Tag: Ravi Shastri

  • ಕೋಚ್ ರವಿಶಾಸ್ತ್ರಿ ಸಾಧನೆ ಪ್ರಶ್ನಿಸಿದ ಗೌತಮ್ ಗಂಭೀರ್

    ಕೋಚ್ ರವಿಶಾಸ್ತ್ರಿ ಸಾಧನೆ ಪ್ರಶ್ನಿಸಿದ ಗೌತಮ್ ಗಂಭೀರ್

    ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ತಮ್ಮ ವೃತ್ತಿ ಜೀವನದಲ್ಲಿ ಏನು ಸಾಧನೆ ಮಾಡಿದ್ದಾರೆ ಎಂಬುದು ಮಾತ್ರ ತಿಳಿದಿಲ್ಲ ಎಂದು ಹೇಳುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಗೌತಮ್ ಗಂಭೀರ್ ಅವರು ರವಿಶಾಸ್ತ್ರಿ ವಿರುದ್ಧ ಕಿಡಿಕಾರಿದ್ದಾರೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಟೀಂ ಇಂಡಿಯಾ ವಿದೇಶಿ ನೆಲದಲ್ಲಿ ಈ ವರ್ಷ ಯಾವುದೇ ಟೆಸ್ಟ್ ಟೂರ್ನಿಯನ್ನು ಗೆದ್ದಿಲ್ಲ. ಆದ್ರೂ ಕೋಚ್ ತಮ್ಮ ತಂಡ ಈ ಹಿಂದಿನ ತಂಡಗಳಿಗಿಂತಲೂ ಉತ್ತಮ ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ರವಿಶಾಸ್ತ್ರಿ ಬಗ್ಗೆ ಮಾತನಾಡಲು ಅವರು ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಯಾವುದೇ ಸಾಧನೆ ಮಾಡಿಲ್ಲ. ಅಲ್ಲದೇ ತಂಡದ ಕೋಚ್ ಆಗಿಯೂ ಅವರ ಸಾಧನೆ ಕಳಪೆ ಆಗಿದೆ ಎಂದರು.

    ಇದೇ ವೇಳೆ ತಂಡದ ಸಾಧನೆಯನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಮಾತ್ರ ನೀಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗಂಭೀರ್, ತಂಡದಲ್ಲಿ ರಹಾನೆ, ಪೂಜಾರ, ರೋಹಿತ ಶರ್ಮಾ ರಂತಹ ಆಟಗಾರರಿದ್ದಾರೆ. ಇದೇ ಪ್ರವೃತ್ತಿ ಮುಂದುವರಿದರೆ ಅದು ತಂಡಕ್ಕೆ ಅಪಾಯಕಾರಿಯಾದ ಬೆಳವಣಿಗೆ. ಇದು ಇತರೆ ಆಟಗಾರರ ಪ್ರದರ್ಶನದ ಮೇಲೂ ಪರಿಣಾಮ ಬೀರುತ್ತದೆ. ಏಕೆಂದರೆ ಯಾವುದೇ ಒಬ್ಬ ಆಟಗಾರನ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಅಷ್ಟೇ ಮುಖ್ಯ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ಟೀಂ ಇಂಡಿಯಾ ಉತ್ತಮವಾಗಿತ್ತು. ಅವರು ತಮ್ಮ ವೃತ್ತಿಗೆ ನೀಡುವ ಪ್ರಮುಖ್ಯತೆ ನಾನು ಬೇರೆ ಯಾವ ಆಟಗಾರರಲ್ಲೂ ನೋಡಿಲ್ಲ. ಆದರೆ ಅವರು ತಂಡದ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದು ಅಸಮಾಧಾನವಿದೆ. ಬಿಸಿಸಿಐ ಕೂಡ ಅವರ ರಾಜೀನಾಮೆ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ತಿಳಿಸಿದರು.

    ಟೀಂ ಇಂಡಿಯಾಗೆ ಆಸೀಸ್ ಟೂರ್ನಿ ವಿದೇಶದಲ್ಲಿ ಟೆಸ್ಟ್ ಸರಣಿ ಗೆಲ್ಲಲು ಉತ್ತಮ ಅವಕಾಶ ಪಡೆದಿದೆ ಎಂದು ಗಂಭೀರ್ ವೃತ್ತಿ ಬದುಕಿನ ವಿದಾಯ ಬಳಿಕ ಮುಂದಿನ ದಿನಗಳಲ್ಲಿ ತಂಡದ ಮೆಂಟರ್ ಆಗುವ ಉದ್ದೇಶವೊಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಟೀಂ ಇಂಡಿಯಾ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ಕೆಳಗಿಳಿಸಿ: ಚೇತನ್ ಚೌಹಾಣ್

    ಟೀಂ ಇಂಡಿಯಾ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ಕೆಳಗಿಳಿಸಿ: ಚೇತನ್ ಚೌಹಾಣ್

    ಮುಂಬೈ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದರೂ ರವಿಶಾಸ್ತ್ರಿ ಅವರನ್ನು ಕೋಚ್ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಅಭಿಯಾನ ಇಂದು ಮತ್ತೆ ಜೀವ ಪಡೆದಿದೆ. ಒಂದು ಹಂತದಲ್ಲಿ ಇಂದು #ಸ್ಯಾಕ್_ರವಿಶಾಸ್ತ್ರಿ ಹ್ಯಾಷ್‍ಟ್ಯಾಗ್ ಟ್ರೆಂಡ್ ಆಗಿತ್ತು. ಈ ನಡುವೆಯೇ ಟೀಂ ಇಂಡಿಯಾದ ಮಾಜಿ ಆಟಗಾರ ಚೇತನ್ ಚೌಹಾಣ್ ರವಿಶಾಸ್ತ್ರಿ ಕೋಚಿಂಗ್ ಕೆಲಸ ಸಾಕು, ಅವರಿಗೆ ಕಮೆಂಟ್ರಿಯೇ ಬೆಟರ್ ಎಂಬ ಸಲಹೆ ನೀಡಿದ್ದಾರೆ.

    ಈಗಷ್ಟೇ ಅಂತ್ಯವಾದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-4 ಅಂತರದಲ್ಲಿ ಸೋಲುಂಡ ಬಳಿಕ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿಯನ್ನು ಸೋಲಿನ ಹೊಣೆ ಮಾಡಿ ಕೋಚ್ ಸ್ಥಾನದಿಂದ ಕೆಳಗಿಳಿಸುವಂತೆ ಹಲವರು ಆಗ್ರಹಿಸಿದ್ದರು. ಸದ್ಯ ಟೀಂ ಇಂಡಿಯಾ ಮಾಜಿ ಆಟಗಾರ ಚೇತನ್ ಚೌಹಾಣ್ ಕೂಡ ತಂಡದ ಸೋಲಿಗೆ ರವಿಶಾಸ್ತ್ರಿ ಕಾರಣವಾಗಿದ್ದು, ಮುಂದಿನ ಆಸ್ಟ್ರೇಲಿಯಾ ವಿರುದ್ಧ ಸರಣಿಗೂ ಮುನ್ನ ರವಿಶಾಸ್ತ್ರಿಯನ್ನು ತಂಡದಿಂದ ಕೈಬಿಡುವಂತೆ ಹೇಳಿದ್ದಾರೆ.

    https://twitter.com/Bhuklagiheyaar/status/1042774411013705728

    ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ವೀರೇಂದ್ರ ಸೆಹ್ವಾಗ್ ಬಳಿಕ ಚೌಹಾಣ್ ಅವರು ರವಿಶಾಸ್ತ್ರಿ ಕೋಚ್ ಹುದ್ದೆ ತ್ಯಜಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಚೌಹಾಣ್, ಮುಂದಿನ ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಯಲ್ಲಿ ಟೀಂ ಇಂಡಿಯಾ ಮತ್ತಷ್ಟು ಉತ್ತಮ ಪ್ರದರ್ಶನ ನೀಡುವ ಅಗತ್ಯವಿದೆ. ಆಗ ಎರಡು ತಂಡಗಳು ಸಮರ್ಥವಾಗಿ ಪೈಪೋಟಿ ನಡೆಸಲಿವೆ. ಆದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ತನ್ನ ವೈಫಲ್ಯಗಳನ್ನು ಅರಿತುಕೊಳ್ಳಲು ವಿಫಲವಾಗಿದೆ. ಇದಕ್ಕೆ ನೇರ ಕಾರಣ ಕೋಚ್ ರವಿಶಾಸ್ತ್ರಿ. ಅದ್ದರಿಂದ ಮುಂದಿನ ಟೂರ್ನಿ ಆರಂಭಕ್ಕೂ ಮೊದಲು ಅವರನ್ನು ಕೋಚ್ ಹುದ್ದೆಯಿಂದ ತೆಗೆಯುವುದು ಸೂಕ್ತ ಎಂದು ತಿಳಿಸಿದ್ದಾರೆ.

    https://twitter.com/Amit_smiling/status/1028647401375105025?

    ಇದೇ ವೇಳೆ ರವಿಶಾಸ್ತ್ರಿ ಉತ್ತಮ ವೀಕ್ಷಕ ವಿವರಣೆ ನೀಡಬಲ್ಲರು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಚೌಹಾಣ್, ರವಿಶಾಸ್ತ್ರಿ ಅವರಿಗೆ ಆ ಹುದ್ದೆ ನೀಡಿದರೆ ಉತ್ತಮ ಎಂದು ತಿಳಿಸಿದ್ದಾರೆ. ಅಲ್ಲದೇ 1980ರ ದಶಕ ಬಳಿಕ ಸದ್ಯದ ಟೀಂ ಇಂಡಿಯಾ ಅತ್ಯುತ್ತಮ ತಂಡ ಎಂಬ ರವಿಶಾಸ್ತ್ರಿ ಹೇಳಿಕೆಯನ್ನು ತಾನು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.

    ಚೇತನ್ ಚೌಹಾಣ್ ಹಿನ್ನೆಲೆ: 1969ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಚೇತನ್ ಚೌಹಾಣ್ ಪಾದಾರ್ಪಣೆ ಮಾಡಿದ್ದರು. ಟೀಂ ಇಂಡಿಯಾದಲ್ಲಿ 1969 ರಿಂದ 1981 ಅವಧಿಯಲ್ಲಿ ಸ್ಥಾನ ಪಡೆದಿದ್ದರು. ಒಟ್ಟಾರೆ ಚೌಹಾಣ್ 40 ಟೆಸ್ಟ್ ಪಂದ್ಯ ಆಡಿ 2,084 ರನ್ ಗಳಿಸಿದ್ದಾರೆ. 1981 ರಲ್ಲಿ ನ್ಯೂಜಿಲೆಂಡ್ ವಿರುದ್ಧವೇ ಅಂತಿಮ ಟೆಸ್ಟ್ ಪಂದ್ಯವನ್ನಾಡಿದ್ದರು. ಉಳಿದಂತೆ 7 ಅಂತರಾಷ್ಟ್ರೀಯ ಏಕದಿನ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಮುಖ್ಯವಾಗಿ ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕೆ ಇಳಿಯುತ್ತಿದ್ದರು.

    ಇದೇ ವೇಳೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲೂ ಸ್ಯಾಕ್ ರವಿಶಾಸ್ತ್ರಿ ಹ್ಯಾಷ್‍ಟ್ಯಾಗ್ ಅಭಿಯಾನ ಆರಂಭವಾಗಿದೆ. ರವಿಶಾಸ್ತ್ರಿ ಅವರನ್ನು ಟೀಂ ಇಂಡಿಯಾ ಕೋಚ್ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಟ್ವೀಟಿಗರು ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://twitter.com/Dhruv1607/status/1027983938214658049?

    https://twitter.com/imkrishnendu92/status/1042791215945547776

  • ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರರ ಸಂಭಾವನೆ ರಿವೀಲ್ ಆಯ್ತು: ಯಾರಿಗೆ ಎಷ್ಟು ಕೋಟಿ?

    ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರರ ಸಂಭಾವನೆ ರಿವೀಲ್ ಆಯ್ತು: ಯಾರಿಗೆ ಎಷ್ಟು ಕೋಟಿ?

    ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಹಾಗೂ ನಾಯಕರ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಇತರೆ ಆಟಗಾರರ ಸಂಭಾವನೆಯನ್ನು ಶನಿವಾರ ಪ್ರಕಟಿಸಿದೆ.

    ಬಿಸಿಸಿಐ ನೀಡಿರುವ ಮಾಹಿತಿಯಂತೆ ಕೋಚ್ ರವಿಶಾಸ್ತ್ರಿ 2018ರ ಜುಲೈನಿಂದ ಸೆಪ್ಟೆಂಬರ್ 17ರವರೆಗೆ ಒಟ್ಟು 2.05 ಕೋಟಿ ರೂ. ವೇತನ ಪಡೆಯಲಿದ್ದಾರೆ. ಉಳಿದಂತೆ ಟೀಂ ಇಂಡಿಯಾ ಆಟಗಾರರು ಬಿಸಿಸಿಐ ಸಂಸ್ಥೆಯೊಂದಿನ ಒಪ್ಪಂದದ ಮೊತ್ತದೊಂದಿಗೆ, ಪಂದ್ಯದ ಸಂಭಾವನೆ ಹಾಗೂ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ ಸ್ಥಾನ ಪಡೆದಿರುವ ಮೊತ್ತವನ್ನು ಪಡೆಯಲಿದ್ದಾರೆ.

    ಯಾರಿಗೆ? ಎಷ್ಟು?
    ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ, ಟೆಸ್ಟ್ ಟೂರ್ನಿ ಹಾಗೂ ಐಸಿಸಿ ಶ್ರೇಯಾಂಕ ಪಟ್ಟಿಯ ಬಹುಮಾನದ ಮೊತ್ತ ಮೂರು ಸೇರಿ 1,25,04,964 ರೂ. ಸಂಭಾವನೆ ಪಡೆಯಲಿದ್ದಾರೆ. ಇನ್ನು ತಂಡದ ಪ್ರಮುಖ ಆಟಗಾರರಾದ ಭುವನೇಶ್ವರ್ ಕುಮಾರ್ 3,73,06,631 ರೂ., ಶಿಖರ್ ಧವನ್ 2,80,98,493 ರೂ., ಆರ್ ಅಶ್ವಿನ್ 2,75,60,754 ರೂ., ರೋಹಿತ್ ಶರ್ಮಾ 1,42,08,385 ರೂ,. ಬುಮ್ರಾ 1,74,23,573 ರೂ., ಚೇತೇಶ್ವರ ಪೂಜಾರ 2,83,70,757 ರೂ,. ಇಶಾಂತ್ ಶರ್ಮಾ 1,33,14,741 ರೂ,. ಕುಲ್ ದೀಪ್ ಯಾದವ್ 25,05,452 ರೂ,. ಯಜುವೇಂದ್ರ ಚಹಲ್ 84,55,624 ರೂ,. ಸಹಾ 44,34,805 ರೂ,. ಪಾರ್ಥಿವ್ ಪಟೇಲ್ 43,92,641 ರೂ. ಸಂಭಾವನೆ ಪಡೆಯಲಿದ್ದಾರೆ.

    ಭುವನೇಶ್ವರ್ ಕುಮಾರ್:
    ದಕ್ಷಿಣ ಆಫ್ರಿಕಾ ಟೆಸ್ಟ್ ಟೂರ್ನಿ – 56,83,848 ರೂ.
    ದಕ್ಷಿಣ ಆಫ್ರಿಕಾ ಏಕದಿನ ಟೂರ್ನಿ -27,14,056ರೂ.
    ಜನವರಿ ಯಿಂದ ಮಾರ್ಚ್ 2018 ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 1,18,06,027 ರೂ.
    ಐಸಿಸಿ ಶ್ರೇಯಾಂಕ ಪಟ್ಟಿ ಬಹುಮಾನ – 29,27,700 ರೂ.
    ಅಕ್ಟೋಬರ್ ನಿಂದ ಡಿಸೆಂಬರ್ ವರೆಗಿನ ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 1,14,75,00 ರೂ.

    ಶಿಖರ್ ಧವನ್:
    ಜನವರಿ ಯಿಂದ ಮಾರ್ಚ್ 2018 ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ -1,12,23,493 ರೂ.
    ಶ್ರೀಲಂಕಾ ಟೂರ್ನಿ – 27,00,000 ರೂ.
    ಅಕ್ಟೋಬರ್ ನಿಂದ ಡಿಸೆಂಬರ್ ವರೆಗಿನ ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 1,41,75,000 ರೂ.

    ಆರ್ ಅಶ್ವಿನ್:
    ದಕ್ಷಿಣ ಆಫ್ರಿಕಾ ಟೆಸ್ಟ್ ಟೂರ್ನಿ – 52,70,725 ರೂ.
    ಜನವರಿ ಯಿಂದ ಮಾರ್ಚ್ 2018 ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 92,37,329 ರೂ.
    ಐಸಿಸಿ ಶ್ರೇಯಾಂಕ ಪಟ್ಟಿ ಬಹುಮಾನ – 29,27,700 ರೂ.
    ಅಕ್ಟೋಬರ್ ನಿಂದ ಡಿಸೆಂಬರ್ ವರೆಗಿನ ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 1,01,25,000 ರೂ.

    ರೋಹಿತ್ ಶರ್ಮಾ:
    ದಕ್ಷಿಣ ಆಫ್ರಿಕಾ ಟೆಸ್ಟ್ ಟೂರ್ನಿ -56,96,808 ರೂ.
    ದಕ್ಷಿಣ ಆಫ್ರಿಕಾ ಏಕದಿನ ಟೂರ್ನಿ – 30,70,455 ರೂ.
    ಶ್ರೀಲಂಕಾ ನಿಧಾಸ್ ಟೂರ್ನಿ – 25,13,442 ರೂ.
    ಐಸಿಸಿ ಶ್ರೇಯಾಂಕ ಪಟ್ಟಿ ಬಹುಮಾನ – 29,27,700 ರೂ.

    ಚೇತೇಶ್ವರ ಪೂಜಾರ:
    ಐಸಿಸಿ ಶ್ರೇಯಾಂಕ ಪಟ್ಟಿ ಬಹುಮಾನ – 29,27,700 ರೂ.
    ದಕ್ಷಿಣ ಆಫ್ರಿಕಾ ಟೆಸ್ಟ್ ಟೂರ್ನಿ – 60,80,725 ರೂ.
    ಅಕ್ಟೋಬರ್ ನಿಂದ ಡಿಸೆಂಬರ್ ವರೆಗಿನ ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 92,37,329 ರೂ.
    ಜನವರಿ ಯಿಂದ ಮಾರ್ಚ್ 2018 ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 1,01,25,000 ರೂ.

    ಇಶಾಂತ್ ಶರ್ಮಾ:
    ಜನವರಿ ಯಿಂದ ಮಾರ್ಚ್ 2018 ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 55,42, 397 ರೂ.
    ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ ಬಹುಮಾನ – 29,27,700 ರೂ.
    ದಕ್ಷಿಣ ಆಫ್ರಿಕಾ ಟೆಸ್ಟ್ ಟೂರ್ನಿ – 48,44,644 ರೂ.

    ಬುಮ್ರಾ:
    ಜನವರಿ ಯಿಂದ ಮಾರ್ಚ್ 2018 ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 1,13,48,573 ರೂ.
    ಅಕ್ಟೋಬರ್ ನಿಂದ ಡಿಸೆಂಬರ್ ವರೆಗಿನ ತಂಡದ ಆಟಗಾರನಾಗಿದ್ದಕ್ಕೆ ಸಂಭಾವನೆ – 60,75,000 ರೂ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಫ್ರಿದಿಗೆ `ಬೂಮ್ ಬೂಮ್’ ಎಂದು ಹೆಸರಿಟ್ಟಿದ್ದು ಟೀಂ ಇಂಡಿಯಾ ಆಟಗಾರ!

    ಅಫ್ರಿದಿಗೆ `ಬೂಮ್ ಬೂಮ್’ ಎಂದು ಹೆಸರಿಟ್ಟಿದ್ದು ಟೀಂ ಇಂಡಿಯಾ ಆಟಗಾರ!

    ನವದೆಹಲಿ: ಪಾಕಿಸ್ತಾನದ ಮಾಜಿ ಆಟಗಾರ ಶಾಹೀದ್ ಅಫ್ರಿದಿ ತಮ್ಮ ಸಿಕ್ಸರ್ ಸಿಡಿಸುವ ಶೈಲಿಯಿಂದ ಹೆಚ್ಚು ಖ್ಯಾತಿ ಪಡೆದಿದ್ದು, ಸದ್ಯ ಅವರಿಗೆ `ಬೂಮ್ ಬೂಮ್’ ಅಫ್ರಿದಿ ಎಂಬ ಹೆಸರು ನೀಡಿದ್ದು ಟೀಂ ಇಂಡಿಯಾ ಆಟಗಾರ ಎಂದು ರಿವೀಲ್ ಮಾಡಿದ್ದಾರೆ.

    ಅಂತರಾಷ್ಟ್ರೀಯ ಕ್ರಿಕೆಟ್ ಗೆ ಈಗಾಗಲೇ ವಿದಾಯ ಘೋಷಿಸುವ ಅಫ್ರಿದಿ ತಮ್ಮ ವೃತ್ತಿ ಜೀವನದಲ್ಲಿ 476 ಸಿಕ್ಸರ್ ಸಿಡಿಸಿ, ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಜೊತೆಗೆ ಸ್ಥಾನ ಪಡೆದಿದ್ದಾರೆ. ಸದ್ಯ ಅಫ್ರಿದಿ ಅಭಿಮಾನಿಯೊಬ್ಬರು ಈ ಕುರಿತು ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದು, ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಅಫ್ರಿದಿ ಟೀಂ ಇಂಡಿಯಾದ ಮಾಜಿ ಆಟಗಾರ ರವಿಶಾಸ್ತ್ರಿ ತಮ್ಮ ಹೆಸರಿನ ಮುಂದೆ ಬೂಮ್ ಬೂಮ್ ಎಂದು ಸೇರಿಸಿದ್ದರು ಎಂದು ತಿಳಿಸಿದ್ದಾರೆ.

    ರವಿಶಾಸ್ತ್ರಿ ಸದ್ಯ ಟೀಂ ಇಂಡಿಯಾದ ಮುಖ್ಯ ಕೋಚ್ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮುನ್ನ ವೀಕ್ಷಕ ವಿವರಣೆಕಾರರಾಗಿ ಕಾರ್ಯನಿರ್ವಹಿಸಿದ್ದರು. ಈ ವೇಳೆ ತಮಗೆ ಬೂಮ್ ಬೂಮ್ ಅಫ್ರಿದಿ ಎಂದು ಹೆಸರು ನೀಡಿದ್ದಾಗಿ ವಿವರಿಸಿದ್ದಾರೆ.

    1996 ರಲ್ಲಿ ಕೀನ್ಯಾ ವಿರುದ್ಧದ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ ಅಫ್ರಿದಿ ತಮ್ಮ ವೃತ್ತಿ ಜೀವನದಲ್ಲಿ 117.01 ಸ್ಟ್ರೈಕ್ ರೇಟ್ ನಿಂದ ಮೂರು ಮಾದರಿಯ ಕ್ರಿಕೆಟ್‍ನಲ್ಲಿ 11,186 ರನ್ ರನ್ ಗಳಿಸಿದ್ದಾರೆ. ಅಲ್ಲದೇ 541 ವಿಕೆಟ್ ಗಳಿಸಿ ಮಿಂಚಿದ್ದಾರೆ. ಅಲ್ಲದೇ 1996 ರಲ್ಲಿ ಶ್ರೀಲಂಕಾ ವಿರುದ್ಧದ ನಡೆದ ಪಂದ್ಯವೊಂದರಲ್ಲಿ 37 ಎಸೆತಗಳಲ್ಲಿ ಶತಕ ಸಿಡಿದ ಸಾಧನೆಯನ್ನು ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಯರ್ ಕೇವಲ ಜ್ಯೂಸ್ ಅಷ್ಟೇ – ರವಿಶಾಸ್ತ್ರಿ

    ಬಿಯರ್ ಕೇವಲ ಜ್ಯೂಸ್ ಅಷ್ಟೇ – ರವಿಶಾಸ್ತ್ರಿ

    ಮುಂಬೈ: ಬಿಯರ್ ಕೇವಲ ಜ್ಯೂಸ್ ಅಷ್ಟೇ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಎಂದು ಹೇಳಿದ್ದಾರೆ.

    `ಬ್ರೇಕ್ ಫಸ್ಟ್ ವಿಥ್ ಚಾಂಪಿಯನ್’ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಯಾವುದೇ ಕ್ರಿಕೆಟರನ್ನು ಆತ ಕುಡಿಯುವ ಬಿಯರ್ ನಿಂದ ಆತನ ಸಾಮರ್ಥ್ಯನ್ನು ತೀರ್ಮಾನಿಸಬಾರದು, ಆತ ಮೈದಾನದಲ್ಲಿ ನೀಡುವ ಪ್ರದರ್ಶನದ ಮೇಲೆ ಆತನನ್ನು ಅಳೆಯಬೇಕು ಎಂದು ಹೇಳಿದ್ದಾರೆ.

    ಇದೇ ವೇಳೆ ತಮ್ಮ ಹಳೆಯ ದಿನಗಳ ಕುರಿತು ನೆನಪು ಮಾಡಿಕೊಂಡ ಅವರು, ತಮ್ಮ ತಂದೆಯೊಂದಿಗೆ ಕುಳಿತು ಬಿಯರ್ ಸೇವಿಸುತ್ತಿದ್ದೆ. ನಾನು ವಿಶ್ವದಲ್ಲಿ ಹೆಚ್ಚು ಗೌರವ ನೀಡುವ ವ್ಯಕ್ತಿ ಎಂದರೆ ಅದು ನಮ್ಮ ತಂದೆ ಎಂದು ತಿಳಿಸಿದ್ದಾರೆ.

    ವಿಡಿಯೋದಲ್ಲಿ ನಡೆದ ಸಂಭಾಷಣೆಯು 14 ನಿಮಿಷದಿಂದ ಈ ಕುರಿತು ಮಾತುಕತೆ ನಡೆಯುತ್ತದೆ. ಮೊದಲ ಬಾರಿ ತಾನು ಬಿಯರ್ ಸೇವಿಸಿ 17 ವಯಸ್ಸಿನಲ್ಲಿ ಸಿಕ್ಕಿಬಿದ್ದಿದ್ದೆ. ಆದರೆ ಈ ವೇಳೆಯೂ ತಾನು ಆ ಕುರಿತು ನಿಜ ಹೇಳಿದ್ದು, ಉತ್ತಮ ಪ್ರದರ್ಶನ ನೀಡದಿದ್ದರೆ ತಂಡದಿಂದ ಹೊರ ಹಾಕುವಂತೆ ಹೇಳಿದ್ದಾಗಿ ತಿಳಿಸಿದ್ದಾರೆ.

    ತಮ್ಮ ಜೀವನದ ಹಲವು ಪ್ರಮುಖ ಕ್ಷಣ ಬಗ್ಗೆ ಕಾರ್ಯಕ್ರಮದಲ್ಲಿ ಬಿಚ್ಚಿಟ್ಟ ಅವರು, ಕ್ರಿಕೆಟ್ ನಲ್ಲಿ ತಾನು ಆರಂಭಿಕನಾಗಿ ಆಡಲು ಇಷ್ಟ ಪಟ್ಟಿದ್ದೆ. ಆದರೆ ನಾನು ಮೊದಲ ಬಾರಿ ಆರಂಭಿಕನಾಗಿ ಬ್ಯಾಟಿಂಗ್ ನಡೆಸಿದ ವೇಳೆ ಶೂನ್ಯಕ್ಕೆ ಔಟ್ ಆಗಿದ್ದೆ, ಬಳಿಕ ನಡೆದ ಪಂದ್ಯದಲ್ಲಿ 70 ಪ್ಲಸ್ ಗಳಿಸಿದ್ದೆ ಎಂದು ಹಳೆ ನೆನಪನ್ನು ಹಂಚಿಕೊಂಡಿದ್ದಾರೆ.

  • ವಿಶ್ವ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಂಬಳ ಪಡೆಯೋ ಕೋಚ್ ರವಿಶಾಸ್ತ್ರಿ!

    ವಿಶ್ವ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಂಬಳ ಪಡೆಯೋ ಕೋಚ್ ರವಿಶಾಸ್ತ್ರಿ!

    ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಕೋಚ್ ಗಳಿಗೆ ನೀಡುವ ಸಂಭಾವನೆ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರು ಮಾಸಿಕ 36 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಈ ಮೂಲಕ ಮೂಲಕ ವಿಶ್ವದಲ್ಲಿ ಅತಿ ಹೆಚ್ಚು ಸಂಬಳ ಪಡೆಯುವ ಕೋಚ್ ರವಿಶಾಸ್ತ್ರಿ ಆಗಿದ್ದಾರೆ.

    ಬಿಸಿಸಿಐ ಬಿಡುಗಡೆಗೊಳಿಸಿದ ಪಟ್ಟಿಯ ಅನ್ವಯ ರವಿಶಾಸ್ತ್ರಿ ಅವರು 2018 ಏಪ್ರಿಲ್ ನಿಂದ ಜುಲೈ 2018 ಅವಧಿಯಲ್ಲಿ ತಿಂಗಳಿಗೆ 36 ಲಕ್ಷ ರೂ. ನಂತೆ 1,89,37,500 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಇನ್ನು ಅಂಡರ್ 19 ತಂಡದ ಕೋಚ್ ಆಗಿರುವ ದ್ರಾವಿಡ್ 40,50,000 ರೂ. ಗಳನ್ನು 2018 ಮಾರ್ಚ್ ತಿಂಗಳಿನಲ್ಲಿ ಪಡೆದಿದ್ದಾರೆ. ಈ ಹಿಂದೆ ದ್ರಾವಿಡ್ ವಾರ್ಷಿಕವಾಗಿ ದ್ರಾವಿಡ್ 4.86 ಕೋಟಿ ರೂ. ಗಳನ್ನು ಪಡೆದಿದ್ದರು.

    ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಅವರನ್ನು 2017 ಜುಲೈ ನಲ್ಲಿ ನೇಮಕಗೊಂಡಿದ್ದರು. ಬಿಸಿಸಿಐ ಅಹ್ವಾನಿಸಿದ್ದ ಕೋಚ್ ಹುದ್ದೆಯ ಅರ್ಜಿಗೆ ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು ಸಹ ಅರ್ಜಿ ಸಲ್ಲಿಸಿದ್ದರು. ಸದ್ಯ ಬಿಸಿಸಿಐ ಅಂಡರ್ 19 ತಂಡದ ಕೋಚ್ ಹುದ್ದೆಗೆ ದ್ರಾವಿಡ್ ರೊಂದಿನ ಒಪ್ಪಂದವನ್ನು ನವೀಕರಿಸಿದ್ದು, 2019 ರ ವರೆಗೂ ದ್ರಾವಿಡ್ ಕೋಚ್ ಆಗಿ ಮುಂದುವರೆಯಲಿದ್ದಾರೆ.

    ದ್ರಾವಿಡ್ ಅವರ ತರಬೇತಿಯಲ್ಲಿ ಅಂಡರ್ 19 ತಂಡ ವಿಶ್ವಕಪ್ ಎತ್ತಿಹಿಡಿದಿತ್ತು. ಈ ಬಾರಿಯ ಐಪಿಎಲ್ ಟೂರ್ನಿಯಲ್ಲೂ ದ್ರಾವಿಡ್ ಬಾಯ್ಸ್ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು.

  • ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿಯಿಂದ ಉಡುಪಿಯಲ್ಲಿ ನಾಗಾರಾಧನೆ

    ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿಯಿಂದ ಉಡುಪಿಯಲ್ಲಿ ನಾಗಾರಾಧನೆ

    ಉಡುಪಿ: ಕಾರ್ಕಳ ಸಮೀಪದ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿಭೇಟಿ ನೀಡಿದರು. ದೇವಸ್ಥಾನಕ್ಕೆ ಆಗಮಿಸಿದ ಅವರು ದೇವರಿಗೆ ವಿಶೇಷ ಸೇವೆ ನೀಡಿದರು. ನಾಗಬನದಲ್ಲಿ ತನು ತಂಬಿಲ ಸೇವೆ ನೀಡಿದರು. ಟೀಂ ಇಂಡಿಯಾ ಬಗ್ಗೆ ಕೂಡಾ ಮಾತನಾಡಿದ್ರು.

    ಕ್ರಿಕೆಟಿಗೂ ನಾಗಬ್ರಹ್ಮನಿಗೂ ಏನಾದ್ರೂ ಸಂಬಂಧ ಇದ್ಯಾ? ಇಲ್ಲ ಅಂತ ಹೇಳ್ಬೇಡಿ. ವಿಶ್ವದ ನಂಬರ್ ಒನ್ ಟೀಂನ ಕೋಚ್ ರವಿಶಾಸ್ತ್ರಿಗೂ ಭಾರೀ ಸಂಬಂಧವಿದೆ. ಅವರ ವೃತ್ತಿ ಜೀವನಕ್ಕೆ ಕ್ರಿಕೆಟ್ ಕೈ ಹಿಡಿದ್ರೆ  ಸಾಂಸಾರಿಕಾ ಜೀವನದ ಕೈ ಹಿಡಿದದ್ದು ದೇವರ ಮೇಲಿನ ನಂಬಿಕೆ.

    ಮದುವೆಯಾಗಿ 17 ವರ್ಷ ಸಂತಾನ ಭಾಗ್ಯ ಇಲ್ಲದೇ ಇದ್ದಾಗ ರವಿಶಾಸ್ತ್ರಿ ಎರ್ಲಪ್ಪಾಡಿ ಕ್ಷೇತ್ರಕ್ಕೆ ಭೇಟಿಕೊಟ್ಟು ಹರಕೆ ಹೊತ್ತಿದ್ದರು. ನಂತರ ರವಿಶಾಸ್ತ್ರಿಗೆ ಸಂತಾನಭಾಗ್ಯ ದಕ್ಕಿತು. ನಾಗದೇವರ ಆಶೀರ್ವಾದವನ್ನು ನೆನೆಯುವ ರವಿಶಾಸ್ತ್ರಿ ಪ್ರತೀ ವರ್ಷ ಉಡುಪಿ ಜಿಲ್ಲೆಯ, ಕಾರ್ಕಳ ತಾಲೂಕಿನ ಎರ್ಲಪ್ಪಾಡಿಗೆ ಬರುತ್ತಾರೆ. ನಾಗಾರಾಧನೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಈ ಬಾರಿ ಕೂಡಾ ನಾಗಬನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ರವಿಶಾಸ್ತ್ರಿ ಸಂಬಂಧಿ, ಆಪ್ತ ಮನೋಹರ ಪ್ರಸಾದ್ ಹೇಳಿದರು.

    ರವಿಶಾಸ್ತ್ರಿ ಪೂರ್ವಿಕರು ಕಾರ್ಕಳ ತಾಲೂಕಿನ ಎರ್ಲಪ್ಪಾಡಿಯಲ್ಲಿ ನೆಲೆಸಿದ್ದರು. ಇಲ್ಲಿಂದ ವಲಸೆ ಹೋದ ನಂತರವೂ ಇಲ್ಲಿನ ಕಾರ್ಣಿಕ ತಿಳಿದ ರವಿ ಶಾಸ್ತ್ರಿ ವರ್ಷಕ್ಕೊಮ್ಮೆಯಾದ್ರೂ ಇಲ್ಲಿಗೆ ಭೇಟಿ ಕೊಡುವ ಪರಿಪಾಠ ಬೆಳೆಸಿದ್ದಾರೆ.

    ವಿಷ್ಣುಮೂರ್ತಿ ದೇವಸ್ಥಾನ ಮತ್ತು ನಾಗಬನದ ಸೇವೆಯಲ್ಲಿ ನಾನು ಮನಶಾಂತಿ ಪಡೆಯುತ್ತೇನೆ. ಭಾರತ ಮುಂದೆ ದೊಡ್ಡ ಪಂದ್ಯಾಟವನ್ನು ಎದುರು ನೋಡುತ್ತಿದೆ. ಇದೇ ಸಂದರ್ಭ ದೇವರ ದರ್ಶನವಾಗಿರುವುದು ಖುಷಿಯಾಗಿದೆ ಎಂದರು. ಟೀಂನ ಹುಡುಗರಿಗೂ ನನಗೂ ಹೊಂದಾಣಿಕೆ ಚೆನ್ನಾಗಿದೆ. ಹೀಗಾಗಿ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಮೇಲುಗೈ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.

    ರವಿಶಾಸ್ತ್ರಿ ಕರ್ವಾಲು ದೇವಸ್ಥಾನಕ್ಕೆ ಆಗಮಿಸುವುದೆಂದರೆ ಗ್ರಾಮಸ್ಥರಿಗೆ ಹಬ್ಬವಿದ್ದಂತೆ. ರವಿಶಾಸ್ತ್ರಿ ಬಂದ್ರೆ ದೇವಸ್ಥಾನದಲ್ಲಿ ಹಬ್ಬದೂಟ ಆಯೋಜನೆಯಾಗುತ್ತದೆ.  ಶಾಸ್ತ್ರಿ ಸಾಮಾನ್ಯ ಜನರಂತೆ ಸಹಭೋಜನದಲ್ಲಿ ಪಾಲ್ಗೊಂಡರು. ರವಿ ಶಾಸ್ತ್ರಿಯನ್ನು ದೇವಸ್ಥಾನದ ಆಡಳಿತ ಮಂಡಳಿ, ಊರಿನ ಜನರು ಸನ್ಮಾನಿಸಿದರು.

    ರವಿಶಾಸ್ತ್ರಿಗೂ ಈ ಊರಿನ ಜೊತೆ ಅವಿನಾಭಾವ ಸಂಬಂಧ. ಇಲ್ಲಿನ ಸರ್ಕಾರಿ ಶಾಲೆಗೆ ಒಂದು ಲಕ್ಷ ರೂಪಾಯಿ ನೀಡಿದ್ದರು. ದೇವಸ್ಥಾನಕ್ಕೆ ಆರ್ಥಿಕ ಸಹಾಯ ಮಾಡುತ್ತಾ ಬಂದಿದ್ದಾರೆ. ಮುಂದಿನ ಕ್ರಿಕೆಟ್ ಮಹಾಸಮರಕ್ಕೆ ಸಿದ್ಧಗೊಳ್ಳುತ್ತಿರುವ ರವಿಶಾಸ್ತ್ರಿಯ ತಂಡಕ್ಕೆ  ಎರ್ಲಪ್ಪಾಡಿ ಗ್ರಾಮದ ಜನ ಶುಭಕೋರಿದ್ದಾರೆ.

  • ಧೋನಿ ಸುತ್ತಲೂ ಹೊಟ್ಟೆ ಕಿಚ್ಚು ಪಡೋ ಜನರಿದ್ದಾರೆ: ರವಿ ಶಾಸ್ತ್ರಿ

    ಧೋನಿ ಸುತ್ತಲೂ ಹೊಟ್ಟೆ ಕಿಚ್ಚು ಪಡೋ ಜನರಿದ್ದಾರೆ: ರವಿ ಶಾಸ್ತ್ರಿ

    ನವದೆಹಲಿ: ಕೆಲ ದಿನಗಳ ಹಿಂದೆ ಧೋನಿ ಬ್ಯಾಟಿಂಗ್ ಬಗ್ಗೆ ಟೀಕಿಸಿದ್ದ ವ್ಯಕ್ತಿಗಳಿಗೆ ಟೀಂ ಇಂಡಿಯಾ ನಾಯಕ ಕೊಹ್ಲಿ ತಿರುಗೇಟು ನೀಡಿದ್ದರು. ಈಗ ಕೋಚ್ ರವಿಶಾಸ್ತ್ರಿ ಧೋನಿ ಬಗ್ಗೆ ಮೆಚ್ಚುಗೆಯ ಮಾತನ್ನು ಹೇಳಿದ್ದಾರೆ.

    ಮಾಧ್ಯಮವೊಂದರ ಸಂದರ್ಶನದ ವೇಳೆ ಮಾತನಾಡಿರುವ ರವಿಶಾಸ್ತ್ರಿ, ಧೋನಿ ಒಬ್ಬ ಅಸಾಮಾನ್ಯ ಆಟಗಾರ ಹಾಗೂ ಉತ್ತಮ ನಾಯಕರಾಗಿದ್ದು ಅವರ ಸುತ್ತಲು ಹೊಟ್ಟೆ ಕಿಚ್ಚು ಪಡುವವರೇ ಇದ್ದಾರೆ. ಅಲ್ಲದೇ ಧೋನಿಯವರ ವೃತ್ತಿ ಜೀವನ ಅಂತ್ಯಗೊಳಿಸಲು ಕಾದುಕುಳಿತಿದ್ದಾರೆ. ಆದರೆ ಕ್ರಿಕೆಟ್ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಧೋನಿ ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಧೋನಿ ಅವರ ವಿರುದ್ಧ ಮಾಡುವ ಯಾವುದೇ ಟೀಕೆಗಳು ಅವರ ಮೇಲೆ ಪ್ರಭಾವನ್ನು ಬೀರುವುದಿಲ್ಲ. ನಮ್ಮ ದೃಷ್ಟಿಯಲ್ಲಿ ಧೋನಿ ಅವರಿಗೆ ಯಾವ ಸ್ಥಾನವನ್ನು ನೀಡಿದ್ದೇವೆ ಅದು ಹಾಗೆಯೇ ಮುಂದುವರೆಯುತ್ತದೆ ಎಂದು ಟೀಕಾಕಾರ ವಿರುದ್ಧ ವಾಗ್ದಾಳಿ ನಡೆಸಿದರು.

    ಇದನ್ನೂ ಓದಿ : ಧೋನಿ ನೃತ್ಯಕ್ಕೆ ಬಿದ್ದು ಬಿದ್ದು ನಕ್ಕ ಸಾಕ್ಷಿ: ವೈರಲ್ ವಿಡಿಯೋ ನೋಡಿ

    ನ್ಯೂಜಿಲೆಂಡ್ ಸರಣಿಯ ಅಂತಿಮ ಟಿ20 ಪಂದ್ಯದ ನಂತರ ಮಾತನಾಡಿದ್ದ ಕೊಹ್ಲಿ ಸಹ ಎಲ್ಲರೂ ಧೋನಿ ಅವರನ್ನು ಮಾತ್ರ ಯಾಕೆ ಗುರಿಯಾಗಿಸಿಕೊಂಡಿದ್ದಾರೆ. ತಂಡದ ಸದಸ್ಯರಾಗಿ ಎಲ್ಲಾ ಆಟಗಾರರು ಪಂದ್ಯದ ವೇಳೆ ಬ್ಯಾಟ್ ಮಾಡುವ ಸನ್ನಿವೇಶದ ಕುರಿತು ತಿಳಿದಿರುತ್ತೇವೆ. ವಿವಿಧ ದೃಷ್ಟಿಗಳಿಂದ ವಿಮರ್ಶೆ ನಡೆಸುವ ಟೀಕಾಕಾರರ ಹೇಳಿಕೆಗಳಿಂದ ನಾವು ಭಾವನತ್ಮಕತೆಗೆ ಒಳಾಗುವುದಿಲ್ಲ. ಕ್ರೀಡಾಂಗಣದಲ್ಲಿದ್ದಾಗ ವಿಕೆಟ್ ಹೇಗೆ ವರ್ತಿಸುತ್ತಿದೆ ಎಂಬುದನ್ನು ಮಾತ್ರ ಗಮನಿಸುತ್ತೇವೆ ಎಂದು ಹೇಳುವ ಮೂಲಕ ಟೀಕಾಕಾರರ ವಿರುದ್ಧ ಕಿಡಿಕಾರಿದ್ದರು.

    ಇದನ್ನೂ ಓದಿ : ಟಿ20ಗೆ ಧೋನಿ ನಿವೃತ್ತಿ ಹೇಳೋದು ಉತ್ತಮ: ವಿವಿಎಸ್ ಲಕ್ಷ್ಮಣ್

    ನ್ಯೂಜಿಲೆಂಡ್ ವಿರುದ್ಧ ಸರಣಿಯಲ್ಲಿ ಧೋನಿ ಕಳಪೆ ಬ್ಯಾಂಟಿಂಗ್ ಪ್ರದರ್ಶನ ನೀಡಿದ ಕಾರಣದಿಂದ ಧೋನಿ ಟಿ20 ಮಾದರಿಗೆ ನಿವೃತ್ತಿ ನೀಡಿ ಯುವ ಆಟಗಾರರಿಗೆ ಅವಕಾಶ ನೀಡಬೇಕು ಎಂದು ಟೀಂ ಇಂಡಿಯಾ ಮಾಜಿ ಆಟಗಾರರ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯ ಪಟ್ಟಿದ್ದರು. ಅಲ್ಲದೇ ಇನ್ನು ಹಲವು ಟೀಕಾಕಾರರು ಧೋನಿ ವೈಫಲ್ಯದ ಬಗ್ಗೆ ತಮ್ಮದೇ ಟೀಕೆಗಳನ್ನು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : ಧೋನಿ ನಿವೃತ್ತಿ ಬಗ್ಗೆ ಮಾತನಾಡಿದವರಿಗೆ ತಿರುಗೇಟು ಕೊಟ್ಟ ಕೊಹ್ಲಿ

  • ಮೂರು ತಿಂಗಳಿಗೆ ಕೋಚ್ ರವಿಶಾಸ್ತ್ರಿ ಪಡೆದ ಸಂಬಳ ಎಷ್ಟು ಗೊತ್ತೆ?

    ಮೂರು ತಿಂಗಳಿಗೆ ಕೋಚ್ ರವಿಶಾಸ್ತ್ರಿ ಪಡೆದ ಸಂಬಳ ಎಷ್ಟು ಗೊತ್ತೆ?

    ಮುಂಬೈ: ಕೋಚ್ ಸ್ಥಾನಕ್ಕೆ ಆಯ್ಕೆಯಾದ 3 ತಿಂಗಳ ಅವಧಿಯಲ್ಲಿ ರವಿಶಾಸ್ತ್ರಿ ಅವರಿಗೆ 1.20 ಕೋಟಿ ರೂ. ವೇತನವನ್ನು ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹೇಳಿಕೊಂಡಿದೆ.

    ವರ್ಷಕ್ಕೆ 8 ಕೋಟಿ ರೂ. ಸಂಭಾವನೆ ಪಡೆಯಲಿರುವ ರವಿಶಾಸ್ತ್ರಿ ಕೋಚ್ ಸ್ಥಾನಕ್ಕೆ ಆಯ್ಕೆಯಾಗಿ ಮೂರು ತಿಂಗಳು ಕಳೆದಿದೆ. ಹೀಗಾಗಿ ಜುಲೈ 18ರಿಂದ ಮತ್ತು ಅಕ್ಟೋಬರ್ 18 ರ ಅವಧಿಗೆ 1.20 ಕೋಟಿ ರೂ. ಹಣವನ್ನು ನೀಡಲಾಗಿದೆ ಎಂದು ಬಿಸಿಸಿಐ ತನ್ನ ವೆಬ್‍ಸೈಟ್‍ನಲ್ಲಿ ತಿಳಿಸಿದೆ.

    ಇಲ್ಲಿಯವರೆಗೂ ಬಿಸಿಸಿಐ ಯಾವುದೇ ಕೋಚ್‍ಗೂ ಇಷ್ಟೊಂದು ಸಂಭಾವನೆ ನೀಡಿರಲಿಲ್ಲ. ಆದರೆ ಈಗ ಇಷ್ಟೊಂದು ಸಂಭಾವನೆ ಪಡೆಯುವ ಮೂಲಕ ರವಿಶಾಸ್ತ್ರಿ ಅತಿ ಹೆಚ್ಚು ಸಂಭಾವನೆ ಪಡೆದ ಕೋಚ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಹಾಗೆಯೇ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೂ ಸಹ ಸಂಭಾವನೆ ನೀಡಲಾಗಿದ್ದು, ವಿದೇಶ ನೆಲದಲ್ಲಿ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಆಡಿದ್ದಕ್ಕೆ 57.88 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ ಎಂದು ಬಿಸಿಸಿಐ ವೆಬ್‍ಸೈಟ್ ನಲ್ಲಿ ಹೇಳಿಕೊಂಡಿದೆ.

  • ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ.

    ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ.

    ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. ಜಾಸ್ತಿ ಇರಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರವಿಶಾಸ್ತ್ರಿ ಈ ಹಿಂದೆ ಮಾರ್ಗದರ್ಶಕರಾಗಿದ್ದಾಗಲೂ ಅವರಿಗೆ ಸಂಬಳ 7.5 ಕೋಟಿ ರೂ. ಒಳಗಡೆ ಇತ್ತು. ಭಾರತ ಎ ತಂಡ ಮತ್ತು 19 ವರ್ಷದ ಒಳಗಿನ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರಿಗೆ ಮೊದಲ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಿದ್ದರೆ ಎರಡನೇ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಲಾಗಿತ್ತು. ಈಗ ವಿದೇಶದಲ್ಲಿ ನಡೆಯುವ ಪಂದ್ಯಗಳಿಗೆ ದ್ರಾವಿಡ್ ಅವರನ್ನು ಬ್ಯಾಟಿಂಗ್ ಸಲಹೆಗಾರನ್ನಾಗಿ ನೇಮಿಸಲಾಗಿದೆ.

    ಬೌಲಿಂಗ್ ಕೋಚ್ ಆಗಿ ನೇಮಕವಾಗಿರುವ ಜಹೀರ್ ಖಾನ್ ಅವರಿಗೆ ಎಷ್ಟು ಸಂಭಾವನೆ ಎನ್ನುವುದು ನಿಗದಿಯಾಗಿಲ್ಲ. ಅವರು ಎಷ್ಟು ದಿನ ತಂಡದ ಜೊತೆ ಇರುತ್ತಾರೆ ಆ ಅವಧಿಗೆ ಸಂಬಳ ನೀಡಲು ಬಿಸಿಸಿಐ ಮುಂದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ವರ್ಷ ಜಹೀರ್ ಖಾನ್ ಅವರು 100 ದಿನಕ್ಕೆ ವಾರ್ಷಿಕವಾಗಿ 4 ಕೋಟಿ ರೂ. ಸಂಭಾವನೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನು ಬಿಸಿಸಿಐ ತಿರಸ್ಕರಿಸಿತ್ತು.

    ಬ್ಯಾಟಿಂಗ್ ಕೋಚ್, ಆಟಗಾರರಿಗೆ ಸಂಬಳ ಎಷ್ಟು?
    ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ. ಎರಡು ವರ್ಷಗಳ ಕಾಲ ಹಿರಿಯರ ತಂಡದ ಜೊತೆ ಇದ್ದ ಇವರು ಸಂಬಳವನ್ನು ಹೆಚ್ಚಳ ಮಾಡುವಂತೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರು. ಮಾರ್ಚ್ ನಲ್ಲಿ ಇವರ ಮನವಿ ಪುರಸ್ಕೃತವಾಗಿದ್ದು ಶೇ.50 ರಷ್ಟು ಸಂಬಳ ಏರಿಕೆಯಾಗಿತ್ತು.

    ಈ ಹಿಂದೆ ಇದ್ದ ಬಿಸಿಸಿಐ ಆಡಳಿತ ಮಂಡಳಿ ಶೇ.100 ರಷ್ಟು ಸಂಬಳ ಏರಿಕೆಯ ಪ್ರಸ್ತಾಪನ್ನು ಒಪ್ಪಿತ್ತು. ಆದರೆ ಕಳೆದ ತಿಂಗಳು ಶೇ.25ರಷ್ಟು ಸಂಬಳ ಏರಿಸಲು ಬಿಸಿಸಿಐ ನಿರ್ಧರಿಸಿತ್ತು. ಬಿಸಿಸಿಐ ಈ ನಿರ್ಧಾರಕ್ಕೆ ಸಿಬ್ಬಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಈಗ ಕೋಚ್ ಅನಿಲ್ ಕುಂಬ್ಳೆ ಸುಪ್ರೀಂ ನೇಮಿಸಿದ್ದ ಆಡಳಿತ ಸಮಿತಿಯ ಜೊತೆ ಸಭೆ ನಡೆಸಿ ಶೇ.50ರಷ್ಟು ಸಂಬಳವನ್ನು ಏರಿಸಿದ್ದರು.

    ಮಾರ್ಚ್ ತಿಂಗಳಿನಲ್ಲಿ ಆಟಗಾರರ ಸಂಭಾವನೆ ಮತ್ತು ಪಂದ್ಯದ ಶುಲ್ಕವನ್ನು ಆಡಳಿತ ಮಂಡಳಿ ದುಪ್ಟಟ್ಟು ಮಾಡಿತ್ತು. 2016ರ ಅಕ್ಟೋಬರ್ 1ರಿಂದ ಪರಿಷ್ಕೃತ ಸಂಭಾವನೆ ಮತ್ತು ಶುಲ್ಕ ಜಾರಿಗೆ ಬರಲಿದೆ.

    ಎಷ್ಟಿತ್ತು? ಈಗ ಎಷ್ಟು ಆಗಿದೆ?
    `ಎ’ ದರ್ಜೆಯಲ್ಲಿರುವ ಆಟಗಾರರು ಈ ಮೊದಲು ಕೋಟಿ ರೂ. ಪಡೆಯುತ್ತಿದ್ದರೆ ಈಗ ಆ ಮೊತ್ತವು 2 ಕೋಟಿ ರೂ.ಗೆ ಏರಿಕೆಯಾಗಿದೆ. ಬಿ ದರ್ಜೆ ಮತ್ತು ಸಿ ದರ್ಜೆಗಳ ಆಟಗಾರರು ಕ್ರಮವಾಗಿ 50 ಲಕ್ಷ ರೂ. ಮತ್ತು 25 ಲಕ್ಷ ರೂ. ಪಡೆಯುತ್ತಿದ್ದರು. ಅವರು ಇನ್ನು ಮುಂದೆ ಕ್ರಮವಾಗಿ 1 ಕೋಟಿ ರೂ. ಮತ್ತು 50 ಲಕ್ಷ ರೂ. ಹಣವನ್ನು ಪಡೆಯಲಿದ್ದಾರೆ.

    ಟೆಸ್ಟ್ ಪಂದ್ಯದಲ್ಲಿ ಆಡುವ ಆಟಗಾರರು ಶುಲ್ಕವನ್ನು 7.50 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದ್ದರೆ, ಏಕದಿನ ಮತ್ತು ಟ್ವೆಂಟಿ 20 ಪಂದ್ಯಗಳಲ್ಲಿ ಆಡುವವರ ಶುಲ್ಕವನ್ನು ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

    ಎ ದರ್ಜೆ:
    ವಿರಾಟ್ ಕೊಹ್ಲಿ, ಮಹೇಂದ್ರಸಿಂಗ್ ಧೋನಿ, ಆರ್. ಆಶ್ವಿನ್, ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜ, ಮುರಳಿ ವಿಜಯ್.

    ಬಿ ದರ್ಜೆ:
    ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಸ್‍ಪ್ರೀತ್ ಬೂಮ್ರಾ, ಯುವರಾಜ್ ಸಿಂಗ್.

    ಸಿ ದರ್ಜೆ:
    ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಕೇದಾರ್ ಜಾಧವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶಿಶ್ ನೆಹ್ರಾ, ಮನದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಭ್ ಪಂತ್.