Tag: ravi belagere

  • ಬೆಳಗೆರೆ 2ನೇ ಪತ್ನಿ ಯಶೋಮತಿ ನಾಪತ್ತೆ – ಫೇಸ್‍ಬುಕ್ ಅಕೌಂಟ್ ಕ್ಲೋಸ್

    ಬೆಳಗೆರೆ 2ನೇ ಪತ್ನಿ ಯಶೋಮತಿ ನಾಪತ್ತೆ – ಫೇಸ್‍ಬುಕ್ ಅಕೌಂಟ್ ಕ್ಲೋಸ್

    ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಬಂಧನವಾದ ಬೆನ್ನಲ್ಲೇ ಅವರ 2ನೇ ಪತ್ನಿ ನಾಪತ್ತೆಯಾಗಿದ್ದಾರೆ.

     

    ಬೆಂಗಳೂರು ಸಿಸಿಬಿ ಪೊಲೀಸರಿಂದ ಎರಡನೇ ಪತ್ನಿ ಯಶೋಮತಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಿ ಸಿಸಿಬಿ ವಿಚಾರಣೆ ಹಾಜರಾಗುವಂತೆ ಹೇಳೋ ಸಾಧ್ಯತೆ ಇದ್ದು, ಹೆಗ್ಗರವಳ್ಳಿ ಜೊತೆ ನಂಟಿನ ಬಗ್ಗೆ ಮಾಹಿತಿ ಸಂಗ್ರಹಿಸುವ ನಿರೀಕ್ಷೆ ಇದೆ. ರವಿ ಬೆಳಗೆರೆ ಬೆದರಿಕೆ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸಲಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಐಪಿಸಿ 164 ಅನ್ವಯ ಯಶೋಮತಿಯ ಸ್ವಇಚ್ಛಾ ಹೇಳಿಕೆ ಪಡೆಯುವ ಸಾಧ್ಯತೆ ಇದೆ ಎಂದು ಪಬ್ಲಿಕ್ ಟಿವಿಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಆದ್ರೆ ಶುಕ್ರವಾರ ರಾತ್ರಿಯಿಂದ 2ನೇ ಪತ್ನಿ ಯಶೋಮತಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರೋ ಮನೆಯಲ್ಲಿ ಸದ್ಯ ಯಶೋಮತಿ ಇಲ್ಲ. ತನ್ನ ಫೇಸ್‍ಬುಕ್ ಅಕೌಂಟ್ ಕೂಡ ಕ್ಲೋಸ್ ಮಾಡಿದ್ದಾರೆ. ಅಲ್ಲದೆ ಯಶೋಮತಿ ಯಾವುದೇ ಫೋನ್ ಕರೆಗಳನ್ನ ಸ್ವೀಕರಿಸುತ್ತಿಲ್ಲ.

    ಸುನೀಲ್ ಹೆಗ್ಗರವಳ್ಳಿ ಹಾಗೂ ಯಶೋಮತಿ ನಡುವೆ ಅನೈತಿಕ ಸಂಬಂಧವಿತ್ತು. ಈ ಬಗ್ಗೆ ಮನೆ ಕೆಲಸದಾಕೆ ರವಿ ಬೆಳಗೆರೆಗೆ ಮಾಹಿತಿ ನೀಡಿದ್ದರು. ಈ ಮಧ್ಯೆ ಒಂದು ಬಾರಿ ರವಿ ಬೆಳಗೆರೆ ಮಧ್ಯರಾತ್ರಿ ಮನೆಗೆ ಬಂದಾಗ ಸುನೀಲ್ ಓಡಿಹೋಗಿದ್ದರು ಎಂಬ ಮಾತುಗಳೂ ಕೂಡ ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ರವಿ ಬೆಳಗೆರೆ ಸುನೀಲ್ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

    https://www.youtube.com/watch?v=lgEoaxQ1l44

    https://www.youtube.com/watch?v=86k-IW3-boE

    https://www.youtube.com/watch?v=tvAkOpM6ZZo

    https://www.youtube.com/watch?v=p0Orve2DpiM

  • ರವಿ ಬೆಳಗೆರೆ ಸುಪಾರಿ ಪ್ರಕರಣ: ಮಗಳು ಭಾವನಾ, ಮಗ ಕರ್ಣ ಹೀಗಂದ್ರು

    ರವಿ ಬೆಳಗೆರೆ ಸುಪಾರಿ ಪ್ರಕರಣ: ಮಗಳು ಭಾವನಾ, ಮಗ ಕರ್ಣ ಹೀಗಂದ್ರು

    ಧಾರವಾಡ/ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ವಿರುದ್ಧದ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಮಾತನಾಡಿದ್ದು, ಗೌರಿ ಹತ್ಯೆ ತನಿಖೆ ದಿಕ್ಕು ತಪ್ಪಿಸುವ ಉದ್ದೇಶದಿಂದ ನಮ್ಮ ತಂದೆಯನ್ನು ಸಿಲುಕಿಸಲಾಗ್ತಿದೆ ಎಂದು ಹೇಳಿದ್ದಾರೆ.

    ಇಂತಹ ತೀರಾ ಕಳಪೆ ಆರೋಪ ಅವರ ಮೇಲೆ ಬಂದಿದೆ ಅನ್ನೋದು ಶಾಕಿಂಗ್. ಸುಮಾರು ವಿಷಯಗಳಲ್ಲಿ ಅವರ ಮೇಲೆ ಆರೋಪಗಳು ಬಂದಿವೆ. ಆದ್ರೆ ಚಿಲ್ಲರೆ ಕೆಲಸ ಮಾಡುವಂತ ಆರೋಪವಿದು ಎಂಬುದು ಶಾಕಿಂಗ್. ನಮ್ಮ ಅಪ್ಪ ದೊಡ್ಡ ಮನುಷ್ಯ. ಅವರು ಇಂತಹ ಕೆಟ್ಟ ಕೆಲಸ ಮಾಡೋರಲ್ಲ. ಇದು ಕೇವಲ ಆರೋಪ ಅಷ್ಟೇ. ಆದರೆ ಯಾವುದೇ ಬಲವಾದ ಸಾಕ್ಷ್ಯ ಇಲ್ಲ. ನಾವು ಕಾನೂನು ಬ್ರೇಕ್ ಮಾಡಿ ನಾವೇ ಸರಿ ಅಂತಾ ಹೇಳೋಕೆ ಆಗಲ್ಲ. ನಾಲ್ಕು ದಿವಸ ಕಾಯಲೇಬೇಕು, ಕಾಯುತ್ತೇವೆ. ಅವರ ಆರೋಗ್ಯ ಸರಿ ಇಲ್ಲ. ನಮ್ಮಪ್ಪನಿಗೆ ಕ್ಲಿನ್ ಚಿಟ್ ಸಿಗುತ್ತೆ. ನಮ್ಮ ತಂದೆ ಯಾವುದೇ ಗಿಲ್ಟಿ ಇಲ್ಲದೇ ಹೊರಗೆ ಬರ್ತಾರೆ ಅಂತ ಭಾವನಾ ಬೆಳಗೆರೆ ಹೇಳಿದ್ದಾರೆ.

    ಸುನೀಲ್ ಅಪ್ಪನ ಕೆಳಗೆ ಪಳಗಿರೋದು, ಅವರು ಹೇಳಿಕೊಟ್ಟ ದಾರಿಯಲ್ಲೇ ಪತ್ರಿಕೋದ್ಯಮ ಮಾಡಿರೋದು. ಒಳ್ಳೇ ವರದಿಗಾರರೂ ಹೌದು. ಅವರ ನಡುವಿನ ಮನಸ್ತಾಪದಿಂದ ಕೆಲಸ ಬಿಟ್ಟು ಹೋಗಿದ್ದರು. ಅಪ್ಪನೇ ಫೋನ್ ಮಾಡಿ, ಬಾ ನೀನು ಅಂತ ಒತ್ತಡ ಕೊಟ್ಟು ಕರೆಸಿಕೊಂಡರು. ಏನಾಯಿತು ಅನ್ನೋದು ಅವರಿಬ್ಬರ ವೈಯಕ್ತಿಕ ವಿಷಯ. ಅದರ ಬಗ್ಗೆ ಮಾಹಿತಿಯೂ ಸರಿಯಾಗಿ ಗೊತ್ತಿಲ್ಲ. ಈಗ ಸುನೀಲ್ ಜೀವ ಭಯ ಅಂತ ಹೇಳ್ತಿರೋದು ಶಾಕ್ ಆಗಿದೆ ಅಂದ್ರು.

    ಬೆಂಗಳೂರಿನಲ್ಲಿ ಮಾತನಾಡಿದ ಪತ್ರಕರ್ತ ರವಿಬೆಳೆಗೆರೆ ಪುತ್ರ ಕರ್ಣ, ಮನೆಗೆ ಪೊಲೀಸರು ಬಂದು ವಿಚಾರಣೆಗೆ ಸ್ಪಂದಿಸುವಂತೆ ಕೇಳಿಕೊಂಡಿದ್ರು. ನಮ್ಮ ಕಡೆಯಿಂದ ಸ್ಪಂದಿಸಿದ್ದೇವೆ. ಪ್ರಕರಣದ ಬಗ್ಗೆ ಈಗಲೂ ನಮ್ಮ ಫ್ಯಾಮಿಲಿಗೆ ಗೊಂದಲವಿದೆ. ಯಾಕೆ? ಹೇಗೆ? ಈ ಪ್ರಕರಣ ಹುಟ್ಟಿಕೊಳ್ತು ಗೊತ್ತಿಲ್ಲ. ಸುಪಾರಿ ಕಿಲ್ಲರ್ ಶಶಿಧರ್ ಯಾರು ಅಂತ ಗೊತ್ತಿಲ್ಲ. ತಂದೆಯವರು ಡಯಾಬಿಟಿಸ್ ನಿಂದ ಬಳಲುತ್ತಿದ್ದಾರೆ. ಒಂದು ವೇಳೆ ಡಯಾಬಿಟಿಸ್ ಜಾಸ್ತಿಯಾದ್ರೆ ಆಸ್ಪತ್ರೆ ಸೇರಿಸಲೇಬೇಕಾಗುತ್ತೆ. ಸದ್ಯ ಸಿಸಿಬಿಯಲ್ಲೇ ಇರ್ತಾರೆ ಅಂತ ಹೇಳಿದ್ರು.

    https://www.youtube.com/watch?v=86k-IW3-boE

    https://www.youtube.com/watch?v=lgEoaxQ1l44

    https://www.youtube.com/watch?v=tvAkOpM6ZZo

  • Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    ಬೆಂಗಳೂರು: ರಾಕ್ಷಸ ರವಿಬೆಳಗೆರೆ ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕು ಎಂದು ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೇಳಿದ್ದಾರೆ.

    ತನ್ನ ಹತ್ಯೆಗೆ ಸುಪಾರಿ ನೀಡಿ ಬಂಧನವಾಗಿರುವ ರವಿ ಬೆಳಗೆರೆ ಅವರ ಕುರಿತು ಅವರು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿ, ರವಿ ಬೆಳಗೆರೆ ಅವರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ. ಸಿಸಿಬಿ ಮತ್ತು ಎಸ್‍ಐಟಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. 

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆ ವೇಳೆ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನನ್ನನ್ನು ಕೊಲೆ ಮಾಡಲು ರವಿಬೆಳಗೆರೆಯಿಂದ ಸುಪಾರಿ ಪಡೆದಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಈ ವಿಚಾರ ನನಗೂ ತಿಳಿದಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಬಂಧನ ನಡೆಸಿದ ಸಂದರ್ಭದಲ್ಲಿ ತಿಳಿಯಿತು ಎಂದರು.

    ಸುಪಾರಿ ನೀಡಿರುವ ಬಗ್ಗೆ ಕೇಳಿ ನನಗೂ ಶಾಕ್ ಆಗಿದ್ದು, ನನ್ನ ಹಾಗೂ ರವಿಬೆಳಗೆರೆ ಅವರ ಸಂಬಂಧ ಸುಮಾರು 14 ವರ್ಷಗಳದ್ದು, ನಿರಂತರವಾಗಿ 14 ವರ್ಷ ಅವರ ಬಳಿ ಕೆಲಸ ಮಾಡಿದ್ದೇನೆ. ಅಲ್ಲದೇ ಅವರಿಗೆ ಎಂದು ಅಸಮಾಧಾನ ಬಾರದ ಹಾಗೇ ಕೆಲಸ ಮಾಡಿದ್ದೇನೆ. ಈಗಿದ್ದು ನನ್ನ ವಿರುದ್ಧ ಸುಪಾರಿ ನೀಡುವ ಸುದ್ದಿ ಕೇಳಿ ಅಶ್ಚರ್ಯ ಹಾಗೂ ಅತಂಕವಾಗುತ್ತಿದೆ ಎಂದು ಹೇಳಿದರು.

    ಹಾಯ್ ಬೆಂಗಳೂರು ಬಿಟ್ಟಿದ್ದು ಯಾಕೆ?
    ನನ್ನ ಅವರ ಮಧ್ಯೆ ಯಾವುದೇ ವೈಯಕ್ತಿಕ ಜಗಳವಿಲ್ಲ. 2014 ಡಿಸೆಂಬರ್ ನಲ್ಲಿ ನಾನು ಅವರ ಬಳಿ ಕೆಲಸ ಬಿಟ್ಟೆ. 14 ವರ್ಷದ ಅವಧಿಯಲ್ಲಿ ನನ್ನ ಹಾಗೂ ನನ್ನ ವರದಿಗಳ ಬಗ್ಗೆ ಯಾವುದೇ ಅನುಮಾನ ವ್ಯಕ್ತವಾಗಿರಲಿಲ್ಲ. ಯಾವುದೇ ವ್ಯಕ್ತಿಯನ್ನು ಬ್ಲಾಕ್ ಮೇಲ್ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ 2014ರಲ್ಲಿ ಅವರು ನನ್ನ ಬಗ್ಗೆ ಸಂಶಯ ವ್ಯಕ್ತಪಡಿಸಲು ಆರಂಭಮಾಡಿದರು. ಹೀಗಾಗಿ ನಂಬಿಕೆ ಇಲ್ಲದ ಜಾಗದಲ್ಲಿ ಕಾರ್ಯನಿರ್ವಹಿಸಬಾರದು ಎಂಬ ಕಾರಣಕ್ಕೆ ಕೆಲಸ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಈ ಹಿಂದೆ ಪ್ಲಾನ್ ಮಾಡಲಾಗಿತ್ತಾ?
    ಈ ಹಿಂದೆ ತಮ್ಮ ಮೇಲೆ ನಡೆದ ದಾಳಿ ಕುರಿತು ಪ್ಲಾನ್ ಮಾಡಲಾಗಿತ್ತು ಎಂದು ಸಿಸಿಬಿ ಪೊಲೀಸರ ಮಾಹಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ಎಂದು ಸಂಶಯ ಉಂಟಾಗಿರಲಿಲ್ಲ, ಆದರೆ ಪೊಲೀಸ್ ಮಾಹಿತಿ ಪಡೆದ ನಂತರ ನನ್ನ ಜೀವನದಲ್ಲಿ ನಡೆದ ಘಟನೆಗಳನ್ನು ನೆನಪಿಸಿ ಕೊಂಡರೆ ಹೌದು ಎನ್ನುವ ಭಾವನೆ ಬರುತ್ತಿದೆ. 2014 ಡಿಸೆಂಬರ್ 20, ಶನಿವಾರ ರವಿಬೆಳಗೆರೆ ಅವರು ನನಗೆ ಪದೆ ಪದೆ ಕರೆಮಾಡಿ ಚಾನಲ್‍ಗೆ ಬಂಡವಾಳ ಹೂಡಲು ಕೆಲವರು ಬರುತ್ತಿದ್ದಾರೆ. ನಿನ್ನ ಬಳಿ ಮಾತನಾಡಬೇಕು ಬಾ ಎಂದು ಕರೆದರು. ಆದರೆ ನಾನು ಅಂದು ತಡವಾಗಿ ಕಚೇರಿ ಬಳಿ ತೆರಳಿದೆ, ಆ ವೇಳೆಗೆ ಕ್ರಿಮಿನಲ್ ಹಿನ್ನೆಲೆಯುಳ್ಳ ಹಲವರು ಅಲ್ಲಿಗೆ ಬಂದಿದ್ದರು. ಆದರೆ ಕಚೇರಿಯಲ್ಲಿ ನೋಡಿದರೆ ಯಾರು ಇರಲಿಲ್ಲ. ಆಗ ನಾನು ಅವರ ಬಳಿ ಬಂಡವಾಳ ಹೂಡುವ ವ್ಯಕ್ತಿಗಳ ಬಗ್ಗೆ ಕೇಳಿದೆ, ಆದರೆ ಈ ಬಗ್ಗೆ ಮಾತನಾಡದೆ ಬೇರೆ ವಿಷಯ ಕುರಿತು ಮಾತನಾಡಿದರು. ಅಂದು ಅನುಮಾನಗೊಂಡು ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಮಾಹಿತಿ ಪಡೆದೆ. ಅವರು ಸಹ ಅನುಮಾನ ವ್ಯಕ್ತಪಡಿಸಿ ನನ್ನನ್ನು ಅಲ್ಲಿಂದ ಹೊರಡುವಂತೆ ಸೂಚಿಸಿದರು. ತಕ್ಷಣ ನಾನು ಅಲ್ಲಿಂದ ನಾನು ಬೇರೆ ಕಡೆ ತೆರಳಿ ಕೆಲಸ ಬಿಡುವ ನಿರ್ಧಾರ ಮಾಡಿದೆ ಎಂದು ವಿವರಿಸಿದರು.

    ವಿಳಾಸ ತಿಳಿಯಲು ಕೊರಿಯರ್ ನೆಪ:
    ಕಳೆದ ಆಗಸ್ಟ್ 28 ರಂದು ನನ್ನ ಮನೆ ಬಳಿ ಆರೋಪಿ ಶಶಿ ಓಡಾಡುವುದನ್ನು ಗಮನಿಸಿದ್ದೇನೆ, ಆತನು ಅಲ್ಲಿಯೇ ಒಂದು ವರ್ಷ ಕೆಲಸ ಮಾಡಿದ್ದ. ಈ ವೇಳೆ ಆತನ ಹಿನ್ನೆಲೆ ತಿಳಿದಿತ್ತು. ನಾನು ಉತ್ತರ ಹಳ್ಳಿ ಬಳಿ ವಾಸಿಸುತ್ತಿದ್ದೆ, ನಂತರ ಕಳೆದ ವರ್ಷ ನನ್ನ ಮಗನ ಶಾಲೆಯ ವಿಚಾರವಾಗಿ ಮಲ್ಲೇಶ್ವರಂ ಬಳಿ ಮನೆ ಬದಲಾಯಿಸಿದೆ. ನಂತರ ವಸಂತಪುರಕ್ಕೆ ಬಂದೆ ಈ ವೇಳೆ ನನಗೆ ಕೊರಿಯರ್ ಅಫೀಸ್ ನಿಂದ ಕರೆ ಬಂತು. ಆಗ ಕೆಲವು ಪುಸ್ತಕ ನೀಡಬೇಕಿದೆ ಎಂದು ನನ್ನ ವಿಳಾಸ ಪಡೆದರು. ಅಂದು ಬಂದ ಪುಸ್ತಕದಲ್ಲಿ ಬಿ.ಎಚ್ ರಾಘವೇಂದ್ರ ಬರೆದ ಪುಸ್ತಕವು ಇತ್ತು, ರಾಘವೇಂದ್ರ ಅವರು ರವಿಬೆಳಗೆರೆ ಅವರ ಆಪ್ತ ಗೆಳೆಯರು. ಇದರಿಂದ ಅನುಮಾನಗೊಂಡು ರವಿಬೆಳಗೆರೆ ಅವರಿಗೆ ಕರೆ ಮಾಡಿ ಈ ಕುರಿತು ವಿಚಾರಿಸಿದೆ. ಆದರೆ ಅವರು ಪುಸ್ತಕ ಕಳುಹಿಸಿಲ್ಲ ಎಂದು ಹೇಳಿದರು. ನಂತರ ಕೊರಿಯರ್ ನಿಂದ ಬಂದ ಕರೆ ಆಧಾರಿಸಿ ನಾನು ಪರಿಶೀಲಿಸಲು ಮುಂದಾದಾಗ ಅದು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ 10 ವರ್ಷಗಳ ಕಾಲ ಕೊರಿಯರ್ ಸೇವೆ ಮಾಡುತ್ತಿದ್ದ ಮಂಜುವಿನ ನಂಬರ್ ಎಂದು ತಿಳಿಯಿತು. ಆಗ ನಾನು ಆತನನ್ನು ವಿಚಾರಿಸಿದಾಗ ಮಹಿಳೆಯೊಬ್ಬರು ಬಂದು ಕೊಟ್ಟರು ಎಂದು ತಿಳಿಸಿದ. ಆಗ ನನಗೆ ಆತ ಸುಳ್ಳು ಹೇಳುತ್ತಿರುವ ಕುರಿತು ಮನವರಿಕೆ ಆಯ್ತು, ನನ್ನ ಮನೆ ವಿಳಾಸ ತಿಳಿಯಲು ಮಾಡಿದ ತಂತ್ರ ಎಂದು ಅರಿವಾಯಿತು ಎಂದರು.

    ಆದರೂ ನಾನು ಏನು ತಪ್ಪು ಮಾಡಿಲ್ಲ ಎಂಬ ಧೈರ್ಯದ ಮೇಲೆ ಸುಮ್ಮನಾದೆ, ಸುಪಾರಿ ಕೊಟ್ಟಿರುವ ಕುರಿತು ಎಲ್ಲೂ ಸುಳಿವು ನನಗೆ ಸಿಗಲಿಲ್ಲ. ಇಲ್ಲವಾದರೆ ಅಂದೇ ರವಿಬೆಳಗೆರೆ ಅವರು ಜೈಲು ಸೇರುತ್ತಿದ್ದರು, ಎಸ್‍ಐಟಿ ಅಧಿಕಾರಿಗಳ ಕಾರ್ಯ ಮೆಚ್ಚುವಂತದ್ದು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಾದೇ ಕಾರ್ಯನಿರ್ವಹಿಸಿದ್ದಾರೆ. ಆದರೆ ಒಬ್ಬ ರಾಕ್ಷಸ ರವಿಬೆಳಗೆರೆ ಬಳಿ 14 ವರ್ಷದ ಕೆಲಸ ಮಾಡಿದ ನಂತರವು ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕಿದೆ ಎಂದರು.

    ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    https://www.youtube.com/watch?v=tvAkOpM6ZZo

     

     

  • Exclusive: ಮದ್ವೆ ಮನೆಯಲ್ಲಿ ಊಟ ಮಾಡಿ ಸಿಎಂ ಕೊಟ್ಟ ಆದೇಶದಿಂದ ಬೆಳಗೆರೆ ಅರೆಸ್ಟ್!

    Exclusive: ಮದ್ವೆ ಮನೆಯಲ್ಲಿ ಊಟ ಮಾಡಿ ಸಿಎಂ ಕೊಟ್ಟ ಆದೇಶದಿಂದ ಬೆಳಗೆರೆ ಅರೆಸ್ಟ್!

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ರವಿ ಬೆಳಗೆರೆ ಬಂಧನವಾಗಿದೆ. ಆದರೆ ರವಿ ಬೆಳಗೆರೆ ಬಂಧನಕ್ಕೆ ಏನೆಲ್ಲ ಕಸರತ್ತು ನಡೆದಿದೆ ಎನ್ನುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಹೌದು, ರವಿ ಬೆಳಗರೆ ಕರ್ನಾಟಕದ ಖ್ಯಾತ ಪತ್ರಕರ್ತರಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವುದು ಹೇಗೆ ಎಂದು ಪೊಲೀಸರು ಚಿಂತೆಯಲ್ಲಿದ್ದಾಗ ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಸಂಪೂರ್ಣ ಬೆಂಬಲ ನೀಡಿದ್ದರು. ಸಿಎಂ ಬೆನ್ನಿಗೆ ನಿಲ್ಲದೇ ಇದ್ದಲ್ಲಿ ಬಂಧನ ಕಷ್ಟವಾಗುತಿತ್ತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಗೌರಿ ಲಂಕೇಶ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆರಂಭದಲ್ಲಿ ನಾಡ ಪಿಸ್ತೂಲ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ತಾಹೀರ್ ಹುಸೇನ್ ಅನೂಪ್ ಗೌಡನನ್ನು ವಶಕ್ಕೆ ಪಡೆದಿದ್ದರು. ಯಲಹಂಕದಲ್ಲರುವ ಆತನ ಮನೆಯನ್ನು ಪರಿಶೀಲನೆ ನಡೆಸುತ್ತಿದ್ದಾಗ ಒನಿಡಾ ಟಿವಿಯ ಹಿಂದುಗಡೆ ಮೂರು ಪಿಸ್ತೂಲ್ ಇರುವುದನ್ನು ನೋಡಿ ಪೊಲೀಸರು ಒಮ್ಮೆ ಬೆಚ್ಚಿ ಬಿದ್ದಿದ್ದರು.

    ಪಿಸ್ತೂಲ್ ಸಿಕ್ಕಿದ ಹಿನ್ನೆಲೆಯಲ್ಲಿ ಗೌರಿ ಹತ್ಯೆಯ ಬಗ್ಗೆ ಪೊಲೀಸರು ಪ್ರಶ್ನಿಸಿದ್ದಾರೆ. ಈ ವೇಳೆ ಆತ ಗೌರಿ ಹತ್ಯೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಆದರೆ ಪತ್ರಕರ್ತ ರವಿ ಬೆಳಗೆರೆ ಬಗ್ಗೆ ನನಗೆ ಗೊತ್ತಿದೆ ಎಂದಿದ್ದಾನೆ. ಪಿಸ್ತೂಲ್ ಸಿಕ್ಕಿದ ಹಿನ್ನೆಲೆಯಲ್ಲಿ ಮತ್ತಷ್ಟು ವಿಚಾರಗಳನ್ನು ಕೆದಕಿದಾಗ ಆತ ನಾನು ಪಿಸ್ತೂಲ್ ಮಾರಾಟ ಮಾಡುತ್ತಿದ್ದು, ವಿಜಯಪುರ ಜಿಲ್ಲೆಯ ಶಶಿಧರ್ ರಾಮಚಂದ್ರ ಮುಂಡೆವಾಡಿಗೆ ನಾಡ ಪಿಸ್ತೂಲ್ ಮತ್ತು 02 ಜೀವಂತ ಗುಂಡುಗಳನ್ನು ನೀಡಿದ್ದೆ ಎಂದು ತಿಳಿಸಿದ್ದಾನೆ.

    ಈ ಮಾಹಿತಿ ಆಧಾರದಲ್ಲಿ ಶಶಿಧರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಇವರಿಬ್ಬರು ಸುನೀಲ್ ಹತ್ಯೆಗೆ ಬೆಳಗೆರೆ ಸುಪಾರಿ ನೀಡಿದ್ದಾರೆ ಎನ್ನುವುದನ್ನು ಬಾಯಿ ಬಿಟ್ಟಿದ್ದಾರೆ. 2017ರ ಆಗಸ್ಟ್ 26ಕ್ಕೆ ಸುನೀಲ್ ಹೆಗ್ಗರವಳ್ಳಿ ಹತ್ಯೆ ನಡೆಯಬೇಕಿತ್ತು. ಆದರೆ ಸುನೀಲ್ ಮನೆಯಲ್ಲಿ ಇಲ್ಲದ ಕಾರಣ ಹತ್ಯೆ ನಡೆಸಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲದೇ ಸುನೀಲ್ ಮನೆ ಮುಂದೆ ಸಿಸಿಟಿವಿ ಇದೆ ಎಂದು ಬೆಳಗೆರೆಗೆ ತಿಳಿಸಿದ್ದೆವು. ಈ ವಿಚಾರ ತಿಳಿದು ರವಿ ಬೆಳಗೆರೆ ಕೆಂಡಾಮಂಡಲಗೊಂಡು ಇನ್ನು ಒಂದು ತಿಂಗಳು ಈ ಕಡೆ ಬರುವುದೇ ಬೇಡ, ಒಂದು ತಿಂಗಳ ಕಾಲ ಡಿವಿಆರ್ ನಲ್ಲಿ ಡೇಟಾ ಸೇವ್ ಆಗಿರುತ್ತದೆ. ಹೀಗಾಗಿ ಈ ಕಡೆ ತಲೆಹಾಕಬೇಡಿ. ಒಂದು ತಿಂಗಳು ಬಿಟ್ಟು ಆತನನ್ನು ಮುಗಿಸಿ ಎಂದಿದ್ದರು ಎಂದು ಇವರಿಬ್ಬರು ತಿಳಿಸಿದ್ದಾರೆ.

    ರವಿ ಬೆಳಗೆರೆ ಸಾರಥ್ಯದಲ್ಲಿ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂದು ತಿಳಿಯುತ್ತಿದ್ದಂತೆ ಖಾಕಿಗಳು ಒಮ್ಮೆ ಶಾಕ್ ಆಗಿದ್ದಾರೆ. ಪ್ರಭಾವಿ ಪತ್ರಕರ್ತನಾಗಿರುವ ಬೆಳಗೆರೆಯನ್ನು ಮುಟ್ಟುವುದು ಅಷ್ಟು ಸುಲಭವಲ್ಲ ಎನ್ನುವುದು ಗೊತ್ತಾಗಿ ಡಿಜಿಪಿ ನೀಲಮಣಿ ರಾಜು ಅವರನ್ನು ಭೇಟಿ ಮಾಡಿ ಸ್ಫೋಟಕ ಸುದ್ದಿಯನ್ನು ತನಿಖಾ ಅಧಿಕಾರಿಗಳು ನೀಡಿದ್ದಾರೆ. ಬೆಳಗೆರೆ ಹೆಸರನ್ನು ಕೇಳಿ ನೀಲಮಣಿ ರಾಜು ಅವರು ಕ್ಷಣ ಬೆಚ್ಚಿ ಬಿದ್ದು ಬಂಧನ ನಿರ್ಧಾರ ಕೈಗೊಳ್ಳುವುದರ ಬಗ್ಗೆ ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಮಾಹಿತಿಯನ್ನು ರವಾನಿಸುತ್ತಾರೆ. ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಕೆಂಪಯ್ಯ ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿಳಿಸಲು ಮುಂದಾಗುತ್ತಾರೆ. ಈ ವೇಳೆ ಸಿಎಂ ತಮ್ಮನ ಮಗನ ಮದುವೆಗಾಗಿ ಮೈಸೂರಿಗೆ ತೆರಳಿದ್ದರು. ಪ್ರಕರಣ ಗಂಭೀರವಾಗಿರುವ ಇರುವ ಕಾರಣ ಕೆಂಪಯ್ಯ ಈ ವಿಚಾರವನ್ನು ಫೋನಿನಲ್ಲಿ ಹೇಳಲು ಇಚ್ಚಿಸದೇ ನೇರವಾಗಿ ಸಿಎಂ ಭೇಟಿಯಾಗಲು ನವೆಂಬರ್ 28 ರಂದು ಮೈಸೂರಿಗೆ ತೆರಳುತ್ತಾರೆ.

    ಕೆಂಪಯ್ಯ ಮೈಸೂರಿಗೆ ಭೇಟಿ ನೀಡಿದಾಗ ಸಹೋದರನ ಮದುವೆಯಲ್ಲಿ ಊಟ ಮಾಡುತ್ತಾ ಸಿಎಂ ಕುಳಿದ್ದರು. ಊಟದ ಬಳಿಕ ಕೆಂಪಯ್ಯ ಬೆಳಗೆರೆ ಸುಪಾರಿ ನೀಡಿರುವ ವಿಚಾರವನ್ನು ತಿಳಿಸುತ್ತಾರೆ. “ಹೌದಾ. ಇದು ನಿಜವೇ ಏನು ಹೇಳುತ್ತಿದ್ದೀರಿ?” ಎಂದು ಸಿಎಂ ಕೆಂಪಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮುಂದೆ ಏನು ಮಾಡುವುದು ಎಂದು ಕೆಂಪಯ್ಯ ಸಿಎಂ ಅವರಲ್ಲಿ ಕೇಳಿದ್ದಾರೆ. ಕೆಲ ನಿಮಿಷ ಯೋಚಿಸಿ ಸಿಎಂ, ಮುಂದೆ ಹೋಗಿ ಪೊಲೀಸರು ಕರ್ತವ್ಯ ನಿರ್ವಹಿಸಲಿ ಎಂದು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿ ನಂತರ ಬಂಧಿಸಿ ಎಂದು ಸೂಚನೆ ಕೊಟ್ಟಿದ್ದಾರೆ.

    ಸಿಎಂ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕ ಚುರುಕೊಂಡ ಪೊಲೀಸರು ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿ ಗುರುವಾರ ಶಶಿಧರ್ ರಾಮಚಂದ್ರ ಮುಂಡೆವಾಡಿಯನ್ನು ಬಂಧಿಸಿ ಶುಕ್ರವಾರ ರವಿ ಬೆಳಗೆರೆಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    ಒಟ್ಟಿನಲ್ಲಿ ಗೌರಿ ಹತ್ಯೆಯ ತನಿಖೆಯ ವೇಳೆ ಮತ್ತೊಂದು ಹತ್ಯೆಗೆ ಸುಪಾರಿ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ರವಿ ಬೆಳಗೆರೆ ಕ್ರೈಂ ಪತ್ರಕರ್ತರಾಗಿರುವ ಕಾರಣ ಅವರಿಗೆ ಮತ್ತಷ್ಟು ಸುಪಾರಿ ಕಿಲ್ಲರ್ಸ್ ಗಳ ಬಗ್ಗೆ ಮಾಹಿತಿ ಇರಬಹುದು ಎನ್ನುವ ಅನುಮಾನ ಈಗ ಪೊಲೀಸರದ್ದು. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

     

  • ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ, ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ರವಿಬೆಳಗೆರೆ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಪತ್ರಕರ್ತ ರವಿಬೆಳೆಗೆರೆ ಬಂಧನ ಹಿನ್ನೆಲೆ ವಿಕಾಸಸೌಧದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವ ವೇಳೆ ತಾಹೀರ್ ನನ್ನು ಪೊಲೀಸರು ಬಂಧಿಸಿದಾಗ ಸುಪಾರಿ ಕಿಲ್ಲರ್ ಶಶಿಧರ್ ಮುಂಡೇವಾಡಗೆ ಗನ್ ಮಾರಾಟ ಮಾಡಿದ್ದ ಎಂಬ ಮಾಹಿತಿ ಸಿಕ್ಕಿದೆ. ತಾಹೀರ್ ವೆಪನ್ ಸೆಲ್ಲರ್ ಮಾತ್ರ. ಆದರೆ ಬೆಳಗೆರೆ ಬಂಧನಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದರು.

    ಬೆಳಗೆರೆ ಅವರ ಬಂಧನ ವಿಚಾರ ಎಲ್ಲವೂ ಪೊಲೀಸ್ ಪ್ರಕ್ರಿಯೆ, ಮಾಹಿತಿ ಇದ್ದ ಕಾರಣದಿಂದಲೇ ಈ ಪ್ರಕ್ರಿಯೆ ನಡೆದಿದೆ. ಮಾಹಿತಿ ಇಲ್ಲದೇ ಏನೂ ಮಾಡಲು ಆಗುವುದಿಲ್ಲ. ಅಲ್ಲದೇ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಲ್ಯಾಬ್ ರಿಪೋರ್ಟ್ ಬರುವವರೆಗೆ ಕಾಯಬೇಕು. ಕಳೆದ ಭಾನುವಾರ ತಾಹೀರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು, ಯಾರು ಯಾರಿಗೆ ಗನ್ ಮಾರಾಟ ಮಾಡಲಾಗಿದೆ ಎಂಬುವುದರ ಬಗ್ಗೆ ಪೊಲೀಸರು ತನಿಖೆ ಮಾಡಿದಾಗ ಶಶಿಧರ್ ಮುಂಡೆವಾಡಿಗೆ ಗನ್ ಮಾರಾಟ ಮಾಡಿರುವ ಮಾಹಿತಿ ಸಿಕ್ಕಿದೆ. ಈ ಮಾಹಿತಿ ಆಧಾರಿಸಿ ಶಶಿಧರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸಿಸಿಬಿಗೆ ಕೆಲವು ಮಾಹಿತಿ ಸಿಕ್ಕಿದೆ. ಅದರಂತೆ ಇಂದಿನ ಬಂಧನ ಪ್ರಕ್ರಿಯೆ ನಡೆದಿದೆ ಎಂದು ವಿವರಿಸಿದರು.  ( ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ )

    ಅಲ್ಲದೇ ಶಶಿಧರ್ ಮುಂಡೇವಾಡಿ ಬಳಸಿದ್ದ ಗನ್ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ಬಳಿಕ ಆ ಗನ್ ಎಲ್ಲೆಲ್ಲಿ ಬಳಕೆಯಾಗಿದೆ ಎನ್ನುವ ಮಾಹಿತಿ ಲಭಿಸಲಿದೆ. ಬೆಳಗೆರೆ ಬಂಧನದ ಹಾಗೂ ತನಿಖೆ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರು ಅಥವಾ ಸಿಸಿಬಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡುತ್ತಾರೆ ಎಂದು ಹೇಳಿದರು.

    ( ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ? )

    ( ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ )

  • ರವಿ ಬೆಳಗೆರೆ ಹೆಸರನ್ನ ಸುಪಾರಿ ಹಂತಕ ಬಾಯ್ಬಿಟ್ಟಿದ್ದು ಹೇಗೆ? ಬೆಳಗೆರೆ ಕಚೇರಿಯಲ್ಲಿ ಏನು ಸಿಕ್ಕಿದೆ?

    ರವಿ ಬೆಳಗೆರೆ ಹೆಸರನ್ನ ಸುಪಾರಿ ಹಂತಕ ಬಾಯ್ಬಿಟ್ಟಿದ್ದು ಹೇಗೆ? ಬೆಳಗೆರೆ ಕಚೇರಿಯಲ್ಲಿ ಏನು ಸಿಕ್ಕಿದೆ?

    ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಹಿರಿಯ ಪತ್ರಕರ್ತ ರವಿಬೆಳಗೆರೆ ಮತ್ತು ಸುಪಾರಿ ಕಿಲ್ಲರ್‍ಗಳ ಬಂಧನವಾಗಿದೆ.

    ಡಿಸೆಂಬರ್ 3ರಂದು ಬೆಂಗಳೂರು ನಗರ ಸಿಸಿಬಿ ಪೊಲೀಸ್ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ನಾಡ ಪಿಸ್ತೂಲ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ತಾಹೀರ್ ಹುಸೇನ್ ಅನೂಪ್ ಗೌಡ ಎಂಬಾತನನ್ನು ಬಂಧಿಸಿದ್ದರು. ಈತನನ್ನು ಪೊಲೀಸ್ ಬಂಧನಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡಿದಾಗ ವಿಜಯಪುರ ಜಿಲ್ಲೆಯ ಶಶಿಧರ್ ರಾಮಚಂದ್ರ ಮುಂಡೆವಾಡಿ ಎಂಬಾತ ಮತ್ತೊಂದು ನಾಡ ಪಿಸ್ತೂಲ್ ಮತ್ತು 02 ಜೀವಂತ ಗುಂಡುಗಳನ್ನು ಪಡೆದುಕೊಂಡಿದ್ದನೆಂದು ತಿಳಿಸಿದ್ದ.

    ನಂತರ ಅಕ್ರಮ ಪಿಸ್ತೂಲ್ ಹೊಂದಿದ್ದ ಜಾಲವನ್ನು ಬೆನ್ನಟ್ಟಿದ್ದ ಸಿಸಿಬಿ ಅಧಿಕಾರಿಗಳು ಡಿಸೆಂಬರ್ 07ರಂದು ರಾತ್ರಿ 11.15 ರ ಸಮಯಕ್ಕೆ ಶಶಿಧರ್ ರಾಮಚಂದ್ರ ಮುಂಡೆವಾಡಿಯನ್ನು ಪತ್ತೆ ಮಾಡಿ ಬಂಧಿಸಿದ್ದರು.ಶಶಿಧರ್ ರಾಮಚಂದ್ರ ಮುಂಡೆವಾಡಿನನ್ನು ಕೂಲಂಕುಶವಾಗಿ ವಿಚಾರಣೆ ಮಾಡಿದಾಗ ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕರಾದ ರವಿ ಬೆಳಗೆರೆ ನೀಡಿದ ಸುಪಾರಿಯ ಬಗ್ಗೆ ಬಾಯ್ಬಿಟ್ಟಿದ್ದಾನೆ.

    ಹೇಳಿದ್ದು ಏನು?: ಸುಪಾರಿ ಮೇರೆಗೆ ಆಗಸ್ಟ್ 28ರಂದು ನಾನು ನನ್ನ ಸಹಚರ ವಿಜು ಬಡಿಗೇರ್ ಜೊತೆಯಲ್ಲಿ ರವಿಬೆಳಗೆರೆ ಕಚೇರಿಗೆ ಬಂದಿದ್ದೆ. ಅದೇ ದಿನ ರವಿ ಬೆಳಗೆರೆ ಶಶಿಧರ್‍ಗೆ ಒಂದು ಗನ್ ಮತ್ತು 04 ಜೀವಂತ ಗುಂಡುಗಳನ್ನು ಹಾಗೂ 01 ಚಾಕುವನ್ನು ನೀಡಿದ್ದರು. ವೈಯಕ್ತಿಕ ವೈಷಮ್ಯದಿಂದಾಗಿ ತನಗೆ ದ್ರೋಹ ಬಗೆದಿರುವ, ಈ ಹಿಂದೆ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಹೆಗ್ಗರವಳ್ಳಿಯನ್ನು ಕೊಲೆ ಮಾಡು. ನಿನಗೆ ಎಷ್ಟು ಬೇಕೋ ಅಷ್ಟು ಹಣ ಕೊಡುತ್ತೇನೆಂದು ಹೇಳಿದರು. ಸುಪಾರಿಗಾಗಿ ಮುಂಗಡವಾಗಿ 15,000 ರೂ. ನೀಡಿದ್ದರು.

    ಸಂಚು ಹೀಗಿತ್ತು: ರವಿ ಬೆಳಗೆರೆ ಕಚೇರಿಯ ಒಬ್ಬ ಹುಡುಗ ಶಶಿಧರ್ ಮತ್ತು ವಿಜು ಬಡಿಗೇರ್ ಗೆ ಉತ್ತರಹಳ್ಳಿಯಲ್ಲಿರುವ ಸುನೀಲ್ ಹೆಗ್ಗರವಳ್ಳಿಯ ಮನೆಯನ್ನು ತೋರಿಸಿಕೊಟ್ಟಿದ್ದರು. ನಂತರ ಶಶಿಧರ್ ಮತ್ತು ವಿಜು ಬಡಿಗೇರ್ ಸುನೀಲ್ ಹೆಗ್ಗರವಳ್ಳಿಯನ್ನು ಗನ್‍ನಿಂದ ಶೂಟ್ ಮಾಡಿ ಕೊಲೆ ಮಾಡಲು ಮನೆಯ ಬಳಿ ಕಾಯುತ್ತಿದ್ದರು. ಮನೆಯಿಂದ ಹೊರಬಂದ ಸುನೀಲ್ ಹೆಗ್ಗರವಳ್ಳಿಯನ್ನು ಶೂಟ್ ಮಾಡಲು ಶಶಿಧರ್ ರಾಮಚಂದ್ರ ಮುಂಡೆವಾಡಿ ಗುರಿ ಇಟ್ಟಿದ್ದ. ಆಗ ಸುನೀಲ್ ಮರೆಯಾಗಿ ಸರಿಯಾದ ಸಮಯ ದೊರೆಯದ ಕಾರಣ ಆರೋಪಿ ಶಶಿಧರ್ ರವಿ ಬೆಳಗೆರೆಗೆ ಗನ್ ಹಾಗು ಗುಂಡುಗಳನ್ನು ವಾಪಸ್ ನೀಡಿ ಒಂದು ತಿಂಗಳು ಬಿಟ್ಟು ಬಂದು ಕೆಲಸ ಮುಗಿಸಿಕೊಡುವುದಾಗಿ ತಿಳಿಸಿ ವಾಪಸ್ ಊರಿಗೆ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಚಿನ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಐ.ಪಿ.ಸಿ ಸೆಕ್ಷನ್ 120(ಬಿ), 307 ಸಹಿತ 34 ಜೊತೆಗೆ 1958 ಆಮ್ರ್ಸ್ ಕಾಯ್ದೆಯ 3, 25 ಅಡಿ ಪ್ರಕರಣ ದಾಖಲಾಗಿದ್ದು, ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ.

    ಸಿಸಿಬಿ ಅಧಿಕಾರಿಗಳು ಈ ಪ್ರಕರಣದ ಮುಖ್ಯ ಆರೋಪಿ ರವಿ ಬೆಳಗೆರೆಯನ್ನು ಪತ್ತೆ ಮಾಡಲು ನ್ಯಾಯಾಲಯದಿಂದ ಸರ್ಚ್‍ವಾರೆಂಟ್ ಪಡೆದು ಶುಕ್ರವಾರ ಮಧ್ಯಾಹ್ನ 01. 30ಕ್ಕೆ ಹಾಯ್ ಬೆಂಗಳೂರು ಕಚೇರಿಯಲ್ಲಿ ರವಿ ಬೆಳಗೆರೆ ಯವರನ್ನು ಬಂಧಿಸಿದ್ದಾರೆ.

    ರವಿ ಬೆಳಗೆರೆ ಕಚೇರಿಯಿಂದ ಒಂದು ರಿವಾಲ್ವಾರ್, 53 ಜೀವಂತ ಗುಂಡುಗಳು, ಒಂದು ಬಳಸಿರುವ ಗುಂಡು, ಜಿಂಕೆ ಚರ್ಮ, ಒಂದು ಡಬ್ಬಲ್ ಬ್ಯಾರೆಲ್ ಗನ್, 41 ಜೀವಂತ ಗುಂಡುಗಳು, 1.5 ಅಡಿ*1.5 ಅಡಿ ಉದ್ದಗಲದ ಒಂದು ದೊಡ್ಡ ಆಮೆ ಚಿಪ್ಪನ್ನು ವಶಪಡಿಸಿಕೊಂಡಿದ್ದಾರೆ.

    ಶಶಿಧರ್ ಮುಂಡೆವಾಡಿ ವಿರುದ್ಧ ದಾಖಲಾಗಿರುವ ಪ್ರಕರಣಗಳು: 
    1. 2006 ರಲ್ಲಿ ಮುತ್ತು ಮಾಸ್ತರ್ ಎಂಬವನನ್ನು ಕೊಲೆ ಮಾಡಿದ ಬಗ್ಗೆ ಪ್ರಕರಣ
    2. 2013 ರಲ್ಲಿ ಬಸಪ್ಪ ಹರಿಜನ್ ಎಂಬಾತನನ್ನು ಕೊಲೆ ಮಾಡಿದ ಬಗ್ಗೆ ಪ್ರಕರಣ.
    3. 2014 ರಲ್ಲಿ ತನ್ನ ಸ್ನೇಹಿತ ಸುರೇಶ್ ಲಾಳಸಂಗಿ ಎಂಬಾತನನ್ನು ಕೊಲೆ ಮಾಡಿದ ಬಗ್ಗೆ ಪ್ರಕರಣ.
    4. 2016ನೇ ಸಾಲಿನಲ್ಲಿ ಇಂಡಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ.
    5. 2017 ರಲ್ಲಿ ಮಹಾರಾಷ್ಟ್ರದ ಮೀರಜ್‍ನ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರವನ್ನು ಇಟ್ಟುಕೊಂಡಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ.

    https://www.youtube.com/watch?v=TUKBh2D8Qcw&feature=youtu.be&a

  • ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಬಂಧಿಸಲು ತೆರಳಿದಾಗ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಪೊಲೀಸ್ ಅಧಿಕಾರಿಗೆ ಬುದ್ಧಿವಾದ ಹೇಳಿರುವ ವಿಚಾರ ಮೂಲಗಳಿಂದ ಸಿಕ್ಕಿದೆ.

    ಚಾಮರಾಜಪೇಟೆಯ ಹಾಯ್ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ರವಿ ಬೆಳಗೆರೆ ಇದ್ದಾರೆ ಎಂದು ತಿಳಿದು ಬೆಳಗ್ಗೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಬೆಳಗೆರೆ ನಿದ್ರೆ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ( ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ )

    ಈ ವೇಳೆ ಪೊಲೀಸರೊಂದಿಗೆ ವಿಚಾರಣೆಗೆ ಸರಿಯಾಗಿ ಸ್ಪಂದಿಸದ ಅವರು, ನಾನೇನು ಓಡಿ ಹೋಗುವುದಿಲ್ಲ. ಬಂದು ವಿಚಾರಣೆ ಮಾಡಿ. ಅದೃಷ್ಟ ಚೆನ್ನಾಗಿಲ್ಲ ನೀವು ನನ್ನನ್ನು ಹಿಡಿದುಕೊಂಡಿದ್ದೀರಿ, ಬಂಧಿಸ್ತೀನಿ ಅಂತ ಹೇಳ್ತೀರಿ. ಮೊದಲೇ ನನಗೆ ಹುಷಾರಿಲ್ಲ. ನನ್ನನ್ನು ಬಂಧಿಸಿ ಜಡ್ಜ್ ಮನೆಗೆ ಕರೆದುಕೊಂಡು ಹೋದರೂ ಜಾಮೀನು ಸಿಕ್ಕುತ್ತೆ. ಅನಾರೋಗ್ಯ ಕಾರಣದಿಂದ ಜಾಮೀನು ಕೊಡುತ್ತಾರೆ. ಸುಮ್ನೆ ಯಾಕೆ ರಿಸ್ಕ್ ತಗೆದುಕೊಳ್ಳುತ್ತಿದ್ದೀರಿ. ಕೊಲ್ಲೊದಕ್ಕೆ ಹೇಳಿರಬಹುದು ಕೊಂದಿಲ್ಲ ಅಲ್ವಾ? ಜಾಮೀನಿನ ಮೇಲೆ ವಿಚಾರಣೆ ಮಾಡಿ. ಸುಮ್ನೆ ಹಿಂಸೆ ತಗೋ ಬೇಡಿ. ನನ್ನ ಪಾಡಿಗೆ ನನ್ನ ಬಿಡಿ ಎಂದು ಅಧಿಕಾರಿಗಳಿಗೆ ಬುದ್ಧಿವಾದ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.  ( ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ )

    ( ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ? )

     

     

  • ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ

    ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ

    ಬೆಂಗಳೂರು: ನನಗೆ ಎಲ್ಲಿ ಇರಲಿ ಎಂಬುದರ ಬಗ್ಗೆ ಗೊಂದಲವಿದೆ. ಬೆಂಗಳೂರು ಸೇಫ್ ಅಲ್ವಾ, ಇತ್ತೀಚೆಗೆ ನಾನು ಬೆಂಗಳೂರಿನಿಂದ ಹೊರ ಹೋದಾಗ ಏನೋ ನೆನಪಾಗಿ ಮತ್ತೆ ಬಂದೆ. ಬಂದ ಮೇಲೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿರುವುದು ನನಗೆ ಗೊತ್ತಾಯಿತು ಎಂದು ಹೇಳುತ್ತಾ ತಮ್ಮ ಮಾತನ್ನು ಆರಂಭಿಸಿದ್ದರು.

    ಗೌರಿ ಜಗಳಗಂಟಿ, ಬಾಯಿ ಬಡಕಿ ಎಲ್ಲಾ ಸರಿ. ಆದರೂ ಅಷ್ಟು ಪುಟ್ಟ ಗುಬ್ಬಿಯನ್ನು ಏಳು ಗುಂಡು ಹಾಕಿ ಕೊಲೆ ಮಾಡಲಾಗಿದೆ. ಇದಕ್ಕಿಂತ ಬರ್ಬರತೆ ಯಾವುದೂ ಇಲ್ಲ ಅಂತ ಅನ್ನಿಸುತ್ತದೆ. ನಮ್ಮ ಮುಂದೆ ಕಾನೂನುಗಳಿವೆ, ಕೇಸ್ ಹಾಕಬಹುದು ಅದನ್ನು ಬಿಟ್ಟು ಕೊಲೆ ಮಾಡಿಸಬಾರದು. ಒಂದೂವರೆ ತಿಂಗಳ ಹಿಂದೆ ಸರ್ಕಾರ ನನ್ನನ್ನು ಒಂದು ವರ್ಷ ಜೈಲಿನಲ್ಲಿಡಬೇಕು ಎಂದು ಆದೇಶ ಹೊರಡಿಸಿತ್ತು. ನನ್ನ ಮೇಲೆ ಆಪಾದನೆಯಿದೆ ಸರಿ. ನಾನು ಅವರ ಕೈಗೂ ಸಿಗಲಿಲ್ಲ, ಕೇಸಿಗೆ ತಡೆಯನ್ನು ತಂದಿದ್ದೇನೆ ಎಂದು ಅಂತಾ ಹೇಳಿದರು.

    ಇದನ್ನೂ ಓದಿ: ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಕೇಸಿಗೆ ತಡೆ ತದ್ದಿದ್ದರಿಂದ ಇಡೀ ಪತ್ರಿಕಾ ಸಮುದಾಯ ಒಂದಾಯಿತು. ಈ ವೇಳೆ ನಾವುಗಳು ಗೌರಿ ಹತ್ಯೆಯನ್ನು ಖಂಡಿಸಬೇಕು ಮತ್ತು ತನಿಖೆಗೆ ಆಗ್ರಹಿಸಬೇಕು. ಗೌರಿಯನ್ನು ನಕ್ಸಲೈಟ್ಸ್ ನವರು ಕೊಂದರು ಎಂದು ಪತ್ರಿಕೆಯೊಂದರಲ್ಲಿ ಪ್ರಕಟವಾಗಿತ್ತು. ನಮ್ಮ ಮನೆಯಲ್ಲಿರುವ ಒಂದು ಪುಟಾಣಿ ಹುಡಗನ್ನು ಅಥವಾ ಹುಡುಗಿಯನ್ನು ಕೊಲ್ಲಲಾಗುತ್ತಾ? ಗೌರಿ ಯಾರಿಗೂ ಅಪಾಯಕಾರಿ ಆಗಿರಲಿಲ್ಲ ಹಾಗು ಆರ್ಥಿಕವಾಗಿ ಅವಳು ತುಂಬಾ ತೊಂದರೆಯಲ್ಲಿದ್ದಳು. ನನ್ನ ಹತ್ರ ಆದರೂ ಚಿಲ್ಲರೆ ಪಲ್ಲರೆ ಒಂದಿಷ್ಟೂ ದುಡ್ಡು ಇದೆ. ಆದರೆ ಅವಳ ಹತ್ತಿರ ಹಣವಿರಲಿಲ್ಲ. ಪಿ.ಲಂಕೇಶ್ ಸಹ ಯಾರಿಗೂ ಬ್ಲ್ಯಾಕ್ ಮೇಲ್ ಮಾಡುತ್ತಿರಲಿಲ್ಲ. ಗೌರಿನೂ ಮಾಡುತ್ತಿರಲಿಲ್ಲ, ನಾನು ಮಾಡುವುದಿಲ್ಲ ಹಾಗಿರುವಾಗ ನಮ್ಮನ್ನು ಯಾವ ಕಾರಣಕ್ಕೆ ಕೊಲ್ಲುತ್ತೀರಿ, ಮನಸ್ಸಿಗೆ ಬಹಳ ಬೇಜಾರಾಗುತ್ತದೆ. ಗೌರಿ ಸಾವಿನ ಸುದ್ದಿ ನನಗೆ ವೈಯಕ್ತಿಕವಾಗಿ ತುಂಬಾ ನೋವು ತಂದಿದೆ. ನಾನು ಹೇಳೋದು ಗೌರಿ ಹತ್ಯೆಯನ್ನು ಖಂಡಿಸಿ, ನಮ್ಮ ಮನೆಯಲ್ಲಿ ಯಾರಾದರೂ ಸತ್ತರೂ ಆವಾಗ ನಾವು ಸಂತೋಷ ಆಗಲ್ಲ, ದುಃಖ ಆಗುತ್ತದೆ. ಹಾಗಾಗಿ ಗೌರಿ ಹತ್ಯೆಯನ್ನು ನಾವೆಲ್ಲರೂ ಖಂಡಿಸೋಣ.

    ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ?

    ಗೌರಿ ಹತ್ಯೆಯನ್ನು ಬಲಪಂಥಿಯರೇ ಮಾಡಿದ್ದಾರೆ ಅಥವಾ ಎಡಪಂಥಿಯರೇ ಮಾಡಿದ್ದಾರೆ ಎನ್ನುವ ನಿರ್ಧಾರಕ್ಕೆ ಯಾಕೆ ಬರ್ತಿರಿ. ಈ ಕುರಿತು ತನಿಖೆ ನಡೆದ ಬಳಿಕ ಒಮ್ಮತದ ನಿರ್ಧಾರಕ್ಕೆ ಬರಬಹುದು. ನಮ್ಮ ರಾಜ್ಯದಲ್ಲಿ ಪತ್ರಕರ್ತರು ಬದುಕೋದು ಕಷ್ಟ ಅಂತಾದರೆ ಮುಂದೆ ಹೇಗೆ ಎಂಬ ಪ್ರಶ್ನೆ ನನ್ನಲ್ಲಿ ಮೂಡುತ್ತಿದೆ ಅಂತಾ ಅಂದ್ರು.

    ಗೌರಿ ಹತ್ಯೆಯನ್ನು ಖಂಡಿಸಿದ್ದ ರವಿ ಬೆಳಗೆರೆ ಈಗ ತನ್ನ ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡುವ ಮೂಲಕ ಅಂದರ್ ಆಗಿದ್ದಾರೆ.

    ಆರಂಭದಲ್ಲಿ ಗೌರಿ ಹತ್ಯೆ ಆರೋಪದಲ್ಲಿ ರವಿ ಬೆಳಗೆರೆ ಹೆಸರು ಕೇಳಿ ಬಂದಿತ್ತು. ಆದರೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಗೌರಿ ಹತ್ಯೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

    https://www.youtube.com/watch?v=KALlPbFU_4A

    https://www.youtube.com/watch?v=LcWKbHyIN9s

    https://www.youtube.com/watch?v=Wi0k683HMs8

    https://www.youtube.com/watch?v=GYM3LyxWFbA

    https://www.youtube.com/watch?v=Bpd6CdRHXYY

  • ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಬೆಂಗಳೂರು: ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಹಿರಿಯ ಪತ್ರಕರ್ತ ರವಿ ಬೆಳಗೆರೆ, ಮೂರು ತಿಂಗಳ ಹಿಂದೆ ಫೇಸ್‍ಬುಕ್‍ನಲ್ಲಿ ಹಾಕಿದ್ದ ಸ್ಟೇಟಸ್ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

    ಹೌದು. ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ನೀಡಿದ ಮಾಹಿತಿ ಪ್ರಕಾರ 2017ರ ಆಗಸ್ಟ್ 26ಕ್ಕೆ ಸುನೀಲ್ ಹೆಗ್ಗರವಳ್ಳಿ ಹತ್ಯೆ ನಡೆಯಬೇಕಿತ್ತು. ಆದರೆ ಈ ಹತ್ಯೆಯನ್ನು ವಿಫಲಗೊಳಿಸಿದ್ದು ರವಿ ಬೆಳಗೆರೆ ಅವರ ಎರಡನೇ ಪತ್ನಿ ಯಶೋಮತಿ ಎನ್ನುವ ಮಾಹಿತಿ ಸಿಕ್ಕಿದೆ.

    ರವಿ ಬೆಳಗೆರೆ ಒಂದು ಎಫ್‍ಬಿ ಪೋಸ್ಟ್ ಮಾಡಿದ್ದರು. ಇದರಲ್ಲಿ “ಹೆಜ್ಜೆ ಇಡುವಾಗ ತುಂಬಾ ಎಚ್ಚರ ಇರಬೇಕು. ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ” ಎಂದು ಬರೆದು ತಮ್ಮ ಎರಡನೇ ಪತ್ನಿ ಯಶೋಮತಿಯೊಂದಿಗೆ ಇರುವ ಫೋಟೋವನ್ನು ಹಾಕಿದ್ದರು. ಹತ್ಯೆ ಯತ್ನ ವಿಫಲವಾದ ಹಿನ್ನೆಲೆಯಲ್ಲಿ ಬೆಳಗರೆ ಈ ಪೋಸ್ಟ್ ಪ್ರಕಟ ಮಾಡಿದ್ದಾರಾ ಎನ್ನುವ ಅನುಮನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ರವಿ ಬೆಳಗೆರೆಯ ಎರಡನೇ ಪತ್ನಿ ಯಶೋಮತಿ ಹಾಗೂ ಸುನೀಲ್ ಹೆಗ್ಗರವಳ್ಳಿ ನಡುವೆ ಅನೈತಿಕ ಸಂಬಂಧಿವಿತ್ತು. ಈ ಬಗ್ಗೆ ಕೆಲಸದಾಕೆ ಮಾಹಿತಿ ನೀಡುತ್ತಿದ್ದರು. ಒಂದು ಬಾರಿ ಮಧ್ಯರಾತ್ರಿ ರವಿ ಬೆಳಗೆರೆ ಮನೆಗೆ ಬಂದಾಗ ಸುನೀಲ್ ಓಡಿಹೋಗಿದ್ದರು ಎಂಬ ಮಾತುಗಳೂ ಕೂಡ ಕೇಳಿಬಂದಿವೆ. ಹೀಗಾಗಿ ರವಿ ಬೆಳಗೆರೆ ಅವರ ಈ ಸ್ಟೇಟಸ್ ಹಲವು ಅನುಮಾನಗಳನ್ನ ಮೂಡಿಸಿದೆ.

    ಆಗಸ್ಟ್ ನಲ್ಲಿ ಹಾಕಿದ್ದ ಮತ್ತೊಂದು ಸ್ಟೇಟಸ್ ನಲ್ಲಿ ರವಿ ಬೆಳಗೆರೆ ತನಗೆ ಮೋಸವಾಗಿದೆ ಎಂದು ಹೇಳಿಕೊಂಡಿದ್ದರು. ಆ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದರು: 

    ” ನಾನು ಕಿರಿ ಕಿರಿ ಮನುಷ್ಯ ಅಲ್ಲ. ಸಿಡಿಮಿಡಿ ಇಲ್ಲ. ಸಿಟ್ಟು ಮೊದಲಿತ್ತು. ಈಗ ಮರೆತೇ ಹೋಗಿದೆ. ಈಗಲೂ ಒಮ್ಮೊಮ್ಮೆ ಗುರ್ರ್ ಅಂತೀನಿ. ದ್ವೇಷ ನನ್ನ ಜಾಯಮಾನವಲ್ಲ. ಅಸಹ್ಯವಾದರೆ ದೂರ ಸರಿದುಬಿಡ್ತೇನೆ. ನನ್ನದು ಇಂಟೆನ್ಸ್ ಆದ ಪ್ರೀತಿ. ತೀವ್ರವಾಗಿ ಪ್ರೀತಿಸುತ್ತೇನೆ. ಕೆಲಬಾರಿ ಅವರಿಗೆ ಕಿರಿಕಿರಿ ಆಗುವಷ್ಟು. ಮಾತು, ಹರಟೆ, ನಗು, ಕೊಂಚ ಪೋಲಿತನ, ಇಂಟೆನ್ಸ್ ಆದ ಕಾಮ, ಅತಿಯಾದ ಭಾವುಕತೆ, ಅಮ್ಮನ ನಾಸ್ಟಾಲ್ಜಿಯಾ, ಅವಳನ್ನು ಎಲ್ಲರಲ್ಲೂ ಹುಡುಕೋದು…..ಇವೆಲ್ಲ ನನ್ನ ಪ್ಲಸ್ ಮತ್ತು ಮೈನಸ್ ಪಾಯಿಂಟ್ಸ್. ಆದರೆ ಮೋಸ ಸಹಿಸೋದು ತುಂಬಾ ಕಷ್ಟ. ಮೋಸ ನನಗೆ ಆಗಿದ್ದರೂ ನರಳೋದು ನಾನೇ. ತಪ್ಪು ಮಾಡಿದೋರನ್ನ ಕ್ಷಮಿಸಬಹುದು. ಮೋಸ ಮಾಡಿದೋರನ್ನ ಕ್ಷಮಿಸೋಕಾಗಲ್ಲ. ಯಾಕೆಂದರೆ, ಚೆನ್ನಾಗಿ ಯೋಚನೆ ಮಾಡಿ, ಪ್ಲಾನ್ ಮಾಡಿ ಉದ್ದೇಶವಿಟ್ಟುಕೊಂಡೇ ಅವರು ಮೋಸ ಮಾಡಿರುತ್ತಾರೆ. ಗೊತ್ತಿಲ್ಲದೆ ಮೋಸ ಮಾಡಿಬಿಟ್ಟೆ ಅನ್ನೋಕೆ ಆಗಲ್ಲ.

    ಗೊತ್ತಿಲ್ಲದೆ ತಪ್ಪು ಮಾಡಿದೆ ಅನ್ನಬಹುದು. ನಾನು ತುಂಬಾ ಹುಷಾರು, ನಂಗೆ ಯಾರೂ ಮೋಸ ಮಾಡೋಕಾಗಲ್ಲ, ನಾನು ಮೈ ಮರೆಯಲ್ಲ ಅಂತೆಲ್ಲ ಹೇಳಿಕೊಳ್ತಿದ್ದೆ. but, ಒಂದು ಮೋಸ ಹೇಗೆ ಆಯಿತು ಅಂದ್ರೆ, ಅವತ್ತೇ ನಾನು ಸತ್ತು ಹೋಗಿಬಿಟ್ಟೆ. ನಂಗೆ ಗೊತ್ತು, ನಾನು ಈ ಜನ್ಮದಲ್ಲಿ ಅದರಿಂದ ಚೇತರಿಸಿಕೊಳ್ಳಲಾರೆ. ಒಬ್ಬ ಗೆಳೆಯ ಬಂದು ‘ ಆದದ್ದು ಆಯಿತು. ಕ್ಷಮಿಸಿ ಮತ್ತೆ ರಾಜಿ ಆಗಿಬಿಡು’ ಅಂದ. ” ನೋಡೋ, ನನ್ನ ಆಫೀಸ್ ನ ಒಂದು ರೌಂಡ್ ಹಾಕಿ ಬಾ. ಎಲ್ಲೊ ಒಂದು ಕಡೆ ನಿಂಗೆ ಕೊಳಕು ಕಾಣಬಹುದು. ಆದರೆ ಬಾತ್ ರೂಮ್ ನಲ್ಲಿ ಒಂದು ಹನಿ ನೀರೂ ಚೆಲ್ಲಿರಲ್ಲ. ಹೇಟ್ ಇಟ್. ಅದು ತುಂಬಾ ಕ್ಲೀನ್ ಆದ ಜಾಗ. ಹಾಗಂತ ವಿಸರ್ಜನೆ ಮಾಡೋ ಜಾಗದ ಪಕ್ಕ ಕೂತು ಊಟ ಮಾಡೋಕೆ ಆಗಲ್ಲ” ಅಂದೆ . ಅವನು ಸುಮ್ಮನಾದ.

    ನೀವು ರಾಜಕುಮಾರಿ ಡಯಾನಾ ಫೋಟೋ ನೋಡಿ. ಇಷ್ಟ ಆಗ್ತಾಳೆ. ಆಕೆ ಸುಂದರಿ. ಆದರೆ ಎಂಥ ವಂಚಕಿ! ರಾಜಕುಮಾರ ಚಾಲ್ರ್ಸ್ ಅದನ್ನು ಹೇಳಿಕೊಂಡಿಲ್ಲ. ಅನುಭವಿಸಿದ ನೋವು ಸುಳ್ಳು ಅಂತೀರಾ? ನಂಗೆ ತಾಯಿ ಥೆರೇಸ ತುಂಬಾ ಇಷ್ಟ. ನೋಡಲು ಪರಮ ಕುರೂಪಿ. ಆದರೆ ವಂಚಕಿಯಲ್ಲ. ಅಲ್ಲವಾ. ಕೆಲವು ವಿಷಯಗಳಲ್ಲಿ ನಾನು ಬೆರಗಾಗುವಷ್ಟು ಪ್ರಾಮಾಣಿಕ. ಉದಾಹರಣೆಗೆ ದುಡ್ಡು. ಯಾರಿಗೂ ನಾನು ಮೋಸ ಮಾಡಿಲ್ಲ. ಕಂಡವರ ಹಣ ಮುಟ್ಟಿಲ್ಲ. ಉಳಿದಂತೆ ನಾನು ಬೇಲಿ ಹಾರಿದ್ದುಂಟು. ನನ್ನನ್ನ ಯಾರೂ ಒಂದು ಚೌಕಟ್ಟು ಹಾಕಿ ಇಡಲಾರರು. ತಪ್ಪು ಮಾಡಿದ್ದೇನೆ. ಅದು ಗೊತ್ತಾಗುವಂತೆ, ಚೆನ್ನಾಗಿ ತಿಳಿಸಿ ಮಾಡಿದ್ದೇನೆ. ಕ್ಷಮೆ ಕೇಳಿದ್ದೇನೆ. ಆದರೆ ಮೋಸ ಮಾಡಿಲ್ಲ. ಅನುಮಾನ ಇದೆಯಾ?”

     ರವಿ ಬೆಳಗೆರೆ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 307(ಕೊಲೆ ಸಂಚು), 120 ಬಿ ಪಿತೂರಿ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.

  • ನನ್ನ ಕೊಲೆಗೆ ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರೆಂದು ಕೇಳಿ ಶಾಕ್ ಆಗಿದೆ: ಸುನೀಲ್ ಹೆಗ್ಗರವಳ್ಳಿ

    ನನ್ನ ಕೊಲೆಗೆ ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರೆಂದು ಕೇಳಿ ಶಾಕ್ ಆಗಿದೆ: ಸುನೀಲ್ ಹೆಗ್ಗರವಳ್ಳಿ

    ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ತನ್ನ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾರೆ. ಈ ಬಗ್ಗೆ ಸುನೀಲ್ ಹೆಗ್ಗರವಳ್ಳಿ ಪಬ್ಲಿಕ್ ಟಿವಿಗೆ ಜೊತೆ ಮಾತನಾಡಿದ್ದಾರೆ.

    ಈ ಸುದ್ದಿಯಿಂದ ನಿಮಗೆ ಹೇಗೆ ಶಾಕ್ ಆಗಿದೆಯೋ ಅದೇ ರೀತಿ ನನಗೂ ಶಾಕ್ ಆಗಿದೆ. ನಿನ್ನೆ ತನಕ ಏನೂ ಗೊತ್ತಿರಲಿಲ್ಲ. ಬೆಳಗ್ಗೆ ನಗರದ ಹಿರಿಯ ಪೊಲೀಸರು ನನ್ನನ್ನು ಕರೆಸಿ ವಿಷಯ ತಿಳಿಸಿದಾಗ ನಾನು ಕೂಡ ನಂಬೋ ಸ್ಥಿತಿಯಲ್ಲಿ ಇರಲಿಲ್ಲ. ಯಾಕಂದ್ರೆ ರವಿ ಬೆಳಗೆರೆ ನನ್ನನ್ನು ಹತ್ಯೆ ಮಾಡಿಸಲು ಪ್ರಯತ್ನಿಸುತ್ತಾರೆಂದರೆ ನಂಬಲಾರದ ವಿಷಯವಾಗಿತ್ತು. ಆದ್ರೆ ಅವರು ಪ್ರತಿಯೊಂದನ್ನೂ ಕೂಡ ದಾಖಲೆಗಳ ಸಮೇತ ವಿವರಿಸಿದಾಗ, ಹಂತಕನ ಬಗ್ಗೆ ಮಾಹಿತಿ ಕೊಟ್ಟಾಗ, ಅವನು ಈ ಹಿಂದೆಯೂ ಹತ್ಯೆಗೆ ಯತ್ನಿಸಿದ್ದನ್ನು ಗಮನಿಸಿದಾಗ ಹಾಗೂ ಹಿಂದೆ ನಡೆದ ಘಟನೆಗಳನ್ನು ಪರಾಮರ್ಶಿಸಿದಾಗ ನನಗೂ ಇದು ಸತ್ಯ ಎನಿಸಿದೆ ಎಂದು ಹೇಳಿದ್ರು.

    ಈ ಹಿಂದೆಯೂ ಕೊಲೆಗೆ ಯತ್ನ?: 2014ರಲ್ಲಿ ನಾನು ಕೆಲಸ ಬಿಟ್ಟಾಗ ಒಂದು ಬಾರಿ ಪ್ರಯತ್ನ ಮಾಡಿದ್ದರು. ಯಾರೋ ಇನ್‍ವೆಸ್ಟರ್ಸ್ ಬರ್ತಾರೆ, ಚಾನಲ್ ಬಗ್ಗೆ ಮಾತನಾಡಬೇಕು ಬಾ ಎಂದು ಕಚೇರಿ ಬಳಿ ನನ್ನನ್ನು ಕರೆಸಿದ್ದರು. ಆದ್ರೆ ನಾನು ಅಲ್ಲಿಗೆ ಹೋದಾಗ ಯಾವುದೇ ಇನ್‍ವೆಸ್ಟರ್ಸ್ ಇರಲಿಲ್ಲ. ಕೆಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ಅಲ್ಲಿದ್ದರು. ಅದನ್ನು ಗಮನಿಸಿದಾಗ ಅಂದು ಕೂಡ ಕೊಲೆಗೆ ಯತ್ನಿಸಿದ್ದರು ಅಂತ ಈಗ ಅನ್ನಿಸುತ್ತಿದೆ ಎಂದು ತಿಳಿಸಿದ್ರು.

     

    ಆರೋಪಿಗಳ ಹೆಸರು ಗೊತ್ತಿಲ್ಲ. ಅವರ ಬಗ್ಗೆ ಏನೂ ಗೊತ್ತಿಲ್ಲ. ಅವರನ್ನ ಗಮನಿಸಿದಾಗ ಈ ಹಿಂದೆ ಎರಡು ಮೂರು ಬಾರಿ ಅವರು ಕಚೇರಿಗೆ ಬಂದಾಗ, ಇವರು ಬೇರೆ ಬೇರೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ಎಂದು ರವಿ ಬೆಳಗೆರೆ ಹೇಳಿದ್ರು. ಅವರ ಮುಖಪರಿಚಯ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಅಂತ ಹೇಳಿದ್ರು.

    ನನ್ನ-ರವಿ ಬೆಳಗೆರೆ ಸ್ನೇಹ 17 ವರ್ಷಗಳದ್ದು, ಅದರಲ್ಲಿ 14 ವರ್ಷ ಅವರ ಜೊತೆ ಕೆಲಸ ಮಾಡಿದ್ದೀನಿ. ಯಾವ ಕಾರಣಕ್ಕೆ ನನ್ನ ಕೊಲೆಗೆ ಸುಪಾರಿ ಕೊಟ್ಟರು ಅಂತ ಗೊತ್ತಿಲ್ಲ. ಅದನ್ನ ನೀವು ರವಿ ಬೆಳಗೆರೆ ಅವರನ್ನೇ ಕಳಬೇಕು ಅಥವಾ ತನಿಖೆ ಮಾಡುತ್ತಿರುವ ಅಧಿಕಾರಿಗಳೇ ಇದನ್ನ ಸ್ಪಷ್ಟಪಡಿಸಬೇಕು ಅಂದ್ರು.

    ಸದ್ಯ ಸಿಸಿಬಿ ಪೊಲೀಸರು ಹಾಯ್ ಬೆಂಗಳೂರು ಕಚೇರಿಯಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿ ಬೆಳಗೆರೆ ಅವರ ಕಾರನ್ನ ತಪಾಸಣೆ ಮಾಡಿದ್ದಾರೆ. ಸುನೀಲ್ ಹೆಗ್ಗರವಳ್ಳಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ.

    ಸುನಿಲ್ ಹೆಗ್ಗರವಳ್ಳಿಗೆ ಆಶ್ರಯ ನೀಡಿದ್ದು ಗೌರಿ ಲಂಕೇಶ್. ಆದ್ದರಿಂದ ಗೌರಿ ಲಂಕೇಶ್ ಹತ್ಯೆಗೂ, ಈ ಪ್ರಕರಣಕ್ಕೂ ಸಂಬಂಧವಿದೆಯಾ ಎಂಬ ಆ್ಯಂಗಲ್ ನಲ್ಲೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.