂದಣಿ ಸಂಖ್ಯೆಗೆ ನೋಟಿಸ್ ನೀಡಿದ್ದೇವೆ. ಸಂಚಾರಿ ನಿಯಮವನ್ನ ಉಲ್ಲಂಘನೆ ಮಾಡಿದ್ದು, ಇದಕ್ಕೆ ದಂಡ ಹಾಕಿರುವುದಾಗಿ ತಿಳಿಸಿದ್ದೇವೆ ಎಂದು ಡಿಸಿಪಿ ದಿನೇಶ್ ಗುಪ್ತಾ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ನಟ ರಿಶಿ ದೆಹಲಿ ಟ್ರಾಫಿಕ್ ಪೊಲೀಸ್ ಮುಖ್ಯಕಚೇರಿಗೆ ಭೇಟಿ ನೀಡಿ 100 ರೂ. ದಂಡವನ್ನ ಪಾವತಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ತೋರಿಸಲೆಂದೇ ಈ ರೀತಿ ಮಾಡಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಪ್ರತಿ ವರ್ಷ ದಸರಾ ಹಬ್ಬಕ್ಕೆ ಲವ ಕುಶ ಸಮಿತಿ ಕೆಂಪು ಕೋಟೆ ಮೈದಾನದಲ್ಲಿ ದೆಹಲಿ ರಾಮ್‍ಲೀಲಾ ಕಾರ್ಯಕ್ರಮವನ್ನ ಆಯೋಜಿಸುತ್ತದೆ. 1924ರಿಂದ ನಡೆಸಿಕೊಂಡು ಬಂದಿರುವ ಈ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಪ್ರಧಾನ ಮಂತ್ರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುತ್ತಾರೆ.

    61 ವರ್ಷದ ನಟ ರಿಶಿ ಹಲವಾರು ಬಾಲಿವುಡ್ ಸಿನಿಮಾಗಳಲ್ಲಿ ಖಳನಟನ ಪಾತ್ರ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ರಾವಣನ ಪಾತ್ರ ಮಾಡಿದ್ದರು. ರಿಶಿ ಕನ್ನಡದಲ್ಲಿ ದರ್ಶನ್ ಅಭಿನಯದ ಭೂಪತಿ ಚಿತ್ರ ಸೇರಿದಂತೆ ಇನ್ನೂ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.