Tag: Raveena Tandon

  • ಏರ್ ಇಂಡಿಯಾಗೆ ದೇವರೇ ದಿಕ್ಕು – ರವೀನಾ ಟಂಡನ್

    ಏರ್ ಇಂಡಿಯಾಗೆ ದೇವರೇ ದಿಕ್ಕು – ರವೀನಾ ಟಂಡನ್

    ಅಹಮದಾಬಾದ್‌ನಲ್ಲಿ (Ahmedabad) ನಡೆದ ವಿಮಾನ ಪತನದ ಬಳಿಕ ದೇಶದ ಜನತೆಗೆ ಇಂದಿಗೂ ದುರ್ಘಟನೆಯ ನೋವಿನಿಂದ ಹೊರಬರಲಾಗುತ್ತಿಲ್ಲ. ಈ ವೇಳೆ ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿ ಧೈರ್ಯ ಹೇಳುವ ಪೋಸ್ಟ್ ಹಾಕಿದ್ದಾರೆ ನಟಿ ರವೀನಾ ಟಂಡನ್ (Raveena Tandon).

    ಏರ್‌ಇಂಡಿಯಾದ (Air India) ಟಿಕೆಟ್ ಪಡೆದು ವಿಮಾನದಲ್ಲಿ ಕುಳಿತಿರುವ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ರವೀನಾ, ಏರ್ ಇಂಡಿಯಾ ಸಿಬ್ಬಂದಿಗಳಲ್ಲಿ ಇನ್ನೂ ಅವಿತಿರುವ ಬೇಸರ, ದುಃಖದಿಂದ ಕೂಡಿರುವ ನಗು ಹಾಗೂ ಪ್ರಯಾಣಿಕರ ಮೌನದ ಕುರಿತು ಸುದೀರ್ಘವಾಗಿ ಅನಿಸಿಕೆ ಹಂಚಿಕೊಂಡಿದ್ದಾರೆ.

    ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ಏರ್ ಇಂಡಿಯಾ ವಿಮಾನದಲ್ಲಿ ದುರ್ಘಟನೆಯಲ್ಲಿ 265ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಈ ನೋವು ದೇಶದ ಜನರಲ್ಲಿ ಆತಂಕ ಮೂಡಿಸಿದೆ ಜೊತೆಗೆ ಏರ್ ಇಂಡಿಯಾ ವಿಮಾನ ಪ್ರಯಾಣಿಕರ ಸಂಖ್ಯೆಯನ್ನೂ ಕುಗ್ಗಿಸುತ್ತಿದೆ. ಈ ಹೊತ್ತಲ್ಲೇ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿರುವ ರವೀನಾ ಒಂದಿಷ್ಟು ಆತ್ಮವಿಶ್ವಾಸ ತುಂಬುವ ಮಾತುಗಳನ್ನಾಡಿದ್ದಾರೆ.

    “ಪ್ರತಿಕೂಲಗಳ ವಿರುದ್ಧ ಎದ್ದು ನಿಲ್ಲಬೇಕಿದೆ, ಎಲ್ಲವನ್ನೂ ಬಾಚಿಕೊಂಡು ಪ್ರಾರಂಭಿಸಬೇಕು, ಹೊಸ ಆರಂಭಗಳಾಗಬೇಕು, ಹೊಸ ಶಕ್ತಿಯ ಕಡೆಗೆ ಸಂಕಲ್ಪ ಶುರುವಾಗಬೇಕು, ವಾತಾವರಣ ಗಂಭೀರವಾಗಿದ್ದರೂ ಏರ್ ಇಂಡಿಯಾ ಸಿಬ್ಬಂದಿಗಳು ದುಃಖದೊಂದಿಗೆ ನಗುವಿನ ಮುಖದಲ್ಲಿ ಸ್ವಾಗತಿಸುತ್ತಾರೆ. ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಮೌನವು ಮಾತನಾಡದೇ ಸಂತಾಪ ಸೂಚಿಸುತ್ತಿದೆ. ಇದು ಎಂದಿಗೂ ವಾಸಿಯಾಗದ ಗಾಯ. ಏರ್‌ಇಂಡಿಯಾಗೆ ಯಾವಾಗಲೂ ದೇವರೇ ದಿಕ್ಕು. ನಿರ್ಭೀತಿಯಿಂದ ಎಲ್ಲವನ್ನೂ ಜಯಿಸಲು ಇಚ್ಛಾಶಕ್ತಿಯೇ ಬಲವಾಗಬೇಕು” ಎಂದಿದ್ದಾರೆ ರವೀನಾ ಟಂಡನ್.

    ದುರ್ಘಟನೆಯ ಬಳಿಕ ಏರ್‌ಇಂಡಿಯಾ ವಿಮಾನ ಪ್ರಯಾಣಿಕರ ಸಂಖ್ಯೆಯೂ ಕುಸಿಯುತ್ತಿದೆ. ಈ ಹೊತ್ತಲ್ಲಿ ಅದೇ ವಿಮಾನದಲ್ಲಿ ಪ್ರಯಾಣಿಸುವ ಮೂಲಕ ಪ್ರಯಾಣಿಕರಿಗೂ ಹಾಗೂ ಸಿಬ್ಬಂದಿಗಳಿಗೂ ಒಂದಿಷ್ಟು ಆತ್ಮವಿಶ್ವಾಸ ತುಂಬುವ ಮಾತನ್ನ ಪದಗಳಲ್ಲಿ ಹೇಳಿದ್ದಾರೆ ಬಾಲಿವುಡ್ ನಟಿ ರವೀನಾ ಟಂಡನ್. ಸದ್ಯದ ಏರ್‌ಇಂಡಿಯಾ ಪ್ರಯಾಣದ ಪರಿಸ್ಥಿತಿಯನ್ನ ಅವರ ಮಾತುಗಳಲ್ಲಿ ವಿವರಿಸಿದ್ದಾರೆ ನಟಿ.

  • ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

    ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

    ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಪೈಶಾಚಿಕ ಕೃತ್ಯಕ್ಕೆ 27 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹೇಯ ಕೃತ್ಯದ ಬಗ್ಗೆ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಖಂಡಿಸಿದ್ದಾರೆ. ಇದನ್ನೂ ಓದಿ:ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

    ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ ಎಂದು ಶಿವಣ್ಣ (Shivarajkumar) ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಆಘಾತ ಮತ್ತು ದುಃಖವಾಗಿದೆ. ಇಂತಹ ಘಟನೆಗಳಿಗೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅವುಗಳನ್ನು ಬಲವಾಗಿ ಖಂಡಿಸಬೇಕು. ಸಂತ್ರಸ್ತರ ಕುಟುಂಬದ ಪರವಾಗಿ ರಾಮ್‌ ಚರಣ್‌ ಬರೆದುಕೊಂಡಿದ್ದಾರೆ.

    ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ರಿಯಾಕ್ಟ್ ಮಾಡಿ, ನನ್ನ ಹೃದಯ ಒಡೆದಿದೆ ಎಂದು ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ.

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಕೇಳಿ ನೋವಾಗಿದೆ. ಅವರ ಕುಟುಂಬಗಳಿಗೆ ಹೃದಯಪೂರ್ವಕ ಪ್ರಾರ್ಥನೆ ಮತ್ತು ಸಂತಾಪಗಳು. ಇದು ಎಂದಿಗೂ ಮರೆಯಲಾಗದ ಘೋರ ದಾಳಿ ಎಂದು ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ (Anushka Sharma) ಪ್ರತಿಕ್ರಿಯೆ ನೀಡಿದ್ದಾರೆ.

    ಓಂ ಶಾಂತಿ, ನನ್ನ ಕಡೆಯಿಂದ ಸಂತಾಪ ಸೂಚಿಸುತ್ತೇನೆ. ಆಘಾತ ಮತ್ತು ಕೋಪ ಬರುತ್ತಿದೆ. ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ನಾವು ಸಣ್ಣ ಪುಟ್ಟ ಜಗಳಗಳನ್ನು ಬಿಟ್ಟು, ಒಗ್ಗೂಡಿ ನಿಜವಾದ ಶತ್ರುಗಳನ್ನು ಅರಿತುಕೊಳ್ಳುವ ಸಮಯ ಎಂದು ರವೀನಾ ಟಂಡನ್ ಬರೆದುಕೊಂಡಿದ್ದಾರೆ.


    ಸಂಜಯ್ ದತ್ (Sanjay Dutt) ಎಕ್ಸ್‌ನಲ್ಲಿ, ಅವರು ನಮ್ಮ ಜನರನ್ನು ರಕ್ತದಲ್ಲಿ ಕೊಂದಿದ್ದಾರೆ. ಇದನ್ನೂ ಕ್ಷಮಿಸಲು ಸಾಧ್ಯವಿಲ್ಲ. ನಾವು ಪ್ರತಿಕಾರ ತೀರಿಸಿಕೊಳ್ಳಬೇಕು. ನಮ್ಮ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರು ಹೈಯ ಕೃತ್ಯ ಮಾಡಿದವರಿಗೆ ಅರ್ಹವಾದದ್ದನ್ನು ನೀಡಬೇಕೆಂದು ನಾನು ವಿನಂತಿಸುತ್ತೇನೆ.

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಾಗರಿಕ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಈ ಹೇಯ ಕೃತ್ಯವು ಸ್ವೀಕಾರಾರ್ಹವಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

  • ಅನುಮತಿಯಿಲ್ಲದೇ ಕತ್ರಿನಾ ಕೈಫ್ ವಿಡಿಯೋ ಶೂಟ್ ಮಾಡಿದವರಿಗೆ ರವೀನಾ ಟಂಡನ್ ಕಿಡಿ

    ಅನುಮತಿಯಿಲ್ಲದೇ ಕತ್ರಿನಾ ಕೈಫ್ ವಿಡಿಯೋ ಶೂಟ್ ಮಾಡಿದವರಿಗೆ ರವೀನಾ ಟಂಡನ್ ಕಿಡಿ

    ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಕೆಲದಿನಗಳ ಹಿಂದೆ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ (Katrina Kaif) ಭಾಗಿಯಾಗಿದ್ದ ವಿಡಿಯೋ ಇದೀಗ ಟ್ರೋಲ್‌ ಆಗಿದೆ. ಅತ್ತೆಯೊಂದಿಗೆ ತ್ರಿವೇಣಿ ಸಂಗಮದಲ್ಲಿ ನಟಿ ಪವಿತ್ರಾಸ್ನಾನ ಮಾಡಿದ್ದ ವಿಡಿಯೋ ವೈರಲ್‌ ಆಗಿದೆ. ನಟಿ ಪವಿತ್ರಾಸ್ನಾನ ಮಾಡುತ್ತಿರುವ ವಿಡಿಯೋವನ್ನು ಕೆಲ ಪುರುಷರು ಶೂಟ್ ಮಾಡಿ ರೀಲ್ಸ್ ಮಾಡಿದ್ದಾರೆ. ಈ ಹಿನ್ನೆಲೆ ಕತ್ರಿನಾ ಅನುಮತಿಯಿಲ್ಲದೇ ವಿಡಿಯೋಶೂಟ್ ಮಾಡಿದ ಕಿಡಿಗೇಡಿಗಳಿಗೆ ‘ಕೆಜಿಎಫ್‌ 2’ (KGF 2) ಖ್ಯಾತಿಯ ರವೀನಾ ಟಂಡನ್ ಕಿಡಿಕಾರಿದ್ದಾರೆ.

    ವೈರಲ್ ಆಗಿರುವ ವಿಡಿಯೋದಲ್ಲಿ, ನಟಿ ಪವಿತ್ರಾಸ್ನಾನ ಮಾಡುತ್ತಿರುವ ಇಬ್ಬರೂ ಪುರುಷರು ನಗುತ್ತಾ ‘ಇದು ನಾನು, ಇದು ನನ್ನ ಸಹೋದರ, ಮತ್ತು ಹಿಂದೆ ಕತ್ರಿನಾ ಕೈಫ್ ಇದ್ದಾರೆ ಎಂದು ಹೇಳಿದ್ದಾರೆ. ನಟಿಯ ಅನುಮತಿಯಿಲ್ಲದೇ ವಿಡಿಯೋ ತೆಗೆದಿದಲ್ಲದೇ ನಟಿಯ ನೋಡಿ ನಗುತ್ತಿರುವ ಪುರುಷರ ನಡೆಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ವಿಡಿಯೋ ನೋಡಿ ಬಾಲಿವುಡ್ ನಟಿ ರವೀನಾ ಟಂಡನ್ (Raveena Tandon) ಕೂಡ ಪ್ರತಿಕ್ರಿಯಿಸಿ, ಇದು ಅಸಹ್ಯಕರ. ಈ ರೀತಿಯ ಜನರು ಶಾಂತಿಯು ಮತ್ತು ಅರ್ಥಪೂರ್ಣ ಕ್ಷಣವನ್ನು ಹಾಳು ಮಾಡುತ್ತಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಘಟನೆಗೆ ನಟಿ ಛೀಮಾರಿ ಹಾಕಿದ್ದಾರೆ. ರವೀನಾ ನಡೆಗೆ ಅನೇಕರು ಬೆಂಬಲಿಸಿದ್ದಾರೆ.

  • ತೆಲುಗಿನತ್ತ ರವೀನಾ ಟಂಡನ್- ವಿಲನ್ ಆದ ‘ಕೆಜಿಎಫ್ 2’ ನಟಿ

    ತೆಲುಗಿನತ್ತ ರವೀನಾ ಟಂಡನ್- ವಿಲನ್ ಆದ ‘ಕೆಜಿಎಫ್ 2’ ನಟಿ

    ‘ಕೆಜಿಎಫ್ 2′ ನಟಿ ರವೀನಾ ಟಂಡನ್‌ಗೆ (Raveena Tandon) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಮತ್ತೊಂದು ದಕ್ಷಿಣದ ಸಿನಿಮಾವನ್ನು ನಟಿ ಒಪ್ಪಿಕೊಂಡಿದ್ದಾರೆ. ನಟ ಸುಧೀರ್ ಬಾಬು (Sudheer Babu) ನಟನೆಯ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ತೆಲುಗು ನಟ ಸುಧೀರ್ ಬಾಬು ನಟನೆಯ ‘ಜಟಾಧರ’ (Jatadhara) ಸಿನಿಮಾದಲ್ಲಿ ರವೀನಾ ಟಂಡನ್ ವಿಲನ್ ಆಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ಈ ಚಿತ್ರದಲ್ಲಿ ನಟಿಗೆ ಉತ್ತಮ ಪಾತ್ರವಿದೆಯಂತೆ. ಸುಧೀರ್‌ಗೆ ಠಕ್ಕರ್ ಕೊಡುವ ಪಾತ್ರದಲ್ಲಿ ರವೀನಾ ಕಾಣಿಸಿಕೊಳ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಸಮಂತಾ ಮನೆಯಲ್ಲಿ ಮದುವೆ ಸಡಗರ- ಹೂಗುಚ್ಛ ಹಿಡಿದು ನಿಂತ ನಟಿ

     

    View this post on Instagram

     

    A post shared by Sudheer Babu (@isudheerbabu)

    ಇತ್ತೀಚೆಗೆ ‘ಜಟಾಧರ’ ಸಿನಿಮಾ ಪೋಸ್ಟರ್ ಲುಕ್ ಮೂಲಕ ಗಮನ ಸೆಳೆದಿದ್ದ ಸುಧೀರ್ ಬಾಬು ಈ ಸಿನಿಮಾ ಹಾರರ್ ಚಿತ್ರವಾಗಿದೆ. ಶಿವಿನ್ ನಾರಂಗ್ ನಿರ್ದೇಶನ ಮಾಡಲಿದ್ದಾರೆ. ಸದ್ಯಕ್ಕೆ ರವೀನಾ ನಟಿಸಲಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದ್ದು, ನಟಿಯ ಎಂಟ್ರಿಯ ಕುರಿತು ಚಿತ್ರತಂಡ ಅಧಿಕೃತವಾಗಿ ತಿಳಿಸಬೇಕಿದೆ.

    ಸದ್ಯ ನಟಿ ‘ವೆಲ್ ಕಂ ಟು ದ ಜಂಗಲ್’ ಎಂಬ ಸಿನಿಮಾದಲ್ಲಿ ರವೀನಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲೂ ಅವರಿಗೆ ನಟನೆಗೆ ಸ್ಕೋಪ್ ಇರುವ ಪಾತ್ರವೇ ಸಿಕ್ಕಿದೆ.

  • ರವೀನಾ ಟಂಡನ್ ರಸ್ತೆ ಅಪಘಾತ: ಪ್ರತಿಕ್ರಿಯೆ ಕೊಟ್ಟ ಕೆಜಿಎಫ್ ರಮಿಕಾ

    ರವೀನಾ ಟಂಡನ್ ರಸ್ತೆ ಅಪಘಾತ: ಪ್ರತಿಕ್ರಿಯೆ ಕೊಟ್ಟ ಕೆಜಿಎಫ್ ರಮಿಕಾ

    ಕೆಜಿಎಫ್ 2′ (KGF 2) ಸಿನಿಮಾದಲ್ಲಿ ರಮಿಕಾ ಪಾತ್ರದಲ್ಲಿ ನಟಿಸಿದ್ದ ರವೀನಾ ಟಂಡನ್ (Raveena Tandon) ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಜೂನ್ 1ರಂದು ರಾತ್ರಿ ರವೀನಾ ಕಾರು (Car Accident) ಮೂವರು ಮಹಿಳೆಯರಿಗೆ ಗುದ್ದಿದೆ. ಈ ಪರಿಣಾಮ, ನಟಿ ರವೀನಾ ಮತ್ತು ಕಾರು ಚಾಲಕನ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ರವೀನಾ ಮೇಲೆ ಹಲ್ಲೆಗೆ ಯತ್ನ ಕೂಡ ಮಾಡಲಾಗಿತ್ತು.

    ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದ. ಇದರಿಂದ ಅವರ ತಲೆ ಮತ್ತು ಮೂಗಿಗೆ ಗಾಯಗಳಾಗಿದ್ದವು. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳಿಯರು ಕಾರು ಚಾಲಕನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದರು. ಕಾರು ಚಾಲಕನ್ನು ಪಾರು ಮಾಡಲು ಬಂದ ನಟಿ, ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿದ್ದಾರೆ ಎನ್ನಲಾಗಿತ್ತು.

    ಈ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ (Reaction) ನೀಡಿದ್ದಾರೆ ರವೀನಾ ಟಂಡನ್. ನನ್ನ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ. ನಾನು ಕುಡಿದಿರಲಿಲ್ಲ. ನನ್ನ ಡ್ರೈವರ್ ನೆರವಿಗೆ ಧಾವಿಸಿದೆ. ಈ ಸಂದರ್ಭದಲ್ಲಿ ಅವರೇ ನನ್ನನ್ನು ಹೊಡೆಯೋಕೆ ಬಂದರು. ಇದರಲ್ಲಿ ನನ್ನದು ಮತ್ತು ನನ್ನ ಡ್ರೈವರ್ ದ್ದು ತಪ್ಪಿಲ್ಲ ಎಂದು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

     

    ಅಪಘಾತದಿಂದ ಮಹಿಳೆಗೆ ರಕ್ತಸ್ರಾವವಾಗಿದೆ ಎಂಬುದು ತಿಳಿದಿದೆ. ಈ ವಿಚಾರ ದೊಡ್ಡದಾಗುತ್ತಿದ್ದಂತೆ ವಿಡಿಯೋಗಳನ್ನು ರೆಕಾರ್ಡ್ ಮಾಡಬೇಡಿ ಎಂದು ರವೀನಾ ನೆರದವರಲ್ಲಿ ವಿನಂತಿಸಿದ್ದರು. ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ ಎಂದು ರವೀನಾ ಕೇಳಿಕೊಂಡಿದ್ದರು. ಚಾಲಕನ ರಕ್ಷಣೆಗೆ ಬಂದ ರವೀನಾ ಟಂಡನ್ ಮೇಲೆ ಮಹಿಳೆಯೊಬ್ಬರು ಹಲ್ಲೆಗೆ ಪ್ರಯತ್ನಿಸಿದ್ದರು.

  • ನಟಿ ರವೀನಾ ಟಂಡನ್ ಮರ್ಡರ್ ಆಗಿರುತ್ತಿತ್ತು: ಕಂಗನಾ ಶಾಕಿಂಗ್ ಹೇಳಿಕೆ

    ನಟಿ ರವೀನಾ ಟಂಡನ್ ಮರ್ಡರ್ ಆಗಿರುತ್ತಿತ್ತು: ಕಂಗನಾ ಶಾಕಿಂಗ್ ಹೇಳಿಕೆ

    ಬಾಲಿವುಡ್ ನಟಿ ರವೀನಾ ಟಂಡನ್ (Raveena Tandon) ಮೇಲೆ ಹಲ್ಲೆ ಮಾಡಿರುವ ವೀಡಿಯೋ ವೈರಲ್ ಆಗುತ್ತಿದ್ದಂತೆ ಇಡೀ ಬಿಟೌನ್ ದಂಗಾಗಿದೆ. ಆದರೆ ಯಾರೊಬ್ಬರೂ ಬೆಂಬಲಕ್ಕೆ ಬಂದಿರಲಿಲ್ಲ. ಆದರೆ ಬಾಲಿವುಡ್ ಫೈಯರ್ ಬ್ರ್ಯಾಂಡ್ ನಟಿ ಎಂದು ಗುರುತಿಸಿಕೊಂಡಿರುವ ಕಂಗನಾ ರಾಣಾವತ್ (Kangana Ranaut) ಬೆಂಬಲ ಸೂಚಿಸಿ ಇನ್ಸ್ಟಾದಲ್ಲಿ ಪೋಸ್ಟ್ ಹಾಕಿದ್ದಾರೆ. ರವೀನಾ ಮೇಲೆ ವಾಗ್ಯುದ್ಧ-ಹಲ್ಲೆ, ದಾಳಿಗೆ ಯತ್ನಿಸಿರುವ ಘಟನೆಯನ್ನ ಕಂಗನಾ ಕಟುವಾಗಿ ಖಂಡಿಸಿದ್ದಾರೆ.

    ಇನ್ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿರುವ ಕಂಗನಾ ‘ರವೀನಾ ಅವರ ಮೇಲೆ ಹೀಗಾಗಿರೋದು ಖಂಡಿತವಾಗಿ ಆತಂಕಕಾರಿ. ಎದುರಿನ ಗುಂಪಿನಲ್ಲಿ ಇನ್ನೂ ಏನಾದ್ರೂ ಐದಾರು ಜನ ಹೆಚ್ಚು ಇದ್ದಿದ್ರೆ ರವೀನಾರನ್ನ ಹತ್ಯೆ ಮಾಡಿಬಿಡುತ್ತಿದ್ದರು. ಇಂತಹ ರಸ್ತೆ ಆಕ್ರೋಶದ ಪ್ರಕೋಪಗಳನ್ನು ನಾನು ಖಂಡಿಸುತ್ತೇನೆ. ಅಂತಹ ಜನರಿಗೆ ಛೀಮಾರಿ ಹಾಕಬೇಕು. ಹಿಂಸಾತ್ಮಕ ಹಾಗೂ ವಿಷಕಾರಿ ನಡವಳಿಕೆ ಮಾಡಿದವರು ತಪ್ಪಿಸಿಕೊಳ್ಳಬಾರದು’  ಹೀಗಂತ ಬರೆದು ರವೀನಾ ಮೇಲಿನ ಘಟನೆಗೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ `ಕ್ವೀನ್’ ನಟಿ.

    ಶನಿವಾರ ರಾತ್ರಿ ಮುಂಬೈನ ಬಾಂದ್ರಾದ ಕಾರ್ಟರ್ ರಸ್ತೆಯಲ್ಲಿ ರವೀನಾ ಟಂಡನ್ ಹಾಗೂ ಚಾಲಕನ ಮೇಲೆ ಜನರ ಗುಂಪು ದುರ್ವರ್ತನೆ ತೋರಿರುವ ವೀಡಿಯೋ ವೈರಲ್ ಆಗಿತ್ತು. ಪುರುಷರೂ ಸೇರಿದಂತೆ ಮೂವರು ಮಹಿಳೆಯರು ರವೀನಾ ಮೇಲೆ ಹಲ್ಲೆ ಮಾಡಿದ್ರು. ಜೊತೆಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಎಂಬುದು ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ರವೀನಾ ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು ಚಾಲಕ ಮಹಿಳೆಯೊಬ್ಬರಿಗೆ ಗುದ್ದಿದ್ದಾರೆ ಎನ್ನಲಾಗುತ್ತೆ. ಹೀಗಾಗಿ ಮಹಿಳೆಯ ಜೊತೆಗಾರರು ಸೇರಿ ಚಾಲಕನಿಗೆ ಥಳಿಸಲಾರಂಭಿಸಿದ್ರು. ಹೀಗಾಗಿ ರವೀನಾ ಕೆಳಕ್ಕಿಳಿದು ಅದನ್ನ ತಡೆಯಲು ಯತ್ನಿಸಿದ್ರು. ಈ ವೇಳೆ ರವೀನಾ ಮೇಲೂ ಹಲ್ಲೆ ಮಾಡಿದ್ದಾರೆ.

    ರವೀನಾ ಅಂಗಲಾಚಿದರೂ ಬಿಡದೆ ನಿರಂತರ ಬೈಗುಳ ಮುಂದುವರೆಸುತ್ತಾ ಹಲ್ಲೆ ಮಾಡಿದ್ರು ಅನ್ನೋದು ವೈರಲ್ ಆಗಿರುವ ವೀಡಿಯೋದಲ್ಲಿ ಕಂಡುಬರುತ್ತದೆ. ಸೆಲೆಬ್ರಿಟಿ ಹೊರತಾಗಿಯೂ ಮಾನವೀಯತೆ ಆಧಾರದ ಮೇಲೂ ರವೀನಾ ಮೇಲಿನ ಈ ಘಟನೆಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗ್ತಿದೆ. ಈ ಹಿನ್ನೆಲೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ದಾಖಲಾಗಿದೆ. ಇಬ್ಬರಿಂದಲೂ ಹೇಳಿಕೆ ಬರೆಸಿಕೊಳ್ಳಲಾಗಿದೆ.

     

    ಘಟನೆ ಬಳಿಕ ರವೀನಾ ಕೂಡ ಎಲ್ಲಿಯೂ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ವೈರಲ್ ವೀಡಿಯೋ ಆಧಾರವಾಗಿಟ್ಟುಕೊಂಡು ಕಂಗನಾ ಮಾತ್ರ ಕಡು ಕೋಪ ತೋರಿಸಿದ್ದಾರೆ. ಇನ್ನೂ ಐದಾರು ಜನ ಹೆಚ್ಚಿಗೆ ಸೇರಿದ್ದರೆ ರವೀನಾ ಹತ್ಯೆ ಮಾಡ್ತಿದ್ದರು ಎಂಬ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ ಮಂಡಿ ಕ್ಷೇತ್ರ ಗೆಲ್ಲುವ ನಿರೀಕ್ಷೆಯಲ್ಲಿರುವ ಬಾಲಿವುಡ್ ನಟಿ ಕಂಗನಾ.

  • ಕಾರು ಅಪಘಾತ: ರವೀನಾ ಟಂಡನ್‌ ಮೇಲೆ ಸುಳ್ಳು ಕೇಸ್- ಡಿಸಿಪಿ ಸ್ಪಷ್ಟನೆ

    ಕಾರು ಅಪಘಾತ: ರವೀನಾ ಟಂಡನ್‌ ಮೇಲೆ ಸುಳ್ಳು ಕೇಸ್- ಡಿಸಿಪಿ ಸ್ಪಷ್ಟನೆ

    ‘ಕೆಜಿಎಫ್ 2′ (KGF 2) ಸಿನಿಮಾದ ನಟಿ ರವೀನಾ ಟಂಡನ್ (Raveena Tandon) ಕಾರು ಅಪಘಾತದ (Car Accident) ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ನಟಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ರವೀನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಸಲಿ ಸಂಗತಿ ಈಗ ತಿಳಿದು ಬಂದಿದೆ. ನಟಿಯ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಬಗ್ಗೆ ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷನೆ ನೀಡಿದ್ದಾರೆ.

    ರವೀನಾ ಟಂಡನ್ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ನಟಿಯ ವಿರುದ್ಧ ಕಿಡಿಕಾರಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿತ್ತು. ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ಅವರ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ ಮತ್ತು ರವೀನಾ ಅಂದು ಕುಡಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅಸಲಿ ವಿಚಾರ ಹೊರಬಿದ್ದಿದೆ ಎಂದು ಡಿಸಿಪಿ ಕ್ಲ್ಯಾರಿಟಿ ನೀಡಿದ್ದಾರೆ. ಇದನ್ನೂ ಓದಿ:ಸೈಲೆಂಟ್ ಆಗಿ ಮದುವೆಯಾದ್ರಾ ‘ಮಿಲನಾ’ ನಟಿ ಪಾರ್ವತಿ?

    ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗಿತ್ತು. ಆದರೆ ಕಾರು ಯಾರಿಗೂ ಟಚ್ ಮಾಡಿಲ್ಲ. ಆದರೂ ಅಲ್ಲಿ ಮಾತಿನ ಚಕಮಕಿ ನಡೆದು ಈ ಘಟನೆ ವಿವಾದ ಸೃಷ್ಟಿಸಿದೆ. ಘಟನೆಯ ವೇಳೆ, ನಟಿ ಕಾರಿನಿಂದ ಹೊರಬಂದಿದ್ದು, ಜಗಳವಾಡಲು ಅಲ್ಲ. ಬದಲಾಗಿ ತನ್ನ ಚಾಲಕನನ್ನು ರಕ್ಷಿಸಲು ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಲಿಲ್ಲ ಎಂದು ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸಾಬೀತಾಗಿದೆ. ಇದೆಲ್ಲಾ ಸುಳ್ಳು ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.

    ಅಂದಹಾಗೆ, ‘ಕೆಜಿಎಫ್ ಪಾರ್ಟ್ 3’ ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳು ರವೀನಾ ಕೈಯಲ್ಲಿವೆ. ಅವರ ಮಗಳು ಕೂಡ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ.

  • ರವೀನಾ ಟಂಡನ್‌ ಕಾರು ಅಪಘಾತ- ನಟಿಯ ಮೇಲೆ ಭಾರೀ ಆಕ್ರೋಶ

    ರವೀನಾ ಟಂಡನ್‌ ಕಾರು ಅಪಘಾತ- ನಟಿಯ ಮೇಲೆ ಭಾರೀ ಆಕ್ರೋಶ

    ‘ಕೆಜಿಎಫ್ 2′ (KGF 2) ಸಿನಿಮಾದಲ್ಲಿ ರಮಿಕಾ ಪಾತ್ರದಲ್ಲಿ ನಟಿಸಿದ್ದ ರವೀನಾ ಟಂಡನ್ (Raveena Tandon) ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಜೂನ್ 1ರಂದು ರಾತ್ರಿ ರವೀನಾ ಕಾರು (Car Accident) ಮೂವರು ಮಹಿಳೆಯರಿಗೆ ಗುದ್ದಿದೆ. ಈ ಪರಿಣಾಮ, ನಟಿ ರವೀನಾ ಮತ್ತು ಕಾರು ಚಾಲಕನ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಇಟಲಿಗೆ ಹಾರಿದ ಲವ್ ಬರ್ಡ್ಸ್- ಮದುವೆಗೂ ಮುನ್ನ ಅದಿತಿ ಜೊತೆ ಸಿದ್ಧಾರ್ಥ್‌ ಜಾಲಿ ಟ್ರಿಪ್

    ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅವರ ತಲೆ ಮತ್ತು ಮೂಗಿಗೆ ಗಾಯಗಳಾಗಿವೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳಿಯರು ಕಾರು ಚಾಲಕನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದಾರೆ. ಕಾರು ಚಾಲಕನ್ನು ಪಾರು ಮಾಡಲು ಬಂದ ನಟಿ, ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿದ್ದಾರೆ ಎನ್ನಲಾಗಿದೆ.

    ಅಪಘಾತದಿಂದ ಮಹಿಳೆಗೆ ರಕ್ತಸ್ರಾವವಾಗಿದೆ ಎಂಬುದು ತಿಳಿದಿದೆ. ಈ ವಿಚಾರ ದೊಡ್ಡದಾಗುತ್ತಿದ್ದಂತೆ ವಿಡಿಯೋಗಳನ್ನು ರೆಕಾರ್ಡ್ ಮಾಡಬೇಡಿ ಎಂದು ರವೀನಾ ನೆರದವರಲ್ಲಿ ವಿನಂತಿಸಿದ್ದಾರೆ. ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ ಎಂದು ರವೀನಾ ಕೇಳಿಕೊಂಡಿದ್ದಾರೆ. ಚಾಲಕನ ರಕ್ಷಣೆಗೆ ಬಂದ ರವೀನಾ ಟಂಡನ್ ಮೇಲೆ ಮಹಿಳೆಯೊಬ್ಬರು ಹಲ್ಲೆಗೆ ಪ್ರಯತ್ನಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ರವೀನಾ ಫ್ಯಾನ್ಸ್ ಆಘಾತಗೊಂಡಿದ್ದಾರೆ. ಅಂದಹಾಗೆ, ಈ ಘಟನೆ ನಡೆದ ವೇಳೆ ರವೀನಾ ಮದ್ಯ ಸೇವನೆ ಮಾಡಿದ್ದರು ಎನ್ನಲಾಗಿದೆ.

    ಈ ಘಟನೆ ಸಂಬಂಧ ಸಂತ್ರಸ್ತರು ಖಾರ್‌ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಿಸಲು ಮುಂದಾಗಿದ್ದರು. ಆದರೆ ಪೊಲೀಸರು ನಮ್ಮ ದೂರನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

  • ಉಪೇಂದ್ರ ನಟನೆಯ ‘ಎ’ ಸಿನಿಮಾ ರೀ ರಿಲೀಸ್

    ಉಪೇಂದ್ರ ನಟನೆಯ ‘ಎ’ ಸಿನಿಮಾ ರೀ ರಿಲೀಸ್

    ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ (UI Film) ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದರ ನಡುವೆ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿದ್ದ ‘ಎ’ (A Film) ಚಿತ್ರವನ್ನು ಮರು‌ ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.

    1998ರಲ್ಲಿ ರಿಲೀಸ್ ಆದ ‘ಎ’ ಸಿನಿಮಾಗೆ ಅಂದು ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಮೂರು ಜನ ಹೀರೋಯಿನ್‌ಗಳ ಜೊತೆ ಉಪೇಂದ್ರ ಡ್ಯುಯೇಟ್ ಹಾಡಿದ್ದರು. ಉಪೇಂದ್ರ ಬರೆದ ಕಥೆಗೆ ಮತ್ತು ನಿರ್ದೇಶನಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಇದನ್ನೂ ಓದಿ:‘ಗಾಳಿಗುಡ್ಡ’ ಚಿತ್ರತಂಡ ಸೇರಿಕೊಂಡ ದರ್ಶಕ್‌, ಅರ್ಚನಾ ಕೊಟ್ಟಿಗೆ, ಯಶ್‌ವಂತ್

     

    View this post on Instagram

     

    A post shared by Upendra Kumar (@nimmaupendra)

    ಇದೀಗ ಇದೇ ಮೇ 17ಕ್ಕೆ ‘ಎ’ ಸಿನಿಮಾ ಮಾಡಲು ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಯುಐ ಸಿನಿಮಾಗಾಗಿ ಕಾದು ಕುಳಿತವರಿಗೆ ‘ಎ’ ಚಿತ್ರದ ಅಪ್‌ಡೇಟ್ ಸಿಕ್ಕಿದೆ. ಮತ್ತೆ ಉಪೇಂದ್ರ ಫಾರ್ಮುಲಾ ಮತ್ತೆ ವರ್ಕೌಟ್ ಆಗುತ್ತಾ? ಎಂದು ಕಾಯಬೇಕಿದೆ.

    ಅಂದಹಾಗೆ, ಉಪೇಂದ್ರ ನಟಿಸಿ, ನಿರ್ದೇಶಿಸಿದ ‘ಎ’ ಸಿನಿಮಾದಲ್ಲಿ ಪ್ರೇಮ, ರವೀನಾ ಟಂಡನ್‌, ದಾಮಿನಿ ನಾಯಕಿಯರಾಗಿ ನಟಿಸಿದ್ದರು. ಈ ಚಿತ್ರಕ್ಕೆ ಗುರುಕಿರಣ್‌ ಸಂಗೀತ ನಿರ್ದೇಶನ ಮಾಡಿದ್ದರು.

  • ಪುತ್ರಿ ಜೊತೆ ‘ಕೆಜಿಎಫ್ 2’ ನಟಿ ಟೆಂಪಲ್ ರನ್

    ಪುತ್ರಿ ಜೊತೆ ‘ಕೆಜಿಎಫ್ 2’ ನಟಿ ಟೆಂಪಲ್ ರನ್

    ಬಾಲಿವುಡ್ ಬೆಡಗಿ ರವೀನಾ ಟಂಡನ್ (Raveena Tandon) ಸದ್ಯ ಶೂಟಿಂಗ್‌ಗೆ ಬ್ರೇಕ್ ಹಾಕಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪುತ್ರಿ ರಾಶಾ (Rasha) ಜೊತೆ ರವೀನಾ ಮಹಾರಾಷ್ಟ್ರದ (Maharashtra temple) ಗ್ರುಷ್ಣೇಶ್ವರ ಜ್ಯೋತಿರ್ಲಿಂಗ ಮಂದಿರ ಮತ್ತು ಶ್ರೀ ತ್ರಯಂಬಕೇಶ್ವರ ಶಿವ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

    ಗ್ರುಷ್ಣೇಶ್ವರ ಜ್ಯೋತಿರ್ಲಿಂಗ ಮಂದಿರ ಮತ್ತು ಶ್ರೀ ತ್ರಯಂಬಕೇಶ್ವರ ಶಿವ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ರವೀನಾ. ಭೇಟಿ ನೀಡಿರುವ ಸುಂದರ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    ರವೀನಾ ಪುತ್ರಿ ರಾಶಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡೋಕೆ ಸಕಲ ತಯಾರಿ ನಡೆಯುತ್ತಿದೆ. ಒಂದಷ್ಟು ಸಿನಿಮಾ ಕಥೆಗಳ ಮಾತುಕತೆ ಕೂಡ ಆಗಿದೆ. ಸದ್ಯದಲ್ಲೇ ಅಧಿಕೃತ ಮಾಹಿತಿ ಹೋರಬೀಳಲಿದೆ. ಇದನ್ನೂ ಓದಿ:ತೆಲುಗು ನಟ ನಾನಿ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್

    ಅಂದಹಾಗೆ, ರವೀನಾ ಟಂಡನ್ (Raveena Tandon) ನಟನೆಯ ‘ಪಾಟ್ನಾ ಶುಕ್ಲಾ’ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಕೆಜಿಎಫ್- 3 ಸೇರಿದಂತೆ ಹಲವು ಸಿನಿಮಾಗಳು ಅವರ ಕೈಯಲ್ಲಿವೆ.